Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು - Vistara News

ಬಾಲಿವುಡ್

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Krishan Kumar: ಕ್ರಿಶನ್ ಕುಮಾರ್ ನಿರ್ಮಾಪಕರಾಗಿದ್ದು, “ಬೇವಾಫಾ ಸನಮ್” (1995) ನಲ್ಲಿನ ಪಾತ್ರಕ್ಕಾಗಿ ಮತ್ತು ಭಾರತದಲ್ಲಿನ ಅತಿದೊಡ್ಡ ಸಂಗೀತ ನಿರ್ಮಾಣ ಕಂಪನಿಯಾದ ಟಿ-ಸಿರೀಸ್ ಅನ್ನು ಹೊಂದಿದ್ದಕ್ಕಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ಕ್ರಿಶನ್ ಕುಮಾರ್ ದುವಾ ಪಂಜಾಬಿ ಕುಟುಂಬದಲ್ಲಿ ಜನಿಸಿದರು.

VISTARANEWS.COM


on

Krishan Kumar Daughter Tishaa Dies Of Cancer At 21
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 90 ರ ದಶಕದ ನಟ ಮತ್ತು ಟಿ-ಸಿರೀಸ್‌ನ ಸಹ-ಮಾಲೀಕ ಕ್ರಿಶನ್ ಕುಮಾರ್ (Krishan Kumar) ಅವರ ಪುತ್ರಿ ತಿಶಾ ಕುಮಾರ್ ನಿಧನರಾಗಿದ್ದಾರೆ. ತಿಶಾ ಕುಮಾರ್ ( Tishaa Dies) ಅವರು ಕೇವಲ 21ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. 

ಆಕೆಯ ಕ್ಯಾನ್ಸರ್ ಚಿಕಿತ್ಸೆಗಾಗಿ ಮುಂಬೈನಿಂದ ಜರ್ಮನಿಗೆ ಕರೆದೊಯ್ಯಲಾಯಿತು. ನಿನ್ನೆ ಜರ್ಮನಿಯ ಆಸ್ಪತ್ರೆಯಲ್ಲಿ ತಿಶಾ ಕೊನೆಯುಸಿರೆಳೆದಿದ್ದಾರೆ. ಟಿ-ಸೀರೀಸ್ ವಕ್ತಾರರು ಈ ಬಗ್ಗೆ ಹಂಚಿಕೊಂಡಿದ್ದಾರೆ, “ಕ್ರಿಶನ್ ಕುಮಾರ್ ಅವರ ಪುತ್ರಿ ತಿಶಾ ಕುಮಾರ್ ಅವರು ಅನಾರೋಗ್ಯದಿಂದ ದೀರ್ಘಕಾಲದ ಹೋರಾಟದ ನಂತರ ನಿನ್ನೆ ನಿಧನರಾದರು. ಇದು ಕುಟುಂಬಕ್ಕೆ ಕಷ್ಟಕರ ಸಮಯ.ಈ ಕಷ್ಟದ ಸಮಯದಲ್ಲಿ ಖಾಸಗಿತನವನ್ನು ಗೌರವಿಸಿ’ ಎಂದು ಕೋರಿದ್ದಾರೆ. ಕ್ರಿಶನ್ ಕುಮಾರ್ ಅವರು ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ಟಿ-ಸೀರಿಸ್​ನ ಭಾಗವಾಗಿದ್ದಾರೆ. ಟಿ-ಸೀರಿಸ್ ನಿರ್ಮಾಣದ ಸಿನಿಮಾಗಳಲ್ಲಿ ಇವರ ಪಾಲೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಟಿ-ಸೀರಿಸ್ ಕಡೆಯಿಂದ ಸುತ್ತೋಲೆ ರಿಲೀಸ್ ಮಾಡಲಾಗಿದೆ.

ಕ್ರಿಶನ್ ಕುಮಾರ್ ನಿರ್ಮಾಪಕರಾಗಿದ್ದು, “ಬೇವಾಫಾ ಸನಮ್” (1995) ನಲ್ಲಿನ ಪಾತ್ರಕ್ಕಾಗಿ ಮತ್ತು ಭಾರತದಲ್ಲಿನ ಅತಿದೊಡ್ಡ ಸಂಗೀತ ನಿರ್ಮಾಣ ಕಂಪನಿಯಾದ ಟಿ-ಸಿರೀಸ್ ಅನ್ನು ಹೊಂದಿದ್ದಕ್ಕಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ಕ್ರಿಶನ್ ಕುಮಾರ್ ದುವಾ ಪಂಜಾಬಿ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಚಂದ್ರಭಾನ್, ಕ್ರಿಶನ್ ಟಿ-ಸೀರೀಸ್ ಎಂದು ಕರೆಯಲ್ಪಡುವ ಸೂಪರ್ ಕ್ಯಾಸೆಟ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಗುಲ್ಶನ್ ಕುಮಾರ್ ಅವರ ಕಿರಿಯ ಸಹೋದರ.

ಇದನ್ನೂ ಓದಿ: Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?



ತಿಶಾ ಅವರು 2003ರ ಸೆಪ್ಟೆಂಬರ್ 6ರಂದು ಜನಿಸಿದರು. ಅವರು ಕೃಷ್ಣ ಹಾಗೂ ತಾನ್ಯಾ ಸಿಂಗ್ ಮಗಳು. ದಂಪತಿಗೆ ಇರುವ ಏಕೈಕ ಮಗಳು ಇವರಾಗಿದ್ದರು. ಅವರ ಬಗ್ಗೆ ಹೊರ ಜಗತ್ತಿಗೆ ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ತಿಶಾ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ. ಸಂದೀಪ್ ರೆಡ್ಡಿ ವಂಗ ನಿರ್ದೇಶನದ, ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಇದನ್ನು ಟಿ-ಸೀರಿಸ್ ನಿರ್ಮಾಣ ಮಾಡಿದೆ. ‘ಅನಿಮಲ್’, ‘ಭೂಲ್ ಭುಲಯ್ಯ 2’ ರೀತಿಯ ಸಿನಿಮಾಗಳಿಗೆ ಬಂಡವಾಳ ಹೂಡಿದ್ದರು ಕ್ರಿಶನ್ ಕುಮಾರ್ .

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Salman Khan-Akshay Kumar ಬಾಲಿವುಡ್‌ನ ಸೂಪರ್ ಸ್ಟಾರ್ ನಟರೆನಿಸಿಕೊಂಡ  ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ಬಾಲಿವುಡ್ ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅಲ್ಲದೇ ಇವರಿಬ್ಬರು ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಇವರ ಜೋಡಿ ಅನೇಕ ವೀಕ್ಷಕರನ್ನು ಮೋಡಿ ಮಾಡಿದೆ. ಹಾಗಾಗಿ ಅವರು ಜೊತೆಯಾಗಿ ನಟಿಸಿದ ಚಿತ್ರಗಳು ಕೂಡ ಸೂಪರ್ ಹಿಟ್ ಆಗಿವೆ. ಆ ಚಿತ್ರಗಳ ಕುರಿತ ಮಾಹಿತಿ ಇಲ್ಲಿವೆ.

VISTARANEWS.COM


on

Salman Khan-Akshay Kumar
Koo

ಮುಂಬೈ : ಬಾಲಿವುಡ್‌ನ ಸೂಪರ್ ಸ್ಟಾರ್ ನಟರೆನಿಸಿಕೊಂಡ  ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ಬಾಲಿವುಡ್ ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅಲ್ಲದೇ ಇವರಿಬ್ಬರು ಹಲವು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಇವರ ಜೋಡಿ ಕೋಟ್ಯಂತರ ವೀಕ್ಷಕರನ್ನು ಮೋಡಿ ಮಾಡಿದೆ. ಹಾಗಾಗಿ ಅವರು ಜೊತೆಯಾಗಿ ನಟಿಸಿದ ಚಿತ್ರಗಳು ಕೂಡ ಸೂಪರ್ ಹಿಟ್ ಆಗಿವೆ. ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ (Salman Khan-Akshay Kumar) ಚಲನಚಿತ್ರಗಳನ್ನು ನೀವು ಒಮ್ಮೆಯಾದರೂ ನೋಡಬೇಕು ಎಂದು ಬಯಸಿದ್ದರೆ ಅವರ  ಅಭಿನಯದ 4 ಅತ್ಯುತ್ತಮ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

1. ಮುಜ್‌ ಸೇ ಶಾದಿ ಕರೋಗಿ

ನಟ ಸಲ್ಮಾನ್ ಖಾನ್ ಮತ್ತು ನಟ ಅಕ್ಷಯ್ ಕುಮಾರ್ ಅವರು ಇದರಲ್ಲಿ ಜೊತೆಯಾಗಿ ನಟಿಸಿದ್ದಾರೆ. ನಟಿ ಪ್ರಿಯಾಂಕಾ ಚೋಪ್ರಾ ಅವರು ಹಿರೋಯಿನ್ ಪಾತ್ರ ಮಾಡಿದ್ದಾರೆ. 2004ರಲ್ಲಿ ಬಿಡುಗಡೆಯಾದ ಈ ಚಿತ್ರ ಹಾಸ್ಯ ಹಾಗೂ ಪ್ರಣಯವನ್ನು ಒಳಗೊಂಡಿದೆ. ಇದು ಈಗ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ಮುಜ್‌ ಸೇ ಶಾದಿ ಕರೋಗಿ ಚಿತ್ರದಲ್ಲಿ ಸಲ್ಮಾನ್ ಮತ್ತು ಅಕ್ಷಯ್ ರೂಮ್ ಮೇಟ್‌ಗಳಾಗಿದ್ದು, ಇಬ್ಬರು ಪ್ರಿಯಾಂಕಾ ಚೋಪ್ರಾ ಒಬ್ಬರನ್ನೇ  ಪ್ರೀತಿಸುತ್ತಾರೆ. ಅವರ ಈ ಪೈಪೋಟಿ ಮನರಂಜನೆ ಮತ್ತು ಪ್ರೀತಿಪಾತ್ರವಾಗಿಸುತ್ತದೆ. ಚಿತ್ರದಲ್ಲಿ ಅವರ ಹಾಸ್ಯಮಯ ಸಮಯ ಮತ್ತು ಅವರ ನಡುವಿನ ತಮಾಷೆ ಪ್ರೇಕ್ಷರರಿಗೆ ಮನೋರಂಜನೆಯನ್ನು ನೀಡುತ್ತದೆ.

2. ಜಾನ್-ಎ-ಮನ್

ಇದರಲ್ಲಿ ಕೂಡ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಜೊತೆಯಾಗಿ ನಟಿಸಿದ್ದಾರೆ. ಇದರಲ್ಲಿ ನಟಿ ಪ್ರೀತಿ ಜಿಂಟಾ ಹಿರೋಯಿನ್ ಆಗಿ ನಟಿಸಿದ್ದಾರೆ. 2006 ರಲ್ಲಿ ಬಿಡುಗಡೆಯಾದ ಈ ಚಿತ್ರ ಸಂಗೀತ  ಮತ್ತು ಪ್ರಣಯಕ್ಕೆ ಸಂಬಂಧಿಸಿದಾಗಿದೆ. ಇದು ಈಗ ಯೂಟ್ಯೂಬ್‌ನಲ್ಲಿ ನೋಡಲು ಸಿಗುತ್ತದೆ. ಈ ಚಿತ್ರದಲ್ಲಿ ಕೂಡ ಸಲ್ಮಾನ್ ಮತ್ತು ಅಕ್ಷಯ್ ಇಬ್ಬರು ಕೂಡ ಪ್ರೀತಿ ಜಿಂಟಾ ಅವರನ್ನೇ ಪ್ರೀತಿಸುತ್ತಿರುತ್ತಾರೆ. ಹಮ್ಕೊ ಮಾಲೂಮ್ ಹೈ ಮತ್ತು ಕೆಲವು  ಹಾಡುಗಳಲ್ಲಿ ಅವರ ಕೆಮಿಸ್ಟ್ರಿ ಚೆನ್ನಾಗಿ ಮೂಡಿಬಂದಿದೆ.

3. ತೀಸ್ ಮಾರ್ ಖಾನ್

2010ರಲ್ಲಿ ಬಿಡುಗಡೆಯಾದ ಈ ಚಿತ್ರ ಹಾಸ್ಯ, ಆಕ್ಷನ್ ನಿಂದ ಕೂಡಿದೆ. ಈ ಚಿತ್ರ ಈಗ ಯೂಟ್ಯೂಬ್‌ನಲ್ಲಿ ಲಭ್ಯವಿದೆ. ತೀಸ್ ಮಾರ್ ಖಾನ್ ಚಿತ್ರದಲ್ಲಿ  ಅಕ್ಷಯ್ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಸಲ್ಮಾನ್ ಖಾನ್ ಅವರು ವಲ್ಲಾ ರೆ ವಾಲಾ ಹಾಡಿನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಹೆಚ್ಚು ಪರದೆಯ ಸಮಯವನ್ನು ಹಂಚಿಕೊಳ್ಳದಿದ್ದರೂ, ಹಾಡಿನಲ್ಲಿ ಅವರ ಕೆಮಿಸ್ಟ್ರಿ ಸೂಪರ್ ಆಗಿ ಕಾಣಿಸಿದೆ. ಇದು ಚಿತ್ರದ ಪ್ರಮುಖ ಹೈಲೈಟ್ ಆಗಿದೆ.

4. ಫಗ್ಲಿ

2014ರಲ್ಲಿ ಬಿಡುಗಡೆಯಾದ ಈ ಚಿತ್ರ ಹಾಸ್ಯ ಮತ್ತು  ಥ್ರಿಲ್ಲರ್‌ನಿಂದ ಕೂಡಿದೆ. ಫಗ್ಲಿ ಚಿತ್ರದಲ್ಲಿ, ಸಲ್ಮಾನ್ ಮತ್ತು ಅಕ್ಷಯ್ ಚಿತ್ರದ ಟೈಟಲ್ ಸಾಂಗ್  ಫಗ್ಲಿ ಫಗ್ಲಿ ಕ್ಯಾ ಹೈನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರ ಅಭಿನಯ ಮತ್ತು ಪರದೆಯ ಮೇಲೆ ಅವರ ಜೋಡಿ ಈ ಸಾಂಗ್ ಅನ್ನು ಸೂಪರ್ ಹಿಟ್ ಆಗಿಸಿದೆ.

ಇದನ್ನೂ ಓದಿ: ನೀತಾ ಅಂಬಾನಿ ಪ್ರಸ್ತುತಪಡಿಸಿದ್ದಾರೆ ವಿಷ್ಣುವಿನ ‘ದಶಾವತಾರ’ದ ಚಿತ್ರಣ; ವಿಡಿಯೊ ನೋಡಿ

ಸಲ್ಮಾನ್ ಖಾನ್ ಮತ್ತು ಅಕ್ಷಯ್ ಕುಮಾರ್ ತಮ್ಮ ಅಭಿನಯ ಮತ್ತು ಅಸಾಧಾರಣ ಕೆಮಿಸ್ಟ್ರಿಯಿಂದ ಬಾಲಿವುಡ್‌ನಲ್ಲಿ ಕೆಲವು ಮರೆಯಲಾಗದ ಕ್ಷಣಗಳನ್ನು ಸೃಷ್ಟಿಸಿದ್ದಾರೆ. ಅವರ ಚಲನಚಿತ್ರಗಳು, ಒಟ್ಟಿಗೆ ಅಥವಾ ವೈಯಕ್ತಿಕವಾಗಿ, ಪ್ರೇಕ್ಷಕರನ್ನು ರಂಜಿಸುತ್ತಲೇ ಇರುತ್ತವೆ. ಇದು ಅವರನ್ನು ಭಾರತೀಯ ಚಿತ್ರರಂಗದ ಐಕಾನ್‌ಗಳನ್ನಾಗಿ ಮಾಡುತ್ತವೆ.

Continue Reading

ಬಾಲಿವುಡ್

Vishal Punjabi: ಮದುವೆಯಾದ 2 ತಿಂಗಳಿಗೆ ಪತ್ನಿಗೆ ಮೋಸ ಮಾಡಿ, ಇನ್ನೊಬ್ಬಳ ಜತೆ ಈ ನಟ ಬೆತ್ತಲೆಯಾಗಿ ಸಿಕ್ಕಿಬಿದ್ದಿದ್ದನಂತೆ!

Vishal Punjabi: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಕಿಯಾರಾ ಆಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶಾಲ್ ಪಂಜಾಬಿ ಅವರು ಚಿತ್ರೀಕರಿಸಿದ ಯಾವುದಾದರೂ ಒಂದು ಜೋಡಿ ವಿಚ್ಛೇದನದಲ್ಲಿ ಕೊನೆಗೊಂಡಿತೆ? ಎಂದು ಪ್ರಶ್ನೆ ಕೇಳಲಾಗಿತ್ತು. ಈ ಬಗ್ಗೆ ವಿಶಾಲ್‌ ಹೇಳಿದ್ದು ಹೀಗೆ.

VISTARANEWS.COM


on

Wedding FilmerVishal Punjabi recent chat
Koo

ಬೆಂಗಳೂರು: ವೆಡ್ಡಿಂಗ್ ಫಿಲ್ಮರ್ ಎಂದೂ ಕರೆಯಲ್ಪಡುವ ನಿರ್ಮಾಪಕ ವಿಶಾಲ್ ಪಂಜಾಬಿ ( Vishal Punjabi) ಅವರು ಹಲವಾರು ಉನ್ನತ-ಪ್ರೊಫೈಲ್ ಜೋಡಿಗಳ ವೀಡಿಯೊಗ್ರಾಫ್ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಕಿಯಾರಾ ಆಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶಾಲ್ ಪಂಜಾಬಿ ಅವರು ಚಿತ್ರೀಕರಿಸಿದ ಯಾವುದಾದರೂ ಒಂದು ಜೋಡಿ ವಿಚ್ಛೇದನದಲ್ಲಿ ಕೊನೆಗೊಂಡಿತೆ? ಎಂದು ಪ್ರಶ್ನೆ ಕೇಳಲಾಗಿತ್ತು. ಈ ಬಗ್ಗೆ ವಿಶಾಲ್‌ ಹೇಳಿದ್ದು ಹೀಗೆ.

ವಿಶಾಲ್ ಪಂಜಾಬಿ ಈ ಬಗ್ಗೆ ಮಾತನಾಡಿ ʻʻಸೆಲೆಬ್ರಿಟಿಗಳಲ್ಲಿಯೇ ಈ ಘಟನೆ ಜಾಸ್ತಿ. ಮದುವೆಯಾದ ಎರಡು ತಿಂಗಳ ನಂತರ ಆಕೆಗೆ ಮೋಸ ಮಾಡುವರು ಇರುತ್ತಿದ್ದರು. ಸೆಟ್‌ನಲ್ಲಿ ತನ್ನ ಮೇಕಪ್ ವ್ಯಾನ್‌ನಲ್ಲಿ ನಟಿಯರೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವವರು ಇದ್ದರು. ಹೆಂಡತಿ ಆ ಬಳಿಕ ಅವನನ್ನು ಬೆತ್ತಲೆಯಾಗಿ ನೋಡಿರುವ ಘಟನೆ ಇತ್ತು. ಇದು ಒಬ್ಬ ಖ್ಯಾತ ನಟನ ಸ್ಟೋರಿʼʼಎಂದರು.

ʻʻಕೆಲವೊಮ್ಮೆ ನಾನು ಕರೆ ಮಾಡುವಾಗ ವರ ಕಾಲ್‌ ತೆಗೆದುಕೊಳ್ಳುವುದಿಲ್ಲ, ವಧುವಿಗೆ ಕರೆ ಮಾಡಿದರೆ, ಮದುವೆಯ ವಿಡಿಯೊ ಬೇಡ, ಕರೆ ಮಾಡಬೇಡಿ ಎನ್ನುತ್ತಾರೆ. ಮ್ಯಾನೇಜರ್‌ಗೆ ಕರೆ ಮಾಡಿದರೆ ಅದೇ ರೀತಿ ಉತ್ತರ ಬರುತ್ತದೆ. ಆ ಸಂದರ್ಭದಲ್ಲಿ ನಾನು ಏನು ಮಾಡಬೇಕು? ನೆಟ್‌ಫ್ಲಿಕ್ಸ್‌ಗೆ ಮಾರಾಟ ಮಾಡಲೆ? ಹೀಗಾಗಿ ನಾನು ಕಾಂಟ್ರ್ಯಾಕ್ಟ್‌ ಮಾಡಲು ಆರಂಭಿಸಿದೆʼʼಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?ಇದನ್ನೂ ಓದಿ:

ʻʻಕೆಲವೊಮ್ಮೆ ವಿಡಿಯೊದಲ್ಲಿ ವರನು ಅಳುತ್ತಾ ನಾನು ನಿನ್ನನ್ನು ಪ್ರೀತಿಸುತ್ತೇನೆ, ಬೇಬಿ’ ಎಂದು ಹೇಳುತ್ತಾನೆ. ಅವು ಮೊಸಳೆ ಕಣ್ಣೀರು ಎಂದು ನಿಮಗೆ ತಿಳಿದಿದೆ. ಈ ಕಥೆ ದೊಡ್ಡ ಬಾಲಿವುಡ್ ನಟದ್ದು. ಹೆಸರು ಬೇಡ. ಆ ತುಣುಕಿನ ಮೌಲ್ಯವು ಲಕ್ಷಾಂತರ ಮೌಲ್ಯದ್ದಾಗಿದೆ. ನಾನು ಅದನ್ನು ಮಾರಿ ಹಣ ಸಂಪಾದಿಸಬಹುದು. ಆದರೆ ಅದು ಸರಿಯಲ್ಲʼʼಎಂದರು. ಮದುವೆಯ ಚಿತ್ರೀಕರಣವನ್ನು ಪ್ರಾರಂಭಿಸುವ ಮೊದಲು, ವಿಶಾಲ್ ಶಾರುಖ್ ಖಾನ್ ಅವರೊಂದಿಗೆ ರೆಡ್ ಚಿಲ್ಲಿಸ್ ಎಂಟರ್ಟೈನ್ಮೆಂಟ್ನಲ್ಲಿ ಒಂದು ದಶಕದ ಕಾಲ ಕೆಲಸ ಮಾಡಿದರು.

Continue Reading

ಬಾಲಿವುಡ್

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Urvashi Rautela: ಇದಕ್ಕೂ ಮುಂಚೆ  ಊರ್ವಶಿ ಅವರ ಸ್ನಾನ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಅನೇಕರು ವೀಡಿಯೊ ಕಂಡು PR ಸ್ಟಂಟ್ ಎಂದು ಹೇಳುತ್ತಿದ್ದರು. ಊರ್ವಶಿ ವೀಡಿಯೋದಲ್ಲಿ ಮಂಗಳಸೂತ್ರ ಬೇರೆ ಧರಿಸಿದ್ದರು. ಹೀಗಾಗಿ ಇದು ಫೇಕ್‌ ಎಂದು ಹೇಳಲಾಗಿತ್ತು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Urvashi Rautela Conversation With Manager 'Leaked',
Koo

ಬೆಂಗಳೂರು: ನಟಿ ಊರ್ವಶಿ ರೌಟೇಲಾ (Urvashi Rautela) ಅವರ ಖಾಸಗಿ ವಿಡಿಯೊವೊಂದು ವೈರಲ್‌ ಆಗಿರುವುದು ಗೊತ್ತೇ ಇದೆ. ನಟಿ ಬಾತ್‌ರೂಮ್‌ನಲ್ಲಿ ಬಟ್ಟೆ ಬದಲಾಯಿಸುತ್ತಿರುವುದನ್ನು ಕಂಡು ಫ್ಯಾನ್ಸ್‌ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಹೊಸ ಆಡಿಯೊವೊಂದು ಲೀಕ್‌ ಆಗಿದೆ. ಈಗ ಲೀಕ್‌ ಆಗಿರುವ ವಿಡಿಯೊದಲ್ಲಿ ಊರ್ವಶಿ ಮತ್ತು ಆಕೆಯ ಮ್ಯಾನೇಜರ್ ನಡುವಿನ ಮಾತುಕತೆ ಇದೆ. ಇದರಲ್ಲಿ ಘಟನೆಯನ್ನು ಊರ್ವಶಿ ಖಂಡಿಸಿದ್ದಾರೆ.

ಸಂಭಾಷಣೆಯಲ್ಲಿ, ಊರ್ವಶಿ ತನ್ನ ಮ್ಯಾನೇಜರ್ ಹತ್ತಿರ ನೀವು ವೀಡಿಯೊವನ್ನು ನೋಡಿದ್ದೀರಾ ಎಂದು ಕೇಳುತ್ತಾರೆ. ಅವರು ಪ್ರತಿಕ್ರಿಯಿಸುತ್ತಾರೆ, “ಹೌದು, ನಾನು ನೋಡಿದೆ ಮತ್ತು ತಂಡ ವೈರಲ್‌ ಆದ ವಿಡಿಯೊವನ್ನು ಡಿಲಿಟ್‌ ಮಾಡಲು ಪ್ರಯತ್ನಿಸುತ್ತಿದೆ.” ಎನ್ನುತ್ತಾರೆ,ಆಗ ಊರ್ವಶಿ ಹೇಳುತ್ತಾರೆ, “ಈ ವಿಷಯಗಳು ಹೇಗೆ ವೈರಲ್‌ ಆಗುತ್ತಿವೆ ಎಂದು ನನಗೆ ಅರ್ಥವಾಗುತ್ತಿಲ್ಲ. ನಾನು ತಕ್ಷಣ ಅವರೊಂದಿಗೆ ಕರೆ ಮಾಡಬೇಕಾಗಿದೆʼʼಎನ್ನುತ್ತಾರೆ. ಆಗ ಮ್ಯಾನೇಜರ್‌ ʻʻಹೌದು, ಊರ್ವಶಿ ನನಗೆ ಗೊತ್ತು, ಇದು ತುಂಬಾ ದುಃಖದ ಪರಿಸ್ಥಿತಿ, ಆದರೆ ನಾವು ಈ ವಿಚಾರಗಳನ್ನು ಫೋನ್‌ನಲ್ಲಿ ಮಾತನಾಡಬಾರದು. ಜುಲೈ 19 ರಂದು ನೀವು ಹಿಂತಿರುಗಿದಾಗ ಈ ಬಗ್ಗೆ ಚರ್ಚಿಸೋಣʼʼಎನ್ನುತ್ತಾರೆ. ಆಗ ಊರ್ವಶಿ “ಯಾಕೆ?” ಎಂದು ಪ್ರಶ್ನಿಸಿದಾಗ, ಮ್ಯಾನೇಜರ್ “ಏನಾಗುತ್ತಿದೆ ಎಂಬುದರ ಬಗ್ಗೆ ಯಾರಿಗೂ ಸ್ಪಷ್ಟವಾಗಿಲ್ಲ, ನೀವು ಬಂದ ಬಳಿಕ ನಿಮ್ಮೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ.” ಎಂಬ ಸಂಭಾಷಣೆ ಇದೀಗ ಲೀಕ್‌ ಆಗಿದೆ.
ಸೋಶಿಯಲ್ ಮೀಡಿಯಾ ಲೀಕ್ ಆದ ಆಡಿಯೋವನ್ನು ವಿಡಿಯೋ ರೀತಿಯಲ್ಲಿ ವೈರಲ್‌ ಮಾಡಲಾಗುತ್ತಿದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ಇದಕ್ಕೂ ಮುಂಚೆ  ಊರ್ವಶಿ ಅವರ ಸ್ನಾನ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಅನೇಕರು ವೀಡಿಯೊ ಕಂಡು PR ಸ್ಟಂಟ್ ಎಂದು ಹೇಳುತ್ತಿದ್ದರು. ಊರ್ವಶಿ ವೀಡಿಯೋದಲ್ಲಿ ಮಂಗಳಸೂತ್ರ ಬೇರೆ ಧರಿಸಿದ್ದರು. ಹೀಗಾಗಿ ಇದು ಫೇಕ್‌ ಎಂದು ಹೇಳಲಾಗಿತ್ತು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು. ಸನ್ನಿ ಡಿಯೋಲ್ ಅಭಿನಯದ ಈ ಚಿತ್ರ ಕಮರ್ಷಿಯಲ್ ಫ್ಲಾಪ್ ಆಗಿತ್ತು. ಇದರ ನಂತರ ಯೋ ಯೋ ಹನಿಸಿಂಗ್ ಅವರೊಂದಿಗೆ ‘ಲವ್ ಡೋಸ್’ ಎಂಬ ಆಲ್ಬಂನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದರು. ಮೆಗಾ ಸ್ಟಾರ್‌ ಚಿರಂಜೀವಿ ನಟನೆಯ, ‘ವಾಲ್ತೇರು ವೀರಯ್ಯ’ದಲ್ಲಿ ಐಟಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು. ಪವನ್ ಕಲ್ಯಾಣ್ ಅಭಿನಯದ ‘ಬ್ರೋ’ ಸಿನಿಮಾದಲ್ಲಿಯೂ ಮೈ ಡಿಯರ್ ಮಾರ್ಕಂಡೇಯ ಎಂದು ಸೊಂಟ ಬಳುಕಿಸಿ ಸೌತ್‌ ಸಿನಿರಸಿಕರ ಮನಗೆದ್ದರು.

Continue Reading

ಬಾಲಿವುಡ್

Janhvi Kapoor: ಅಂಬಾನಿ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ಜಾಹ್ನವಿ ಕಪೂರ್!

Janhvi Kapoor: ಜಾಹ್ನವಿ ಕಪೂರ್ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ.

VISTARANEWS.COM


on

Janhvi Kapoor hospitalised due to food poisoning
Koo

ಬೆಂಗಳೂರು: ನಟಿ ಜಾನ್ವಿ ಕಪೂರ್ (Janhvi Kapoor) ಅವರು ಜುಲೈ 18 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಧಾಂಶು ಸರಿಯಾ ಅವರ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟಿ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೀಗ ವರದಿಯ ಪ್ರಕಾರ ನಟಿಯ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ಮದುವೆಯಲ್ಲಿ ಜಾಹ್ನವಿ ಕಪೂರ್ ಕಣ್ಮನ ಸೆಳೆದಿದ್ದರು. ಗೋಲ್ಡನ್ ಡ್ರೆಸ್‌ನಲ್ಲಿ ಮಿಂಚಿದ್ದರು. ಆ ನಂತರ ಅದ್ಧೂರಿ ಮದುವೆಯನ್ನು ಮುಗಿಸಿಕೊಂಡು ಜಾಹ್ನವಿ ಕಪೂರ್ ಚೆನ್ನೈಗೆ ತೆರಳಿದ್ದರು.

ಚೆನ್ನೈನಲ್ಲಿ ಜಾಹ್ನವಿ ಕಪೂರ್ ಸೀ ಫುಡ್​ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್​ಅವರಿಗೆ ಫುಡ್​ಪಾಯ್ಸನ್​ಆಗಿದೆ. ಇನ್ನೂ ಅನಾರೋಗ್ಯದಿಂದ ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಕುಸಿದು ಬಿದ್ದರು ಎನ್ನುವ ಸುದ್ದಿಯೂ ಇದೆ. ಬೋನಿ ಕಪೂರ್ ಇನ್ನೊಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಜಾಹ್ನವಿ ಕಪೂರ್ ಅವರನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಹೇಳಿದ್ದಾರೆ.

ಜಾಹ್ನವಿ ಕಪೂರ್ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ. ಉಲಾಜ್ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್‌? ಟ್ರೋಲ್‌ ಆದ್ರು ನಟಿ!

ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

Continue Reading
Advertisement
Keshav Prasad Maurya
ದೇಶ2 mins ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ3 mins ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest5 mins ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು9 mins ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ13 mins ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್25 mins ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ26 mins ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Paris Olympics 2024
ಪ್ರಮುಖ ಸುದ್ದಿ39 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Karnataka Rain
ಮಳೆ53 mins ago

Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

Kiran Kumar
ಕರ್ನಾಟಕ1 hour ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌