Site icon Vistara News

Salman Khan: ಸಲ್ಮಾನ್‌ ಖಾನ್‌ ಮನೆ ಮುಂದೆ ಲಾಠಿಚಾರ್ಜ್; ಮನೆ ಹೊರಗೆ ಜನಸಾಗರ!

Salman Khan Police resorts to lathi charge as crowd awaiting

ಬೆಂಗಳೂರು: ಈದ್‌ ದಿನ ಬಾಲಿವುಡ್‌ ಸೂಪರ್‌ ಸ್ಟಾರ್‌ಗಳಾದ ಶಾರುಖ್ ಖಾನ್ (Sharukh Khan) ಮತ್ತು ಸಲ್ಮಾನ್ ಖಾನ್ (Salman Khan) ಫ್ಯಾನ್ಸ್‌ಗೆ ವಿಶ್‌ ಮಾಡಿದ್ದಾರೆ. ಅಭಿಮಾನಿಗಳು ಕೂಡ ಇಬ್ಬರು ಸ್ಟಾರ್‌ ನಟರ ಮನೆ ಹೊರಗೆ ಮೆಚ್ಚಿನ ನಟನನ್ನು ನೋಡಲು ಜಮಾಯಿಸಿದ್ದರು. ನೂರಾರು ಅಭಿಮಾನಿಗಳು ಇದ್ದ ಕಾರಣ ಅವರನ್ನು ಕಂಟ್ರೋಲ್‌ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಜತೆಗೆ ಅದರಿಂದ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದ್ದರಿಂದ ಪೊಲೀಸರು ಲಾಠಿಚಾರ್ಜ್ ಮಾಡಿದರು. ಸಂಜೆ ತನಕ ಕಾದಿದ್ದ ಅಭಿಮಾನಿಗಳು ಸಲ್ಮಾನ್​ ಖಾನ್​ ಅವರನ್ನು ನೋಡಿಕೊಂಡು ವಾಪಸ್​ ತೆರಳಿದ್ದಾರೆ.

ಬಿಳಿ ಶರ್ಟ್ ಮತ್ತು ಪ್ಯಾಂಟ್ ಧರಿಸಿರುವ ಸಲ್ಮಾನ್ ತಮ್ಮ ಅಭಿಮಾನಿಗಳಿಗೆ ಈದ್ ಮುಬಾರಕ್ ಶುಭಾಶಯಗಳನ್ನು ತಿಳಿಸಿದ್ದಾರೆ. ಇನ್ನು ಶಾರುಖ್‌ ಕೂಡ ಫ್ಯಾನ್ಸ್‌ಗೆ ಶುಭಾಶಯಗಳನ್ನು ಕೋರಿದರು. ಇನ್‌ಸ್ಟಾದಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಎಲ್ಲರಿಗೂ ಈದ್ ಮುಬಾರಕ್… ನನ್ನ ದಿನವನ್ನು ತುಂಬಾ ವಿಶೇಷವಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳು. ಅಲ್ಲಾ ನಮಗೆಲ್ಲರಿಗೂ ಪ್ರೀತಿ, ಸಂತೋಷ ಮತ್ತು ಸಮೃದ್ಧಿಯನ್ನು ನೀಡಲಿʼʼಎಂದು ಬರೆದುಕೊಂಡಿದ್ದಾರೆ.

ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಜಮಾಯಿಸಿದ ಜನರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿರುವುದು ಇದೇನು ಮೊದಲಲ್ಲ. 2022ರಲ್ಲಿ, ಸಲ್ಮಾನ್ ಅವರ ಜನ್ಮದಿನದಂದು ಮನೆಯ ಹೊರಗೆ ನೂರಾರು ಅಭಿಮಾನಿಗಳು ಇದ್ದರು. ಅವರನ್ನೂ ನಿಯಂತ್ರಿಸುವುದೇ ಪೊಲೀಸರಿಗೆ ಸವಾಲಾಗಿತ್ತು.

ಇದನ್ನೂ ಓದಿ: Sharukh Khan: ಶಾರುಖ್‌ ಖಾನ್ ಪತ್ನಿ ಗೌರಿ ಮೇಲೆ ವಂಚನೆ ಕೇಸ್‌

 ʻಈದ್‌ʼಗೆ ಗುಡ್‌ ನ್ಯೂಸ್‌ ಕೊಟ್ಟ ಸಲ್ಮಾನ್ ಖಾನ್!

ಸಲ್ಮಾನ್ ಖಾನ್ (Salman Khan) ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಸಿನಿಮಾಗೆ ‘ಸಿಕಂದರ್’ (Sikandar) ಎಂದು ಶೀರ್ಷಿಕೆ ನೀಡಲಾಗಿದೆ. ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಏಪ್ರಿಲ್ 11ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಶೀರ್ಷಿಕೆಯನ್ನು ಘೋಷಿಸಿದರು. ʻಬಡೆ ಮಿಯಾ ಚೋಟೆ ಮಿಯಾʼ ಮತ್ತು ʻಮೈದಾನ್ʼ ಸಿನಿಮಾಗಳನ್ನು ಈ ಈದ್‌ನಲ್ಲಿ ವೀಕ್ಷಿಸಿ, ಮುಂದಿನ ಈದ್‌ನಲ್ಲಿ, ʻಸಿಕಂದರ್‌ʼ ಸಿನಿಮಾ ನೋಡಿ. ನಿಮ್ಮೆಲ್ಲರಿಗೂ ಈದ್ ಮುಬಾರಕ್ ಶುಭಾಶಯಗಳುʼಎಂದು ಬರೆದುಕೊಂಡಿದ್ದಾರೆ.

ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

Exit mobile version