Sushant Singh Rajput: ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನ ಶುರು ಮಾಡಿದ ಸಹೋದರಿ! - Vistara News

ಬಾಲಿವುಡ್

Sushant Singh Rajput: ಸುಶಾಂತ್‌ ಸಿಂಗ್‌ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನ ಶುರು ಮಾಡಿದ ಸಹೋದರಿ!

Sushant Singh Rajput: ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸುಶಾಂತ್‌ ಸಿಂಗ್‌ ಅವರ ಪರವಾಗಿ ನಿಲ್ಲುತ್ತಾರೆ. ಇದೀಗ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಸಹೋದರನ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನವನ್ನು (online campaig) ಪ್ರಾರಂಭಿಸಿದ್ದಾರೆ. ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

VISTARANEWS.COM


on

Sushant Singh Rajput
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಸುಶಾಂತ್‌ ಸಿಂಗ್‌ (Sushant Singh Rajput) ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸುಶಾಂತ್‌ ಸಿಂಗ್‌ ಅವರ ಪರವಾಗಿ ನಿಲ್ಲುತ್ತಾರೆ. ಇದೀಗ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ( Shweta Singh Kirti ) ಸಹೋದರನ ಸಾವಿಗೆ ನ್ಯಾಯಕ್ಕಾಗಿ ಆನ್‌ಲೈನ್ ಅಭಿಯಾನವನ್ನು (online campaig) ಪ್ರಾರಂಭಿಸಿದ್ದಾರೆ. ಇದಕ್ಕೂ ಮುಂಚೆ ಶ್ವೇತಾ ಸಿಂಗ್ ಕೀರ್ತಿ ಅವರು ಹಲವು ಅಧಿಕಾರಿಗಳಲ್ಲಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದರು.

ಇದೀಗ ಶ್ವೇತಾ ಸಿಂಗ್ ಕೀರ್ತಿ ಹೊಸ ಅಭಿಯಾನ ಶುರು ಮಾಡಿದ್ದಾರೆ. ಈ ಬಗ್ಗೆ ಇನ್‌ಸ್ಟಾದಲ್ಲಿ ‘ನ್ಯಾನಿ 4 ಎಸ್‌ಎಸ್‌ಆರ್ ಜಾನ್ ಆಂದೋಲನ್’ (Nany 4 SSR Jan Andolan) ಎಂದು ಘೋಷಿಸಿದರು. ಈ ಅಭಿಯಾನದ ಭಾಗವಾಗಿ, ಪ್ರತಿಯೊಬ್ಬರೂ ತಮ್ಮ ಮಣಿಕಟ್ಟಿಗೆ ಅಥವಾ ಹಣೆಯ ಮೇಲೆ ಕೆಂಪು ಬಟ್ಟೆಯನ್ನು ಕಟ್ಟಿಕೊಳ್ಳಬೇಕೆಂದು ಶ್ವೇತಾ ಒತ್ತಾಯಿಸಿದ್ದಾರೆ. ಜತೆಗೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ನಟನಿಗೆ ನ್ಯಾಯ ನೀಡುವಂತೆ ವಿನಂತಿಸಿದ್ದಾರೆ, ಪೋಸ್ಟ್‌ನ ಶೀರ್ಷಿಕೆಯಲ್ಲಿ ʻʻಸಿಬಿಐ ತನಿಖೆಯನ್ನು ಇನ್ನಷ್ಟು ಕಠಿಣಗೊಳಿಸಬೇಕು. ಮತ್ತು ಸತ್ಯವನ್ನು ಬಯಲಿಗೆ ತರಬೇಕುʼʼʼಎಂದು ಆಗ್ರಹಿಸಿದ್ದಾರೆ.

ಏನಿದು ಅಭಿಯಾನ?

ಪೋಸ್ಟ್‌ ಜತೆಗೆ ಶ್ವೇತಾ ಸಿಂಗ್ ಕೀರ್ತಿ ಈ ರೀತಿ ಬರೆದುಕೊಂಡಿದ್ದಾರೆ. ʻಸುಶಾಂತ್‌ ಮರಣವಾಗಿ 4 ವರ್ಷಗಳು ಕಳೆದಿವೆ. ವಿಚಾರಣೆಯನ್ನು ತ್ವರಿತಗೊಳಿಸುವಂತೆ ಮತ್ತು ಸತ್ಯವನ್ನು ಬಯಲಿಗೆ ತರುವಂತೆ ನಾನು ಸಿಬಿಐಗೆ ಮನವಿ ಮಾಡುತ್ತೇನೆ. ನಾವು ಒಗ್ಗಟ್ಟಿನಿಂದ ಒಟ್ಟಿಗೆ ನಿಲ್ಲೋಣ. ನಿಮ್ಮ ಮಣಿಕಟ್ಟಿಗೆ ಅಥವಾ ಹಣೆಯ ಮೇಲೆ ಕೆಂಪು ಬಟ್ಟೆಯನ್ನು ಕಟ್ಟಿಕೊಳ್ಳಿ, ಆ ಕ್ಷಣಗಳನ್ನು ಸೆರೆಹಿಡಿಯಿರಿ ಮತ್ತು #Nyay4SSRJanAndolan ಹ್ಯಾಷ್‌ ಟ್ಯಾಗ್‌ ಬಳಿಸಿ ವಿಡಿಯೊ ಶೇರ್‌ ಮಾಡಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sushant Singh Rajput: ಪುಸ್ತಕದ ಮೂಲಕ ಸುಶಾಂತ್‌ ನೆನಪುಗಳನ್ನು ತೆರೆದಿಟ್ಟ ಸಹೋದರಿ!

ಪೋಸ್ಟ್ ಹಂಚಿಕೊಂಡ ನಂತರ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. “ಸುಶಾಂತ್ ಸಿಂಗ್ ರಜಪೂತ್ ಅವರಿಗೆ ನ್ಯಾಯ ಸಿಗಬೇಕು. ನಾವು ನಿಮ್ಮೊಂದಿಗಿದ್ದೇವೆʼʼಎಂದು ಒಬ್ಬರು ಬರೆದಿದ್ದಾರೆ. “ಹಣಕ್ಕಿಂತ ಮಾನವೀಯತೆ ದೊಡ್ಡದುʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “4 ವರ್ಷಗಳು ಕಳೆದೇ ಹೋಯ್ತು. ಈ ಪ್ರಕರಣ ನಿನ್ನೆ ಮೊನ್ನೆ ಆದಂತೆ ಭಾಸವಾಗುತ್ತಿದೆ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಈ ಮಾರ್ಚ್‌ನಲ್ಲಿಯೂ ಶ್ವೇತಾ ಅವರು ವಿಡಿಯೊ ಮೂಲಕ ಹೇಳಿಕೆಯನ್ನು ನೀಡಿದ್ದರು. ಸಹೋದರನ ಸಾವಿನ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿಯೂ ವಿನಂತಿಸಿದ್ದರು. ʻʻಸಹೋದರ ನಿಧನರಾಗಿ 45 ತಿಂಗಳುಗಳು ಕಳೆದಿವೆ. ಆದರೆ ತನಿಖಾ ಸಂಸ್ಥೆಯಿಂದ ಇನ್ನೂ ಯಾವುದೇ ಅಪ್‌ಡೇಟ್‌ಗಳು ಬಂದಿಲ್ಲ. ಪ್ರಧಾನಿ ಮೋದಿಯವರ ಸಹಾಯ ಬೇಕಿದೆʼʼಎಂದು ಹೇಳಿದ್ದರು.

ಸುಶಾಂತ್ ಬಗ್ಗೆ ಪುಸ್ತಕ ಬರೆದ ಶ್ವೇತಾ ಸಿಂಗ್ ಕೀರ್ತಿ

ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಪುಸ್ತಕಲ್ಲಿ ಸುಶಾಂತ್‌ ಅವರ ವೃತ್ತಿ ಜೀವನ, ವೈಯಕ್ತಿಕ ಜೀವನ ಬಗ್ಗೆ ಬರೆದುಕೊಂಡಿದ್ದಾರೆ. ʻಸುಶಾಂತ್ ಬಾಲಿವುಡ್‌ನಲ್ಲಿ ಬ್ಯುಸಿಯಾಗಿಬಿಟ್ಟಿದ್ದ. ನನಗೆ ಅವನನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲ್ಲಿಲ್ಲ. 2014 ರಿಂದ 2017 ರವರೆಗೆ ನಾನು ಪ್ರತಿ ವರ್ಷ ಭಾರತಕ್ಕೆ ತೆರಳಿ ಅವನನ್ನು ಭೇಟಿಯಾಗುತ್ತಿದ್ದೆ. ದುರದೃಷ್ಟವಶಾತ್, 2018 ಮತ್ತು 2019ರಲ್ಲಿ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಜನವರಿ 2020ರಲ್ಲಿ ಪ್ಲ್ಯಾನ್‌ ಕೂಡ ಮಾಡಿಕೊಂಡಿದ್ದೆ. ಕೊನೆಗೂ ಅವನನ್ನು ಮೀಟ್‌ ಆಗಲು ಆಗಲೇ ಇಲ್ಲ. 2020 ರ ಜೂನ್‌ 14ರಂದು ಅವನು ಬಾರದ ಲೋಕಕ್ಕೆ ಹೋಗೆ ಬಿಟ್ಟಿದ್ದ. ಸಾವಿಗೂ ಮುಂಚೆ ನಾಲ್ಕು ದಿನಗಳ ಮೊದಲು ನಾನು ಕಾಲ್‌ ಮಾಡಿದ್ದೆ, ಅಮೆರಿಕಾಗೆ ಬರುವಂತೆ ಹೇಳಿದ್ದೆ. ಜೂನ್‌ 13ರ ರಾತ್ರಿ ನನಗೆ ಸುಶಾಂತ್‌ ಮೃತಪಟ್ಟ ಸುದ್ದಿ ತಿಳಿಯಿತು. ನಾನು ಕೂಗಾಡಲಿಲ್ಲ. ಅಳಲಿಲ್ಲ. ಅಲ್ಲಿಯೇ ಆಘಾತದಲ್ಲಿ ಕುಸಿದು ಬಿದ್ದೆʼʼಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Sushant Singh Rajput case: ನಟಿ ರಿಯಾ ಚಕ್ರವರ್ತಿಗೆ ಬಿಗ್ ರಿಲೀಫ್! ಬೇಲ್ ಪ್ರಶ್ನಿಸಲ್ಲ ಎಂದ ಕೇಂದ್ರ ಸರ್ಕಾರ

ದೇಶಾದ್ಯಂತ ಭಾರಿ ಆಘಾತ

ಸುಶಾಂತ್‌ ಸಿಂಗ್‌ ಅವರು ʻಕಾಯ್‌ ಪೋ ಚೆʼ, ʻಎಂಎಸ್ ಧೋನಿʼ, ʻದಿ ಅನ್‌ ಟೋಲ್ಡ್ ಟೇಲ್ʼ, ʻಕೇದಾರನಾಥ್ʼ ಮತ್ತು ʻಚಿಚೋರೆʼಯಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು. ಸುಶಾಂತ್ ಅವರ ವೈವಿಧ್ಯಮಯ ಸಿನಿಮಾ ಜೀವನ 2020 ರಲ್ಲಿ ಕೊನೆಗೊಂಡಿತು. 2020ರ ಜೂನ್ 14ರಂದು ಬಾಂದ್ರಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಅವರ ವಯಸ್ಸು 34 ಅಷ್ಟೇ. ಈ ಸಾವು ದೇಶಾದ್ಯಂತ ಭಾರಿ ಆಘಾತವನ್ನುಂಟು ಮಾಡಿತ್ತು.

ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಬಗ್ಗೆ ಹಲವಾರು ಅನುಮಾನಗಳು ಇದ್ದವು. ಚಿತ್ರರಂಗದಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತದಿಂದ ಅವರಿಗೆ ಅನ್ಯಾಯವಾಗುತ್ತಿದೆ. ಆ ಕಾರಣಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎನ್ನುವುದು ಒಂದು ಅನುಮಾನವಾದರೆ, ಯಾರೋ ಆತ್ಮೀಯರೇ ಕೊಲೆ ಮಾಡಿದ್ದಾರೆ ಎಂಬ ವಾದವೂ ಇತ್ತು. ಸಾವಿನ ಸುತ್ತ ಮಾದಕ ವ್ಯಸನ, ಡ್ರಗ್ಸ್‌ ಜಾಲ ಮತ್ತು ಅಕ್ರಮ ಹಣ ವರ್ಗಾವಣೆ ಹೀಗೆ ಹಲವು ಸಂಶಯದ ಹುತ್ತಗಳು ಬೆಳೆದಿದ್ದವು. ಸಿಬಿಐ, ಇ.ಡಿ, ಎನ್‌ಸಿಬಿ ಸೇರಿದಂತೆ ಹಲವು ತನಿಖಾ ತಂಡಗಳು ನಾನಾ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿವೆ. ಪೋಸ್ಟ್‌ ಮಾರ್ಟಂ ವರದಿಗಳ ಪ್ರಕಾರ ಸುಶಾಂತ್‌ ಆತ್ಮಹತ್ಯೆಯೇ ಹೌದಾಗಿದ್ದರೂ ಅದರ ಹಿಂದಿನ ಶಕ್ತಿಗಳು, ಸಿನಿಮಾ ರಾಜಕಾರಣ ಹೊರಬರಬೇಕು ಎನ್ನುವುದು ಅಭಿಮಾನಿಗಳ ಆಗ್ರಹವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Alia Bhatt Deep Fake: ಆಲಿಯಾ ಭಟ್‌ ಡೀಪ್‌ಫೇಕ್‌ ವಿಡಿಯೊ ವೈರಲ್‌! ಅಸಲಿ ಮುಖ ಯಾರದ್ದು?

Alia Bhatt Deep Fake: ಆಲಿಯಾ ಭಟ್ ಅವರು ಡೀಪ್​ಫೇಕ್ ವಿಡಿಯೊಗೆ ಬಲಿ ಆಗುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಬೇರೆ ವಿಡಿಯೊ ಹಾಗೂ ಫೋಟೋಗಳಿಗೆ ಆಲಿಯಾ ಮುಖವನ್ನು ಅಂಟಿಸುವ ಕೆಲಸ ಮಾಡಲಾಗಿತ್ತು. ಇದೀಗ ಮತ್ತೆ ಆಲಿಯಾ ಅವರ ಈ ಡೀಪ್‌ಫೇಕ್‌ ವಿಡಿಯೊ ವೈರಲ್‌ ಆಗಿದ್ದು ಅನೇಕರು ಈ ಬಗ್ಗೆ ಖಂಡಿಸಿದ್ದಾರೆ.

VISTARANEWS.COM


on

Alia Bhatt Deep Fake Wamiqa Gabbi face replaced
Koo

ಬೆಂಗಳೂರು: ಭಾರತೀಯರಲ್ಲಿ (indian’s) ಶೇ. 75ರಷ್ಟು ಮಂದಿ ಡೀಪ್‌ಫೇಕ್‌ (Deep Fakes) ಪಿಡುಗಿಗೆ ಒಳಗಾಗಿದ್ದು, ಶೇಕಡಾ 22ರಷ್ಟು ಮಂದಿಗೆ ಮಾತ್ರ ಇದು ಗಮನಕ್ಕೆ ಬಂದಿದೆ ಎಂದು ಈ ಹಿಂದೆ ವರದಿಯಾಗಿತ್ತು. ಈ ಡೀಪ್‌ಫೇಕ್‌ಗೆ ಹೆಚ್ಚಾಗಿ ನಟಿಯರು ಒಳಗಾಗುತ್ತಿದ್ದಾರೆ. ಇದೀಗ ಮತ್ತೆ ಆ ಸಾಲಿಗೆ ಆಲಿಯಾ ಭಟ್‌ (Alia Bhatt Deep Fake) ಸೇರಿದ್ದಾರೆ. ನಟಿ ವಾಮಿಕಾ ಗಬ್ಬಿ (Wamiqa Gabbi) ವಾರದ ಹಿಂದೆ ಇನ್‌ಸ್ಟಾದಲ್ಲಿ ವಿಡಿಯೊವೊಂದನ್ನು ಶೇರ್‌ ಮಾಡಿಕೊಂಡಿದ್ದರು. ಕೆಂಪು ಸೀರೆಯಲ್ಲಿ ನಟಿ ಹಾಟ್‌ ಆಗಿ ಕಂಡಿದ್ದರು. ಇದೀಗ ಈ ವಿಡಿಯೊಗೆ ಡಿಜಿಟಲ್ ಮ್ಯಾನ್ಯುಪಲೇಷನ್ ಟೆಕ್ನಾಲಜಿ ಬಳಸಿ ವಾಮಿಖಾ ಅವರ ಮುಖಕ್ಕೆ ಆಲಿಯಾ ಮುಖವನ್ನು ಅಂಟಿಸಲಾಗಿದೆ ಎಂದು ವರದಿಯಾಗಿದೆ. ಇದೀಗ ಆಲಿಯಾ ಅವರ ಈ ಡೀಪ್‌ಫೇಕ್‌ ವಿಡಿಯೊ ವೈರಲ್‌ ಆಗಿದ್ದು ಅನೇಕರು ಈ ಬಗ್ಗೆ ಖಂಡಿಸಿದ್ದಾರೆ.

ಈ ವಿಡಿಯೊದಲ್ಲಿ ಆಲಿಯಾ ಅವರನ್ನು ನೋಡಿದಂತೇ ಆಗುತ್ತಿದೆ. ಡೀಪ್‌ಫೇಕ್ ವೀಡಿಯೊವನ್ನು ಅನ್‌ಫಿಕ್ಸ್‌ ಫೇಸ್‌ ಎಂಬ ಖಾತೆ ಶೇರ್‌ ಮಾಡಿಕೊಂಡಿದೆ. ವಿಡಿಯೊದ ಜತೆಗೆ, “ಆಲಿಯಾಭಟ್ ಆಫ್-ಸ್ಕ್ರೀನ್” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ಡೀಪ್‌ಫೇಕ್ ವಿಡಿಯೊದಲ್ಲಿ, ಆಲಿಯಾ ಕೆಂಪು ಸೀರೆಯನ್ನು ಧರಿಸಿ ಕೂದಲು ಹೆಣೆದು ನೆಲದ ಮೇಲೆ ಕುಳಿತಿದ್ದಾರೆ. ಈ ಹಿಂದೆ, ಆಮೀರ್ ಖಾನ್ ಕೂಡ ಈ ಡೀಪ್‌ಫೇಕ್‌ಗಳಿಗೆ ಒಳಗಾಗಿದ್ದರು. ಅಲ್ಲಿ ನಟ ರಾಜಕೀಯ ಪಕ್ಷವನ್ನು ಪ್ರಚಾರ ಮಾಡುವಂತಹ ವೀಡಿಯೊ ವೈರಲ್ ಆಗಿತ್ತು. ಇದಾದ ಬಳಿಕ ಆಮೀರ್‌ ಸೈಬರ್ ಕ್ರೈಮ್ ಸೆಲ್‌ಗೆ ದೂರು ಸಲ್ಲಿಸಿದ್ದರು.

ಶೇ. 57ರಷ್ಟು ಸೆಲೆಬ್ರಿಟಿಗಳು

ಡೀಪ್‌ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು ಸೆಲೆಬ್ರಿಟಿಗಳಾಗಿದ್ದಾರೆ. ವಿಡಿಯೊ ಚಿತ್ರ ಅಥವಾ ಆಡಿಯೊವನ್ನು ನೋಡಿ ಅದು ನಿಜವೆಂದು ಭಾವಿಸಿ ಶೇ. 31 ರಷ್ಟು ಮಂದಿ ಹಣವನ್ನು ಕಳೆದುಕೊಂಡಿದ್ದಾರೆ. ಶೇ. 40ರಷ್ಟು ಮಂದಿ ಜನರು ತಮ್ಮ ಧ್ವನಿಯನ್ನು ಕಾಪಿ ಮಾಡಲಾಗಿದೆ. ವೈಯಕ್ತಿಕ ಮಾಹಿತಿ ಅಥವಾ ಹಣದ ಲೆಕ್ಕವನ್ನು ಬಹಿರಂಗಪಡಿಸಲು ತಮಗೆ ತಿಳಿದಿರುವ ಯಾರನ್ನಾದರೂ ದಾರಿತಪ್ಪಿಸಲು ಬಳಸುತ್ತಾರೆ ಎಂದು ಕಂಡುಹಿಡಿಯಲಾಗಿದೆ.

ಇದನ್ನೂ ಓದಿ: Chaithra J Achar: ʼಕನ್ನಡದ ಆಲಿಯಾ ಭಟ್‌ʼ ಚೈತ್ರಾ ಆಚಾರ್ – ಕಿಶನ್ ಬಿಳಗಲಿ ಶೃಂಗಾರ ನೃತ್ಯಕ್ಕೆ ಮನಸೋತ ಫ್ಯಾನ್ಸ್‌!

ವೈರಲ್‌ ವಿಡಿಯೊ

ಆಲಿಯಾ ಭಟ್ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ‘ಜಿಗ್ರಾ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Continue Reading

ಬಾಲಿವುಡ್

Laapataa Ladies: ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ‘ಲಾಪತಾ ಲೇಡೀಸ್’ನಟಿ! ಅಸಲಿ ಸಂಗತಿ ಏನು?

Laapataa Ladies: ಈ ವರ್ಷದ ಮೆಟ್ ಗಾಲಾದ ಥೀಮ್ ʻಸ್ಲೀಪಿಂಗ್ ಬ್ಯೂಟೀಸ್: ರೀವೇಕನಿಂಗ್ ಫ್ಯಾಶನ್” ಮತ್ತು ಡ್ರೆಸ್ ಕೋಡ್ “ದಿ ಗಾರ್ಡನ್ ಆಫ್ ಟೈಮ್” ಆಗಿತ್ತು. ಆಲಿಯಾ ಕೂಡ ಈ ಬಾರಿಯ ಮೆಟ್‌ ಗಾಲಾದಲ್ಲಿ ಕಾಣಿಸಿಕೊಂಡಿದ್ದಾರೆ. ಆಲಿಯಾ ಭಟ್ ಅವರು 2023ರಲ್ಲೂ ಮೆಟ್​ ಗಾಲಾ ಈವೆಂಟ್​​ನಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರು ಮತ್ತೊಮ್ಮೆ ಕೆಂಪು ಹಾಸಿನ ಮೇಲೆ ಕಂಗೊಳಿಸಿದ್ದಾರೆ. ಮೆಟ್​ ಗಾಲಾ (Met Gala 2024) ಪ್ರತಿ ವರ್ಷ ನ್ಯೂಯಾರ್ಕ್​ನಲ್ಲಿ ನಡೆಯುತ್ತದೆ. ಜಗತ್ತಿನ ಹಲವು ಖ್ಯಾತ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗವಹಿಸುತ್ತಾರೆ.

VISTARANEWS.COM


on

Laapataa Ladies Phool At Met Gala At Photoshop
Koo

ಬೆಂಗಳೂರು: ಮೆಟ್​ ಗಾಲಾ (Met Gala 2024) ಪ್ರತಿ ವರ್ಷ ನ್ಯೂಯಾರ್ಕ್​ನಲ್ಲಿ ನಡೆಯುತ್ತದೆ. ಜಗತ್ತಿನ ಹಲವು ಖ್ಯಾತ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಅದ್ಧೂರಿಯಾಗಿಯೇ ಮೆಟ್​ ಗಾಲಾ ಆಯೋಜನೆಗೊಂಡಿದೆ. ಆಲಿಯಾ ಕೂಡ ಟ್ರೆಡಿಷನಲ್ ಲುಕ್​ನಲ್ಲಿ ಎಂಟ್ರಿ ಕೊಟ್ಟಿದ್ದರು. ಆದರೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಸೌಂಡ್‌ ಮಾಡುತ್ತಿರುವ ಫೋಟೊ ಎಂದರೆ , ‘ಲಾಪತಾ ಲೇಡೀಸ್’ (Laapataa Ladies) ನಟಿ ನಿತಾಂಶಿ ಲುಕ್‌. ರೆಡ್‌ ಕಾರ್ಪೆಟ್‌ ಮೇಲೆ ನಿತಾಂಶಿ (Nitanshi Goel) ಹೆಜ್ಜೆ ಹಾಕಿದ್ರಾ? ಎಂಬ ಪ್ರಶ್ನೆ ಈಗ ಉದ್ಭವಾಗಿದೆ. ಅಸಲಿ ಸತ್ಯ ಏನು ಎಂಬುದನ್ನು ತಿಳಿಯಲು ಮುಂದೆ ಓದಿ.

ಆಮೀರ್ ಖಾನ್ ಪ್ರೊಡಕ್ಷನ್ಸ್‌ನ ಅಧಿಕೃತ ಎಕ್ಸ್ ಹ್ಯಾಂಡಲ್ ನಿತಾಂಶಿ ಫೋಟೊವನ್ನು ಶೇರ್‌ ಮಾಡಿಕೊಂಡಿದೆ. ʻಲಾಪತಾ ಲೇಡೀಸ್’ ಚಿತ್ರದಲ್ಲಿ ವಧುವಿನ ಪಾತ್ರ ಮಾಡಿದ್ದ ನಿತಾಂಶಿ ರೆಡ್ ಕಾರ್ಪೆಟ್ ಮೇಲೆ ಅದೇ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಸರಳವಾದ ಕೆಂಪು ಸೀರೆಯನ್ನು ಧರಿಸಿದ್ದರು, ಭುಜದ ಮೇಲೆ ಮೆರೂನ್ ಶಾಲು ಹಾಕಿಕೊಂಡಿದ್ದರು. ಹಣೆಯ ಮೇಲೆ ಬಿಂದಿ, ಸೀರೆಯ ಸೆರೆಗು ತಲೆ ಮೇಲೆ ಹಾಕಿಕೊಂಡು ಹೆಜ್ಜೆ ಹಾಕಿದರು. ಅಸಲಿಗೆ ಇದು ಎಡಿಟೆಡ್‌ ಫೋಟೊ ಎನ್ನಲಾಗಿದೆ.

ಇದನ್ನೂ ಓದಿ: Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

ಆಮೀರ್ ಖಾನ್ ಪ್ರೊಡಕ್ಷನ್ಸ್‌ನ ಅಧಿಕೃತ ಎಕ್ಸ್ ಹ್ಯಾಂಡಲ್ ಪೋಸ್ಟ್‌ ಮಾಡಿ ʻʻಮೆಟ್ ಗಾಲಾ 2024ರ ʻಲಾಪತಾ ಲೇಡೀಸ್’ ಆವೃತ್ತಿಗೆ ಸುಸ್ವಾಗತ. ಕಿರಣ್ ರಾವ್ ಅವರ ಹೆಚ್ಚು ಮೆಚ್ಚುಗೆ ಪಡೆದ ಚಲನಚಿತ್ರ ʻಲಾಪತಾ ಲೇಡೀಸ್’ . ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆʼʼ ಎಂದು ಚಿತ್ರದ ನಟಿ ರೆಡ್‌ ಕಾರ್ಪೆಟ್‌ ಮೇಲೆ ಹೆಜ್ಜೆ ಹಾಕಿರುವಂತಹ ತಮಾಷೆಯ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಫೂಲ್ ಅವರ ಪಾತ್ರವನ್ನು ನಿತಾಂಶಿ ಗೋಯೆಲ್ ನಿರ್ವಹಿಸಿದ್ದರು. ಇದೀಗ ಈ ಫೋಟೊ ಫೋಟೋಶಾಪ್‌ನಲ್ಲಿ ಎಡಿಟ್‌ ಮಾಡಿರುವುದಾಗಿ ವರದಿಯಾಗಿದೆ.

ಈ ವರ್ಷದ ಮೆಟ್ ಗಾಲಾದ ಥೀಮ್ ʻಸ್ಲೀಪಿಂಗ್ ಬ್ಯೂಟೀಸ್: ರೀವೇಕನಿಂಗ್ ಫ್ಯಾಶನ್” ಮತ್ತು ಡ್ರೆಸ್ ಕೋಡ್ “ದಿ ಗಾರ್ಡನ್ ಆಫ್ ಟೈಮ್” ಆಗಿತ್ತು. ಆಲಿಯಾ ಕೂಡ ಈ ಬಾರಿಯ ಮೆಟ್‌ ಗಾಲಾದಲ್ಲಿ ಕಾಣಿಸಿಕೊಂಡಿದ್ದಾರೆ. ಆಲಿಯಾ ಭಟ್ ಅವರು 2023ರಲ್ಲೂ ಮೆಟ್​ ಗಾಲಾ ಈವೆಂಟ್​​ನಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರು ಮತ್ತೊಮ್ಮೆ ಕೆಂಪು ಹಾಸಿನ ಮೇಲೆ ಕಂಗೊಳಿಸಿದ್ದಾರೆ.

ಇದನ್ನೂ ಓದಿ: Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

ಒಟಿಟಿಯಲ್ಲಿ ಲಾಪತಾ ಲೇಡೀಸ್‌

ಆಮೀರ್ ಖಾನ್ ಪ್ರೊಡಕ್ಷನ್ (APK) ಮತ್ತು ಕಿರಣ್ ಅವರ ಕಿಂಡ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ʻಲಾಪತಾ ಲೇಡೀಸ್‌ʼ (Laapataa Ladies) ಇತ್ತೀಚೆಗೆ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. 14 ವರ್ಷಗಳ ಬ್ರೇಕ್‌ ನಂತರ ಚಿತ್ರವನ್ನು ನಿರ್ದೇಶಿಸಿದ್ದಾರೆ ಕಿರಣ್. ಇದೀಗ ಈ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ಇಂದು (ಏಪ್ರಿಲ್ 26)ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಗೊಂಡಿದೆ.ಸ್ನೇಹಾ ದೇಸಾಯಿ ಬರೆದು ಆಮೀರ್ ಖಾನ್ ನಿರ್ಮಿಸಿದ ‘ಲಾಪತಾ ಲೇಡೀಸ್’ ಬಿಪ್ಲಬ್ ಗೋಸ್ವಾಮಿಯವರ ಕಾದಂಬರಿಯನ್ನು ಆಧರಿಸಿದೆ.

ಮಾರ್ಚ್ 1 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು.‘ಮಹಿಳಾ ಪ್ರಧಾನ ವಸ್ತುವಿಷಯವನ್ನು ‘ಲಾಪತಾ ಲೇಡೀಸ್​’ ಚಿತ್ರದಲ್ಲಿದೆ. ಗಂಭೀರವಾದ ವಿಷಯವಾದರೂ ಕೂಡ ಇಡೀ ಸಿನಿಮಾವನ್ನು ಹಾಸ್ಯದ ಧಾಟಿಯಲ್ಲಿ ಕಟ್ಟಿಕೊಡಲಾಗಿದೆ. ಎಮೋಷನಲ್​ ದೃಶ್ಯಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆಲಾಪತಾ ಲೇಡೀಸ್’ ಚಿತ್ರವನ್ನು ಕಿರಣ್ ರಾವ್ ಅವರು ನಿರ್ದೇಶಿಸಿದ್ದಾರೆ. ಆಮೀರ್ ಖಾನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರವಿ ಕಿಶನ್ ಜತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಸ್ಪರ್ಶ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸ್ನೇಹಾ ದೇಸಾಯಿ ಬರೆದಿದ್ದರು.

Continue Reading

ಬಾಲಿವುಡ್

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

Met Gala 2024: ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Met Gala 2024 Alia Bhatt attend
Koo

ಬೆಂಗಳೂರು: ನಟಿ ಆಲಿಯಾ ಭಟ್‌ (Alia Bhatt) ಈಗಾಗಲೇ ಭಾರತದ ಹಲವರ ಮನಸ್ಸು ಗೆದ್ದಿರುವ ನಟಿ. 2022ರಲ್ಲಿ ನಟಿ ಹಿಂದಿ ಚಿತ್ರೋದ್ಯಮದಲ್ಲಿ ಹಿಟ್‌ ಮೇಲೆ ಹಿಟ್‌ ಸಿನಿಮಾಗಳನ್ನು ಕೊಟ್ಟಿದ್ದಾರೆ. ವಿಶ್ವದ ಸೆಲೆಬ್ರಿಟಿಗಳ ಅತ್ಯಂತ ದೊಡ್ಡ ಫ್ಯಾಷನ್‌ ಕಾರ್ಯಕ್ರಮವಾದ ಮೆಟ್‌ ಗಾಲಾದ ( Met Gala 2024) ರೆಡ್‌ ಕಾರ್ಪೆಟ್‌ ಮೇಲೆ ಹಿಂದಿನ ವರ್ಷ ಆಲಿಯಾ ಹೆಜ್ಜೆ ಹಾಕಿದ್ದರು. ಈ ಬಾರಿಯೂ ನಟಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಮೆಟ್ ಗಾಲಾ 2024ರ ಭಾಗವಾಗಿರುವ ಕೆಲವೇ ಕೆಲವು ಭಾರತೀಯ ಹೆಸರುಗಳಲ್ಲಿ ಆಲಿಯಾ ಭಟ್ ಕೂಡ ಒಬ್ಬರು. ಈ ಈವೆಂಟ್‌ಗೆ ಭಾಗವಾಗುತ್ತಿರುವುದು ಆಲಿಯಾ ಎರಡನೇ ಬಾರಿ. ಮೇ 4ರ ರಾತ್ರಿ ಮುಂಬೈನ ಅಂತಾರಾಷ್ಟ್ರೀಯ ಖಾಸಗಿ ಟರ್ಮಿನಲ್‌ನಿಂದ ನ್ಯೂಯಾರ್ಕ್‌ಗೆ ನಟಿ ಪ್ರಯಾಣಿಸಿರುವುದು ವರದಿಯಾಗಿದೆ.

ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲಾರೆನ್ ಸ್ಯಾಂಚೆಜ್, ಕೈಟ್ಲಿನ್ ಕ್ಲಾರ್ಕ್, ಸ್ಯಾಮ್ ಆಲ್ಟ್‌ಮನ್, ಜೆಫ್ ಬೆಜೋಸ್ ಸಹ ಈ ವರ್ಷದ ಮೆಟ್ ಗಾಲಾದಲ್ಲಿ ನಿರೀಕ್ಷಿಸಲಾದ ಕೆಲವು ಹೆಸರುಗಳು. ಪ್ರಿಯಾಂಕಾ ಚೋಪ್ರಾ ಈ ಬಾರಿ ಗೈರಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Heeramandi Trailer: ʻಹೀರಾಮಂಡಿʼ ಟ್ರೈಲರ್‌ ಕಂಡು ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್‌ ಫಿದಾ!

ಈ ಹಿಂದೆಯೂ ಬಾಲಿವುಡ್‌ನ ಅನೇಕ ನಟಿಯರು ಈ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ನಲ್ಲಿ ವಿಶೇಷವಾದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಕಳೆದ ವರ್ಷ ನತಾಶಾ ಅವರು ಸಬ್ಯಸಾಚಿ ಸೀರೆ ತೊಟ್ಟು ಅದರೊಂದಿಗೆ ಚಿನ್ನದ ಬಣ್ಣದ ಲೋಹದ ಕೋಟ್‌ ಧರಿಸಿ ಕಾಣಿಸಿಕೊಂಡಿದ್ದರು. ನಟಿಯ ಈ ಲುಕ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿತ್ತು. ಹಾಗೆಯೇ 2017ರಲ್ಲಿ ದೀಪಿಕಾ ಪಡುಕೋಣೆ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ ಮೇಲೆ ಮೊದಲನೇ ಬಾರಿಗೆ ಕಾಣಿಸಿಕೊಂಡಿದ್ದರು. 2018ರಲ್ಲಿ ಮತ್ತೊಮ್ಮೆ ರೆಡ್‌ ಕಾರ್ಪೆಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಆಗ ನಟಿ ಪ್ರಬಲ್‌ ಗುರುಂಗ್‌ ಅವರು ವಿನ್ಯಾಸ ಮಾಡಿದ್ದ ಕೆಂಪು ಬಣ್ಣದ ಉಡುಗೆ ತೊಟ್ಟಿದ್ದರು. ಒಂದು ಶೋಲ್ಡರ್‌ನ ಆ ಉಡುಗೆಯ ಫೋಟೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಯಾಂಕಾ ಚೋಪ್ರಾ ಅವರು 2017ರಲ್ಲಿ ಮೆಟ್‌ ಗಾಲಾದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಈಗಿನ ಪತಿ ನಿಕ್‌ ಜೋನಾಸ್‌ ಅವರ ಜತೆಗೆ ಕಾಣಿಸಿಕೊಂಡಿದ್ದರು. ಉದ್ದನೆಯ ವೇಲು ರೀತಿಯಲ್ಲಿ ಬಟ್ಟೆ ಹೊಂದಿರುವ ಟ್ರೆಂಚ್‌ ಕೋಟ್‌ ಉಡುಗೆಯಲ್ಲಿ ನಟಿ ಮಿಂಚಿದ್ದರು

Continue Reading

ಸಿನಿಮಾ

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Kareena Kapoor: ಕರೀನಾ ಕಪೂರ್ ಖಾನ್ (Kareena Kapoor) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. . ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kareena Kapoor appointed Unicef India National Ambassador
Koo

ಬೆಂಗಳೂರು: ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ (Kareena Kapoor) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದಿದ್ದಾರೆ. ಗೌರವದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಭಾಷಣದ ವೇಳೆ ಕರೀನಾ ತಮ್ಮ ಹೊಸ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತಾ ಭಾವುಕರಾದರು.

ಕರೀನಾ ಪೋಸ್ಟ್‌ನಲ್ಲಿ ʻʻನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.

ಕರೀನಾ ಕಪೂರ್ ಕೊನೆಯದಾಗಿ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡರು. ಮುಂದೆ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Kareena Kapoor: ಸೈಫ್‌ ಅಲಿಖಾನ್ ರನ್ನು ಮದುವೆಯಾಗಬೇಡಿ ಎಂದು ಜನ ಕರೀನಾಗೆ ಹೇಳಿದ್ದು ಯಾಕೆ?

ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಚಿತ್ರತಂಡ ಇನ್ನೊಬ್ಬ ನಟಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

ಕಳೆದ ತಿಂಗಳು ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಇದರಿಂದ ಕನ್ಫರ್ಮ್ ಆಗಿದೆ.

Continue Reading
Advertisement
T20 World Cup 2024
ಕ್ರೀಡೆ5 mins ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್9 mins ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ13 mins ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Prajwal Revanna Case HD Kumaraswamy King of Blackmail and DK Shivakumar is back
ಚಿಕ್ಕಮಗಳೂರು13 mins ago

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Hoskote News
ಕರ್ನಾಟಕ16 mins ago

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Heavy Rain
ತುಮಕೂರು20 mins ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Fried Oil
ಆರೋಗ್ಯ39 mins ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ50 mins ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್1 hour ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ1 hour ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ21 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌