Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು - Vistara News

ಕಿರುತೆರೆ

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Brindavana Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಬೃಂದಾವನʼ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಬದಲಾಗಿದ್ದಾರೆ. ವಿಶ್ವನಾಥ್‌ ಹಾವೇರಿ ಹೊರ ನಡೆದಿದ್ದು, ಆ ಪಾತ್ರಕ್ಕೆ ವರುಣ್‌ ಆರಾಧ್ಯ ಬಂದಿದ್ದಾರೆ.

VISTARANEWS.COM


on

varun
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ವೈವಿಧ್ಯಮಯ ಧಾರಾವಾಹಿ, ವಿವಿಧ ಕಾರ್ಯಕ್ರಮಗಳ ಮೂಲಕ ಕಲರ್ಸ್‌ ಕನ್ನಡ ವಾಹಿನಿ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲೂ ಸುದೀಪ್‌ ನಿರೂಪಣೆಯ ಬಹು ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಕನ್ನಡ ಸೀಸನ್‌ 10 ದಿನದಿಂದ ದಿನಕ್ಕೆ ವೀಕ್ಷಕರನ್ನು ಸೆಳೆಯುತ್ತಿದೆ. ಈ ಮಧ್ಯೆ ಜನಪ್ರಿಯ ʼಬೃಂದಾವನʼ (Brindavana) ಧಾರಾವಾಹಿಯ ಪ್ರಮುಖ ಪಾತ್ರಧಾರಿ ಬದಲಾಗಿದ್ದಾರೆ. ಹೌದು, ಆರಂಭದಲ್ಲೇ ಪ್ರೇಕ್ಷಕರ ಗಮನ ಸೆಳೆದಿದ್ದ ʼಬೃಂದಾವನʼ ಸೀರಿಯಲ್‌ನ ಪ್ರಮುಖ ಪಾತ್ರಧಾರಿ. ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ವಿಶ್ವನಾಥ್‌ ಹಾವೇರಿ ಹೊರ ನಡೆದಿದ್ದು, ಆ ಪಾತ್ರಕ್ಕೆ ವರುಣ್‌ ಆರಾಧ್ಯ ಬಂದಿದ್ದಾರೆ.

 ‘ಪುಟ್ಟಗೌರಿ ಮದುವೆ’, ‘ಮಂಗಳಗೌರಿ ಮದುವೆ’, ‘ರಂಗನಾಯಕಿ’, ‘ನಾಗಿಣಿ- 2’, ‘ಗೀತಾ’, ‘ರಾಣಿ’ ಮುಂತಾದ ಧಾರಾವಾಹಿಗಳನ್ನು ನಿರ್ದೇಶಿಸಿರುವ ಕೆ.ಎಸ್. ರಾಮ್‌ ಜೀ ಈ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. ಕೂಡು ಕುಟುಂಬದ ಕಥೆ ಹೊಂದಿರುವ ಈ ಧಾರಾವಾಹಿಯ ಆಕಾಶ್‌ ಪಾತ್ರದಲ್ಲಿ ಬಿಗ್​ಬಾಸ್ ಸ್ಪರ್ಧಿಯಾಗಿದ್ದ ಗಾಯಕ ವಿಶ್ವನಾಥ್ ಹಾವೇರಿ ಕಾಣಿಸಿಕೊಂಡಿದ್ದರು. ಆದರೆ ಸೀರಿಯಲ್‌ನ ಕೇವಲ 25ರಷ್ಟು ಸಂಚಿಕೆ ಮುಗಿಯುವಷ್ಟರಲ್ಲಿ ಅವರು ಬದಲಾಗಿದ್ದಾರೆ. ಸದ್ಯಕ್ಕೆ ಈ ಬದಲಾವಣೆಗೆ ಕಾರಣ ತಿಳಿದು ಬಂದಿಲ್ಲ.

ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯವಾಗಿರುವ ವರುಣ್‌ ಆರಾಧ್ಯ ಹೆಗಲಿಗೆ ಆಕಾಶ್‌ ಪಾತ್ರದ ಜವಾಬ್ದಾರಿ ಬಿದ್ದಿದೆ. ತುಂಬು ಕುಟುಂಬದ ಕುಡಿಯಾಗಿರುವ ಆಕಾಶ್‌ ಮದುವೆಯ ಸಿದ್ಧತೆ ನಡೆಯುತ್ತಿದ್ದು ಈ ಹೊತ್ತಿನಲ್ಲೇ ನಾಯಕನ ಬದಲಾವಣೆ ಅಚ್ಚರಿಗೆ ಕಾರಣವಾಗಿದೆ. ವರುಣ್‌ ನಟಿಸಿರುವ ಧಾರಾವಾಹಿಯ ಪ್ರೋಮೊವನ್ನು ಈಗಾಗಲೇ ವಾಹಿನಿ ಹೊರ ಬಿಟ್ಟಿದೆ. ಸದ್ಯ ಆಕಾಶ್‌ ಮತ್ತು ನಾಯಕಿ ಪುಷ್ಪಾ ನಡುವಿನ ಮದುವೆಯ ಸನ್ನಿವೇಶ ನಡೆಯುತ್ತಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್‌ ಮಾಡುತ್ತ ಜನಪ್ರಿಯರಾಗಿರುವ ವರುಣ್‌ ಆರಾಧ್ಯಗೆ ಉತ್ತಮ ಅವಕಾಶ ಸಿಕ್ಕಿದೆ. ಆದರೆ ಪ್ರೇಕ್ಷಕರು ಯಾವ ರೀತಿ ಈ ಬದಲಾವಣೆಗೆ ಒಗ್ಗಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಅಕ್ಟೋಬರ್ 23ರಂದು ಈ ಸೀರಿಯಲ್‌ ಪ್ರಸಾರ ಆರಂಭಿಸಿತ್ತು.

ಇದನ್ನೂ ಓದಿ: Brindavana Serial Kannada: ಅಪರೂಪದ ಕತೆಯೊಂದಿಗೆ ʻಕನ್ನಡತಿ’ ಅಮ್ಮಮ್ಮ; ʻಬೃಂದಾವನʼಕ್ಕೆ ಯೋಗರಾಜ್ ಭಟ್ ಸಾಥ್‌!

ಕಥೆ ಏನು?

ಕಥೆಯು 36 ಸದಸ್ಯರ ವಿಶಾಲವಾದ ಅವಿಭಕ್ತ ಕುಟುಂಬದ ಸುತ್ತ ಸುತ್ತುತ್ತದೆ. ‘ಕನ್ನಡತಿ’ ಧಾರಾವಾಹಿ ಮೂಲಕ ಅಮ್ಮಮ್ಮ ಎಂದೇ ಖ್ಯಾತಿ ಪಡೆದ ಚಿತ್ಕಲಾ ಬಿರಾದಾರ್ ಈ ಮೂಲಕ ಮತ್ತೆ ಮೋಡಿ ಮಾಡುತ್ತಿದ್ದಾರೆ. ಅವರು ಸುಧಾ ಮೂರ್ತಿ ಎನ್ನುವ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕಥಾ ನಾಯಕ ಆಕಾಶ್ ತನ್ನ ವಿದ್ಯಾಭ್ಯಾಸ ಮುಗಿಸಿ ವಿದೇಶದಿಂದ ಹಿಂದಿರುಗುತ್ತಾನೆ. ಸುಧಾಮೂರ್ತಿಗೆ ತನ್ನ ಮೊಮ್ಮಗ ಆಕಾಶ್‌ನ ಮದುವೆ ನೋಡಬೇಕೆಂಬ ಆಸೆ. ಅದಕ್ಕಾಗಿ ಕೂಡು ಕುಟುಂಬದ ಎಲ್ಲರ ಒಪ್ಪಿಗೆ ಪಡೆಯುತ್ತಾರೆ. ಕೊನೆಗೆ ಪುಷ್ಪಾ ಎನ್ನುವ ಯುವತಿಯನ್ನು ಒಪ್ಪಿಕೊಳ್ಳುತ್ತಾರೆ. ಸದ್ಯ ಆಕಾಶ್‌-ಪುಷ್ಪಾ ಮದುವೆ ಸಿದ್ಧತೆ ನಡೆಯುತ್ತಿದೆ. ಪ್ರೋಮೊ ಮೂಲಕವೇ ಈ ಧಾರಾವಾಹಿ ಕುತೂಹಲ ಕೆರಳಿಸಿತ್ತು. ಅಮೂಲ್ಯ ಭಾರಾಧ್ವಾಜ್, ಸಂದೀಪ್ ಅಶೋಕ್, ಸುಂದರ್ ವೀಣಾ, ವೀಣಾ ಸುಂದರ್, ರಾಜೇಶ್ ಎಸ್.ರಾವ್, ಅನು ಪಲ್ಲವಿ ಗೌಡ, ಮಾನಸ ಗುರುಸ್ವಾಮಿ, ಯೋಗಿತಾ ಕುಂಬಾರ್, ವೈಷ್ಣವಿ ಗೌಡ, ಮಧುರಾ ಮತ್ತಿತರರು ಮುಖ್ಯ ಪಾತ್ರದಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಬಿಗ್ ಬಾಸ್

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

ವಾರದ ಕತೆ ಕಿಚ್ಚನ ಜೊತೆ ಪಂಚಾಯ್ತಿಯಲ್ಲಿ ಯಾವೆಲ್ಲ ವಿಷ್ಯಗಳು ಚರ್ಚೆಗೆ ಬರುತ್ತೆ ಗೊತ್ತಾ?
ಕಿಚ್ಚನ ಪಂಚಾಯ್ತಿಗೆ ವೀಕ್ಷಕರು ಇಟ್ಟ ಬೇಡಿಕೆಗಳೇನು?

VISTARANEWS.COM


on

Bigg boss kannada

ಬೆಂಗಳೂರು: ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಶೋನಲ್ಲಿ ಕಿಚ್ಚು ಹೆಚ್ಚಾಗಿದೆ. ಇದೆ ಮೊದಲ ಸಲ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಸ್ಪರ್ಧಿಗಳು ನಿಯಮ ಮೀರಿದ ಹಿನ್ನೆಲೆಯಲ್ಲಿ ನೇರವಾಗಿ ಎಲಿಮಿನೇಟ್‌ ಆಗಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಲಾಯರ್‌ ಜಗದೀಶ್‌, ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಶುಕ್ರವಾರ ಮನೆ ತೊರೆದಿದ್ದರು.

ಇದೀಗ ವಾರದ ಕಥೆ ಕಿಚ್ಚ ಜತೆಯಲ್ಲಿ ನಟ ಸುದೀಪ್‌ ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ? ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು ಯಾವುದು ಎಂಬ ಕುತೂಹಲ ಮೂಡಿದೆ.

ಅಸಲಿಗೆ ದೊಡ್ಡ ಮನೆಯಲ್ಲಿ ಆ ದಿನ ನಡೆದಿದ್ದೇನು ಗೊತ್ತಾ?

ಕಳೆದ (ಬುಧವಾರ) ಟಾಸ್ಕ್‌ ಮುಗಿದ ಬಳಿಕ ಗಾರ್ಡನ್‌ ಏರಿಯಾದಲ್ಲಿ ಜಗದೀಶ್‌ ಮತ್ತು ಗೋಲ್ಡ್‌ ಸುರೇಶ್‌ ಮಾತನಾಡುತ್ತ ಕೂತಿದ್ದರು. ಈ ವೇಳೆ ಮಾತಿನ ಭರದಲ್ಲಿ ಜಗದೀಶ್‌ ಮನೆಯ ಸ್ಪರ್ಧಿಗಳ ಬಗ್ಗೆ ಇಲ್ಲ ಸಲ್ಲದ ಪದ ಬಳಕೆ ಮಾಡಿ ಮಾತನಾಡಲು ಶುರುಮಾಡಿದರು. ಜಗದೀಶ್‌ ಅವರ ಮಾತುಗಳು ಸುರೇಶ್‌ಗೆ ಅಸಹನೀಯ ಎನಿಸತೊಡಗಿದವು. ಕೂಡಲೇ ಇಂಥ ಪದಗಳ ಪ್ರಯೋಗ ನನ್ನ ಮುಂದೆ ಮಾಡಬೇಡ ಎಂದು ಬೇಡಿಕೊಂಡರು. ಮುಂದುವರಿದು, ಆ ಹಂಸಾ ಮುಂ* ಎಂಬ ಪದ ಬಳಕೆ ಪ್ರಯೋಗಿಸಿದರು .

ಅಲ್ಲಿಂದ ಶುರುವಾಯ್ತು ವಾರ್‌.. ಹಂಸಾಗೆ ಆ ಪದ ಪ್ರಯೋಗಿಸಿದ ವಿಚಾರ, ನಂತರ ಇಡೀ ಮನೆಗೂ ಗೊತ್ತಾಯ್ತು. ಮುಂದುವರಿದು ದೊಡ್ಡ ಮಟ್ಟದ ಮಾತಿನ ಚಕಮಕಿ ನಡೆಯಿತು. ಮಾತಿಗೆ ಮಾತು ಬೆಳೆಯಿತು. ತಳ್ಳಾಟ ನೂಕಾಟವೂ ನಡೆಯಿತು. ಲಾಯರ್‌ ಜಗದೀಶ್‌ ಅವರ ಮೇಲೆ ಇಡೀ ಮನೆಯ ಮಹಿಳಾ ಸ್ಪರ್ಧಿಗಳು ಮುಗಿಬಿದ್ದರು. ಇದೇ ವೇಳೆ ಮಾತುಕತೆ ಅತಿರೇಕಕ್ಕೆ ಹೋಗುತ್ತಿದ್ದಂತೆ, ಜಗದೀಶ್‌ ಅವರನ್ನು ಅಲ್ಲೇ ಇದ್ದ ರಂಜಿತ್‌ ತಳ್ಳಿದರು. ಇದೆಲ್ಲವನ್ನು ಗಮನಿಸಿದ ಬಿಗ್‌ಬಾಸ್‌ ಸಹ ತಾಳ್ಮೆ ಕಳೆದುಕೊಂಡು, ಮೊದಲ ಸಲ ಜೋರಾಗಿ ಕೂಗಿ ಎಲ್ಲರನ್ನು ಒಂದೆಡೆ ಕೂರಿಸಿದರು.

ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಹೊರಕ್ಕೆ

ಇತ್ತ, ಕೆಲ ಹೊತ್ತಿನ ಬಳಿಕ ಮಹಿಳೆಯರಿಗೆ ನಿಂದನೆ, ಅಪಮಾನ ಸಹಿಸುವುದಿಲ್ಲ ಎಂಬ ಆರೋಪದ ಮೇಲೆ ಜಗದೀಶ್‌ ಅವರನ್ನು ಬಿಗ್‌ಬಾಸ್‌ನಿಂದ ನೇರವಾಗಿ ಎಲಿಮಿನೇಟ್‌ ಮಾಡಿ, ಹೊರಗೆ ಕಳಿಸಲಾಯಿತು. ಇತ್ತ ದೈಹಿಕ ಹಲ್ಲೆ ಅಕ್ಷಮ್ಯ ಅಪರಾಧ ಎಂಬ ನಿಯಮದಡಿ ರಂಜಿತ್‌ ಅವರನ್ನೂ ಹೊರಗೆ ಕಳಿಸಲಾಯಿತು. ಈ ಮೂಲಕ ಶುಕ್ರವಾರ ಅಚ್ಚರಿಯ ಬೆಳವಣಿಗೆಯಲ್ಲಿ ಡಬಲ್‌ ಶಾಕಿಂಗ್‌ ಎಲಿಮಿನೇಷನ್‌ ಆಯ್ತು. ಇತ್ತ ರಂಜಿತ್‌ ಮಾಡಿದ್ದು ಸರಿಯಿದೆ. ಅವರ ಉದ್ದೇಶ ಒಳ್ಳೆಯದು ಎಂದು ಸ್ಪರ್ಧಿಗಳು ಕಣ್ಣೀರಿಟ್ಟರೂ, ನಿಯಮ ಗೌರವಿಸುವ ಸಲುವಾಗಿ ಔಟ್‌ ಮಾಡಲಾಯಿತು.

ಇದೀಗ.. ವಾರದ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಲಿರುವ ‘ಗರಮಾ ಗರಂ’ ವಿಷಯಗಳು ಯಾವವು ಎಂಬುದನ್ನು ಕಲರ್ಸ್‌ ಕನ್ನಡ ಸೋಶಿಯಲ್‌ ಮೀಡಿಯಾದಲ್ಲಿ ನಿನ್ನೆ ಪೋಸ್ಟ್‌ ಹಂಚಿಕೊಂಡಿದೆ . ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳ ಮಹಾಪೂರವೇ ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚನ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ

ಈ ಸಲದ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರಲ್ಲಿ ಶಾಕಿಂಗ್‌ ಎಲಿಮಿನೇಷನ್‌ ನಡೆದಿದೆ. ಮಹಿಳಾ ಸ್ಪರ್ಧಿಗಳ ಬಗ್ಗೆ ಕೆಟ್ಟ ಪದ ಪ್ರಯೋಗ ಬಳಸಿದ್ದಕ್ಕೆ ಜಗದೀಶ್‌ ಎಲಿಮಿನೇಟ್‌ ಆದರೆ, ಒಳ್ಳೆಯ ಉದ್ದೇಶ ಇದ್ದರೂ, ದೈಹಿಕ ಹಲ್ಲೆ ಮಾಡಿದ ಆರೋಪದ ಮೇಲೆ ರಂಜಿತ್‌ ಮನೆಯಿಂದ ಹೊರ ನಡೆದಿದ್ದಾರೆ. ಇತ್ತ ಮನೆಯ ಸ್ಪರ್ಧಿಗಳು ರಂಜಿತ್‌ ತೆರಳಿದ್ದಕ್ಕೆ ಬೇಸರದಲ್ಲಿದ್ದರೆ, ಜಗದೀಶ್‌ ಹೊರ ನಡೆದಿದ್ದಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಇದೆಲ್ಲದರ ನಡುವೆಯೇ ವಾರಾಂತ್ಯವೂ ಬಂದಿದೆ. ಕಿಚ್ಚನ ಆಗಮನಕ್ಕೂ ಕ್ಷಣಗಣನೆ ಆರಂಭವಾಗಿದೆ.

ಕಳೆದ ವಾರ ಯಾವುದೇ ಎಲಿಮಿನೇಷನ್‌ ಇರಲಿಲ್ಲ. ಅಚ್ಚರಿಯ ಬೆಳವಣಿಗೆಯಲ್ಲಿ ಎಲ್ಲರೂ ಸೇವ್‌ ಆಗಿದ್ದರು. ಆದರೆ, ಈ ವಾರ ಹಾಗಾಗಲಿಲ್ಲ. ಯಾರೂ ನಿರೀಕ್ಷಿಸದೇ ಇಬ್ಬರು ಸ್ಪರ್ಧಿಗಳು ನೇರವಾಗಿ ಹೊರ ನಡೆಯಬೇಕಾಯಿತು. ಹೀಗಿರುವಾಗ ಈ ವಾರ ಎಲಿಮಿನೇಷನ್‌ ಇರುತ್ತಾ? ಎಂಬ ಒಂದಷ್ಟು ಪ್ರಶ್ನೆಗಳಂತೂ ಎಲ್ಲರ ಮನಸಿನಲ್ಲೂ ಮೂಡಿದೆ. ಅದರಲ್ಲೂ ವೀಕ್ಷಕರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇದೀಗ ಕಿಚ್ಚನ ಪಂಚಾಯ್ತಿಯಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಸಿಗಬಹುದಾ?

ಹೌದು. ಸೋಷಿಯಲ್‌ ಮೀಡಿಯಾದಲ್ಲಿ ಈ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಬೇಕಿರೋ ‘ಗರಮಾ ಗರಂ’ ವಿಷಯಗಳು ಯಾವವು” ಎಂದು ಪೋಸ್ಟ್‌ ಹಂಚಿಕೊಂಡಿದೆ ಕಲರ್ಸ್‌ ಕನ್ನಡ. ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳು ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚ ಸುದೀಪ್‌ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ ಆಯ್ದ ಕೆಲವು ಪ್ರಶ್ನೆಗಳು ಮತ್ತು ಬೇಡಿಕೆಗಳು.

ಸುದೀಪ್‌ಗೆ ವೀಕ್ಷಕರ ಪ್ರಶ್ನೆ ಮತ್ತು ಬೇಡಿಕೆ:

  • -ಜಗ್ಗು ಇಲ್ಲದ ಬಿಗ್‌ ಬಾಸ್ ನಾವು ನೋಡಲ್ಲ.‌ ಲಾಯರ್ ಜಗದೀಶ್‌ಗೆ ನ್ಯಾಯ ಸಿಗಬೇಕು. ಪುರುಷರಿಗೆ ಆದ ನಿಂದನೆ ಅಪಮಾನದ ಬಗ್ಗೆ ಕರ್ನಾಟಕದ ಜನತೆ ಸಹಿಸುವುದಿಲ್ಲ. ಅವರನ್ನ ಮತ್ತೆ ಅಖಾಡಕ್ಕೆ ಇಳಿಸಲೇಬೇಕು. ಹೆಣ್ಣಿಗೆ ಮಾತ್ರ ಅವಮಾನ ಆಗಿರಲಿಲ್ಲ ಗಂಡಿಗೂ ಅವಮಾನ ಆಗಿದೆ ಇದರ ಬಗ್ಗೆ ನೀವು ಪ್ರಶ್ನೆ ಎತ್ತಲೇಬೇಕು. ಗಂಡಿನ ಮರ್ಯಾದೆಗೆ ಧಕ್ಕೆ ಬರ್ತಿದೆ ಈ ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳಿಂದ. ಮುಂದೆ ಪುರುಷ ರಕ್ಷಣಾ ವೇದಿಕೆಯನ್ನು ತೆರೆದರು ತೆರೆಯಬಹುದು.
  • -ಸುದೀಪ್‌ ಸರ್‌, ಜಗದೀಶ್‌ ಅವರನ್ನ ಏಕವಚನದಲ್ಲಿ ಮಾತಾಡುವುದಲ್ಲದೇ ಹೋರ್ಗಡೆ ಎನ್ ತಗೊಂಡು ಹೊಡೀತಾರೆ ನಿಂಗೆ ಎನ್ನುತ್ತ ತಳ್ಳಿದ್ದಾರೆ ಭವ್ಯ ಇದಕ್ಕೆ ನ್ಯಾಯ ಸಿಗುತ್ತಾ?
  • -ಮಾನಸ ಅವರು ಒಬ್ಬ ಗಂಡಸಿಗೆ ಸೀರೆ ಕೊಡ್ತೀನಿ ಉಟ್ಕೋ, ಅಂತಾರೆ ಅವಳ ಗಂಡ ತುಕಾಲಿ, ಹೆಂಡತಿ ತುಕಾಲಿ ಪ್ರೊ ಮ್ಯಾಕ್ಸ್ ಅಂತ ನೆಟ್ಟಿಗರು ಕಿಡಿಕಾರಿದ್ದಾರೆ. ಗಂಡಿನ ಘನತೆಗೆ ಧಕ್ಕೆ ಆದಾಗ ತಿರುಗೇಟು ಕೊಟ್ಟರೆ ಅದು ಮಹಿಳೆಗೆ ಅಗೌರವವೇ? ಕಿಚ್ಚ ಸುದೀಪ್ ಇದಕ್ಕೆ ನ್ಯಾಯ ಒದಗಿಸುವ ಮೂಲಕ ಪುರುಷರ ಘನತೆ ಕಾಪಾಡಬೇಕು ಅಂದಿದ್ದಾರೆ.
  • -ಜಗ್ಗುನ ಪ್ರವೋಕ್ ಮಾಡಿದ ಎಲ್ಲರಿಗೂ ಅವರ ತಪ್ಪಿನ ಅರಿವು ಮಾಡಿಸಬೇಕು. ಹೆಣ್ಣಿನ ಬಗ್ಗೆ ಕೆಟ್ಟದಾಗಿ ಮಾತಾಡುವುದು ತಪ್ಪು. ಜಗದೀಶ್‌ಗೆ ಶಿಕ್ಷೆಯಾಗಿದ್ದು ಸರಿ. ಆದರೆ ಚೈತ್ರ ಹೇಳ್ತಾರೆ ಅಪ್ಪನಿಗೆ ಹುಟ್ಟಿದರೆ ಬಾ, ಒಬ್ಬ ಅಪ್ಪನಿಗೆ ಹುಟ್ಟಿದ್ದರೆ ಬಾ ಅಂತ ಇದರಲ್ಲಿ ಆಗಿರುವುದು ಒಂದು ಹೆಣ್ಣಿಗೆ ಅವಮಾನ ಅಂದರೇ (ಜಗದೀಶ್ ತಾಯಿಯ ಬಗ್ಗೆ ) ಇದರ ಬಗ್ಗೆನೂ ಚರ್ಚೆ ಆಗಲೇಬೇಕು.
  • -ಜಗ್ಗು ಮಾತಾಡಿದ್ದು ತಪ್ಪು ಅದರಲ್ಲಿ 2 ಮಾತಿಲ್ಲ.. ಆದ್ರೆ ಸತತ 3 ದಿನಗಳಿಂದ ರಂಜಿತ್, ಮಂಜು, ತ್ರಿವಿಕ್ರಮ ಜಗಳ ಆಡೋ ತರ ಪ್ರಚೋದನೆ ಮಾಡಿದ್ದು ತಪ್ಪಲ್ವಾ?.. ಮಾನಸ ಮಾತು ಅಸಹ್ಯವಾಗಿತ್ತು ಅವಳನ್ನು ಯಾಕೆ ಹೊರಗೆ ಹಾಕಿಲ್ಲ. . ಚೈತ್ರ, ಭವ್ಯ, ಮಾನಸ 3 ಜನ ಅಮ್ಮ ಅಪ್ಪ ಹೆಂಡ್ತಿ ಅನ್ನೋ ಶಬ್ದ ಬಳಸಿ ಮಾತನಾಡುವುದಲ್ಲದೇ ಜಗದೀಶ್‌ ಅವರನ್ನ ಥಳಿಸಿದ್ದಾರೆ.

ರಂಜಿತ್‌ಗೆ ವೀಕ್ಷಕರ ಮೆಚ್ಚುಗೆ

ರಂಜಿತ್‌ ನೇರವಾಗಿ ಮನೆಯಿಂದ ಹೊರಬರುತ್ತಿದ್ದಂತೆ, ಸೋಷಿಯಲ್‌ ಮೀಡಿಯಾದಲ್ಲಿ ರಂಜಿತ್‌ ಪರವಾಗಿ ಮೆಚ್ಚುಗೆಯ ಕಾಮೆಂಟ್‌ಗಳು ಸಂದಾಯವಾಗುತ್ತಿವೆ. “ನಿಮ್ಮ ಹೆಸರು ಬಿಗ್‌ಬಾಸ್‌ನಲ್ಲಿ ಶಾಶ್ವತ. ಒಂದೊಳ್ಳೆಯ ಉದ್ದೇಶಕ್ಕೆ ನೀವು ನಿಯಮ ಮುರಿದಿದ್ದೀರಿ. ಇದನ್ನು ಬೇರೆಯವರೂ ಮಾಡಲು ಅಸಾಧ್ಯ” ಎಂದು ಧ್ರುವ ಎಂಬುವವರು ಟ್ವಿಟ್‌ ಮಾಡಿದ್ದಾರೆ. “ಉದ್ದೇಶ ಸರಿ. ಅಸಲಿ ವಿಚಾರ ಬಿಗ್‌ಬಾಸ್‌ಗೂ ಗೊತ್ತು, ಅಷ್ಟೇ ಸಾಕು.. ಮಿಸ್‌ ಯೂ ರಂಜಿತ್”‌ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಒಳ್ಳೆಯ ಉದ್ದೇಶಕ್ಕೆ ಹೋಗ್ತಿದ್ದೀಯಾ ಮಗ. ಸೂರ್ಯ ರಂಜಿತ್‌ ಬಿಬಿ ಇರೋವರೆಗೂ ಇದು ಒಂದು ಉದಾಹರಣೆಯಾಗಿ ನಿಲ್ಲಲಿದೆ. ಒಂದೊಳ್ಳೆಯ ಕಾರಣಕ್ಕೆ ನೀವು ಆಚೆ ಹೋಗಿದ್ದೀರಿ” ಎಂದು ವೀಕ್ಷಕರು ಟ್ವಿಟ್‌ ಮಾಡಿದ್ದಾರೆ.

Continue Reading

ಬೆಂಗಳೂರು

Bigg Boss Kannada : ಸ್ವರ್ಗ- ನರಕಕ್ಕೆ ಎಂಟ್ರಿ ಕೊಟ್ಟ ಸ್ಪರ್ಧಿಗಳು; ಬಿಗ್‌‌ ಬಾಸ್‌ ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್

Bigg Boss Kannada : ಬಿಗ್‌ಬಾಸ್‌ ಸೀಸನ್‌ 11ರ ಸ್ವರ್ಗ- ನರಕದ ಆಟದಕ್ಕೆ ಸ್ಪರ್ಧಿಗಳು ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದ್ದಾರೆ. ಬಿಗ್‌ಬಾಸ್‌ ಮನೆಯಲ್ಲಿ ನಟ ದರ್ಶನ್‌ ಫಾಲೋವರ್ಸ್ ಇದ್ದು, ದರ್ಶನ್‌ ಬಗ್ಗೆ ಚರ್ಚೆಯಾಗುತ್ತಾ ಎಂಬ ಕುತೂಹಲ ಮೂಡಿದೆ.

VISTARANEWS.COM


on

Bigg Boss season 11 The real game starts today

ಬೆಂಗಳೂರು: ಕನ್ನಡ ಕಿರುತೆರೆಯ ಬಿಗೆಸ್ಟ್‌ ರಿಯಾಲಿಟಿ ಶೋ ಬಿಗ್‌ಬಾಸ್ 11ನೇ ಸೀಸನ್‌ಗೆ (Bigg Boss Kannada) ಕಿಕ್ ಸ್ಟಾರ್ಟ್ ಸಿಕ್ಕಿದೆ. ಕನ್ನಡ ಟೆಲಿವಿಷನ್ ಲೋಕದಲ್ಲಿ ದೊಡ್ಮನೆಯ ಕಲರವ ಮತ್ತೆ ಶುರುವಾಗಿದೆ. ಭಿನ್ನ -ವಿಭಿನ್ನ ಹದಿನೇಳು ಸ್ಪರ್ಧಿಗಳು ಈ ಬಾರಿಯ ಕನ್ನಡ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟು ದಿನದಿಂದ ಒಂದು ಲೆಕ್ಕ ಈಗಿನಿಂದ ಇನ್ನೊಂದು ಲೆಕ್ಕವನ್ನು ಬಿಗ್ ಬಾಸ್ ಶುರುಮಾಡಿದ್ದು, ಸ್ವರ್ಗ- ನರಕದ ಆಟಕ್ಕೆ ಸ್ಪರ್ಧಿಗಳು ನಿನ್ನೆ ಭಾನುವಾರ ಗ್ರಾಂಡ್ ಎಂಟ್ರಿ (bigg boss kannada season 11) ಕೊಟ್ಟಿದ್ದಾರೆ.

ದೊಡ್ಮನೆಯ ರಂಗಿನಾಟಕ್ಕೆ ಬಣ್ಣದ ಲೋಕದಿಂದ ಮಾತ್ರವಲ್ಲದೇ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮದೆ ಚಾಪು ಮೂಡಿಸಿ ಫೇಮಸ್‌ ಆಗಿರುವ ಕಂಟೆಸ್ಟೆಂಟ್ಸ್ ಎಂಟ್ರಿ ಕೊಟ್ಟಿದ್ದಾರೆ. ಮೊದಲಿಗೆ ಕಿರುತೆರೆ ನಟಿ ಭವ್ಯಾ ಗೌಡ ಎಂಟ್ರಿ ಕೊಟ್ಟರೆ, ನಂತರ ಒಬ್ಬೊಬ್ಬರಾಗೆ ಕೆಲವರು ಸ್ವರ್ಗಕ್ಕೆ, ಮತ್ತೆ ಕೆಲವರು ನರಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಮೈ ತುಂಬಾ ಚಿನ್ನವನ್ನು ಹಾಕಿಕೊಂಡ ಗೋಲ್ಡ್ ಸುರೇಶ್, ಫೇಸ್‌ಬುಕ್ ಲಾಯರ್ ಜಗದೀಶ್, ಹಿಂದುತ್ವವಾದಿ ಚೈತ್ರಾ ಕುಂದಾಪುರ, ಹೀಗೆ ಭಿನ್ನ-ವಿಭಿನ್ನ ವ್ಯಕ್ತಿತ್ವದ ಸ್ಪರ್ಧಿಗಳನ್ನು ಬಿಗ್ ಬಾಸ್ 11ನೇ ಸೀಸನ್ ಮನೆಯೊಳಗೆ (bigg boss kannada season 11 grand opening) ಕಾಲ್ಟಿಟ್ಟಿದ್ದಾರೆ.

Bigg Boss season 11 The real game starts today

ಸ್ವರ್ಗ- ನರಕದ ಆಟಕ್ಕೆ ರೆಡಿಯಾದ ಕಂಟೆಸ್ಟೆಂಟ್ಸ್

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎರಡು ಮನೆಗಳನ್ನು ಮಾಡಲಾಗಿದೆ. ಬಿಗ್‌ ಮನೆಗೆ ಗ್ರ್ಯಾಂಡ್ ವೆಲ್ಕಮ್ ಪಡೆದುಕೊಂಡ ಹದಿನೇಳು ಸ್ಪರ್ಧಿಗಳಲ್ಲಿ ಒಬ್ಬೊಬ್ಬರಾಗೆ ಸ್ವರ್ಗ- ನರಕದ ಆಟಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ವರ್ಗಕ್ಕೆ ಭವ್ಯ, ಯಮುನಾ, ಧನರಾಜ್, ಗೌತಮಿ, ಧರ್ಮ ಕೀರ್ತಿ, ಲಾಯರ್ ಜಗದೀಶ್, ತ್ರಿವಿಕ್ರಮ್, ಹಂಸ, ಐಶ್ವರ್ಯ ಹಾಗೂ ಉಗ್ರಂ ಮಂಜು ಎಂಟ್ರಿ ಕೊಟ್ಟಿದ್ದಾರೆ. ಇನ್ನು ನರಕಕ್ಕೆ ಅನುಷಾ ರೈ, ಶಿಶಿರ್, ಮಾನಸ, ಗೋಲ್ಡ್ ಶಶಿ, ಚೈತ್ರ, ಮೋಕ್ಷಿತ ಹಾಗು ರಂಜಿತ್ ಎಂಟ್ರಿ ಕೊಟ್ಟಿದ್ದಾರೆ. ಸ್ವರ್ಗ ಹಾಗೂ ನರಕದ ಆಟಕ್ಕೆ ಕಂಟೆಸ್ಟೆಂಟ್ಸ್ ತುದಿಗಾಲಲ್ಲಿ ನಿಂತಿದ್ದು, 17 ಜನ ಬಿಗ್ ಬಾಸ್ ಸ್ಪರ್ಧಿಗಳಲ್ಲಿ ನಾಲ್ವರು ದರ್ಶನ್ ಆಪ್ತರಾಗಿರುವುದು (bigg boss kannada season 11 timings) ವಿಶೇಷ.

ಬಿಗ್ ಬಾಸ್ ಸೀಸನ್ 10 ಕಾಂಟ್ರವರ್ಸಿ ಮೂಲಕವೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿತ್ತು. ಸೀಸನ್ 11 ಬಿಗ್ ಬಾಸ್ ವೀಕ್ಷಕರಿಗೆ ಬೆಟ್ಟದಷ್ಟು ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ ಅಂದರೆ ತಪ್ಪಾಗಲ್ಲ. ಹಲವು ಕಾಂಟ್ರವರ್ಸಿಗಳ ಮೂಲಕವೇ ಕಳೆದ ಸೀಸನ್ ಸ್ಪರ್ಧಿಗಳು ನೇಮ್ ಆ್ಯಂಡ್ ಫೇಮ್ ಗಿಟ್ಟಿಸಿಕೊಂಡಿದ್ದರು. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಇನ್ನೆಷ್ಟು ಕಾಂಟ್ರವರ್ಸಿ ಕ್ರಿಯೇಟ್ ಆಗುತ್ತೆ ಎಂದು ಬಿಗ್ ಬಾಸ್ ವೀಕ್ಷಕರು ಕಾಯ್ತಾ ಇದ್ದಾರೆ. ಇನ್ನು ದೊಡ್ಮನೆಯಲ್ಲಿರುವ ನಟ ದರ್ಶನ್‌ ಫಾಲೋವರ್ಸ್‌ನಿಂದ ಈ ಬಾರಿಯ ಬಿಗ್ ಬಾಸ್ ಸಖತ್ ಕಿಕ್ ಕೊಡಲಿದೆ ಎಂದು ಹೇಳಲಾಗುತ್ತಿದೆ.

ದೊಡ್ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್


ಹದಿನೇಳು ಸ್ಪರ್ಧಿಗಳಲ್ಲಿ ನಾಲ್ವರು ಕಂಟೆಸ್ಟೆಂಟ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ. ದರ್ಶನ್ ಅವರ ಹೆಸರನ್ನು ಹಗಲಿರುಳು ಜಪ ಮಾಡುವ ಈ ನಾಲ್ವರು, ಸುದೀಪ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ದೊಡ್ಮನೆಯಲ್ಲಿ ಹಿಂದೆಂದೂ ಈ ತರಹದ ಕಾಕತಾಳೀಯ ಆಗಿರಲಿಲ್ಲ. ಆದರೆ ಈ ಬಾರಿ ನಿಜವಾಗಿದೆ. ಆ ನಾಲ್ಕು ಜನ ಸ್ಪರ್ಧಿಗಳು ಪ್ರತಿನಿತ್ಯ ಬಿಗ್ ಬಾಸ್ ಮನೆಯಲ್ಲಿ ದರ್ಶನ್ ಜಪ ಮಾಡಿದರೂ ಕೂಡ ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಕೆಲವು ದರ್ಶನ್ ಆಪ್ತರು ವೇದಿಕೆ ಮೇಲೆ ದಚ್ಚು ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಈ ನಾಲ್ವರಿಂದ ಬಿಗ್ ಬಾಸ್ ಮನೆಯಲ್ಲೂ ದರ್ಶನ್ ಬಗ್ಗೆ ಚರ್ಚೆಯಾಗುತ್ತಾ ಅಂತ ಬಿಗ್ ಬಾಸ್ ವೀಕ್ಷಕರಿಗೆ ಕುತೂಹಲ ಕ್ರಿಯೇಟ್ ಆಗಿದೆ.

ಮುಂದಿನ ನೂರು ದಿನಗಳವರೆಗೆ ದರ್ಶನ್ ವಿಚಾರ ಒಂಟಿ ಮನೆಯಲ್ಲಿ ಕೇಳಿ ಬಂದರೆ, ದರ್ಶನ್ ವಿಚಾರವನ್ನು ಸುದೀಪ್ ಗಮನಿಸಿ ವಾರಾಂತ್ಯದಲ್ಲಿ ಯಾವ ರೀತಿ ಮಾತನಾಡುತ್ತಾರೆ ಎಂಬುದು ಸದ್ಯ ಬಿಗ್ ಬಾಸ್ ವೀಕ್ಷಕರಲ್ಲಿ ಹಾಟ್ ಟಾಪಿಕ್ ಆಗಿ ಚರ್ಚೆಯಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

New Serial: ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಕಾಂಟ್ರಾಕ್ಟ್ ಮದುವೆಯನ್ನೊಳಗೊಂಡ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಶುರುವಾಗ್ತಿದೆ. ಇದೇ ಸೋಮವಾರದಿಂದ ಅಂದರೆ ಸೆ.30ರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.

VISTARANEWS.COM


on

new serial

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಅದೆಷ್ಟೋ ಮದುವೆ ಆಧಾರಿತ ಕಥೆಗಳು ಬಂದು ಹೋಗಿವೆ. ಆದರೆ ಇದೀಗ ‘ನಿನ್ನ ಜೊತೆ ನನ್ನ ಕಥೆ’ ಎಂಬ ಹೊಸ ಧಾರಾವಾಹಿಯ ಮೂಲಕ ವಿನೂತನ ಕಥೆಯನ್ನು (New Serial) ವೀಕ್ಷಕರಿಗೆ ಹೇಳಲು ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣ (star suvarna) ಸಜ್ಜಾಗಿದೆ.

ಕರ್ನಾಟಕದ ಸಕ್ಕರೆನಾಡು ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಈ ಕಥೆಯು ಕೇಂದ್ರೀಕೃತವಾಗಿರುತ್ತದೆ. ಸಾಮಾನ್ಯವಾಗಿ ಮನಸು-ಮನಸುಗಳ ಬೆಸುಗೆಯಿಂದ ಮದುವೆಯಾಗುತ್ತದೆ. ಆದರೆ ಇದೊಂತರ ಡಿಫರೆಂಟ್ ಕಥೆ ಅಂತಾನೇ ಹೇಳಬಹುದು. ಕಥಾನಾಯಕಿ ಭೂಮಿ ಚಹಾ (ಟೀ) ಮಾರುವವಳಾಗಿದ್ದು, ಪೊಲೀಸ್ ಕಾನ್ಸ್‌ಟೇಬಲ್‌ ಆಗಬೇಕೆಂಬ ಕನಸನ್ನು ಹೊಂದಿರುತ್ತಾಳೆ. ಇನ್ನೊಂದು ಕಡೆ ಯಾರದ್ದೋ ಸಂಚಿಗೆ ಬಲಿಯಾಗಿ ಭೂಮಿಯ ತಾಯಿ ತಪ್ಪೇ ಮಾಡದಿದ್ರೂ ಜೈಲು ಸೇರಿರುತ್ತಾರೆ.

new serial

ಇನ್ನು ಈ ಕಥೆಯ ನಾಯಕ ಅಜಿತ್‌, ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ದು ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿರುತ್ತಾನೆ. ಮದುವೆ ಅಂದ್ರೇನೆ ಇಷ್ಟವಿರದ ಆದಿಗೆ ಮನೆಯಲ್ಲಿ ಮದುವೆಯ ತಯಾರಿ ಮಾಡುತ್ತಿರುತ್ತಾರೆ. ಮುಂದೆ, ಅನಿವಾರ್ಯ ಕಾರಣಗಳಿಂದಾಗಿ ಭೂಮಿ ಹಾಗು ಅಜಿತ್‌ ಇಬ್ಬರು ಪರಸ್ಪರ ಷರತ್ತುಗಳಿಗೆ ಒಪ್ಪಿಕೊಂಡು ಒಂದು ವರ್ಷದ ಕಾಂಟ್ರಾಕ್ಟ್‌ನೊಂದಿಗೆ ಮದುವೆಯಾಗ್ತಾರೆ. ಕಾಂಟ್ರಾಕ್ಟ್ ಮದುವೆಯಿಂದ ಒಂದಾದ ಈ ಜೀವಗಳ ಮನಸುಗಳು ಮುಂದೆ ಹೇಗೆ ಒಂದಾಗುತ್ತೆ ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಈ ಕಥೆಯ ನಾಯಕನ ಪಾತ್ರದಲ್ಲಿ ನಟಿಸುತ್ತಿರುವ ನಟ ನಿರಂಜನ್ ವರ್ಷಗಳ ಬಳಿಕ “ನಿನ್ನ ಜೊತೆ ನನ್ನ ಕಥೆ” ಧಾರಾವಾಹಿಯ ಮೂಲಕ ಕನ್ನಡ ಕಿರುತೆರೆಗೆ ಮರಳುತ್ತಿದ್ದಾರೆ. ನಾಯಕಿಯಾಗಿ ನಟಿ ನಿರುಷ ಗೌಡ ನಟಿಸುತ್ತಿದ್ದು ಕಥೆಯು ಅದ್ಬುತ ತಾರಾಬಳಗವನ್ನು ಹೊಂದಿದೆ. ಹೊಚ್ಚ ಹೊಸ ಧಾರಾವಾಹಿ “ನಿನ್ನ ಜೊತೆ ನನ್ನ ಕಥೆ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Suvarna Celebrity League : ವಾರಾಂತ್ಯದಲ್ಲಿ ಸೆಲೆಬ್ರಿಟಿಗಳ ಸಮರ; ಕಿರುತೆರೆಯಲ್ಲಿ ಶುರುವಾಗಲಿದೆ ಸುವರ್ಣ ಸೆಲೆಬ್ರಿಟಿ ಲೀಗ್

Suvarna Celebrity League : ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಸ್ಟಾರ್ ಸುವರ್ಣ ವಾಹಿನಿ ಭರ್ಜರಿಯಾಗಿ ಸಜ್ಜಾಗಿದೆ . ವೀಕೆಂಡ್‌ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊಚ್ಚ ಹೊಸ ಶೋ “ಸುವರ್ಣ ಸೆಲೆಬ್ರಿಟಿ ಲೀಗ್” ಹೊತ್ತು ತರ್ತಿದೆ.

VISTARANEWS.COM


on

Suvarna Celebrity League a reality show launched on Star Suvarna

ಬೆಂಗಳೂರು: ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” (Suvarna Celebrity League) ಇದೇ ಭಾನುವಾರದಿಂದ (ಸೆ.15) ರಾತ್ರಿ 7 ಗಂಟೆಗೆ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ ಆಗಿದೆ. ಇದರಲ್ಲಿ ಒಟ್ಟು 2 ತಂಡಗಳು ಇರಲಿದ್ದು, 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ. ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು “ಸುವರ್ಣ ಸೆಲೆಬ್ರಿಟಿ ಲೀಗ್” ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.

ನಿರೂಪಕರಾಗಿ ಮಿಂಚಲಿರುವ ಕಾರ್ತಿಕ್‌ ಮಹೇಶ್‌

ಇನ್ನು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ಧೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ ‘ಸುವರ್ಣ ಸೆಲೆಬ್ರಿಟಿ ಲೀಗ್‌’ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ ಆಗಿದೆ.

‘ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್‌ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ. 10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ ಹಾಗೂ ‘ಕಥೆಯೊಂದು ಶುರುವಾಗಿದೆ’ ಧಾರಾವಾಹಿಯ ಚಂದು ಗೌಡ, ‘ಆಸೆ’ ಧಾರಾವಾಹಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, ‘ಗೌರಿಶಂಕರ’ ಧಾರಾವಾಹಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ ‘ಕಾಮಿಡಿ ಗ್ಯಾಂಗ್ಸ್’ನ ಹಿತೇಶ್ ಭಾಗವಹಿಸಲಿದ್ದಾರೆ.

Suvarna Celebrity League a reality show launched on Star Suvarna

ಇನ್ಮುಂದೆ ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ “ಸುವರ್ಣ ಸೆಲೆಬ್ರಿಟಿ ಲೀಗ್” ಇದೇ ಭಾನುವಾರದಿಂದ ಪ್ರತೀ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading
Advertisement
Latest4 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ5 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest7 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest8 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ23 hours ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest1 day ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest1 day ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ2 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌