Explainer: Cannes Film Festival ಮಿಂಚುತ್ತಿರುವ ಭಾರತ, ಏನಿದರ ವಿಶೇಷತೆ? - Vistara News

EXPLAINER

Explainer: Cannes Film Festival ಮಿಂಚುತ್ತಿರುವ ಭಾರತ, ಏನಿದರ ವಿಶೇಷತೆ?

Cannes film festival ಈಗ ಭಾರತೀಯ ತಾರೆಯರ ಆಟದ ನೆಲ. ದೀಪಿಕಾ ಪಡುಕೋಣೆ, ಐಶ್ವರ್ಯಾ ರೈ ಸೇರಿದಂತೆ ಇಲ್ಲಿ ರೆಡ್‌ ಕಾರ್ಪೆಟ್‌ ವಾಕ್‌ ಮಾಡಿದವರು ಹಲವರು. ಏನೀ ಕ್ಯಾನ್‌ ಮ್ಯಾಜಿಕ್?

VISTARANEWS.COM


on

cannes film festival
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಬಾರಿಯ Cannes film festival‌ ಬಾಲಿವುಡ್‌ ಫಿಲಂ ಇಂಡಸ್ಟ್ರಿಗೆ ಅನೇಕ ಕಾರಣಗಳಿಗಾಗಿ ವಿಶೇಷ ಎನಿಸಿಕೊಂಡಿದೆ. ಮೊದಲನೆಯದಾಗಿ, ಮಿಂಚುಕಂಗಳ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಈ ವರ್ಷದ ಚಿತ್ರೋತ್ಸವದ ಜ್ಯೂರಿ ಆಗಿರುವುದು. ಎರಡನೆಯದು, ಕ್ಯಾನ್‌ನ ಮಾರ್ಷ್‌ ದು ಫಿಲಂ ಸಂಘಟನೆ ಭಾರತವನ್ನು ʼಕಂಟ್ರಿ ಆಫ್‌ ಆನರ್‌ʼ ಎಂದು ಕರೆದು ಗೌರವಿಸಿರುವುದು.

ಇದಲ್ಲದೇ ಈ ಸಲ ಭಾರತದಿಂದ ಭಾಗವಹಿಸಿರುವ ತಾರೆಗಳ ದೊಡ್ಡ ಪಟ್ಟಿಯೇ ಇದೆ- ಐಶ್ವರ್ಯಾ ರೈ ಬಚ್ಚನ್‌, ತಮನ್ನಾ ಭಾಟಿಯಾ, ಪೂಜಾ ಹೆಗ್ಡೆ, ಊರ್ವಶಿ ರೌಟೇಲಾ, ಹೀನಾ ಖಾನ್‌, ಹೆಲ್ಲಿ ಶಾ ಮುಂತಾದವರು ರೆಡ್‌ ಕಾರ್ಪೆಟ್‌ನಲ್ಲಿ ನಡೆದಿದ್ದಾರೆ.

ಕ್ಯಾನ್‌ನಲ್ಲಿ ಭಾರತದ ನಿಯೋಗ: ವಾಣಿ ತ್ರಿಪಾಠಿ, ನವಾಜುದ್ದೀನ್‌ ಸಿದ್ದಿಕಿ, ಪ್ರಸೂನ್‌ ಜೋಶಿ, ಶೇಖರ ಕಪೂರ್‌, ಅನುರಾಗ್‌ ಠಾಕೂರ್‌, ರಿಕಿ ಕೇಜ್‌, ರೆಹಮಾನ್‌, ಮಾಧವನ್‌, ಮೇಮ್‌ ಖಾನ್.‌

ಎ.ಆರ್.ರೆಹಮಾನ್‌, ಆರ್.ಮಾಧವನ್‌, ನವಾಜುದ್ದೀನ್‌ ಸಿದ್ದಿಕಿ, ಕಮಲಹಾಸನ್‌ ಮೊದಲಾದವರು ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ.
ಭಾರತದಿಂದ ಹೋದ ನಿಯೋಗದಲ್ಲಿ ಸಂಗೀತ ನಿರ್ದೇಶಕ ಪ್ರಸೂನ್‌ ಜೋಶಿ, ರಿಕಿ ಕೇಜ್‌, ಮಾಹಿತಿ ಪ್ರಸಾರ ಸಚಿವ ಅನುರಾಗ್‌ ಠಾಕೂರ್‌, ನಿರ್ಮಾಪಕ ಶೇಖರ್‌ ಕಪೂರ್‌, ವಾಣಿ ತ್ರಿಪಾಠಿ ಮುಂತಾದವರಿದ್ದಾರೆ. ʼಇಂಡಿಯಾ ಪೆವಿಲಿಯನ್‌ʼ ಉದ್ಘಾಟನೆಯ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ʼʼಒಂದಲ್ಲ ಒಂದು ದಿನ ಕ್ಯಾನ್‌ ಫೆಸ್ಟಿವಲ್‌ ಭಾರತದಲ್ಲಿ ನಡೆಯಲಿದೆ ಎಂಬುದರಲ್ಲಿ ನಂಗೆ ಅನುಮಾನವಿಲ್ಲʼʼ ಎಂದಿರುವುದೂ ಸುದ್ದಿಯಾಗಿದೆ.

ಈ ಬಾರಿ ಕ್ಯಾನ್‌ ಫೆಸ್ಟಿವಲ್‌ನ ಇಂಡಿಯಾ ಪೆವಿಲಿಯನ್‌ನಲ್ಲಿ ಆರು ಭಾರತದ ಫಿಲಂಗಳು ಪ್ರದರ್ಶನಗೊಳ್ಳುತ್ತಿವೆ- ಮಾಧವನ್‌ ಅವರ ʼರಾಕೆಟ್ರಿ ದಿ ನಂಬಿ ಎಫೆಕ್ಟ್‌ʼ (ಇಂದು ಕೇರಳದ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್‌ ಜೀವನ ಆಧರಿಸಿದ ಸಿನಿಮಾ), ನಿಖಿಲ್‌ ಮಹಾಜನ್‌ ಅವರ “ಗೋದಾವರಿʼ, ಜಯರಾಜ್‌ ಅವರ ʼಟ್ರೀ ಫುಲ್‌ ಆಫ್‌ ಪ್ಯಾರೆಟ್ಸ್‌ʼ, ಅಚಲ್‌ ಮಿಶ್ರಾ ಅವರ “ಧುಯಿನ್‌ʼ, ವಿಶ್ವಜಿತ್‌ ಬೋರಾ ಅವರ “ಬೂಂಬಾ ರೈಡ್‌ʼ ಮತ್ತು ಶಂಕರ್‌ ಶ್ರೀಕುಮಾರ್‌ ಅವರ “ಆಲ್ಫಾ ಬೀಟಾ ಗಾಮಾʼ. ಇವು ಜ್ಯೂರಿ ವೀಕ್ಷಣೆಯ ಭಾಗವಾಗಿರುವ ಚಿತ್ರಗಳಲ್ಲ.
ಜ್ಯೂರಿ ವೀಕ್ಷಣೆಗೆ ಇರುವ ಭಾರತೀಯ ಡಾಕ್ಯುಮೆಂಟರಿ ಶೌನಕ್‌ ಸೇನ್‌ ಅವರ ʼಆಲ್‌ ದೇಟ್‌ ಬ್ರೀದಸ್.‌ʼ ಇದಲ್ಲದೆ ಎರಡು ಹಳೆಯ ಚಿತ್ರಗಳಾದ ಸತ್ಯಜಿತ್‌ ರೇ ಅವರ ʼಪ್ರತಿಧ್ವನಿʼ ಹಾಗೂ ಜಿ.ಅರವಿಂದನ್‌ ಅವರ ʼಥಂಪ್.‌ʼ

ಕ್ಯಾನ್‌ನಲ್ಲಿ ಮಿಂಚಿದ ತಮನ್ನಾ ಭಾಟಿಯಾ

ಕ್ಯಾನ್‌ಗೇಕೆ ಅಷ್ಟೊಂದು ಜನಪ್ರಿಯತೆ?‌
ಕ್ಯಾನ್‌ ಫಿಲಂ ಫೆಸ್ಟಿವಲ್‌ ಜಗತ್ತಿನ ಪ್ರತಿಷ್ಠಿತ ಚತ್ರೋತ್ಸವಗಳಲ್ಲಿ ಒಂದು. ಇದು ಫ್ರಾನ್ಸ್‌ಗೆ ಸೇರಿದ ಒಂದು ಪರ್ಯಾಯ ದ್ವೀಪಭಾಗ. 1946ರಲ್ಲಿ ʼಪಲಾಯಿಸ್‌ ಡೆಸ್‌ ಫೆಸ್ಟಿವಲ್ಸ್‌ ಎಟ್‌ ಡೆಸ್‌ ಕಾಂಗ್ರೆಸ್‌ʼ ಹೆಸರಿನಿಂದ ಆರಂಭವಾಯಿತು. ಪ್ರತಿವರ್ಷ 20 ಫಿಲಂಗಳು ಸ್ಪರ್ಧೆಯಲ್ಲಿರುತ್ತವೆ. ಇವುಗಳಲ್ಲಿ ಗೆದ್ದ ಒಂದು ಚಿತ್ರ “ಗೋಲ್ಡನ್‌ ಪಾಮ್‌ʼ ಪುರಸ್ಕಾರ ಪಡೆಯುತ್ತದೆ. ಇದಲ್ಲದೇ ಇತರ ಕ್ಯಾಟಗರಿಗಳಲ್ಲಿ ಏಳು ಪ್ರಶಸ್ತಿಗಳೂ ಇವೆ.

ಈ ಹಿಂದೆ ಪಲ್ಪ್‌ ಫಿಕ್ಷನ್, ಟ್ಯಾಕ್ಸಿ ಡ್ರೈವರ್‌, ಅಪೊಕ್ಯಾಲಿಪ್ಸೆ ನೌ- ಇಂಥ ಹಾಲಿವುಡ್‌ ಕ್ಲಾಸಿಕ್‌ ಫಿಲಂಗಳು ಕೂಡ ಕ್ಯಾನ್‌ನಲ್ಲಿ ಮೊದಲು ಪ್ರದರ್ಶನ ಕಂಡಿವೆ. ರಾಬರ್ಟ್‌ ಇ ನೀರೋ, ಮಾರ್ಟಿ ಸ್ಕಾರ್ಸೆಸ್‌, ಕೇಟ್‌ ಬ್ಲಾಂಚೆಟ್‌ ಅಂಥ ಮಹನೀಯರು ಕೂಡ ಇಲ್ಲಿ ಜ್ಯೂರಿಗಳಾಗಿ ಭಾಗವಹಿಸಿದ್ದು ಉಂಟು.

ಕ್ಯಾನ್‌ನ ಜನಪ್ರಿಯತೆ, ಖ್ಯಾತಿ ಇರುವುದು ಅದು ದೊಡ್ಡ ಸ್ಟಾರ್‌ಗಳನ್ನೂ ಒಳ್ಳೆಯ ಚಿತ್ರಗಳ್ನೂ ಒಂದೆಡೆ ಕೂಡಿಸುತ್ತದೆ ಎಂಬ ಕಾರಣಕ್ಕಾಗಿ. ಇಲ್ಲಿನ ರೆಡ್‌ ಕಾರ್ಪೆಟ್‌ ನಡಿಗೆ ಫೇಮಸ್‌. ಎಲ್ಲ ದೇಶಗಳ ತಾರೆಯಲ್ಲಿ ಇಲ್ಲಿ ಕಾಣಿಸಿಕೊಳ್ಳಲು ಹಾತೊರೆಯುತ್ತಾರೆ. ಉತ್ತಮ ಫಿಲಂಗಳ ಪ್ರದರ್ಶನ, ಮೀಟಿಂಗ್‌ಗಳು, ನೆಟ್‌ವರ್ಕಿಂಗ್‌, ಪಾರ್ಟಿಗಳೆಲ್ಲ ಚಿತ್ರೋತ್ಸವದ ಭಾಗ. ಅನೇಕ ದೊಡ್ಡ ಫಿಲಂಗಳು ಇಲ್ಲಿ ಮೊದಲು ಕಾಣಿಸಿಕೊಂಡಿವೆ. ಕ್ವೆಂಟಿನ್‌ ಟರಂಟಿನೊ, ಸ್ಟೀವನ್‌ ಸೊಡರ್‌ಬರ್ಗ್‌ನಂಥ ಫಿಲಂ ಮೇಕರ್‌ಗಳು ಇಲ್ಲಿಂದಲೇ ತಮ್ಮ ಮೊದಲ ಹೆಜ್ಜೆ ಇಟ್ಟಿದ್ದಾರೆ. ಇಲ್ಲಿ ಕಾಣಿಸಿಕೊಂಡ ಯುವ ಪ್ರತಿಭೆಗಳ ಕೆರಿಯರ್‌ ಉಜ್ವಲವಾಗುವುದಂತೂ ಗ್ಯಾರಂಟಿ ಎನ್ನಬಹುದು. ಹೀಗಾಗಿ ಇದು ಪ್ರತಿಷ್ಠಿತ ಸ್ಥಾನ ಗಳಿಸಿಕೊಂಡಿದೆ.

ಇಲ್ಲಿ ಸಾಮಾನ್ಯ ಪ್ರೇಕ್ಷಕರಿಗೆ ಪ್ರವೇಶವಿಲ್ಲ. ಟೆಕೆಟ್‌ ದೊರೆಯುವುದಿಲ್ಲ. ಇದು ಏನಿದ್ದರೂ ಫಿಲಂ ಇಂಡಸ್ಟ್ರಿಯವರಿಗೆ ಮೀಸಲು. ಕಾಣಿಸಿಕೊಳ್ಳುವವರೂ ಅವರೇ, ನೋಡುವವರೂ ಅವರೇ. ಹೀಗಾಗಿ ಇದೊಂದು ವ್ಯವಹಾರೀ ವರ್ತುಲ ಎಂದೂ ಹೇಳಬಹುದು. ದೊಡ್ಡ ನಿರ್ಮಾಪಕರು, ಇಂಡಸ್ಟ್ರಿಗೆ ಸಂಬಂಧಿಸಿದ ಉದ್ಯಮಿಗಳು ಇಲ್ಲಿ ಠಳಾಯಿಸುತ್ತಿರುತ್ತಾರೆ. ಪಾರ್ಟಿಗಳನ್ನು ಸಂಘಟಿಸುತ್ತಾರೆ. ಉತ್ಸವ ನಡೆಯುವ ಸ್ಥಳದ ಕಡಲ ತೀರದಲ್ಲಿ ಶ್ರೀಮಂತ ಉದ್ಯಮಿಗಳ ಯಾಚ್‌ಗಳು ಲಂಗರು ಹಾಕಿರುತ್ತವೆ.

ಕ್ಯಾನ್‌ನಲ್ಲಿ ಭಾರತ
ಭಾರತದಿಂದ ನಂದಿತಾ ದಾಸ್‌, ಶರ್ಮಿಳಾ ಟಾಗೋರ್‌, ಶೇಖರ ಕಪೂರ್‌, ವಿದ್ಯಾ ಬಾಲನ್‌, ಆರಂಧತಿ ರಾಯ್‌ ಈ ಹಿಂದೆ ಜ್ಯೂರಿಗಳಾಗಿದ್ದರು. ಭಾರತದಿಂದ ಜ್ಯೂರಿ ಆದ ಮೊತ್ತ ಮೊದಲಿಗ (1982) ಎಂದರೆ ಚಿತ್ರ ನಿರ್ದೇಶಕ ಮೃಣಾಲ್‌ ಸೇನ್‌. ಮೊತ್ತ ಮೊದಲ ಭಾರತೀಯ ಮಹಿಳಾ ಜ್ಯೂರಿಯಾಗಿದ್ದವಳು ಐಶ್ವರ್ಯಾ ರೈ- 2003ರಲ್ಲಿ.

1946ರಲ್ಲಿ, ತಾನು ಭಾಗವಹಿಸಿದ ಮೊದಲ ವರ್ಷದಲ್ಲಿಯೇ, ಭಾರತದ ಫಿಲಂ ಕ್ಯಾನ್‌ ಚಿತ್ರೋತ್ಸವದಲ್ಲಿ ಮೊದಲ ಸ್ಥಾನ ಪಡೆಯಿತು. ಚೇತನ ಆನಂದ್‌ ಅವರ “ನೀಚಾ ನಗರ್‌ʼ ಗ್ರ್ಯಾಂಡ್‌ ಪ್ರಿಕ್ಸ್‌ ಅವಾರ್ಡ್‌ ಪಡೆಯಿತು. ಬಿಮಲ್‌ ರಾಯ್‌ ಅವರ ʼದೋ ಬಿಘಾ ಜಮೀನ್‌ʼ 1954ರಲ್ಲಿ, ಸತ್ಯಜಿತ್‌ ರೇ ಅವರ ʼಪಥೇರ್‌ ಪಾಂಚಾಲಿʼ 1956ರಲ್ಲಿ ಪ್ರಶಸ್ತಿ ಗಳಿಸಿಕೊಂಡವು.

ಬಾಲಿವುಡ್‌ ಫಿಲಂ ಕ್ಯಾನ್‌ನಲ್ಲಿ ಕಾಣಿಸಿಕೊಂಡದ್ದೇ 2002ರಲ್ಲಿ- ಸಂಜಯ್‌ ಲೀಲಾ ಬನ್ಸಾಲಿ ಅವರ ʼದೇವದಾಸ್‌ʼ. 2013ರಲ್ಲಿ ಅಮಿತಾಭ್‌ ಬಚ್ಚನ್‌ ಅವರಿಗೆ ಕ್ಯಾನ್‌ ಚಿತ್ರೋತ್ಸವ ಉದ್ಘಾಟನೆಗೆ ಸಿಕ್ಕ ಗೌರವ, ಇದುವರೆಗಿನ ಮಹೋನ್ನತ ಮನ್ನಣೆ. ಅದೇ ವರ್ಷ ಅವರು ʼದಿ ಗ್ರೇಟ್‌ ಗ್ಯಾಟ್ಸ್‌ಬಿʼ ಇಂಗ್ಲಿಷ್‌ ಫಿಲಂನಲ್ಲಿ ಕ್ಯಾಮಿಯೊ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು. ಕ್ಯಾನ್‌ನಲ್ಲಿ ಪ್ರಶಸ್ತಿ ಗಳಿಸಿದ ಕೊಟ್ಟಕೊನೆಯ ಭಾರತೀಯ ಚಿತ್ರ ಎಂದರೆ ನೀರಜ್‌ ಗೇವಾನ್‌ ಅವರ ʼಮಸಾನ್ʼ. 2015ರಲ್ಲಿ ಇದು ಪ್ರಾಮಿಸಿಂಗ್‌ ಫ್ಯೂಚರ್‌ ಗೌರವ ಗಳಿಸಿತ್ತು.

ಇದನ್ನೂ ಓದಿ: ಆರ್‌ಆರ್‌ಆರ್‌ ನಂತರ ಈಗ NTR 30: ಬ್ಲ್ಯಾಕ್‌ ಷೇಡ್‌ನಲ್ಲಿ ಮತ್ತೊಂದು ಸಿನಿಮಾ?

ಬೂ ಮತ್ತು‌ ಹೈ ಹೀಲ್
ಕ್ಯಾನ್‌ನಲ್ಲಿ ಕೆಲವು ವಿಚಿತ್ರ ರೂಢಿಗಳಿವೆ. ಉದಾಹರಣೆಗೆ ʼಬೂʼ ಎಂದು ಕಿರಿಚುವುದು. ತುಂಬಾ ಬೋರ್‌ ಹೊಡೆಸುವ, ತೀರಾ ಕಳಪೆಯಾಗಿರುವ ಸಿನಿಮಾಗಳಿಗೆ ಬೂ ʼಸಮ್ಮಾನʼ ಸಲ್ಲುತ್ತದೆ. ಕೆಲವೊಮ್ಮೆ ಎಕ್ಸ್ಟ್ರಾರ್ಡಿನರಿ ಎನ್ನಿಸುವ ಫಿಲಂಗಳೂ ಈ ಗೌರವ ಪಡೆಯುವುದುಂಟು. ಕ್ವೆಂಟಿನ್‌ ಟರಂಟಿನೋನ ಫಿಲಂಗಳೇ ಹೀಗೆ ಬೂ ಪಡೆದಿವೆ.

ಇನ್ನೊಂದು ರೂಢಿ ಎಂದರೆ ರೆಡ್‌ ಕಾರ್ಪೆಟ್‌ನಲ್ಲಿ ನಡೆಯುವ ತಾರೆಯರಲ್ಲಿ ಮಹಿಳೆಯರು ಹೈಹೀಲ್ಡ್‌ ಪಾದರಕ್ಷೆ ಧರಿಸಿರಬೇಕು. ಪುರುಷರು ಕಪ್ಪು ಟೈ ಧರಿಸಬೇಕು. ಹೆಚ್ಚಾಗಿ ರೆಡ್‌ ಕಾರ್ಪೆಟ್‌ನಲ್ಲಿ ನಡೆಯುವ ತಾರಾಮಣಿಯರು ತಮ್ಮ ವಿಶಿಷ್ಟ, ವಿಚಿತ್ರ ಡ್ರೆಸ್‌ಗಳಿಂದ ಲೋಕದ ಗಮನ ಸೆಳೆಯುವುದು ರೂಢಿ. ಈ ಡ್ರೆಸ್‌ ಕೋಡ್‌ನ್ನು ಆಕ್ಷೇಪಿಸಿ, ಬರಿಗಾಲಿನಲ್ಲಿ ನಡೆದ ತಾರೆಯರೂ ಇದ್ದಾರೆ. ಇಂಥ ಪ್ರತಿಭಟನೆಗಳೂ ಉತ್ಸವದ ಭಾಗವೇ ಆಗಿವೆ.

ಇದನ್ನೂ ಓದಿ: Mother’s Day : ಅಮ್ಮನ ಅಕ್ಕರೆ ತೋರುವ ಎಂಟು ಸಿನಿಮಾಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

EXPLAINER

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

ದೇಶದಲ್ಲಿ ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡಬೇಕು ಎಂಬ ಅರ್ಜಿಯನ್ನೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಆದರೆ, ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಗೊಂದಲ, ಅನುಮಾನ ಇದ್ದರೆ, ಆತನು ಮತಯಂತ್ರಗಳನ್ನು ಪರಿಶೀಲನೆ ಮಾಡಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಇದು ಮಹತ್ವದ ಆದೇಶ ಎನಿಸಿದೆ.

VISTARANEWS.COM


on

VVPAT Verification
Koo

ನವದೆಹಲಿ: ಚುನಾವಣೆ ಮತಯಂತ್ರಗಳ (EVM) ಬದಲು ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಯಾಗಬೇಕು, ಇವಿಎಂ ಹ್ಯಾಕ್‌ ಮಾಡಲಾಗುತ್ತಿದೆ, ಇವಿಎಂ-ವಿವಿಪ್ಯಾಟ್‌ ತಾಳೆಯಾಗಬೇಕು ಎಂದು ವಾದಿಸುತ್ತಿದ್ದವರಿಗೆ ಸುಪ್ರೀಂ ಕೋರ್ಟ್‌ ತೀರ್ಪು ಕಹಿಯಾಗಿದೆ. ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಗೆ ಬರಬೇಕು, ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ತಾಳೆ (EVM VVPAT Verification) ಹಾಕಬೇಕು ಎಂಬುದಾಗಿ ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ (ಏಪ್ರಿಲ್‌ 26) ತಿರಸ್ಕರಿಸಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವೊಂದನ್ನು ನೀಡಿದೆ. ಚುನಾವಣೆ ಫಲಿತಾಂಶದ ಬಳಿಕ ಗೊಂದಲ ಇದ್ದರೆ ಆ ಅಭ್ಯರ್ಥಿಗಳು ಮತಯಂತ್ರ ಪರಿಶೀಲನೆಯ ಸೌಲಭ್ಯ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ಹೊಸ ತಂತ್ರಜ್ಞಾನ?

“ದೇಶದಲ್ಲಿ ಚುನಾವಣೆ ವೇಳೆ ಪ್ರತಿಯೊಂದು ಮತಯಂತ್ರಗಳಿಗೂ ಮೈಕ್ರೋ ಕಂಟ್ರೋಲರ್‌ ಪ್ರೋಗ್ರಾಮ್‌ಗಳನ್ನು ಅಳವಡಿಸಬೇಕು. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌ ಸೌಲಭ್ಯ ನೀಡಬೇಕು. ಅಂದರೆ, ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಗೊಂದಲ ಇದ್ದರೆ, ಆ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಮತಯಂತ್ರಗಳನ್ನು ಎಂಜಿಯನಿಯರ್‌ಗಳ ತಂಡವು ಪರಿಶೀಲನೆ ಮಾಡಬೇಕು. ಚುನಾವಣೆ ಫಲಿತಾಂಶ ಪ್ರಕಟವಾದ ಏಳು ದಿನಗಳ ಒಳಗೆ ಈ ಕುರಿತು ಅಭ್ಯರ್ಥಿಯು ಮನವಿ ಮಾಡಿದರೆ ಮಾತ್ರ ಮತಯಂತ್ರಗಳ ಪರಿಶೀಲನೆ ಮಾಡಬಹುದು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಇದು ಮತಯಂತ್ರಗಳ ದಕ್ಷತೆ ಪ್ರಶ್ನಿಸುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಯಾವುದೇ ಗೊಂದಲ, ಅನುಮಾನ ಇದ್ದರೆ ಅಭ್ಯರ್ಥಿಯು ಇನ್ನುಮುಂದೆ ತಜ್ಞರ ನೆರವು ಪಡೆಯಬಹುದಾಗಿದೆ. ಇದಲ್ಲದೆ, ಸಿಂಬಲ್‌ ಲೋಡಿಂಗ್‌ ಪ್ರಕ್ರಿಯೆ ಮುಗಿದ ಬಳಿಕ ಸಿಂಬಲ್‌ ಲೋಡಿಂಗ್‌ ಯುನಿಟ್‌ಗಳನ್ನು (SLU) ಸೀಲ್‌ ಮಾಡಿ, 45 ದಿನ ಸಂಗ್ರಹಿಸಬೇಕು ಎಂಬುದು ಸುಪ್ರೀಂ ಕೋರ್ಟ್‌ನ ಮತ್ತೊಂದು ಆದೇಶವಾಗಿದೆ. ಇದರಿಂದ ಇವಿಎಂ ಡೇಟಾ ಚುನಾವಣೆ ಮುಗಿದ 45 ದಿನಗಳವರೆಗೆ ಸಂಗ್ರಹಿಸಿಡಲು ಸಾಧ್ಯವಾಗಲಿದೆ.

ಬ್ಯಾಲಟ್‌ ಪೇಪರ್‌ ಬೇಕಾಗಿಲ್ಲ

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯೂ ಬೇಕಾಗಿಲ್ಲ ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಏನಿದು ಪ್ರಕರಣ?

ಚುನಾವಣಾ ಮತಯಂತ್ರಗಳಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಯಂತ್ರಗಳ ಜತೆ ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡುವಂತೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸಂಸ್ಥೆ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಈಗ ಪ್ರತಿ ಕ್ಷೇತ್ರದಲ್ಲಿ ಐದು ಮತಯಂತ್ರಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲಾಗುತ್ತದೆ. ಶೇ.100ರಷ್ಟು ಇವಿಎಂಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಆದೇಶ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ತಾಳೆ ಹೇಗೆ ಮಾಡಲಾಗುತ್ತದೆ?

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣೆ ಆಯೋಗದ ವಾದ ಏನು?

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading
Advertisement
Congress leader B K Hariprasad latest statement In Gangavathi
ಕೊಪ್ಪಳ55 seconds ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ4 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ18 mins ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Namma Metro
ಬೆಂಗಳೂರು21 mins ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

ipl 2024
ಕ್ರೀಡೆ22 mins ago

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

Viral News
ವೈರಲ್ ನ್ಯೂಸ್39 mins ago

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

WhatsApp color
ತಂತ್ರಜ್ಞಾನ47 mins ago

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

Traffic Restrictions
ಬೆಂಗಳೂರು1 hour ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

karnataka weather Forecast
ಮಳೆ1 hour ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ2 hours ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌