Ranbir Kapoor: `ರಾಮಾಯಣ' ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್! - Vistara News

ಬಾಲಿವುಡ್

Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

Ranbir Kapoor: ರಾಮನ ಪಾತ್ರದಲ್ಲಿ ನಟಿಸಲಿರುವ ರಣಬೀರ್ ಕಪೂರ್ ಇನ್ನೂ ಚಿತ್ರತಂಡವನ್ನು ಸೇರಿಲ್ಲ. ಮುಂದಿನ ಕೆಲವು ದಿನಗಳಲ್ಲಿ ರಣಬೀರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಚಿತ್ರದಲ್ಲಿ ಸೀತಾ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ. ಏಪ್ರಿಲ್ 15ರ ವೇಳೆಗೆ ರಣ್‌ಬೀರ್ ಕಪೂರ್ ಕೂಡ ರಾಮಾಯಣ ಚಿತ್ರೀಕರಣದಲ್ಲಿ ಭಾಗಿ ಆಗುವ ಸಾಧ್ಯತೆಯಿದೆ. ರಾಮನವಮಿ ದಿನ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ. ಪಸ್ತುತ ರಣಬೀರ್​ ಕಪೂರ್​ ಅವರು ತಮ್ಮ ಟ್ರೇನರ್​ ಜತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ನಟ ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೊವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

VISTARANEWS.COM


on

Ranbir Kapoor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ನಟ ಸಿನಿಮಾಗಾಗಿ ತರಬೇತಿ ಪಡೆಯುತ್ತಿರುವ ವಿಡಿಯೊ ವೈರಲ್‌ ಆಗಿದೆ. ‘ದಂಗಲ್​’ ಸಿನಿಮಾ ಮೂಲಕ ಗಮನ ಸೆಳೆದ ನಿತೇಶ್​ ತಿವಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರಣಬೀರ್​ ಕಪೂರ್​ ಅವರು ತಮ್ಮ ಟ್ರೇನರ್​ ಜತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ನಟ ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೊವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

ರಣಬೀರ್‌ ಅವರ ತರಬೇತುದಾರರು ಪೋಸ್ಟ್ ಮಾಡಿದ ವಿಡಿಯೊ ಇದೀಗ ವೈರಲ್‌ ಆಗಿದೆ. ರಣಬೀರ್ ಕಪೂರ್ ತಮ್ಮ ಪಾತ್ರಕ್ಕಾಗಿ ಕಠಿಣವಾಗಿ ವರ್ಕೌಟ್‌ ಮಾಡುತ್ತಿರುವುದುನ್ನು ಕಂಡು ಫ್ಯಾನ್ಸ್‌ ಫಿದಾ ಆಗಿದ್ದಾರೆ. ರನ್ನಿಂಗ್‌, ಈಜುವುದು ಹೀಗೆ ಅನೇಕ ತಾಲೀಮು ನಡೆಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ರಾವಣನಾಗಿ ಕಾಣಿಸಿಕೊಳ್ಳುತ್ತಾರೆ ಎಂಬ ಗಾಸಿಪ್ ಹಬ್ಬಿದೆ. ಸಾಯಿ ಪಲ್ಲವಿ ಅವರಿಗೆ ಸೀತೆಯ ಪಾತ್ರವನ್ನು ನೀಡಲಾಗುತ್ತಿದೆ ಎಂದು ಕೂಡ ಅನೇಕ ಮಾಧ್ಯಮಗಳು ಸುದ್ದಿ ಪ್ರಕಟ ಮಾಡಿವೆ.

ಇದನ್ನೂ ಓದಿ: Ranbir Kapoor: ಐಷಾರಾಮಿ ಕಾರು ಖರೀದಿಸಿದ ರಣಬೀರ್ ಕಪೂರ್; ಇವರ ಬಳಿ ಎಂಥೆಂಥ ಕಾರುಗಳಿವೆ ಗೊತ್ತೆ?

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿದೆ. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿದೆ.

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

ಏಪ್ರಿಲ್ 15ರ ವೇಳೆಗೆ ರಣ್‌ಬೀರ್ ಕಪೂರ್ ಕೂಡ ರಾಮಾಯಣ ಚಿತ್ರೀಕರಣದಲ್ಲಿ ಭಾಗಿ ಆಗುವ ಸಾಧ್ಯತೆಯಿದೆ. ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

ರಾಮನವಮಿ ದಿನ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ. ಸದ್ಯ ಯಶ್ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ಸದ್ಯ ಬೇರೆ ಕಲಾವಿದರ ದೃಶ್ಯಗಳನ್ನು ಸೆರೆಹಿಡಿಯಲಿದ್ದು ನಿಧಾನವಾಗಿ ಯಶ್ ತಂಡ ಸೇರಿಕೊಳ್ಳುತ್ತಾರೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಶ್ ಕೂಡ ಇನ್ನು ಮಾತನಾಡಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Actor Dharmendra: ಇತ್ತೀಚೆಗೆ ಧರ್ಮೇಂದ್ರ ಅವರು ತಂದೆ ಮತ್ತು ಹಿರಿಯ ಮಗ ಸನ್ನಿ ಡಿಯೋಲ್ (Sunny Deol) ಜತೆಗೆ ಪೋಸ್‌ ಕೊಟ್ಟ ಹಳೆಯ ಫೋಟೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಧರ್ಮೇಂದ್ರ ತಂದೆ ಕೇವಲ್ ಕ್ರಿಶನ್ ವಾಕಿಂಗ್ ಸ್ಟಿಕ್ ಹಿಡಿದು ಕುಳಿತುಕೊಂಡಿದ್ದಾರೆ. ಧರ್ಮೇಂದ್ರ ಹಾಗೂ ಅಜ್ಜನ ಪಕ್ಕ ಮೊಮ್ಮಗ ಸನ್ನಿ ಡಿಯೋಲ್‌ ಅಕ್ಕ ಪಕ್ಕ ಇದ್ದಾರೆ. ಧರ್ಮೇಂದ್ರ ಪೀಚ್ ಟಿ-ಶರ್ಟ್ ಧರಿಸಿದ್ದರೆ, ಸನ್ನಿ ಬಿಳಿ ಶರ್ಟ್‌ ಧರಿಸಿದ್ದರು.

VISTARANEWS.COM


on

Actor Dharmendra not spending enough time with parents
Koo

ಬೆಂಗಳೂರು: ಹಿರಿಯ ನಟ ಧರ್ಮೇಂದ್ರ (Actor Dharmendra) ಅವರು ಆಗಾಗ ತಮ್ಮ ಕುಟುಂಬದ ಜತೆ ಇರುವ ಸಹೋದ್ಯೋಗಿಗಳ ಜತೆ ಸಮಯ ಕಳೆದಿರುವ ಹಳೆಯ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ಧರ್ಮೇಂದ್ರ ಅವರು ತಂದೆ ಮತ್ತು ಹಿರಿಯ ಮಗ ಸನ್ನಿ ಡಿಯೋಲ್ (Sunny Deol) ಜತೆಗೆ ಪೋಸ್‌ ಕೊಟ್ಟ ಹಳೆಯ ಫೋಟೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ದಿವಂಗತ ತಂದೆ ಕೇವಲ್ ಕ್ರಿಶನ್ (Kewal Krishan) ಅವರ ಅಪರೂಪದ ಚಿತ್ರ ಹಂಚಿಕೊಂಡು ʻನನ್ನ ಪೋಷಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕೆಂದು ಬಯಸುತ್ತೇನೆʼ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಹೀಗಾಗಿ ಧರ್ಮೇಂದ್ರ ಅವರು ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ನಟ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಧರ್ಮೇಂದ್ರ ತಂದೆ ಕೇವಲ್ ಕ್ರಿಶನ್ ವಾಕಿಂಗ್ ಸ್ಟಿಕ್ ಹಿಡಿದು ಕುಳಿತುಕೊಂಡಿದ್ದಾರೆ. ಧರ್ಮೇಂದ್ರ ಹಾಗೂ ಅಜ್ಜನ ಪಕ್ಕ ಮೊಮ್ಮಗ ಸನ್ನಿ ಡಿಯೋಲ್‌ ಅಕ್ಕ ಪಕ್ಕ ಇದ್ದಾರೆ. ಧರ್ಮೇಂದ್ರ ಪೀಚ್ ಟಿ-ಶರ್ಟ್ ಧರಿಸಿದ್ದರೆ, ಸನ್ನಿ ಬಿಳಿ ಶರ್ಟ್‌ ಧರಿಸಿದ್ದರು.

ಧರ್ಮೇಂದ್ರ ಫೋಟೊ ಜತೆಗೆ ʻನಾನು ನನ್ನ ಪೋಷಕರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಬೇಕೆಂದುʼʼಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ನಟನ ಅಭಿಮಾನಿಗಳು ಪೋಸ್ಟ್‌ಗೆ ಹಲವಾರು ಜನ ಕಮೆಂಟ್‌ ಮಾಡಿದ್ದಾರೆ. ʻಸರ್, ದಯವಿಟ್ಟು ನಮ್ಮ ಹೆತ್ತವರನ್ನು ಹೇಗೆ ಸಂತೋಷಪಡಿಸುವುದು ಮತ್ತು ಅವರಿಗಾಗಿ ಹೆಚ್ಚಿನ ಸಮಯವನ್ನು ಹೇಗೆ ಕೊಡಬೇಕು ಎಂಬುದು ನಮಗೆ ತಿಳಿಸಿʼʼಎಂದು ಕಮೆಂಟ್‌ ಮಾಡಿದ್ದಾರೆ. `ನಿಮ್ಮ ಬಗ್ಗೆ ಹೆಮ್ಮೆ ಪಡಬೇಕು ಧರಮ್ ಜಿʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Dharmendra Changes Name: 64 ವರ್ಷಗಳ ಬಳಿಕ ಹೆಸರನ್ನು ಬದಲಿಸಿದ್ರಾ ನಟ ಧರ್ಮೇಂದ್ರ?

ಧರ್ಮೇಂದ್ರ ಅವರ ತಂದೆ ಕೇವಲ್ ಕ್ರಿಶನ್ ಪಂಜಾಬ್‌ನ ಲುಧಿಯಾನ ಜಿಲ್ಲೆಯ ಸಾಹ್ನೆವಾಲ್ ಎಂಬ ಹಳ್ಳಿಯಲ್ಲಿ ವಾಸಿಸುತ್ತಿದ್ದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಸತ್ವಂತ್ ಕೌರ್ ಅವರನ್ನು ಕೇವಲ್ ಕ್ರಿಶನ್ ವಿವಾಹವಾಗಿದ್ದರು. ಕೇವಲ್ ಕ್ರಿಶನ್ ಅವರಿಗೆ ಇಬ್ಬರು ಮಕ್ಕಳು. ನಟ ಧರ್ಮೇಂದ್ರ ಮತ್ತು ನಟ ಅಜಿತ್ ಡಿಯೋಲ್.

1960ರಲ್ಲಿ `ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ನಟನೆಗೆ ಪದಾರ್ಪಣೆ ಮಾಡಿದ ಧರ್ಮೇಂದ್ರ ಅವರು 60ರ ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ನಟನೆ ಮುಂದವರಿಸಿದ್ದಾರೆ.ಧರ್ಮೇಂದ್ರ ಅವರು ಪಂಜಾಬ್‌ನಲ್ಲಿ 1935ರ ಡಿಸೆಂಬರ್ 8ರಂದು ಜನಿಸಿದರು. ಧರ್ಮೇಂದ್ರ ಅವರ ತಂದೆ ಮುಖ್ಯೋಪಾಧ್ಯಾಯರಾಗಿದ್ದರು. ಅವರ ತಾಯಿ ಗೃಹಿಣಿಯಾಗಿದ್ದರು. ನಟನೆ ಮಾಡಬೇಕು ಎಂದು ಧರ್ಮೇಂದ್ರ ಅವರು ಮುಂಬೈಗೆ ಬಂದರು. ಅವರು ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಮಧ್ಯದ ಹೆಸರು ಹಾಗೂ ಸರ್​ನೇಮ್​ನ ತೆಗೆದು ಹಾಕಿದರು. ಅವರ ಮಕ್ಕಳಾದ ಸನ್ನಿ ಹಾಗೂ ಬಾಬಿ ‘ಡಿಯೋಲ್​’ ಸರ್​ನೇಮ್​ನ ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ.

ಕಳೆದ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದರು.ಧರ್ಮೇಂದ್ರ ಈಗ ಅಮಿತಾಭ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರೊಂದಿಗೆ ಇಕ್ಕಿಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಶ್ರೀರಾಮ್ ರಾಘವನ್ ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಸನ್ನಿ ಡಿಯೋಲ್ ಜತೆ ಮತ್ತೆ ಒಂದಾಗಲಿದ್ದಾರೆ.

Continue Reading

ಬಾಲಿವುಡ್

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Sahil Khan: ಏಪ್ರಿಲ್ 25 ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಸಾಹಿಲ್ ಖಾನ್ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

VISTARANEWS.COM


on

Sahil Khan Travelled 1,800 km In 4 Days To Avoid Arrest
Koo

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುಂಚೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಹರಸಾಹಸ ಪಟ್ಟಿದ್ದರಂತೆ. ನಾಲ್ಕು ದಿನಗಳಲ್ಲಿ ಐದು ರಾಜ್ಯಗಳಂತೆ 1,800 ಕಿ. ಮೀ ಟ್ರಾವೆಲ್‌ ಮಾಡಿದ್ದಾರೆ ಎಂದು ವರದಿಯಾಗಿದೆ. ಕೊನೆಗೂ ಪೊಲೀಸರು ನಟನನ್ನು ಟ್ರ್ಯಾಕ್‌ ಮಾಡಿ ಛತ್ತೀಸ್‌ಗಢದ ಜಗದಾಲ್‌ಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 25ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗೋವಾಗೆ ಮೊದಲು ನಟ ಹೊರಟು ಅಲ್ಲಿಂದ ಮಹಾರಾಷ್ಟ್ರ ಬಳಿಕ ಕರ್ನಾಟಕದ ಹುಬ್ಬಳ್ಳಿಗೆ ತೆರಳಿ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದರು. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ.

ಇಷ್ಟಾದರೂ ಹೈದರಾಬಾದ್‌ನಲ್ಲಿರುವಾಗ ಪೊಲೀಸರು ಅವರ ಸ್ಥಳವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಕೊನೆಗೂ ಛತ್ತೀಸ್‌ಗಢದ ಜಗದಲ್‌ಪುರದ ಆರಾಧ್ಯ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ: Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮುಂಬೈ ಪೊಲೀಸರು 72 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ನಟನನ್ನು ಬಂಧಿಸಿದ ಬಳಿಕ ಪೊಲೀಸರು ನಟನಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈ ನ್ಯಾಯಾಲಯ ಖಾನ್ ಅವರನ್ನು ಮೇ 1 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಏನಿದು ಪ್ರಕರಣ?

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು (pre-arrest bail was rejected ) ತಿರಸ್ಕರಿಸಿತ್ತುಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದರು.

ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿತ್ತು. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿತ್ತು. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

Continue Reading

ಬಾಲಿವುಡ್

Aamir Khan: ನಾನು ಮುಸ್ಲಿಮನಾಗಿರುವುದರಿಂದ ʻನಮಸ್ತೆʼ ಹೇಳುವ ಅಭ್ಯಾಸವಿರಲಿಲ್ಲ ಎಂದ ಆಮೀರ್‌ ಖಾನ್‌!

Aamir Khan: ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು.

VISTARANEWS.COM


on

Aamir Khan talks about power of namaste
Koo

ಬೆಂಗಳೂರು: ಕಪಿಲ್ ಶರ್ಮಾ ಶೋನಲ್ಲಿ ಆಮೀರ್ ಖಾನ್ (Aamir Khan ) ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ ʻದಿ ಗ್ರೇಟ್ ಇಂಡಿಯನ್ ಕಪಿಲ್ ಶೋʼನ (The Great Indian Kapil Show) ಇತ್ತೀಚಿನ ಸಂಚಿಕೆಯಲ್ಲಿ, ನಟ ತನ್ನ ವೃತ್ತಿಜೀವನದ ಕುರಿತು ಹೇಳಿಕೊಂಡರು. ಜತೆಗೆ ಪಂಜಾಬ್‌ ಜನರ ನಮ್ರತೆಯನ್ನು ಶ್ಲಾಘಿಸಿದರು. ʻʻನಾನು ಮುಸ್ಲಿಂನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಪಂಜಾಬ್‌ನಲ್ಲಿ ಚಿತ್ರೀಕರಣಕ್ಕೆಂದು ಎರಡೂವರೆ ತಿಂಗಳುಗಳನ್ನು ಕಳೆದ ನಂತರ, ನನಗೆ ‘ನಮಸ್ತೆ’ ಎಂದು ಕೈ ಮುಗಿದು ಹೇಳುವ ಶಕ್ತಿ ಅರ್ಥವಾಯಿತುʼʼಎಂದು ಹೇಳಿಕೊಂಡಿದ್ದಾರೆ.

ಆಮೀರ್‌ ಮಾತನಾಡಿ ʻʻಈ ಕತೆ ನನಗೆ ತುಂಬ ಹತ್ತಿರವಾದದ್ದು. ದಂಗಲ್‌ ಸಿನಿಮಾವನ್ನು ಪಂಜಾಬ್‌ನಲ್ಲಿ ಚಿತ್ರೀಕರಣ ಮಾಡುವಾಗ ಅಲ್ಲಿಯ ಜನರನ್ನು ನಿಜವಾಗಿಯೂ ಇಷ್ಟಪಟ್ಟೆ. ಪಂಜಾಬಿ ಸಂಸ್ಕೃತಿಯು ಪ್ರೀತಿಯಿಂದ ತುಂಬಿದೆ. ದಂಗಲ್‌ ಸಿನಿಮಾಗಾಗಿ ನಾವು ಅಲ್ಲಿ ಹೋದಾಗ ಚಿತ್ರೀಕರಣ ಮಾಡುತ್ತಿದ್ದ ಸ್ಥಳ ಒಂದು ಪಟ್ಟ ಹಳ್ಳಿ. ನಾವು ಆ ಸ್ಥಳದಲ್ಲಿ ಮತ್ತು ಆ ಮನೆಯಲ್ಲಿ ಎರಡು ತಿಂಗಳಿಗಿಂತ ಹೆಚ್ಚು ಕಾಲ ಶೂಟ್ ಮಾಡಿದ್ದೇವೆ. ಅಲ್ಲಿ ಶೂಟ್‌ಗೆಂದು ಬೆಳಗ್ಗೆ 5 ಗಂಟೆಗೆ ಕಾರ್‌ನಲ್ಲಿ ತಲುಪುತ್ತಿದ್ದಾಗ ಜನ ನನಗೆ ಕೈ ಮುಗಿದು ಸ್ವಾಗತಿಸುತ್ತಿದ್ದರು. ಮನೆಯ ಹೊರಗೆ ನಿಂತು ‘ಸತ್ ಶ್ರೀ ಅಕಾಲ’ (ನಮಸ್ತೆ) ಎಂದು ಕೈ ಮುಗಿದು ಹೇಳುತ್ತಿದ್ದರು. ಶೂಟ್‌ ಆಗಿ ಪ್ಯಾಕ್‌ಅಪ್‌ ಆದ ಬಳಿಕವೂ ಮನೆ ಹೊರಗೆ ನಿಂತು ಕೈ ಮುಗಿದು ‘ಗುಡ್ ನೈಟ್’ ಎಂದು ಹೇಳುತ್ತಿದ್ದರುʼʼಎಂದರು.

ಇದನ್ನೂ ಓದಿ: Aamir Khan: ಕಾಂಗ್ರೆಸ್‌ಗೆ ಮತ ನೀಡಿ ಎಂದು ಆಮೀರ್ ಖಾನ್ ಮನವಿ ಮಾಡಿದರೆ? ಎಫ್‌ಐಆರ್‌ ಏಕೆ?

ನಟ ಮಾತು ಮುಂದುವರಿಸಿ ʻʻನಾನು ಮುಸ್ಲಿಮನಾಗಿರುವುದರಿಂದ ಕೈ ಜೋಡಿಸಿ ಜನರಿಗೆ ನಮಸ್ತೆ ಹೇಳುವ ಅಭ್ಯಾಸವಿರಲಿಲ್ಲ. ಮುಸ್ಲಿಮರು ಪರಸ್ಪರ ಶುಭಾಶಯ ಹೇಳುವ ರೀತಿ ಕೈ ಎತ್ತಿ, ತಲೆ ಬಾಗಿಸಿ ಹೇಳುತ್ತಾರೆ. ಆದರೆ ಪಂಜಾಬ್‌ನಲ್ಲಿ ಆ ಎರಡೂವರೆ ತಿಂಗಳು ಕಳೆದ ನಂತರ, ನನಗೆ ‘ನಮಸ್ತೆ’ಯ ಶಕ್ತಿ ಅರ್ಥವಾಯಿತು. ಪಂಜಾಬ್‌ನ ಜನರು ಎಲ್ಲರಿಗೂ ತುಂಬಾ ಗೌರವ ನೀಡುತ್ತಾರೆʼʼಎಂದು ಹೇಳಿದರು. ಆಮೀರ್ ಕೊನೆಯದಾಗಿ ಲಾಲ್ ಸಿಂಗ್ ಚಡ್ಡಾ (2022) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಈಗ ಆಮಿರ್ ಖಾನ್​ ಅವರು ‘ಸಿತಾರೆ ಜಮೀನ್​ ಪರ್​’ (Sitaare Zameen Par) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆಮೀರ್ ಖಾನ್ ತಮ್ಮ ಮುಂಬರುವ ಚಿತ್ರ ‘ಸಿತಾರೆ ಜಮೀನ್ ಪರ್’ ಸಿನಿಮಾ (Sitare Zameen Par) ಬಿಡುಗಡೆ ಯಾವಾಗ ಎಂಬುದನ್ನು ಮಾಧ್ಯಮವೊಂದರಲ್ಲಿ ಈ ಮುಂಚೆ ಹೇಳಿಕೆ ನೀಡಿದ್ದರು. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ‘ಸಿತಾರೆ ಜಮೀನ್ ಪರ್’ ಸಿನಿಮಾ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ ಎಂದು ಆಮೀರ್ ಖಾನ್ ಬಹಿರಂಗಪಡಿಸಿದ್ದರು. ಮಾಧ್ಯಮವೊಂದರ ಸಂವಾದದ ಸಮಯದಲ್ಲಿ, ನಟ ಆಮೀರ್ ಖಾನ್ ಮಾತನಾಡಿ, “ನಾಯಕ ನಟನಾಗಿ ನನ್ನ ಮುಂದಿನ ಚಿತ್ರ ‘ಸಿತಾರೆ ಜಮೀನ್ ಪರ್’. ನಾವು ಇದನ್ನು ಈ ವರ್ಷದ ಕೊನೆಯಲ್ಲಿ ಕ್ರಿಸ್ಮಸ್ ಸಂದರ್ಭದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದೇನೆ. ಇದು ಮನರಂಜನಾ ಚಿತ್ರ. ಶೂಟಿಂಗ್‌ ಈಗಾಗಲೇ ಶುರುವಾಗಿದೆʼʼಎಂದು ಹೇಳಿಕೊಂಡಿದ್ದರು.

ಸಿತಾರೆ ಜಮೀನ್ ಪರ್’ ಚಿತ್ರದಲ್ಲಿ ಆಮೀರ್ ಖಾನ್ ಜೋಡಿಯಾಗಿ ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿತಾರೆ ಜಮೀನ್ ಪರ್’ ಚಿತ್ರದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ನಟ ಮಾಹಿತಿ ಹಂಚಿಕೊಳ್ಳಲಿದ್ದಾರೆ.

Continue Reading

ಬಾಲಿವುಡ್

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

Ranbir Kapoor: ರಣಬೀರ್ ಕಪೂರ್ (Ranbir Kapoor) ಇತ್ತೀಚೆಗೆ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಪಾರಾಜಿ (ಫೋಟೊಗ್ರಾಫರ್‌) ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಛಾಯಾಗ್ರಾಹಕನ ಅಸಭ್ಯ ವರ್ತನೆಗೆ ರಣಬೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಫೋಟೋಗ್ರಾಫರ್‌ಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ʻಮುಜುಗರ ತರಿಸವಂತೆ ಇದೆʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Ranbir Kapoor stunned as photographer abuses in front of him
Koo

ಬೆಂಗಳೂರು: ನಟ ರಣಬೀರ್ ಕಪೂರ್ (Ranbir Kapoor) ಇತ್ತೀಚೆಗೆ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಪಾಪರಾಜಿ (ಫೋಟೊಗ್ರಾಫರ್‌) ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಆದರೂ ಆ ಸಮಯದಲ್ಲಿ ಅವರು ತಾಳ್ಮೆ ಕಳೆದುಕೊಂಡಿಲ್ಲ. ಪಾಪರಾಜಿಯ ಅಸಭ್ಯ ಭಾಷೆಗೆ ಸೋಶಿಯಲ್​ ಮೀಡಿಯಾದಲ್ಲಿ ಜನರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಛಾಯಾಗ್ರಾಹಕನ ಅಸಭ್ಯ ವರ್ತನೆಗೆ ರಣಬೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ರಣಬೀರ್‌ ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆ, ಫೋಟೋಗ್ರಾಫರ್‌ ಫೋಟೊ ತೆಗೆಸಿಕೊಳ್ಳಲು ಮುಂದಾಗಿದ್ದ. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಫೋಟೊಗ್ರಾಫರ್​ ಒಬ್ಬನು ಕೆಟ್ಟ ಭಾಷೆ ಬಳಸಿ ಕೂಗಾಡಿದ್ದಾನೆ. ಆತ ಆ ಮಾತನ್ನು ರಣಬೀರ್​ ಕಪೂರ್​ಗೆ ಹೇಳಿದ್ದಾ ಅಥವಾ ಅಲ್ಲಿದ್ದ ಜನರ ಪೈಕಿ ಯಾರೋ ಒಬ್ಬರಿಗೆ ಹೇಳಿದ್ದಾ ಎಂಬುದು ಗೊತ್ತಾಗಿಲ್ಲ. ಅಶ್ಲೀಲ ಪದ ಬಳಕೆ ಮಾಡುತ್ತಿದ್ದಂತೆ ರಣಬೀರ್‌ ಕೂಡ ‘ಏನು ನಡೆಯುತ್ತಿದೆ ಇಲ್ಲಿ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಫೋಟೋಗ್ರಾಫರ್‌ಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ʻಮುಜುಗರ ತರಿಸವಂತೆ ಇದೆʼಎಂದು ಕಮೆಂಟ್‌ ಮಾಡಿದ್ದಾರೆ. ರಣಬೀರ್‌ ಕಾರ್ಯಕ್ರಮಕ್ಕೆ ರಣಬೀರ್ ಕಪ್ಪು ಕುರ್ತಾ-ಪೈಜಾಮಾ ಧರಿಸಿ ಬಂದಿದ್ದರು.

ಇದನ್ನೂ ಓದಿ: Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ಇದನ್ನೂ ಓದಿ: Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು. ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

Continue Reading
Advertisement
Murder Case
ಕರ್ನಾಟಕ2 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ22 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ23 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ33 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ51 mins ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Thomas Cup 2024
ಕ್ರೀಡೆ2 hours ago

Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

Rameshwaram Cafe blast
ಕರ್ನಾಟಕ3 hours ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌