Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌! - Vistara News

ಬಾಲಿವುಡ್

Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

Shah Rukh Khan: ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ.ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

VISTARANEWS.COM


on

Shah Rukh Khan looks Like Johnny Depp
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಾರುಖ್ ಖಾನ್ ಹಾಗೂ ಮಗ ಅಬ್ರಾಮ್ ಖಾನ್ ಇಟಲಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಎರಡನೇ ವಿವಾಹ ಪೂರ್ವ ಸಮಾರಂಭದಲ್ಲಿ ರಣಬೀರ್ ಕಪೂರ್ ಅವರೊಂದಿಗೆ ಮಾತನಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ. ಇದೀಗ ಚರ್ಚೆಯಲ್ಲಿರುವುದು ಶಾರುಖ್ ಅವರ ವಿಭಿನ್ನ ಲುಕ್‌. ಶಾರುಖ್‌ ಅವರ ಈ ಲುಕ್‌ ಹಾಲಿವುಡ್ ನಟ ಜಾನಿ ಡೆಪ್‌ಗೆ (Johnny Depp) ಹೋಲಿಸುತ್ತಿದ್ದಾರೆ ಫ್ಯಾನ್ಸ್‌.

ಶಾರುಖ್ ಖಾನ್ ಬಿಳಿ ಸ್ಕಾರ್ಫ್ ಜತೆ ನೀಲಿ ಸೂಟ್ ಧರಿಸಿದ್ದರು. ಜಾನಿ ಡೆಪ್ ನೆನಪಿಸುವಂತೆ ಇತ್ತು ಶಾರುಖ್‌ ಹೇರ್‌ಸ್ಟೈಲ್‌. ʻಪೈರೇಟ್ಸ್ ಆಫ್ ದಿ ಕೆರೆಬಿಯನ್’ ಚಿತ್ರದ ಮೂಲಕ ಜಗತ್ತಿನಾದ್ಯಂತ ಮನೆಮಾತಾಗಿದ್ದಾರೆ ಜಾನಿ ಡೆಪ್. ಇಟಲಿಯ ರೋಮ್‌ನಲ್ಲಿ ಇತ್ತೀಚೆಗೆ ನಡೆದ ಅಂಬಾನಿ ಪಾರ್ಟಿಯಲ್ಲಿ ಶಾರುಖ್ ಭಾಗಿಯಾಗಿದ್ದರು. ಕುಟಂಬದ ಜತೆ ಸಖತ್‌ ಎಂಜಾಯ್‌ ಮಾಡಿದ್ದಾರೆ ಶಾರುಖ್‌. ಮಾರ್ಚ್ ಆರಂಭದಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಮೂರು ದಿನಗಳ ಅದ್ಧೂರಿ ವಿವಾಹ ಪೂರ್ವ ಆಚರಣೆಯ ನಂತರ, ಅಂಬಾನಿ ಕುಟುಂಬವು ಯುರೋಪ್‌ನಲ್ಲಿ ಕ್ರೂಸ್‌ ಪಾರ್ಟಿ ಆಯೋಜಿಸಿತ್ತು.

ಶಾರುಖ್, ರಣಬೀರ್ ಮತ್ತು ಅವರ ಕುಟುಂಬದವರಲ್ಲದೆ, ಸಲ್ಮಾನ್ ಖಾನ್, ಸಾರಾ ಅಲಿ ಖಾನ್, ಕರೀನಾ ಕಪೂರ್, ಇಬ್ರಾಹಿಂ ಅಲಿ ಖಾನ್, ಜಾಹ್ನವಿ ಕಪೂರ್, ಅನನ್ಯಾ ಪಾಂಡೆ, ಕರಣ್ ಜೋಹರ್, ದಿಶಾ ಪಟಾನಿ ಮತ್ತು ಕರಿಷ್ಮಾ ಕಪೂರ್ ಐಷಾರಾಮಿ ಕ್ರೂಸ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿತ್ತು.

ಇದನ್ನೂ ಓದಿ: Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ.

ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Rashmika Mandanna: ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

VISTARANEWS.COM


on

Rashmika Mandanna Ayushmann Khurrana Team Up For Horror Comedy
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ, ಮಿಶನ್ ಮಜ್ನು, ಛಾವಾ ಚಿತ್ರಗಳನ್ನು ಮಾಡಿರುವ ರಶ್ಮಿಕಾ, ಸಲ್ಮಾನ್ ಖಾನ್ ಜತೆ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ `ಸಿಕಂದರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದರ ನಡುವೆ ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಚಿತ್ರಕ್ಕೆ ಗ್ನೀನ್ ಸಿಗ್ನಲ್ ನೀಡಿದ್ದಾರೆ, ಬಾಲಿವುಡ್‌ನ ಪ್ರತಿಭಾವಂತ ಹೀರೋ ಆಯುಷ್ಮಾನ್ ಖುರಾನಾಗೆ ನಾಯಕಿಯಾಗಿದ್ದಾರೆ ಎಂದು ವರದಿಯಾಗಿದೆ. ಆಯುಷ್ಮಾನ್ ಖುರಾನ ಮತ್ತು ರಶ್ಮಿಕಾ ಅಭಿನಯಿಸಲಿರುವ ಈ ಚಿತ್ರಕ್ಕೆ ʻವ್ಯಾಂಪೈರ್ಸ್‌ ಆಫ್ ವಿಜಯ್ ನಗರʼ ಎಂದು ಹೆಸರಿಡಲಾಗಿದೆ.

ʻಸ್ತ್ರೀʼ. ʻಬೇಡಿಯಾʼ.. ʻಮುಂಜ್ಯಾʼನಂತಹ ಹಾರರ್ ಕಾಮಿಡಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ದಿನೇಶ್ ವಿಜನ್ ಆಯುಷ್ಮಾನ್ ಕುರಾನಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಈ ವರ್ಷದ ನವೆಂಬರ್‌ನಿಂದ ಚಿತ್ರ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. “ಇದು ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಪ್ರಸ್ತುತ ಸಿನಿಮಾ ಸ್ಕ್ರಿಪ್ಟ್ ಆಗುತ್ತಿದೆ. ಶೀಘ್ರದಲ್ಲೇ ಪ್ರೀ-ಪ್ರೊಡಕ್ಷನ್ ಹಂತ ಮುಗಲಿದೆʼ ಎಂದು ವರದಿಯಾಗಿದೆ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಆದಿತ್ಯ ಸತ್ಪೋದರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ದಿನೇಶ್ ವಿಜನ್ ತಮ್ಮ ಸ್ತ್ರೀ 2 ಚಿತ್ರದ ಬಿಡುಗಡೆಯ ಕೆಲಸದಲ್ಲಿದ್ದಾರೆ. ಇತ್ತ ರಶ್ಮಿಕಾ ಮಂದಣ್ಣ ಪುಷ್ಪ 02 ಚಿತ್ರದ ಬಾಕಿ ಕೆಲಸ ಮುಗಿಸಿ, ಸಿಕಂದರ್ ಚಿತ್ರದ ಚಿತ್ರೀಕರಣಕ್ಕೆ ತೆರಳಲಿದ್ದಾರೆ.ಆಯುಷ್ಮಾನ್ ಖುರಾನಾ ಸದ್ಯಕ್ಕೆ ಕರಣ್ ಜೋಹರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಆಯುಷ್ಮಾನ್ ಕೈಯಲ್ಲಿ ʻಬಾರ್ಡರ್ʼ ಚಿತ್ರದ ಸಿಕ್ವೆಲ್ ಕೂಡ ಇದೆ. ಮತ್ತೊಂದೆಡೆ, ರಶ್ಮಿಕಾ ಅವರು ಪುಷ್ಪ 2 ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 6 ರಂದು ಸಿನಿಮಾ ಬಿಡುಗಡೆಯಾಗಲಿದೆ.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

Continue Reading

Latest

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Parineethi Chopra: ಸಿನಿಮಾಕ್ಕಾಗಿ ನಟ-ನಟಿಯರು ತಮ್ಮ ದೇಹತೂಕವನ್ನು ಹೆಚ್ಚು ಕಡಿಮೆ ಮಾಡಿಕೊಳ್ಳುವುದು ಸಾಮಾನ್ಯ. ಕೆಲವೊಮ್ಮ ಇದರಿಂದ ಅವರು ಸಿಕ್ಕಾಪಟ್ಟೆ ಟ್ರೋಲ್ಗೆ ಒಳಗಾಗುತ್ತಾರೆ. ಏಳು ಮಲ್ಲಿಗೆ ತೂಕದಂತಿರುವ ನಟಿಯರು ಸಡನ್ನಾಗಿ ಊದಿಕೊಂಡಾಗ ಜನರ ಬಾಯಿಗೆ ತುತ್ತಾಗುತ್ತಾರೆ. ಪರಿಣಿತಿ ಚೋಪ್ರಾ ಕೂಡ ಈ ಸಮಸ್ಯೆ ಎದುರಿಸಿದ್ದಾರೆ. ಇಮ್ತಿಯಾಜ್ ಅಲಿ ಅವರ ಚಿತ್ರ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ(Parineethi Chopra) ಅವರು ತಮ್ಮ ತೂಕ ಹೆಚ್ಚಳದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದರು. ಈ ಚಿತ್ರಕ್ಕಾಗಿ ಅವರು 16 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ.

VISTARANEWS.COM


on

Parineethi Chopra
Koo

ಮುಂಬೈ : ಇತ್ತೀಚೆಗೆ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾದ ಇಮ್ತಿಯಾಜ್ ಅಲಿ ಅವರ ಚಿತ್ರ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದಲ್ಲಿ ನಟಿಸಿದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ(Parineethi Chopra) ಅವರು ತಮ್ಮ ತೂಕ ಹೆಚ್ಚಳದಿಂದ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದರು. ಇದೀಗ ಅವರು ತಮ್ಮ ತೂಕ ಹೆಚ್ಚಳಕ್ಕೆ ಸಂಬಂಧಪಟ್ಟ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನಟಿ ನಟಿ ಪರಿಣಿತಿ ಚೋಪ್ರಾ ಅವರು ಚಿತ್ರದ ಯಶಸ್ಸಿನ ನಂತರ ಸುದ್ದಿ ಮಾಧ್ಯಮವೊಂದರಲ್ಲಿ ಸಂದರ್ಶನ ನೀಡಿದ್ದು, ಅದರಲ್ಲಿ ಅವರು ಸಿನಿಮಾ ತಾರೆಯರು ಸಿನಿಮಾದ ಪಾತ್ರಕ್ಕಾಗಿ ತೂಕ ಹೆಚ್ಚು-ಕಡಿಮೆ ಮಾಡಿಕೊಳ್ಳುವುದಾಗಿ ತಿಳಿಸಿ ಹೇಳಿದ್ದಾರೆ. ಅವರು ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದಲ್ಲಿ ಅಮರ್ ಜೋತ್ ಕೌರ್ ಪಾತ್ರದಲ್ಲಿ ನಟಿಸಿದ್ದು, ಇದರಲ್ಲಿ ಅವರು ದಪ್ಪವಾಗಿ ಕಾಣಿಸುತ್ತಿದ್ದರು. ಆದರೆ ಈ ಚಿತ್ರಕ್ಕಾಗಿ ಅವರು 16 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರಂತೆ.

‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಯಶಸ್ಸಿನ ನಂತರ ನಟಿ 15 ದಿನಗಳ ವಿರಾಮ ತೆಗೆದುಕೊಂಡು ತಮ್ಮ ಪತಿ ರಾಜಕಾರಣಿ ರಾಘವ್ ಚಡ್ಡಾ ಅವರೊಂದಿಗೆ ಸಮಯ ಕಳೆದಿದ್ದಾರಂತೆ. ಇದೀಗ ಮತ್ತೆ ತಮ್ಮ ನಟನಾ ಕ್ಷೇತ್ರಕ್ಕೆ ಹಿಂತಿರುಗಿದ ನಟಿ ಉತ್ತಮ ಚಿತ್ರಗಳನ್ನು ನೀಡುವ ಯೋಜನೆಯಲ್ಲಿದ್ದಾರಂತೆ. ಆದರೆ ತನ್ನಿಂದ ಅಭಿಮಾನಿಗಳು ಇನ್ನು ಉತ್ತಮವಾದ ಅಭಿನಯವನ್ನು ಬಯಸುತ್ತಿದ್ದಾರೆ. ಹಾಗಾಗಿ ತಾನು ಇನ್ನೂ ಹೆಚ್ಚು ಕಲಿಯಬೇಕಿದೆ ಎಂಬುದಾಗಿ ತಿಳಿಸಿದ್ದಾರೆ.

ಅಲ್ಲದೇ ‘ ಚಮ್ಕಿಲಾ’ ಚಿತ್ರಕ್ಕಾಗಿ ಅವರು 100 ಪ್ರತಿಶತದಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ತಿಳಿಸಿದ್ದಾರೆ. ಈ ಚಿತ್ರಕ್ಕಾಗಿ ನಟಿ ತಾವು16 ಕೆಜಿ ಹೆಚ್ಚಿಸಿದ್ದು, ಇಂತಹ ಕೆಲಸ ಮಾಡಲು ಒಂದು ಎರಡು ನಟಿಯರು ಬಿಟ್ಟರೆ ಬೇರೆ ಯಾರು ಮಾಡಲು ಸಿದ್ಧರಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಹಾಗೇ ಈ ಚಿತ್ರಕ್ಕಾಗಿ ಅವರು 2 ವರ್ಷಗಳಿಂದ ಬೇರೆ ಯಾವ ಕೆಲಸ ಮಾಡಲಿಲ್ಲ. ಸೆಟ್ ನಲ್ಲಿ ಲೈವ್ ಆಗಿ ಹಾಡುವುದು, ಧ್ವನಿ ನೀಡುವಂತಹ ಕೆಲಸ ಮಾಡಿದ್ದು, ಈ ಕೆಲಸವನ್ನು ಹೆಚ್ಚಿನ ಸಿನಿಮಾ ತಾರೆಯರು ಸ್ಟುಡಿಯೊದಲ್ಲಿ ಮಾಡುತ್ತಾರೆ. ಈ ರೀತಿ ರಿಸ್ಕ್ ಯಾರು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ ಕೆಲಸಗಳನ್ನು ಮಾಡುವುದರಿಂದ ಇದು ನಮಗೆ ಹೆಚ್ಚು ಪ್ರೇರಣೆ ನೀಡುತ್ತದೆ ಮತ್ತು ಚಿತ್ರತಂಡ ನಮ್ಮನ್ನು ಸ್ವೀಕರಿಸುತ್ತಾರೆ ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾಗೆ ದುಬಾರಿ ಗಿಫ್ಟ್‌ ನೀಡಿದ ಪತಿ ಜಹೀರ್ ಇಕ್ಬಾಲ್!

ಇಮ್ತಿಯಾಜ್ ಅಲಿ ನಿರ್ದೇಶನದ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರವು ಪಂಜಾಬಿ ಗಾಯಕ ಅಮರ್ ಸಿಂಗ್ ಚಮ್ಕಿಲಾ ಅವರ ದಂತಕಥೆಯನ್ನು ಆಧರಿಸಿದೆ. ಅವರ ಹಾಡುಗಳಲ್ಲಿನ ಸಾಹಿತ್ಯದಿಂದ ಅವರನ್ನು ಹಾಡುಹಗಲಿನಲ್ಲಿಯೇ ಗುಂಡಿಕ್ಕಿ ಕೊಲ್ಲಲಾಯಿತು. ಅವರ ಜೊತೆ ಅವರ ಪತ್ನಿ ಅಮರ್ ಜೋತ್ ಅವರನ್ನು ಕೂಡ ಕೊಲ್ಲಲಾಗುತ್ತದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರು ಅಮರ್ ಜೋತ್ ಪಾತ್ರದಲ್ಲಿ ನಟಿಸಿದರೆ, ದಿಲ್ಜಿತ್ ದೋಸಾಂಜ್ ಅಮರ್ ಸಿಂಗ್ ಚಮ್ಕಿಲಾ ಪಾತ್ರ ಮಾಡಿದ್ದಾರೆ. ಈ ಚಿತ್ರ ಸೂಪರ್ ಹಿಟ್ ಆಗಿ ಹೊರಹೊಮ್ಮಿದ್ದು, ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

Continue Reading

Latest

Sonakshi Sinha: ಸೋನಾಕ್ಷಿ ಸಿನ್ಹಾಗೆ ದುಬಾರಿ ಗಿಫ್ಟ್‌ ನೀಡಿದ ಪತಿ ಜಹೀರ್ ಇಕ್ಬಾಲ್!

Sonakshi Sinha: ಮನದನ್ನೆಯ ಮನವೊಲಿಸಲು ಉಡುಗೊರೆ ನೀಡುವುದನ್ನು ನಾವು ನೋಡಿರುತ್ತೇವೆ. ಈಗ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮುಖದಲ್ಲಿ ಕೂಡ ಈ ಗಿಫ್ಟ್ ಪಡೆದ ಖುಷಿ ಕಾಣಿಸುತ್ತಿದೆ. ಬಾಲಿವುಡ್‌ನ ಜನಪ್ರಿಯ ನಟಿ ಸೋನಾಕ್ಷಿ ಸಿನ್ಹಾ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಮಯದಲ್ಲಿ ಜಹೀರ್ ಇಕ್ಬಾಲ್ ಪತ್ನಿಗೆ ಐಷಾರಾಮಿ BMW i7 ಕಾರ್ ಉಡುಗೊರೆ ನೀಡಿದ್ದಾರೆ.ಈ ಕಾರಿನಲ್ಲಿಯೇ ಕುಳಿತು ಪತಿ-ಪತ್ನಿಯರು ಆರತಕ್ಷತೆಗೆ ಆಗಮಿಸಿದ್ದಾರಂತೆ.

VISTARANEWS.COM


on

Sonakshi Sinha
Koo

ಮುಂಬೈ: ಬಾಲಿವುಡ್‌ನ ಜನಪ್ರಿಯ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಕೊನೆಗೂ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ಇದೀಗ, ವಿವಾಹ ಸಂದರ್ಭದಲ್ಲಿ ಫೋಟೋಗಳು ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಒಂದು ಕ್ಲಿಪ್‌ನಲ್ಲಿ, ಸಿನ್ಹಾ ಅವರು ಐಷಾರಾಮಿ BMW i7 ಕಾರಿನೊಳಗೆ ಕುಳಿತಿರುವುದು ಕಂಡುಬಂದಿದೆ. ಇದನ್ನು ಪತಿ ಇಕ್ಬಾಲ್ ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಬ್ಯಾಟರಿ ಚಾಲಿತ ಐಷಾರಾಮಿ ಸೆಡಾನ್ i7 ಆರಂಭಿಕ ಬೆಲೆ ರೂ 2.03 ಕೋಟಿ(ಎಕ್ಸ್ ಶೋ ರೂಮ್‌ ಬೆಲೆ)ಯಷ್ಟಿದೆ. ಆದರೆ ಟಾಪ್ ಮಾಡೆಲ್ ರೂ 2.50 ಕೋಟಿ (ಎಕ್ಸ್ ಶೋ ರೂಂ)ವರೆಗೆ ಇದೆಯಂತೆ.  ಆದರೆ ದಬಾಂಗ್‌ ನಟಿಗೆ ಪತಿ ಯಾವ ಮಾದರಿಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬುದು ಇನ್ನೂ ದೃಢಪಟ್ಟಿಲ್ಲ.

ವೀಡಿಯೊದಲ್ಲಿ, ಸಿನ್ಹಾ ಬಿಳಿ ಬಣ್ಣದ EVಯಲ್ಲಿ ತನ್ನ ಜೀವನ ಸಂಗಾತಿಯೊಂದಿಗೆ ರೈಡ್ ಗೆ ಹೊರಡುವ ಆನಂದದ ಕ್ಷಣಗಳನ್ನು ಕಾಣಬಹುದು.  ಮುಂಬೈನ ಬಾಸ್ಟಿಯನ್‌ನಲ್ಲಿ ಅವರು ಆರತಕ್ಷತೆಗೆ ಆಗಮಿಸುತ್ತಿದ್ದ ಸಮಯದಲ್ಲಿ ಕ್ಲಿಪ್ ಅನ್ನು ರೆಕಾರ್ಡ್ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

ಅತ್ಯಾಧುನಿಕ ವಿನ್ಯಾಸದ ಕಾರ್ ಇದಾಗಿದ್ದು,  ಕಂಪನಿಯ ಸಿಗ್ನೇಚರ್ ಶೈಲಿಯ ಪ್ರಕಾಶಿತ ಕಿಡ್ನಿ-ಆಕಾರದ ಗ್ರಿಲ್ ಹಾಗು LED ಹೆಡ್‌ಲೈಟ್ ಸೆಟಪ್ ಗಳನ್ನು ಮುಂಭಾಗದಲ್ಲಿ ಹೊಂದಿದೆ. DRL ಗಳ ಪ್ರಭಾವಶಾಲಿ ಸೆಟ್‌ನೊಂದಿಗೆ ಜೋಡಿಸಲಾಗಿದೆ. ಪ್ರಸ್ತುತ ಮಾರಾಟದಲ್ಲಿರುವ G70 ಪೀಳಿಗೆಯ 7-ಸರಣಿಯಂತೆಯೇ EV ವಿನ್ಯಾಸವನ್ನು ಹಂಚಿಕೊಳ್ಳುತ್ತದೆ.

Continue Reading

Latest

Sonakshi Sinha: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

Sonakshi Sinha: ಜಹೀರ್ ಇಕ್ಬಾಲ್ ಜೊತೆ ಪುತ್ರಿ ಸೋನಾಕ್ಷಿ ಸಿನ್ಹಾ ಮದುವೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ತಂದೆ ಶತ್ರುಘ್ನ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ. ದ್ವೇಷವನ್ನು ಹರಡುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ವಿವಾಹವು ಇಬ್ಬರು ವ್ಯಕ್ತಿಗಳ ನಡುವಿನ ವೈಯಕ್ತಿಕ ನಿರ್ಧಾರ. ಮಧ್ಯಪ್ರವೇಶಿಸಲು ಯಾರಿಗೂ ಹಕ್ಕಿಲ್ಲ. ಈ ಪ್ರತಿಭಟನೆ ಮೊದಲಾದವು ನಿರುದ್ಯೋಗಿಗಳ ಕೆಲಸ. ಜೀವನದಲ್ಲಿ ಉಪಯೋಗಕ್ಕೆ ಬರುವಂತಹ ಕೆಲಸದಲ್ಲಿ ತೊಡಗಿಕೊಳ್ಳಿ. ಇದಕ್ಕಿಂತ ಹೆಚ್ಚಿನದನ್ನು ಹೇಳಲು ನನಗೆ ಸಾಧ್ಯವಿಲ್ಲ ಎಂದು ಹಿರಿಯ ನಟ ಬೇಸರ ವ್ಯಕ್ತಪಡಿಸಿದರು.

VISTARANEWS.COM


on

Sonakshi Sinha
Koo

ಮುಂಬೈ: ಜಹೀರ್ ಇಕ್ಬಾಲ್ ಜೊತೆ ಪುತ್ರಿ ಸೋನಾಕ್ಷಿ ಸಿನ್ಹಾ (Sonakshi Sinha) ಮದುವೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ವಿರುದ್ಧ ತಂದೆ ಶತ್ರುಘ್ನ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ. ದ್ವೇಷವನ್ನು ಹರಡುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಮಗಳು ಯಾವುದೇ ತಪ್ಪು ಮಾಡಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಜೂನ್ 23ರಂದು ಮುಂಬೈಯಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಸೋನಾಕ್ಷಿ ಸಿನ್ಹಾ, ಜಹೀರ್ ಇಕ್ಬಾಲ್ ಜೊತೆ ವಿವಾಹಬಂಧನಕ್ಕೆ ಸಾಕ್ಷಿಯಾಗಿದ್ದರು. ಅವರ ಮದುವೆ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಶತ್ರುಘ್ನ ಸಿನ್ಹಾ ಅವರ ತವರು ಬಿಹಾರದ ಪಾಟ್ನಾದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಹಿಂದೂ ಶಿವ ಭವಾನಿ ಸೇನೆ ಹೆಸರಿನ ಸಂಘಟನೆ ಈ ಅಂತಧರ್ಮಿಯ ವಿವಾಹವನ್ನು “ಲವ್ ಜಿಹಾದ್’ ಎಂದು ಕರೆದಿದೆ ಹಾಗೂ ರಾಜಧಾನಿಗೆ ಎಂದಿಗೂ ಭೇಟಿ ನೀಡದಂತೆ ಎಚ್ಚರಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶತ್ರುಘ್ನ ಸಿನ್ಹಾ “ವಿವಾಹವು ಇಬ್ಬರು ವ್ಯಕ್ತಿಗಳ ನಡುವಿನ ವೈಯಕ್ತಿಕ ನಿರ್ಧಾರ. ಮಧ್ಯಪ್ರವೇಶಿಸಲು ಯಾರಿಗೂ ಹಕ್ಕಿಲ್ಲ. ಈ ಪ್ರತಿಭಟನೆ ಮೊದಲಾದವು ನಿರುದ್ಯೋಗಿಗಳ ಕೆಲಸ. ಜೀವನದಲ್ಲಿ ಉಪಯೋಗಕ್ಕೆ ಬರುವಂತಹ ಕೆಲಸದಲ್ಲಿ ತೊಡಗಿಕೊಳ್ಳಿ. ಇದಕ್ಕಿಂತ ಹೆಚ್ಚಿನದನ್ನು ಹೇಳಲು ನನಗೆ ಸಾಧ್ಯವಿಲ್ಲ’ ಎಂದು ಹಿರಿಯ ನಟ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ವಿವಾಹದ ಬಳಿಕ ಸೋನಾಕ್ಷಿ ಹಾಗೂ ಜಹೀರ್ ದಂಪತಿ ಬಾಂದ್ರಾ ನಿವಾಸದಲ್ಲಿ ಆತ್ಮೀಯ ಸಮಾರಂಭ ಆಯೋಜಿಸಿದ್ದರು. ಬಳಿಕ ಮದುವೆಯ ಚಿತ್ರಗಳನ್ನು ಆನ್ ಲೈನ್ ನಲ್ಲಿ ಹಂಚಿಕೊಂಡು “ಏಳು ವರ್ಷಗಳ ಹಿಂದೆ ಇದೇ ದಿನದಂದು ನಾವು ಪರಸ್ಪರರ ಕಣ್ಣುಗಳಲ್ಲಿ ಪ್ರೀತಿಯನ್ನು ಕಂಡುಕೊಂಡೆವು. ಅದನ್ನು ಶಾಶ್ವತವಾಗಿ ಹಿಡಿದಿಡಲು ವಿವಾಹವಾದೆವು. ಇಂದು ಆ ಪ್ರೀತಿ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ವಿಜಯಿಯಾಗಲು ಮಾರ್ಗದರ್ಶನ ನೀಡಿದೆ. ಎರಡೂ ಕುಟುಂಬಗಳ ಆರ್ಶೀವಾದದೊಂದಿಗೆ ನಾವು ಗಂಡ ಹೆಂಡತಿಯರಾಗಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

Continue Reading
Advertisement
Parliament Sessions
ದೇಶ9 mins ago

Parliament Sessions: ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಸದನ; ಶೇಕ್‌ ಹ್ಯಾಂಡ್‌ ಮಾಡಿದ ಪ್ರಧಾನಿ ಮೋದಿ, ರಾಹುಲ್‌

Pavithra Gowda lipstick case Notice to PSI
ಕ್ರೈಂ25 mins ago

Pavithra Gowda: ಪವಿತ್ರಾಗೆ ಲಿಪ್‌ಸ್ಟಿಕ್‌ ಹಚ್ಚಲು ಅವಕಾಶ ಮಾಡಿಕೊಟ್ಟಿದ್ದ ಮಹಿಳಾ `PSI’ಗೆ ನೋಟಿಸ್‌!

PGCET 2024
ಕರ್ನಾಟಕ35 mins ago

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

Liquor Price karnataka
ಕರ್ನಾಟಕ37 mins ago

Liquor Price Karnataka: ಶ್ರೀಮಂತರಿಗೆ ಮತ್ತು, ಬಡವರಿಗೆ ಕುತ್ತು! ಪ್ರೀಮಿಯಂ ಮದ್ಯ ದರ ಇಳಿಕೆ, ಬಡವರ ಎಣ್ಣೆ ರೇಟ್‌ ಏರಿಕೆ?

Lok Sabha Speaker
ದೇಶ52 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್56 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ1 hour ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ1 hour ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ1 hour ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್1 hour ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌