Salman Khan: ಸಲ್ಮಾನ್ ನಿವಾಸದ ಬಳಿ ಗುಂಡು ಹಾರಾಟದ ಸಂಚು ನಡೆದಿದ್ದು ಅಮೆರಿಕದಲ್ಲಿ, ಕೆನಡಾಕ್ಕೂ ಇದೆ ನಂಟು! - Vistara News

ಬಾಲಿವುಡ್

Salman Khan: ಸಲ್ಮಾನ್ ನಿವಾಸದ ಬಳಿ ಗುಂಡು ಹಾರಾಟದ ಸಂಚು ನಡೆದಿದ್ದು ಅಮೆರಿಕದಲ್ಲಿ, ಕೆನಡಾಕ್ಕೂ ಇದೆ ನಂಟು!

Salman Khan ಪೊಲೀಸ್ ಮೂಲಗಳ ಪ್ರಕಾರ ಆ ಇಬ್ಬರು ವ್ಯಕ್ತಿಗಳು ಕುಖ್ಯಾತ ರೌಡಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನವರು ಎನ್ನಲಾಗಿದೆ. ಈಗಾಗಲೇ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಲಾರೆನ್ಸ್ ಬಿಷ್ಣೋಯ್ ಇದೀಗ ತಿಹಾರ್ ಜೈಲಿನಲ್ಲಿದ್ದಾರೆ. ಹಾಗಾಗಿ ಈ ಯೋಜನೆ ಅಮೆರಿಕದಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ರೂಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಅವರು ವಾಸವಾಗಿದ್ದ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನ ಹೊರಗೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾದ ಘಟನೆ ಹಿನ್ನೆಲೆಯಲ್ಲಿ ಪೊಲೀಸ್‌ ತನಿಖೆ ಚುರುಕಾಗಿದೆ. ಇದರ ಸಂಚು ರೂಪುಗೊಂಡಿದ್ದು ಅಮೆರಿಕದಲ್ಲಿ ಎಂಬುದು ಗೊತ್ತಾಗಿದೆ.

ಸಾಮಾನ್ಯವಾಗಿ ನಟ ಸಲ್ಮಾನ್ ಖಾನ್ ಅವರ ಸಿನಿಮಾಗಳಲ್ಲಿ ಗುಂಡಿನ ದಾಳಿ ನಡೆಸುವಂತಹ ದೃಶ್ಯಾವಳಿಗಳನ್ನು ನೋಡಿರುವ ಜನರು ಇದೀಗ ನಟ ಸಲ್ಮಾನ್ ಖಾನ್ ಅವರ ನಿವಾಸದ ಮುಂದೆಯೇ ಗುಂಡು ಹಾರಿಸಿದ ಶಬ್ದ ಕೇಳಿ ಹೌಹಾರಿದ್ದಾರೆ.

ಕೊಲೆಗೆ ಸಂಚು?

ದುಷ್ಕರ್ಮಿಗಳ ಈ ಕೃತ್ಯ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇಬ್ಬರು ವ್ಯಕ್ತಿಗಳು ಟೋಪಿಗಳನ್ನು ಧರಿಸಿದ್ದು, ಅದರಲ್ಲಿ ಒಬ್ಬ ಕಪ್ಪು ಜಾಕೆಟ್ ಮತ್ತು ಡೆನಿಮ್ ಪ್ಯಾಂಟ್ , ಬಿಳಿ ಟೀ ಶರ್ಟ್ ಧರಿಸಿದ್ದರೆ ಇನ್ನೊಬ್ಬ ಡೆನಿಮ್ ಪ್ಯಾಂಟ್ ಮತ್ತು ಕೆಂಪು ಟೀ ಶರ್ಟ್ ಧರಿಸಿದ್ದ ಎನ್ನಲಾಗಿದೆ. ಅವರು ನಟನ ನಿವಾಸದ ಕಡೆಗೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಹಾಗಾಗಿ ನಟ ಸಲ್ಮಾನ್ ಖಾನ್ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಅನುಮಾನ ಪೊಲೀಸರಲ್ಲಿ ಮೂಡಿದೆ.

ಪೊಲೀಸ್ ಮೂಲಗಳ ಪ್ರಕಾರ ಆ ಇಬ್ಬರು ವ್ಯಕ್ತಿಗಳು ಕುಖ್ಯಾತ ರೌಡಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನವರು ಎನ್ನಲಾಗಿದೆ. ಈಗಾಗಲೇ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಲಾರೆನ್ಸ್ ಬಿಷ್ಣೋಯ್ ಇದೀಗ ತಿಹಾರ್ ಜೈಲಿನಲ್ಲಿದ್ದಾರೆ. ಹಾಗಾಗಿ ಈ ಯೋಜನೆ ಅಮೆರಿಕದಲ್ಲಿರುವ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅನ್ಮೋಲ್ ಬಿಷ್ಣೋಯ್ ಫೇಸ್ ಬುಕ್ ಪೋಸ್ಟ್ ಮೂಲಕ ಈ ಘಟನೆಯ ಹೊಣೆಯನ್ನು ಹೊತ್ತಿದ್ದಾನೆ ಎನ್ನಲಾಗಿದೆ. ಹಾಗಾಗಿ ಈ ಘಟನೆಯ ಹೊಣೆಯನ್ನು ಹೊತ್ತಿರುವ ಫೇಸ್ ಬುಕ್ ಪುಟದ ಐಪಿ ವಿಳಾಸವನ್ನು ಕೆನಡಾದಲ್ಲಿ ಪತ್ತೆಹಚ್ಚಲಾಗಿದೆಯಂತೆ. ಅಲ್ಲದೇ ಫೇಸ್ ಬುಕ್ ಪೋಸ್ಟ್ ರಚಿಸಲು ವಿಪಿಎನ್ ಅನ್ನು ಬಳಸಿರುವ ಸಾಧ್ಯತೆ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಲ್ಮಾನ್ ಖಾನ್ ಅವರ ನಿವಾಸದ ಬಳಿ ಗುಂಡು ಹಾರಿಸಿದ ಶಂಕಿತರು ಬಳಸಿದ ಬೈಕ್ ಸೆಕೆಂಡ್ ಹ್ಯಾಂಡ್ ಬೈಕ್ ಆಗಿದ್ದು, ಅದನ್ನು ರಾಯಗಡ್ ಜಿಲ್ಲೆಯಲ್ಲಿ ಖರೀದಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಬೈಕ್ ಮಾರಾಟದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Loksabha Election 2024: ಐವರು ಪತ್ನಿಯರು, 150 ಮೊಮ್ಮಕ್ಕಳು; ಒಂದೇ ಕುಟುಂಬದಲ್ಲಿದ್ದಾರೆ 350 ಮತದಾರರು!

ಈ ಹಿಂದೆ ನಟ ಸಲ್ಮಾನ್ ಖಾನ್ ಅವರಿಗೆ ಮಾಡಲಾದ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅವರ ಭದ್ರತಾ ವ್ಯವಸ್ಥೆಯನ್ನು ವೈ+ಗೆ ಹೆಚ್ಚಿಸಿದ್ದರು. ಇದೀಗ ವೈ+ ಭದ್ರತೆಯ ಜೊತೆಗೆ ಎರಡು ಕಮಾಂಡೊಗಳು ಮತ್ತು ಇಬ್ಬರು ವೈಯಕ್ತಿಕ ಭದ್ರತಾ ಅಧಿಕಾರಿಗಳು ಸೇರಿದಂತೆ ಹನ್ನೊಂದು ಭದ್ರತಾ ಸಿಬ್ಬಂದಿಗಳು ಎಲ್ಲಾ ಸಮಯದಲ್ಲೂ ನಟನನ್ನು ಕಾಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

VISTARANEWS.COM


on

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಅಟ್ಲಿ ಅವರ ಪತ್ನಿ ಪ್ರಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಟ್ಲಿ ಮತ್ತು ಪ್ರಿಯಾ, ತಮ್ಮ ಮನೆಗೆ ಹೆಣ್ಣು ಮಗುವಿನ ಆಗಮನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಪೋಸ್ಟ್‌ ಗೆ ‘ಧನ್ಯತೆಯ ಭಾವ ಮೂಡಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ತಮ್ಮ ಮೊದಲ ಪುತ್ರ ಮೀರ್ ಈಗ ದೊಡ್ಡ ಅಣ್ಣನ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿರುವ ಮುದ್ದಾದ ಪೋಸ್ಟರ್ ಒಂದನ್ನೂ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ.
ಅಟ್ಲಿ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇಡೀ ದೇಶದ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಅಟ್ಲಿ ಮತ್ತು ಪ್ರಿಯಾ ಹಲವು ವರ್ಷಗಳ ಕಾಲ ಪ್ರೀತಿಸಿ 2014ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಎಂಟು ವರ್ಷಗಳ ನಂತರ 2023ರ ಜನವರಿ 31ರಂದು ದಂಪತಿಗೆ ಮೊದಲ ಪುತ್ರ ಮೀರ್ ಜನಿಸಿದ್ದ. ಈಗ ಎರಡನೇ ಮಗುವಿನ ಆಗಮನವಾಗಿದೆ.
ಚಿತ್ರರಂಗದಲ್ಲಿಯೂ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಈಗ ಅವರು ‘ರಾಕಾ’ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading

ಸಿನಿಮಾ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ.

VISTARANEWS.COM


on

Action Prince Dhruva Sarja much awaited film Martin to hit the screens on October 11

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಮಾರ್ಟಿನ್‌ ರಿಲೀಸ್‌ಗೆ ಕೌಂಟ್‌ ಡೌನ್‌ ಶುರುವಾಗಿದೆ. ಅಕ್ಟೋಬರ್ 11 ರಂದು ಭಾರತದಾದ್ಯಂತ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾರ್ಟಿನ್‌ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

Action Prince Dhruva Sarjas much-awaited film 'Martin' to hit the screens on October 11

ಭರ್ಜರಿ ಬರ್ತ್‌ ಡೇ ಸೆಲೆಬ್ರೆಷನ್‌ಗೆ ಫ್ಯಾನ್ಸ್‌ ಸಜ್ಜು

ಮಾರ್ಟಿನ್‌ ಸಿನಿಮಾಗೂ ಮೊದಲೇ ಧ್ರುವ ಸರ್ಜಾರ ಬರ್ತ್ ಡೇ ಸೆಲೆಬ್ರೆಷನ್‌‌ಗೆ ಫ್ಯಾನ್ಸ್ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆಟಂ ಬಾಂಬ್ ಧ್ರುವ ಸರ್ಜಾ ನಟನೆಯಲ್ಲಿ ರಿಲೀಸ್ ಆಗಿರುವುದುದು ನಾಲ್ಕೇ ಸಿನಿಮಾವಾದರೂ, 40 ಸಿನಿಮಾ ಮಾಡಿರುವಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಭಿಮಾನಿಗಳನ್ನು ವಿಐಪಿ ಅಂತೇಳು ಧ್ರುವ, ಅವರಿಗಾಗಿಯೇ ಒಂದು ದಿನ ಮೀಸಲಿಟ್ಟಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿಯಾಗುವ ಬಹದ್ಧೂರ್, ಈ ಬಾರಿ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಇರುವ ಜಾಗಕ್ಕೆ ಭೇಟಿ ಕೊಡುತ್ತಿದ್ದಾರೆ. ಕಳೆದ ಭಾನುವಾರ ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಧ್ರುವ ಮನೆಯ ರಸ್ತೆಯು, ಅಭಿಮಾನಿಗಳಿಂದ ತುಂಬಿ ಹೋಗಿತ್ತು.

Action Prince Dhruva Sarjas much-awaited film 'Martin' to hit the screens on October 11

ಧ್ರುವ ಹುಟ್ಟುಹಬ್ಬಕ್ಕೂ ಮೊದಲು ಮಾರ್ಟಿನ್ ಚಿತ್ರತಂಡ ಅಕ್ಟೋಬರ್ 4ರಂದು ಹೈದರಾಬಾದ್‌ನಲ್ಲಿ ಧ್ರುವ ಅವರ ಇಂಟ್ರೋಡಕ್ಷನ್ ಸಾಂಗ್ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 5ರಂದು ಹುಬ್ಬಳಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್‌ನ ಮೀಟ್ ಮಾಡಲಿದ್ದಾರೆ. ತಮ್ಮ ಹುಟ್ಟುಹಬ್ಬದಂದು ದಾವಣಗೆರೆಯಲ್ಲಿ ಮಾರ್ಟಿನ್ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಉತ್ತರ ಕರ್ನಾಟಕ ಜನರ ಜತೆ ಧ್ರುವ ಈ ಬಾರಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಾಂಗ್‌ ರಿಲೀಸ್‌

ಹುಟ್ಟುಹಬ್ಬದ ನಂತರ ಅಕ್ಟೋಬರ್ 8ರಂದು ಮುಂಬೈನಲ್ಲಿ ಮಾರ್ಟಿನ್ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗುತ್ತಿದೆ. ಅಂದ‌ ಹಾಗೆ ಮಾರ್ಟಿನ್ ಒಂದಲ್ಲ ಒಂದು ಕಾರಣಕ್ಕೆ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.ಇದೇ ತಿಂಗಳ 11ರಂದು ಮಾರ್ಟಿನ್ ಆಲ್ ಓವರ್ ಇಂಡಿಯಾ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಅತಿ ಹೆಚ್ಚು ಬಜೆಟ್‌ನ ಮಾರ್ಟಿನ್‌, ಶೇಖಡಾ 80ರಷ್ಟು ಚಿತ್ರವನ್ನು ಸೆಟ್‌ನಲ್ಲಿಯೇ ಚಿತ್ರೀಕರಣಗೊಂಡಿದೆ. ಹಾಲಿವುಡ್‌ನ ಫಾಸ್ಟ್ ಆ್ಯಂಡ್ ಪ್ಯೂರಿಯಸ್ ಚಿತ್ರ ನೋಡಿದ ಅನುಭವ ಆಗುತ್ತೆ ಎನ್ನುವ ಮಾತನ್ನು ಸಿನಿಮಾ ತಂಡ ಹೇಳಿಕೊಂಡಿದೆ.

Action Prince Dhruva Sarjas much-awaited film 'Martin' to hit the screens on October 11

ಮಾರ್ಟಿನ್ ತಂಡದಿಂದ ನಿರ್ದೇಶಕರೇ ಔಟ್!

ಮಾರ್ಟಿನ್ ಗೆಲ್ಲುತ್ತೆ ಎಂಬ ಭರವಸೆ ಕೂಡ ಗಾಂಧಿನಗರಕ್ಕಿದೆ. ಆದರೆ ಈ ಸಮಯದಲ್ಲಿ ಜತೆಯಾಗಿರಬೇಕಿದ್ದ ತಂಡದಲ್ಲಿ ಬಿರುಕು ಮೂಡಿದೆ. ಚಿತ್ರದ ಪ್ರಚಾರದಿಂದ ನಿರ್ದೇಶಕ ಎಪಿ ಅರ್ಜುನ್ ಅವರನ್ನು ದೂರ ಇಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಾರ್ಟಿನ್‌ಗೆ ದ್ರೋಹದ ವಿಚಾರ ಜಗಜ್ಜಾಹೀರಾಗಿತ್ತು. ಚಿತ್ರದ ಹೆಸರಿನಲ್ಲಿ ನಿರ್ಮಾಪಕ ಉದಯ್ ಮೆಹ್ತಾಗೆ ನಿರ್ದೇಶಕ ಎ.ಪಿ.ಅರ್ಜುನ್ ಅವರಿಂದ ಮೋಸವಾಗಿದೆ. ಕೇವಲ ಸಿಜಿ ಮತ್ತು ವಿಎಫ್‌ಎಕ್ಸ್ ಒಂದರಲ್ಲೇ 73 ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಉದಯ್ ಮೆಹ್ತಾ ಮತ್ತು ಎಪಿ ಅರ್ಜುನ್ ನಡುವೆ ಸಂಬಂಧ ಹಳಸಿದೆ. ತಮ್ಮದೇ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಎಪಿ ಅರ್ಜುನ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿದೆ ಎಂದು ಹೊಸ ಬಾಂಬ್ ಕೂಡ ಉದಯ್ ಮೆಹ್ತಾ ಸಿಡಿಸಿದ್ದಾರೆ.

Action Prince Dhruva Sarja  much awaited film Martin to hit the screens on October 11

ಮಾರ್ಟಿನ್ ಚಿತ್ರದ ಕಥೆ ಚಿತ್ರಕಥೆಯನ್ನು ಆ್ಯಕ್ಷನ್ ಹೀರೋ ಅರ್ಜುನ್ ಸರ್ಜಾ ಬರೆದಿದ್ದಾರೆ. ಹೀಗಿರುವಾಗ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಬೇಕಿದ್ದ ”ಮಾರ್ಟಿನ್‌” ಚಿತ್ರತಂಡದಲ್ಲಿ, ಸಿನಿಮಾ ರಿಲೀಸ್‌ಗೂ ಮೊದಲೇ ಬಿರುಕು ಮೂಡಿದೆ. ಇವೆಲ್ಲದರ ನಡುವೆ ಅಕ್ಟೋಬರ್ 6 ರಂದು ಧ್ರುವ ಸರ್ಜಾ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಮತ್ತೊಂದು ಮೆಗಾ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಲಿವುಡ್

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡೇಟು! ಮುಂಬೈ ಆಸ್ಪತ್ರೆಗೆ ದಾಖಲು

Actor Govinda : ಬಾಲಿವುಡ್​ ನಟ ಗೋವಿಂದ ಕಾಲಿಗೆ ಗುಂಡು ತಗುಲಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

Actor Govinda

ಬಾಲಿವುಡ್‌ ನಟ ಗೋವಿಂದ (Actor Govinda) ಕಾಲಿಗೆ ಗುಂಡು ತಗುಲಿದೆ. ರಿವಾಲ್ವರ್​​ ಲಾಕ್​ ಓಪನ್​ ಆಗಿದ್ದರಿಂದ ಜೇಬಿಗೆ ರಿವಾಲ್ವರ್​ ಇಟ್ಟುಕೊಳ್ಳುವಾಗ ಮಿಸ್ ಫೈರ್ ಆಗಿದೆ. ಕೂಡಲೇ ಗೋವಿಂದ ಕುಟುಂಬಸ್ಥರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮುಂಜಾನೆ 4.45ರ ಸುಮಾರಿಗೆ ಘಟನೆ ನಡೆದಿದೆ.

ನಟ ಗೋವಿಂದ ಲೈಸೆನ್ಸ್​ ರಿವಾಲ್ವರ್​ ಬಳಕೆ ಮಾಡುತ್ತಿದ್ದರು. ಮನೆ ಬಿಡುವಾಗ ಗನ್​ ಚೆಕ್​ ಮಾಡುತ್ತಿದ್ದರು. ಈ ವೇಳೆ ಗೋವಿಂದ ಕಾಲಿಗೆ ಬುಲೆಟ್ ತಗುಲಿದೆ. ತನ್ನದೇ ರಿವಾಲ್ವರ್​​ನಿಂದ ಫೈರಿಂಗ್​​​ ಆಗಿದೆ. ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಯಲ್ಲಿ ಗೋವಿಂದಗೆ ಟ್ರೀಟ್​ಮೆಂಟ್​ ಮುಂದುವರಿದಿದೆ. ಅದೃಷ್ಟವಶಾತ್‌ ಗೋವಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಲಿದ್ದು, ಈ ಸಂಬಂಧ ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

ಮುಂಜಾನೆ ಕೋಲ್ಕತ್ತಾಗೆ ಹೊರಡುವ ಮೊದಲು ನಟ ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಪರಿಶೀಲಿಸುತ್ತಿದ್ದಾಗ ಜುಹು ನಿವಾಸದಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಆಕಸ್ಮಿಕವಾಗಿ ಗೋವಿಂದ ಕೈಯಿಂದ ಬಿದ್ದು, ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಲು ಬೆಳಿಗ್ಗೆ 6 ಗಂಟೆಗೆ ಫ್ಲೈಟ್‌ ಇತ್ತು. ನಾನು ಮೊದಲೇ ವಿಮಾನ ನಿಲ್ದಾಣವನ್ನು ತಲುಪಿದ್ದೆ. ಗೋವಿಂದ ಅವರು ತಮ್ಮ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಲು ಹೊರಟಿದ್ದರು. ಆಗ ಈ ಅವಘಡ ಸಂಭವಿಸಿದೆ. ಸದ್ಯ ವೈದ್ಯರು ಗುಂಡು ಹೊರತೆಗೆದಿದ್ದು, ಗೋವಿಂದ ಆರೋಗ್ಯ ಸ್ಥಿರವಾಗಿದೆ ಎಂದು ನಟನ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

ಆಸ್ಪತ್ರೆಯಿಂದ ನಟ ಗೋವಿಂದ ಆಡಿಯೋ ಮೆಸೇಜ್ ರಿಲೀಸ್ ಮಾಡಿದ್ದಾರೆ. ಎಲ್ಲರ ಹಾರೈಕೆ ಆಶೀರ್ವಾದದಿಂದ ನಾನು ಚೆನ್ನಾಗಿದ್ದೇನೆ. ಗುಂಡು ಬಿದ್ದಿದನ್ನು ತೆಗೆಯಲಾಗಿದೆ. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂದೇಶ ಕಳುಹಿಸಿದ್ದಾರೆ. ಗೋವಿಂದ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Latest16 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest17 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest17 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking18 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest19 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest21 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest21 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ22 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest23 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest23 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌