ನೋಡಲೇಬೇಕಾದ ಸಿನಿಮಾ : AYOTHI: ಹೀರೋಯಿಸಂಗೆ ಹೊಸ ವಿವರಣೆ ನೀಡಿದ ಚಿತ್ರ - Vistara News

ಸಿನಿಮಾ

ನೋಡಲೇಬೇಕಾದ ಸಿನಿಮಾ : AYOTHI: ಹೀರೋಯಿಸಂಗೆ ಹೊಸ ವಿವರಣೆ ನೀಡಿದ ಚಿತ್ರ

ಜಾತಿಗಿಂತ ನೀತಿ ದೊಡ್ಡದು, ಭಾಷೆಗಿಂತ ಭಾವ ದೊಡ್ಡದು ಎನ್ನುವ ಭಾವನೆಯನ್ನು ಪ್ರೇಕ್ಷಕರಲ್ಲಿ ಮನದಟ್ಟು ಮಾಡಿಸುವ ಚಿತ್ರ ಅಯೋತಿ (ayothi).

VISTARANEWS.COM


on

ayothi film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
shivaraj

:: ಶಿವರಾಜ್ ಡಿ.ಎನ್.ಎಸ್

ನಾವು ಮನುಷ್ಯರು.. ಜಾತಿ, ಧರ್ಮ, ಕುಲ ಪಂಗಡಗಳಾಗಿ ವಿಂಗಡಿಸಿಕೊಂಡು ಜಾಗತೀಕರಣಗೊಂಡು ಬದುಕಿರುವ ಸಂಘ ಜೀವಿಗಳು. ನಾವು ಮನುಷ್ಯರಾಗಿ ಬದುಕಬೇಕು. ಮನುಷ್ಯ ಮನುಷ್ಯನಾಗಿ ಬದುಕುವುದು ಅಂದರೆ ಏನು? ಹೀರೋಯಿಸಂ ಅಂದರೆ ಏನು? ಹೀರೊ ಎಂದರೆ ಯಾರು? ಎನ್ನುವಂತಹದನ್ನು ಚಿತ್ರ ಮುಗಿದ ನಂತರವೂ ಅಲೋಚಿಸುವಂತೆ ಮಾಡಬಲ್ಲ ಸಿನಿಮಾ AYOTHI. ಅಯೋತಿ ಅಥವ ಅಯೋದಿ ಎಂದರೆ ತಮಿಳಗರು ಅಯೋಧ್ಯ ಎನ್ನುವುದರ ಉಚ್ಚಾರಣೆ. ಅಮೋಘ, ಅತ್ಯದ್ಭುತ, ಅವಿಸ್ಮರಣೀಯ, ಎನ್ನುವಂಥ ಸಿನಿಮಾ ಏನಲ್ಲ ಅನಿಸಿದರೂ, ಕೊನೆಗೆ ಹಾಗಾದರೆ ನಿಜ ಜೀವನದಲ್ಲಿ ʼವಾವ್’ ಫ್ಯಾಕ್ಟರ್ ಏನು ಅನ್ನುವುದನ್ನು ನಮಗೆ ನಾವೇ ಪ್ರಶ್ನೆ ಮಾಡಿಕೊಳ್ಳಬೇಕು ಅಷ್ಟೇ.

ಸಂಘ ಜೀವಿಯಾಗಿರುವ ಮನುಷ್ಯ ಇತರರೊಡನೆ ನಗು ನಗುತ್ತಾ ಸಜ್ಜನಿಕೆ ಸದಾಚಾರ ಉಳ್ಳವನಾಗಿರುವುದರೊಂದಿಗೆ ಪರಸ್ಪರ ಗೌರವದಿಂದ ಕಾಣಬೇಕು, ಸಹಾಯ ಮನೋಭಾವ ಹೊಂದಿರಬೇಕು ಎನ್ನುವುದನ್ನು ಕೆಲವೊಂದು ದೃಶ್ಯಗಳಲ್ಲಿ ನಿರ್ದೇಶಕರು ಸೂಕ್ಷ್ಮವಾಗಿ ಅಚ್ಚುಕಟ್ಟಾಗಿ ಅಷ್ಟೇ ಸೂಕ್ತ ಅನಿಸುವಂತೆ ನಿಭಾಯಿಸಿದ್ದಾರೆ. AYOTHI ಜಾತಿಗಿಂತ ನೀತಿ ದೊಡ್ಡದು, ಭಾಷೆಗಿಂತ ಭಾವ ದೊಡ್ಡದು ಎನ್ನುವ ಭಾವನೆಯನ್ನು ಪ್ರೇಕ್ಷಕರಲ್ಲಿ ಮನದಟ್ಟು ಮಾಡುವುದಂತು ಸತ್ಯ.

ಉತ್ತಮ ಕತೆಯಿರುವ ಈ ಸಿನಿಮಾ ತಾಂತ್ರಿಕವಾಗಿ ಅಚ್ಚುಕಟ್ಟಾಗಿದೆ. ಎಲ್ಲ ಕಲಾವಿದರ ಅಭಿನಯವೂ ಉತ್ತಮವಾಗಿದೆ. ಚಿತ್ರಕತೆಯಲ್ಲಿ ಕಗ್ಗಂಟಿನಂಥ ಸಮಸ್ಯೆಯೊಂದರೊಂದಿಗೆ ಪ್ರತಿ ಹಂತದಲ್ಲೂ ಸವಾಲುಗಳನ್ನು ತಂದೊಡ್ಡಿ, ಅದನ್ನು ಹೇಗೆ ನಿಭಾಯಿಸುತ್ತಾರೆ ಎನ್ನುವ ಕುತೂಹಲಗಳೊಂದಿಗೆ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಜೊತೆಗೂಡಿಸಿಕೊಂಡು ಸಾಗುವ ಸಿನಿಮಾ. ಕೊನೆ ಹಂತದಲ್ಲಿ ಒಂದೇ ಒಂದು ಪ್ರಶ್ನೊತ್ತರದಲ್ಲೆ ಇಡೀ ಸಿನಿಮಾದ ಘನತೆಯನ್ನು ಹೆಚ್ಚಿಸಿಬಿಡುತ್ತದೆ. ಅಲ್ಲಲ್ಲಿ ಪ್ರೇಕ್ಷಕರನ್ನು ಭಾವುಕರನ್ನಾಗಿಸಿ ಕಣ್ಣು ತುಂಬಿಕೊಳ್ಳುವಂತೆಯೂ ಮಾಡುತ್ತದೆ. ಆದರೇ ಕಥಾನಾಯಕ ಪರಿಚಯದ ತಾಳು ತುದಿಯಿಲ್ಲದ ದೃಶ್ಯವೊಂದು ಸಿನಿಮಾದ ಒಟ್ಟಾರೆ ಭಾವಾರ್ಥಕ್ಕೆ ಧಕ್ಕೆ ಆಯ್ತೇನೋ ಅನಿಸಬಹುದು.

ಕತೆಯ ಕುರಿತು ಹೇಳುವುದಾದರೆ, ಉತ್ತರ ಪ್ರದೇಶದ ಅಯೋಧ್ಯೆಯ ಸಾಂಪ್ರದಾಯಿಕ ಕುಟುಂಬದ ವ್ಯಾಪಾರಿ, ಒರಟು ಸ್ವಭಾವದ ಕೋಪಿಷ್ಠ ಮನುಷ್ಯ ಬಲರಾಮ್ ಮತ್ತು ಅವನ ಪತ್ನಿ ಜಾನಕಿ, ಮಗಳು ಶಿವಾನಿ ಮತ್ತು ಮಗ ಸೋನುವಿನೊಂದಿಗೆ ತಮಿಳುನಾಡಿನ ರಾಮೇಶ್ವರಂಗೆ ತೀರ್ಥಯಾತ್ರೆಗೆ ತೆರಳಲು ಯೋಜನೆ ರೂಪಿಸಿ ದೀಪಾವಳಿಯ ದಿನವೇ ಹೊರಡುತ್ತಾರೆ. ರೈಲು ಪ್ರಯಾಣ ಮುಗಿಸಿ ಕ್ಯಾಬ್ ಬುಕ್ ಮಾಡಿ ರಾಮೇಶ್ವರಂಗೆ ಹೋಗುವ ದಾರಿಯಲ್ಲಿ ಬಲರಾಮ್ ಕ್ಯಾಬ್ ಡ್ರೈವರ್‌ನೊಂದಿಗೆ ತನ್ನ ದುರ್ವರ್ತನೆಯಿಂದಾಗಿ ಜಗಳ ಕಾಯುತ್ತಾನೆ. ಅದು ದೊಡ್ಡ ಅಪಘಾತಕ್ಕೆ ಕಾರಣವಾಗುತ್ತದೆ.

ಅಪಘಾತದಲ್ಲಿ ಜಾನಕಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯ ಐಸಿಯುಗೆ ದಾಖಲಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವಾಗ ತಕ್ಷಣ ಮಧುರೈ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಬೇಕಾದ ಸಂದರ್ಭ ಎದುರಾಗುತ್ತದೆ. ಬಲರಾಮ್ ಮತ್ತು ಅವರ ಮಕ್ಕಳು ತಮಿಳು ಭಾಷೆ ಅರ್ಥವಾಗದೆ ಅಸಹಾಯಕರಾಗಿರುತ್ತಾರೆ. ಕ್ಯಾಬ್ ಡ್ರೈವರ್‌ನ ಸ್ನೇಹಿತನಾದ ಕಥಾನಾಯಕ ಅವನನ್ನು ನೋಡಲು ಬಂದು ಇವರಿಗೆ ಸಹಾಯ ಮಾಡುವ ಸ್ಥಿತಿ ಎದುರಾಗುತ್ತದೆ. ತನ್ನ ಸಾಮರ್ಥ್ಯವನ್ನು ಮೀರಿ ಅವರ ಸಹಾಯಕ್ಕೆ ನಿಲ್ಲುತ್ತಾನೆ. ದೀಪಾವಳಿ ಹಬ್ಬದ ದಿನವಾದ್ದರಿಂದ ಎಲ್ಲವು ಸಹಜ ಸ್ಥಿತಿಯಲ್ಲಿರುವುದಿಲ್ಲ. ಆಂಬ್ಯುಲೆನ್ಸ್ ಸಿಗದಿದ್ದಾಗ, ಸಿಕ್ಕರೂ ಡ್ರೈವರ್ ಸಿಗದಂತಾದಾಗ, ಪರಿಸ್ಥಿತಿ ಅರಿತು ನಾಯಕ ತಾನೆ ಖುದ್ದಾಗಿ ಆಂಬ್ಯುಲೆನ್ಸ್ ಅನ್ನು ಮಧುರೈ ಸರ್ಕಾರಿ ಆಸ್ಪತ್ರೆಯತ್ತ ಸಾಗಿಸಲು ಮುಂದಾಗುತ್ತಾನೆ. ಆದರೆ ಜಾನಕಿ ಮಾರ್ಗಮಧ್ಯೆ ನಿಧನರಾಗುತ್ತಾರೆ. ಧಾರ್ಮಿಕ ನಂಬಿಕೆಯನ್ನು ಉಲ್ಲೇಖಿಸಿ, ಬಲರಾಮ್ ತನ್ನ ಹೆಂಡತಿಯ ಮರಣೋತ್ತರ ಪರೀಕ್ಷೆಯನ್ನು ವಿರೋಧಿಸುತ್ತಾನೆ. ಜಾನಕಿಯ ದೇಹವನ್ನು ಅಯೋಧ್ಯೆಗೆ ಹಿಂತಿರುಗಿಸಲು ಮಧುರೈ ವಿಮಾನ ನಿಲ್ದಾಣದಲ್ಲಿ ಕುಟುಂಬವನ್ನು ಕೈಬಿಡಬೇಕೆಂದು ಒತ್ತಾಯಿಸುತ್ತಾನೆ.

ಆದರೆ ಎಲ್ಲವು ಅಷ್ಟು ಸಹಜವಾಗಿರುವುದಿಲ್ಲ. ಅದಕ್ಕೆ ಒಪ್ಪದ ಆಸ್ಪತ್ರೆ ಸಿಬ್ಬಂದಿಯ ಮನವೊಲಿಸಲು ಸೋಲುವ ನಾಯಕ ಕೊನೆಗೆ ಜಗಳವಾಡಿ ಕಪಾಳಕ್ಕೊಂದು ಬಿಗಿದು ಅವನನ್ನು ಅರ್ಧದಲ್ಲಿ ಬಿಟ್ಟು ವಿಮಾನ ನಿಲ್ದಾಣ ತಲುಪಿಸುತ್ತಾನೆ. ಅಲ್ಲಿಂದಾಚೆಗೆ ಯಾವುದೂ ಅಂದುಕೊಂಡಂತೆ ನಡೆಯುವುದಿಲ್ಲ. ವಿಮಾನದಲ್ಲಿ ಶವ ಸಾಗಿಸಲು ಹಲವು ದಾಖಲಾತಿಗಳು ಬೇಕು ಎನ್ನುವುದನ್ನು ಖಚಿತ ಪಡಿಸಿಕೊಳ್ಳುತ್ತಾರೆ. ಆಗ ಇದ್ದಕ್ಕಿದ್ದಂತೆ ಪೊಲೀಸರು ಬಂದು ಆಂಬ್ಯುಲೆನ್ಸ್ ಸಮೇತ ಎಲ್ಲರನ್ನೂ ಆಸ್ಪತ್ರೆ ಸಿಬ್ಬಂದಿಯ ದೂರಿನಾಧಾರದ ಮೇಲೆ ಬಂಧಿಸಿ ತನಿಖೆ ನಡೆಸುತ್ತಾರೆ. ಕೊನೆಗೆ ಅವರು ನಿರಪರಾಧಿಗಳು ಎಂದು ಪರಿಗಣಿಸಿ, ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕರೆದೊಯ್ದ ನಂತರ ನಾಯಕ ಅಲ್ಲಿಂದ ಹೊರಡಲು ತೀರ್ಮಾನಿಸಿ ಹೊರಟು ಬಿಡುತ್ತಾನೆ. ಆದರೆ ಅಸಹಾಯಕ ಮಕ್ಕಳನ್ನು ನೆನೆದು ಭಾವುಕನಾಗಿ ಮನಸ್ಸಿಗೆ ಸಮಾಧಾನವಾಗದೆ ಮತ್ತೆ ಹಿಂದಿರುಗಿ ಅವರ ಸಹಾಯಕ್ಕೆ ಮುಂದಾಗುತ್ತಾನೆ. ಅವರು ವಿಮಾನದಲ್ಲಿ ತೆರಳಲು ಬೇಕಾಗಿದ್ದೆಲ್ಲವನ್ನು ತನ್ನ ಸಾಮರ್ಥ್ಯ ಮೀರಿ ಪ್ರಯತ್ನಿಸುತ್ತಾನೆ. ಸ್ನೇಹಿತರ ಸಹಾಯದಿಂದ ಹಣ ಸಂಗ್ರಹಣೆ, ಟಿಕೆಟ್ ಕಾಯ್ದಿರಿಸುವಿಕೆ ಇದೆಲ್ಲ ಒಂದು ಕಡೆಯಾದರೆ, ತನಗೆ ತನ್ನ ಧರ್ಮ ಸಂಪ್ರದಾಯವೇ ಮುಖ್ಯ, ದೇಹಕ್ಕೆ ಹಾಗೆಲ್ಲ ಆದರೆ ಆತ್ಮಕ್ಕೆ ಶಾಂತಿ ದೊರಕದು ಎಂದು ಹೆಂಡತಿಯ ಶವಪರೀಕ್ಷೆ ಮತ್ತು ಎಂಬಾಮಿಂಗ್ ಮಾಡಲು ಒಪ್ಪದ ಬಲರಾಮ್‌ನ ವಿರೋಧ ಇನ್ನೊಂದು ಕಡೆ. ಮಗಳು ಶಿವಾನಿ ಮಧ್ಯೆ ಪ್ರವೇಶಿಸಿ, ನೀನು ಅಮ್ಮ ಬದುಕಿದ್ದಾಗ ಕೊಟ್ಟ ಶಾಂತಿ, ನೆಮ್ಮದಿ ಅಷ್ಟರಲ್ಲೆ ಇದೆ ಎಂದು ಬೈದು, ಅವನ ದುರ್ವರ್ತನೆಗಳನ್ನು ಮನದಟ್ಟು ಮಾಡುತ್ತಾಳೆ. ಶವಪರೀಕ್ಷೆ ಮತ್ತು ಎಂಬಾಮಿಂಗ್ ಎಲ್ಲವೂ ಆಗುತ್ತದೆ. ಬಲರಾಮ್ ಮನಸ್ಸು ಬದಲಾಯಿಸಿ ಮೊದಲ ಬಾರಿ ಪತ್ನಿಯ ಸಾವಿಗೆ ಕಣ್ಣೀರು ಹಾಕುತ್ತಾನೆ.

ಎಲ್ಲವೂ ಸಲೀಸಾಯಿತು ಎನ್ನುವಷ್ಟರಲ್ಲಿ, ವಿಮಾನ ಪ್ರಯಾಣಕ್ಕೆ ಬೇಕಾದ ದಾಖಲಾತಿಗಳಲ್ಲಿ ಅಕ್ಷರದೋಷದಿಂದಾಗಿ ಚಕಾರ ಶುರುವಾಗುತ್ತದೆ. ಅದನ್ನೂ ನಾಯಕ ತನ್ನ ಪ್ರಾಮಾಣಿಕ ಪ್ರಯತ್ನದಲ್ಲಿ ಸರಿಪಡಿಸಲು ಯಶಸ್ವಿಯಾಗುತ್ತಾನೆ. ಆದರೆ ಲಕ್ನೋಗೆ ವಿಮಾನದಲ್ಲಿ ತೆರಳಲು ಟಿಕೇಟ್ ಕೇವಲ ಒಂದಷ್ಟೆ ಸಿಕ್ಕಿದ್ದು, ಬೇರೆಲ್ಲ ಟಿಕೇಟ್ ಮುಂಗಡ ಬುಕ್ಕಾಗಿರುತ್ತವೆ. ಕೊನೆಗೆ ಮಗಳು ಶಿವಾನಿ ಒಬ್ಬಳೇ ತನ್ನ ತಾಯಿಯ ಅವಶೇಷಗಳೊಂದಿಗೆ ಅಯೋಧ್ಯೆ ತಲುಪುವುದನ್ನು ಬಿಟ್ಟು ಬೇರೆ ದಾರಿಯಿಲ್ಲದಂತಾಗುತ್ತದೆ. ಇಲ್ಲಿಂದಾಚೆಗೆ ಏನಾಗುತ್ತದೆ, ಅವರೆಲ್ಲ ಅಲ್ಲಿಂದ ಹೋಗುವುದು ಹೇಗೆ, ಎಲ್ಲರಿಗೂ ಟಿಕೇಟ್ ಸಿಗುವುದೇ ಇಲ್ಲವೇ ಎನ್ನುವುದನ್ನು ಸಿನಿಮಾದಲ್ಲೆ ನೋಡಿ ತಿಳಿಯಬೇಕು. ಇನ್ನೂ ಹಲವು ವಾವ್ ಎನಿಸುವ ಸೂಕ್ಷ್ಮ ವಿಷಯಗಳಿವೆ. ಅವುಗಳನ್ನೂ ಚಿತ್ರದಲ್ಲಿ ನೋಡಿಯೇ ಅನುಭವಿಸುವುದು ಉತ್ತಮ.

ayothi film

ಎಲ್ಲಾ ಎಲ್ಲೆಗಳನ್ನ ಮೀರಿ, ಗುರುತು ಪರಿಚಯವಿಲ್ಲದ ಜನರಿಗೆ ಸಹಕಾರಿಯಾಗುವ ನಾಯಕ ತನ್ನ ನಡವಳಿಕೆಯಿಂದ ಚಪ್ಪಾಳೆ ಸಿಳ್ಳೆ ಗಿಟ್ಟಿಸಿಕೊಳ್ಳುತ್ತಾನೆ. ಕೋಪಿಷ್ಠ ಬಲರಾಮನ ಅಸಹಿಷ್ಣುತೆ ಮತ್ತು ದ್ವೇಷ ಮಣಿಯುತ್ತದೆ. ದೇವರನ್ನು ನೋಡಲು ಹೊರಟವರು ದೇವರನ್ನು ಕಳೆದುಕೊಂಡರಾ ಅಥವಾ ನಿಜ ದೇವರನ್ನೇ ಕಂಡರಾ ಎನ್ನುವ ಗೊಂದಲ ಉಳಿಯುತ್ತದೆ. ಎಲ್ಲದಕ್ಕಿಂತಲೂ ಮನುಷ್ಯತ್ವ ದೊಡ್ಡದು ಎನ್ನುವ ಸಂದೇಶ ಸಾರುವ ಈ ಸಿನಿಮಾ ಭಾವನಾತ್ಮಕ, ಮದರ್ ಸೆಂಟಿಮೆಂಟ್, ಥ್ರಿಲ್ಲರ್ ಡ್ರಾಮ, ಏನೇ ಅನಿಸಿಕೊಂಡರೂ ಸತ್ಯಘಟನೆ ಆಧಾರಿತ ಸಿನಿಮಾ ಎನ್ನುವ ಅಂಶ ಮೈ ನಡುಗಿಸಬಹುದು, ಒಂದು ದಿನದ ಮಟ್ಟಿಗಾದರೂ ಸಿನಿಮಾ ಕಾಡಬಹುದು.

ಚಿತ್ರಕ್ಕೆ ಎನ್ ರಘುನಂದನ್ ಸಂಗೀತ, ಮಾದೇಶ್ ಮಾಣಿಕಮ್ ಛಾಯಾಗ್ರಹಣವಿದ್ದು, ಕತೆ ಚಿತ್ರಕತೆಯನ್ನು ನವ ನಿರ್ದೇಶಕ ಆರ್ ಮಂದಿರ ಮೂರ್ತಿಯವರೇ ನಿಭಾಯಿಸಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ನಟ ನಿರ್ದೇಶಕ ಎಂ. ಶಶಿಕುಮಾರ್, ಪ್ರೀತಿ ಅಶ್ರಾನಿ, ಯಶ್ ಪಾಲ್ ಶರ್ಮ, ಅಂಜು ಅಶ್ರಾನಿ, ಮಾಸ್ಟರ್ ಅದ್ವೈತ್ ಮುಂತಾದವರಿದ್ದು ಸಿನಿಮಾ ZEE5ನಲ್ಲಿ ಸ್ಟ್ರೀಮ್ ಆಗುತ್ತಿದ್ದು ಆಸಕ್ತರು ಕಾಣಬಹುದು.

ಇದನ್ನೂ ಓದಿ: RSS Movie: RSS ಯಶೋಗಾಥೆಯ ಸಿನೆಮಾ: ವಿಜಯೇಂದ್ರ ಪ್ರಸಾದ್ ಬರೆದ ಕಥೆಗೆ ರಾಜಮೌಳಿ ನಿರ್ದೇಶನ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Varalaxmi Sarathkumar: ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Varalaxmi Sarathkumar invite PM Narendra Modi for wedding
Koo

ಬೆಂಗಳೂರು: ತಮಿಳು-ತೆಲುಗು ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಅವರು ತಮ್ಮ ಮದುವೆಯ ಆಮಂತ್ರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದರು. ಭಾವಿ ಪತಿ ನಿಕೋಲಾಯ್ ಜತೆ ವರಲಕ್ಷ್ಮಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಫೋಟೊಗೆ ಪೋಸ್‌ ಕೊಟ್ಟಿದ್ದಾರೆ. ವರಲಕ್ಷ್ಮಿ ಅವರು ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಸೆಲ್ಫಿ ಸೇರಿದಂತೆ ಹಲವಾರು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ʻʻನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದೆವು. ಅವರನ್ನು ಆಹ್ವಾನಿಸಿದ್ದು ನಮ್ಮ ಭಾಗ್ಯ. ನಿಮ್ಮ ಬ್ಯುಸಿ ಶೆಡ್ಯೂಲ್‌ನ ಹೊರತಾಗಿಯೂ ನಮ್ಮೊಂದಿಗೆ ಸಮಯ ಕಳೆದಿದ್ದೀರಿ. ನಿಜವಾಗಿಯೂ ಗೌರವ ಇದುʼʼಎಂದು ಬರೆದುಕೊಂಡಿದ್ದಾರೆ. ಈ ಮೊದಲು ರಜನಿಕಾಂತ್, ಅವರ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರನ್ನು ಭೇಟಿಯಾಗಿ ಕರೆಯೋಲೆ ನೀಡಿದ್ದರು.

ವರಲಕ್ಷ್ಮಿ ಶರತ್‌ಕುಮಾರ್ ಜತೆ ತಂದೆ ಶರತ್‌ಕುಮಾರ್, ತಾಯಿ ಮತ್ತು ಸಹೋದರಿ ಸೇರಿ ಇಡೀ ಕುಟುಂಬವೇ ಜತೆಗೆ ಇತ್ತು. ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜುಲೈ 2ರಂದು ಜೋಡಿ ವಿವಾಹವಾಗಲಿದೆ.

ಇದನ್ನೂ ಓದಿ: Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಮಾಲಿವುಡ್

Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

Fahadh Faasil: ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್‌ಕಿಲಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಕ್ರಮ ಕೈಗೊಂಡಿದೆ.

VISTARANEWS.COM


on

Fahadh Faasil in trouble faces Human Rights Commission action
Koo

ಕೇರಳ: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ (Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು) ತಮ್ಮ ಸಿನಿಮಾಗಳ ಮೂಲಕ ಯಶಸ್ಸಿನಲ್ಲಿ ತೇಲುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ, ಅವರು ನಟ ಮತ್ತು ನಿರ್ಮಾಪಕರಾಗಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಫಹಾದ್ ನಿರ್ಮಾಣದ ‘ಪೇಯ್ನ್‌ಕಿಲಿ’ ( movie Painkili) ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು. ಆದರೆ ಚಿತ್ರತಂಡ ಅಲ್ಲಿದ್ದವರಿಗೆ ತೊಂದರೆ ಕೊಟ್ಟ ಕಾರಣ ಮಾನವ ಹಕ್ಕುಗಳ ಆಯೋಗ ( Human Rights Commission) ಫಹಾದ್ ವಿರುದ್ಧ ದೂರು ದಾಖಲಿಸಿಕೊಂಡಿದೆ.

ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್‌ಕಿಲಿ’ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಕ್ರಮ ಕೈಗೊಂಡಿದೆ.

ವರದಿಗಳ ಆಧಾರದ ಮೇಲೆ ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗದ ಸದಸ್ಯೆ ವಿ ಕೆ ಬೀನಾಕುಮಾರಿ, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಾಲಿ ತಾಲೂಕು ಆಸ್ಪತ್ರೆ ಅಧೀಕ್ಷಕರಿಗೆ ಸೂಚಿಸಿದರು.

ಇದನ್ನೂ ಓದಿ: Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

ಎರ್ನಾಕುಲಂ ಸ್ಥಳೀಯ ಮಾಧ್ಯಮ ವರದಿಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಚಿತ್ರೀಕರಣದ ವೇಳೆ ನಟರು ಸೇರಿದಂತೆ ಸುಮಾರು 50 ಮಂದಿ ಹಾಜರಿದ್ದು, ತುರ್ತು ಚಿಕಿತ್ಸಾ ಕೊಠಡಿಯನ್ನೂ ನಿರ್ಲಕ್ಷಿಸಿ ಶೂಟಿಂಗ್ ಹೆಸರಲ್ಲಿ ಚಿತ್ರತಂಡ ಗಲಾಟೆ ಮಾಡಿದೆ, ದೊಡ್ಡ ದೊಡ್ಡ ಲೈಟ್‌ಗಳನ್ನು ಹಾಕಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹಾಕಿ ಅಲ್ಲಿನ ಸಿಬ್ಬಂದಿ ಹಾಗೂ ರೋಗಿಗಳಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿರುವಾಗಲೇ ಚಿತ್ರದ ಶೂಟಿಂಗ್ ನಡೆದಿದೆ ಎಂದು ತಿಳಿದುಬಂದಿದೆ.

ಗಂಭೀರ ಸ್ಥಿತಿಯಲ್ಲಿ ಬಂದ ರೋಗಿಗಳಿಗೆ ತುರ್ತು ಚಿಕಿತ್ಸಾ ವಿಭಾಗಕ್ಕೂ ಬರಲು ಸಾಧ್ಯವಾಗಲಿಲ್ಲ. ಮುಖ್ಯ ಗೇಟ್‌ನಿಂದ ಯಾರನ್ನೂ ಬಿಡಲಿಲ್ಲ. ಚಿತ್ರೀಕರಣದ ಸಮಯದಲ್ಲಿ ಮೌನವಾಗಿರಲು ಸಿಬ್ಬಂದಿಗಳು ರೋಗಿಗಳಿಗೆ ಮತ್ತು ಪಕ್ಕದಲ್ಲಿದ್ದವರಿಗೆ ಚಿತ್ರತಂಡ ಸೂಚಿಸುತ್ತಿದ್ದರು ಎಂದು ವರದಿಯಾಗಿದೆ.

‘ಪೇಯ್ನ್‌ಕಿಲಿ’ ಚಿತ್ರಕ್ಕೆ ಫಹಾದ್ ಫಾಸಿಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹಾಗಾಗಿ ಅವರ ವಿರುದ್ಧವೇ ದೂರು ದಾಖಲಾಗಿದೆ. ಪ್ರಕರಣದ ಬಗ್ಗೆ ಫಹಾದ್ ಫಾಸಿಲ್ ಇನ್ನು ಪ್ರತಿಕ್ರಿಯಿಸಿಲ್ಲ. ಭಾರತೀಯ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

Actor Darshan: ನಕಾರಾತ್ಮಕ ಅಂಶಗಳನ್ನ ನಾಶಮಾಡಲು ಸುದರ್ಶನ ಹೋಮ ಮಾಡಿಸಲಾಗುತ್ತೆ, ಶತ್ರುಗಳ ಮೇಲೆ ವಿಜಯ ಪ್ತಾಪ್ತಿಗೆ, ದುಷ್ಟ ಕಣ್ಣಿನಿಂದ ರಕ್ಷಣೆಗೆ ಈ‌ಹೋಮ ಮಾಡಲಾಗುತ್ತದೆ. ಹೀಗಾಗಿ ಡೆವಿಲ್ ಶೂಟಿಂಗ್ ನಲ್ಲೂ ಹೈ ಆಕ್ಷನ್ ಸೀನ್ ಇಡದಂತೆ ಮಿಲನಾ ಪ್ರಕಾಶ್‌ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಇಷ್ಟು ಜಾಗ್ರತೆ ವಹಿಸಿದ್ದರೂ ಸಿನಿಮಾ ಮಾಡುವಾಗ ಎಡಗೈಗೆ ಪ್ರ್ಯಾಕ್ಚರ್ ಆಗಿತ್ತು ಎನ್ನಲಾಗಿದೆ.

VISTARANEWS.COM


on

Actor Darshan Suffering From Sade Sati
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ (Actor Darshan) ಅವರು ನ್ಯಾಯಾಗ ಬಂಧನದಲ್ಲಿದ್ದಾರೆ. ಈಗಾಗಲೇ ದರ್ಶನ್‌ ಅವರಿಗೆ ಜಾಮೀನು ಸಿಗುವುದಂತೂ ಕಷ್ಟಕರ ಎನ್ನಲಾಗುತ್ತಿದೆ. ಇದರ ಜತೆಗೆ ಇದೀಗ ಈ ವರ್ಷ ಅಪಾಯ ಇದೆ ಎನ್ನುವುದು ದರ್ಶನ್​ಗೆ ಮೊದಲೇ ಗೊತ್ತಿತ್ತ ಎನ್ನುವ ಪ್ರಶ್ನೆ ಮೂಡಿದೆ. 13 ವರ್ಷಗಳಿಂದ ದಚ್ಚುಗೆ ಸಾಡೇಸಾತಿ ಕಾಟ ಇತ್ತು ಎನ್ನಲಾಹಿದೆ. ಸಾಡೇಸತಿ ಶುರುವಾದಗಲೂ ಸೆರೆವಾಸ ಅನುಭವಿಸಿದ್ದ ದಾಸ ಇದೀಗ ಸಾಡೇಸತಿ ಮುಗಿಯುವ ಸಮಯದಲ್ಲಿ ದರ್ಶನ್ ಜೈಲು ಪಾಲು ಆಗಿದ್ದಾರೆ ಎನ್ನಲಾಗಿದೆ.

ಎರಡು ತಿಂಗಳ ಹಿಂದೆ ನಟ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರು. ಅರೆಸ್ಟ್ ಆಗುವುದಕ್ಕೂ ಮುನ್ನ ಅವರು ಮನೆಯನ್ನು ಹೊಸದಾಗಿ ರಿನೋವೇಷನ್ ಮಾಡಿದ್ದರು. ಹೀಗಾಗಿ, ಅವರು ವಿಶೇಷ ಪೂಜೆ ಇಟ್ಟುಕೊಂಡಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ನಡೆದ ಬಳಿಕ ದರ್ಶನ್ ಪೂಜೆಯಲ್ಲಿ ಭಾಗಿ ಆಗಿದ್ದರು.

ನಕಾರಾತ್ಮಕ ಅಂಶಗಳನ್ನ ನಾಶಮಾಡಲು ಸುದರ್ಶನ ಹೋಮ ಮಾಡಿಸಲಾಗುತ್ತೆ, ಶತ್ರುಗಳ ಮೇಲೆ ವಿಜಯ ಪ್ತಾಪ್ತಿಗೆ, ದುಷ್ಟ ಕಣ್ಣಿನಿಂದ ರಕ್ಷಣೆಗೆ ಈ‌ ಹೋಮ ಮಾಡಲಾಗುತ್ತದೆ. ಹೀಗಾಗಿ ಡೆವಿಲ್ ಶೂಟಿಂಗ್ ನಲ್ಲೂ ಹೈ ಆಕ್ಷನ್ ಸೀನ್ ಇಡದಂತೆ ಮಿಲನಾ ಪ್ರಕಾಶ್‌ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಇಷ್ಟು ಜಾಗ್ರತೆ ವಹಿಸಿದ್ದರೂ ಸಿನಿಮಾ ಮಾಡುವಾಗ ಎಡಗೈಗೆ ಪ್ರ್ಯಾಕ್ಚರ್ ಆಗಿತ್ತು ಎನ್ನಲಾಗಿದೆ. 2017-18ರಿಂದ ದರ್ಶನ್ ಅವರಿಗೆ ಸಾಡೇ ಸಾತಿ ಇದೆ. ಜೂನ್-ನವೆಂಬರ್ 15ವರೆಗೆ ಅವರು ಮತ್ತಷ್ಟು ತೊಂದರೆ ಅನುಭವಿಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Continue Reading

Latest

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

Deepika Padukone ದೀಪಿಕಾ ಪಡುಕೋಣೆ, ಪ್ರಭಾಸ್ ಮತ್ತು ಅಮಿತಾಬ್ ಬಚ್ಚನ್ ಅವರ ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ ಮತ್ತು ಇದು ಅಭಿಮಾನಿಗಳು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಇನ್ನು ನಾಗ್ ಅಶ್ವಿನ್ ನಿರ್ದೇಶನದ ಬಗ್ಗೆ ಜನರು ಹೊಗಳಿದ್ದರು. ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಸುಮತಿ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು ತನ್ನ ಗರ್ಭದಲ್ಲಿ ಇಡೀ ವಿಶ್ವದ ದುಷ್ಟ ಶಕ್ತಿಗಳಿಗೆ ಶತ್ರುವಾದ ಮಗುವನ್ನು ಹೊತ್ತುಕೊಂಡು ಬೆಂಕಿಯ ಮೂಲಕ ನಡೆಯುತ್ತಾ ಬರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ. ಇದು ಈಗ ವೈರಲ್ ಆಗಿದೆ.

VISTARANEWS.COM


on

deepika padukone
Koo

ಮುಂಬೈ : ಬಾಲಿವುಡ್ ಖ್ಯಾತ ನಟಿಯರಲ್ಲಿ ದೀಪಿಕಾ ಪಡುಕೋಣೆ (Deepika Padukone )ಕೂಡ ಒಬ್ಬರು. ಇವರು ತಮ್ಮ ನಟನೆಯ ಮೂಲಕ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂತಹ ಖ್ಯಾತನಟಿ ದೀಪಿಕಾ ಪಡುಕೋಣೆ ಅವರ ‘ಕಲ್ಕಿ 2898 ಎಡಿ’ ಚಿತ್ರದ ಬೆಂಕಿಯಲ್ಲಿ ನಡೆದು ಬರುವ ಅವರ ನಗ್ನ ಚಿತ್ರ ಸೋರಿಕೆಯಾಗಿದೆ.

Deepika Padukone

ದೀಪಿಕಾ ಪಡುಕೋಣೆ, ಪ್ರಭಾಸ್ ಮತ್ತು ಅಮಿತಾಭ್‌ ಬಚ್ಚನ್ ಅವರ ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ ಮತ್ತು ಇದು ಅಭಿಮಾನಿಗಳು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಇನ್ನು ನಾಗ್ ಅಶ್ವಿನ್ ನಿರ್ದೇಶನದ ಬಗ್ಗೆ ಜನರು ಹೊಗಳಿದ್ದರು. ಆದರೆ ಈ ಚಿತ್ರದ ಕೆಲವು ದೃಶ್ಯಗಳು, ಹಲವಾರು ಫೋಟೊಗಳು ಮತ್ತು ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿವೆ.

Deepika Padukone

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಸುಮತಿ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು ತನ್ನ ಗರ್ಭದಲ್ಲಿ ಇಡೀ ವಿಶ್ವದ ದುಷ್ಟ ಶಕ್ತಿಗಳಿಗೆ ಶತ್ರುವಾದ ಮಗುವನ್ನು ಹೊತ್ತುಕೊಂಡು ಬೆಂಕಿಯ ಮೂಲಕ ನಡೆಯುತ್ತಾ ಬರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ. ಇದು ಈಗ ವೈರಲ್ ಆಗಿದೆ.

ವಿಡಿಯೊದಲ್ಲಿ ದೀಪಿಕಾ ಬೆಂಕಿಯ ಮೂಲಕ ನಡೆಯುತ್ತಾ ಬರುವಾಗ ಅವರ ಬಟ್ಟೆಗಳು ಬೆಂಕಿಗೆ ಉರಿದುಹೋಗುತ್ತಿದ್ದಂತೆ, ಅವರು ತಮ್ಮ ಎದೆಯನ್ನು ತಮ್ಮ ಕೈಯಿಂದ ಮುಚ್ಚಿಕೊಳ್ಳುತ್ತಾರೆ. ದೀಪಿಕಾ ಅವರ ಈ ಪಾತ್ರವು ಕಥಾಹಂದರಕ್ಕೆ ಪ್ರಮುಖವಾಗಿರುವುದರಿಂದ ಅವರ ಈ ಪಾತ್ರದ ಬಗ್ಗೆ ಚಿತ್ರತಂಡ ಬಹಿರಂಗಪಡಿಸಿರಲಿಲ್ಲ.

ಆದರೂ ಈ ವಿಡಿಯೋ ಸೋರಿಕೆಯಾಗಿದೆ. ಆದರೆ ಇದರಲ್ಲಿ ನಟಿಯ ಅಭಿನಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಬಳಕೆದಾರರು ಈ ಬೆಂಕಿಯ ದೃಶ್ಯವನ್ನು ‘ಅಪ್ರತಿಮ’ ಎಂದು ಕರೆದಿದ್ದಾರೆ.

Deepika Padukone

ದೀಪಿಕಾ ಪಡುಕೋಣೆಯವರ ಇಡೀ ವೃತ್ತಿಜೀವನದ ಅತ್ಯಂತ ಅಪ್ರತಿಮ ದೃಶ್ಯ ಇದಾಗಿದೆ ಎಂದು ಒಬ್ಬ ಬಳಕೆದಾರ ತಿಳಿಸಿದರೆ, ಮತ್ತೊಬ್ಬರು “ದೀಪಿಕಾ ಉರಿಯುತ್ತಿರುವ ಬೆಂಕಿಯ ಮೂಲಕ ನಡೆಯುವುದು ಯುಗಾಂತರಗಳ ದೃಶ್ಯವಾಗಿದೆ” ಎಂದು ಬರೆದಿದ್ದಾರೆ.

ಈ ನಡುವೆ ‘ಕಲ್ಕಿ 2898 ಎಡಿ’ ಚಿತ್ರ ಥಿಯೇಟರ್ ಗಳಲ್ಲಿ ಬಿಡುಗಡೆಯಾದಾಗ ಚಿತ್ರತಂಡ ಚಲನಚಿತ್ರದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳದಂತೆ ಅಭಿಮಾನಿಗಳಲ್ಲಿ ವಿನಂತಿಸಿದ್ದರು. ಈ ಚಿತ್ರ 4 ವರ್ಷಗಳ ಸುದೀರ್ಘ ಪ್ರಯಾಣ ಮತ್ತು ಇದು ನಾಗ್ ಅಶ್ವಿನ್ ಮತ್ತು ತಂಡದ ಅಪಾರ ಪರಿಶ್ರಮದ ಕಥೆಯಾಗಿದೆ.

Deepika Padukone

ಇದನ್ನೂ ಓದಿ: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

ಈ ಕಥೆಯನ್ನು ಜಾಗತಿಕ ಮಟ್ಟಕ್ಕೆ ತರುವಲ್ಲಿ ಯಾವುದೇ ಪ್ರಯತ್ನ ನಡೆದಿಲ್ಲ. ಇದನ್ನು ಮುಂದೆ ತರಲು ತಂಡವು ರಕ್ತ ಮತ್ತು ಬೆವರು ಹರಿಸಿದೆ. ಹಾಗಾಗಿ ದಯವಿಟ್ಟು ಸಿನಿಮಾವನ್ನು ಗೌರವಿಸೋಣ. ಅದಕ್ಕಾಗಿ ಸಿನಿಮಾ ತುಣುಕುಗಳನ್ನು ಹಂಚಿಕೊಳ್ಳಬೇಡಿ. ನಿಮಿಷದಿಂದ ನಿಮಿಷಕ್ಕೆ ಅಪ್ಡೇಟ್ ನೀಡಬೇಡಿ ಅಥವಾ ಪೈರಸಿಯಲ್ಲಿ ತೊಡಗಬೇಡಿ ಎಂದು ಕೇಳಿಕೊಂಡಿದ್ದರು. ಆದರೂ ಈ ಚಿತ್ರದ ಪ್ರಮುಖ ದೃಶ್ಯ ಸೋರಿಕೆಯಾಗಿರುವುದು ಬೇಸರವೇ ಸರಿ.

Continue Reading
Advertisement
baby Death
ತುಮಕೂರು32 mins ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest38 mins ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ42 mins ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ44 mins ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest44 mins ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Kalaburagi News
ಕರ್ನಾಟಕ45 mins ago

Kalaburagi News: ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

Kidnapping Case
ದೇಶ54 mins ago

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

kalaburagi Murder Case
ಕಲಬುರಗಿ60 mins ago

Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

Battlegrounds Mobile India
ಬೆಂಗಳೂರು1 hour ago

Battlegrounds Mobile India : ಬಿಜಿಎಮ್​ಐ ಜತೆ ಹೊಸ ಪಾಲುದಾರಿಕೆ ಮಾಡಿಕೊಂಡ ಕೆಎಫ್​​ಸಿ

Varalaxmi Sarathkumar invite PM Narendra Modi for wedding
ಸಿನಿಮಾ1 hour ago

Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ20 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌