Vijay Raghavendra: ಜ.26ಕ್ಕೆ ʻಕೇಸ್ ಆಫ್ ಕೊಂಡಾಣʼ ಬಿಡುಗಡೆ; ಖಾಕಿ ಖದರ್‌ನಲ್ಲಿ ಚಿನ್ನಾರಿ ಮುತ್ತ - Vistara News

South Cinema

Vijay Raghavendra: ಜ.26ಕ್ಕೆ ʻಕೇಸ್ ಆಫ್ ಕೊಂಡಾಣʼ ಬಿಡುಗಡೆ; ಖಾಕಿ ಖದರ್‌ನಲ್ಲಿ ಚಿನ್ನಾರಿ ಮುತ್ತ

Vijay Raghavendra: ಈ ಹಿಂದೆ ‘ಸೀತಾರಾಮ್‌ ಬಿನೋಯ್‌’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್‌ ಲಿಂಕ್‌ ಕಥೆ ಇರುವ ಇನ್ವೆಸ್ಟಿಗೇಷನ್‌ ಜಾನರ್‌ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್‌ನಲ್ಲಿ ಜ.17ರಂದು ಕೇಸ್ ಆಫ್ ಕೊಂಡಾಣ ಸುದ್ದಿ ಗೋಷ್ಟಿ ಆಯೋಜಿಸಲಾಗಿತ್ತು.

VISTARANEWS.COM


on

case of kondana movie Release date
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯ ರಾಘವೇಂದ್ರ , ಭಾವನಾ ಮೆನನ್‌ ನಟನೆಯ ʻಕೇಸ್‌ ಆಫ್ ಕೊಂಡಾಣ’ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ದೇವಿಪ್ರಸಾದ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ‘ಸೀತಾರಾಮ್‌ ಬಿನೋಯ್‌’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್‌ ಲಿಂಕ್‌ ಕಥೆ ಇರುವ ಇನ್ವೆಸ್ಟಿಗೇಷನ್‌ ಜಾನರ್‌ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್‌ನಲ್ಲಿ ಜ.17ರಂದು ಕೇಸ್ ಆಫ್ ಕೊಂಡಾಣ ಸುದ್ದಿ ಗೋಷ್ಟಿ ಆಯೋಜಿಸಲಾಗಿತ್ತು.

ಈ ವೇಳೆ ಮಾತನಾಡಿದ ಬರಹಗಾರರು ಹಾಗೂ ಸಂಭಾಷಣೆಗಾರರು ಆಗಿರುಗ ಜೋಗಿ, ಹೊಸ ಹುಡುಗರ ಜತೆ ನಮಗೆ ಕಲಿಯುವುದು ಇರುತ್ತದೆ. ಹೇಳಿದ ಕಥೆ ಬಹಳ ಚೆನ್ನಾಗಿತ್ತು. ಈ ಕಥೆ ನಡೆಯವುದು ಸಂಜೆ ಶುರುವಾಗಿ ರಾತ್ರಿ ನಡೆಯುತ್ತದೆ. ಬೆಳಗ್ಗೆ ಮುಗಿಯುತ್ತದೆ. ಕೊಂಡಾಣ ಇರುವುದು ದೇವಿಪ್ರಸಾದ್ ಮನಸ್ಸಿನಲ್ಲಿ. ಪ್ರತಿ ಪಾತ್ರ ದ್ರೋಹ ಮತ್ತು ದ್ರೋಹ ಕಂಡುಹಿಡಿಯುವ ಪಾತ್ರ. ಡೈಲಾಗ್ ರೈಟರ್ ಆಗಿ ನನ್ನ ಬಹಳಷ್ಟು ತಿದ್ದಿದ್ದಾರೆ. ಸಿನಿಮಾ ಪ್ರೀತಿಯಿಂದ ಬಂದ ಹುಡುಗರು ಅದ್ಭುತ ಸೆಟ್ ನಲ್ಲಿ ಶೂಟ್ ಮಾಡಿದ್ದಾರೆ. ಈ ರೀತಿ ನಿರ್ದೇಶಕರು ಹಾಗೂ ನಿರ್ಮಾಪಕರು ಬೇಕು ಎಂದರು.

ನಿರ್ಮಾಪಕ ಸಾತ್ವಿಕ್ ಹೆಬ್ಬಾರ್ ಮಾತನಾಡಿ ʻʻಸೀತಾರಾಮ್ ಬಿನೋಯ್ ಮಾಡಿದ್ದು ಅನಿವಾರ್ಯದಿಂದ. ಡೈರೆಕ್ಟನ್ ವಿಭಾಗದಲ್ಲಿ ನಾನು ದೇವಿ ಪ್ರಸಾದ್ ಕೆಲಸ ಮಾಡುತ್ತಿದ್ದೇವು. ಸ್ವಾತಂತ್ರ್ಯವಾಗಿ ಸಿನಿಮಾ ಮಾಡಲು ಹೊರಟಾಗ ಆಗಿದ್ದು ಸೀತಾರಾಮ್ ಬಿನೋಯ್. ಈ ಚಿತ್ರಕ್ಕೆ ಜನ ಮೆಚ್ಚುಗೆ ಸಿಕ್ಕಿತ್ತು. ಇನ್ನೊಂದು ಹೆಜ್ಜೆ ಇಟ್ಟಾಗ ಆಗಿದ್ದು ಕೇಸ್ ಆಫ್ ಕೊಂಡಾಣʼʼ ಎಂದರು.

ಇದನ್ನೂ ಓದಿ: Vijay Raghavendra: ವಿಜಯ್‌ ರಾಘವೇಂದ್ರ ಈಗ ಖಡಕ್‌ ಪೊಲೀಸ್‌; ʼಕೇಸ್ ಆಫ್ ಕೊಂಡಾಣʼ ಚಿತ್ರದ ಟ್ರೈಲರ್‌ ಔಟ್‌

ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಮಾತನಾಡಿ, ʻʻಜೋಗಿ ಸರ್ ಜತೆ ಕೆಲಸ ಮಾಡಿದ್ದು ಖುಷಿಕೊಟ್ಟಿದೆ. ಹೆಮ್ಮೆ ಇದೆ. ವಿಜಯ್ ಸರ್ ಸೆಕೆಂಡ್ ಅವಕಾಶ ಕೊಟ್ಟರು. ಕಥೆ ಕೇಳಿ ಒಕೆ ಎಂದರು. ಸೀತಾರಾಮ್ ಬಿನೋಯ್ ತರ ಚಿತ್ರ ಅಲ್ಲಾ. ಇದು ಮೂರು ನಾಲ್ಕು ಸ್ಟೋರಿ ಮೇಲೆ ಕಥೆ ಸಾಗುತ್ತದೆ. ಇದು ಐಮ್ಯಾಜಿನರಿ ಕಥೆ. ಹೈಪರ್ ಲಿಂಕ್ ಸಿನಿಮಾʼʼ ಎಂದರು.

ವಿಜಯ್ ರಾಘವೇಂದ್ರ ಮಾತನಾಡಿ, ʻʻಹೊಸಬರ ತಂಡ ತಾಳ್ಮೆಯಿಂದ ಕಾದು ಸಂಭಾಷಣೆ ಕೊಟ್ಟಿದ್ದಾರೆ. ಜೋಗಿ ಸರ್ ಅವರಿಗೆ ಧನ್ಯವಾದ. ಸೀತಾರಾಮ್ ಬಿನೋಯ್ ಆದ ಮೇಲೆ ಇನ್ನೊಂದು ಹಂತ ಬೆಳೆಯಬೇಕು. ಬೆಳವಣಿಗೆ ಕಾಣಬೇಕು. ಕಥೆ ರೂಪದಲ್ಲಿ ಅಥವಾ ಅದನ್ನು ಪ್ರೆಸೆಂಟ್ ಮಾಡುವ ರೀತಿ ಬೆಳವಣಿಗೆಯನ್ನು ಕಥೆ ರೂಪದಲ್ಲಿ ತಂದಿದ್ದರು. ಕೇಸ್ ಕೊಂಡಾಣ ಶೇಖಡಾ 80 ರಿಂದ 90 ರಾತ್ರಿ ಶೂಟ್‌ ಕೆಲಸದ ಬಗ್ಗೆ ಸಮಾಧಾನವಿದೆ. ಒಬ್ಬ ನಟನಾಗಿ ನಾನು ಬಹಳಷ್ಟು ಕಲಿತ್ತಿದ್ದೇನೆ. ತುಂಬಾ ಖುಷಿ ಖುಷಿಯಿಂದ ಕೆಲಸ ಮಾಡಿದ್ದೇವೆ. ನಮ್ಮ ಸಿನಿಮಾದ ಕಂಟೆಂಟ್ ಹಾಗೂ ಡೇಟ್ ಮೇಲೆ ನಂಬಿಕೆ ಇದೆʼʼ ಎಂದರು.

ಬೆಂಗಳೂರಿನ ಕೊಂಡಾಣ ಎಂಬ ಕಾಲ್ಪನಿಕ ಸ್ಥಳದಲ್ಲಿ ಸಿನಿಮಾ ಚಿತ್ರೀಕರಿಸಲಾಗಿದ್ದು, ಒಂದು ರಾತ್ರಿಯಲ್ಲಿ ನಡೆಯುವ ಘಟನೆಯ ಸುತ್ತ ಕಥೆಯನ್ನು ಎಣೆಯಲಾಗಿದೆ. ಹೈಪರ್‌ಲಿಂಕ್ ನಿರೂಪಣೆಯನ್ನು ಹೊಂದಿರುವ ಕೇಸ್ ಆಫ್ ಕೊಂಡಾಣದಲ್ಲಿ ಖುಷಿ ರವಿ ಮತ್ತು ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಿಂದೆಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಎಮೋಷನ್, ಕ್ರೈಂ, ಆಕ್ಷನ್, ಇರುವುದರ ಜೊತೆಗೆ ಪ್ರೇಕ್ಷಕರನ್ನು ಹಿಡಿದು ಕೂರಿಸುವ ಚಿತ್ರಕಥೆ ಇದೆ.

ಇದನ್ನೂ ಓದಿ: Sruthi Hariharan: ಬಿಡುಗಡೆಗೆ ಸಜ್ಜಾಗಿ ನಿಂತಿದೆ ಶ್ರುತಿ ಹರಿಹರನ್ ಸಿನಿಮಾ ʼಸಾರಾಂಶ’!

ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ, ವಿಶ್ವ ಜಿತ್ ರಾವ್ ಛಾಯಾಗ್ರಹಣ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನ ಹಾಗೂ ಶಶಾಂಕ್ ನಾರಾಯಣ್ ಸಂಕಲನವಿದೆ. ಪ್ರಮೋದ್ ಮರವಂತೆ, ವಿಶ್ವ ಜಿತ್ ರಾವ್ ಸಾಹಿತ್ಯವಿರುವ ಈ ಚಿತ್ರಕ್ಕೆ ಜೋಗಿಯವರು ಸಂಭಾಷಣೆ ಬರೆದಿದ್ದಾರೆ. ನಿರ್ದೇಶನದ ಜತೆಗೆ ದೇವಿಪ್ರಸಾದ್ ಶೆಟ್ಟಿ ಯವರು ಸಾತ್ವಿಕ್ ಹೆಬ್ಬಾರ್ ಜತೆ ನಿರ್ಮಾಣಕ್ಕೂ ಕೈ ಜೋಡಿಸಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಕೇಸ್ ಆಫ್ ಕೊಂಡಾಣ ಗಣರಾಜ್ಯ ದಿನದಂದು ಪ್ರೇಕ್ಷಕರ ಎದುರು ಬರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

Kalki 2898 AD: ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ.

VISTARANEWS.COM


on

Kalki 2898 AD Box Office Collection Day Deepika Padukone's Film
Koo

ಬೆಂಗಳೂರು: :  ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 625 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಆರನೇ ದಿನದ ಗಳಿಕೆಯ ಲೆಕ್ಕಾಚಾರ ಸಿಕ್ಕಿದೆ.

ವರದಿ ಪ್ರಕಾರ ‘ಕಲ್ಕಿ 2898 ಎಡಿ’ ಚಿತ್ರ ಆರನೇ ದಿನಕ್ಕೆ 27.85 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತೆಲುಗು ಭಾಷೆಯಿಂದ 11.2 ಕೋಟಿ ಕಲೆಕ್ಷನ್ ಆಗಿದೆ. ತಮಿಳು, ಮಲಯಾಳಂನಿಂದ ತಲಾ 1.2 ಕೋಟಿ ರೂಪಾಯಿ, ಹಿಂದಿಯಿಂದ 14 ಕೋಟಿ ರೂಪಾಯಿ ಸಿಕ್ಕಿದೆ. ಕನ್ನಡ ವರ್ಷನ್​ನಿಂದ ಸಿಕ್ಕಿರುವುದು ಕೇವಲ 25 ಲಕ್ಷ ರೂಪಾಯಿ ಮಾತ್ರ.

5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿತ್ತು. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿತ್ತು.

ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

ಸೋಮವಾರ ಭಾರತವೊಂದರಲ್ಲೇ ʼಕಲ್ಕಿʼ ಸುಮಾರು 34.6 ಕೋಟಿ ರೂ. ಗಳಿಸಿದೆ ಎಂದು ವರದಿಯೊಂದು ತಿಳಿಸಿತ್ತು. ʼʼಸೋಮವಾರ ಭಾರತದಲ್ಲಿ ಎಲ್ಲ ಭಾಷೆಗಳಲ್ಲಿ ಸೇರಿ ಸೇರಿ ಸುಮಾರು 34.6 ಕೋಟಿ ರೂ. ಬಾಚಿಕೊಂಡಿದೆ. ಇನ್ನು ಜಗತ್ತಿನ ವಿವಿಧ ಕಡೆಗಳ ಕಲೆಕ್ಷನ್‌ 45-50 ಕೋಟಿ ರೂ. ಹೀಗೆ ಒಂದೇ ದಿನ ಸುಮಾರು 84 ಕೋಟಿ ರೂ. ಬಾಚಿಕೊಂಡಿದ್ದು, ಒಟ್ಟು ಕಲೆಕ್ಷನ್‌ 635 ಕೋಟಿ ರೂ,ಗೆ ತಲುಪಿದೆʼʼ ಎಂದು ವರದಿ ತಿಳಿಸಿದೆ. ಅಧಿಕೃತ ಹೇಳಿಕೆ ಇನ್ನಷ್ಟೇ ಹೊರ ಬರಬೇಕಿದೆ. ಚಿತ್ರವನ್ನು ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಿಸಲಾಗಿದ್ದು, ಈಗಾಗಲೇ ಹಾಕಿದ ದುಡ್ಡು ವಾಪಸ್‌ ಬಂದಂತಾಗಿದೆ.

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

Continue Reading

Latest

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

Tamanna Bhatia: ನಟಿ ತಮನ್ನಾ ಭಾಟಿಯಾ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ. ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಈ ಸರಣಿಯಲ್ಲಿನ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟಕ್ಕೆ ವೀಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

VISTARANEWS.COM


on

Tamanna Bhatia
Koo


ಮುಂಬೈ: ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ದಕ್ಷಿಣ ಭಾರತ ಚಿತ್ರರಂಗದಲ್ಲೂ ಖ್ಯಾತಿ ಪಡೆದಿರುವ ನಟಿ ತಮನ್ನಾ ಭಾಟಿಯಾ (Tamanna Bhatia )ಅವರು ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ತೆರೆಯ ಮೇಲೆ ಕಿಸ್ ಮಾಡುವುದಿಲ್ಲ ಎಂದಿದ್ದ ನಟಿ ‘ಲಸ್ಟ್ ಸ್ಟೋರೀಸ್ 2’ ವೆಬ್ ಸರಣಿಯಲ್ಲಿ ಬಿಂದಾಸ್‌ ಕಿಸ್ ಮಾಡಿ ನಿಯಮವನ್ನು ಮುರಿದು ಜನರ ಟೀಕೆಗೆ ಗುರಿಯಾಗಿದ್ದರು. ಇದೀಗ ನಟಿ ‘ಜೀ ಕರ್ದಾ’ ವೆಬ್ ಸರಣಿಯಲ್ಲಿ ಹಿಂದೆಂದೂ ಕಾಣದಷ್ಟು ಬೋಲ್ಡ್ ದೃಶ್ಯಗಳೊಂದಿಗೆ ಟಾಪ್ಲೆಸ್ ಆಗಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

Tamanna Bhatia

ಈ ಸರಣಿಯು ಜೂನ್ 15, 2023ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ತಮನ್ನಾ ಭಾಟಿಯಾ, ಸುಹೇಲ್ ನಯ್ಯರ್, ಅನ್ಯಾ ಸಿಂಗ್ ಮತ್ತು ಆಶಿಮ್ ಗುಲಾಟಿ ನಟಿಸಿರುವ ಈ ಸರಣಿ ಹಲವಾರು ಕಾರಣಗಳಿಗಾಗಿ ಎಲ್ಲರ ಗಮನ ಸೆಳೆದಿದೆ. ಆದರೆ ನಂತರ, ಸರಣಿಯಲ್ಲಿ ತಮನ್ನಾ ಅವರ ಬೋಲ್ಡ್ ಮತ್ತು ಸೆಕ್ಸಿ ನೋಟವನ್ನು ಅನೇಕರು ಹೊಗಳಿದರೂ ಕೂಡ , ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಜನ್ ನಟಿಯ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ವೆಬ್ ಸರಣಿಯಲ್ಲಿ ನಟಿಯ ಬೋಲ್ಡ್ ಪೋಟೋಗಳನ್ನು ಹಂಚಿಕೊಂಡು ಅವರನ್ನು ದೂಷಿಸಿದ್ದಾರೆ. ನಿಮ್ಮಿಂದ ಇದನ್ನು ನಿರೀಕ್ಷೆ ಮಾಡಲಿಲ್ಲವೆಂದು ನಟಿಯ ವಿರುದ್ಧ ಕಿಡಿಕಾರಿದ್ದಾರೆ.


ಜೀ ಕರ್ದಾದಲ್ಲಿ ಇಬ್ಬರು ಬಾಲ್ಯದ ಸ್ನೇಹಿತರಾದ ಲಾವಣ್ಯ (ತಮನ್ನಾ ಭಾಟಿಯಾ) ಮತ್ತು ರಿಷಬ್ (ಸುಹೇಲ್ ನಯ್ಯರ್) ಅವರ ಕಥೆಗಳನ್ನು ತೋರಿಸುತ್ತದೆ. ಆದರೆ ಕೆಲವೊಂದು ವಿಚಾರಗಳು ತಮ್ಮ ಸಂಬಂಧವನ್ನು ಹಾಳುಮಾಡಲು ಪ್ರಾರಂಭಿಸಿದಾಗ ಅವರು ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಭಾವಿಸುತ್ತಾರೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

ಈ ಸರಣಿಯಲ್ಲಿ ಹುಸೇನ್ ದಲಾಲ್, ಸಯಾನ್ ಬ್ಯಾನರ್ಜಿ ಮತ್ತು ಸಂವೇದನಾ ಸುವಾಲ್ಕಾ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ತಮನ್ನಾ ಭಾಟಿಯಾ ಕೊನೆಯ ಬಾರಿಗೆ ಭಯಾನಕ-ಹಾಸ್ಯ ಚಿತ್ರ ‘ಅರಮನೆ 4’ ನಲ್ಲಿ ರಾಶಿ ಖನ್ನಾ ಅವರೊಂದಿಗೆ ಕಾಣಿಸಿಕೊಂಡರು. ಈ ಚಿತ್ರವು 2024 ರ ಕಾಲಿವುಡ್‌ನ ಮೊದಲ ಹಿಟ್ ಚಿತ್ರ ಆಯಿತು. ಈಗ ಅವರು ವೆಬ್ ಸರಣಿಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ.

Continue Reading

Latest

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Actor Kamal Haasan: ರಜನಿಕಾಂತ್ ಹಾಗೂ ಕಮಲ್ ಹಾಸನ್ ಇಬ್ಬರೂ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟಾಗಲಿನಿಂದ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು.ಸಾಕಷ್ಟು ಸಿನಿಮಾಗಳಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದಾರೆ. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Actor Kamal Haasan
Koo

ಚೆನ್ನೈ : ರಜನಿಕಾಂತ್ ಹಾಗೂ ನಟ ಕಮಲ್ ಹಾಸನ್ (Actor Kamal Haasan) ಅವರು ತಮಿಳು ಚಿತ್ರರಂಗದ ಖ್ಯಾತ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು. ಇಳಮೈ ಊಂಜಲ್ ಆಡುಕಿರಾತು, ತಿಲ್ಲು ಮುಲ್ಲು, ಅಪೂರ್ವ ರಾಗಂಗಲ್, ಅವಲ್ ಅಪ್ಪಾದಿಥನ್, 16 ವಯತಿನಿಲೆ, ಐ ಮತ್ತು ನೈನೈತಾಲೆ ಇನಿಕ್ಕುಮ್ ಸೇರಿದಂತೆ ಸುಮಾರು 16 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದರು.

Actor Kamala Hasan

ಈ ಇಬ್ಬರು ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಸೂಪರ್ ಸ್ಟಾರ್ ನಟರೆನಿಸಿಕೊಂಡಿದ್ದಾರೆ. ಹಿಂದಿ ಚಿತ್ರ ಗಿರಫ್ತಾರ್ (1985)ನಲ್ಲಿ ಇಬ್ಬರೂ ಜೊತೆಯಾಗಿ ನಟಿಸಿದ ಕೊನೆಯ ಚಿತ್ರವಾಗಿತ್ತು. ಇದರಲ್ಲಿ ಇಬ್ಬರೂ ಅಮಿತಾಭ್ ಬಚ್ಚನ್ ಜೊತೆ ಕಾಣಿಸಿಕೊಂಡರು. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

Actor Kamala Hasan

ನಟ ಕಮಲ್ ಹಾಸನ್ ಅವರ ನಟನೆಯ ‘ಇಂಡಿಯನ್ 2’ ಸಿನಿಮಾದ ಪ್ರಚಾರ ಕೆಲಸ ಪ್ರಾರಂಭವಾಗಿದೆ. ಇತ್ತೀಚೆಗೆ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಆಗಿ ಬಹಳ ಸದ್ದು ಮಾಡಿತ್ತು. ಈ ಸಿನಿಮಾ ಬಗ್ಗೆ ಇತ್ತೀಚೆಗೆ, ಕಮಲ್ ಹಾಸನ್ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಈ ವೇಳೆ ಅವರು ತಮ್ಮ ಹಾಗೂ ರಜನಿಕಾಂತ್ ಅವರ ನಡುವಿನ ಒಡನಾಟದ ಬಗ್ಗೆ ತಿಳಿಸಿದ್ದಾರೆ. ಹಾಗೂ ತಾವು ಒಟ್ಟಿಗೆ ಚಿತ್ರ ಮಾಡದಿರಲು ಕಾರಣವೇನು ಎಂಬುದಕ್ಕೆ ವಿವರಣೆ ನೀಡಿದ್ದಾರೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ನಂತರ ಅವರು ಮತ್ತು ರಜನಿಕಾಂತ್ ಇಬ್ಬರೂ ಚಲನಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದರು. ಆದರೆ ಅವರಿಬ್ಬರ ಮಾರ್ಗದರ್ಶಕರು ಪ್ರಸಿದ್ಧ ತಮಿಳು ಚಲನಚಿತ್ರ ನಿರ್ಮಾಪಕ ಕೆ. ಬಾಲಚಂದರ್ ಎಂಬುದು ಎಲ್ಲರಿಗೂ ತಿಳಿದಿದೆ ಎಂಬುದಾಗಿ ತಿಳಿಸಿದ್ದಾರೆ.

“ನಾವು ಆರಂಭದಲ್ಲಿ ಒಟ್ಟಿಗೆ ಅನೇಕ ಚಲನಚಿತ್ರಗಳನ್ನು ಮಾಡಿದ್ದೇವೆ. ನಂತರ ನಾವು ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದೇವೆ. ನಾವು ಇಬ್ಬರು ಕಾಂಪಿಟೇಟರ್‌ಗಳಲ್ಲ. ನಮಗೆ ಒಂದೇ ಮಾರ್ಗದರ್ಶಕರಿದ್ದರು. ನಮ್ಮ ನಡುವೆ ಯಾವುದೇ ಅಸೂಯೆ ಇಲ್ಲ ಮತ್ತು ನಮ್ಮ ದಾರಿ ಬೇರೆ ಬೇರೆ. ನಾವು ಎಂದಿಗೂ ಪರಸ್ಪರರ ಬಗ್ಗೆ ಕೀಳುಮಟ್ಟದ ಟೀಕೆಗಳನ್ನು ಮಾಡುವುದಿಲ್ಲ. ನಾವು ನಮ್ಮ 20ರ ಹರೆಯದಲ್ಲಿದ್ದಾಗಲೇ ಈ ಬಗ್ಗೆ ಪ್ರಾಮಿಸ್ ಮಾಡಿದ್ದೇವೆ. ಇಂಥದ್ದೇ ಎಂಬ ಕಾರಣವನ್ನು ಹೇಳಲು ಆಗುವುದಿಲ್ಲ. ಆದರೆ ನಾವು ಒಂದು ಹಂತಕ್ಕೆ ಬಂದ ಮೇಲೆ ನಮ್ಮ ನಮ್ಮ ಅಭಿರುಚಿಗಳು ಬೇರೆ ಬೇರೆಯಾದವು. ಹಾಗಾಗಿ ಒಟ್ಟಿಗೆ ಚಿತ್ರ ಮಾಡದಿರಲು ನಿರ್ಧರಿಸಿದೆವು” ಎಂಬುದಾಗಿ ಕಮಲ್‌ ಹಾಸನ್‌ ಅವರು ಹೇಳಿದ್ದಾರೆ.

ಅಲ್ಲದೇ ಕಮಲ್ ಹಾಸನ್ 1981ರಲ್ಲಿ ‘ಏಕ್ ದುಜೆ ಕೆ ಲಿಯೆ’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಇದು ಕೆ ಬಾಲಚಂದರ್ ನಿರ್ದೇಶನದ ಅವರ ತೆಲುಗು ಚಿತ್ರ ‘ಮರೋ ಚರಿತ್ರ’ದ ರಿಮೇಕ್ ಆಗಿದೆ. ಈ ವೇಳೆ ಕಮಲ್ ಹಾಸನ್ ತಮಗೆ ಹಿಂದಿ ಚಿತ್ರರಂಗದಲ್ಲಿ ಬೆಂಬಲ ನೀಡಿದ ಅಭಿಮಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ಪ್ರಸ್ತುತ, ಕಮಲ್ ಹಾಸನ್ ಅವರು ಕಲ್ಕಿ 2898ಎಡಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ಕೇವಲ ಕೆಲವು ನಿಮಿಷಗಳ ಕಾಲ ಮಾತ್ರ ಪರದೆಯ ಮೇಲೆ ಕಾಣಿಸಿಕೊಳ್ಳುವಂತಹ ಚಿಕ್ಕ ಪಾತ್ರವನ್ನು ಮಾಡಿದ್ದಾರೆ. ಈ ಚಿತ್ರದ ಮುಂದಿನ ಭಾಗದಲ್ಲಿ ಈ ಪಾತ್ರ ಮಹತ್ವದ್ದಾಗಿದೆ ಎನ್ನಲಾಗಿದೆ.

Continue Reading

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading
Advertisement
Nitin Gadkari
ದೇಶ15 mins ago

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Amarnath Tragedy
Latest16 mins ago

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Kalki 2898 AD Box Office Collection Day Deepika Padukone's Film
ಟಾಲಿವುಡ್26 mins ago

Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?

dengue fever Dinesh Gundu Rao
ಪ್ರಮುಖ ಸುದ್ದಿ33 mins ago

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Suryakumar Yadav Catch
ಕ್ರೀಡೆ42 mins ago

Suryakumar Yadav Catch: ಸೂರ್ಯಕುಮಾರ್​ ಕ್ಯಾಚ್ ಎಡವಟ್ಟು; ವಿಶ್ವಕಪ್​ ವಾಪಸ್​ ನೀಡಬೇಕಾ ಭಾರತ?

Encounter in UP
ದೇಶ59 mins ago

Encounter in UP: ಯೋಗಿನಾಡಲ್ಲಿ ಮತ್ತೋರ್ವ ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ನ ಎನ್‌ಕೌಂಟರ್‌

Hardik Pandya
ಕ್ರೀಡೆ1 hour ago

Hardik Pandya: ಬಹುಮಾನ ಮೊತ್ತವನ್ನು ತಾಯಿಯ ಖಾತೆಗೆ ಹಾಕುವಂತೆ ಬಿಸಿಸಿಐಗೆ ಮನವಿ ಮಾಡಿದ ಹಾರ್ದಿಕ್​ ಪಾಂಡ್ಯ; ಕಾರಣವೇನು?

Hathras Stampede
ದೇಶ1 hour ago

Hathras Stampede: ಹತ್ರಾಸ್‌ ಕಾಲ್ತುಳಿತ: ಹೆಣಗಳ ರಾಶಿ ನೋಡಿ ಪೊಲೀಸ್‌ಗೆ ಹೃದಯಾಘಾತ; ಸ್ಥಳದಲ್ಲೇ ಸಾವು

Parliament Session
ದೇಶ2 hours ago

Parliament Session: ರಾಜ್ಯಸಭೆಯಲ್ಲಿ ಇಂದು ಮೋದಿ ಭಾಷಣ; Live ಇಲ್ಲಿ ವೀಕ್ಷಿಸಿ

Munjya Movie Box Office Collection Rs 100 Cr
ಬಾಲಿವುಡ್2 hours ago

Munjya Movie: ಸ್ಟಾರ್​ ಕಲಾವಿದರೇ ಇಲ್ಲದೇ ಬರೋಬ್ಬರಿ 100 ಕೋಟಿ ರೂ. ಗಳಿಕೆ ಕಂಡ ʻಮುಂಜ್ಯʼ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌