Ranbir Kapoor: ʻಸ್ತ್ರೀಲೋಲʼ, ʻಚೀಟರ್ʼ ಎನ್ನುವ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದೇನೆ ಎಂದ ರಣಬೀರ್ ಕಪೂರ್! - Vistara News

ಬಾಲಿವುಡ್

Ranbir Kapoor: ʻಸ್ತ್ರೀಲೋಲʼ, ʻಚೀಟರ್ʼ ಎನ್ನುವ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದೇನೆ ಎಂದ ರಣಬೀರ್ ಕಪೂರ್!

Ranbir Kapoor: ಬಾಲಿವುಡ್ ನಟರಾದ ದೀಪಿಕಾ ಪಡುಕೋಣೆ ಮತ್ತು ರಣಬೀರ್ ಕಪೂರ್ ಅವರು ಸುಮಾರು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. 2009 ರಲ್ಲಿ ಬೇರ್ಪಟ್ಟರು. ಇದೀಗ ರಣಬೀರ್ ಕಪೂರ್ ಆಲಿಯಾ ಭಟ್ ಅವರನ್ನು ಮದುವೆಯಾಗಿದ್ದರೆ. ದೀಪಿಕಾಅವರು ರಣವೀರ್ ಸಿಂಗ್ ಅವರನ್ನು ಮದುವೆಯಾಗಿದ್ದಾರೆ. ರಣಬೀರ್ ಕಪೂರ್ ಕತ್ರೀನಾ ಕೈಫ್ ಮತ್ತು ದೀಪಿಕಾ ಪಡುಕೋಣೆ ಜತೆ ಡೇಟಿಂಗ್‌ ಮಾಡಿದ್ದು ಗೊತ್ತೇ ಇದೆ. ಬಳಿಕ ಮದುವೆಯಾಗಿದ್ದು ಆಲಿಯಾ ಭಟ್‌ ಜತೆ. ಬ್ರೇಕಪ್‌ಆದ ಬಳಿಕ ರಣಬೀರ್‌ಗೆ ಸಿಕ್ಕಿದ್ದು ʻಸ್ತ್ರೀಲೋಲ ಚೀಟರ್ʼ, ಎನ್ನುವ ಹಣೆಪಟ್ಟಿ.

VISTARANEWS.COM


on

Ranbir Kapoor casanova opens up about being labelled a cheater
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್ ನಟ ರಣಬೀರ್ ಕಪೂರ್ ಇತ್ತೀಚೆಗೆ ಪಾಡ್‌ಕ್ಯಾಸ್ಟ್ ಸಂದರ್ಭದಲ್ಲಿ ತನಗೆ ಒಂದು ಕಾಲದಲ್ಲಿ ʻಸ್ತ್ರೀಲೋಲ, ಚೀಟರ್ʼ, ಎನ್ನುವ ಹಣೆಪಟ್ಟಿ ಇತ್ತು ಎಂದು ಹೇಳಿಕೊಂಡಿದ್ದಾರೆ. ದೀಪಿಕಾ ಪಡುಕೋಣೆಗೆ ರಣಬೀರ್ ಅವರು ಕೈಕೊಟ್ಟಾಗ ಅನೇಕರು ರಣಬೀರ್ ಅವರನ್ನು ಮೋಸಗಾರ ಎಂದರು. ಕತ್ರಿನಾ ಜೊತೆ ಸುತ್ತಾಡಿ ಬ್ರೇಕಪ್ ಆದಾಗಲೂ ಇದೇ ಮಾತು ಕೇಳಿ ಬಂತು.  ಈ ಬಗ್ಗೆ ರಣಬೀರ್‌ ಇದೀಗ ಮಾತನಾಡಿದ್ದಾರೆ.

ರಣಬೀರ್ ಕಪೂರ್ ಕತ್ರೀನಾ ಕೈಫ್ ಮತ್ತು ದೀಪಿಕಾ ಪಡುಕೋಣೆ ಜತೆ ಡೇಟಿಂಗ್‌ ಮಾಡಿದ್ದು ಗೊತ್ತೇ ಇದೆ. ಬಳಿಕ ಮದುವೆಯಾಗಿದ್ದು ಆಲಿಯಾ ಭಟ್‌ ಜತೆ. ಬ್ರೇಕಪ್‌ಆದ ಬಳಿಕ ರಣಬೀರ್‌ಗೆ ಸಿಕ್ಕಿದ್ದು ʻಸ್ತ್ರೀಲೋಲ ಚೀಟರ್ʼ, ಎನ್ನುವ ಹಣೆಪಟ್ಟಿ.

ರಣಬೀರ್ ಮಾತನಾಡಿ , “ನಾನು ಈ ಹಿಂದೆ ಇಬ್ಬರು ಯಶಸ್ವಿ ನಟಿಯರೊಂದಿಗೆ ಡೇಟ್ ಮಾಡಿದ್ದೆ. ಅದು ನನ್ನ ಐಡೆಂಟಿಟಿ ಆಗಿ ಹೋಯಿತು. ನನಗೆ ಚೀಟರ್, ಸ್ತ್ರೀಲೋಲ ಎನ್ನುವ ಟ್ಯಾಗ್ ಸಿಕ್ಕಿತು. ನನ್ನ ಜೀವನದ ಬಹುಪಾಲು ನಾನು ಮೋಸಗಾರ ಎಂಬ ಹಣೆಪಟ್ಟಿಯೊಂದಿಗೆ ಬದುಕಿದ್ದೇನೆ. ಈಗಲೂ ಹಾಗೆಯೇ ಬದುಕುತ್ತಿದ್ದೇನೆ’ ಎಂದಿದ್ದಾರೆ ಅವರು.

ಬಾಲಿವುಡ್ ನಟರಾದ ದೀಪಿಕಾ ಪಡುಕೋಣೆ ಮತ್ತು ರಣಬೀರ್ ಕಪೂರ್ ಅವರು ಸುಮಾರು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. 2009 ರಲ್ಲಿ ಬೇರ್ಪಟ್ಟರು. ಇದೀಗ ರಣಬೀರ್ ಕಪೂರ್ ಆಲಿಯಾ ಭಟ್ ಅವರನ್ನು ಮದುವೆಯಾಗಿದ್ದರೆ. ದೀಪಿಕಾಅವರು ರಣವೀರ್ ಸಿಂಗ್ ಅವರನ್ನು ಮದುವೆಯಾಗಿದ್ದಾರೆ.

ಇದನ್ನೂ ಓದಿ: Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ʼದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali). ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ( ‘Love and War’) ಮಾಡುತ್ತಿರುವುದು ಗೊತ್ತೇ ಇದೆ. 1964ರ ಈ ʻಸಂಗಮ್‌ʼ ( film Sangam) ಚಲನಚಿತ್ರದಲ್ಲಿ ರಾಜ್ ಕಪೂರ್, ವೈಜಯಂತಿಮಾಲಾ ಮತ್ತು ರಾಜೇಂದ್ರ ಕುಮಾರ್ ನಟಿಸಿದ್ದರು. ಈಗ ಈ ‘ಲವ್ ಆ್ಯಂಡ್ ವಾರ್’ ನಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್‌ ನಟಿಸಲಿದ್ದಾರೆ.

ಈ ಚಿತ್ರಕ್ಕಾಗಿ ರಣಬೀರ್ ಕಪೂರ್ ತಮ್ಮ ತಾತ ರಾಜ್ ಕಪೂರ್ ಅವರ ʻಸಂಗಮ್ʼ ಪಾತ್ರ ನಿಭಾಯಿಸಲಿದ್ದಾರಂತೆ. ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂಬ ವಿಷಯ ಧೃಢ ಪಟ್ಟಿಲ್ಲದಿದ್ದರೂ 2024ರ ದ್ವಿತೀಯಾರ್ಧದಲ್ಲಿ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿದೆ.

ಸದ್ಯ ರಣಬೀಕ್‌ ಕಪೂರ್‌ ನಟನೆ, ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ‘ರಾಮಾಯಣ’ ಸಿನಿಮಾ (Ramayana Set Pic leaked) ಸೆಟ್ಟೇರಿದೆ. ಮುಂಬೈ ಸ್ಟುಡಿಯೊವೊಂದರಲ್ಲಿ ಗುರುಕುಲದ ಸೆಟ್ ನಿರ್ಮಿಸಿ ʻರಾಮಾಯಣʼ ಸಿನಿಮಾ ಚಿತ್ರೀಕರಣ ಆರಂಭಿಸಿದ್ದಾರೆ. ರಣಬೀರ್ ಕಪೂರ್ ರಾಮನ ಪಾತ್ರ ನಿರ್ವಹಿಸಿದ್ದಾರೆ ಎಂದು ವರದಿಯಾಗಿದೆ.  ʻಅನಿಮಲ್ ಪಾರ್ಕ್’ ಸಿನಿಮಾ ಕೂಡ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

Most Beautiful woman: ಟಾಪ್ 10 ಪಟ್ಟಿಯಲ್ಲಿ ಹಾಲಿವುಡ್ ಸೇರಿದಂತೆ ಹಲವು ಸಿನಿಮಾ, ಮಾಡೆಲ್ ಕ್ಷೇತ್ರದ ಸುಂದರ ಮಹಿಳೆಯರು ಕಾಣಿಸಿಕೊಂಡಿದ್ದಾರೆ. ಅನ್ಯಾ ಟೇಲರ್-ಜಾಯ್ ವಿಶ್ವದ ಅತ್ಯಂತ (Anya Taylor-Joy) ಸುಂದರ ಮಹಿಳೆ ಎನ್ನಲಾಗಿದೆ. ವಿಶೇಷ ಈ ಟಾಪ್ 10 ಪಟ್ಟಿಯಲ್ಲಿ ಏಕೈಕ ಬಾಲಿವುಡ್ ನಟಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Most Beautiful woman Science reveals Anya Taylor-Joy
Koo

ಬೆಂಗಳೂರು: ವಿಶ್ವದ ಅತ್ಯಂತ ಸುಂದರ ಮಹಿಳೆ (Most Beautiful woman) ಪಟ್ಟಿಯನ್ನು ಗೋಲ್ಡನ್ ರೇಶಿಯೋ ಬಿಡುಗಡೆ ಮಾಡಿದೆ. ಅನ್ಯಾ ಟೇಲರ್-ಜಾಯ್ ವಿಶ್ವದ ಅತ್ಯಂತ (Anya Taylor-Joy) ಸುಂದರ ಮಹಿಳೆ ಎನ್ನಲಾಗಿದೆ. ವಿಶೇಷ ಈ ಟಾಪ್ 10 ಪಟ್ಟಿಯಲ್ಲಿ ಏಕೈಕ ಬಾಲಿವುಡ್ ನಟಿ ಕಾಣಿಸಿಕೊಂಡಿದ್ದಾರೆ. ಬಾಹ್ಯ ಸೌಂದರ್ಯ ಮಾತ್ರವಲ್ಲ, ಹಲವು ಮಾನದಂಡಗಳನ್ನಿಟ್ಟುಕೊಂಡು ಈ ಪಟ್ಟಿ ತಯಾರಿಸಲಾಗಿದೆ. 

ಟಾಪ್ 10 ಪಟ್ಟಿಯಲ್ಲಿ ಹಾಲಿವುಡ್ ಸೇರಿದಂತೆ ಹಲವು ಸಿನಿಮಾ, ಮಾಡೆಲ್ ಕ್ಷೇತ್ರದ ಸುಂದರ ಮಹಿಳೆಯರು ಕಾಣಿಸಿಕೊಂಡಿದ್ದಾರೆ. ಈ ಪೈಕಿ 9ನೇ ಸ್ಥಾನದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಸ್ಥಾನ ಪಡೆದಿದ್ದಾರೆ. ಗೋಲ್ಡನ್ ರೇಶಿಯೋ ಲಿಸ್ಟ್‌ನಲ್ಲಿ ಅಲಿಯಾ ಭಟ್ ಶೇಕಡಾ 91.14 ರೇಟಿಂಗ್ ಪಡೆಯುವ ಮೂಲಕ 9ನೇ ಸ್ಥಾನದಲ್ಲಿದ್ದಾರೆ.

ಲಂಡನ್‌ನಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಫೇಶಿಯಲ್ ಕಾಸ್ಮೆಟಿಕ್ ಮತ್ತು ಪ್ಲ್ಯಾಸ್ಟಿಕ್ ಸರ್ಜರಿ ನಡೆಸುತ್ತಿರುವ ಡಾ ಡಿ ಸಿಲ್ವಾ ವಿವರಿಸಿದ್ದು ಹೀಗೆ : “ಅನ್ಯಾ ಟೇಲರ್-ಜಾಯ್ ಅವರು ದೈಹಿಕ ಪರಿಪೂರ್ಣತೆಗಾಗಿ ಮುಖದ ಎಲ್ಲಾ ಅಂಶಗಳನ್ನು ಅಳೆದಾಗ ಸ್ಪಷ್ಟ ವಿಜೇತರಾದರು. ಅನ್ಯಾ ಟೇಲರ್ ಕಣ್ಣು ಮತ್ತು ಹುಬ್ಬುಗಳಿಂದ ಅಧಿಕ ಅಂಕ ಪಡೆದರು. ತುಟಿಯನ್ನು ಹೊರತುಪಡಿಸಿ ಎಂದರು.

ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!



“ಝೆಂಡಯಾ ಅವರು ಎರಡನೇ ಸ್ಥಾನದಲ್ಲಿದ್ದಾರೆ. 99.5% ಅಂಕದೊಂದಿಗೆ ತನ್ನ ತುಟಿಗಳಿಂದಾಗಿ ಅತ್ಯಧಿಕ ಸ್ಕೋರ್ ಗಳಿಸಿದರು. ಬೆಲ್ಲಾ ಹಡಿಡ್ ಮೂರನೆ ಸ್ಥಾನ ಪಡೆದಿದ್ದಾರೆ. ಗಲ್ಲ, ಹುಬ್ಬು..ಮುಖದ ವೈಶಿಷ್ಟ್ಯಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದರು. ಮಾರ್ಗೋಟ್ ರಾಬಿ ನಾಲ್ಕನೇ ಸ್ಥಾನದಲ್ಲಿದ್ದರು, ಹುಬ್ಬು ಪ್ರದೇಶವನ್ನು ಹೊರತುಪಡಿಸಿ ಎಲ್ಲಾ ವಿಭಾಗಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದರು.ಸೌಂದರ್ಯವನ್ನು ಅಲೆಯಲು ಗ್ರೀಕ್‌ನಲ್ಲಿ ಕಂಡುಕೊಂಡು ಪುರಾತನ ವಿಧಾನವೇ ಗೋಲ್ಡನ್ ರೇಶಿಯೋ. ಸೌಂದರ್ಯ, ಎತ್ತರ, ಮಾತು, ದೇಹ ಸೇರಿದಂತೆ ಹಲವು ಅಂಶಗಳನ್ನು ಪರಿಣಿಸಿ ಹೆಣ್ಣಿನ ಸೌಂದರ್ಯವನ್ನು ಅಲೆಯಲಾಗುತ್ತದೆ.



ಗೋಲ್ಡನ್ ರೇಶಿಯೊ ಸ್ಕೋರ್‌ಗಳ ಪ್ರಕಾರ ವಿಶ್ವದ 10 ಅತ್ಯಂತ ಸುಂದರ ಮಹಿಳೆಯರು

1. ಅನ್ಯಾ ಟೇಲರ್-ಜಾಯ್ – 94.66%

2. ಝೆಂಡಯಾ – 94.37%

3. ಬೆಲ್ಲಾ ಹಡಿದ್ – 94.35%

4. ಮಾರ್ಗಾಟ್ ರಾಬಿ – 93.43%

5. ಸಾಂಗ್ ಹೈ-ಕ್ಯೋ – 92.67%

6. ಬೆಯಾನ್ಸ್ – 92.4%

7. ಟೇಲರ್ ಸ್ವಿಫ್ಟ್ – 91.64%

8. ಜಾಂಗ್ ಜಿಯಿ – 91.51%

9. ಆಲಿಯಾ ಭಟ್ – 91.14%

10. ನಜಾನಿನ್ ಬೊನಿಯಾಡಿ – 90.89%

Continue Reading

ಬಾಲಿವುಡ್

Salman Khan: ಸಲ್ಮಾನ್ ಖಾನ್‌ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕು ಎಂದು ಶೂಟರ್‌ಗಳಿಗೆ ಸ್ಫೂರ್ತಿ ತುಂಬಿದ್ದ ಬಿಷ್ಣೋಯಿ!

Salman Khan : ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

VISTARANEWS.COM


on

Salman Khan House Gangster's 9-Minute Speech To Shooters Before Attack
Koo

ಬೆಂಗಳೂರು: ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ (Salman Khan) ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿರುವುದು ಗೊತ್ತೇ ಇದೆ. ಜೈಲಿನಲ್ಲಿರುವ ಅನ್ಮೋಲ್ ಬಿಷ್ಣೋಯ್ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ಮನೆಯ ಮೇಲೆ ಗುಂಡು ಹಾರಿಸಿದ ಶೂಟರ್‌ಗಳಿಗೆ ಒಂಬತ್ತು ನಿಮಿಷಗಳ ಕಾಲಕ ಸ್ಫೂರ್ತಿದಾಯಕ ಭಾಷಣವನ್ನು ನೀಡಿದ್ದ ಎಂದು ತಿಳಿದು ಬಂದಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಚಾರ್ಜ್‌ಶೀಟ್ ಪ್ರಕಾರ, ಅನ್ಮೋಲ್ ಬಿಷ್ಣೋಯ್ ಇಬ್ಬರು ಶೂಟರ್‌ಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್‌ಗೆ ನಟನ ನಿವಾಸದ ಮೇಲೆ ದಾಳಿ ಮಾಡಿದಾಗ ಇದೊಂದು “ಹಿಸ್ಟರಿ” ಎಂದು ಹೇಳಿದ್ದ.

ಗುಪ್ತಾ ಮತ್ತು ಪಾಲ್ ಎಂಬ ಇಬ್ಬರು ಬೈಕ್‌ನಲ್ಲಿ ಬಂದ ವ್ಯಕ್ತಿಗಳು. ಏಪ್ರಿಲ್ 14ರ ಬೆಳಗ್ಗೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಸಲ್ಮಾನ್‌ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು. ಆಡಿಯೊ ನೋಟ್‌ ಮೂಲಕ ಅನ್ಮೋಲ್ ಬಿಷ್ಣೋಯ್ ಇಬ್ಬರೂ ಶೂಟರ್‌ಗಳಿಗೆ ತಮ್ಮ ಜೀವನದ “ಉತ್ತಮ ಕೆಲಸ” ಮಾಡಲಿದ್ದೇವೆ ಎಂದು ಹೇಳಿದರು.

ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ 1,735 ಪುಟಗಳ ಚಾರ್ಜ್‌ಶೀಟ್‌ನ ಪ್ರಕಾರ ಅನ್ಮೋಲ್ ಬಿಷ್ಣೋಯ್ ಇಬ್ಬರೂ ಶೂಟರ್‌ಗಳಿಗೆ ಹೇಳಿದ್ದು ಹೀಗೆ. “ಈ ಕೆಲಸವನ್ನು ಚೆನ್ನಾಗಿ ಮಾಡಿ. ಕೆಲಸ ಮುಗಿದ ನಂತರ, ನೀವು ಇತಿಹಾಸ ಪುಟದಲ್ಲಿ ಇರುತ್ತೀರಿʼʼ ಎಂದು ಶೂಟರ್‌ಗಳಿಗೆ ಹೇಳಿದರು. ಮಾತ್ರವಲ್ಲ ಅನ್ಮೋಲ್ ಬಿಷ್ಣೋಯ್, ಗುಪ್ತಾ ಮತ್ತು ಪಾಲ್ ಅವರಿಗೆ ಇದೊಂದು ಧಾರ್ಮಿಕ ಕೆಲಸ ಎಂದು ಪ್ರೋತ್ಸಾಹಿಸಿದ್ದಾರೆ. ಜತೆಗೆ ಈ ಕೆಲಸ ಮಾಡುವಾಗ ಸ್ವಲ್ಪವೂ ಭಯಪಡಬೇಡಿ, ಈ ಕೆಲಸ ಮಾಡುವುದರಿಂದ ಸಮಾಜದಲ್ಲಿ ಬದಲಾವಣೆ ತರಬೇಕು. ಎಂದೂ ಹೇಳಿದ್ದಾನೆ. ನಾವು ಯಾವುದೇ ಕೆಲಸ ಮಾಡಲು ಹೋದಾಗ, ನಾವು ಬಂದೂಕಿನ ಮ್ಯಾಗಜಿನ್ ಅನ್ನು ಖಾಲಿ ಮಾಡುವ ಶೈಲಿಯನ್ನು ಹೊಂದಿರಬೇಕು. ನೀವು ಸಲ್ಮಾನ್ ಖಾನ್ ಅವರ ಮನೆಯಿಂದ ಹೊರಗೆ ಬಂದಾಗ ನೀವು ಮ್ಯಾಗಜಿನ್ ಅನ್ನು ಖಾಲಿ ಮಾಡಿ. ಗುಂಡು ಹಾರಿಸುವುದು ಸಲ್ಮಾನ್ ಖಾನ್‌ಗೆ ಹೆದರಿಕೆ ತರಬೇಕು. ಸಲ್ಮಾನ್ ಖಾನ್‌ಗೆ ಹೆದರುವ ರೀತಿಯಲ್ಲಿ ಗುಂಡಿನ ದಾಳಿ ಆಗಬೇಕುʼʼಎಂದು ಅನ್ಮೋಲ್ ಸಂದೇಶ ನೀಡಿದ್ದ.

ಇದನ್ನೂ ಓದಿ: Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ಬಿಷ್ಣೋಯ್, ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರಿಗೆ ಹೆಲ್ಮೆಟ್ ಧರಿಸದೇ ಇರಬೇಕು ಮತ್ತು ನಿರ್ಭೀತರಾಗಿ ಕಾಣಿಸಿಕೊಳ್ಳಲು ಸಿಗರೇಟ್ ಸೇದಲು ಬಾರದೂ ಎಂದು ಹೇಳಿದ್ದನಂತೆ. ಗುಂಡಿನ ದಾಳಿಗೂ ಮುನ್ನ ಅನ್ಮೋಲ್ ಬಿಷ್ಣೋಯ್ ಗುಪ್ತಾ ಮತ್ತು ಪಾಲ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ,

ಶೂಟರ್‌ಗಳು ಮತ್ತು ಇತರ ಮೂವರು, ಸೋನುಕುಮಾರ್ ಬಿಷ್ಣೋಯ್, ಮೊಹಮ್ಮದ್ ರಫೀಕ್ ಚೌಧರಿ ಮತ್ತು ಹರ್ಪಾಲ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಮತ್ತು ರಾವತರನ್ ಬಿಷ್ಣೋಯ್ ಆರೋಪಪಟ್ಟಿಯಲ್ಲಿ ಬೇಕಾಗಿರುವ ಆರೋಪಿಗಳಾಗಿದ್ದಾರೆ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

Continue Reading

Latest

Sara Ali Khan: ವಿಮಾನದಲ್ಲಿ ಸಾರಾ ಅಲಿ ಖಾನ್‌ ಮೇಲೆ ಜ್ಯೂಸ್‌ ಚೆಲ್ಲಿದ ಗಗನಸಖಿ! ಮುಂದೇನಾಯ್ತು? ವಿಡಿಯೊ ನೋಡಿ

Sara Ali Khan: ನಟಿ ಸಾರಾ ಅಲಿ ಖಾನ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ, ಗಗನ ಸಖಿಯೊಬ್ಬರು ಸಾರಾ ಅಲಿ ಖಾನ್ ಉಡುಪಿನ ಮೇಲೆ ಆಕಸ್ಮಾತ್ ಆಗಿ ಜ್ಯೂಸ್ ಬೀಳಿಸಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗಗಮಸಖಿ ಜ್ಯೂಸ್‌ಗಳನ್ನು ಪ್ರಯಾಣಿಕರಿಗೆ ನೀಡುತ್ತಿರುವಾಗ ಆಕಸ್ಮಿಕವಾಗಿ ನಟಿಯ ಡ್ರೆಸ್‌ ಮೇಲೆ ಜ್ಯೂಸ್ ಅನ್ನು ಚೆಲ್ಲಿದ್ದಾಳೆ. ಇದರಿಂದ ನಟಿ ಅಸಮಾಧಾನಗೊಂಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

VISTARANEWS.COM


on

Sara Ali Khan
Koo


ಮುಂಬೈ: ನಟಿ ಸಾರಾ ಅಲಿ ಖಾನ್ (Sara Ali Khan) ಅವರು ತಮ್ಮ ನಟನೆಯ ಮೂಲಕ ಬಾಲಿವುಡ್‌ನಲ್ಲಿ ಛಾಪು ಮೂಡಿಸಿದ್ದಾರೆ. ಇತ್ತೀಚಿಗೆ ಅವರು ವಿಮಾನದಲ್ಲಿ ಪ್ರಯಾಣಿಸುವಾಗ ಅನಿರೀಕ್ಷಿತ ಘಟನೆಯೊಂದು ನಡೆದಿತ್ತು. ಗಗನ ಸಖಿಯೊಬ್ಬರು ಸಾರಾ ಅಲಿ ಖಾನ್‌ ಉಡುಪಿನ ಮೇಲೆ ಆಕಸ್ಮಾತ್‌ ಆಗಿ ಜ್ಯೂಸ್‌ ಬೀಳಿಸಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

Sara Ali Khan
Sara Ali Khan

ವೈರಲ್ ವಿಡಿಯೊದಲ್ಲಿ ನಟಿ ಸಾರಾ ಅಲಿ ಖಾನ್ ಸುರುಳಿ ಕೂದಲು ಮತ್ತು ದೊಡ್ಡ ಹೂಪ್ ಕಿವಿಯೋಲೆಗಳನ್ನು ಧರಿಸಿ ಬಿಳಿ ಮತ್ತು ಗುಲಾಬಿ ಬಣ್ಣದ ಡ್ರೆಸ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಆ ವೇಳೆ ಗಗಮಸಖಿ ಜ್ಯೂಸ್‌ಗಳನ್ನು ಪ್ರಯಾಣಿಕರಿಗೆ ನೀಡುತ್ತಿರುವಾಗ ಆಕಸ್ಮಿಕವಾಗಿ ನಟಿಯ ಡ್ರೆಸ್‍ನ ಮೇಲೆ ಜ್ಯೂಸ್ ಅನ್ನು ಚೆಲ್ಲಿದ್ದಾಳೆ. ಇದರಿಂದ ನಟಿ ಅಸಮಾಧಾನಗೊಂಡಿದ್ದಾರೆ. ಆಗ ನಟಿ ಗಗನಸಖಿಯನ್ನು ಸಿಟ್ಟಿನಿಂದ ದುರುಗುಟ್ಟಿ ನೋಡುತ್ತ ಎದ್ದು ವಾಶ್ ರೂಮ್‌ಗೆ ಹೋಗಿ ಮರಳಿ ಬರುತ್ತಿರುವಾಗ ನಟಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದು ಸಖತ್ ವೈರಲ್ ಆಗಿದೆ.

ವೈರಲ್ ವಿಡಿಯೊಗೆ ಹಲವರು ಕಾಮೆಂಟ್‍ಗಳ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೆಲವು ಅಭಿಮಾನಿಗಳು ಈ ಘಟನೆಯು ಪ್ರಚಾರಕ್ಕಾಗಿ ಮಾಡಿರಬಹುದು ಅಥವಾ ಮುಂಬರುವ ಯೋಜನೆಯ ದೃಶ್ಯವಾಗಿರಬಹುದು ಎಂದು ಆಶ್ಚರ್ಯ ಪಡುತ್ತಿದ್ದಾರೆ. ಆದಾಗ್ಯೂ, ಘಟನೆಯ ಸ್ವರೂಪದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವನ್ನು ಮಾಡಲಾಗಿಲ್ಲ.

Sara Ali Khan
Sara Ali Khan

ವೃತ್ತಿಪರ ರಂಗದಲ್ಲಿ ಸಾರಾ ಅಲಿ ಖಾನ್ ನಟನೆಯ ಹಲವು ಆಫರ್‌ಗಳನ್ನು ಹೊಂದಿದ್ದಾರೆ. ಧರ್ಮ ಪ್ರೊಡಕ್ಷನ್ಸ್ ಮತ್ತು ಸಿಖ್ಯಾ ಎಂಟರ್‌ಟೈನ್‍ಮೆಂಟ್ ನಿರ್ಮಿಸುತ್ತಿರುವ ಆಕ್ಷನ್-ಕಾಮಿಡಿ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ ಎದುರು ಅವರು ಮೊದಲ ಬಾರಿಗೆ ನಟಿಸಲಿದ್ದಾರೆ.

ಇದನ್ನೂ ಓದಿ: ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಹಾಸಿಗೆ ಹಿಡಿದಿದ್ದಾರೆಯೇ? ಭಾರೀ ವೈರಲಾಗ್ತಿದೆ ಈ ಫೋಟೊ

ಹಾಗೇ ನಟಿ ಸಾರಾ ಅಲಿ ಖಾನ್ ಅವರು ಅನುರಾಗ್ ಬಸು ನಿರ್ದೇಶನದ “ಮೆಟ್ರೋ ಇನ್ ಡಿನೋ” ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆದಿತ್ಯ ರಾಯ್ ಕಪೂರ್, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್ ಮತ್ತು ನೀನಾ ಗುಪ್ತಾ ಸೇರಿದಂತೆ ಅನೇಕರು ನಟಿಸಲಿದ್ದಾರೆ. ಸಿನಿಮಾರಂಗದಲ್ಲಿ ಸಾರಾ ಅವರ ಅಭಿನಯವನ್ನು ನೋಡಲು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

Continue Reading

ದೇಶ

IMDb 2024 top movies: ಈ ವರ್ಷದ ಅತ್ಯಂತ ನಿರೀಕ್ಷಿತ ಮತ್ತು ಜನಪ್ರಿಯ ಸಿನಿಮಾಗಳ ಪಟ್ಟಿ ಇಲ್ಲಿದೆ

ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಸೆಲೆಬ್ರಿಟಿಗಳ ಕುರಿತು ಮಾಹಿತಿಗಾಗಿ ಅತ್ಯಂತ ಜನಪ್ರಿಯ ಮೂಲಗಳಲ್ಲಿ ಒಂದಾಗಿರುವ ಇಂಟರ್ನೆಟ್ ಮೂವಿ ಡೇಟಾಬೇಸ್ 2024ರ (IMDb 2024) ಟಾಪ್ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ 2024ರಲ್ಲಿ ಈವರೆಗಿನ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ಹೆಚ್ಚು ನಿರೀಕ್ಷಿತ ಚಲನಚಿತ್ರಗಳ ಮಾಹಿತಿಯನ್ನು ನೀಡಲಾಗಿದೆ. ನೀವು ಇವುಗಳಲ್ಲಿ ಯಾವ ಚಿತ್ರ ನೋಡಿದ್ದೀರಿ? ಈ ಪಟ್ಟಿ ನೋಡಿ.

VISTARANEWS.COM


on

By

IMDb 2024
Koo

ಬಾಕ್ಸ್ ಆಫೀಸ್‌ನಲ್ಲಿ (box office collection) ಅನಿಶ್ಚಿತತೆಯ ಹೊರತಾಗಿಯೂ 2024ರಲ್ಲಿ ಹಲವು ಭಾರತೀಯ ಸಿನಿಮಾಗಳು (Indian film) ದಾಖಲೆಯನ್ನು ಬರೆದಿತ್ತು. ಕಲ್ಕಿ 2898 ಎಡಿ (kalki 2898 AD) ಪ್ರಸ್ತುತ 2024ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರವಾಗಿದೆ. ಪುಷ್ಪ: ದಿ ರೂಲ್ ಭಾಗ 2 (pushpa: the rule part 2) ಡಿಸೆಂಬರ್ 6ರಂದು ಬಿಡುಗಡೆಯಾಗಲಿದೆ. ಇಂಟರ್ನೆಟ್ ಮೂವಿ ಡೇಟಾಬೇಸ್ (IMDb 2024) ಪ್ರಕಾರ ಇದು ಈ ವರ್ಷದ ಬಹು ನಿರೀಕ್ಷಿತ ಭಾರತೀಯ ಚಲನಚಿತ್ರವಾಗಿದೆ.

ಇಂಟರ್ನೆಟ್ ಮೂವಿ ಡೇಟಾಬೇಸ್ 2024ರ ಟಾಪ್ ಭಾರತೀಯ ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂಟರ್ನೆಟ್ ಮೂವಿ ಡೇಟಾಬೇಸ್ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಸೆಲೆಬ್ರಿಟಿಗಳ ಕುರಿತು ಮಾಹಿತಿಗಾಗಿ ಅತ್ಯಂತ ಜನಪ್ರಿಯ ಮೂಲಗಳಲ್ಲಿ ಒಂದಾಗಿದೆ. 2024ರಲ್ಲಿ ಈವರೆಗಿನ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಮತ್ತು ಹೆಚ್ಚು ನಿರೀಕ್ಷಿತ ಚಲನಚಿತ್ರಗಳ ಮಾಹಿತಿಯನ್ನು ಐಎಂಡಿಬಿ ಪ್ರಕಟಿಸಿದೆ.

ಕಲ್ಕಿ 2898 ಎಡಿ ಚಿತ್ರದ ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, ನಮ್ಮ ಇಡೀ ತಂಡವು ಐಎಂಡಿಬಿ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಬಹಳ ಸಂತೋಷ ಮತ್ತು ಗೌರವವಾಗಿದೆ. ಇದು ಪ್ರಪಂಚದಾದ್ಯಂತದ ನಮ್ಮ ಪ್ರೇಕ್ಷಕರ ಪ್ರೀತಿಯನ್ನು ನೇರವಾಗಿ ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.


ಐಎಂಡಿಬಿ ಪಟ್ಟಿಯ 2024ರ ನಂ. 2 ಶ್ರೇಯಾಂಕದಲ್ಲಿರುವ ʼಮಂಜುಮ್ಮೆಲ್ ಬಾಯ್ಸ್‌ʼ ಚಿತ್ರದ ನಿರ್ದೇಶಕ ಚಿದಂಬರಂ ಪ್ರತಿಕ್ರಿಯಿಸಿ ಈ ಗೌರವಕ್ಕಾಗಿ ನಾನು ಐಎಂಡಿಬಿಗೆ ಕೃತಜ್ಞನಾಗಿದ್ದೇನೆ. ಅವರ ಪ್ರೀತಿ ಮತ್ತು ಬೆಂಬಲಕ್ಕಾಗಿ ಪ್ರಪಂಚದಾದ್ಯಂತದ ವೀಕ್ಷಕರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಈ ಚಿತ್ರದ ಮ್ಯಾಜಿಕ್‌ಗೆ ಜೀವ ತುಂಬಿದ ಇಡೀ ಚಿತ್ರತಂಡದ ಶ್ರಮ ಮತ್ತು ಸಮರ್ಪಣೆಗೆ ಈ ಸಾಧನೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಐಎಂಡಿಬಿ 2024 ಪಟ್ಟಿಯಲ್ಲಿ ಭಾರತೀಯ ಸಿನಿಮಾ

ಭಾರತೀಯ ಸಿನಿಮಾವು ಭಾರತದಲ್ಲಿ ಮತ್ತು ಜಾಗತಿಕವಾಗಿ ಅತೀ ಹೆಚ್ಚು ವೀಕ್ಷಕರನ್ನು ಸೆಳೆಯುತ್ತಿದೆ ಎಂದು ಐಎಂಡಿಬಿ ಇಂಡಿಯಾದ ಮುಖ್ಯಸ್ಥೆ ಯಾಮಿನಿ ಪಟೋಡಿಯಾ ಹೇಳಿದ್ದಾರೆ.
2024ರಲ್ಲಿ ಇಲ್ಲಿಯವರೆಗೆ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳ ಪಟ್ಟಿಯಲ್ಲಿ ಐದು ಹಿಂದಿ, ಮೂರು ಮಲಯಾಳಂ ಮತ್ತು ಎರಡು ತೆಲುಗು ಚಲನಚಿತ್ರಗಳು ಪ್ರೇಕ್ಷಕರನ್ನು ಕಾಯುವಂತೆ ಮಾಡಿದೆ. ಇದರಲ್ಲಿ ಪುಷ್ಪಾ: ದಿ ರೂಲ್ – ಭಾಗ 2 ಮೊದಲ ಸ್ಥಾನದಲ್ಲಿ ಇದೆ ಎಂದು ಅವರು ತಿಳಿಸಿದ್ದಾರೆ.


ಅತ್ಯಂತ ಜನಪ್ರಿಯ ಚಿತ್ರಗಳು

ಕಲ್ಕಿ 2898 ಎಡಿ, ಮಂಜುಮ್ಮೆಲ್ ಬಾಯ್ಸ್, ಫೈಟರ್, ಹನುಮಾನ್, ಶೈತಾನ್, ಲಾಪತಾ ಲೇಡಿಸ್, ಆರ್ಟಿಕಲ್ 370, ಪ್ರೇಮಾಲು, ಆವೇಶಮ್, ಮುಂಜ್ಯ ಕ್ರಮವಾಗಿ 1ರಿಂದ 10ರೊಳಗಿನ ಸ್ಥಾನದಲ್ಲಿದೆ.

ಶ್ರೇಯಾಂಕ

2024ರ ಜನವರಿ 1ರಿಂದ ಜುಲೈ 10ರ ನಡುವೆ ಭಾರತದಲ್ಲಿ ಬಿಡುಗಡೆಯಾದ ಎಲ್ಲಾ ಚಲನಚಿತ್ರಗಳಲ್ಲಿ ಐಎಂಡಿಬಿ ಬಳಕೆದಾರರ ಸರಾಸರಿ ರೇಟಿಂಗ್ 6 ಅಥವಾ ಕನಿಷ್ಠ 10,000 ಮತಗಳೊಂದಿಗೆ ಈ ಚಿತ್ರಗಳು ಹೆಚ್ಚು ಜನಪ್ರಿಯವಾಗಿವೆ.


ಹೆಚ್ಚು ನಿರೀಕ್ಷಿತ ಚಿತ್ರಗಳು

ಪುಷ್ಪಾ: ದಿ ರೂಲ್- ಭಾಗ 2, ದೇವರ- ಭಾಗ 1, ವೆಲ್ಕಮ್ ಟು ಜಂಗಲ್, ಡಿ ಗ್ರೇಟೆಸ್ಟ್ ಆಫ್ ಆಲ್ ಟೈಮ್, ಕಂಗುವ, ಸಿಂಗಂ ಅಗೈನ್, ಭೂಲ್ ಭುಲೈಯಾ 3, ತಂಗಲಾನ್, ಔರಾನ್ ಮೇ ಕಹಾನ್ ದಮ್ ಥಾ, ಸ್ತ್ರೀ 2 ಕ್ರಮವಾಗಿ 1ರಿಂದ 10ರೊಳಗಿನ ಸ್ಥಾನದಲ್ಲಿದೆ.


ಟಾಪ್ ಸ್ಥಾನದಲ್ಲಿ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಜಯ್ ದೇವಗನ್

ದೀಪಿಕಾ ಪಡುಕೋಣೆ, ದಿಶಾ ಪಟಾನಿ ಮತ್ತು ಅಜಯ್ ದೇವಗನ್ ಅವರ ಚಿತ್ರಗಳು ಎರಡೂ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ದೀಪಿಕಾ ಮತ್ತು ದಿಶಾ ಕಲ್ಕಿ 2898 ಎಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ ಮತ್ತು ಫೈಟರ್ ಚಿತ್ರದಲ್ಲೂ ದೀಪಿಕಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಪೋಯಸ್ ಗಾರ್ಡನ್‌ನಲ್ಲಿ ಮನೆ ಖರೀದಿಸಬಾರದಾ? ನಾನೇನು ಬೀದಿಯಲ್ಲಿ ಇರಬೇಕಾ ಎಂದ ನಟ ಧನುಷ್‌!

ಶೈತಾನ್ ಚಿತ್ರದಲ್ಲಿ ಅಜಯ್ ನಟಿಸಿದ್ದು, ದೀಪಿಕಾ ಮತ್ತು ಅಜಯ್ ಮೊದಲ ಬಾರಿಗೆ ಸಿಂಗಮ್ ಅಗೈನ್ ನಲ್ಲಿ ಕಾಣಿಸಿಕೊಂಡಿದ್ದಾರೆ.


ಇದು ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆ. ದಿಶಾ ಅವರ ಮುಂಬರುವ ಬಿಡುಗಡೆಗಳಲ್ಲಿ ವೆಲ್ಕಮ್ ಟು ದಿ ಜಂಗಲ್ ಮತ್ತು ಕಂಗುವ ಸೇರಿವೆ.

Continue Reading
Advertisement
cm siddaramaiah pressmeet
ಪ್ರಮುಖ ಸುದ್ದಿ8 mins ago

MUDA Scam: ಬಿಜೆಪಿಯವರದು ಮನೆಮುರುಕ ರಾಜಕೀಯ; ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Shekhar Home Kay Kay Menon Shares First Look
ಒಟಿಟಿ10 mins ago

Shekhar Home:  ಪತ್ತೇದಾರಿ ಕಾದಂಬರಿ ಆಧಾರಿತ ಸಿರೀಸ್‌ನಲ್ಲಿ ಅಬ್ಬರಿಸಲಿದ್ದಾರೆ ಕೇ ಕೇ ಮೆನನ್; ಫಸ್ಟ್‌ ಲುಕ್‌ ಔಟ್!‌

ಟಾಲಿವುಡ್29 mins ago

Amala Paul: ಸಮಸ್ಯೆ ಇರೋದು ಬಟ್ಟೆಯಲಲ್ಲ, ಕ್ಯಾಮೆರಾಮೆನ್‌ಗಳಲ್ಲಿ ಎಂದು ಟ್ರೋಲಿಗರ ಬಾಯಿ ಮುಚ್ಚಿಸಿದ ಅಮಲಾ ಪೌಲ್!

ದೇಶ40 mins ago

Madras High Court: ವೇಶ್ಯಾವಾಟಿಕೆ ಅಡ್ಡಕ್ಕೆ ರಕ್ಷಣೆ ಕೋರಿ ವಕೀಲನಿಂದ ಅರ್ಜಿ; ಹೈಕೋರ್ಟ್‌ ಫುಲ್‌ ಗರಂ

Paris Olympics India schedule
ಕ್ರೀಡೆ42 mins ago

Paris Olympics India schedule: ಒಲಿಂಪಿಕ್ಸ್​ನಲ್ಲಿ ನಾಳೆ ಭಾರತ ಯಾವೆಲ್ಲ ವಿಭಾಗದಲ್ಲಿ ಸ್ಪರ್ಧಿಸಲಿದೆ?; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Drugs Seized
ಬೆಂಗಳೂರು58 mins ago

Drugs Seized : ಓಲಾ, ಊಬರ್ ಡ್ರೈವಿಂಗ್ ಜತೆಗೆ ಡ್ರಗ್ಸ್‌ ಮಾರಾಟ; 6 ಕೋಟಿ ರೂ.ಮೌಲ್ಯದ ಡ್ರಗ್ಸ್‌ ಸೀಜ್‌

Most Beautiful woman Science reveals Anya Taylor-Joy
ಬಾಲಿವುಡ್1 hour ago

Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

Kargil Vijay Diwas 2024
ದೇಶ1 hour ago

Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Murder in PG Case
ಪ್ರಮುಖ ಸುದ್ದಿ1 hour ago

Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Paris Olympics 2024 Boxing Draw
ಕ್ರೀಡೆ2 hours ago

Paris Olympics Boxing Draw: ಒಲಿಂಪಿಕ್ಸ್​ ಬಾಕ್ಸಿಂಗ್​ ಡ್ರಾ ಪ್ರಕಟ; ಮೊದಲ ಸುತ್ತಿನಲ್ಲೇ ಭಾರತೀಯ ಬಾಕ್ಸರ್​ಗಳಿಗೆ ಕಠಿಣ ಸ್ಪರ್ಧಿಗಳ ಸವಾಲು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್23 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ24 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌