Cannes Film Festival: ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ! - Vistara News

ಸಿನಿಮಾ

Cannes Film Festival: ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!

Cannes Film Festival: ಕಾನ್‌ಸ್ಟಾಂಟಿನ್ ಬೊಜಾನೋವ್ (Konstantin Bojanov) ನಿರ್ದೇಶನದ `ದಿ ಶೇಮ್‌ಲೆಸ್’ (The Shameless) ಚಿತ್ರ ರಾಣಿ ಎಂಬ ಭಾರತೀಯ ಲೈಂಗಿಕ ಕಾರ್ಯಕರ್ತೆಯ ಕುರಿತಾದ ಸಿನಿಮಾ. ರಾಣಿ ಎಂ ತೀರ್ಥಯಾತ್ರೆಗೆ ಹೋಗಿರುತ್ತಾಳೆ. ಆ ಬಳಿಕ ಬೆಂಗಳೂರಿನಲ್ಲಿ ಆಕೆ ಕೊಲೆಯಾಗುತ್ತಾಳೆ. ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿತ್ತು. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು.

VISTARANEWS.COM


on

Cannes Film Festival Anasuya Sengupta gets Best Actress award
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ (Hu Guan) ಬ್ಲ್ಯಾಕ್ ಡಾಗ್ (Black Dog) ಸಿನಿಮಾ ಕಾನ್‌ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು (Un Certain Regard prize) ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ʻದಿ ಶೇಮ್‌ಲೆಸ್ʼ ಚಿತ್ರಕ್ಕಾಗಿ ಅನಸೂಯಾ ಸೇನ್‌ಗುಪ್ತಾ (Anasuya Sengupta) ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಕಾನ್‌ ಫೆಸ್ಟಿವಲ್‌ನಲ್ಲಿ ಈ ಗೌರವಕ್ಕೆ ಪಾತ್ರರಾದ ಭಾರತೀಯ ಮೊದಲ ತಾರೆ ಇವರು. ಅನ್ ಸರ್ಟೈನ್ ರಿಗಾರ್ಡ್ ಎಂಬುದು ಕಾನ್‌ ಚಲನಚಿತ್ರೋತ್ಸವದ ಅಧಿಕೃತ ಆಯ್ಕೆಯ ಒಂದು ವಿಭಾಗವಾಗಿದೆ.

ಶುಕ್ರವಾರ ರಾತ್ರಿ (ಮೇ.24) ನಡೆದ ಕಾನ್‌ ಫಿಲ್ಮ್ ಫೆಸ್ಟಿವಲ್‌ನಲ್ಲಿ ಅನಸೂಯಾ ಸೇನ್‌ಗುಪ್ತಾ ʻದಿ ಶೇಮ್‌ಲೆಸ್ʼ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಮುಖ್ಯವಾಗಿ ಮುಂಬೈನಲ್ಲಿ ಪ್ರೊಡಕ್ಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು ಅನುಸೂಯಾ. ಅನಸೂಯಾ ಸೇನ್‌ಗುಪ್ತಾ ಅವರು ಬಲ್ಗೇರಿಯನ್ ನಿರ್ದೇಶಕ ʻಕಾನ್‌ಸ್ಟಾಂಟಿನ್ ಬೊಜಾನೋವ್ʼ (Constantin Bojanov’s ) ಅವರ ಚಲನಚಿತ್ರ ʻದಿ ಶೇಮ್‌ಲೆಸ್‌ನಲ್ಲಿʼನ ಅವರ ಪಾತ್ರಕ್ಕಾಗಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಚಿತ್ರವನ್ನು ಭಾರತ ಮತ್ತು ನೇಪಾಳದಲ್ಲಿ ಒಂದೂವರೆ ತಿಂಗಳ ಕಾಲ ಚಿತ್ರೀಕರಣ ಮಾಡಲಾಗಿತ್ತು ಎಂದು ವರದಿಯಾಗಿದೆ.

ಕಾನ್‌ಸ್ಟಾಂಟಿನ್ ಬೊಜಾನೋವ್ (Konstantin Bojanov) ನಿರ್ದೇಶನದ `ದಿ ಶೇಮ್‌ಲೆಸ್’ (The Shameless) ಚಿತ್ರ ರಾಣಿ ಎಂಬ ಭಾರತೀಯ ಲೈಂಗಿಕ ಕಾರ್ಯಕರ್ತೆಯ ಕುರಿತಾದ ಸಿನಿಮಾ. ರಾಣಿ ತೀರ್ಥಯಾತ್ರೆಗೆ ಹೋಗಿರುತ್ತಾಳೆ. ಆ ಬಳಿಕ ಬೆಂಗಳೂರಿನಲ್ಲಿ ಆಕೆ ಕೊಲೆಯಾಗುತ್ತಾಳೆ. ಇದು ಚಿತ್ರದ ತಿರುಳು.

ಇದನ್ನೂ ಓದಿ: Cannes 2024: ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಕನ್ನಡದ ಕಿರು ಚಿತ್ರ ಪ್ರದರ್ಶನ

ಅತ್ಯುತ್ತಮ ನಟಿ
ಅನಸೂಯಾ ಸೇನ್‌ಗುಪ್ತಾ

ಅತ್ಯುತ್ತಮ ನಟ
ಅಬೋ ಸಂಗಾರೆ

ಅತ್ಯುತ್ತಮ ನಿರ್ದೇಶಕ
ರಾಬರ್ಟೊ ಮಿನರ್ವಿನಿ (ROBERTO MINERVINI)

ಕಾನ್‌ ಚಲನಚಿತ್ರೋತ್ಸವದಲ್ಲಿ 18 ಫೀಚರ್‌ ಫಿಲ್ಮ್ಸ್‌ ಒಳಗೊಂಡಿತ್ತು. ಜ್ಯೂರಿಗಳಾಗಿ ಕೆನಡಾದ ನಟ, ನಿರ್ದೇಶಕ, ಚಿತ್ರಕಥೆಗಾರ ಮತ್ತು ನಿರ್ಮಾಪಕ ಕ್ಸೇವಿಯರ್ ಡೋಲನ್ ಇದ್ದರು. ಫ್ರೆಂಚ್-ಸೆನೆಗಲೀಸ್ ಚಿತ್ರಕಥೆಗಾರ ಮತ್ತು ನಿರ್ದೇಶಕ ಮೈಮೌನಾ ಡೌಕೋರೆ, ಮೊರೊಕನ್ ನಿರ್ದೇಶಕ ಅಸ್ಮೇ ಎಲ್ ಮೌದಿರ್, ಜರ್ಮನ್-ಲಕ್ಸೆಂಬರ್ಗ್ ನಟ ವಿಕಿ ಕ್ರಿಪ್ಸ್ ಮತ್ತು ಅಮೇರಿಕನ್ ಚಲನಚಿತ್ರ ವಿಮರ್ಶಕ ಟಾಡ್ ಮೆಕಾರ್ಥಿ ತೀರ್ಪುಗಾರರಾಗಿದ್ದರು.

ಪ್ರತಿ ವರ್ಷದಂತೆ ಈ ಬಾರಿಯೂ ಕಾನ್‌ ಚಲನಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳ ಉಪಸ್ಥಿತಿ ಕಂಡುಬಂದಿತ್ತು. ಈ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಕೂಡ ಭಾಗವಹಿಸಿದ್ದರು. ಅದಿತಿ ರಾವ್ ಹೈದರಿ ಕೂಡ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಮೇ 25ಕ್ಕೆ ಚಿತ್ರೋತ್ಸವ ಮುಕ್ತಾಯವಾಗಿದೆ. ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆದಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡಿವೆ. ಅವುಗಳಲ್ಲಿ ʻಆಲ್ ವಿ ಇಮ್ಯಾಜಿನ್ ಆಸ್ ಲೈಟ್ʼ,ʻಸಂತೋಷ್ʼ ಕನ್ನಡ ಕಿರುಚಿತ್ರ ʻಸನ್‌ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋʼ, ʻಮಂಥನ್ʼ, ʻಸಿಸ್ಟರ್ ಮಿಡ್‌ನೈಟ್ʼ , ʻಇನ್ ರಿಟ್ರೀಟ್ʼ `ದಿ ಶೇಮ್‌ಲೆಸ್’ ಪ್ರದರ್ಶನ ಕಂಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

Actor Darshan: ಈ ಮುಂಚೆ ರೇಣುಕಾಸ್ವಾಮಿ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಭಯಾನಕ ಅಂಶಗಳು ಪತ್ತೆಯಾಗಿತ್ತು. ರೇಣುಕಾಸ್ವಾಮಿ ದೇಹದ ಮೇಲೆ 30ಕ್ಕೂ ಅಧಿಕ ಗಾಯಗಳು ಕಂಡುಬಂದಿದ್ದು, ತಲೆ ಮೇಲೆ ನಾಲ್ಕು ಬಲವಾದ ಗಾಯಗಳು ಪತ್ತೆಯಾಗಿದ್ದವು. ಸಾಯುವ ಮುನ್ನ ನಾಲ್ಕು ಬಾರಿ ಎಲೆಕ್ಟ್ರಿಕ್ ಶಾಕ್ ನೀಡಿರುವುದು ತಿಳಿದುಬಂದಿತ್ತು. ಹೀಗಾಗಿ ತೀವ್ರ ರಕ್ತ ಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿರುವುದು ದೃಢವಾಗಿತ್ತು.

VISTARANEWS.COM


on

Actor Darshan Renukaswamy assault police lathi found How did D Gang get
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಲೇ ಇದ್ದಾರೆ. ಈಗಾಗಲೇ ಆರೋಪಿಗಳ ಬಳಿ (Actor Darshan) ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದರು. , ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿದ್ದವು. ಇದೀಗ ತನಿಖೆ ವೇಳೆ ಮಹತ್ವದ ಸಾಕ್ಷಿವೊಂದು ಪೊಲೀಸರಿಗೆ ಲಭಿಸಿದೆ. ಅದುವೇ ʻಪೊಲೀಸ್ ಲಾಠಿʼ. ಈ ಪೊಲೀಸ್‌ ಲಾಠಿ ಪಟ್ಟಣಗೆರೆ ಶೆಡ್ ಗೆ ಹೇಗೆ ಬಂತು? ಎಂದು ವಿಚಾರಣೆ ನಡೆಸುತ್ತಿದ್ದಾರೆ.

ದರ್ಶನ್ ಗ್ಯಾಂಗ್‌ಗೆ ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ?

ದರ್ಶನ್‌ ಬರ್ತ್‌ಡೇ ದಿನ ಪೊಲೀಸ್ ಸಿಬ್ಬಂದಿ ದಚ್ಚು ಮನೆಯ ಬಳಿ ಲಾಠಿ ಬಿಟ್ಟು ಹೋಗಿದ್ದರು. ಆ ಲಾಠಿ ದರ್ಶನ್ ಮನೆಯ ಸೆಕ್ಯೂರಿಟಿ ಗಾರ್ಡ್ ರೂಂನಲ್ಲಿ ಎತ್ತಿ ಇಡಲಾಗಿತ್ತು. ಮನೆಯಲ್ಲಿದ್ದ ಲಾಠಿಯನ್ನ ಶೆಡ್‌ನಲ್ಲಿದ್ದ ವ್ಯಕ್ತಿಯೊಬ್ಬನನ್ನ ತನ್ನ ಮನೆಗೆ ಕಳುಹಿಸಿ ಲಾಠಿ ತರಿಸಿಕೊಂಡಿದ್ದರು ದರ್ಶನ್‌. ಶೆಡ್‌ ನಿಂದ ದರ್ಶನ್ ಮನೆಗೆ ಹೋಗಿ ಲಾಠಿ ತಂದು ಕೊಡುವ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೇ ಲಾಠಿ ಬಳಕೆ ಮಾಡಿ ರೇಣುಕಾಸ್ವಾಮಿ ಮೇಲೆ ದರ್ಶನ್, ಗ್ಯಾಂಗ್ ಹಲ್ಲೆ ಮಾಡಿದೆ. ಲಾಠಿ ಮುರಿಯುವವರೆಗೂ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ಶೆಡ್‌ನಲ್ಲಿ ಹಲ್ಲೆಗೆ ಬಳಕೆ‌ ಮಾಡಿದ್ದ ಲಾಠಿಯ ಪೀಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಕ್ತದ ಕಲೆ ಇರುವ ಲಾಠಿಯ ಪೀಸ್‌ಗಳು ಪೊಲೀಸರ ವಶ ಆಗಿದೆ. ಅದೇ ಲಾಠಿಯ ಮೇಲೆ ಫಿಂಗರ್ ಪ್ರಿಂಟ್ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಎಫ್ಎಸ್ಎಲ್ ವರದಿ ಬಳಿಕ ಲಾಠಿಯಿಂದ ಯಾರು ಹೊಡೆದವರು ಎಂಬುದು ತಿಳಿಯಲಿದೆ. ಸದ್ಯ ಸಾಕ್ಷಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

ಈ ಮುಂಚೆ ರೇಣುಕಾಸ್ವಾಮಿ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಭಯಾನಕ ಅಂಶಗಳು ಪತ್ತೆಯಾಗಿತ್ತು. ರೇಣುಕಾಸ್ವಾಮಿ ದೇಹದ ಮೇಲೆ 30ಕ್ಕೂ ಅಧಿಕ ಗಾಯಗಳು ಕಂಡುಬಂದಿದ್ದು, ತಲೆ ಮೇಲೆ ನಾಲ್ಕು ಬಲವಾದ ಗಾಯಗಳು ಪತ್ತೆಯಾಗಿದ್ದವು. ಸಾಯುವ ಮುನ್ನ ನಾಲ್ಕು ಬಾರಿ ಎಲೆಕ್ಟ್ರಿಕ್ ಶಾಕ್ ನೀಡಿರುವುದು ತಿಳಿದುಬಂದಿತ್ತು. ಹೀಗಾಗಿ ತೀವ್ರ ರಕ್ತ ಸ್ರಾವದಿಂದ ರೇಣುಕಾಸ್ವಾಮಿ ಸಾವನ್ನಪ್ಪಿರುವುದು ದೃಢವಾಗಿತ್ತು. ಕಬ್ಬಿಣದ ರಾಡ್, ದೊಣ್ಣೆಯಿಂದ ಹಲ್ಲೆ ನಡೆಸಿದ್ದರಿಂದ ರಕ್ತ ಹೆಪ್ಪುಗಟ್ಟಿ, ರಕ್ತಸಾವ್ರದಿಂದ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿತ್ತು.

Continue Reading

ಸ್ಯಾಂಡಲ್ ವುಡ್

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Neha Gowda: ಬಿಗ್‌ ಬಾಸ್‌ ಕನ್ನಡ ಸೀಸನ್‌ 9ರಲ್ಲಿ ಸ್ಪರ್ಧಿಸಿದ್ದರು ನೇಹಾ, ಕನ್ನಡದ ಜತೆಗೆ ತೆಲುಗು, ತಮಿಳು ಭಾಷೆಗಳಲ್ಲೂ ನೇಹಾ ಕೆಲಸ ಮಾಡಿದ್ದಾರೆ. ಪತಿ ಚಂದನ್ ಜತೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ರಾಜ-ರಾಣಿ ರಿಯಾಲಿಟಿ ಶೋನಲ್ಲೂ ಭಾಗವಹಿಸಿ ಗೆದ್ದಿದ್ದರು

VISTARANEWS.COM


on

Neha Gowda in saree with baby bump
Koo

ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್‌ ದಂಪತಿ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

ಇದೀಗ ತೋಟವೊಂದರಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೊಗಳನ್ನು ನೇಹಾ ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇತ್ತ ಚಂದನ್ ಗೌಡ ತಮ್ಮ ಖಾತೆಯಲ್ಲಿ ಪತ್ನಿ ಜೊತೆ ಅದೇ ಸ್ಥಳದಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ನೇಹಾ ನಿರಂತರವಾಗಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ ಸರಳವಾದ ಸೀರೆ ಧರಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ.

2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್​, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Kannada New Movie: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ ಟ್ರೇಲರ್ ಈಚೆಗೆ ಬಿಡುಗಡೆಯಾಯಿತು.

VISTARANEWS.COM


on

Kaagada movie released on 5th July
Koo

ಬೆಂಗಳೂರು: ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ (Kannada New Movie) ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು.

ಬಿಜೆಪಿ ಮುಖಂಡ ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಚಿತ್ರದ ನಿರ್ದೇಶಕ ರಂಜಿತ್ ಮಾತನಾಡಿ, “ಕಾಗದ”, 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್‌ ಬಂದಿರದ, “ಕಾಗದ” ದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ ಕಥೆಯೂ ಹೌದು. ಪರಸ್ಪರ ದ್ವೇಷಿಸುವ ಎರಡು ಹಳ್ಳಿಗಳ ನಡುವೆ ಅರಳಿದ ಪ್ರೇಮಕಥೆ ಕೂಡ. ಇಂತಹ ಹಲವು ವಿಶೇಷಗಳ “ಕಾಗದ” ಚಿತ್ರ , ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ. ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಜುಲೈ 5 ರಂದು ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದ ಅವರು, “ಆಪಲ್ ಕೇಕ್” ಚಿತ್ರದ ನಂತರ ಇದು ನನ್ನ ಎರಡನೇ ನಿರ್ದೇಶನದ ಚಿತ್ರ ಎಂದು ಹೇಳಿದರು.

ಇದನ್ನೂ ಓದಿ: Bengaluru News: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಜೂ.30ಕ್ಕೆ

ನನಗೆ ಮೊದಲಿನಿಂದಲೂ ಹಿಂದು-ಮುಸ್ಲಿಂ ಲವ್ ಸ್ಟೋರಿ ಸಿನಿಮಾ ಮಾಡುವ ಆಸೆಯಿತ್ತು. ಆದರೆ ನನ್ನ ಮನಮುಟ್ಟುವ ಹಾಗೆ ಯಾರು ಕಥೆ ಹೇಳುತ್ತಿರಲಿಲ್ಲ. ನನ್ನನ್ನು ಒಪ್ಪಿಸುವಲ್ಲಿ ರಂಜಿತ್ ಯಶಸ್ವಿಯಾದರು. ನಾವು ಈ ಚಿತ್ರದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ತರುವ ಸನ್ನಿವೇಶಗಳನ್ನು ತೋರಿಸಿಲ್ಲ. ಎಲ್ಲಕ್ಕಿಂತ ಮನುಷ್ಯತ್ವ ಮುಖ್ಯ ಎಂಬ ಸಂದೇಶ ತಿಳಿಸಿದ್ದೇವೆ. ನನ್ನ ಮಗ ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾನೆ. “ರಗಡ್” ಚಿತ್ರದ ನಂತರ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ರಗಡ್ ಚಿತ್ರ

ನಮ್ಮ ಮನೆಯ ಕೆಳಗಡೆ ಆಕ್ಟಿಂಗ್ ಸ್ಕೂಲ್ ಇತ್ತು. ಅಲ್ಲಿ ಕಲಿಯಲು ಬರುತ್ತಿದ್ದವರನ್ನು ನೋಡಿ‌ ನನಗೂ ನಟಿಸುವ ಆಸೆಯಾಯಿತು. ನಟನೆ ಕಲಿತು, ಕಿರುಚಿತ್ರ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನನ್ನ ಆಸೆ ಪೂರೈಸಿದ ಅಪ್ಪನಿಗೆ ಧನ್ಯವಾದ ಎಂದು ನಾಯಕ ಆದಿತ್ಯ ತಿಳಿಸಿದ್ದಾರೆ.

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ನನಗೆ ತಾವೆಲ್ಲರೂ ನೀಡಿರುವ ಪ್ರೋತ್ಸಾಹಕ್ಕೆ ಧನ್ಯವಾದ. ನಾಯಕಿಯಾಗಿ ಇದು ಮೊದಲ ಚಿತ್ರ. “ಕಾಗದ” ಚಿತ್ರದಲ್ಲಿ ಬೋಲ್ಡ್ ಹುಡುಗಿಯ ಪಾತ್ರ ನನ್ನದು ಎನ್ನುತ್ತಾರೆ ನಾಯಕಿ ಅಂಕಿತ ಜಯರಾಂ.

ಚಿತ್ರದಲ್ಲಿ ನಟಿಸಿರುವ ಶಿವಮಂಜು, ಗೌತಮ್ ತಮ್ಮ ಪಾತ್ರದ ಬಗ್ಗೆ ಹೇಳಿದರು. ಸಂಗೀತದ ಬಗ್ಗೆ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ವೀನಸ್ ನಾಗರಾಜ ಮೂರ್ತಿ ಹಾಗೂ ವರ್ಣಾಲಂಕಾರದ ಬಗ್ಗೆ ಮಣಿ ಮಾಹಿತಿ ನೀಡಿದರು‌.

ಈ ಚಿತ್ರದ ವಿಶೇಷ ಪಾತ್ರದಲ್ಲಿ ನೇಹಾ ಪಾಟೀಲ್ ಕಾಣಿಸಿಕೊಂಡಿದ್ದಾರೆ. ಬಲ ರಾಜವಾಡಿ, ನೀನಾಸಂ ಅಶ್ವಥ್, ಮಠ ಕೊಪ್ಪಳ, ಶಿವಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

“ಕಾಗದ” ಟ್ರೇಲರ್ ವೀಕ್ಷಿಸಿದ ಚಂದನವನದ ತಾರೆಯರಾದ ಧ್ರುವ ಸರ್ಜಾ, ರಮೇಶ್ ಅರವಿಂದ್, ಅನು ಪ್ರಭಾಕರ್ ಹಾಗೂ ನಿರ್ದೇಶಕ ಎ.ಪಿ.ಅರ್ಜುನ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಲಭ್ಯವಿದೆ.

Continue Reading

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading
Advertisement
Para Badminton Ranking
ಕ್ರೀಡೆ4 mins ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Actor Darshan Renukaswamy assault police lathi found How did D Gang get
ಕ್ರೈಂ10 mins ago

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

IRCTC
ದೇಶ33 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ36 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest38 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ42 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್44 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest45 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ46 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ50 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌