ಬಾಕ್ಸ್‌ ಆಫೀಸ್‌ ವಾರ್‌: ಫ್ಯಾನ್‌ಗಳು ಫುಲ್‌ ಕನ್ಫ್ಯೂಸ್‌ - Vistara News

ಸಿನಿಮಾ

ಬಾಕ್ಸ್‌ ಆಫೀಸ್‌ ವಾರ್‌: ಫ್ಯಾನ್‌ಗಳು ಫುಲ್‌ ಕನ್ಫ್ಯೂಸ್‌

ಮೂರು ಸಿನಿಮಾಗಳು ಜೂನ್‌ 3ರಂದು ತೆರೆ ಕಾಣುತ್ತಿದ್ದು, ಯಾವುದನ್ನು ನೋಡಬೇಕು ಯಾವುದನ್ನು ಬಿಡಬೇಕು ಎಂಬ ಗೊಂದಲಕ್ಕೆ ಫ್ಯಾನ್‌ಗಳು ಸಿಲುಕಿದ್ದಾರೆ.

VISTARANEWS.COM


on

ಬಾಕ್ಸ್‌ ಆಫೀಸ್‌ ರೇಸ್‌ ವಾರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಈ ವರ್ಷ ಹಲವು ಚಿತ್ರಗಳು ತೆರೆ ಕಾಣಲಿದ್ದು, ಬಾಕ್ಸ್‌ ಆಫಿಸ್‌ನಲ್ಲಿ ಯಾವುದು ಹೆಚ್ಚು ಗುಲ್ಲೆಬ್ಬಿಸುತ್ತದೆ ಎಂಬುದು ಕುತೂಹಲಕಾರಿಯಾಗಿದೆ. ಅಕ್ಷಯ್‌ ಕುಮಾರ್‌ ನಟನೆಯ ಪೃಥ್ವಿರಾಜ್‌, ಅಡವಿ ಶೇಷ್‌ ನಟಿಸಿರುವ ಮೇಜರ್‌ ಮತ್ತು ಕಮಲ್‌ ಹಾಸನ್‌ ಅಭಿನಯದ ವಿಕ್ರಮ್‌ ಸಿನಿಮಾಗಳು ಜೂನ್‌ 3 ರಂದು ತೆರೆ ಕಾಣುತ್ತಿವೆ. ಯಾವುದನ್ನು ನೋಡಬೇಕು, ಯಾವುದನ್ನು ಬಿಡಬೇಕು ಎಂಬ ಕನಪ್ಯೂಸ್‌ನಲ್ಲಿ ಫ್ಯಾನ್‌ಗಳಿದ್ದಾರೆ ಇದ್ದಾರೆ.

ಪೃಥ್ವಿರಾಜ್‌ ಸಿನಿಮಾ ಹಿಂದಿ ಸಿನಿಮಾವಾಗಿದ್ದು, ತೆಲಗು ಮತ್ತು ತಮಿಳಿನಲ್ಲಿಯೂ ರಿಲೀಸ್‌ ಆಗುತ್ತಿದೆ. ಮೇಜರ್‌ ಸಿನಿಮಾ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲಗುವಿನಲ್ಲಿ ತೆರೆ ಕಾಣುತ್ತಿದೆ. ವಿಕ್ರಮ್‌ ಕೂಡ ಹಿಂದಿ ಮತ್ತು ತಮಿಳಿನಲ್ಲಿ ತೆರೆ ಕಾಣುತ್ತಿದ್ದು, ಎಲ್ಲವೂ ಒಂದೇ ದಿನ ಎಲ್ಲಾ ಭಾಷೆಗಳಲ್ಲಿ ಒಂದೇ ಬಾರಿಗೆ ರಿಲೀಸ್‌ ಆದರೆ ಬಾಕ್ಸ್‌ ಆಫಿಸ್‌ನಲ್ಲಿ ಜಿದ್ದಾಜಿದ್ದಿ ಆಗುತ್ತದೆಯೇ ಎಂಬ ಸಂಶಯಗಳು ಮೂಡುತ್ತಿದೆ.

ಇದನ್ನೂ ಓದಿ | ಬಿಡುಗಡೆ ಆಯಿತು ಪೃಥ್ವಿರಾಜ್‌ ಟ್ರೇಲರ್‌, ಮಿಂಚಿದರು ಅಕ್ಷಯ್‌, ಮಾನುಷಿ ಛಿಲ್ಲರ್

ಈ ಹಿಂದೆ ಅಕ್ಷಯ್‌ ಕುಮಾರ್‌ ಸಂವಾದ ಒಂದರಲ್ಲಿ ಮಾತನಾಡುತ್ತ, ʼಪ್ರತಿಯೊಬ್ಬರು ಚಲಚಿತ್ರದಲ್ಲಿ ಕೆಲಸ ಮಾಡುತ್ತಿರುವುದು ಸಂತಸದ ವಿಷಯ. ಯಾರೊಬ್ಬರ ಚಿತ್ರಗಳನ್ನು ತೆರೆ ಕಾಣುವುದನ್ನು ತಡೆಯಲು ಸಾದ್ಯವಿಲ್ಲ. ಪ್ರತೀ ಚಿತ್ರದ ಹಿಂದೆ ಬ್ಯುಸಿನೆಸ್‌ ಇದ್ದೇ ಇರುತ್ತದೆ. ಯಾರೂ ಒಂದಾಗಿ ಇರಲು ಸಾಧ್ಯವಿಲ್ಲ. ಆದರೆ ಅಶಾದಾಯಕವಾಗಿ ಕಲಿಯಬೇಕಷ್ಟೆʼ ಎಂದಿದ್ದರು.

ಅಡವಿ ಕೂಡ ಕಾರ್ಯಕ್ರಮವೊಂದರಲ್ಲಿ ಬಾಕ್ಸ್‌ ಆಫೀಸ್‌ ಕುರಿತು ಮಾತನಾಡಿದ್ದರು. ʼಪ್ರಾಯೋಗಿಕವಾಗಿ ಹೇಳುವುದಾದರೆ, ತೆಲುಗಿನಲ್ಲಿ ನಮ್ಮದು ದೊಡ್ಡ ಚಿತ್ರ, ತಮಿಳಿನಲ್ಲಿ ವಿಕ್ರಮ್ ಮತ್ತು ಹಿಂದಿಯಲ್ಲಿ ಪೃಥ್ವಿರಾಜ್ ಅತಿದೊಡ್ಡ ಚಿತ್ರ, ಆದರೆ ಸಮುದ್ರದಲ್ಲಿ ದೊಡ್ಡ ಮೀನುಗಳಿದ್ದರೂ ನಾವು ಗೋಲ್ಡ್ ಫಿಷ್” ಎಂದು ನಟ ಹೇಳಿದ್ದರು.

ಎಲ್ಲಾ ಸಿನಿಮಾಗಳ ಟ್ರೈಲರ್‌ ನೋಡುವಾಗ ತೆಲುಗು ಮತ್ತು ತಮಿಳು ಚಲನಚಿತ್ರೋದ್ಯಮದ ತಾರೆಗಳನ್ನು ಒಳಗೊಂಡಿವೆ. ಇದೀಗ ಸಖತ್‌ ಕುತೂಹಲ ಇದ್ದು, ಬಾಕ್ಸ್‌ ಆಪೀಸ್‌ ರೇಸ್‌ನಲ್ಲಿ ಯಾವುದು ಗೆಲ್ಲುತ್ತದೆ ಎಂಬುದು ಕಾದು ನೋಡಬೇಕಿದೆ.

ಇದನ್ನೂ ಓದಿ | Major : ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಸಿನಿಮಾ ಟ್ರೈಲರ್‌ ಔಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rajkummar Rao: ಮುಂಬಯಿಗೆ ಬಂದು ಶಾರುಕ್‌ ಮನೆ ಮುಂದೆ ದಿನವಿಡೀ ಕಾದಿದ್ದರಂತೆ ನಟ ರಾಜ್‌ಕುಮಾರ್ ರಾವ್‌!

ದೃಷ್ಟಿಹೀನ ಕೈಗಾರಿಕೋದ್ಯಮಿ ಶ್ರೀಕಾಂತ್ ಬೊಲ್ಲ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಶ್ರೀಕಾಂತ್ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಕುರಿತು ಅಗಾಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ (Rajkummar Rao) ಅವರು ತಾವು ನಡೆದು ಬಂದ ಬದುಕಿನ ಹಾದಿಯನ್ನು ನೆನಪಿಸಿಕೊಂಡರು.

VISTARANEWS.COM


on

By

Rajkummar Rao
Koo

ತುಷಾರ್ ಹಿರಾನಂದಾನಿ (Tushar Hiranandani) ನಿರ್ದೇಶನದ ದೃಷ್ಟಿಹೀನ ಕೈಗಾರಿಕೋದ್ಯಮಿ ಶ್ರೀಕಾಂತ್ ಬೊಲ್ಲ (Srikanth Bolla) ಅವರ ಜೀವನ ಚರಿತ್ರೆಯನ್ನು ಆಧರಿಸಿದ ʼಶ್ರೀಕಾಂತ್ʼ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ನಟ (Bollywood actor) ರಾಜ್ ಕುಮಾರ್ ರಾವ್ (Rajkummar Rao) ಅಭಿನಯಕ್ಕೆ ಭಾರಿ ಮೆಚ್ಚುಗೆ ಕೇಳಿ ಬರುತ್ತಿದೆ.

ಚಿತ್ರದ ಕುರಿತು ಅಗಾಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಅವರು ತಾವು ನಡೆದು ಬಂದಿದ್ದ ಹಾದಿಯನ್ನು ನೆನಪಿಸಿಕೊಂಡರು. ರಾಜ್ ಕುಮಾರ್ ಅವರು ತಮ್ಮ ತವರು ಗುರುಗ್ರಾಮ್ ನಿಂದ ಮುಂಬಯಿಗೆ ಆಗಮಿಸಿದ ಬಳಿಕ ತಮ್ಮ ವೃತ್ತಿಜೀವನದ ಆರಂಭಿಕ ದಿನಗಳನ್ನು ನೆನಪಿಸಿಕೊಂಡರು. ನಾನು ಬೆಳೆಯುತ್ತಿರುವಾಗ ಗುರುಗ್ರಾಮ್ ಅಷ್ಟು ದೊಡ್ಡ ನಗರವಾಗಿರಲಿಲ್ಲ. ಅದಕ್ಕೆ ಹೋಲಿಸಿದರೆ ಆಗ ನನಗೆ ಮುಂಬಯಿ ತುಂಬಾ ದುಬಾರಿಯಾಗಿತ್ತು. ವಿಶೇಷವಾಗಿ ನಾನು ತುಂಬಾ ವಿನಮ್ರ ಹಿನ್ನೆಲೆಯಿಂದ ಬಂದವನಾಗಿದ್ದೆ. ಸಾಂಸ್ಕೃತಿಕ ಭಿನ್ನತೆಯೂ ಎದ್ದುಕಾಣುತ್ತಿತ್ತು. ಆದರೆ ನಾನು ಇಲ್ಲಿಯೇ ಉಳಿಯಬೇಕಾಗಿತ್ತು ಮತ್ತು ನಾನು ಯಾವಾಗಲೂ ಮುಂಬಯಿ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿದ್ದೆ ಎಂದು ಅವರು ವಿ.ಆರ್. ಯುವಾ ಜೊತೆಗಿನ ಚಾಟ್‌ನಲ್ಲಿ ಹೇಳಿಕೊಂಡರು.

ನಾನು 10ನೇ ತರಗತಿಯನ್ನು ಪೂರ್ಣಗೊಳಿಸಿದ ತಕ್ಷಣ, ಬೂಗೀ ವೂಗೀ ನೃತ್ಯ ಸ್ಪರ್ಧೆಯ ಟಿವಿ ಸರಣಿ ಆಡಿಷನ್ ನೀಡಲು ಮುಂಬಯಿಗೆ ಬಂದೆ. ಆಗ ನಾನು ಮುಂಬಯಿ ನಗರ ಮತ್ತು ಶಾರುಖ್ ಖಾನ್ ಅವರ ಮನೆಯನ್ನು ನೋಡಲು ಬಯಸಿದ್ದೆ. ಆಗ ನನಗೆ 16 ವರ್ಷ. ನನ್ನ 12 ವರ್ಷದ ಸೋದರ ಸಂಬಂಧಿಯೊಂದಿಗೆ ರೈಲಿನಲ್ಲಿ ನಗರಕ್ಕೆ ಬಂದಿದ್ದೆ. ನಮ್ಮಿಬ್ಬರ ಬಳಿಯೂ ಹಣವಿಲ್ಲದ ಕಾರಣ ಚಿಕ್ಕಮ್ಮನಿಂದ 5 ಸಾವಿರ ರೂ. ಪಡೆದು ಬಂದಿದ್ದೆವು. ನನ್ನ ಕುಟುಂಬವು ತುಂಬಾ ಬೆಂಬಲ ನೀಡಿತು. ಇಬ್ಬರು ಮಕ್ಕಳು ಮೂರು ದಿನ ರೈಲು ಪ್ರಯಾಣ ಮಾಡಿ ಮುಂಬಯಿಗೆ ಬಂದಿದ್ದೆವು. ಇಲ್ಲಿಗೆ ಬಂದ ಬಳಿಕ ನಗರವನ್ನು ನೋಡಿ ಮೈಮರೆತಿದ್ದೆ ಎಂದು ಅವರು ನೆನಪಿಸಿಕೊಂಡರು. ಬೂಗಿ ವೂಗಿ ಆಡಿಷನ್‌ಗೆ ಹಾಜರಾಗಿದ್ದರೂ ಆಯ್ಕೆಯಾಗಲಿಲ್ಲ ಎಂದು ಪ್ರಸ್ತಾಪಿಸಿದ ರಾಜ್‌ಕುಮಾರ್, ಮುಂಬಯಿಗೆ ತನ್ನ ಮೊದಲ ಭೇಟಿಯ ನೆನಪುಗಳನ್ನು ಮೆಲುಕು ಹಾಕಿದರು.

ಶಾರುಖ್ ಖಾನ್ ಭೇಟಿಯಾಗುವ ಹಂಬಲ

ಇಡೀ ದಿನ ಶಾರುಖ್ ಖಾನ್ ಅವರ ಮನೆಯ ಮುಂದೆ ಕಾಯುತ್ತಿದ್ದೆವು. ರಾತ್ರಿ, ನಾವು ರೈಲ್ವೇ ನಿಲ್ದಾಣದಲ್ಲಿಯೇ ಉಳಿದುಕೊಂಡೆವು ಮತ್ತು ಆಗ ನಮಗೆ ಹಣವಿಲ್ಲದ ಕಾರಣ ಕೇವಲ ವಡಾ ಪಾವ್ ಅನ್ನು ಸೇವಿಸಿದ್ದೇವೆ. ಎರಡು ದಿನ ಇಲ್ಲಿದ್ದೆವು. ಬೆಳಗ್ಗೆ 10 ಗಂಟೆಗೆ ಮನ್ನತ್ ತಲುಪಿ ಸಂಜೆ 4-5 ಗಂಟೆಯವರೆಗೆ ಕಾಯುತ್ತಿದ್ದೆವು. ನಾವು ಅವರನ್ನು ನೋಡಲೇಬೇಕು ಎಂಬ ಕನಸಿತ್ತು.

ಕೊನೆಗೂ ಶಾರುಖ್ ಖಾನ್ ಅವರನ್ನು ಮುಖಾಮುಖಿಯಾಗಿ ಭೇಟಿಯಾದುದನ್ನು ನೆನಪಿಸಿಕೊಂಡ ರಾಜ್‌ಕುಮಾರ್, ನಾನು ನಟನಾಗಲು ಅವರು ಸ್ಫೂರ್ತಿ. ಅವರ ಬದುಕಿನ ಪ್ರಯಾಣದಿಂದ ನಾನು ತುಂಬಾ ಪ್ರಭಾವಿತನಾಗಿದ್ದೆ ಮತ್ತು ಸ್ಫೂರ್ತಿ ಪಡೆದಿದ್ದೇನೆ. ವಿಶೇಷವಾಗಿ ಅವರು ದೆಹಲಿಯವರು. ಹೊರಗಿನವರು ಮತ್ತು ರಂಗಭೂಮಿ ಹಿನ್ನೆಲೆಯನ್ನು ಹೊಂದಿದ್ದರು. ಆದರೆ ಅವರನ್ನು ಭೇಟಿಯಾಗುವುದು ತುಂಬಾ ಅಸಾಧ್ಯ ಎಂದೆನಿಸುತ್ತಿತ್ತು.

ಆ ಸಮಯದಲ್ಲಿ ಸಿಟಿಲೈಟ್ಸ್ (2014) ಅನ್ನು ಪ್ರಚಾರ ಮಾಡುತ್ತಿದ್ದೆವು. ಅವರು ಮೆಹಬೂಬ್ ಸ್ಟುಡಿಯೋದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ ಎಂದು ತಿಳಿಯಿತು. ನಾನು ಅವರನ್ನು ಭೇಟಿಯಾಗಬೇಕೆಂದು ಬಯಸಿದ್ದರೂ, ನನಗೆ ಆರಂಭದಲ್ಲಿ ಭಯವಾಯಿತು. ನಾನು ಅಲ್ಲಿದ್ದ ಶಕುನ್ (ಬಾತ್ರಾ) ಗೆ ಮೆಸೇಜ್ ಮಾಡಿದೆ. ಅನಂತರ ಅವರು ಹಿಂತಿರುಗಿದರು ಮತ್ತು ಅವರು ಎಸ್ ಆರ್ ಕೆ ನನಗೆ ಕರೆ ಮಾಡುತ್ತಿದ್ದಾರೆ ಎಂದು ಹೇಳಿದರು. ನಾನು ತಕ್ಷಣ ನನ್ನನ್ನು ಪರಿಚಯಿಸಲು ಮತ್ತು ನನ್ನ ಹೆಸರನ್ನು ರಾಜ್‌ಕುಮಾರ್ ರಾವ್ ಮತ್ತು ನಾನು ಎಫ್‌ಟಿಐಐನಲ್ಲಿ ಓದಿದ ನಟ ಎಂದು ಹೇಳಲು ತಯಾರಿ ನಡೆಸಲಾರಂಭಿಸಿದೆ. ಆದರೆ ಅವರಿಗೆ ನನ್ನ ಬಗ್ಗೆ ಎಲ್ಲವೂ ತಿಳಿದಿತ್ತು. “ಶಾಹಿದ್‌ʼಗಾಗಿ ನಾನು ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದೇನೆ, ʼಕೈ ಪೋ ಚೆʼ ಚಿತ್ರ ಚೆನ್ನಾಗಿದೆ ಮತ್ತು ʼಸಿಟಿಲೈಟ್ಸ್ʼ ಶೀಘ್ರದಲ್ಲೇ ಬರಲಿದೆ ಎಂದು ಅವರು ತಿಳಿದಿದ್ದರು. ಅದರ ಅನಂತರ ಶಾರುಖ್ ಖಾನ್ ಅವರನ್ನು ಹಲವು ಬಾರಿ ಭೇಟಿ ಮಾಡಿದರೂ, ಅವರು ಮತ್ತೆ ಬಾಲಿವುಡ್‌ನ ಬಾದ್‌ಶಾ ಅವರನ್ನು ಎದುರಿಸಿದಾಗಲೆಲ್ಲಾ ಅವರು ಸ್ಟಾರ್-ಸ್ಟ್ರಕ್ ಆಗುತ್ತಾರೆ ಎಂದು ರಾಜ್‌ಕುಮಾರ್ ಹೇಳಿದರು.

ಇದನ್ನೂ ಓದಿ: House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

ಈಗಲೂ ನನಗೆ ಹಿರಿಯ ನಾಯಕರ ಕರೆ ಬಂದರೆ ಅದರಲ್ಲೂ ಅಕ್ಷಯ್ ಕುಮಾರ್ ಅಥವಾ ಶಾರುಖ್ ಖಾನ್ ಕರೆ ಮಾಡಿದರೆ ನಾನು ತುಂಬಾ ಉತ್ಸುಕನಾಗುತ್ತೇನೆ. ನನ್ನೊಳಗಿನ ಅಭಿಮಾನಿ ಮತ್ತು ಗುರ್ಗಾಂವ್‌ನ ಮಗು ಇನ್ನೂ ಜೀವಂತವಾಗಿದೆ ಎಂಬಂತೆ ಭಾಸವಾಗುತ್ತದೆ ಎಂದು ಹೇಳಿದರು.

Continue Reading

ಟಾಲಿವುಡ್

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Ram Pothineni ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

VISTARANEWS.COM


on

Ram Pothineni Double iSmart teaser with Sanjay Dutt
Koo

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ (Ram Pothineni) ಹಾಗೂ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ `ಡಬಲ್ ಇಸ್ಮಾರ್ಟ್‘ (Double iSmart) ಟೀಸರ್‌ ಬಿಡುಗಡೆಗೊಂಡಿದೆ. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.

ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್ ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡುವಂತಿದೆ. ‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: Sanjay Dutt: ‘ಡಬಲ್ ಇಸ್ಮಾರ್ಟ್’ಗೆ ʻಬಿಗ್ ಬುಲ್ʼ ಎಂಟ್ರಿ; ಸಂಜಯ್ ದತ್ ಬರ್ತ್‌ಡೇ ಸ್ಪೆಷಲ್‌!

ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

ಬಿಗ್ ಬುಲ್ ಪಾತ್ರದಲ್ಲಿ ಸಂಜಯ್ ದತ್

ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್‌ದತ್‌ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಈ ಹಿಂದೆ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್‌ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಾಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

Kannada New Movie: ‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

VISTARANEWS.COM


on

Kannada New Movie swapna mantapa shooting compleated
Koo

ಬೆಂಗಳೂರು: ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಿಸ್‌ ಸಂಸ್ಥೆಯಿಂದ (Kannada New Movie) ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನ ಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

ಇದನ್ನೂ ಓದಿ: Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

Continue Reading

ಸಿನಿಮಾ

House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

ಜಿಯೋ ಸಿನಿಮಾ ಪ್ರೀಮಿಯಂನಲ್ಲಿ ವಿಶೇಷವಾಗಿ ಪ್ರಸಾರವಾಗುವ ʻಹೌಸ್ ಆಫ್ ದಿ ಡ್ರ್ಯಾಗನ್ ಎಸ್2ʼ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ಜೂನ್ 17ರಿಂದ ಲಭ್ಯವಿರುತ್ತಿದೆ. ಪ್ರತಿ ಸೋಮವಾರ ಅಮೆರಿಕ ಸೇರಿದಂತೆ ಎಲ್ಲ ಕಡೆ ಕಂತುಗಳು ಪ್ರಸಾರವಾಗಲಿವೆ.ಮ್ಯಾಟ್ ಸ್ಮಿತ್, ಒಲಿವಿಯಾ ಕೂಕ್, ಎಮ್ಮಾ ಡಿ’ಅರೇ, ಈವ್ ಬೆಸ್ಟ್, ಸ್ಟೀವ್ ಟೌಸ್ಸೇಂಟ್, ಫೇಬಿಯೆನ್ ಫ್ರಾಂಕೆಲ್, ಎವಾನ್ ಮಿಷೆಲ್, ಟಾಮ್ ಗ್ಲಿನ್ನ್-ಕಾರ್ನೀ ಸೊನೊಯಾ ಮಿಝುನೊ ಮತ್ತು ರಿಸ್ ಇಫಾನ್ಸ್ ತಾರಾಗಣ ಹೊಂದಿದೆ.

VISTARANEWS.COM


on

House of the Dragon season 2 new trailer hints at a bloody
Koo

ಬೆಂಗಳೂರು: 2022ರ ಆಗಸ್ಟ್ ತಿಂಗಳಲ್ಲಿ ‘ಗೇಮ್ ಆಫ್ ಥ್ರೋನ್ಸ್’ನ ಪ್ರೀಕ್ವೆಲ್ ‘ಹೌಸ್ ಆಫ್ ದಿ ಡ್ರ್ಯಾಗನ್’ (House of the Dragon) ಮೊದಲ ಸೀಸನ್ ಬಿಡುಗಡೆ ಆಯ್ತು. ಮೊದಲ ಸೀಸನ್​ನಲ್ಲಿಯೇ ಗಮನ ಸೆಳೆದಿದ್ದ ‘ಹೌಸ್ ಆಫ್ ದಿ ಡ್ರ್ಯಾಗನ್’ ಎರಡನೇ ಸೀಸನ್​ ಎರಡು ವರ್ಷಗಳ ಬಳಿಕ ಬಿಡುಗಡೆ ಆಗಲಿದೆ. ಇದೀಗ ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2ರ ಟ್ರೈಲರ್ ಬಿಡುಗಡೆ ಆಗಿದ್ದು, ಅದರ ಜೊತೆಗೆ ವೆಬ್ ಸರಣಿಯ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಜಿಯೋ ಸಿನಿಮಾ ಪ್ರೀಮಿಯಂನಲ್ಲಿ ವಿಶೇಷವಾಗಿ ಪ್ರಸಾರವಾಗುವ ʻಹೌಸ್ ಆಫ್ ದಿ ಡ್ರ್ಯಾಗನ್ ಎಸ್2ʼ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ಜೂನ್ 17ರಿಂದ ಲಭ್ಯವಿರುತ್ತಿದೆ. ಪ್ರತಿ ಸೋಮವಾರ ಅಮೆರಿಕ ಸೇರಿದಂತೆ ಎಲ್ಲ ಕಡೆ ಕಂತುಗಳು ಪ್ರಸಾರವಾಗಲಿವೆ.

ಜಾರ್ಜ್ ಆರ್.ಆರ್. ಮಾರ್ಟಿನ್ ಅವರ “ಫೈರ್ ಆ್ಯಂಡ್ ಬ್ಲಡ್” ಆಧರಿಸಿದ ಈ ಸರಣಿಯು ಹೌಸ್ ಟಾರ್ಗೇರಿಯನ್ ಕಥೆಯನ್ನು ಹೇಳುತ್ತಿದೆ. ಈ ರಾಜ ಕುಟುಂಬದಲ್ಲಿ ಅತ್ಯಂತ ಕಠಿಣ ಅಧಿಕಾರದ ಸಂಘರ್ಷಗಳ ನಂತರ ಕುಟುಂಬವು ಹೇಗೆ ರಾಜಕೀಯ ಒಳಸಂಚು, ಕೌಟುಂಬಿಕ ಶತ್ರುತ್ವಗಳನ್ನು ಎದುರಿಸಿ ಮುನ್ನಡೆಯುತ್ತವೆ ಮತ್ತು ಸಿಂಹಾಸನವನ್ನು ಮರಳಿ ಪಡೆಯಲು ಎದುರಾದ ಆಂತರಿಕ ಯುದ್ಧವನ್ನು ಹೇಗೆ ನಿಭಾಯಿಸುತ್ತದೆ ಎನ್ನುವುದನ್ನು ಹೇಳುತ್ತದೆ.

ಇದನ್ನೂ ಓದಿ: Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

ಮ್ಯಾಟ್ ಸ್ಮಿತ್, ಒಲಿವಿಯಾ ಕೂಕ್, ಎಮ್ಮಾ ಡಿ’ಅರೇ, ಈವ್ ಬೆಸ್ಟ್, ಸ್ಟೀವ್ ಟೌಸ್ಸೇಂಟ್, ಫೇಬಿಯೆನ್ ಫ್ರಾಂಕೆಲ್, ಎವಾನ್ ಮಿಷೆಲ್, ಟಾಮ್ ಗ್ಲಿನ್ನ್-ಕಾರ್ನೀ ಸೊನೊಯಾ ಮಿಝುನೊ ಮತ್ತು ರಿಸ್ ಇಫಾನ್ಸ್ ತಾರಾಗಣ ಹೊಂದಿದೆ. ಹೆಚ್ಚುವರಿ ತಾರಾಗಣದಲ್ಲಿ ಹ್ಯಾರಿ ಕೊಲೆಟ್, ಬೆಥನಿ ಅಂಟೋನಿಯ, ಫೋಬ್ ಕ್ಯಾಂಪ್ ಬೆಲ್, ಫಿಯಾ ಸಬನ್, ಜೆಫರ್ಸನ್ ಹಾಲ್ ಮತ್ತು ಮ್ಯಾಥ್ಯೂ ನೀಧಂ ಇದ್ದಾರೆ. ಹೊಸ ಸೀಸನ್ ನಲ್ಲಿ ಅನುಬಕರ್ ಸಲೀಂ, ಗೇಯ್ಲ್ ರಂಕಿನ್, ಫ್ರೆಡ್ಡೀ ಫಾಕ್ಸ್, ಸಿಮನ್ ರಸೆಲ್ ಬೀಲ್, ಕ್ಲಿಂಟನ್ ಲಿಬರ್ಟಿ, ಜೆಮೀ ಕೆನ್ನಾ, ಕಿಯೆರನ್ ಬ್ಯೂ, ಟಾಮ್ ಬೆನೆಟ್, ಟಾಮ್ ಟೇಲರ್ ಮತ್ತು ವಿನ್ಸೆಂಟ್ ರೆಗಾನ್ ಇದ್ದಾರೆ.

ಹೌಸ್ ಆಫ್ ದಿ ಡ್ರ್ಯಾಗನ್‘ ಸೀಸನ್ 2 ಜೂನ್ 17 ರಂದು ಎಚ್​ಬಿಓ ಮ್ಯಾಕ್ಸ್ ನಲ್ಲಿ ಬಿಡುಗಡೆ ಆಗಲಿದೆ. ಅದೇ ದಿನ ಜಿಯೋ​ನಲ್ಲಿಯೂ ಬಿಡುಗಡೆ. ಜಿಯೋನಲ್ಲಿ ‘ಹೌಸ್ ಆಫ್ ದಿ ಡ್ರಾಗನ್’ ವೆಬ್ ಸರಣಿ ಇಂಗ್ಲೀಷ್ ಸೇರಿದಂತೆ ಒಟ್ಟು ಆರು ಭಾಷೆಯಲ್ಲಿ ಬಿಡುಗಡೆ ಕಾಣಲಿದೆ. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಕನ್ನಡ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ.

Continue Reading
Advertisement
Amit Shah
ದೇಶ6 mins ago

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

PBKS vs RR
ಕ್ರೀಡೆ11 mins ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ29 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ40 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ47 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು51 mins ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ1 hour ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ1 hour ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ2 hours ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ18 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌