ಪ್ರಮುಖ ಸುದ್ದಿ
Vishnuvardhan: ವಿಷ್ಣುವರ್ಧನ್ ಸ್ಮಾರಕವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ: ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ ಅಭಿಮಾನಿಗಳು
ಸಾಹಸ ಸಿಂಹ ವಿಷ್ಣುವರ್ಧನ್ (Vishnuvardhan ) ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದ್ದಾರೆ. ನಂತರ ಫೋಟೊ ಗ್ಯಾಲರಿ ವೀಕ್ಷಣೆ ಮಾಡಿ ವಿಷ್ಣುವರ್ಧನ್ ಅವರ 7 ಅಡಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದಾರೆ .
ಮೈಸೂರು: ಮೈಸೂರಿನ ಎಚ್.ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾಹಸ ಸಿಂಹ ವಿಷ್ಣುವರ್ಧನ್ ( Vishnuvardhan ) ಅವರ ಸ್ಮಾರಕವನ್ನು ಭಾನುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ಫೋಟೊ ಗ್ಯಾಲರಿ ವೀಕ್ಷಣೆ ಮಾಡಿ ವಿಷ್ಣುವರ್ಧನ್ ಅವರ 7 ಅಡಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು . ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ಪುತ್ರಿ ಕೀರ್ತಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ವಿಷ್ಣು ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಾತನಾಡಿ ʻʻವಿಷ್ಣುವರ್ಧನ್ ಒಬ್ಬ ಮೇರು ನಟ. ಹಲವಾರು ಭಾಷೆಗಳಲ್ಲಿ ನಟಿಸಿರುವ ನಟ. 200ಕ್ತಿಂತಲೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ನಂತರ ಸ್ಮಾರಕಕ್ಕೆ ಸ್ವಲ್ಪ ಗೊಂದಲಗಳು ಉಂಟಾಗಿತ್ತು. ಕೊನೆಗೆ ಮೈಸೂರಿನಲ್ಲಿ ಮಾಡಿದ್ದೇವೆ. ಈಗ 10 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣವಾಗಿದೆ. ಅವರ ಕುಟುಂಬ ಬಯಸಿದಂತೆ ಆಗಿದೆ. ಕಲೆ ಸಂಸ್ಕೃತಿ ಚಿತ್ರರಂಗ ಅದರ ಬಗ್ಗೆ ಆಸಕ್ತಿ ಇರುವವರು ಬಂದು ಅದನ್ನ ನೋಡಿ ಬಂದು ಕಲಿಯಲಿ ಎಂದು ಆಶಿಸುತ್ತೇನೆʼʼ ಎಂದು ಹೇಳಿಕೆ ನೀಡಿದರು.
ಇದನ್ನೂ ಓದಿ: Vishnuvardhan: ಸ್ಮಾರಕ ಜಾಗದಲ್ಲಿಆಲ್ ಇಂಡಿಯಾ ಫಿಲ್ಮ್ ಇನ್ಸ್ಟಿಟ್ಯೂಟ್ ಶಾಖೆ ತೆರೆಯುವುದರ ಬಗ್ಗೆ ಪ್ರಸ್ತಾಪಿಸಿದ ಅನಿರುದ್ಧ
ಮಾತು ಮುಂದುವರಿಸಿ ʻʻನಾನು ವಿಷ್ಣುವರ್ಧನ್ ಅಭಿಮಾನಿಯಾಗಿ ಬಂದಿದ್ದೇನೆ. ನಾಗರಹಾವು ಸಿನಿಮಾ ನೋಡಿದವರು ವಿಷ್ಣುವರ್ಧನ್ ಅಭಿಮಾನಿ ಆಗುತ್ತಾರೆ. ಯುವಕರು, ಸಾಹಸ, ಪೌರಾಣಿಕ ಪಾತ್ರ ಮಾಡಿದ್ದಾರೆ.
ನಾಲ್ಕು ದಶಕಗಳ ಕಾಲ ಸಾಹಸ ಸಿಂಹ ಆಗಿ ಮೆರೆದಿದ್ದಾರೆ. ಯಾವುದೇ ಪಾತ್ರ ನೀಡಿದರೂ ನೈಜವಾಗಿ ನಟಿಸಿದ್ದಾರೆ.
ವಿಷ್ಣು ಒಬ್ಬ ಭಾವುಕ ಜೀವಿ. ಮಾನವೀಯತೆ ಮೆರೆದವರು. ಕೊನೆಯ ಕಾಲದಲ್ಲಿ ಆಧ್ಯಾತ್ಮಿಕವಾಗಿ ಆಸಕ್ತಿ ಬೆಳೆಸಿಕೊಂಡರು. ಸ್ಮಾರಕ ನಿರ್ಮಿಸುವ ಸಂದರ್ಭದಲ್ಲಿ ದೊಡ್ಡ ವಿವಾದ ಆಯ್ತು. ಭಾರತಿಯವರು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನ ಕೈಗೊಂಡರು. ಯಡಿಯೂರಪ್ಪ ಸಿಎಂ ಆಗಿದ್ದಾಗ 11 ಕೋಟಿ ರೂ. ನೀಡಿದರು.
ಇದಕ್ಕಾಗಿ ಯಡಿಯೂರಪ್ಪ, ಬಿಜೆಪಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದನ್ನೂ ಓದಿ: Vishnuvardhan: ಸ್ಮಾರಕ ಸರ್ಕಾರದ ಯೋಜನೆ, ಲಾಭ, ನಷ್ಟ ಎರಡೂ ಸರ್ಕಾರಕ್ಕೆ ಸೇರಿದ್ದು: ನಟ ಅನಿರುದ್ಧ
ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹ
ವಿಷ್ಣು ಸ್ಮಾರಕ ಉದ್ಘಾಟನೆ ವೇಳೆ ಭಿತ್ತಿಪತ್ರ ಪ್ರದರ್ಶನ ವೇಳೆ ಬೋರ್ಡ್ ಹಿಡಿದು ವಿಷ್ಣು ಅಭಿಮಾನಿಗಳು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದ್ದಾರೆ . ಅನಿರುದ್ಧ್ ಅವರ ಭಾಷಣಕ್ಕೂ ಅಭಿಮಾನಿಗಳು ಅವಕಾಶ ನೀಡದ ಪರಿಸ್ಥಿತಿ ಉಂಟಾಗಿದೆ. ನಿಮ್ಮ ಭಿತ್ತಿಪತ್ರ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆ ಎಂದು ಅನಿರುದ್ಧ್ ಎಷ್ಟೇ ಕೇಳಿಕೊಂಡರು ಅಭಿಮಾನಿಗಳು ಭಿತ್ತಿಪತ್ರ ಕೆಳಗಿಳಿಸದೆ ಕಿರುಚಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ನಾನಾ ಕಾರಣಗಳಿಂದ ನನೆಗುದಿಯಲ್ಲಿತ್ತು. ಕೊನೆಗೂ ಮೈಸೂರಿನಲ್ಲಿ ಅನಾವರಣಗೊಂಡಿದೆ.ಇದೀಗ ದಾದಾ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ದೇಶ
Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ
Viral Video: ಬಾಡಿದ ತರಕಾರಿಯನ್ನು ರಾಸಾಯನಿಕಯುಕ್ತ ನೀರಿನಲ್ಲಿ ಮುಳುಗಿಸಿ, ಅದನ್ನು ಫ್ರೆಶ್ ಆಗಿ ಮಾಡಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದೇ ಹೇಳಲಾಗುತ್ತಿದೆ.
ನವದೆಹಲಿ: ಸಾಯಂಕಾಲ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ, ವಾಕಿಂಗ್ ಮುಗಿಸಿ ಹಿಂತಿರುಗುವಾಗ, ಹೆಂಡತಿ ಒತ್ತಾಯ ಮಾಡಿದಳೋ ಎಂದು ಮನೆಗೆ ತರಕಾರಿ ತೆಗೆದುಕೊಂಡು ಹೋಗುತ್ತೀರಿ. ತರಕಾರಿ ಮಾರುವವರೂ ಅಷ್ಟೇ, ಈಗಷ್ಟೇ ತೋಟದಿಂದ ಮಾರುಕಟ್ಟೆಗೆ ಬಂದಿದೆ, ತರಕಾರಿ ಫ್ರೆಶ್ ಇದೆ ಎಂದು ಕೊಡುತ್ತಾರೆ. ನೀವೂ ನೋಡುತ್ತೀರಿ, ಫ್ರೆಶ್ ಇರುವುದನ್ನು ದೃಢಪಡಿಸಿಕೊಳ್ಳುತ್ತೀರಿ ಹಾಗೂ ಖರೀದಿಸುತ್ತೀರಿ. ಆದರೆ, ಹುಷಾರ್, ಬಹುತೇಕ ಸಂದರ್ಭಗಳಲ್ಲಿ ನೀವು ಖರೀದಿಸಿದ ತರಕಾರಿ ನೈಸರ್ಗಿಕವಾಗಿ ಫ್ರೆಶ್ ಆಗಿದ್ದಲ್ಲ, ಅದು ರಾಸಾಯನಿಕದಿಂದ (Viral Video) ಫ್ರೆಶ್ ಆಗಿರುತ್ತದೆ.
ಹೌದು, ಬೆಳಗ್ಗೆಯೇ ಮಾರುಕಟ್ಟೆಗೆ ಬಂದ, ಸಂಜೆಯಾಗುತ್ತಲೇ ಬಾಡಿದ ತರಕಾರಿಯನ್ನು ಫ್ರೆಶ್ ಆಗಿ ಕಾಣುವ, ಯಾರು ನೋಡಿದರೂ, ಒಂದೇ ನೋಟಕ್ಕೆ ಖರೀದಿಸುವ ರೀತಿಯಲ್ಲಿ ಕೆಮಿಕಲ್ ಮಿಶ್ರಿತ ನೀರಿನಲ್ಲಿ ಮುಳುಗಿಸಿ ತೆಗೆಯಲಾಗುತ್ತದೆ. ರಾಸಾಯನಿಕದ ಪರಿಣಾಮದಿಂದಾಗಿ, ಯಾವುದೇ ಬಾಡಿದ ಸೊಪ್ಪು, ತರಕಾರಿ ಫ್ರೆಶ್ ಆಗಿ ಕಾಣುತ್ತದೆ. ಹೀಗೆ ರಾಸಾಯನಿಕದಿಂದ ತರಕಾರಿಯನ್ನು ಫ್ರೆಶ್ ಆಗಿ ಮಾಡುವ ವಿಡಿಯೊವನ್ನು ಅಮಿತ್ ತಧಾನಿ ಎಂಬುವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ವಿಡಿಯೊ ವೈರಲ್ ಆಗಿದೆ.
ಇಲ್ಲಿದೆ ಭಯಾನಕ ವಿಡಿಯೊ
ಪೂರ್ತಿಯಾಗಿ ಬಾಡಿದ, ತಿನ್ನಲು ಸಾಧ್ಯವಾಗದ ತರಕಾರಿಯನ್ನು ಮಾರಾಟಗಾರರು ರಾಸಾಯನಿಕದಲ್ಲಿ ಮುಳುಗಿಸಿ ತೆಗೆಯುತ್ತಾರೆ. ಕೆಲವೇ ಸೆಕೆಂಡ್ಗಳಲ್ಲಿ ಆ ತರಕಾರಿ ಹಸಿರಾಗಿ, ತಾಜಾ ತರಕಾರಿಯಂತೆ ಕಾಣುತ್ತದೆ. ಇಂತಹ ತರಕಾರಿಯನ್ನು ತಿಂದರೆ, ರಾಸಾಯನಿಕ ದೇಹ ಸೇರಿ ಅನಾರೋಗ್ಯಕ್ಕೀಡಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ತರಕಾರಿ ಖರೀದಿಸುವಾಗ ಜನ ಎಚ್ಚರಿಕೆಯಿಂದ ಇರಬೇಕು ಎಂದೂ ಸಲಹೆ ನೀಡಲಾಗುತ್ತಿದೆ. ಆದರೆ, ಯಾವುದೇ ತರಕಾರಿಯನ್ನು ರಾಸಾಯನಿಕಯುಕ್ತವೋ, ಅಲ್ಲವೋ ಎಂಬುದನ್ನು ಹೇಗೆ ಗುರುತಿಸಬೇಕು ಎಂಬುದೇ ಗೊಂದಲ ಮೂಡಿಸಿದೆ.
ಅಮಿತ್ ತಧಾನಿ ಅವರು ಶೇರ್ ಮಾಡಿದ ವಿಡಿಯೊವನ್ನು 4.76 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ. “ಇದು ತುಂಬ ಭಯ ಹುಟ್ಟಿಸುವ ವಿಡಿಯೊ. ಇಂತಹ ನಕಲಿ ತರಕಾರಿಯನ್ನು ಗುರುತಿಸುವುದು ಹೇಗೆ? ಸಾಮಾನ್ಯವಾಗಿ ಮನೆಯಲ್ಲಿ ತರಕಾರಿಯನ್ನು ತೊಳೆದು ಅಡುಗೆ ಮಾಡುತ್ತೇವೆ. ಆದರೆ, ಇನ್ನು ಮುಂದೆ ಸಾಬೂನು ಹಾಕಿ ತೊಳೆಯಬೇಕೆ” ಎಂಬುದಾಗಿ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ತರಕಾರಿ ಯಾವುದರಲ್ಲಿ ತೊಳೆಯಬೇಕು?
ಮತ್ತೊಬ್ಬರು ಪ್ರತಿಕ್ರಿಯಿಸಿ, “ನಿಮಗೆ ಪರಿಚಯ ಇದ್ದವರಲ್ಲಿ ಮಾತ್ರ ತರಕಾರಿ ಖರೀದಿಸಿ. ಅದನ್ನೂ ಮನೆಗೆ ತಂದಾಗ ಚೆನ್ನಾಗಿ ತೊಳೆಯಿರಿ. ಮನೆಯಲ್ಲಿ ಸ್ವಲ್ಪ ಜಾಗವಿದ್ದರೂ ನೀವೇ ತರಕಾರಿ ಬೆಳೆಯಿರಿ. ಇದರಿಂದ ಆರೋಗ್ಯ ಸುಧಾರಿಸುತ್ತದೆ” ಎಂದು ಸಲಹೆ ನೀಡಿದ್ದಾರೆ. ಇದುವರೆಗೆ ರಾಸಾಯನಿಕ ಬಳಸಿ ಬಾಳೆ ಸೇರಿ ಹಲವು ರೀತಿಯ ಕಾಯಿಗಳನ್ನು ಹಣ್ಣು ಮಾಡಲಾಗುತ್ತಿತ್ತು. ಈಗ ತರಕಾರಿಗೂ ಇದೇ ಪದ್ಧತಿ ರೂಢಿಯಾಗಿರುವುದು ಜನರ ಆತಂಕ ಹೆಚ್ಚಿಸಿದೆ.
ಇದನ್ನೂ ಓದಿ: Viral Video : ಮಾರುದ್ದದ ವಿಷಕಾರಿ ಹಾವನ್ನು ಕೈನಲ್ಲಿ ಹಿಡಿದು ವಿಡಿಯೊ ಮಾಡಿದ ವ್ಯಕ್ತಿ; ಇಲ್ಲಿದೆ ನೋಡಿ ವೈರಲ್ ವಿಡಿಯೊ
ಗ್ಯಾಜೆಟ್ಸ್
HP Pavilion Aero 13 ಲ್ಯಾಪ್ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?
ಭಾರತೀಯ ಮಾರುಕಟ್ಟೆಗೆ ಮತ್ತೊಂದು ಹೊಸ ಲ್ಯಾಪ್ಟಾಪ್ ಲಾಂಚ್ ಆಗಿದೆ. ಸಾಕಷ್ಟು ಹೊಸ ಫೀಚರ್ಸ್ಗಳೊಂದಿಗೆ HP Pavilion Aero 13 ಲ್ಯಾಪ್ಟ್ಯಾಪ್ ಗಮನ ಸೆಳೆಯುತ್ತಿದೆ.
ಬೆಂಗಳೂರು: ಎಚ್ಪಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಪೆವಿಲಿಯನ್ ಏರೋ 13 (HP Pavilion Aero 13) ಲ್ಯಾಪ್ಟ್ಯಾಪ್ಗಳನ್ನು ಮಂಗಳಾರ ಬಿಡುಗಡೆ ಮಾಡಿದೆ. ಶಕ್ತಿಯುತ ಕಾರ್ಯಕ್ಷಮತೆಗಾಗಿ AMD Ryzen™ 7 ಪ್ರೊಸೆಸರ್ ಮತ್ತು Radeon™ ಗ್ರಾಫಿಕ್ಸ್ ಒಳಗೊಂಡಿದೆ. GenZ ಮತ್ತು ಈ ಸಹಸ್ರಮಾನದ ಆಧುನಿಕ ಗ್ರಾಹಕರಿಗಾಗಿ ಈ ಸಾಧನವನ್ನು ನಿರ್ಮಿಸಲಾಗಿದೆ. ಯಾವುದೇ ಸಮಯ ಅಥವಾ ಸ್ಥಳದಲ್ಲಿ ಉತ್ಪಾದಕವಾಗಿ ಕೆಲಸ ಮಾಡಲು ಮತ್ತು ಕಲಿಯಲು ಅನುವು ಮಾಡಿಕೊಡುತ್ತದೆ.
ಆಧುನಿಕ ಜಗತ್ತಿನಲ್ಲಿ, ಬಹುಮುಖವಾದ ಹಲವು ಕಾರ್ಯಗಳನ್ನು ಮಾಡಬಲ್ಲ, ಕೆಲಸ ಮತ್ತು ಕಲಿಕೆ ಎರಡನ್ನೂ ನಿಭಾಯಿಸಬಲ್ಲ ಸಾಧನಗಳನ್ನು ಗ್ರಾಹಕರು ಅರಸುತ್ತಿರುತ್ತಾರೆ. ಹೈಬ್ರಿಡ್ ಕಾರ್ಯಶೈಲಿಗೆ ಸರಿಹೊಂದುವಂತೆ ಈ ಸಾಧನಗಳು ಹಗುರವಾಗಿರಬೇಕು ಮತ್ತು ಯುವ ಪೀಳಿಗೆಯ ಆದ್ಯತೆಗಳನ್ನು ಪೂರೈಸುವಂತೆ ಆಕರ್ಷಕವಾಗಿರಬೇಕು. ಹೊಚ್ಚ-ಹೊಸ HP ಪೆವಿಲಿಯನ್ ಏರೋ 13 ಲ್ಯಾಪ್ಟಾಪ್ Wi-Fi6 ಜತೆಗೆ ವೇಗದ ಮತ್ತು ವಿಶ್ವಾಸಾರ್ಹ ಸಂಪರ್ಕವನ್ನು ಹೊಂದಿದೆ. 10.5 ಗಂಟೆಗಳವರೆಗೆ ಬ್ಯಾಟರಿ ಬಾಳಿಕೆ ಇದ್ದು, ಯಾವುದೇ ಸ್ಥಳದಿಂದ ಕೆಲಸ, ಬ್ರೌಸಿಂಗ್ ಮತ್ತು ಸ್ಟ್ರೀಮಿಂಗ್ ಮಾಡಲು ಸೂಕ್ತವಾಗಿದೆ.
400 ನಿಟ್ಸ್ ಪ್ರಕಾಶಮಾನವಾದ ಮತ್ತು 16:10 ಆಕಾರ ಅನುಪಾತದಗ ಸ್ಕ್ರೀನ್ ಬಳಕೆದಾರರಿಗೆ ತಲ್ಲೀನಗೊಳಿಸುವ ವೀಕ್ಷಣೆಯ ಅನುಭವವನ್ನು ನೀಡುತ್ತದೆ. HP ಪೆವಿಲಿಯನ್ ಏರೋ 13 ಕೇವಲ 970 ಗ್ರಾಂ ಭಾರವಿದ್ದು, GenZ ಗಳು ಮತ್ತು ಈ ಸಹಸ್ರಮಾನದ ಯುವಜನರಿಗೆ ಪೋರ್ಟಬಿಲಿಟಿಯನ್ನು ಸಕ್ರಿಯಗೊಳಿಸುತ್ತದೆ. ಇದು ಅವರ ಶೈಲಿ ಮತ್ತು ಜೀವನಶೈಲಿಗೆ ಹೊಂದಿಕೊಳ್ಳಲು ಮೂರು ವಿಶಿಷ್ಟ ಬಣ್ಣಗಳಲ್ಲಿದೆ – ಪೇಲ್ ರೋಸ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್.
HP ಇಂಡಿಯಾ ಪರ್ಸನಲ್ ಸಿಸ್ಟಮ್ಸ್ ಹಿರಿಯ ನಿರ್ದೇಶಕ ವಿಕ್ರಮ್ ಬೇಡಿ ಮಾತನಾಡಿ, “ಪಿಸಿಗಳು ಹೈಬ್ರಿಡ್ ಪರಿಸರದಲ್ಲಿ ಜನರ ಜೀವನದ ಪ್ರಮುಖ ಅಂಶಗಳಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಬಹುಮುಖ ಮತ್ತು ಶಕ್ತಿಯುತ ಕಂಪ್ಯೂಟಿಂಗ್ ಪರಿಹಾರಗಳಿಗಾಗಿ ವೃದ್ಧಿಸುತ್ತಿರುವ ಬೇಡಿಕೆಯನ್ನು ಪೂರೈಸಲು HP ವಿನ್ಯಾಸಗೊಳಿಸಿದ ಹೊಸ ಪೆವಿಲಿಯನ್ ಏರೋ 13 ಲ್ಯಾಪ್ಟಾಪ್ ಪರಿಚಯಿಸಲು ನಾವು ಹೆಮ್ಮೆಪಡುತ್ತೇವೆ. ಇದು ಅಸಾಧಾರಣ ಕಾರ್ಯಕ್ಷಮತೆ ಮತ್ತು ಚಲನಶೀಲತೆಯನ್ನು ನೀಡುತ್ತದೆ, ಬಳಕೆದಾರರು ಪ್ರಯಾಣಿಸುತ್ತಿರುವಾಗಲೂ ಉತ್ಪಾದಕವಾಗಿರಲು ಮತ್ತು ಮನೋರಂಜನೆಯನ್ನು ಪಡೆಯಲು ಅನುವು ಮಾಡಿಕೊಡುತ್ತದೆ. HP ಪೆವಿಲಿಯನ್ ಏರೋ 13 ಆಕರ್ಷಕವಾದ ಪ್ರೀಮಿಯಂ ಲ್ಯಾಪ್ಟಾಪ್ ಆಗಿದೆ. ಕೆಲಸ ಮತ್ತು ಗೇಮಿಂಗ್ – ಎರಡೂ ವಿಷಯಗಳಲ್ಲಿ ಬಳಕೆದಾರರಿಗೆ ಅಸಾಧಾರಣವಾಗಿ ಆಪ್ತವಾಗುತ್ತದೆ.
ಹೈಬ್ರಿಡ್ ಪರಿಸರಕ್ಕೆ ಅನುಗುಣವಾಗಿ ಉನ್ನತ ದರ್ಜೆಯ ಕಾರ್ಯಕ್ಷಮತೆಯನ್ನು ನೀಡುವಂತೆ ಹಗುರವಾದ ಆದರೆ ಶಕ್ತಿಶಾಲಿಯಾದ HP ಪೆವಿಲಿಯನ್ ಏರೋ 13 ರೂಪಿಸಲಾಗದೆ. ಕೆಲಸ ಮಾಡಲು ಅಥವಾ ಸ್ನೇಹಿತರ ಜತೆಗೆ ಸ್ಪಷ್ಟವಾದ ವೀಡಿಯೋ ಕರೆಗಳನ್ನು ಮಾಡಲು ಮತ್ತು ಅನಗತ್ಯವಾದ ಹಿನ್ನೆಲೆಯ ಗದ್ದಲವನ್ನು ನಿವಾರಿಸುವ ಸೌಕರ್ಯವನ್ನು ಹೊಂದಿದೆ. 100% sRGB ಸಹಿತವಾದ ವಿಶಾಲವಾದ ಕಲರ್ ಪ್ಯಾಲೆಟ್ ವೆಬ್ನಲ್ಲಿ ಸರ್ಫ್ ಮಾಡುವಾಗ ಮತ್ತು ವೀಡಿಯೋಗಳನ್ನು ಸ್ಟ್ರೀಮ್ ಮಾಡುವಾಗ ಹೆಚ್ಚು ರೋಮಾಂಚಕ ಚಿತ್ರಗಳ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಫ್ಲಿಕರ್-ರಹಿತವಾದ ಪರದೆಯು ದಿನವಿಡೀ ಕೆಲಸ ಮಾಡಲು ಮತ್ತು ರಾತ್ರಿಯಿಡೀ ಆಟವಾಡಲು ಸೌಕರ್ಯ ನೀಡುವುದು HP ಪೆವಿಲಿಯನ್ ಏರೋ ವಿಶೇಷತೆಯಾಗಿದೆ. ಹೆಚ್ಚುವರಿಯಾಗಿ, 2.5k ರೆಸಲ್ಯೂಶನ್ ಸ್ಕ್ರೀನ್ ಮೇಲೆ ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಗಳನ್ನು ಮೂಡಿಸುತ್ತದೆ. ಇದನ್ನು 4-ಬದಿಗಳ ಕಿರಿದಾದ ಅಂಚಿನ ಸ್ಕ್ರೀನ್ ವೀಕ್ಷಣೆಗೆ ಇರುವ ಎಲ್ಲ ಅಡ್ಡಿಗಳನ್ನೂ ನಿವಾರಿಸುತ್ತದೆ.
ಸುಸ್ಥಿರತೆ ಮತ್ತು ಪರಿಸರ ರಕ್ಷಣೆಗೆ HP ಯ ಬದ್ಧತೆಗೆ ಅನುಗುಣವಾಗಿ HP ಪೆವಿಲಿಯನ್ ಏರೋ 13 ವಿನ್ಯಾಸಗೊಳಿಸಲಾಗಿದೆ. ಗ್ರಾಹಕರು ಬಳಸಿದ ಮರುಬಳಕೆಯ ಮತ್ತು ಸಾಗರದಿಂದ ಸಂಗ್ರಹಿಸಿದ ಪ್ಲಾಸ್ಟಿಕ್ನಿಂದ ನಿರ್ಮಿಸಲಾಗಿದೆ. VOC ಹೊರಸೂಸುವಿಕೆ ತಗ್ಗಿಸಲು ನೀರು-ಆಧಾರಿತ ಬಣ್ಣವನ್ನು ಬಳಸಲಾಗಿದೆ.
HP ಪೆವಿಲಿಯನ್ ಏರೋ 13 ವಿಶೇಷತೆಗಳೇನು?
ಡಿಸ್ಪ್ಲೇ ಹೇಗಿದೆ?
• 16:10 ಆಕಾರ ಅನುಪಾತದೊಂದಿಗೆ HP ಯ ಪ್ರಥಮ ಪೆವಿಲಿಯನ್ ಲ್ಯಾಪ್ಟಾಪ್
• ತಡೆರಹಿತ ಬ್ರೌಸಿಂಗ್ ಅನುಭವಕ್ಕಾಗಿ 400 ನಿಟ್ಗಳಷ್ಟು ಪ್ರಕಾಶಮಾನ ಡಿಸ್ಪ್ಲೇ
• ಫ್ಲಿಕರ್-ರಹಿತ ಪರದೆ
• ವೀಕ್ಷಣೆಯ ಅಡ್ಡಿಗಳನ್ನು ನಿವಾರಿಸಲು 4-ಬದಿ ಕಿರಿದಾದ ಅಂಚಿನ ಡಿಸ್ಪ್ಲೇ
• ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಕ್ಕಾಗಿ 2.5k ರೆಸಲ್ಯೂಶನ್
• ಬಿಸಿಲಿನಲ್ಲೂ ಬ್ರೌಸಿಂಗ್ ಮಾಡುವುದಕ್ಕಾಗಿ 400 ನಿಟ್ಸ್ ಪ್ರಕಾಶ
• 100% sRGB ಯೊಂದಿಗೆ ವಿಶಾಲ ಕಲರ್ ಪ್ಯಾಲೆಟ್
ಕಾರ್ಯಕ್ಷಮತೆ
• ಸುಗಮ ಕಾರ್ಯಕ್ಷಮತೆಗಾಗಿ AMD Ryzen™ 7000 ಸರಣಿಯ ಪ್ರೊಸೆಸರ್, Radeon™ ಗ್ರಾಫಿಕ್ಸ್
• Wi-Fi 6 ಜೊತೆಗೆ ವಿಶ್ವಾಸಾರ್ಹ ಮತ್ತು ವೇಗದ ಸಂಪರ್ಕ
• ತಡೆರಹಿತ ಕಲಿಕೆ ಮತ್ತು ಕೆಲಸಕ್ಕಾಗಿ 10.5 ಗಂಟೆಗಳ ಬ್ಯಾಟರಿ ಬಾಳಿಕೆ
• ಉತ್ತಮ ವೀಡಿಯೊ ಕರೆಗಳಿಗಾಗಿ AI ನಾಯ್ಸ್ ರಿಮೂವಲ್ ಸೌಕರ್ಯ
• ಕಾರ್ಯಗಳ ಬೇಡಿಕೆಯನ್ನು ನಿರ್ವಹಿಸಲು DDR5 RAM
ವಿನ್ಯಾಸ
• ಕೇವಲ 970 ಗ್ರಾಂ ಭಾರವಿದ್ದು, ಪೋರ್ಟಬಿಲಿಟಿಯನ್ನು ಖಚಿತಪಡಿಸುತ್ತದೆ.
• ಮೂರು ಬಣ್ಣಗಳಲ್ಲಿ ಲಭ್ಯವಿದೆ – ರೋಸ್ ಪೇಲ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್
ಬೆಲೆ ಮತ್ತು ಲಭ್ಯತೆ
• HP Pavilion Aero 13 (Ryzen 5 ಸಹಿತ) 72,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ
• HP Pavilion Aero 13 (Ryzen 7 ಸಹಿತ) 1TB SSD 82,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.
ಕರ್ನಾಟಕ
Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್ ಸಿಗುವುದು ಡೌಟು ಎಂದ ಕಾಂಗ್ರೆಸ್
ನಿರುದ್ಯೋಗಿ ಯುವಕರಿಗೆ ಮಾಸಿಕೆ ಭತ್ಯೆ ನೀಡುವ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಮೊದಲಿಗೆ ರಾಹುಲ್ ಗಾಂಧಿಯವರಿಂದಲೇ ಆರಂಭಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದರು.
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವಕರಿಗೆ ಮಾಸಿಕ ನುರುದ್ಯೋಗ ಭತ್ಯೆ ನೀಡುವ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೇ ಚುನಾವಣೆ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್ ಹೇಳಿದೆ.
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ಮೂರು ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ ಮಾಸಿಕ ಒಂದೂವರೆ ಸಾವಿರ ರೂ. ನೀಡುವುದಾಗಿ ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದರು. ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ್ದ ಬೊಮ್ಮಾಯಿ, ಈ ಯೋಜನೆಯನ್ನು ಮೊದಲಿಗೆ ರಾಹುಲ್ ಗಾಂಧಿಯವರಿಂದಲೇ ಆರಂಭಿಸಬೇಕು. ನಿರುದ್ಯೋಗಿಗಳಿಗೆ ಭತ್ಯೆ ಬಗ್ಗೆ ರಾಜಸ್ಥಾನ, ಛತ್ತೀಸ್ಗಢದಲ್ಲಿಯೂ ಹೇಳಿದ್ದರು. ಆದರೆ ಅನುಷ್ಠಾನವಾಗಿಲ್ಲ. ಅವರು ಹತಾಶರಾಗಿದ್ದಾರೆ. ಅವರಿಗೆ ಆಂತರಿಕ ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದಿದೆ. ಶೇ 3-4 ರಷ್ಟು ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ಥಾನ ಅಥವಾ ಛತ್ತೀಸ್ಗಢ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಸ್ವತಃ ತಮಗೇ ಬಿಜೆಪಿಯ ಟಿಕೆಟ್ ಸಿಗುವ ಭರವಸೆ ಇಲ್ಲದ, ಟಿಕೆಟ್ ಸಿಕ್ಕರೂ ಗೆಲ್ಲುವ ಭರವಸೆ ಇಲ್ಲದ, ಗೆದ್ದರೂ ತಾವೇ ಸಿಎಂ ಹುರಿಯಾಳು ಎಂಬ ಭರವಸೆ ಇಲ್ಲದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನೀಡಿದ ಯುವನಿಧೀ ಯೋಜನೆಯ ಭರವಸೆಯನ್ನು ಟೀಕಿಸುವುದು ಹಾಸ್ಯಾಸ್ಪದ. ಬೊಮ್ಮಾಯಿಯವರೇ, ನೀವು ಕೈಲಾಗದವರಿರಬಹುದು, ಕಾಂಗ್ರೆಸ್ಗೆ ಎಲ್ಲವೂ ಸಾಧ್ಯ” ಎಂದಿದೆ.
ಕರ್ನಾಟಕ
Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್ಗೆ ಈಗ ಖಾದ್ರಿ ಸಂಕಟ!
ಸಿಎಂ ಬೊಮ್ಮಾಯಿ ಅವರನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ರೂಪಿಸಿರುವ ಪ್ಲ್ಯಾನ್ ತಿರುಗುಬಾಣವಾಗುವ ಅಪಾಯವಿದೆ. ಅಜ್ಜಂಪೀರ್ ಖಾದ್ರಿ ಅವರೇ ಇಲ್ಲೀಗ ನಿರ್ಣಾಯಕ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಮತ ಕ್ಷೇತ್ರದಲ್ಲಿ ಕಳೆದ ಮೂರು ಅವಧಿಗಳಿಂದ ಗೆಲ್ಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರಿಗೆ ಚಮಕ್ ನೀಡಲು ಮುಂದಾಗಿರುವ ಪ್ಲ್ಯಾನ್ ಈಗ ಕಾಂಗ್ರೆಸ್ಗೇ ತಿರುಗುಬಾಣವಾಗುವ ಪರಿಸ್ಥಿತಿ ಎದುರಾಗಿದೆ.
ಶಿಗ್ಗಾಂವಿಯಲ್ಲಿ ಖಡಾಖಡಿ ಹೋರಾಟವನ್ನು ನೀಡುವ ಮೂಲಕ ಬೊಮ್ಮಾಯಿ ಅವರನ್ನು ಅವರ ಕ್ಷೇತ್ರದಿಂದ ಹೊರಬರದಂತೆ ಕಟ್ಟಿಹಾಕುವ ಪ್ರಯತ್ನವನ್ನು ಬಿಜೆಪಿ ನಡೆಸಿದೆ. ಬೊಮ್ಮಾಯಿಗೆ ಕಠಿಣ ಸ್ಪರ್ಧೆ ನೀಡಲು ಮಾಜಿ ಸಚಿವ ವಿನಯ ಕುಲಕರ್ಣಿ ಅವರೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿರುವ ನಾಯಕರು ಅವರನ್ನು ಹೇಗೋ ಮನವೊಲಿಸಿ ಒಪ್ಪಿಸಿದ್ದಾರೆ. ಆದರೆ, ಈಗ ಶಿಗ್ಗಾಂವಿಯಲ್ಲಿ ಇದುವರೆಗೂ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ತಿರುಗಿಬಿದ್ದಿದ್ದಾರೆ. ತನಗೆ ಟಿಕೆಟ್ ನೀಡದೆ ಹೋದರೆ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಖಾದ್ರಿ ಹೇಳಿರುವುದು ಕಾಂಗ್ರೆಸ್ಗೆ ಬಿಸಿ ತುಪ್ಪವಾದಂತಾಗಿದೆ.
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೇಸ್ ಟಿಕೆಟ್ ಬಯಸಿ 14 ಜನರು ಅರ್ಜಿ ಸಲ್ಲಿಕೆ ಮಾಡಿದ್ದರು. ಅಲ್ಪಸಂಖ್ಯಾತ ಕೋಟಾದಡಿ ಸತತ ಮೂರು ಸಲ ಟಿಕೆಟ್ ಪಡೆದು ಬೊಮ್ಮಾಯಿ ವಿರುದ್ಧ ಸೋತಿದ್ದ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಈ ಸಲವೂ ಟಿಕೆಟ್ಗಾಗಿ ಕಸರತ್ತು ನಡೆಸಿದ್ದಾರೆ.
ಆದರೆ, ಈ ಬಾರಿ ಅಲ್ಪಸಂಖ್ಯಾತ ಅಸ್ತ್ರದ ಬದಲು ಪಂಚಮಸಾಲಿ ಅಸ್ತ್ರ ಪ್ರಯೋಗಕ್ಕೆ ಕಾಂಗ್ರೆಸ್ ಮುಂದಾಗಿದೆ. ಅಲ್ಪಸಂಖ್ಯಾತರು ಹೇಗಿದ್ದರೂ ಕಾಂಗ್ರೆಸ್ಗೆ ಮತ ಹಾಕುತ್ತಾರೆ. ಅವರ ಜತೆ ಪಂಚಮಸಾಲಿಗಳ ಮತವೂ ಸೇರಿದರೆ ಬೊಮ್ಮಾಯಿ ಅವರನ್ನು ಸೋಲಿಸಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಪ್ರಬಲ ನಾಯಕ ವಿನಯ ಕುಲಕರ್ಣಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಲು ಮನವಿ ಒಲಿಸಿದೆ. ಕೆಲವು ದಿನಗಲ ಹಿಂದೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯ ವಿನಯ ಕುಲಕರ್ನಿ ಜೊತೆ ಕೈ ನಾಯಕರು ಮಾತುಕತೆ ನಡೆಸಿದ್ದರು.
ವಿನಯ ಕುಲಕರ್ಣಿ ಅವರ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಕೈ ನಾಯಕರಿಗೆ ಶಾಕ್ ನೀಡಿದ್ದಾರೆ. ಶಿಗ್ಗಾಂವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದಾರೆ.
ಈ ನಡುವೆ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ತಡರಾತ್ರಿಯವರೆಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿ ಮನ ಒಲಿಸಲು ಕಸರತ್ತು ನಡೆಸಿದರಾದರೂ ಅದರಲ್ಲಿ ಸಫಲರಾಗಿಲ್ಲ. ಖಾದ್ರಿ ಅವರು ಸಿದ್ದರಾಮಯ್ಯ ಬೆಂಬಲಿಗರಾಗಿರುವುದರಿಂದ ಜಮೀರ್ ಅಹ್ಮದ್ ಅವರಿಗೆ ಮನವೊಲಿಕೆ ಜವಾಬ್ದಾರಿಯನ್ನು ನೀಡಲಾಗಿದೆ.
ಖಾದ್ರಿ ಅವರು ಕಳೆದ ಮೂರು ಚುನಾವಣೆಗಳಲ್ಲಿ ಬೊಮ್ಮಾಯಿ ವಿರುದ್ಧ ಸೋಲು ಕಾಣುತ್ತಿದ್ದಾರೆ. ಇಲ್ಲಿ ಕಾಂಗ್ರೆಸ್ ಕೊನೆಯ ಬಾರಿಗೆ ಗೆದ್ದಿದ್ದು 1994ರಲ್ಲಿ. ಮಂಜುನಾಥ ಕೊನ್ನೂರು ಅವರು ಆಗ ಶಾಸಕರಾಗಿದ್ದರು.
ಖಾದ್ರಿ ಅವರು 1998ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. 2004ರಲ್ಲಿ ಸಿಂಧೂರ ರಾಜಶೇಖರ್ ಇಲ್ಲಿಗೆ ಪಕ್ಷೇತರರಾಗಿ ಗೆಲುವು ಪಡೆದಿದ್ದರು. ಬಳಿಕ ಗೆದ್ದಿದ್ದೆಲ್ಲ ಬೊಮ್ಮಾಯಿ ಅವರೇ.
ಇಲ್ಲಿನ ಒಟ್ಟಾರೆ ಲೆಕ್ಕಾಚಾರ ಗಮನಿಸಿದರೆ ಕಾಂಗ್ರೆಸ್ ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡರೆ ಗೆಲ್ಲುವುದು ಕಷ್ಟ. ಹಾಗಾಗಿ ಅದು ಬೇರೆ ಲೆಕ್ಕಾಚಾರಕ್ಕೆ ಮುಂದಾಗಿದ್ದಾರೆ. ಆದರೆ, ಮುಸ್ಲಿಂ ಮತಗಳನ್ನು ಬಿಟ್ಟರೂ ಗೆಲುವು ಸುಲಭವಲ್ಲ. ಹೀಗಾಗಿ ಖಾದ್ರಿ ಅವರು ಪಕ್ಷೇತರರಾಗಿ ನಿಂತರೆ ಮುಸ್ಲಿಂ ಮತಗಳು ಒಡೆಯುವುದು ನಿಶ್ಚಿತ. ಹೀಗಾಗಿ ಅತ್ಯಂತ ಜಾಗರೂಕತೆಯಿಂದ ಪರಿಸ್ಥಿತಿ ನಿಭಾಯಿಸಬೇಕಾದ ಅಗತ್ಯ ಕಾಂಗ್ರೆಸ್ಗಿದೆ. ಖಾದ್ರಿ ಅವರು ಕಾಂಗ್ರೆಸ್ ಮನವೊಲಿಕೆಗೆ ಒಲಿಯುತ್ತಾರಾ ಎಂದು ಕಾದು ನೋಡಬೇಕು.
ಇದನ್ನೂ ಓದಿ : Basavaraj Bommai: ಎರಡು ತಿಂಗಳಲ್ಲಿ 13 ಬಾರಿ ತವರು ಕ್ಷೇತ್ರಕ್ಕೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ: ಶಿಗ್ಗಾಂವಿಯಲ್ಲಿ ಪ್ರಬಲ ಸ್ಪರ್ಧೆ
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ24 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್21 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್5 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ10 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ8 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ10 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ