Mukesh Khanna: ಪಾನ್ ಮಸಾಲಾ ಜಾಹೀರಾತು ಮಾಡುವವರಿಗೆ ಹೊಡೆಯಬೇಕು ಎಂದ ಮಹಾಭಾರತ ಖ್ಯಾತಿಯ ʻಭೀಷ್ಮʼ - Vistara News

ಬಾಲಿವುಡ್

Mukesh Khanna: ಪಾನ್ ಮಸಾಲಾ ಜಾಹೀರಾತು ಮಾಡುವವರಿಗೆ ಹೊಡೆಯಬೇಕು ಎಂದ ಮಹಾಭಾರತ ಖ್ಯಾತಿಯ ʻಭೀಷ್ಮʼ

Mukesh Khanna: ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಟೀಕೆಗೊಳಗಾಗಿದ್ದಾರೆ. ಮುಖೇಶ್‌ ಖನ್ನಾ ಅವರು ‘ಇಂಥವರಿಗೆ ಹೊಡೆಯಬೇಕು’ ಎಂದು ಅವರು ಸಖತ್​ ಖಾರವಾಗಿ ಹೇಳಿದ್ದಾರೆ. 

VISTARANEWS.COM


on

Mukesh Khanna slams Ajay Devgn Shah Rukh for doing pan masala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:  ಮಹಾಭಾರತ (mahabharatha) ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna)  ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ದೂಷಿಸಿದ್ದಾರೆ. ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರು ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಟೀಕೆಗೊಳಗಾಗಿದ್ದಾರೆ. ಮುಖೇಶ್‌ ಖನ್ನಾ ಅವರು ‘ಇಂಥವರಿಗೆ ಹೊಡೆಯಬೇಕು’ ಎಂದು ಅವರು ಸಖತ್​ ಖಾರವಾಗಿ ಹೇಳಿದ್ದಾರೆ. 

ಸಂದರ್ಶನವೊಂದರಲ್ಲಿ ಮುಖೇಶ್ ಖನ್ನಾ ಮಾತನಾಡಿ, “ನೀವು ನನ್ನನ್ನು ಈ ಪಾನ್ ಮಸಾಲಾ ಜಾಹೀರಾತು ಬಗ್ಗೆ ಕೇಳಿದರೆ, ಈ ರೀತಿ ಜಾಹೀರಾತು ಮಾಡವರಿಗೆ ಹೊಡೆಯಬೇಕು ಎಂದು ಹೇಳುತ್ತೇನೆ. ನಾನು ಅಕ್ಷಯ್ ಕುಮಾರ್ ಅವರನ್ನು ನಿಂದಿಸಿದ್ದೇನೆ. ಅವರು ಆರೋಗ್ಯದ ಬಗ್ಗೆ ಕಾಳಜಿ ಇರುವ ಮನುಷ್ಯ. ಶಾರುಖ್​ ಖಾನ್, ಅಜಯ್​ ದೇವಗನ್​ ಜೊತೆ ಅವರು ಈ ಜಾಹೀರಾತು ಮಾಡಿದ್ದಾರೆ. ಇಂಥ ಜಾಹೀರಾತುಗಳ ಮೇಲೆ ಕೋಟ್ಯಂತರ ರೂಪಾಯಿ ಸುರಿಯಲಾಗುತ್ತದೆ. ಇದರಿಂದ ಜನರಿಗೆ ನೀವು ಏನು ಕಲಿಸುತ್ತಿದ್ದೀರಿ? ತಾವು ಪಾನ್​ ಮಸಾಲಾ ಮಾಡುತ್ತಿಲ್ಲ, ಅಡಿಕೆ ಪುಡಿ ಮಾರುತ್ತೇವೆ ಎನ್ನುತ್ತಾರೆ. ಆದರೆ ತಾವು ಮಾಡುತ್ತಿರುವುದು ಏನು ಅಂತ ಅವರಿಗೂ ಗೊತ್ತಿದೆ’ ಎಂದು ಮುಖೇಶ್​ ಖನ್ನಾ ಹೇಳಿದ್ದಾರೆ.

ʻʻನೀವು ಕಿಂಗ್‌ಫಿಶರ್ ಜಾಹೀರಾತನ್ನು ಮಾಡಿದರೆ, ನೀವು ಕಿಂಗ್‌ಫಿಶರ್ ಬಿಯರ್ ಅನ್ನು ಮಾರಾಟ ಮಾಡುತ್ತಿದ್ದೀರಿ ಎಂದರ್ಥ. ಎಲ್ಲರಿಗೂ ತಿಳಿದಿದೆ, ಇದನ್ನು ಮೋಸಗೊಳಿಸುವ ಜಾಹೀರಾತು ಎಂದು ಕರೆಯಲಾಗುತ್ತದೆ. ಅವರು ಈ ಜಾಹೀರಾತುಗಳನ್ನು ಏಕೆ ಮಾಡುತ್ತಾರೆ? ಅವರ ಬಳಿ ಹಣವಿಲ್ಲವೇ? ನಾನು ಅವರಿಗೆ ಇದನ್ನು ಹೇಳಿದ್ದೇನೆ, ಈ ಕೆಲಸಗಳನ್ನು ಮಾಡಬೇಡಿ, ನಿಮ್ಮ ಬಳಿ ಸಾಕಷ್ಟು ಹಣವಿದೆ. ಕೆಲವು ನಟರು ಅದನ್ನು ಹಿಂಪಡೆದಿದ್ದಾರೆ, ಅವರಲ್ಲಿ ಅಕ್ಷಯ್ ಒಬ್ಬರು. ಅಮಿತಾಭ್‌ ಬಚ್ಚನ್ ಕೂಡ ಅದರಿಂದ ದೂರ ಸರಿದಿದ್ದಾರೆ. ಆದರೆ, ಇಲ್ಲಿಯವರೆಗೆ, ಈ ಜಾಹೀರಾತುಗಳನ್ನು ಮಾಡಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ನೀವು ಜನರಿಗೆ ಗುಟ್ಕಾ ಸೇವಿಸಲು ಕಲಿಸುತ್ತಿದ್ದೀರಿ! ಅದನ್ನು ಮಾಡಬೇಡಿ,” ಎಂದು ನಟ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Nanu Mattu Gunda-2: ಬರ್ತಿದೆ ʻನಾನು ಮತ್ತು ಗುಂಡ-2ʼ ಸಿನಿಮಾ; ಡಬ್ಬಿಂಗ್‌ಗೆ ಇಳಿದ ಸಿಂಬ!

ಈ ಹಿಂದೆ ಈ ವಿಚಾರದ ಬಗ್ಗೆ  ಜಾನ್ ಅಬ್ರಹಾಂ ಟೀಕಿಸಿದ್ದರು. ʻʻಜನರು ಫಿಟ್ನೆಸ್ ಬಗ್ಗೆ ಮಾತನಾಡುತ್ತಾರೆ. ಆ ಬಳಿಕ ಅದೇ ವ್ಯಕ್ತಿಗಳು ಪಾನ್ ಮಸಾಲ ಪ್ರಚಾರ ಮಾಡುತ್ತಾರೆ. ನಾನು ಇಂಡಸ್ಟ್ರಿಯ ಎಲ್ಲರನ್ನೂ ಪ್ರೀತಿಸುತ್ತೇನೆ. ನಾನು ಅವರನ್ನು ಅಗೌರವಿಸುತ್ತಿಲ್ಲ. ಒಂದು ವಿಚಾರವನ್ನು ನಾನು ಸ್ಪಷ್ಟಪಡಿಸಬೇಕು. ನಾನು ನನ್ನ ಬಗ್ಗೆ ಮಾತನಾಡುತ್ತೇನೆ. ನಾನು ಸಾವನ್ನು ಮಾರಾಟ ಮಾಡಲ್ಲ. ಇದಕ್ಕೆ ನಾನು ಹಾಕಿಕೊಂಡ ಪ್ರಿನ್ಸಿಪಲ್ ಕಾರಣ. ನಾನು ನನ್ನ ಜೀವನವನ್ನು ಪ್ರಾಮಾಣಿಕತೆಯಿಂದ ಜೀವಿಸಿದರೆ ಮತ್ತು ನಾನು ಬೋಧಿಸುವದನ್ನು ನಾನು ಅಭ್ಯಾಸ ಮಾಡಿದರೆ, ಆಗ ನಾನೇ ರೋಲ್ ಮಾಡೆಲ್ ’ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Urfi Javed: ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

VISTARANEWS.COM


on

Urfi Javed 'LED Display Top' On Mumbai Streets
Koo

ಬೆಂಗಳೂರು: ಕೆಲವು ದಿನಗಳಿಂದ ನಟಿ ಉರ್ಫಿ ಜಾವೇದ್ (Urfi Javed) ಕುಡಿದು ತೇಲಡುತ್ತಿರುವ ವಿಡಿಯೊ ಭಾರಿ ವೈರಲ್‌ ಆಗಿತ್ತು. ಹೀಗಾಗಿ ಉರ್ಫಿಯ ಫ್ಯಾಷನ್‌ ಬಗ್ಗೆಯೇ ಸಾಕಷ್ಟು ಸುದ್ದಿಯಾಗಿತ್ತು. ಇದೀಗ ಬಸ್​, ಮಳಿಗೆಗಳಿಗೆ ಅಳವಡಿಸಿ ಡಿಜಿಟಲ್​ ನಾಮಫಲಕವನ್ನು ಎದೆಗೆ ಅಳವಡಿಸಿಕೊಂಡು ಹೋಗಿದ್ದಾರೆ. , ಇನ್ನು ಫ್ಲ್ಯಾಟ್ ಚೆಸ್ಟ್​ ಎಂದು ನೀವು ಹೇಳುವುದು ಏಕೆ ಎಂದು ನಟಿಯ ಕಾಲೆಳೆಯುತ್ತಿದ್ದಾರೆ.

 ಕೆಲ ದಿನಗಳ ಹಿಂದೆ,  ಮೈಮೇಲಿಂದಲೇ ಉದುರುವ ಹೂವು-ಎಲೆ ಹಾರಾಡುವ ಚಿಟ್ಟೆಗಳ ಬಟ್ಟೆ ತೊಟ್ಟು ಅಭಿಮಾನಿಗಳ ಹುಬ್ಬೇರಿಸಿದ್ದರು.  ಇದರ ವಿಡಿಯೋ ಸಕತ್​ ವೈರಲ್​ ಆಗಿದ್ದು,  ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು.  

ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

ಇದನ್ನೂ ಓದಿ: Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ!

ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು.

Continue Reading

ಸಿನಿಮಾ

Shah Rukh Khan: ಫೋಟೊಗೆ ಪೋಸ್‌ ಕೊಡುವ ಭರದಲ್ಲಿ ಹಿರಿಯ ವ್ಯಕ್ತಿಯನ್ನು ತಳ್ಳಿದ ಶಾರುಖ್‌; ʻಸೊಕ್ಕಿನ ಮನುಷ್ಯʼ ಅಂದ್ರು ನೆಟ್ಟಿಗರು!

Shah Rukh Khan: ಶಾರುಖ್ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಲೊಕಾರ್ನೊ ಫಿಲ್ಮ್ ಫೆಸ್ಟಿವಲ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಶಾರುಖ್ ಕಪ್ಪು ಬಣ್ಣದ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Shah Rukh Khan pushes old man at Locarno film festival red carpet
Koo

ಬೆಂಗಳೂರು: ಬಾಲಿವುಡ್‌ ಕಿಂಗ್ ಶಾರುಖ್ ಖಾನ್ಗೆ (Shah Rukh Khan) ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಗೆ (Pardo Alla Carriera at the 77th Locarno Film Festival) ಭಾಜನರಾಗಿದ್ದಾರೆ. ಶನಿವಾರ (ಆಗಸ್ಟ್ 10 ರಂದು) ನಡೆದ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಶಾರುಖ್ ಖಾನ್​​ಗೆ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸಮಾರಂಭದಲ್ಲಿನ ಶಾರುಖ್ ಖಾನ್ ಅವರ ಫೋಟೋಗಳು ಮತ್ತು ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. ಇದೀಗ ನಟ ರೆಡ್‌ ಕಾರ್ಪೆಟ್‌ ಮೇಲೆ ಪೋಸ್‌ ನೀಡುವಾಗ ಅಡ್ಡ ಬಂದ ಹಿರಿಯ ವ್ಯಕ್ತಿಯನ್ನು ತಳ್ಳಿದ್ದಾರೆ. ಇದೀಗ ನಟ ಭಾರಿ ಟ್ರೋಲ್‌ ಆಗಿದ್ದಾರೆ.

ಇದೀಗ ನೆಟ್ಟಿಗರು ನಟನ ನಡವಳಿಕೆಗೆ ಖಂಡಿಸಿದ್ದಾರೆ. ಅತ್ಯಂತ “ಸೊಕ್ಕಿನ” ಮತ್ತು “ಅಸಭ್ಯ” ವ್ಯಕ್ತಿ ಎಂದು ಲೇಬಲ್ ಕೊಟ್ಟಿದ್ದಾರೆ. ಶಾರುಖ್ ಒಳ್ಳೆಯ ವ್ಯಕ್ತಿಯಲ್ಲ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಅವರ ಹಳೆಯ ಸ್ನೇಹಿತರಲ್ಲಿ ಒಬ್ಬರುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಶಾರುಖ್ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪಾರ್ಡೊ ಅಲ್ಲಾ ಕ್ಯಾರಿಯರಾ ಅಸ್ಕೋನಾ-ಲೊಕಾರ್ನೊ ಪ್ರವಾಸೋದ್ಯಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಲೊಕಾರ್ನೊ ಫಿಲ್ಮ್ ಫೆಸ್ಟಿವಲ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಶಾರುಖ್ ಕಪ್ಪು ಬಣ್ಣದ ಬ್ಲೇಜರ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

ಸುಜೋಯ್ ಘೋಷ್ ನಿರ್ದೇಶನದ ಕಿಂಗ್‌ನಲ್ಲಿ ಶಾರುಖ್ ಖಾನ್ ಮುಂದೆ ಕಾಣಿಸಿಕೊಳ್ಳಲಿದ್ದಾರೆ. 2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ. ಇದೀಗ ಶಾರುಖ್‌ ಸ್ಪೇನ್‌ನಲ್ಲಿ ಚಿತ್ರದ ಚಿತ್ರೀಕರಣದಲ್ಲಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು.

ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading

ಬಾಲಿವುಡ್

Abhishek Bachchan: ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ ಎಂದ ಅಭಿಷೇಕ್ ಬಚ್ಚನ್; ವಿಡಿಯೊ ಇಲ್ಲಿದೆ!

Abhishek Bachchan:ಇದೀಗ ವೈರಲ್‌ ಆದ ವಿಡಿಯೊದಲ್ಲಿ ಅಭಿಷೇಕ್ ಬಚ್ಚನ್ ಅವರು “ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ” ಎಂದು ಹೇಳುವುದನ್ನು ಕಾಣಬಹುದು. ಈ ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಪ್ರಸ್ತಾಪಿಸುವುದನ್ನು ಸಹ ಕೇಳಬಹುದು.

VISTARANEWS.COM


on

Abhishek Bachchan confirms divorce with Aishwarya Rai Bachchan
Koo

ಬೆಂಗಳೂರು: ಅಭಿಷೇಕ್ ಬಚ್ಚನ್ (Abhishek Bachchan) ಮತ್ತು ಐಶ್ವರ್ಯಾ ರೈ ಬಚ್ಚನ್ (Aishwarya Rai ) ನಡುವಿನ ವಿಚ್ಛೇದನದ ವದಂತಿಗಳ ನಡುವೆ, ಹಳೆಯವಿಡಿಯೊವೊಂದು ನಿರಂತರವಾಗಿ ವೈರಲ್ ಆಗುತ್ತಿದೆ. ಖುದ್ದು ಅಭಿಷೇಕ್ ಬಚ್ಚನ್ ನಾನು ಮತ್ತು ಐಶ್ವರ್ಯ ರೈ ವಿಚ್ಛೇದನ ಪಡೆಯುತ್ತಿದ್ದೇವೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದಲ್ಲಿ ಐಶ್ವರ್ಯಾ ರೈ ಬಚ್ಚನ್ ಬಚ್ಚನ್ ಕುಟುಂಬದ ಜತೆ ಬಂದಿರಲಿಲ್ಲ. ಮಗಳ ಜತೆ ಮಾತ್ರ ಬಂದು ಹೋಗಿದ್ದರು. ಅಲ್ಲಿಂದ ವಿಚ್ಛೇದನದ ವದಂತಿ ಹಬ್ಬಿದೆ.

ಇದೀಗ ವೈರಲ್‌ ಆದ ವಿಡಿಯೊದಲ್ಲಿ ಅಭಿಷೇಕ್ ಬಚ್ಚನ್ ಅವರು “ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ” ಎಂದು ಹೇಳುವುದನ್ನು ಕಾಣಬಹುದು. ಈ ವೀಡಿಯೋದಲ್ಲಿ ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯ ಬಚ್ಚನ್ ಬಗ್ಗೆ ಪ್ರಸ್ತಾಪಿಸುವುದನ್ನು ಸಹ ಕೇಳಬಹುದು. ಆದರೆ ಕೆಲವರು ಈ ವಿಡಿಯೊ ಫೇಕ್‌ ಎಂದು ಹೇಳುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಇಬ್ಬರೂ ತಮ್ಮ ವಿಚ್ಛೇದನದ ವದಂತಿಗಳ ಬಗ್ಗೆ ಮೌನವಾಗಿಯೇ ಉಳಿದಿದ್ದಾರೆ.

ಈ ವಿಡಿಯೊ ವೈರಲ್‌ ಆದ ಕೂಡಲೇ ಕೆಲವರು ಅಭಿಷೇಕ್ ಬಚ್ಚನ್ ಅವರ ಲಿಪ್ ಸಿಂಕ್‌ ಆಗದ ಕಾರಣ ಇದು ಡೀಪ್‌ಫೇಕ್ ವೀಡಿಯೊವಾಗಿದೆ. AI ತಂತ್ರಜ್ಞಾನ ಬಳಸಿಕೊಂಡು ವಿಡಿಯೊ ಹರಿ ಬಿಟ್ಟಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಹೀಗಿರುವಾಗ ಅಸಲಿಗೆ ತಂತ್ರಜ್ಞಾನದ ನೆರವು ಪಡೆದು, ಕಿಡಿಗೇಡಿಗಳು ಅಭಿಷೇಕ್ ಬಚ್ಚನ್ ಅವರ ವಿಡಿಯೋ ಹರಿ ಬಿಟ್ಟಿದ್ದಾರೆ. ಎಐ ತಂತ್ರಜ್ಞಾನ ಅಥವಾ ಆನ್ ಲೈನ್ ಪರಿಕರಗಳನ್ನು ಬಳಸಿ ಈ ವಿಡಿಯೋ ತೇಲಿ ಬಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Aishwarya Rai : ಡಿವೋರ್ಸ್ ವದಂತಿ ಮಧ್ಯೆ ಒಬ್ಬರೇ ಮಗಳ ಜತೆ ನ್ಯೂಯಾರ್ಕ್ ವಕೇಶನ್‌ ಎಂಜಾಯ್‌ ಮಾಡಿ ಬಂದ ಐಶ್ವರ್ಯಾ ರೈ!

ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಜೋಡಿಯ ಬಗ್ಗೆ ಯಾವುದೇ ಹೇಳಿಕೆ ಈವರೆಗೂ ಕೊಟ್ಟಿಲ್ಲ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ಏಪ್ರಿಲ್ 2007 ರಲ್ಲಿ ವಿವಾಹವಾದರು. ಅವರು ನವೆಂಬರ್ 2011 ರಲ್ಲಿ ಆರಾಧ್ಯ ಬಚ್ಚನ್ ಜನಿಸಿದರು.

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ (Anant Ambani Wedding) ಮಹಾರಾಷ್ಟ್ರದ ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆದಿತ್ತು. ಐಶ್ವರ್ಯಾ ರೈ ಮಾತ್ರ ಬಚ್ಚನ್ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದರು. ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಅಭಿಷೇಕ್ ಹಾಗೂ ಇತರರು ಒಟ್ಟಾಗಿ ಮದುವೆಗೆ ಆಗಮಿಸಿದ್ದರು. ಆದರೆ, ಈ ವೇಳೆ ಐಶ್ವರ್ಯಾ ಇರಲಿಲ್ಲ. ಮದುವೆಗೆ ಹಾಜರಾಗುತ್ತಿಲ್ಲವೇನೋ ಎಂದು ಕೆಲವರು ಭಾವಿಸಿದ್ದರು. ಬಳಿಕ ಅವರು ಮದುವೆಗೆ ಹಾಜರಿ ಹಾಕಿದ್ದರು. ಇನ್ನು ಆ ಬಳಿಕ ಐಶ್ವರ್ಯಾ ರೈ ಅವರು ಮಗಳ ಜತೆ ಪೋಸ್‌ ಕೊಟ್ಟಿದ್ದರು. ಐಶ್ವರ್ಯಾ ರೈಗೆ ಬಚ್ಚನ್ ಕುಟುಂಬದ ಜತೆ ಕಿರಿಕ್ ಮಾಡಿಕೊಂಡಿರುವುದು ನಿಜ ಎಂದು ಅನೇಕರು ಮಾತನಾಡಿಕೊಂಡಿದ್ದರು. ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್-ಜಯಾ ಬಚ್ಚನ್ ದಂಪತಿ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಚರ್ಚೆ ಮೊದಲಿನಿಂದಲೂ ಇತ್ತು.

Continue Reading

ಬಾಲಿವುಡ್

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

John Abraham: ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡ ಜಾನ್, ‘ಸಾವನ್ನು ಮಾರಲು’ ಎಂದೂ ಬಯಸುವುದಿಲ್ಲ ಎಂದು ಹೇಳಿದರು. ನಟ ರ ಜಾಹೀರಾತು ಬಗ್ಗೆ ನೇರವಾಗಿ ಹೆಸರನ್ನು ಹೇಳದೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪಾನ್ ಮಸಾಲ ಮಾರುವುದನ್ನು ಸಾವನ್ನು ಮಾರಾಟ ಮಾಡಿದಂತೆ’ ಎಂದು ಅವರು ಹೇಳಿದ್ದಾರೆ.

VISTARANEWS.COM


on

John Abraham slams actors for endorsing paan masala
Koo

ಬೆಂಗಳೂರು: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್, ಟೈಗರ್ ಶ್ರಾಫ್ ಫಿಟ್ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ನೀಡುವವರು. ಇವರು ಪಾನ್ ಮಸಾಲ ಸೇವನೆ ಮಾಡುವುದಿಲ್ಲ. ಆದಾಗ್ಯೂ ವಿಮಲ್ ಪ್ರಚಾರದಲ್ಲಿ ಇವರು ಭಾಗಿ ಆಗುತ್ತಿದ್ದಾರೆ. ಇದನ್ನು ಜಾನ್ ಅಬ್ರಹಾಂ ಟೀಕಿಸಿದ್ದಾರೆ.

ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡ ಜಾನ್, ‘ಸಾವನ್ನು ಮಾರಲು’ ಎಂದೂ ಬಯಸುವುದಿಲ್ಲ ಎಂದು ಹೇಳಿದರು. ನಟ ರ ಜಾಹೀರಾತು ಬಗ್ಗೆ ನೇರವಾಗಿ ಹೆಸರನ್ನು ಹೇಳದೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪಾನ್ ಮಸಾಲ ಮಾರುವುದನ್ನು ಸಾವನ್ನು ಮಾರಾಟ ಮಾಡಿದಂತೆ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಜಾನ್‌ ಮಾತನಾಡಿ ʻʻಜನರು ಫಿಟ್ನೆಸ್ ಬಗ್ಗೆ ಮಾತನಾಡುತ್ತಾರೆ. ಆ ಬಳಿಕ ಅದೇ ವ್ಯಕ್ತಿಗಳು ಪಾನ್ ಮಸಾಲ ಪ್ರಚಾರ ಮಾಡುತ್ತಾರೆ. ನಾನು ಇಂಡಸ್ಟ್ರಿಯ ಎಲ್ಲರನ್ನೂ ಪ್ರೀತಿಸುತ್ತೇನೆ. ನಾನು ಅವರನ್ನು ಅಗೌರವಿಸುತ್ತಿಲ್ಲ. ಒಂದು ವಿಚಾರವನ್ನು ನಾನು ಸ್ಪಷ್ಟಪಡಿಸಬೇಕು. ನಾನು ನನ್ನ ಬಗ್ಗೆ ಮಾತನಾಡುತ್ತೇನೆ. ನಾನು ಸಾವನ್ನು ಮಾರಾಟ ಮಾಡಲ್ಲ. ಇದಕ್ಕೆ ನಾನು ಹಾಕಿಕೊಂಡ ಪ್ರಿನ್ಸಿಪಲ್ ಕಾರಣ. ನಾನು ನನ್ನ ಜೀವನವನ್ನು ಪ್ರಾಮಾಣಿಕತೆಯಿಂದ ಜೀವಿಸಿದರೆ ಮತ್ತು ನಾನು ಬೋಧಿಸುವದನ್ನು ನಾನು ಅಭ್ಯಾಸ ಮಾಡಿದರೆ, ಆಗ ನಾನೇ ರೋಲ್ ಮಾಡೆಲ್ ’ ಎಂದಿದ್ದಾರೆ ಅವರು.

ಇದನ್ನೂ ಓದಿ: Prashanth Neel-Jr Ntr:‌ ಸೆಟ್ಟೇರಿತು ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾ; ರಿಲೀಸ್‌ ಡೇಟ್‌ ಅನೌನ್ಸ್!

ಈ ಹಿಂದೆ, ನಟರಾದ ಅಜಯ್ ದೇವಗನ್ ಮತ್ತು ಅಕ್ಷಯ್ ಕುಮಾರ್ ಅವರು ಪಾನ್ ಮಸಾಲಾ ಮತ್ತು ಗುಟ್ಕಾ ಬ್ರಾಂಡ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದರು. ಅಕ್ಷಯ್ ಅವರು ಅಂತಹ ಪ್ರಚಾರಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು. “ಈ ಜಾಹೀರಾತುಗಳನ್ನು 13ನೇ ಅಕ್ಟೋಬರ್, 2021 ರಂದು ಚಿತ್ರೀಕರಿಸಲಾಗಿದೆ. ಸಾರ್ವಜನಿಕವಾಗಿ ಘೋಷಿಸಿದಾಗಿನಿಂದ ನಾನು ಬ್ರ್ಯಾಂಡ್‌ನೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅವರು ಈಗಾಗಲೇ ಚಿತ್ರೀಕರಿಸಿದ ಜಾಹೀರಾತುಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ಕಾನೂನುಬದ್ಧವಾಗಿ ಚಲಾಯಿಸಬಹುದು ”ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಜಾನ್ ಅಬ್ರಹಾಂ ಅವರು ‘ವೇದ’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಜಾತಿ ವಿಚಾರಗಳ ಬಗ್ಗೆ ಈ ಸಿನಿಮಾ ಇದೆ. ಈ ಚಿತ್ರದ ಜೊತೆಗೆ ‘ಸ್ತ್ರೀ 2’ ಸೇರಿ ಹಲವು ಚಿತ್ರಗಳು ಬಿಡುಗಡೆ ಆಗಿದೆ.

Continue Reading
Advertisement
submarines
ದೇಶ7 mins ago

Submarines: ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳಿಗಾಗಿ ಕೇಂದ್ರಕ್ಕೆ ಭಾರತೀಯ ನೌಕಾಪಡೆ ಮನವಿ

Urfi Javed 'LED Display Top' On Mumbai Streets
ಬಾಲಿವುಡ್33 mins ago

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Tungabhadra Dam
ಬೆಂಗಳೂರು48 mins ago

Tungabhadra Dam: ರಾಜ್ಯದ ಎಲ್ಲ ಡ್ಯಾಮ್‌ಗಳ ಪರಿಶೀಲನೆಗೆ ಸಮಿತಿ ರಚನೆ: ಡಿ.ಕೆ. ಶಿವಕುಮಾರ್ ಸುಳಿವು

Self Harming
ಚಿತ್ರದುರ್ಗ59 mins ago

Self Harming : ಹೆಂಡ್ತಿ ಟಾರ್ಚರ್‌ಗೆ ನೇಣು ಬಿಗಿದುಕೊಂಡು ಗಂಡ ಆತ್ಮಹತ್ಯೆ

Pushpa 2 Leela offered to do special song in Pushpa 2
ಟಾಲಿವುಡ್2 hours ago

Pushpa 2: ಪುಷ್ಪ 2 ಚಿತ್ರದಲ್ಲಿ ಇರಲಿದ್ದಾರಂತೆ ಈ ಕನ್ನಡದ ಹೀರೋಯಿನ್​?

Hindenburg Report
ದೇಶ2 hours ago

Hindenburg Report: ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌

karnataka rain weather forecast
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Gold Rate Today
ಚಿನ್ನದ ದರ2 hours ago

Gold Rate Today: ಮತ್ತೆ ಹೆಚ್ಚಾಯ್ತು ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Tungabhadra Dam
ಕರ್ನಾಟಕ2 hours ago

Tungabhadra Dam: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ; ನದಿಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ಎಚ್ಚರಿಕೆ

Physical abuse
ದೇಶ3 hours ago

Physical Abuse: 70 ವರ್ಷದ ಮುಸ್ಲಿಂ ಧರ್ಮ ಗುರು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ! ವಿಡಿಯೊ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌