ಟ್ರೇಲರ್‌ ರಿಲೀಸ್‌ ಬೆನ್ನಲ್ಲೇ ಟ್ರೆಂಡ್‌ ಆಗ್ತಿದೆ Boycott LaalSingh Chaddha; ಆಮಿರ್‌ ಮಾತು ಮರೆತಿಲ್ಲ ಜನ - Vistara News

ಬಾಲಿವುಡ್

ಟ್ರೇಲರ್‌ ರಿಲೀಸ್‌ ಬೆನ್ನಲ್ಲೇ ಟ್ರೆಂಡ್‌ ಆಗ್ತಿದೆ Boycott LaalSingh Chaddha; ಆಮಿರ್‌ ಮಾತು ಮರೆತಿಲ್ಲ ಜನ

Laal Singh Chaddha: ಆಮೀರ್‌ ಖಾನ್‌ ಮತ್ತು ಕರೀನಾ ಕಪೂರ್‌ ಹಿಂದೆ ಆಡಿದ ಒಂದಷ್ಟು ಮಾತುಗಳನ್ನು ಇಟ್ಟುಕೊಂಡು ನೆಟ್ಟಿಗರು ಅವರಿಬ್ಬರನ್ನೂ ಟಾರ್ಗೆಟ್‌ ಮಾಡುತ್ತಿದ್ದಾರೆ.

VISTARANEWS.COM


on

Laal Singh Chaddha
ಲಾಲ್‌ ಸಿಂಗ್‌ ಛಡ್ಡಾ ದೃಶ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಆಮಿರ್‌ ಖಾನ್‌ ಮತ್ತು ಕರೀನಾ ಕಪೂರ್‌ ಅಭಿನಯದ ಹಿಂದಿ ಸಿನಿಮಾ ಲಾಲ್‌ ಸಿಂಗ್‌ ಛಡ್ಡಾ (Laal Singh Chaddha) ಟ್ರೇಲರ್‌ ಭಾನುವಾರ (ಮೇ 29)ವಷ್ಟೇ ಬಿಡುಗಡೆಯಾಗಿದೆ. ನಿನ್ನೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ ಫೈನಲ್‌ ಪಂದ್ಯದ ವೇಳೆಯೇ ಈ ಸಿನಿಮಾದ ಟ್ರೇಲರ್‌ ಕೂಡ ರಿಲೀಸ್‌ ಆಗಿದ್ದು ವಿಶೇಷ. ಆದರೆ ಟ್ರೇಲರ್‌ ಬಿಡುಗಡೆಯಾದ ಕೆಲವೇ ಹೊತ್ತಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ Boycott LaalSingh Chaddha (ಲಾಲ್‌ ಸಿಂಗ್‌ ಛಡ್ಡಾ ಚಿತ್ರವನ್ನು ಬಹಿಷ್ಕರಿಸಿ) ಎಂಬ ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗುತ್ತಿದೆ. ಅಂದರೆ ಆಮೀರ್‌ ಖಾನ್‌ ಅಭಿನಯದ ಈ ಸಿನಿಮಾವನ್ನು ನೋಡಬೇಡಿ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

1994ರ ಹಾಲಿವುಡ್‌ ಸಿನಿಮಾ ಫಾರೆಸ್ಟ್‌ ಗಂಪ್‌ನ ರಿಮೇಕ್‌ ಆಗಿರುವ ಲಾಲ್‌ ಸಿಂಗ್‌ ಛಡ್ಡಾವನ್ನು ನಿರ್ದೇಶನ ಮಾಡಿದ್ದು ಅದ್ವೈತ್‌ ಚಂದನ್‌. ಆಮಿರ್‌ ಖಾನ್‌ ಪ್ರೊಡಕ್ಷನ್ಸ್‌ ನಿರ್ಮಾಣದ ಸಿನಿಮಾ, ಇದೇ ವರ್ಷ 2022ರಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಇನ್ನೊಂದು ಪ್ರಮುಖ ವಿಷಯವೆಂದರೆ ಸಿನಮಾದಲ್ಲಿ ತೆಲುಗು ನಟ ನಾಗಚೈತನ್ಯ ಕೂಡ ಅಭಿನಯಿಸಿದ್ದು, ಇದು ಅವರ ಮೊದಲ ಹಿಂದಿ ಸಿನಿಮಾ. ಹಾಗಾಗಿ ಸಿನಿಪ್ರಿಯರಲ್ಲಿ ಕುತೂಹಲ ತುಸು ಜಾಸ್ತಿಯಾಗಿಯೇ ಇದೆ. ಇದೇ ಹೊತ್ತಲ್ಲಿ, ಒಂದು ವರ್ಗದ ಜನರು ಈಗಿನಿಂದಲೇ ಲಾಲ್‌ ಸಿಂಗ್‌ ಛಡ್ಡಾ ಸಿನಿಮಾ ಬಹಿಷ್ಕರಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಕರೆ ನೀಡುತ್ತಿದ್ದಾರೆ. ಈ ಅಭಿಯಾನ ಟ್ರೆಂಡ್‌ ಕೂಡ ಆಗಿದೆ. ಟ್ರೇಲರ್‌ ವೀಕ್ಷಿಸಿಲು ಇಲ್ಲಿ ಕ್ಲಿಕ್‌ ಮಾಡಿ.

ಇದರ ಮೂಲ ಸಿನಿಮಾ ಫಾರೆಸ್ಟ್‌ ಗಂಪ್‌ ಇನ್ನೂ ಒಟಿಟಿಯಲ್ಲಿ ಲಭ್ಯವಿದೆ. ಸ್ವಂತ ಕತೆ ಮಾಡುವ ಬದಲು ಹಾಲಿವುಡ್‌ ರಿಮೇಕ್‌ ಮಾಡುತ್ತಿದ್ದೀರಿ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಹಾಗೇ, ಓಟಿಟಿಯಲ್ಲಿ ಆರಾಮಾಗಿ ಸಿನಿಮಾ ನೋಡಬಹುದು. ಅದರ ರಿಮೇಕ್‌ ನೋಡಲು ಯಾಕೆ ಹಣ ಸುರಿಯಬೇಕು ಎಂದೂ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಅದರೊಂದಿಗೆ ಈ ಹಿಂದೆ ಆಮಿರ್‌ ಖಾನ್‌ ನೀಡಿದ ಕೆಲವು ವಿವಾದಾತ್ಮಕ ಹೇಳಿಕೆಗಳನ್ನೂ ಇಟ್ಟುಕೊಂಡು ನೆಟ್ಟಿಗರು ಟ್ರೋಲ್‌ ಮಾಡುತ್ತಿದ್ದಾರೆ. 2015ರಲ್ಲಿ ಆಮಿರ್‌ ಖಾನ್‌ ಅಸಹಿಷ್ಣುತೆ ಬಗ್ಗೆ ಮಾತನಾಡಿ ದೇಶದ ಜನರ ಕೋಪಕ್ಕೆ ಗುರಿಯಾಗಿದ್ದರು. ಭಾರತದಲ್ಲಿ ತೀವ್ರ ಅಸಹಿಷ್ಣುತೆ ಇದೆ. ನಮ್ಮ ಕುಟುಂಬಕ್ಕೂ ಅಭದ್ರತೆ ಕಾಡುತ್ತಿದೆ ಎಂದು ಹೇಳಿದ್ದರು. ಆಗಲೂ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ಆಮಿರ್‌ ಖಾನ್‌ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಈಗ ಅವರ ಲಾಲ್‌ ಸಿಂಗ್‌ ಛಡ್ಡಾ ಸಿನಿಮಾ ಟ್ರೇಲರ್‌ ಬಿಡುಗಡೆಯಾದ ಹೊತ್ತಲ್ಲಿ, ಮತ್ತೊಮ್ಮೆ ಅದೇ ಅಸಹಿಷ್ಣುತೆ ವಿಚಾರವನ್ನೇ ಇಟ್ಟುಕೊಂಡು ನೆಟ್ಟಿಗರು ಟ್ರೋಲ್‌ ಮಾಡುತ್ತಿದ್ದಾರೆ.

ಕರೀನಾ ಕಪೂರ್‌ ಕೂಡ ಟ್ರೋಲ್‌
ಕರೀನಾ ಕಪೂರ್‌ ಬಗ್ಗೆಯೂ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಲಿವುಡ್‌ನಲ್ಲಿ ಸ್ವಜನಪಕ್ಷಪಾತ (ನೆಪೋಟಿಸಂ) ನಡೆಯುತ್ತಿದೆ ಎಂಬ ಚರ್ಚೆ, ಹಿಂದೆ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಮೃತಪಟ್ಟ ಬಳಿಕ ಜೋರಾಗಿ ನಡೆಯುತ್ತಿತ್ತು. ಅಲ್ಲಿ ತಮಗೆ ಬೇಕಾದವರನ್ನು ಮಾತ್ರ ಬೆಳೆಸುತ್ತಾರೆ. ಹೀಗಾಗಿಯೇ ಸುಶಾಂತ್‌ರಂತ ಹಲವು ನಟರು ಪ್ರತಿಭೆಯಿದ್ದರೂ ಅವಕಾಶ ವಂಚಿತರಾಗುತ್ತಿದ್ದಾರೆ ಎಂದು ಅನೇಕರು ಹೇಳಿದ್ದರು. ಆ ವೇಳೆ ಕರೀನಾ ಕಪೂರ್‌ ಹೀಗೊಂದು ಪ್ರತಿಕ್ರಿಯೆ ನೀಡಿದ್ದರು. “ನನ್ನ ಸಿನಿ ಬದುಕು ಶುರುವಾಗಿ 21 ವರ್ಷ ಕಳೆಯಿತು. ನಾನಿಷ್ಟು ವರ್ಷ ಮಾಡಿದ ಸಾಧನೆ ಯಾವುದೇ ನೆಪೋಟಿಸಂನಿಂದ ಆಗಿದ್ದಲ್ಲ. ಬಾಲಿವುಡ್‌ನಲ್ಲಿ ಸ್ವಜನಪಕ್ಷಪಾತವಿಲ್ಲ ಎಂಬುದನ್ನು ನಾನು ನಮ್ಮ ಸೂಪರ್‌ಸ್ಟಾರ್‌ಗಳ ಮಕ್ಕಳ ಪಟ್ಟಿಯನ್ನು ಕೊಡುವ ಮೂಲಕ ವಿವರಿಸಬಲ್ಲೆ. ನೆಪೋಟಿಸಂ ಇದೆ ಎಂದು ನಮ್ಮನ್ನು ದೂಷಿಸಬೇಡಿ. ನಾವು ಸ್ವಜನಪಕ್ಷಪಾತದಿಂದ ಉದ್ಧಾರವಾದ ಮಕ್ಕಳು ಎಂದು ಭಾವಿಸುವವರು ನಮ್ಮ ಸಿನಿಮಾವನ್ನೇ ನೋಡಬೇಡಿ” ಎಂದಿದ್ದರು. ಈಗ ನೆಟ್ಟಿಗರು ಅದೇ ಮಾತನನ್ನು ನೆನಪಿಸಿಕೊಳ್ಳುತ್ತಿದ್ದಾರೆ. ʼಕರೀನಾ ಹೇಳಿದ್ದಾರೆ ಅವರ ಸಿನಿಮಾ ನೋಡುವುದು ಬೇಡವೆಂದು. ನಾವ್ಯಾಕೆ ಅವರ ಸಿನಿಮಾ ನೋಡೋಣ, ಅದೇ ಹಣವನ್ನು ಬಡ ಮಕ್ಕಳಿಗೆ ಊಟ ನೀಡಲು ಖರ್ಚು ಮಾಡೋಣʼ ಎಂದು ಹೇಳುತ್ತಿದ್ದಾರೆ.

ಆಮೀರ್‌ ಖಾನ್‌ ತುಂಬ ಕಾದು, ವೈಯಕ್ತಿಕವಾಗಿ ಇಂಟರೆಸ್ಟ್‌ ತೆಗೆದುಕೊಂಡಿರುವ ಸಿನಿಮಾ ಈ ಲಾಲ್‌ ಸಿಂಗ್‌ ಛಡ್ಡಾ. ಆಗಸ್ಟ್‌ 11ಕ್ಕೆ ತೆರೆಕಾಣಲು ಸಜ್ಜಾಗಿದೆ. ಆದರೆ ಟ್ರೇಲರ್‌ ಬಿಡುಗಡೆಯಾಗುತ್ತಿದ್ದಂತೆ ಬಹಿಷ್ಕಾರದ ಮಾತುಗಳು ಕೇಳಿಬರುತ್ತಿದ್ದು, ಇಲ್ಲಿವೆ ನೋಡಿ ನೆಟ್ಟಿಗರ ಒಂದಷ್ಟು ಟ್ವೀಟ್‌ಗಳು..

https://twitter.com/United__4SSR/status/1503038233575587842?s=20&t=p4aCI8OdUBhHMcF576QmLA
https://twitter.com/United__4SSR/status/1530816251248926720?s=20&t=DFFGhLN0CGNSB47EnCOHrQ

ಇದನ್ನೂ ಓದಿ: ಕರಣ್ ಜೋಹರ್ @ 50: ಯಶ್ ರಾಜ್ ಸ್ಟುಡಿಯೋದಲ್ಲಿ ಬಾಲಿವುಡ್‌ ನೈಟ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading

ಸಿನಿಮಾ

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Chandu Champion: ಚಂದು ಚಾಂಪಿಯನ್ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ಚಂದು ಚಾಂಪಿಯನ್​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Chandu Champion Injured Kartik Aaryan looks intense
Koo

ಬೆಂಗಳೂರು: ಕಾರ್ತಿಕ್ ಆರ್ಯನ್ ( Kartik Aaryan) ಅವರು ತಮ್ಮ ಮುಂಬರುವ ಚಿತ್ರ ‘ಚಂದು ಚಾಂಪಿಯನ್’ ನ (Chandu Champion) ಎರಡನೇ ಪೋಸ್ಟರ್‌ ಬಿಡುಗಡೆಗೊಳಿಸಿದ್ದಾರೆ. ಬಾಕ್ಸಿಂಗ್ ರಿಂಗ್‌ನಲ್ಲಿ ಗಾಯಗೊಂಡ ಮುಖದೊಂದಿಗೆ ಕಂಡಿದ್ದಾರೆ. ಮೊದಲ ಪೋಸ್ಟರ್ ಅನ್ನು ಮೇ 15ರಂದು ಅನಾವರಣಗೊಳಿಸಲಾಯಿತು. ಕಬೀರ್ ಖಾನ್ ನಿರ್ದೇಶನದ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಕಾರ್ತಿಕ್​​ ಗಮನಾರ್ಹ ರೂಪಾಂತರಕ್ಕೆ ಒಳಗಾಗಿರುವುದು ಕಂಡಿದೆ. ಕಠಿಣ ತಯಾರಿ ನಡೆಸಿರುವುದಾಗಿ ಕಂಡು ಬರುತ್ತಿದೆ.

ʼಚಂದು ಚಾಂಪಿಯನ್ʼ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ʼಚಂದು ಚಾಂಪಿಯನ್ʼ​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sara Ali Khan: ಬ್ರೇಕಪ್‌ ಕ್ಲ್ಯಾರಿಟಿ ಬೆನ್ನಲ್ಲೇ ಸಾರಾ ಆಯೋಜಿಸಿದ್ದ ಪಾರ್ಟಿಯಲ್ಲಿ ಕಾರ್ತಿಕ್ ಆರ್ಯನ್!

ಕಾರ್ತಿಕ್ ಆರ್ಯನ್ ಅವರ ಈ ಕಠಿಣ ಶ್ರಮಕ್ಕೆ ನಿರ್ದೇಶಕ ಕಬೀರ್ ಖಾನ್ ಟಿಪ್ಪಣಿಯನ್ನು ಬರೆದಿದ್ದಾರೆ. ʻʻಚಂದು ಚಾಂಪಿಯನ್‌ನ ಕಥೆಯು ನಂಬಲಾಗದಷ್ಟು ಸ್ಪೂರ್ತಿದಾಯಕ ನೈಜ ಕಥೆಯಾಗಿದೆ. ಆದರೆ ಈ ಚಾಂಪಿಯನ್ ಆಗಲು ಕಾರ್ತಿಕ್ ಮಾಡಿದ ಪ್ರಯಾಣವು ಸ್ಫೂರ್ತಿದಾಯಕವಾಗಿದೆ. ಶೇ. 39ರಷ್ಟು ಬಾಡಿ ಫ್ಯಾಟ್‌ ಕರಗಿಸಿದರುʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಕಬೀರ್ ಖಾನ್ ಆ್ಯಕ್ಷನ್​ ಕಟ್​ ಹೇಳಿರುವ ʻಈ ಚಂದು ಚಾಂಪಿಯನ್ʼ, ಓರ್ವ ಕ್ರೀಡಾಪಟುವಿನ ನೈಜ ಕಥೆಯನ್ನು ಬಿಚ್ಚಿಡಲಿದೆ. ಈ ಪಾತ್ರಕ್ಕಾಗಿ ಕಾರ್ತಿಕ್ ಅವರ ಪ್ರಯಾಣ ಗಮನಾರ್ಹವಾದದ್ದು. ಜೂನ್ 14 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ.

Continue Reading

ಬಾಲಿವುಡ್

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Cannes 2024: ಊರ್ವಶಿ ಅವರ ವಿಡಿಯೊಗಳು ವೈರಲ್‌ ಆಗುತ್ತಿವೆ. ಬಾಡಿಕಾನ್ ಡ್ರೆಸ್ ಧರಿಸಿರುವುದನ್ನು ಕಾಣಬಹುದು. ದೀಪಿಕಾ ಪಡುಕೋಣೆ ಕಾನ್ ಫಿಲ್ಮ್ ಫೆಸ್ಟಿವಲ್ 2018 ರಲ್ಲಿ ಇದೇ ರೀತಿಯ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಊರ್ವಶಿ ರೌಟೇಲಾ ಅವರ ಈ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಊರ್ವಶಿ ರೌಟೇಲಾ ದೀಪಿಕಾ ಪಡುಕೋಣೆ ಸ್ಟೈಲ್ ಅನ್ನು ಕಾಪಿ ಮಾಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

VISTARANEWS.COM


on

Cannes 2024 Urvashi Rautela pink gown remind Deepika Padukone
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಊರ್ವಶಿ ರೌಟೇಲಾ (Urvashi Rautela) ಈಗಾಗಲೇ ರೆಡ್‌ ಕಾರ್ಪೆಟ್‌ ಮೇಲೆ ಪಿಂಕ್‌ ಗೌನದದದ ಧರಿಸಿ ಹೆಜ್ಜೆ ಹಾಕಿದ್ದಾರೆ. ಈ ಫೋಟೊ ವೈರಲ್‌ ಆದ ಬೆನ್ನಲ್ಲೇ 2018 ರಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಗೌನ್ ತರಹವೇ ಇದೆ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ. ಇದೀಗ ಊರ್ವಶಿ ರೌಟೇಲಾ ಟ್ರೋಲ್‌ಗೆ ಗುರಿಯಾಗುತ್ತಿದ್ದಾರೆ.

ಊರ್ವಶಿ ಅವರ ವಿಡಿಯೊಗಳು ವೈರಲ್‌ ಆಗುತ್ತಿವೆ. ಬಾಡಿಕಾನ್ ಡ್ರೆಸ್ ಧರಿಸಿರುವುದನ್ನು ಕಾಣಬಹುದು. ದೀಪಿಕಾ ಪಡುಕೋಣೆ ಕಾನ್ ಫಿಲ್ಮ್ ಫೆಸ್ಟಿವಲ್ 2018 ರಲ್ಲಿ ಇದೇ ರೀತಿಯ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಊರ್ವಶಿ ರೌಟೇಲಾ ಅವರ ಈ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಊರ್ವಶಿ ರೌಟೇಲಾ ದೀಪಿಕಾ ಪಡುಕೋಣೆ ಸ್ಟೈಲ್ ಅನ್ನು ಕಾಪಿ ಮಾಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

ಯಾರೆಲ್ಲ ಭಾಗಿ?

 ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆಯಲು ಸಿದ್ಧರಾಗಿದ್ದಾರೆ. ಬುಧವಾರ ಸಂಜೆ,(ಮೇ. 15) ಐಶ್ವರ್ಯಾ ಅವರು ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡು ಬಂದರು. ಆದರೆ ಐಶ್ವರ್ಯಾ (Aishwarya Rai Injured) ಅವರ ಕೈಗೆ ಪೆಟ್ಟಾಗಿ ಬ್ಯಾಂಡೇಜ್‌ ಕೂಡ ಸುತ್ತಿಕೊಂಡಿದ್ದರು. ಹೀಗಾಗಿ ಐಶ್ವರ್ಯಾ ಫ್ಯಾನ್ಸ್‌ (Cannes Film Festival with daughter) ಆತಂಕಕ್ಕೆ ಒಳಗಾಗಿ ಕಮೆಂಟ್‌ ಮೂಲಕ ನಟಿಯ ಕ್ಷೇಮ ವಿಚಾರಿಸಿದ್ದಾರೆ.

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading
Advertisement
Modi v/s Rahul
ರಾಜಕೀಯ5 mins ago

Modi v/s Rahul: ರಾಹುಲ್‌ ಗಾಂಧಿ ಆಸ್ತಿ ಪ್ರಧಾನಿ ಮೋದಿಗಿಂತ ಎಷ್ಟು ಪಟ್ಟು ಹೆಚ್ಚು ಗೊತ್ತೆ?

gold rate today adah
ಚಿನ್ನದ ದರ15 mins ago

Gold Rate Today: ಇಳಿಯಿತು ಚಿನ್ನದ ಬೆಲೆ; ಬಂಗಾರದ ಗ್ರಾಹಕರಿಗೆ ತುಸು ನಿಟ್ಟುಸಿರು; ದರ ಹೀಗಿದೆ

MDH, Everest Spices
ವಿದೇಶ21 mins ago

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

Virat Kohli
ಕ್ರೀಡೆ24 mins ago

Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

dhruva sarja support C Cinema Kanda Kanda Video Song Release
ಸ್ಯಾಂಡಲ್ ವುಡ್33 mins ago

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Pushpa 2 Allu Arjun anasuya bharadwaj poster look out
ಟಾಲಿವುಡ್36 mins ago

Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Viral News
ವೈರಲ್ ನ್ಯೂಸ್38 mins ago

Viral News: ತ್ರಿವಳಿ ತಲಾಖ್‌ನಿಂದ ಬೇಸತ್ತಿದ್ದ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ

Murder case In Bengaluru
ಬೆಂಗಳೂರು47 mins ago

Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

IPL Ticket Scam
ಕ್ರೀಡೆ1 hour ago

IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

Zakir Naik
ವಿದೇಶ1 hour ago

Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ8 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ22 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌