Vishal Punjabi: ಮದುವೆಯಾದ 2 ತಿಂಗಳಿಗೆ ಪತ್ನಿಗೆ ಮೋಸ ಮಾಡಿ, ಇನ್ನೊಬ್ಬಳ ಜತೆ ಈ ನಟ ಬೆತ್ತಲೆಯಾಗಿ ಸಿಕ್ಕಿಬಿದ್ದಿದ್ದನಂತೆ! - Vistara News

ಬಾಲಿವುಡ್

Vishal Punjabi: ಮದುವೆಯಾದ 2 ತಿಂಗಳಿಗೆ ಪತ್ನಿಗೆ ಮೋಸ ಮಾಡಿ, ಇನ್ನೊಬ್ಬಳ ಜತೆ ಈ ನಟ ಬೆತ್ತಲೆಯಾಗಿ ಸಿಕ್ಕಿಬಿದ್ದಿದ್ದನಂತೆ!

Vishal Punjabi: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಕಿಯಾರಾ ಆಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶಾಲ್ ಪಂಜಾಬಿ ಅವರು ಚಿತ್ರೀಕರಿಸಿದ ಯಾವುದಾದರೂ ಒಂದು ಜೋಡಿ ವಿಚ್ಛೇದನದಲ್ಲಿ ಕೊನೆಗೊಂಡಿತೆ? ಎಂದು ಪ್ರಶ್ನೆ ಕೇಳಲಾಗಿತ್ತು. ಈ ಬಗ್ಗೆ ವಿಶಾಲ್‌ ಹೇಳಿದ್ದು ಹೀಗೆ.

VISTARANEWS.COM


on

Wedding FilmerVishal Punjabi recent chat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಡ್ಡಿಂಗ್ ಫಿಲ್ಮರ್ ಎಂದೂ ಕರೆಯಲ್ಪಡುವ ನಿರ್ಮಾಪಕ ವಿಶಾಲ್ ಪಂಜಾಬಿ ( Vishal Punjabi) ಅವರು ಹಲವಾರು ಉನ್ನತ-ಪ್ರೊಫೈಲ್ ಜೋಡಿಗಳ ವೀಡಿಯೊಗ್ರಾಫ್ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಕಿಯಾರಾ ಆಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಕೆಲಸ ಮಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶಾಲ್ ಪಂಜಾಬಿ ಅವರು ಚಿತ್ರೀಕರಿಸಿದ ಯಾವುದಾದರೂ ಒಂದು ಜೋಡಿ ವಿಚ್ಛೇದನದಲ್ಲಿ ಕೊನೆಗೊಂಡಿತೆ? ಎಂದು ಪ್ರಶ್ನೆ ಕೇಳಲಾಗಿತ್ತು. ಈ ಬಗ್ಗೆ ವಿಶಾಲ್‌ ಹೇಳಿದ್ದು ಹೀಗೆ.

ವಿಶಾಲ್ ಪಂಜಾಬಿ ಈ ಬಗ್ಗೆ ಮಾತನಾಡಿ ʻʻಸೆಲೆಬ್ರಿಟಿಗಳಲ್ಲಿಯೇ ಈ ಘಟನೆ ಜಾಸ್ತಿ. ಮದುವೆಯಾದ ಎರಡು ತಿಂಗಳ ನಂತರ ಆಕೆಗೆ ಮೋಸ ಮಾಡುವರು ಇರುತ್ತಿದ್ದರು. ಸೆಟ್‌ನಲ್ಲಿ ತನ್ನ ಮೇಕಪ್ ವ್ಯಾನ್‌ನಲ್ಲಿ ನಟಿಯರೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವವರು ಇದ್ದರು. ಹೆಂಡತಿ ಆ ಬಳಿಕ ಅವನನ್ನು ಬೆತ್ತಲೆಯಾಗಿ ನೋಡಿರುವ ಘಟನೆ ಇತ್ತು. ಇದು ಒಬ್ಬ ಖ್ಯಾತ ನಟನ ಸ್ಟೋರಿʼʼಎಂದರು.

ʻʻಕೆಲವೊಮ್ಮೆ ನಾನು ಕರೆ ಮಾಡುವಾಗ ವರ ಕಾಲ್‌ ತೆಗೆದುಕೊಳ್ಳುವುದಿಲ್ಲ, ವಧುವಿಗೆ ಕರೆ ಮಾಡಿದರೆ, ಮದುವೆಯ ವಿಡಿಯೊ ಬೇಡ, ಕರೆ ಮಾಡಬೇಡಿ ಎನ್ನುತ್ತಾರೆ. ಮ್ಯಾನೇಜರ್‌ಗೆ ಕರೆ ಮಾಡಿದರೆ ಅದೇ ರೀತಿ ಉತ್ತರ ಬರುತ್ತದೆ. ಆ ಸಂದರ್ಭದಲ್ಲಿ ನಾನು ಏನು ಮಾಡಬೇಕು? ನೆಟ್‌ಫ್ಲಿಕ್ಸ್‌ಗೆ ಮಾರಾಟ ಮಾಡಲೆ? ಹೀಗಾಗಿ ನಾನು ಕಾಂಟ್ರ್ಯಾಕ್ಟ್‌ ಮಾಡಲು ಆರಂಭಿಸಿದೆʼʼಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?ಇದನ್ನೂ ಓದಿ:

ʻʻಕೆಲವೊಮ್ಮೆ ವಿಡಿಯೊದಲ್ಲಿ ವರನು ಅಳುತ್ತಾ ನಾನು ನಿನ್ನನ್ನು ಪ್ರೀತಿಸುತ್ತೇನೆ, ಬೇಬಿ’ ಎಂದು ಹೇಳುತ್ತಾನೆ. ಅವು ಮೊಸಳೆ ಕಣ್ಣೀರು ಎಂದು ನಿಮಗೆ ತಿಳಿದಿದೆ. ಈ ಕಥೆ ದೊಡ್ಡ ಬಾಲಿವುಡ್ ನಟದ್ದು. ಹೆಸರು ಬೇಡ. ಆ ತುಣುಕಿನ ಮೌಲ್ಯವು ಲಕ್ಷಾಂತರ ಮೌಲ್ಯದ್ದಾಗಿದೆ. ನಾನು ಅದನ್ನು ಮಾರಿ ಹಣ ಸಂಪಾದಿಸಬಹುದು. ಆದರೆ ಅದು ಸರಿಯಲ್ಲʼʼಎಂದರು. ಮದುವೆಯ ಚಿತ್ರೀಕರಣವನ್ನು ಪ್ರಾರಂಭಿಸುವ ಮೊದಲು, ವಿಶಾಲ್ ಶಾರುಖ್ ಖಾನ್ ಅವರೊಂದಿಗೆ ರೆಡ್ ಚಿಲ್ಲಿಸ್ ಎಂಟರ್ಟೈನ್ಮೆಂಟ್ನಲ್ಲಿ ಒಂದು ದಶಕದ ಕಾಲ ಕೆಲಸ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Krishan Kumar: ಕ್ರಿಶನ್ ಕುಮಾರ್ ನಿರ್ಮಾಪಕರಾಗಿದ್ದು, “ಬೇವಾಫಾ ಸನಮ್” (1995) ನಲ್ಲಿನ ಪಾತ್ರಕ್ಕಾಗಿ ಮತ್ತು ಭಾರತದಲ್ಲಿನ ಅತಿದೊಡ್ಡ ಸಂಗೀತ ನಿರ್ಮಾಣ ಕಂಪನಿಯಾದ ಟಿ-ಸಿರೀಸ್ ಅನ್ನು ಹೊಂದಿದ್ದಕ್ಕಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ಕ್ರಿಶನ್ ಕುಮಾರ್ ದುವಾ ಪಂಜಾಬಿ ಕುಟುಂಬದಲ್ಲಿ ಜನಿಸಿದರು.

VISTARANEWS.COM


on

Krishan Kumar Daughter Tishaa Dies Of Cancer At 21
Koo

ಬೆಂಗಳೂರು: 90 ರ ದಶಕದ ನಟ ಮತ್ತು ಟಿ-ಸಿರೀಸ್‌ನ ಸಹ-ಮಾಲೀಕ ಕ್ರಿಶನ್ ಕುಮಾರ್ (Krishan Kumar) ಅವರ ಪುತ್ರಿ ತಿಶಾ ಕುಮಾರ್ ನಿಧನರಾಗಿದ್ದಾರೆ. ತಿಶಾ ಕುಮಾರ್ ( Tishaa Dies) ಅವರು ಕೇವಲ 21ನೇ ವಯಸ್ಸಿಗೆ ಮೃತಪಟ್ಟಿದ್ದಾರೆ. ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. 

ಆಕೆಯ ಕ್ಯಾನ್ಸರ್ ಚಿಕಿತ್ಸೆಗಾಗಿ ಮುಂಬೈನಿಂದ ಜರ್ಮನಿಗೆ ಕರೆದೊಯ್ಯಲಾಯಿತು. ನಿನ್ನೆ ಜರ್ಮನಿಯ ಆಸ್ಪತ್ರೆಯಲ್ಲಿ ತಿಶಾ ಕೊನೆಯುಸಿರೆಳೆದಿದ್ದಾರೆ. ಟಿ-ಸೀರೀಸ್ ವಕ್ತಾರರು ಈ ಬಗ್ಗೆ ಹಂಚಿಕೊಂಡಿದ್ದಾರೆ, “ಕ್ರಿಶನ್ ಕುಮಾರ್ ಅವರ ಪುತ್ರಿ ತಿಶಾ ಕುಮಾರ್ ಅವರು ಅನಾರೋಗ್ಯದಿಂದ ದೀರ್ಘಕಾಲದ ಹೋರಾಟದ ನಂತರ ನಿನ್ನೆ ನಿಧನರಾದರು. ಇದು ಕುಟುಂಬಕ್ಕೆ ಕಷ್ಟಕರ ಸಮಯ.ಈ ಕಷ್ಟದ ಸಮಯದಲ್ಲಿ ಖಾಸಗಿತನವನ್ನು ಗೌರವಿಸಿ’ ಎಂದು ಕೋರಿದ್ದಾರೆ. ಕ್ರಿಶನ್ ಕುಮಾರ್ ಅವರು ಬಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆ ಟಿ-ಸೀರಿಸ್​ನ ಭಾಗವಾಗಿದ್ದಾರೆ. ಟಿ-ಸೀರಿಸ್ ನಿರ್ಮಾಣದ ಸಿನಿಮಾಗಳಲ್ಲಿ ಇವರ ಪಾಲೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಟಿ-ಸೀರಿಸ್ ಕಡೆಯಿಂದ ಸುತ್ತೋಲೆ ರಿಲೀಸ್ ಮಾಡಲಾಗಿದೆ.

ಕ್ರಿಶನ್ ಕುಮಾರ್ ನಿರ್ಮಾಪಕರಾಗಿದ್ದು, “ಬೇವಾಫಾ ಸನಮ್” (1995) ನಲ್ಲಿನ ಪಾತ್ರಕ್ಕಾಗಿ ಮತ್ತು ಭಾರತದಲ್ಲಿನ ಅತಿದೊಡ್ಡ ಸಂಗೀತ ನಿರ್ಮಾಣ ಕಂಪನಿಯಾದ ಟಿ-ಸಿರೀಸ್ ಅನ್ನು ಹೊಂದಿದ್ದಕ್ಕಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ಕ್ರಿಶನ್ ಕುಮಾರ್ ದುವಾ ಪಂಜಾಬಿ ಕುಟುಂಬದಲ್ಲಿ ಜನಿಸಿದರು. ಅವರ ತಂದೆ ಚಂದ್ರಭಾನ್, ಕ್ರಿಶನ್ ಟಿ-ಸೀರೀಸ್ ಎಂದು ಕರೆಯಲ್ಪಡುವ ಸೂಪರ್ ಕ್ಯಾಸೆಟ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಗುಲ್ಶನ್ ಕುಮಾರ್ ಅವರ ಕಿರಿಯ ಸಹೋದರ.

ಇದನ್ನೂ ಓದಿ: Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?



ತಿಶಾ ಅವರು 2003ರ ಸೆಪ್ಟೆಂಬರ್ 6ರಂದು ಜನಿಸಿದರು. ಅವರು ಕೃಷ್ಣ ಹಾಗೂ ತಾನ್ಯಾ ಸಿಂಗ್ ಮಗಳು. ದಂಪತಿಗೆ ಇರುವ ಏಕೈಕ ಮಗಳು ಇವರಾಗಿದ್ದರು. ಅವರ ಬಗ್ಗೆ ಹೊರ ಜಗತ್ತಿಗೆ ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ತಿಶಾ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ. ಸಂದೀಪ್ ರೆಡ್ಡಿ ವಂಗ ನಿರ್ದೇಶನದ, ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಇದನ್ನು ಟಿ-ಸೀರಿಸ್ ನಿರ್ಮಾಣ ಮಾಡಿದೆ. ‘ಅನಿಮಲ್’, ‘ಭೂಲ್ ಭುಲಯ್ಯ 2’ ರೀತಿಯ ಸಿನಿಮಾಗಳಿಗೆ ಬಂಡವಾಳ ಹೂಡಿದ್ದರು ಕ್ರಿಶನ್ ಕುಮಾರ್ .

Continue Reading

ಬಾಲಿವುಡ್

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Urvashi Rautela: ಇದಕ್ಕೂ ಮುಂಚೆ  ಊರ್ವಶಿ ಅವರ ಸ್ನಾನ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಅನೇಕರು ವೀಡಿಯೊ ಕಂಡು PR ಸ್ಟಂಟ್ ಎಂದು ಹೇಳುತ್ತಿದ್ದರು. ಊರ್ವಶಿ ವೀಡಿಯೋದಲ್ಲಿ ಮಂಗಳಸೂತ್ರ ಬೇರೆ ಧರಿಸಿದ್ದರು. ಹೀಗಾಗಿ ಇದು ಫೇಕ್‌ ಎಂದು ಹೇಳಲಾಗಿತ್ತು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು.

VISTARANEWS.COM


on

Urvashi Rautela Conversation With Manager 'Leaked',
Koo

ಬೆಂಗಳೂರು: ನಟಿ ಊರ್ವಶಿ ರೌಟೇಲಾ (Urvashi Rautela) ಅವರ ಖಾಸಗಿ ವಿಡಿಯೊವೊಂದು ವೈರಲ್‌ ಆಗಿರುವುದು ಗೊತ್ತೇ ಇದೆ. ನಟಿ ಬಾತ್‌ರೂಮ್‌ನಲ್ಲಿ ಬಟ್ಟೆ ಬದಲಾಯಿಸುತ್ತಿರುವುದನ್ನು ಕಂಡು ಫ್ಯಾನ್ಸ್‌ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಹೊಸ ಆಡಿಯೊವೊಂದು ಲೀಕ್‌ ಆಗಿದೆ. ಈಗ ಲೀಕ್‌ ಆಗಿರುವ ವಿಡಿಯೊದಲ್ಲಿ ಊರ್ವಶಿ ಮತ್ತು ಆಕೆಯ ಮ್ಯಾನೇಜರ್ ನಡುವಿನ ಮಾತುಕತೆ ಇದೆ. ಇದರಲ್ಲಿ ಘಟನೆಯನ್ನು ಊರ್ವಶಿ ಖಂಡಿಸಿದ್ದಾರೆ.

ಸಂಭಾಷಣೆಯಲ್ಲಿ, ಊರ್ವಶಿ ತನ್ನ ಮ್ಯಾನೇಜರ್ ಹತ್ತಿರ ನೀವು ವೀಡಿಯೊವನ್ನು ನೋಡಿದ್ದೀರಾ ಎಂದು ಕೇಳುತ್ತಾರೆ. ಅವರು ಪ್ರತಿಕ್ರಿಯಿಸುತ್ತಾರೆ, “ಹೌದು, ನಾನು ನೋಡಿದೆ ಮತ್ತು ತಂಡ ವೈರಲ್‌ ಆದ ವಿಡಿಯೊವನ್ನು ಡಿಲಿಟ್‌ ಮಾಡಲು ಪ್ರಯತ್ನಿಸುತ್ತಿದೆ.” ಎನ್ನುತ್ತಾರೆ,ಆಗ ಊರ್ವಶಿ ಹೇಳುತ್ತಾರೆ, “ಈ ವಿಷಯಗಳು ಹೇಗೆ ವೈರಲ್‌ ಆಗುತ್ತಿವೆ ಎಂದು ನನಗೆ ಅರ್ಥವಾಗುತ್ತಿಲ್ಲ. ನಾನು ತಕ್ಷಣ ಅವರೊಂದಿಗೆ ಕರೆ ಮಾಡಬೇಕಾಗಿದೆʼʼಎನ್ನುತ್ತಾರೆ. ಆಗ ಮ್ಯಾನೇಜರ್‌ ʻʻಹೌದು, ಊರ್ವಶಿ ನನಗೆ ಗೊತ್ತು, ಇದು ತುಂಬಾ ದುಃಖದ ಪರಿಸ್ಥಿತಿ, ಆದರೆ ನಾವು ಈ ವಿಚಾರಗಳನ್ನು ಫೋನ್‌ನಲ್ಲಿ ಮಾತನಾಡಬಾರದು. ಜುಲೈ 19 ರಂದು ನೀವು ಹಿಂತಿರುಗಿದಾಗ ಈ ಬಗ್ಗೆ ಚರ್ಚಿಸೋಣʼʼಎನ್ನುತ್ತಾರೆ. ಆಗ ಊರ್ವಶಿ “ಯಾಕೆ?” ಎಂದು ಪ್ರಶ್ನಿಸಿದಾಗ, ಮ್ಯಾನೇಜರ್ “ಏನಾಗುತ್ತಿದೆ ಎಂಬುದರ ಬಗ್ಗೆ ಯಾರಿಗೂ ಸ್ಪಷ್ಟವಾಗಿಲ್ಲ, ನೀವು ಬಂದ ಬಳಿಕ ನಿಮ್ಮೊಂದಿಗೆ ವೈಯಕ್ತಿಕವಾಗಿ ಮಾತನಾಡುತ್ತೇನೆ.” ಎಂಬ ಸಂಭಾಷಣೆ ಇದೀಗ ಲೀಕ್‌ ಆಗಿದೆ.
ಸೋಶಿಯಲ್ ಮೀಡಿಯಾ ಲೀಕ್ ಆದ ಆಡಿಯೋವನ್ನು ವಿಡಿಯೋ ರೀತಿಯಲ್ಲಿ ವೈರಲ್‌ ಮಾಡಲಾಗುತ್ತಿದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ಇದಕ್ಕೂ ಮುಂಚೆ  ಊರ್ವಶಿ ಅವರ ಸ್ನಾನ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು. ಅನೇಕರು ವೀಡಿಯೊ ಕಂಡು PR ಸ್ಟಂಟ್ ಎಂದು ಹೇಳುತ್ತಿದ್ದರು. ಊರ್ವಶಿ ವೀಡಿಯೋದಲ್ಲಿ ಮಂಗಳಸೂತ್ರ ಬೇರೆ ಧರಿಸಿದ್ದರು. ಹೀಗಾಗಿ ಇದು ಫೇಕ್‌ ಎಂದು ಹೇಳಲಾಗಿತ್ತು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಊರ್ವಶಿ, ‘ಸಿಂಗ್ ಸಾಬ್ ದಿ ಗ್ರೇಟ್’ ಸಿನಿಮಾದ ಮೂಲಕ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದರು. ಸನ್ನಿ ಡಿಯೋಲ್ ಅಭಿನಯದ ಈ ಚಿತ್ರ ಕಮರ್ಷಿಯಲ್ ಫ್ಲಾಪ್ ಆಗಿತ್ತು. ಇದರ ನಂತರ ಯೋ ಯೋ ಹನಿಸಿಂಗ್ ಅವರೊಂದಿಗೆ ‘ಲವ್ ಡೋಸ್’ ಎಂಬ ಆಲ್ಬಂನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದರು. ಮೆಗಾ ಸ್ಟಾರ್‌ ಚಿರಂಜೀವಿ ನಟನೆಯ, ‘ವಾಲ್ತೇರು ವೀರಯ್ಯ’ದಲ್ಲಿ ಐಟಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿದ್ದರು. ಪವನ್ ಕಲ್ಯಾಣ್ ಅಭಿನಯದ ‘ಬ್ರೋ’ ಸಿನಿಮಾದಲ್ಲಿಯೂ ಮೈ ಡಿಯರ್ ಮಾರ್ಕಂಡೇಯ ಎಂದು ಸೊಂಟ ಬಳುಕಿಸಿ ಸೌತ್‌ ಸಿನಿರಸಿಕರ ಮನಗೆದ್ದರು.

Continue Reading

ಬಾಲಿವುಡ್

Janhvi Kapoor: ಅಂಬಾನಿ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ಜಾಹ್ನವಿ ಕಪೂರ್!

Janhvi Kapoor: ಜಾಹ್ನವಿ ಕಪೂರ್ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ.

VISTARANEWS.COM


on

Janhvi Kapoor hospitalised due to food poisoning
Koo

ಬೆಂಗಳೂರು: ನಟಿ ಜಾನ್ವಿ ಕಪೂರ್ (Janhvi Kapoor) ಅವರು ಜುಲೈ 18 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಧಾಂಶು ಸರಿಯಾ ಅವರ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟಿ, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದೀಗ ವರದಿಯ ಪ್ರಕಾರ ನಟಿಯ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ಮದುವೆಯಲ್ಲಿ ಜಾಹ್ನವಿ ಕಪೂರ್ ಕಣ್ಮನ ಸೆಳೆದಿದ್ದರು. ಗೋಲ್ಡನ್ ಡ್ರೆಸ್‌ನಲ್ಲಿ ಮಿಂಚಿದ್ದರು. ಆ ನಂತರ ಅದ್ಧೂರಿ ಮದುವೆಯನ್ನು ಮುಗಿಸಿಕೊಂಡು ಜಾಹ್ನವಿ ಕಪೂರ್ ಚೆನ್ನೈಗೆ ತೆರಳಿದ್ದರು.

ಚೆನ್ನೈನಲ್ಲಿ ಜಾಹ್ನವಿ ಕಪೂರ್ ಸೀ ಫುಡ್​ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್​ಅವರಿಗೆ ಫುಡ್​ಪಾಯ್ಸನ್​ಆಗಿದೆ. ಇನ್ನೂ ಅನಾರೋಗ್ಯದಿಂದ ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಕುಸಿದು ಬಿದ್ದರು ಎನ್ನುವ ಸುದ್ದಿಯೂ ಇದೆ. ಬೋನಿ ಕಪೂರ್ ಇನ್ನೊಂದೆರಡು ದಿನದಲ್ಲಿ ಆಸ್ಪತ್ರೆಯಿಂದ ಜಾಹ್ನವಿ ಕಪೂರ್ ಅವರನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಹೇಳಿದ್ದಾರೆ.

ಜಾಹ್ನವಿ ಕಪೂರ್ ‘ಉಲಾಜ್’ ​​ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಲಾಜ್‌ನಲ್ಲಿ ಗುಲ್ಶನ್ ದೇವಯ್ಯ, ರೋಷನ್ ಮ್ಯಾಥ್ಯೂ, ರಾಜೇಶ್ ತೈಲಂಗ್ ಮತ್ತು ಆದಿಲ್ ಹುಸೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಆಗಸ್ಟ್ 2 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಉಲಾಜ್ ಜೊತೆಗೆ, ಜಾನ್ವಿ ಅವರ ದೇವರಾ ಸಿನಿಮಾ ಭಾಗವಾಗಿದ್ದಾರೆ. ಉಲಾಜ್ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Janhvi Kapoor: ಉರ್ಫಿ ಸ್ಟೈಲ್ ಕಾಪಿ ಮಾಡಿದ್ರಾ ಜಾಹ್ನವಿ ಕಪೂರ್‌? ಟ್ರೋಲ್‌ ಆದ್ರು ನಟಿ!

ದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

Continue Reading

ಬಾಲಿವುಡ್

Akshay Kumar: ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟ; ರಕ್ಷಿಸಿದ ʻಕಿಲಾಡಿʼ ಅಕ್ಷಯ್​​ ಕುಮಾರ್ !

Akshay Kumar: ಪ್ರಸ್ತುತ ʻಸರ್ಫಿರಾʼ ಸಿನಿಮಾದ ಯಶಸ್ಸನ್ನು ಆನಂದಿಸುತ್ತಿರುವ ನಟನ ಹಳೆಯ ವಿಡಿಯೊವೊಂದು ವೈರಲ್‌ ಆಗುತ್ತಿದೆ. ಅಭಿಮಾನಿಗಳು ನಟನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟನನ್ನು ಅಕ್ಷಯ್‌ ಕುಮಾರ್‌ ರಕ್ಷಿಸಿದ್ದಾರೆ.

VISTARANEWS.COM


on

Akshay Kumar Rushes To Save Actor Who Faints Mid-Air During A Stunt
Koo

ಬೆಂಗಳೂರು: ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ತಮ್ಮ ಬಹುಮುಖ ಅಭಿನಯದಿಂದ ಹಿಂದಿ ಮನರಂಜನಾ ಉದ್ಯಮದಲ್ಲಿ ಹೆಸರು ಮಾಡಿದ್ದಾರೆ. `ಕಿಲಾಡಿ ಕುಮಾರ್’ ಎಂದು ಕರೆಯಲ್ಪಡುವ ಅವರು ಆಗಾಗ ತಮ್ಮ ಆಕ್ಷನ್ ಸೀಕ್ವೆನ್ಸ್‌ಗಳ ಮೂಲಕ ಮನ್ನೆಲೆಗೆ ಬರುತ್ತಾರೆ. ಮಾತ್ರವಲ್ಲ ದೇಹ ದಂಡಿಸಿ ವರ್ಕೌಟ್‌ ಮಾಡುತ್ತಾರೆ. ಅನೇಕ ಸಂದರ್ಶನಗಳಲ್ಲಿ ಈ ಬಗ್ಗೆ ಹೇಳಿಕೊಂಡಿದ್ದು ಇದೆ. ಪ್ರಸ್ತುತ ʻಸರ್ಫಿರಾʼ ಸಿನಿಮಾದ ಯಶಸ್ಸನ್ನು ಆನಂದಿಸುತ್ತಿರುವ ನಟನ ಹಳೆಯ ವಿಡಿಯೊವೊಂದು ವೈರಲ್‌ ಆಗುತ್ತಿದೆ. ಅಭಿಮಾನಿಗಳು ನಟನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಗ್ಗದಲ್ಲಿ ನೇತಾಡುವಾಗ ಮೂರ್ಛೆ ಹೋದ ನಟನನ್ನು ಅಕ್ಷಯ್‌ ಕುಮಾರ್‌ ರಕ್ಷಿಸಿದ್ದಾರೆ.

ಈಗ ಎಕ್ಸ್‌ನಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಕಪಿಲ್ ಶರ್ಮಾ ಅವರ ಹಳೆಯ ಕಾಮಿಡಿ ಚಾಟ್ ಶೋನ ಚಿತ್ರೀಕರಣದ ಸಮಯದಲ್ಲಿ ಮೂರ್ಛೆ ಹೋದ ನಟನ ಕಡೆಗೆ ಅಕ್ಷಯ್ ಧಾವಿಸುತ್ತಿರುವುದನ್ನು ಕಾಣಬಹುದು. ಕಪಿಲ್ ಶರ್ಮಾ ಅವರ ಹಳೆಯ ಕಾಮಿಡಿ ಚಾಟ್ ಶೋ ವೇಳೆ ಹಾಸ್ಯನಟ ಪರಿತೋಷ್ ತ್ರಿಪಾಠಿ ಅವರು ಏಕಾಏಕಿ ಮೂರ್ಛೆ ಹೋದರು. ಅಲಿ ಅಸ್ಗರ್ ಮತ್ತು ಪ್ಯಾರಿತೋಷ್ ಹಗ್ಗಕ್ಕೆ ನೇತಾಡುವ ದೃಶ್ಯ ನಿಭಾಯಿಸುತ್ತಿದ್ದರು. ಆ ಕ್ಷಣಕ್ಕೆ ಪರಿತೋಷ್ ತ್ರಿಪಾಠಿ ಮೂರ್ಛೆ ಹೋಗುತ್ತಿರುವಾಗ ಪಕ್ಕದಲ್ಲಿ ಇದ್ದ ಅಲಿ ಅಸ್ಗರ್ ತನ್ನ ಕಾಲುಗಳಿಂದ ಪಾರಿತೋಷ್‌ರನ್ನು ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಪಾರಿತೋಷ್‌ರನ್ನು ನಿಭಾಯಿಸಲು ಆಗಲೇ ಇಲ್ಲ. ಅದೇ ಕ್ಷಣಕ್ಕೆ ಚಿತ್ರೀಕರಣ ಮಾಡುತ್ತಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್, ಪರಿತೋಷ್‌ಗೆ ಸಹಾಯ ಮಾಡಲು ಓಡಿ ಬಂದು ಮೂರ್ಛೆ ಹೋದ ನಟನನ್ನು ಹಿಡಿದುಕೊಂಡಿದ್ದಾರೆ. ಅಕ್ಷಯ್ ಮತ್ತು ಉಳಿದ ಸಿಬ್ಬಂದಿ ಕೂಡ ನಟ ಬೀಳದಂತೆ ರಕ್ಷಿಸಲು ಧಾವಿಸಿದ್ದಾರೆ. ಇದೀಗ ಅಕ್ಷಯ್‌ ಕುಮಾರ್‌ ಅವರ ಸಮಯಪ್ರಜ್ಞೆಗೆ ನೆಟ್ಟಿಗರು ಕೊಂಡಾಡುತ್ತಿದ್ದಾರೆ.

ಒಬ್ಬರು ಹೀಗೆ ಬರೆದಿದ್ದಾರೆ, “ತರಬೇತಿ ಪಡೆಯದ ಜನರು ಸರಿಯಾದ ಸುರಕ್ಷತಾ ಸಿಬ್ಬಂದಿ ಇಲ್ಲದೆ ಪ್ರದರ್ಶನವನ್ನು ಮಾಡಬಾರದುʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಕಿಲಾಡಿ ಕುಮಾರನ ಮೇಲೆ ಗೌರವ ಹೆಚ್ಚಾಯಿತುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

ಸಿನಿಮಾ ವಿಚಾರಕ್ಕೆ ಬಂದರೆ ಸರ್ಫಿರಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡ ಅಕ್ಷಯ್ ಕುಮಾರ್ ಅವರು ಸಿಂಘಮ್ ಅಗೇನ್, ಖೇಲ್ ಖೇಲ್ ಮೇ, ಜಾಲಿ LLB 3, ಸ್ಕೈ ಫೋರ್ಸ್, ಹೇರಾ ಫೆರಿ 3, ಕಣ್ಣಪ್ಪ , ವೆಲ್‌ಕಮ್ ಟು ದಿ ಜಂಗಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹೇಶ್ ಮಂಜ್ರೇಕರ್ ನಿರ್ದೇಶನದ ʻವೇದತ್ ಮರಾಠೆ ವೀರ್ ದೌಡ್ಲೆ ಸಾತ್ʼ ಮೂಲಕ ಮರಾಠಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾತ್ರವನ್ನು ನಿಭಾಯಿಸಲಿದ್ದಾರೆ.

Continue Reading
Advertisement
Kiran Kumar
ಕರ್ನಾಟಕ4 mins ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Valmiki Corporation Scam
ಪ್ರಮುಖ ಸುದ್ದಿ6 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ

Pooja Khedkar
ದೇಶ19 mins ago

Pooja Khedkar: IAS ಟ್ರೈನಿ ಅಧಿಕಾರಿ ಪೂಜಾ ಖೇಡ್ಕರ್‌ ವಿರುದ್ಧ FIR ದಾಖಲಿಸಿದ UPSC

CM Siddaramaiah
ಕರ್ನಾಟಕ33 mins ago

CM Siddaramaiah: ವಾಲ್ಮೀಕಿ ನಿಗಮ ಅಕ್ರಮಕ್ಕೆ ಸರ್ಕಾರ ಹೊಣೆಯಲ್ಲ; ಚಂದ್ರಶೇಖರನ್‌ ಆತ್ಮಹತ್ಯೆಗೆ ಅಧಿಕಾರಿಗಳು ಕಾರಣ ಎಂದ ಸಿಎಂ!

Ishan Kishan
ಕ್ರಿಕೆಟ್36 mins ago

Ishan Kishan: ಟೀಮ್​ ಇಂಡಿಯಾದಲ್ಲಿ ಇಶಾನ್ ಕಿಶನ್​ಗೆ ಬಾಗಿಲು ಬಂದ್​?

Krishan Kumar Daughter Tishaa Dies Of Cancer At 21
ಬಾಲಿವುಡ್44 mins ago

Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

Indian Navy Recruitment
ಉದ್ಯೋಗ59 mins ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Microsoft Windows Outage
ಪ್ರಮುಖ ಸುದ್ದಿ1 hour ago

Microsoft Windows Outage: ಮೈಕ್ರೊಸಾಫ್ಟ್​​ ಸಮಸ್ಯೆ ; ಬೆಂಗಳೂರು ಸೇರಿದಂತೆ ದೇಶದ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲಕಲ್ಲೋಲ

Dengue Fever
ಬೆಂಗಳೂರು1 hour ago

Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Accident Video
Latest1 hour ago

Accident Video: ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 30 ಅಡಿ ದೂರ ಎಗರಿ ಬಿದ್ದ ಮಹಿಳಾ ಕಾನ್‌ಸ್ಟೇಬಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌