Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ! - Vistara News

ಸಿನಿಮಾ

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

Cannes 2024: ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

VISTARANEWS.COM


on

Cannes 2024 Aishwarya Rai turns lady in black in Falguni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಐಶ್ವರ್ಯಾ ಫಲ್ಗುಣಿ ಶೇನ್ ಪೀಕಾಕ್ ಗೌನ್ (Falguni Shane Peacock creation ) ಧರಿಸಿದ್ದರು. ವಿಶೇಷ ಏನೆಂದರೆ, ಕೈಗೆ ಬ್ಯಾಂಡೇಜ್​ ಸುತ್ತಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ (Cannes Red Carpet) ನಡೆದು ಬಂದಿದ್ದಾರೆ. ಅವರ ಫೋಟೊ ಮತ್ತು ವಿಡಿಯೊಗಳು ವೈರಲ್​ ಆಗಿವೆ.

ಬುಧವಾರ (ಮೇ 15) ರಾತ್ರಿ ಐಶ್ವರ್ಯಾ ರೈ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರ ಕೈಗೆ ಗಾಯ ಆಗಿದ್ದನ್ನು ನೋಡಿ ಅಭಿಮಾನಿಗಳಿಗೆ ಬೇಸರ ಆಗಿತ್ತು. ಕೈಗೆ ಪೆಟ್ಟಾಗಿರುವುದರಿಂದ ಈ ಬಾರಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದು ಅನೇಕರು ಭಾವಿಸಿದ್ದರು. ಕಪ್ಪು, ಬಿಳಿ ಮತ್ತು ಗೋಲ್ಡನ್​ ಬಣ್ಣಗಳಿಂದ ವಿನ್ಯಾಸಗೊಂಡ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಬಲಗೈನಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಅವರು ಆ ಬಗ್ಗೆ ಹೆಚ್ಚು ಗಮನ ನೀಡಿಲ್ಲ.

ಇದನ್ನೂ ಓದಿ: Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: ಇಡ್ಲಿ- ಚಿಕನ್ ಕರಿ ಕಾಂಬಿನೇಶನ್‌ಗೆ ಮುಖ ಕಿವುಚಿಕೊಂಡ ಖ್ಯಾತ ಯುಟ್ಯೂಬರ್‌; ತಿನ್ನಲು ಕೈ ಬಳಸಿ ಎಂದ ಜಾಹ್ನವಿ ಕಪೂರ್!

Janhvi Kapoor: ಮುಂಬೈನ ಬಾಂದ್ರಾದಲ್ಲಿರುವ ಕಪೂರ್ ಅವರ ಮನೆಯಲ್ಲಿ ನಡೆದ ಸಂದರ್ಶನದಲ್ಲಿ, ಇಡ್ಲಿ ಮತ್ತು ಚಿಕನ್ ಕರಿ ಕಾಂಬಿನೇಷನ್‌ ಬಗ್ಗೆ ಹಾಗೂ ಕೈಯಿಂದ ಇಡ್ಲಿ ತಿನ್ನುವುದರ ಬಗ್ಗೆಯೂ ಆಶ್ಚರ್ಯ ವ್ಯಕ್ತಪಡಿಸಿದರು. ಮಾತ್ರವಲ್ಲ ಅವರ ಮುಖ ಕಿವುಚಿಕೊಳ್ಳುವ ರೀತಿಗೆ ನೆಟ್ಟಿಗರು ಭಾರಿ ಟ್ರೋಲ್‌ ಮಾಡಿದ್ದಾರೆ.

VISTARANEWS.COM


on

Janhvi Kapoor interview Kamiya Jani trolled for calling idli-chicken curry weird combination
Koo

ಬೆಂಗಳೂರು: ಕರ್ಲಿ ಟೇಲ್ಸ್‌ನ ( Curly Tales) ಸಂಸ್ಥಾಪಕಿ ಕಾಮಿಯಾ ಜಾನಿ (Kamiya Jani) ಅವರು ಕಳೆದ ತಿಂಗಳು ನಟಿ ಜಾಹ್ನವಿ ಕಪೂರ್ (Janhvi Kapoor) ಅವರನ್ನು ಸಂದರ್ಶನ ಮಾಡಿದ್ದಾರೆ. ಕಾಮಿಯಾ ಜಾನಿ ಕ್ಲಿಪ್ ವೈರಲ್ ಆದ ನಂತರ ಭಾರಿ ಟ್ರೋಲ್‌ ಆಗುತ್ತಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಪೂರ್ ಅವರ ಮನೆಯಲ್ಲಿ ನಡೆದ ಸಂದರ್ಶನದಲ್ಲಿ, ಇಡ್ಲಿ ಮತ್ತು ಚಿಕನ್ ಕರಿ ಕಾಂಬಿನೇಷನ್‌ ಬಗ್ಗೆ ಹಾಗೂ ಕೈಯಿಂದ ಇಡ್ಲಿ ತಿನ್ನುವುದರ ಬಗ್ಗೆಯೂ ಆಶ್ಚರ್ಯ ವ್ಯಕ್ತಪಡಿಸಿದರು. ಮಾತ್ರವಲ್ಲ ಅವರ ಮುಖ ಕಿವುಚಿಕೊಳ್ಳುವ ರೀತಿಗೆ ನೆಟ್ಟಿಗರು ಭಾರಿ ಟ್ರೋಲ್‌ ಮಾಡಿದ್ದಾರೆ.

ಡೈನಿಂಗ್ ಟೇಬಲ್‌ನಲ್ಲಿ, ದೋಸೆ, ಇಡ್ಲಿ, ಚಿಕನ್ ಕರಿ, ಪನೀರ್ ಭುರ್ಜಿ ಮತ್ತು ಮೂಂಗ್ ದಾಲ್ ಇತ್ತು. ಆಗ ಕಾಮಿಯಾ ಜಾನಿಗೆ ಜಾಹ್ನವಿ ಅವರು ಇಡ್ಲಿಯೊಂದಿಗೆ ಚಿಕನ್ ಕರಿ ಟ್ರೈ ಮಾಡಿ ಎಂದು ಹೇಳುತ್ತಾರೆ. ಆಗ ಕಾಮಿಯಾ ಬಹಳ ಆಶ್ಚರ್ಯ ಚಕಿತರಾಗಿ ಏನು? ಇಡ್ಲಿ ಜೊತೆ ಚಿಕನ್ ಕರಿ?” ಇದೆಂಥ ಕಾಂಬಿನೇಶನ್‌? ನೀವೇ ಇದ್ದನ್ನ ಪರಿಚಯಿಸಿದ್ದೀರಾ ಅಥವಾ ಇದು ಕಾಂಬಿನೇಶನ್‌ ಇರೋದು ಹೌದಾ? ಎಂದು ಕೇಳುತ್ತಾರೆ. ಮಾತ್ರವಲ್ಲ ಇದು ಬೋನಿ ಸ್ಪೆಷಲ್. ಚಿಕನ್ ಕರಿ ಜೊತೆ ಇಡ್ಲಿ. ನಿಮ್ಮಲ್ಲಿ ಎಷ್ಟು ಮಂದಿ ಇದನ್ನು ಪ್ರಯತ್ನಿಸಿದ್ದೀರಿ ಎಂದು ನನಗೆ ತಿಳಿದಿಲ್ಲ. ಇಡ್ಲಿಯ ಮೇಲೆ ಚಿಕನ್ ಕರಿ. ಇದನ್ನು ಪ್ರಯತ್ನಿಸಲು ನನಗೆ ತುಂಬಾ ಭಯವಾಗಿದೆ” ಎಂದು ಅವಳು ಹೇಳುತ್ತಾರೆ.

ಆಗ ಕಾಮಿಯಾ ಜಾನಿಗೆ ಜಾಹ್ನವಿ ಚಮಚ ಬಳಸಬೇಡಿ, ಕೈಗಳಿಂದ ತಿನ್ನಿರಿ ಎಂದಾಗ, ಕೈಯಿಂದ ಇಡ್ಲಿ ತಿನ್ನಲು ನನಗೆ ಗೊತ್ತಿಲ್ಲ,” ಎಂದು ಜಾನಿ ನಗುತ್ತಾ ಪ್ರತಿಕ್ರಿಯಿಸುತ್ತಾರೆ. ಮ್ಯಾಗಿ ನೂಡಲ್ಸ್ ಸೇರಿದಂತೆ ಎಲ್ಲವನ್ನೂ ಕೈಯಿಂದ ತಿನ್ನಬಹುದು ಎಂದು ಜಾಹ್ನವಿ ಕಪೂರ್ ಹೇಳಿದ್ದಾರೆ. ಬಳಿಕ ಇಡ್ಲಿ-ಕೋಳಿ ಕರಿ ಕಾಂಬಿನೇಶನ್‌ ತಿಂದ ಬಳಿಕ ಕಾಮಿಯಾ ʻʻವಿಚಿತ್ರ ಕಾಮಬಿನೇಶನ್‌ʼʼಎಂದು ಎಂದು ಹೇಳುತ್ತಾರೆ.

ಕ್ಲಿಪ್ ಅನ್ನು ವೀಕ್ಷಿಸಿದ ಹೆಚ್ಚಿನ ಸಂಖ್ಯೆಯ ಜನರು ಕಾಮಿಯಾ ಜಾನಿ ಅವರನ್ನು ಟೀಕೆ ಮಾಡಿದ್ದಾರೆ. ದಕ್ಷಿಣ ಭಾರತದ ಆಹಾರಗಳ ಬಗ್ಗೆ ಆಕೆಗೆ ತಿಳಿದಿಲ್ಲ ಎಂದು ಟ್ರೋಲ್‌ ಮಾಡಿದ್ದಾರೆ. ಆಕೆ ಎಂದಾದರೂ ತಮಿಳುನಾಡಿಗೆ ಭೇಟಿ ನೀಡಿದ್ದಾಳೆಯೇ? ಅಲ್ಲದೆ, ಇಡ್ಲಿ ಅಥವಾ ಮಟನ್‌ನೊಂದಿಗೆ ದೋಸೆಯನ್ನು ಪ್ರಯತ್ನಿಸಿ, ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Janhvi Kapoor: ಪೀರಿಯಡ್ಸ್ ವೇಳೆ ಲವ್ ಬ್ರೇಕ್ ಅಪ್‌ ಆಗ್ತಿತ್ತು ಎಂದ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್‌!

ಕರ್ಲಿ ಟೇರ್ಲ್ ಎಂಬ ಯೂಟ್ಯೂಬ್ ಚಾನೆಲ್ ಹೊಂದಿರುವ ಕಾಮಿಯಾ ಜಾನಿ ಈ ವರ್ಷ ಮಾರ್ಚ್‌ನಲ್ಲಿ ಪ್ರಧಾನಿ ಮೋದಿಯಿಂದ ಬೆಸ್ಟ್ ಟ್ರಾವೆಲ್ ಕಂಟೆಂಟ್ ಕ್ರಿಯೇಟರ್ ಅವಾರ್ಡನ್ನು ಗಳಿಸಿದ್ದಾರೆ. 

ಇದಕ್ಕೂ ಮುಂಚೆ ಮುಂಬಯಿನಲ್ಲಿ (mumbai) ಅದ್ಧೂರಿಯಾಗಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant Radhika Wedding) ಸಮಾರಂಭದಲ್ಲಿ ವ್ಯಾಪಾರ, ರಾಜಕೀಯ ಮತ್ತು ಮನರಂಜನಾ ಲೋಕದ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ಬಗ್ಗೆ ಕರ್ಲಿ ಟೇಲ್ಸ್ ನ (Curly Tales) ಕಾಮಿಯಾ ಜಾನಿ (kamiya jani) ಅವರು ವಿಡಿಯೋವನ್ನು ಹಂಚಿಕೊಂಡಿದ್ದು, ಉನ್ನತ-ಪ್ರೊಫೈಲ್ ಮದುವೆ ಎಷ್ಟು ಸ್ಮರಣೀಯ ಮತ್ತು ಭವ್ಯವಾಗಿತ್ತು ಎಂಬುದನ್ನು ವಿಡಿಯೋ ಮೂಲಕ ವಿವರಿಸಿದ್ದರು.





Continue Reading

ಅಂಕಣ

ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

ರಾಜಮಾರ್ಗ ಅಂಕಣ: ʼದಿಲ್ ಜಲ್ತಾ ಹೆ ತೋ’ ಎಂದು ನೋವಿನಲ್ಲಿ ಹಾಡುತ್ತ ನಮ್ಮ ʼದಿಲ್ ತೋಡಕರ್’ ಆತನು ಹೊರಟು ಹೋಗಿ 46 ವರ್ಷಗಳೇ ಕಳೆದುಹೋದವು! ಆದ್ರೂ ನಾವು ʼಜಾನೆ ಕಹಾ ಗಯೇ ಓ ದಿನ್’ ಎಂದು ಹಾಡುತ್ತ, ʼಕಭಿ ಕಭಿ ಮೇರೆ ದಿಲ್ ಮೆ’ ಎಂದು ಗುನುಗುತ್ತ ಅವನಿಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡುತ್ತಾ ಇದ್ದೇವೆ.

VISTARANEWS.COM


on

mukesh bollywood ರಾಜಮಾರ್ಗ ಅಂಕಣ
Koo

ಸಹಸ್ರಮಾನದ ಬಾಲಿವುಡ್ ಗಾಯಕ ಮುಕೇಶ್ – ನೂರಾ ಒಂದರ ನೆನಪು

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆತನು ಬದುಕಿದ್ದರೆ ಮೊನ್ನೆ ಜುಲೈ 22ಕ್ಕೆ ನೂರಾ ಒಂದು ವರ್ಷಗಳು ತುಂಬಿದ ಸಂಭ್ರಮವು ಇರುತ್ತಿತ್ತು! ಇಂದು ಮುಕೇಶ್ (Mukesh) ನಮ್ಮೊಂದಿಗಿಲ್ಲ! ಆದರೆ ಆ ಗಾಯಕ (Singer) ಹಾಡಿರುವ 1300 ಮಾಧುರ್ಯದ ಹಾಡುಗಳಿವೆ! ಸಾವಿಲ್ಲದ ಹಾಡುಗಳನ್ನು ಮುಕೇಶ್ ಬಾಲಿವುಡ್ (Bollywood) ಜಗತ್ತಿನಲ್ಲಿ ಹಾಡಿ ಸೂತಕದ ಛಾಯೆ ಮೂಡಿಸಿ ಹೊರಟೇ ಹೋದರು!

ದಿಲ್ ಜಲ್ತಾ ಹೈ ತೋ ಜಲನೇ ದೋ

ʼದಿಲ್ ಜಲ್ತಾ ಹೆ ತೋ’ ಎಂದು ನೋವಿನಲ್ಲಿ ಹಾಡುತ್ತ ನಮ್ಮ ʼದಿಲ್ ತೋಡಕರ್’ ಆತನು ಹೊರಟು ಹೋಗಿ 46 ವರ್ಷಗಳೇ ಕಳೆದುಹೋದವು! ಆದ್ರೂ ನಾವು ʼಜಾನೆ ಕಹಾ ಗಯೇ ಓ ದಿನ್’ ಎಂದು ಹಾಡುತ್ತ, ʼಕಭಿ ಕಭಿ ಮೇರೆ ದಿಲ್ ಮೆ’ ಎಂದು ಗುನುಗುತ್ತ ಅವನಿಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡುತ್ತಾ ಇದ್ದೇವೆ. ಬಾಲಿವುಡ್ಡಿಗೆ ಇನ್ನೊಬ್ಬ ಮುಕೇಶ್ ಮತ್ತೆ ಹುಟ್ಟಿ ಬರಲಿ ಎಂಬ ಹಾರೈಕೆಯೊಂದಿಗೆ!

ಆವಾರಾ ಹೂಂ…ಆವಾರಾ ಹೂಂ!

ಅವನ ಪೂರ್ತಿ ಹೆಸರು ಮುಕೇಶ್ ಚಂದ್ ಮಾಥುರ್. ಹುಟ್ಟಿದ್ದು ದೆಹಲಿಯಲ್ಲಿ. ಓದಿದ್ದು ಎಸೆಸೆಲ್ಸಿ. ಉದ್ಯೋಗ ಮಾಡಿದ್ದು PWD ಇಲಾಖೆಯಲ್ಲಿ. ಅವನ ಅಕ್ಕ ಸುಂದರ ಪ್ಯಾರಿಗೆ ಸಂಗೀತ ಕಲಿಸಲು ಗುರುಗಳು ಪ್ರತೀ ದಿನ ಮನೆಗೆ ಬಂದಾಗ ಪಕ್ಕದ ಕೋಣೆಯಲ್ಲಿ ಹಾಡುಗಳನ್ನು ಗುನುಗುತ್ತ ಸಂಗೀತವನ್ನು ಕಲಿತವನು ಮುಕೇಶ್. ಅವನ ಅಕ್ಕನ ಮದುವೆಯ ರಸಮಂಜರಿಯ ವೇದಿಕೆಯಲ್ಲಿ ಆತನು ಹಾಡುವಾಗ ಕೇಳಿದ್ದ ಹಿಂದಿಯ ಖ್ಯಾತ ನಟ ಮೋತಿಲಾಲ್ ಅವನಿಗೆ ಹೇಳಿದ್ದು ‘ನೀನು ಇರಬೇಕಾದ್ದು ಇಲ್ಲಿ ಅಲ್ಲ! ನಡಿ ಮುಂಬೈಗೆ!’

ಮುಂಬೈಗೆ ಕರೆದುಕೊಂಡು ಬಂದ ಮೋತಿಲಾಲ್ ಅವರು ಅವನ ಸಂಗೀತ ಕಲಿಕೆಗೂ ಅವಕಾಶ ಮಾಡಿಕೊಟ್ಟರು.

ಅದರ ನಡುವೆ ಎರಡು ಸಿನೆಮಾದಲ್ಲಿ ಹೀರೋ ಆಗಿ ಅಭಿನಯ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದ ಮುಕೇಶ್! ಸಿನೆಮಾ ಓಡಲಿಲ್ಲ. ಅವನಿಗೆ ತಕ್ಷಣವೇ ಅರ್ಥ ಆಗಿತ್ತು, ಇದು ನನ್ನ ಕ್ಷೇತ್ರ ಅಲ್ಲ!

ಮತ್ತೆ ಅವಕಾಶ ಹುಡುಕುತ್ತ ಸ್ಟುಡಿಯೋಗಳಿಗೆ ಅಲೆದಾಟ ತಪ್ಪಲಿಲ್ಲ. ಅನಿಲ್ ಬಿಸ್ವಾಸ್ ಕಂಪೋಸ್ ಮಾಡಿದ ‘ಪೇಹ್ಲಿ ನಜರ್’ ಸಿನಿಮಾದ ಸ್ಮರಣೀಯ ಹಾಡು ‘ದಿಲ್ ಜಲ್ತಾ ಹೈ ತೋ ಜಲನೇ ದೋ’ ಮುಕೇಶ್ ಹಾಡಿದ್ದೇ ಹಾಡಿದ್ದು, ಬಂಪರ್ ಹೊಡೆಯಿತು! ಆ ಹಾಡನ್ನು ಕೇಳಿದ ಆಗಿನ ಲೆಜೆಂಡ್ ಸಿಂಗರ್ ಸೈಗಲ್ ಹೇಳಿದರಂತೆ, ‘ಈ ಹಾಡು ನಾನೇ ಹಾಡಿದ್ದಲ್ಲವಾ! ಯಾವಾಗ ಹಾಡಿದ್ದು ಎಂದು ಮರೆತುಹೋಗಿದೆ!’

ಆಗ ಅವನಿಗೆ ಅರ್ಥ ಆದದ್ದು ʼನಾನು ಅರಿವಿಲ್ಲದೆ ಸೈಗಲ್ ಅವರ ಅನುಕರಣೆಯನ್ನು ಮಾಡುತ್ತಿರುವೆ’ ಎಂದು!

ಮುಖೇಶಗೆ ಒಲಿದ ಗುರು ನೌಶಾದ್

ಅನುಕರಣೆಯಿಂದ ಹೊರಬಂದು ಅವನದ್ದೇ ವಾಯ್ಸ್ ಡೆವೆಲಪ್ ಮಾಡಲು ತರಬೇತಿ ನೀಡಿದವರು ನೌಶಾದ್ ಸಾಬ್. ಅವರನ್ನು ಮುಕೇಶ್ ಕೊನೆತನಕ ಮರೆಯಲಿಲ್ಲ. ಸಂಗೀತ ಕ್ಷೇತ್ರದಲ್ಲಿ ತಾನು ಮಾಡಿದ ಅಷ್ಟೂ ಸಾಧನೆಯನ್ನು ತನ್ನ ಗುರುವಿಗೆ ಸಮರ್ಪಣೆ ಮಾಡಿದ್ದಾನೆ ಮುಕೇಶ್.

ಚಂಚಲ್ ಶೀತಲ್ ಸರಲಾ!

ಬಾಲಿವುಡ್ಡಿನಲ್ಲಿ ಗಟ್ಟಿಯಾಗಿ ಕಾಲು ಊರುವ ಮೊದಲೇ ಆತ ಪ್ರೀತಿಯ ಬಲೆಗೆ ಬಿದ್ದಾಗಿತ್ತು. ಅವಳ ಹೆಸರು ಸರಲಾ. ಕೋಟ್ಯಾಧಿಪತಿ ಅಪ್ಪನ ಪ್ರೀತಿಯ ಒಬ್ಬಳೇ ಮಗಳು. ಇವನೋ ʼಮಾನಾ ಆಪ್ನಿ ಜೇಬ್ ಸೆ ಫಕೀರ್ ಹೆ’ ಎಂದು ಹಾಡುತ್ತಿದ್ದ ಐಡೆಂಟಿಟಿ ಇಲ್ಲದ ಹಿನ್ನೆಲೆ ಗಾಯಕ! ʼಮೈನಾ ಭೂಲೂಂಗಾ’ ಎಂದು ಹಾಡುತ್ತ ಮುಕೇಶ್ ಅವಳಿಗೆ ಮೋಡಿಯನ್ನು ಮಾಡಿದ್ದ! ʼಚಂಚಲ ಶೀತಲ್’ ಸರಲಾ ಅವನನ್ನು ಬಿಟ್ಟಿರಲು ಆಗದೇ ಒಂದು ದಿನ ʼಭಾಗ್ ಚಲೇ’ ಎಂದಳು!

ಸಾವನ್ ಕಾ ಮಹೀನಾ..

ಸರಳವಾಗಿ ಒಂದು ʼಸಾವನ ಕಾ ಮಹೀನಾ’ ಅವರು ಒಂದು ದೇವಸ್ಥಾನದಲ್ಲಿ ಮದುವೆ ಆದರು. ಕೊನೆಯವರೆಗೂ ಪ್ರೀತಿಯಿಂದ ಬಾಳಿದರು.

1945-1978ರ ಅವಧಿಯಲ್ಲಿ ಅವನು ಹಾಡಿದ್ದು 1300 ಅಮರವಾದ ಹಾಡುಗಳನ್ನು! ಅವನ ಸಮಕಾಲೀನ ಗಾಯಕರಾದ ರಫೀ ಮತ್ತು ಕಿಶೋರ್ ಕುಮಾರ್ ಅವರಿಗೆ ಹೋಲಿಸಿದರೆ ಈ ಸಂಖ್ಯೆಯು ತುಂಬಾ ಕಡಿಮೆ. ಆದರೆ ಮುಕೇಶ್ ಹಾಡಿದ ಹಾಡುಗಳು ಎಲ್ಲವೂ ಸೂಪರ್ ಹಿಟ್. ಮಾಧುರ್ಯದ ಪರಾಕಾಷ್ಠೆ!

ಶೋಕ ಗೀತೆಗಳ ಸಾಮ್ರಾಟ ಮುಕೇಶ್!

ಅವನ ಧ್ವನಿಯಲ್ಲಿ ರಫಿಯ ವೈವಿಧ್ಯತೆ ಇರಲಿಲ್ಲ. ಕಿಶೋರ್ ಕುಮಾರನ ಕಶಿಷ್ ಇರಲಿಲ್ಲ. ಆದರೆ ಒಂದು ಹಾಂಟಿಂಗ್ ಮೆಲಡಿಯು ಖಂಡಿತವಾಗಿಯು ಇರುತ್ತಿತ್ತು. ಅದರಲ್ಲಿ ಕೂಡ ಭಗ್ನಪ್ರೇಮಿಗಳಿಗೆ ಒಂದಿಷ್ಟು ಸಾಂತ್ವನ ನೀಡುವ ವಿಷಾದ ಭಾವ ಇರುತ್ತಿತ್ತು. ಅದಕ್ಕೆ ಅವನನ್ನು ‘ಶೋಕ ಗೀತೆಗಳ ಸಾಮ್ರಾಟ’ ಎಂದು ಜನರು ಕರೆದರು. ನೋವಿನಲ್ಲಿ ಅದ್ದಿ ತೆಗೆದ ಆ ಆರ್ದ್ರ ಧ್ವನಿಯು ಬೇರೆ ಯಾವ ಗಾಯಕನಲ್ಲೂ ಇರಲಿಲ್ಲ! ಒಂದು ರೀತಿಯಲ್ಲಿ ಆತನದ್ದು ನಶೆ ಏರಿಸುವ ಧ್ವನಿ ಆಗಿತ್ತು. ಶಂಕರ್ ಜೈಕಿಷನ್, ಕಲ್ಯಾಣ್ ಜಿ ಆನಂದ ಜಿ, ಸಚಿನ್ ದೇವ್ ಬರ್ಮನ್, ಖಯ್ಯಾಂ, ಸಲೀಲ್ ಚೌಧರಿ ಮೊದಲಾದ ಸಂಗೀತ ನಿರ್ದೇಶಕರು ಮುಕೇಶನ ಒಳಗಿದ್ದ ಅದ್ಭುತ ಗಾಯಕನನ್ನು ಕಡೆದು ನಿಲ್ಲಿಸಿದರು.

ಆಗಿನ ಕಾಲದಲ್ಲಿ ಸ್ಟುಡಿಯೋ ವ್ಯವಸ್ಥೆ ಹೇಗಿತ್ತು ಎಂದರೆ ಎಲ್ಲಾ ವಾದ್ಯಗಳ ಕಲಾವಿದರು ಸಾಕಷ್ಟು ರಿಹರ್ಸಲ್ ಮಾಡಿ ಲೈವ್ ಆಗಿ ನುಡಿಸಬೇಕಾಗಿತ್ತು. ಹಿನ್ನೆಲೆ ಗಾಯಕರು ರೀ ಟೇಕ್ ಮಾಡಲು ಅವಕಾಶ ಇಲ್ಲದೆ ಒಂದೇ ಉಸಿರಲ್ಲಿ ಹಾಡಿ ಮುಗಿಸಬೇಕು. ಮುಕೇಶ್ ಇಂತಹ ಸವಾಲನ್ನು ಗೆದ್ದು ಬಂದಿದ್ದವರು!

ʼಮುಕೇಶ್ ನನ್ನ ಆತ್ಮ’ ಎಂದರು ರಾಜಕಪೂರ್

ಹಿಂದಿ ಸಿನೆಮಾರಂಗದ ಮಹಾನಟ, ಶೋಮ್ಯಾನ್ ರಾಜ್ ಕಪೂರ್ ಅವರ ವ್ಯಕ್ತಿತ್ವಕ್ಕೆ ಮುಕೇಶ್ ಧ್ವನಿಯು ತುಂಬಾ ಚೆನ್ನಾಗಿಯೇ ಹೊಂದಾಣಿಕೆ ಆಗುತ್ತಿತ್ತು. ಅದರಿಂದ ಹುಟ್ಟಿ ಬಂದದ್ದು ಎವರ್ ಗ್ರೀನ್ ಆದ ನೂರಾರು ಹಾಡುಗಳು! ಆವಾರಾ, ಬರ್ಸಾತ್, ಶ್ರೀ 420, ಸಂಗಂ, ಮೇರಾ ನಾಮ್ ಜೋಕರ್, ಅನಾರಿ, ಆಗ್, ಜಿಸ್ ದೇಶ್ ಮೆ ಗಂಗಾ ಬಹತಿ ಹೈ……….. ಈ ಸಿನಿಮಾಗಳ ಹಾಡುಗಳನ್ನು ಕೇಳಿ ನೋಡಿ. ಅಂತಹ ಹಾಡುಗಳಿಗೆ ಸಾವಿಲ್ಲ. ಅದಕ್ಕಾಗಿ ಮುಂದೆ ಮುಕೇಶ್ ನಿಧನರಾದಾಗ ರಾಜಕಪೂರ್ ಹೇಳಿದ್ದು – ನಾನು ನನ್ನ ಆತ್ಮವನ್ನು ಕಳೆದುಕೊಂಡೆ!

ಕಯಿ ಬಾರ್ ಯೂ ಹಿ ದೇಖಾ ಹೈ..

ಮುಕೇಶನಿಗೆ ‘ರಜನಿ ಗಂಧಾ’ ಹಿಂದೀ ಸಿನಿಮಾದ ಹಾಡಿಗೆ ಅತ್ಯುತ್ತಮ ಗಾಯಕ ರಾಷ್ಟ್ರ ಪ್ರಶಸ್ತಿ ದೊರೆಯಿತು( ಕಯಿ ಬಾರ್ ಯೂ ಹಿ ದೇಖಾ ಹೈ). ನಾಲ್ಕು ಫಿಲ್ಮ್ ಫೇರ್ ಪ್ರಶಸ್ತಿ, ಬೆಂಗಾಲಿ ಪತ್ರಕರ್ತರ ಸಂಘದ ಮೂರು ಪ್ರಶಸ್ತಿಗಳು ಅವನಿಗೆ ದೊರೆತಿವೆ. ಇದೆಲ್ಲಕ್ಕಿಂತ ಹೆಚ್ಚಾಗಿ ಆತನ ಮೆಲಡಿ ಹಾಡುಗಳನ್ನು ಈಗಲೂ ಕೇಳುವ, ಆಸ್ವಾದಿಸುವ, ಫೀಲ್ ಮಾಡಿಕೊಳ್ಳುವ ಬಹು ದೊಡ್ಡ ಅಭಿಮಾನಿಗಳ ಪ್ರೀತಿಯು ದೊರೆತಿತು. ಮುಖೇಶನಿಗೆ ವಿದೇಶದಲ್ಲಿ ಕೂಡ ಬಹಳ ದೊಡ್ಡ ಸಂಖ್ಯೆಯ ಅಭಿಮಾನಿಗಳ ಬಳಗ ಇದೆ.

ʼದಿಲ್ ಜಲ್ತಾ ಹೈ’ ಮುಕೇಶ್ ಅವನ ಮೊದಲ ಮತ್ತು ಕೊನೆಯ ಹಾಡಾಯಿತು!

1976 ಆಗಸ್ಟ್ 27ರಂದು ಅಮೆರಿಕಾದ ಒಂದು ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಹಾಡಲು ಹೋಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮುಕೇಶ್ ಉಸಿರು ನಿಂತಿತು. ಅಲ್ಲಿ ಕೂಡಾ ಆತ ಹಾಡಿದ ಕೊನೆಯ ಹಾಡು – ದಿಲ್ ಜಲ್ತಾ ಹೈ ತೋ ಜಲನೆ ದೋ! ನೆನಪು ಮಾಡಿಕೊಳ್ಳಿ, ಅದು ಮುಕೇಶ್ ಹಾಡಿದ ಮೊದಲ ಹಾಡು ಕೂಡ ಆಗಿತ್ತು! ಉಸಿರು ನಿಂತಾಗ ಅವನಿಗೆ ಕೇವಲ 53 ವರ್ಷ ಆಗಿತ್ತು. ಮುಂದೆ ಆತನ ಮಗ ನಿತಿನ್ ಮುಕೇಶ್ ಅಪ್ಪನ ಹಾಗೆ ಹಿನ್ನೆಲೆ ಗಾಯಕರಾಗಿ ಜನಪ್ರಿಯತೆ ಪಡೆದರು.

ಮುಕೇಶನ ಹಾಡುಗಳನ್ನು ಆರಾಧಿಸುತ್ತಾ, ಅವುಗಳನ್ನು ನನಗೆ ದೊರೆತ ಎಲ್ಲಾ ಕಾಲೇಜಿನ ವೇದಿಕೆಯಲ್ಲಿ, ಸ್ಪರ್ಧೆಗಳಲ್ಲಿ ಆರ್ದ್ರವಾಗಿ ಹಾಡುತ್ತ ಇದ್ದ ನನ್ನ ಹಾಗೆ ಇರುವ ಕೋಟಿ ಕೋಟಿ ಅಭಿಮಾನಿಗಳ ಮೇಲೆ ಆತನು ದಟ್ಟವಾದ ಪ್ರಭಾವವನ್ನು ಬಿಟ್ಟು ಹೋಗಿದ್ದಾನೆ. ಆತನ ಟಾಪ್ 12 ಹಾಡುಗಳನ್ನು ಪಟ್ಟಿ ಮಾಡಿ ಇಲ್ಲಿಟ್ಟು ಅವನಿಗೆ ಶ್ರದ್ಧಾಂಜಲಿ ಕೊಡುತ್ತಿರುವೆ. ಅವನ ಸಾವಿರದ ಹಾಡುಗಳಿಗೆ ಕಿವಿ ಆಗಿ ಆಯ್ತಾ!

ಈ ಹಾಡುಗಳನ್ನೊಮ್ಮೆ ಕೇಳಿ, ನೀವು ಮುಕೇಶ್ ಫ್ಯಾನ್ ಆಗದಿದ್ದರೆ ಮತ್ತೆ ಹೇಳಿ!

1) ಹೊಂಟೋ ಪೆ ಸಚ್ಚಾಯಿ ರಹತಿ ಹೈ( ಜೀಸ್ ದೇಶ್ ಮೆ ಗಂಗಾ ಬೇಹತಿ ಹೈ)
2) ದೋಸ್ತ್ ದೋಸ್ತ್ ನಾ ರಹಾ( ಸಂಗಂ)
3) ಸಾವನ ಕಾ ಮಹೀನಾ ಪವನ್ ಕರೆ ಶೋರ್ (ಮಿಲನ್)
4) ಬಸ್ ಏಹಿ ಅಪರಾಧ್ ( ಪೆಹಾಚಾನ್)
5) ಜಾನೆ ಕಹಾನ್ ಗಯೇ ಓ ದಿನ್ (ಮೇರಾ ನಾಮ್ ಜೋಕರ್)
6) ಕಹೀನ್ ದೂರ್ ಜಬ್ ದಿನ್ ಧಲ ಜಾಯೆ ( ಆನಂದ್)
7) ಮೈ ನಾ ಭೂಲೂಂಗಾ(ರೋಟಿ ಕಪಡಾ ಔರ್ ಮಕಾನ್)
8) ಇಕ್ ದಿನ್ ಭಿಕ್ ಜಾಯೆಗಾ ( ಧರಂ ಕರಂ)
9) ಕಭೀ ಕಭಿ ಮೇರೆ ದಿಲ್ ಮೆ( ಕಭೀ ಕಭಿ)
10) ಮೇರಾ ಜೂತಾ ಹೈ ಜಪಾನಿ( ಆವಾರ)
11) ತಾಲ್ ಮಿಲೆ ನದೀ ಕೆ ಜಲ ಮೆ ( ಅನೋಖಿ ರಾತ)
12) ದಿಲ್ ತಡಪ್ ತಡಪ್ ಕೆ (ಮಧುಮತಿ)

ಸಹಸ್ರಮಾನದ ಮುಕೇಶ್ ಧ್ವನಿಗೆ ಕೋಟಿ ಪ್ರಣಾಮಗಳು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Continue Reading

ಸ್ಯಾಂಡಲ್ ವುಡ್

Kannada New Movie: ‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್: ತೆರೆಗೆ ಯಾವಾಗ?

Kannada New Movie: ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ.

VISTARANEWS.COM


on

Kannada New Movie powder Movie release date announce
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ʻಪೌಡರ್ʼ. ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ ಪ್ರಚಾರ ಕಾರ್ಯ ಕೂಡ ನಡೆಸಿತ್ತು. ಆದರೆ ಈಗ ಪೌಡರ್ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ. ಕನ್ನಡ ಸಿನಿಮಾಗಳ ಉಳಿವಿಗಾಗಿ ಕೆಆರ್ ಜಿ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ.

ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. ಒಂದೇ ದಿನ ಸಾಕಷ್ಟು ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸಾಫೀಸ್ ನಲ್ಲಿ ಕ್ಲ್ಯಾಷ್ ಆಗಲಿದೆ. ಕಲೆಕ್ಷನ್ ಮೇಲೆಯೂ ಹೊಡೆತ ಬೀಳಲಿದೆ. ಮೊದಲೇ ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಬಾಕ್ಸಾಫೀಸ್ ವಾರ್ ಬೇಡ ಎಂಬುದನ್ನು ಅರಿತ ಕೆಆರ್ ಜಿ ಸಂಸ್ಥಾಪಕಾರದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಪೌಡರ್ ರಿಲೀಸ್ ದಿನಾಂಕವನ್ನು ಮುಂಡೂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

Continue Reading

ಕ್ರಿಕೆಟ್

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

IPT 12: ಈಗಾಗಲೇ ಯಶಸ್ವಿಯಾಗಿ ಮೂರು TPL ಸೀಸನ್ ಮುಗಿಸಿರುವ ಎನ್ 1 ಅಕಾಡೆಮಿ ಸೂತ್ರಧಾರ ಸುನಿಲ್ ಕುಮಾರ್ ಬಿ. ಆರ್ ಅವರು ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನಮೆಂಟ್‌ಗೆ ಚಾಲನೆ ಕೊಟ್ಟಿದ್ದಾರೆ.

VISTARANEWS.COM


on

Unveiling of IPT 12 Cricket Trophy, Jersey by N1 Cricket Academy
Koo

ಬೆಂಗಳೂರು: ಕಿರುತೆರೆ ಕಲಾವಿದರಿಗಾಗಿ TPL-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರುತ್ತಿರುವ ‘ಎನ್ 1’ ಕ್ರಿಕೆಟ್ ಅಕಾಡೆಮಿಯು ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು TPL ಸೀಸನ್ ಮುಗಿಸಿರುವ ಎನ್ 1 ಅಕಾಡೆಮಿ ಸೂತ್ರಧಾರ ಸುನಿಲ್ ಕುಮಾರ್ ಬಿ. ಆರ್ ಅವರು ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನಮೆಂಟ್‌ಗೆ ಚಾಲನೆ ಕೊಟ್ಟಿದ್ದಾರೆ.

ಡಾಕ್ಟರ್ಸ್, ಲಾಯರ್ಸ್, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಫ್ಯಾಷನ್ ಡಿಸೈನರ್ ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ IPT12 ಇದಾಗಿದೆ. ಈ ಪಂದ್ಯಾವಳಿಯ ಟ್ರೋಫಿ ಹಾಗೂ ಜೆರ್ಸಿ ಬಿಡುಗಡೆ ಮಾಡಲಾಯಿತು,. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಪ್ರಣಮ್ ದೇವರಾಜ್, ಶರಣ್ಯ ಶೆಟ್ಟಿ ಸೇರಿದಂತೆ ಚಿತ್ರರಂಗದ ಕಲಾವಿದರು, ಎಲ್ಲಾ ತಂಡದ ನಾಯಕರು ಮತ್ತು ಬ್ರ್ಯಾಂಡ್ ಅಂಬಾಸಿಡರ್ ಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಬಳಿಕ ಮಾತನಾಡಿದ ನಟ ಪ್ರಣಂ ದೇವರಾಜ್ ಮಾತನಾಡಿ, ʻʻಸುನಿಲ್ ಅವರು ಪ್ರತಿ ವರ್ಷ ಈ ರೀತಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ನಾವು ಮಾಧ್ಯಮದರು ಒಟ್ಟಿಗೆ ಕ್ರಿಕೆಟ್ ಆಡುವ ಅವಕಾಶ ಮಾಡಿಕೊಟ್ಟಿದ್ದಾರೆ. ಸಾಕಷ್ಟು ತಂಡಗಳು ಆಡುತ್ತಿದ್ದಾರೆ. ನಮ್ಮ ದೇಶದಲ್ಲಿ ಜನರನ್ನು ಒಂದು ಮಾಡಲು ಕ್ರಿಕೆಟ್ ಹಾಗು ಸಿನಿಮಾದಿಂದ ಮಾತ್ರ ಸಾಧ್ಯ. ಕ್ರಿಕೆಟ್ ನಿಂದ ಸುನಿಲ್ ನಮ್ಮನ್ನೆಲ್ಲಾ ಒಂದು ಮಾಡುತ್ತಿದ್ದಾರೆʼ ಎಂದು ತಿಳಿಸಿದರು.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಎನ್ 1 ಕ್ರಿಕೆಟ್ ಅಕಾಡೆಮಿ ಸಂಸ್ಥಾಪಕ ಸುನಿಲ್ ಕುಮಾರ್ ಬಿ ಆರ್ , ಎಲ್ಲಾ ತಂಡಗಳಿಗೂ ಆಲ್ ದಿ ಬೆಸ್ಟ್ ತಿಳಿಸಿದರು.

ಯಾವ ಯಾವ ತಂಡಗಳಿವೆ?
1.GLR ವಾರಿಯರ್ಸ್
ಲೂಸ್ ಮಾದ ಯೋಗಿ -ನಾಯಕ
ರಾಜೇಶ್.ಎಲ್-ಮಾಲೀಕರು

  1. ಅಶ್ವಸೂರ್ಯ ರೈಡರ್ಸ್
    ಹರ್ಷ ಸಿಎಂ ಗೌಡ – ನಾಯಕ
    ರಂಜಿತ್ ಕುಮಾರ್ ಎಸ್ – ಮಾಲೀಕರು

3.ದಿ ಬುಲ್ ಸ್ಕ್ವಾಡ್
ಶರತ್ ಪದ್ಮನಾಭ್- ನಾಯಕ
ಮೋನಿಶ್- ಮಾಲೀಕರು

4.ಬಯೋಟಾಪ್ ಲೈಫ್ ಸೆವಿಯರ್ಸ್
ಅಬ್ರಾರ್ ಮೊಹಮ್ಮದ್-ನಾಯಕ
ಪ್ರಸನ್ನ ವಿ, ಡಾ.ವಿಶ್ವನಾಥ್,
ವಿನು ಜೋಸ್ -ಮಾಲೀಕರು

5.ಶ್ರೀಲಂಕಾ ಲಾಯರ್ಸ್ ಕ್ರಿಕೆಟ್
ಕುಸನ್-ನಾಯಕ
ಮನೀಶ್ ಅಧ್ಯಕ್ಷರು
ಬುವನೇಕ ಉಪಾಧ್ಯಕ್ಷ

  1. S/ o ಮುತ್ತಣ್ಣ ಮಿಡಿಯಾ ಟೀಮ್
    ಸದಾಶಿವ ಶೆಣೈ-ನಾಯಕ
    ಪುರಾತನ‌‌ ಫಿಲ್ಮಂಸ್-ಮಾಲೀಕರು
  2. ಭಾರತೀಯ ವಕೀಲರ ತಂಡ
    ಅರವಿಂದ್ ವೆಂಕಟೇಶ್ ರೆಡ್ಡಿ-ನಾಯಕ
    ಶಿಲೇಶ್ ಕುಮಾರ್ -ಮಾಲೀಕರು

8.ಫ್ಯಾಶನ್ ಮೇವರಿಕ್ಸ್
ಫಹೀಮ್ ರಾಜ-ನಾಯಕ
ಪ್ರಶಾಂತ್ ಕೆ ಎಂ-ಮಾಲೀಕರು

ಎವಿಆರ್ ಗ್ರೂಪ್ಸ್ ವತಿಯಿಂದ ಎಚ್ ವೆಂಕಟೇಶ್ ರೆಡ್ಡಿರವರು IPT12 ಕ್ರಿಕೆಟ್ ಟೂರ್ನಮೆಂಟ್ಗೆ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ. ಸದ್ಯ ಜೆರ್ಸಿ ಹಾಗೂ ಟ್ರೋಫಿ ಅನಾವರಣ ಮಾಡಲಾಗಿದ್ದು, ಶೀಘ್ರದಲ್ಲಿಯೇ ಪ್ರಾಕ್ಟಿಸ್ ಗಾಗಿ ತಂಡಗಳು ಬ್ಯಾಟ್ ಬಾಲು ಹಿಡಿದು ಅಖಾಡಕ್ಕೆ ಇಳಿಯಲಿವೆ.

Continue Reading
Advertisement
shiradi landslide railway track
ಪ್ರಮುಖ ಸುದ್ದಿ28 mins ago

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

US Mass Shooting
ವಿದೇಶ46 mins ago

US Mass Shooting: ಅಮೆರಿಕದ ಪಾರ್ಕ್‌ನಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿ; ಒಬ್ಬ ವ್ಯಕ್ತಿ ಬಲಿ, 6 ಜನಕ್ಕೆ ಗಾಯ

Janhvi Kapoor interview Kamiya Jani trolled for calling idli-chicken curry weird combination
ಬಾಲಿವುಡ್50 mins ago

Janhvi Kapoor: ಇಡ್ಲಿ- ಚಿಕನ್ ಕರಿ ಕಾಂಬಿನೇಶನ್‌ಗೆ ಮುಖ ಕಿವುಚಿಕೊಂಡ ಖ್ಯಾತ ಯುಟ್ಯೂಬರ್‌; ತಿನ್ನಲು ಕೈ ಬಳಸಿ ಎಂದ ಜಾಹ್ನವಿ ಕಪೂರ್!

mukesh bollywood ರಾಜಮಾರ್ಗ ಅಂಕಣ
ಅಂಕಣ1 hour ago

ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

ವೈರಲ್ ನ್ಯೂಸ್1 hour ago

Viral Video: 7ನೇ ಡಿವೋರ್ಸ್‌ಗೆ ಕೋರ್ಟ್‌ಗೆ ಬಂದ ಮಹಿಳೆ; ಈಕೆಯ ಕುತಂತ್ರ ಕಂಡು ಜಡ್ಜ್‌ಗೆ ಶಾಕ್‌!

Tourist Place
Latest1 hour ago

Tourist Place in Tamilnadu : ತಮಿಳುನಾಡಿಗೆ ಹೋದರೆ ಈ ಅದ್ಭುತ ತಾಣಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬೇಡಿ!

Kalika Temple
ದೇಶ1 hour ago

Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ

Kannada New Movie powder Movie release date announce
ಸ್ಯಾಂಡಲ್ ವುಡ್2 hours ago

Kannada New Movie: ‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್: ತೆರೆಗೆ ಯಾವಾಗ?

14 hours work protest
ಪ್ರಮುಖ ಸುದ್ದಿ2 hours ago

14 Hours Work: 14 ಗಂಟೆಗಳ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್‌ 3ರಂದು ಐಟಿ ಉದ್ಯೋಗಿಗಳ ಪ್ರತಿಭಟನೆ

India Maldives
ದೇಶ2 hours ago

India Maldives: ದುರಹಂಕಾರ ಬಿಟ್ಟು ಭಾರತಕ್ಕೆ ಧನ್ಯವಾದ ತಿಳಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ16 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ18 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ20 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ21 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌