Oscars 2023: RRR ಚಿತ್ರದ ಹಾಡಿಗೆ ಆಸ್ಕರ್ ಗೆದ್ದ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಸೋಲಿಲ್ಲದ ಸರದಾರ! - Vistara News

Oscars 2023

Oscars 2023: RRR ಚಿತ್ರದ ಹಾಡಿಗೆ ಆಸ್ಕರ್ ಗೆದ್ದ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಸೋಲಿಲ್ಲದ ಸರದಾರ!

ಭಾರತೀಯ ಸಿನಿಮಾ ಕ್ಷೇತ್ರವನ್ನು ಕೆ.ಬಾಲಚಂದರ್‌, ಗುರು ದತ್‌, ಸತ್ಯಜಿತ್‌ ರೇ, ಶ್ಯಾಮ್‌ ಬೆನಗಲ್‌ ಸೇರಿ ಹಲವರು ಸೇರಿ ಉನ್ನತ ಹಂತಕ್ಕೆ ಕೊಂಡೊಯ್ದಿದ್ದಾರೆ. ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಚಿತ್ರ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರು ಭಾರತೀಯ ಚಿತ್ರರಂಗವನ್ನು ಮತ್ತೊಂದು ಎತ್ತರಕ್ಕೆ ತಲುಪಿಸಿದ್ದಾರೆ.

VISTARANEWS.COM


on

SS Rajamouli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಬಿ.ಸೋಮಶೇಖರ್‌, ಬೆಂಗಳೂರು

ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ? Why Did Kattappa Kill Bahubali?

2015ರ ಅರ್ಧ ಭಾಗ (ಬಾಹುಬಲಿ 1 ಬಿಡುಗಡೆಯಾಗಿದ್ದು 2015ರ ಜುಲೈ 10), 2016 ಪೂರ್ತಿ ಹಾಗೂ 2017ರ ನಾಲ್ಕು ತಿಂಗಳು (ಬಾಹುಬಲಿ 2 ಬಿಡುಗಡೆಯಾಗಿದ್ದು 2017ರ ಏಪ್ರಿಲ್‌ 28) ದೇಶದ ಬಹುತೇಕ ಜನರ ತಲೆಯಲ್ಲಿ ಗುಂಯ್‌ಗುಡುತ್ತಿದ್ದ ಪ್ರಶ್ನೆ ಇದು. ‘ಈಗ’ ಸಿನಿಮಾ ಮೂಲಕ ಅದುವರೆಗೆ ಜನರ ಮನಸ್ಸಿನಲ್ಲಿ ‘ನೊಣ’ ಬಿಟ್ಟಿದ್ದ ಎಸ್‌.ಎಸ್‌.ರಾಜಮೌಳಿ, 2015ರಲ್ಲಿ ದೇಶದ ಪ್ರತಿಯೊಬ್ಬರ ಮೆದುಳಿನಲ್ಲಿಯೂ ಇಂತಹದ್ದೊಂದು ಪ್ರಶ್ನೆಯ ‘ಹುಳ’ ಬಿಟ್ಟಿದ್ದರು. ಅಷ್ಟೇ ಅಲ್ಲ, ಬಾಹುಬಲಿ ಪಾರ್ಟ್‌ 1 ಹಾಗೂ ಪಾರ್ಟ್‌ 2 ಮೂಲಕ ಸಿನಿಮಾ ನೋಡಿದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಅಚ್ಚಳಿಯದ ಸ್ಥಾನ ಪಡೆದರು. ಭಾರತದ ಸಿನಿಮಾ ರಂಗ, ಅದರಲ್ಲೂ, ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದ ಅಗ್ರ ನಿರ್ದೇಶಕರು ಯಾರು? ಯಾರು ದೇಶದ ಸಿನಿಮಾ ಕ್ಷೇತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಾರೆ ಎಂಬ ಪ್ರಶ್ನೆಗೂ ‘ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ’ ಎಂಬ ಒಂದೇ ಪ್ರಶ್ನೆಯ ಮೂಲಕ ರಾಜಮೌಳಿ ಎಂಬ ಸಿನಿಮಾ ಮಾಂತ್ರಿಕ ಉತ್ತರ ಕೊಟ್ಟಿದ್ದರು(Oscars 2023).

ಗಳಿಕೆ ಒತ್ತಟ್ಟಿಗಿರಲಿ, ಭಾರತೀಯ ಸಿನಿಮಾ ರಂಗವನ್ನು ಬಾಹುಬಲಿ ಮೊದಲಿನ ಹಾಗೂ ಬಾಹುಬಲಿ ನಂತರದ ಕಾಲಘಟ್ಟ ಎಂಬ ‘ಸಕಾರಾತ್ಮಕ ವಿಂಗಡಣೆ’ಯನ್ನು ಮಾಡಿದ್ದು ಇದೇ ರಾಜಮೌಳಿ. ಇಂತಹ ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ‘ನಾಟು ನಾಟು’ ಹಾಡು ಜಾಗತಿಕ ಮಟ್ಟದ ಗೋಲ್ಡನ್‌ ಗ್ಲೋಬ್ಸ್‌ ಪ್ರಶಸ್ತಿ ಪಡೆದಿದೆ. ಆ ಮೂಲಕ ಭಾರತದ ಸಿನಿಮಾಗಳು ವಿಮರ್ಶಾತ್ಮಕವಾಗಿ ಮಾತ್ರ ಹಿಟ್‌ ಆಗಿ, ಪ್ರಶಸ್ತಿ ಪಡೆಯುತ್ತವೆ ಎಂಬ ಮಾತನ್ನು ಸುಳ್ಳಾಗಿಸಿ, ಬಾಕ್ಸ್‌ ಆಫೀಸ್‌ನಲ್ಲೂ ಗೆದ್ದು, ಜಾಗತಿಕ ಮಟ್ಟದ ಪ್ರಶಸ್ತಿಯನ್ನೂ ಬಾಚಿಕೊಳ್ಳುತ್ತವೆ ಎಂಬುದನ್ನು ಎಸ್‌.ಎಸ್‌.ರಾಜಮೌಳಿ ಸಾಬೀತುಪಡಿಸಿದ್ದಾರೆ. ಇಂತಹ ಹೊತ್ತಿನಲ್ಲಿ ರಾಜಮೌಳಿ ಎಂಬ ಕೌತುಕ ಮನಸ್ಸಿನ ನಿರ್ದೇಶಕನ ಜೀವನದ ಅಂತರಾಳಕ್ಕೆ ಹೋಗದಿದ್ದರೆ ಹೇಗೆ ಹೇಳಿ?

ರಾಯಚೂರು ಮೂಲ, ಸಿನಿಮಾದಲ್ಲಿ ಹಿಂತಿರುಗಿ ನೋಡಲಿಲ್ಲ

ಸದ್ಯ ಜಗದ್ವಿಖ್ಯಾತರಾಗಿರುವ ಎಸ್‌.ಎಸ್‌.ರಾಜಮೌಳಿ ಅವರು ಹುಟ್ಟಿದ್ದು ಕರ್ನಾಟಕದ ಬಿಸಿಲ ನಾಡು ರಾಯಚೂರಿನ ಮಾನ್ವಿ ತಾಲೂಕಿನಲ್ಲಿ. ಆದರೆ, ಸ್ಟಾರ್‌ ಪಟ್ಟ ಗಳಿಸಿದ್ದು ಮಾತ್ರ ಟಾಲಿವುಡ್‌ನಲ್ಲಿ. 1973ರ ಅಕ್ಟೋಬರ್‌ 10ರಂದು ಜನಿಸಿದ ರಾಜಮೌಳಿ ಅವರ ತಂದೆ ಕೆ.ವಿ.ವಿಜಯೇಂದ್ರ ಪ್ರಸಾದ್‌ ಅವರು ಕೂಡ ನಿರ್ದೇಶಕರು. ಹಾಗಾಗಿ, ರಾಜಮೌಳಿ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಹೊಂದಲು ಕಾರಣವಾಯಿತು. ಕೊನೆಗೆ ಅದೇ ಸಿನಿಮಾ ಕ್ಷೇತ್ರವೇ ರಾಜಮೌಳಿ ಅವರನ್ನು ಜಗತ್ತಿಗೆ ಪರಿಚಯಿಸಿತು.

ತಂದೆ ನಿರ್ದೇಶಕರಾದರೂ, ಕುಟುಂಬದಲ್ಲಿ ಹಲವರು ಸಿನಿಮಾ ಕ್ಷೇತ್ರದಲ್ಲಿ ಇದ್ದರೂ ರಾಜಮೌಳಿ ಅವರಿಗೆ ಏಕಾಏಕಿ ಯಶಸ್ಸು ಸಿಗಲಿಲ್ಲ. ತಂದೆಯವರಿಗೇ ರಾಜಮೌಳಿ ಆರು ವರ್ಷ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ಧಾರಾವಾಹಿ ಶಾಂತಿ ನಿವಾಸಂಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಅವರಿಗೆ ನಿರ್ಮಾಪಕ ರಾಘವೇಂದ್ರ ರಾವ್‌ ಅವರು ಬ್ರೇಕ್‌ ಕೊಟ್ಟರು. ರಾಘವೇಂದ್ರ ರಾವ್‌ ಅವರ ಪ್ರೊಡಕ್ಷನ್‌ನ “ಸ್ಟುಡೆಂಟ್‌ ನಂಬರ್‌ 1ʼʼ ಚಿತ್ರದ ನಿರ್ದೇಶಕರಾಗಿ ರಾಜಮೌಳಿ ಅವರಿಗೆ ಅವಕಾಶ ಸಿಕ್ಕಿತು. ಜೂನಿಯರ್‌ ಎನ್‌ಟಿಆರ್‌ ನಟನೆಯ ಮೊದಲ ಸಿನಿಮಾವೇ ರಾಜಮೌಳಿ ಅವರಿಗೆ ಹೆಸರು ತಂದುಕೊಟ್ಟಿತು. 2001ರಲ್ಲಿ ಸಿನಿಮಾ 12 ಕೋಟಿ ರೂ. ಗಳಿಸುವ ಮೂಲಕ ಯಶಸ್ವಿ ಸಿನಿಮಾ ಎನಿಸಿತು.

ಜೂನಿಯರ್‌ ಎನ್‌ಟಿಆರ್‌, ರಾಜಮೌಳಿ ಜೋಡಿ ಮೋಡಿ

ಆರ್‌ಆರ್‌ಆರ್‌ ಸಿನಿಮಾ ನೋಡಿ ತುಂಬ ಜನ ಜೂನಿಯರ್‌ ಎನ್‌ಟಿಆರ್‌ ಹಾಗೂ ರಾಜಮೌಳಿಯದ್ದು ಅತ್ಯುತ್ತಮ ಜೋಡಿ ಎನ್ನುತ್ತಾರೆ. ಆದರೆ, 2003ರಲ್ಲಿಯೇ ಈ ಜೋಡಿ ಮೋಡಿ ಮಾಡಿತ್ತು. ಜೂನಿಯರ್‌ ಎನ್‌ಟಿಆರ್‌ ನಟನೆಯ ಸಿಂಹಾದ್ರಿ ಸಿನಿಮಾವನ್ನು ನಿರ್ದೇಶಿಸಿದ ರಾಜಮೌಳಿ, ತೆಲುಗು ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಆಗಿನ ಕಾಲಘಟ್ಟದಲ್ಲಿ ತೆಲುಗು ಇಂಡಸ್ಟ್ರಿಯಲ್ಲೇ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಖ್ಯಾತಿ ಸಿಂಹಾದ್ರಿಯದ್ದಾಯಿತು. 2004ರಲ್ಲಿ ತೆರೆ ಕಂಡ ಸೈ, 2005ರಲ್ಲಿ ಬಿಡುಗಡೆಯಾದ ಛತ್ರಪತಿ, ನಂತರ ಬಂದ ವಿಕ್ರಮಾರ್ಕುಡು, ಯಮದೊಂಗು ಸಿನಿಮಾಗಳು ಕೂಡ ಹೆಸರು ಗಳಿಸಿದವು.

ಆರ್‌ಆರ್‌, ದಿ ರೈಸ್‌ ಆಫ್‌ ರಾಜಮೌಳಿ

ಇಷ್ಟೆಲ್ಲ ಸಿನಿಮಾಗಳನ್ನು ನಿರ್ದೇಶಿಸಿದರೂ ರಾಜಮೌಳಿ ಅವರಿಗೆ ಆಂಧ್ರಪ್ರದೇಶದಾಚೆಗೆ ಹೆಸರು ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, 2009ರಲ್ಲಿ ತೆರೆ ಕಂಡ “ಮಗಧೀರʼʼ ಸಿನಿಮಾವು ರಾಜಮೌಳಿ ಅವರನ್ನು ದಕ್ಷಿಣ ಭಾರತಕ್ಕೆ ಪರಿಚಯಿಸಿತು. ರಾಮ್‌ ಚರಣ್‌ ಹಾಗೂ ಕಾಜಲ್‌ ಅಗರ್ವಾಲ್‌ ನಟನೆಯ, ಐತಿಹಾಸಿಕ ಹಿನ್ನೆಲೆಯುಳ್ಳ ಮಗಧೀರ ಸಿನಿಮಾವು 44 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿ, ದಾಖಲೆಯ 150 ಕೋಟಿ ರೂ. ಗಳಿಸಿತು. ರಾಜಮೌಳಿ ಅವರು ಮಗಧೀರ ಸಿನಿಮಾಗೆ ಬಳಸಿದ ವಿಎಫ್‌ಎಕ್ಸ್‌ ತಂತ್ರಜ್ಞಾನದ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು.

ನೊಣವನ್ನೇ ಹೀರೊ ಮಾಡಿದ ನಿರ್ದೇಶಕ

ಸಾಮಾನ್ಯವಾಗಿ, ಸ್ಟಾರ್‌ಗಿರಿ ಪಡೆದ ನಿರ್ದೇಶಕರು ಆರಡಿ ಎತ್ತರ, ಅತ್ಯುತ್ತಮ ದೇಹದಾರ್ಢ್ಯ, ಕಂಚಿನ ಕಂಠದವರನ್ನು ತಮ್ಮ ಸಿನಿಮಾಗಳಿಗೆ ಹೀರೊ ಆಗಿ ಆಯ್ಕೆ ಮಾಡುತ್ತಾರೆ. ಆದರೆ, ಮಗಧೀರದಂತಹ ಸಿನಿಮಾ ಮಾಡಿ, ಹೆಸರು ಗಳಿಸಿದ ರಾಜಮೌಳಿ, ‘ಈಗ’ ಸಿನಿಮಾ ಮೂಲಕ ಒಂದು ನೊಣವನ್ನು ತಂದು ಹೀರೊ ಮಾಡಿದರು. ಕನ್ನಡದ ಸುದೀಪ್‌ ಸಿನಿಮಾದ ವಿಲನ್‌ ಆಗಿ ಉತ್ತಮ ಹೆಸರು ಪಡೆದರು. ಆದರೂ, ಒಂದು ನೊಣವನ್ನು ಇಟ್ಟುಕೊಂಡು ಸಿನಿಮಾ ಮಾಡಬಹುದು ಎಂಬ ಕ್ರಿಯಾಶೀಲತೆಯನ್ನು ಮೆರೆದ ರಾಜಮೌಳಿ ಗೆದ್ದರು. ಸಿನಿಮಾವೂ ಗೆದ್ದಿತು.

ರಾಜಮೌಳಿ ಬಾಹುಬಲಿ

ಸಿಂಹಾದ್ರಿ ಸಿನಿಮಾ ಮಾಡಿ ಆಂಧ್ರಪ್ರದೇಶಕ್ಕೆ, ಮಗಧೀರ ಸಿನಿಮಾ ಮೂಲಕ ದಕ್ಷಿಣ ಭಾರತದಲ್ಲಿ ಪರಿಚಿತರಾಗಿದ್ದ ರಾಜಮೌಳಿ, ಬಾಹುಬಲಿ ಪಾರ್ಟ್‌ 1 ಮೂಲಕ ಭಾರತ ಮತ್ತು ಪಾರ್ಟ್‌ 2 ಮೂಲಕ ವಿಶ್ವಾದ್ಯಂತ ಪರಿಚಿತರಾದರು. ಭಾರತದ ನೆಲದ ಸಿನಿಮಾವೊಂದು ಜಗತ್ತಿನಲ್ಲಿ 2 ಸಾವಿರ ಕೋಟಿ ರೂ. ಗಳಿಸುತ್ತದೆ ಎಂಬುದನ್ನು ತೋರಿಸಿಕೊಟ್ಟ ರಾಜಮೌಳಿ ನಿಜವಾದ ಬಾಹುಬಲಿ ಎನಿಸಿದರು. ಬಾಹುಬಲಿ 1 ಹಾಗೂ 2ರ ಕತೆ, ಮೂಡಿಸಿದ ಕುತೂಹಲ, ವಿಎಫ್‌ಎಕ್ಸ್‌ ಬಳಕೆ, ಮೇಕಿಂಗ್‌ ಸೇರಿ ಭಾರತದ ಮಂದಿಗೆ, ಭಾರತದ ಸಿನಿಮಾದಲ್ಲಿಯೇ ಹಾಲಿವುಡ್‌ನಂತಹ ಮೇಕಿಂಗ್‌ ತೋರಿಸಿದ ಕೀರ್ತಿ ರಾಜಮೌಳಿ ಅವರಿಗೇ ಸಲ್ಲಬೇಕು.

ವಿವಾದಗಳಿಂದ ದೂರ, ನೆಲದ ಮೂಲವೇ ಆಧಾರ

ಬಾಲಿವುಡ್‌ ನಟ, ನಿರ್ದೇಶಕರಂತೆ ರಾಜಮೌಳಿ ಅವರು ವಿವಾದಾತ್ಮಕ ಹೇಳಿಕೆ ನೀಡುವುದಿಲ್ಲ, ಜನರನ್ನು ರೊಚ್ಚಿಗೆಬ್ಬಿಸುವುದಿಲ್ಲ. ಮೂರ್ನಾಲ್ಕು ವರ್ಷ ಸುಮ್ಮನಿರುವುದು, ಒಂದೊಳ್ಳೆ ಸಿನಿಮಾ ಮಾಡುವುದು, ಸಾವಿರಾರು ಕೋಟಿ ರೂ. ದೋಚಿಕೊಂಡು ಹೋಗುವುದಷ್ಟೇ ರಾಜಮೌಳಿ ಅವರ ತತ್ವವಾಗಿದೆ. ಹಾಗಾಗಿಯೇ, ಅವರು ವಿವಾದಗಳಿಂದ ದೂರವಿದ್ದಾರೆ. ಇನ್ನು, ರಾಜಮೌಳಿ ಅವರ ಸಿನಿಮಾಗಳಲ್ಲಿ ದೇಶದ ನೆಲದ ಮೂಲವೇ ಆಧಾರವಾಗಿದೆ. ಮಗಧೀರ, ಬಾಹುಬಲಿ, ಆರ್‌ಆರ್‌ಆರ್‌ ಸಿನಿಮಾಗಳು ನೆಲದ ಕತೆಯನ್ನೇ ಹೇಳುತ್ತವೆ. ಪೌರಾಣಿಕ ಸಂದೇಶಗಳನ್ನೇ ಹೊಂದಿರುತ್ತವೆ. ಆದರೆ, ಖ್ಯಾತಿ ಮಾತ್ರ ಜಾಗತಿಕ ಮಟ್ಟದಲ್ಲಿ ಗಳಿಸುತ್ತವೆ. ಇತ್ತೀಚಿನ ಆರ್‌ಆರ್‌ಆರ್‌ ಸಿನಿಮಾ ಜಾಗತಿಕ ಮಟ್ಟದ ಪ್ರಶಸ್ತಿ ಗಳಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ.

ಆಸ್ಕರ್‌ ತಂದು ಕೊಟ್ಟ ರಾಜಮೌಳಿ

ಆರ್‌ಆರ್‌ಆರ್‌ ಸಿನಿಮಾ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತ್ತು. ಆಗ ರಾಜಮೌಳಿ ಭಾರತಕ್ಕೆ ಆಸ್ಕರ್ ತಂದುಕೊಡುವವರೇ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಈಗ ಇತಿಹಾಸ ಸೃಷ್ಟಿಯಾಗಿದೆ. ಆಸ್ಕರ್ ಗೆದ್ದ ಭಾರತದ ಸಂಪೂರ್ಣ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ RRR ಪಾತ್ರವಾಗಿದೆ. ಆರ್‌ಆರ್‌ಆರ್‌ ಸಿನಿಮಾ ಮೇಕಿಂಗ್‌ ಅಂತಾರಾಷ್ಟ್ರೀಯವಾಗಿ ಮೆಚ್ಚುಗೆ ಪಡೆದಿದೆ. ಹಾಗಾಗಿ, ಭಾರತಕ್ಕೆ ಯಾರಾದರೂ ಆಸ್ಕರ್‌ ಸಿನಿಮಾ ತಂದುಕೊಡುವ ನಿರ್ದೇಶಕರಿದ್ದರೆ, ಅದು ರಾಜಮೌಳಿ ಎಂಬ ಮಾತು ಕೇಳಿಬರುತ್ತಿತ್ತು. ಅದೀಗ ಸಾಧ್ಯವಾಗಿದೆ. ಕೆ.ಬಾಲಚಂದರ್‌, ಗುರು ದತ್‌, ಸತ್ಯಜಿತ್‌ ರೇ ಸೇರಿ ಹಲವು ಮೇರು ನಿರ್ದೇಶಕರು ಭಾರತದ ಅಗ್ರ ನಿರ್ದೇಶಕರ ಸಾಲಿನಲ್ಲಿ ನಿಂತರೆ, ರಾಜಮೌಳಿ ಅವರು ಸ್ಟೀವನ್‌ ಸ್ಪೀಲ್‌ ಬರ್ಗ್‌ ಅವರೇ ಮೆಚ್ಚುವಂತಹ, ಡೇವಿಡ್‌ ಕ್ಯಾಮರಾನ್‌ ಅವರಂತಹ ತಂತ್ರಜ್ಞರ ಸಾಲಿನಲ್ಲಿ ನಿಲ್ಲುತ್ತಾರೆ. ಹಾಗಾಗಿ, ಬಾಕ್ಸ್‌ ಆಫೀಸ್‌ ಗಳಿಕೆಯ ಆಚೆಗೂ ರಾಜಮೌಳಿ ಇಷ್ಟವಾಗುತ್ತಾರೆ. ಹೆಮ್ಮೆ ಎನಿಸುತ್ತಾರೆ.

ಇದನ್ನೂ ಓದಿ : Oscars 2023: ಇತಿಹಾಸ ಸೃಷ್ಟಿಸಿದ RRR ಸಿನಿಮಾ, ನಾಟು ನಾಟು… ಹಾಡಿಗೆ ಆಸ್ಕರ್ ಪ್ರಶಸ್ತಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Oscars 2023

ಜಪಾನ್‌ನಲ್ಲಿ 80 ಕೋಟಿ ರೂ. ಗಳಿಸಿದ RRR Movie; ದಾಖಲೆಗಳ ಮೇಲೆ ದಾಖಲೆಗಳ ಸೃಷ್ಟಿ

ಆರ್‌ಆರ್‌ಆರ್‌ ಸಿನಿಮಾ (RRR Movie) ಜಪಾನ್‌ನಲ್ಲಿ 20ನೇ ವಾರದ ಪ್ರದರ್ಶನಕ್ಕೆ ಕಾಲಿಟ್ಟಿದೆ. ಜಪಾನ್‌ ದೇಶವೊಂದರಲ್ಲೇ ಬರೋಬ್ಬರಿ 80 ಕೋಟಿ ರೂ. ಗಳಿಕೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

VISTARANEWS.COM


on

Koo

ಹೈದರಾಬಾದ್:‌ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾ (RRR Movie) ಜಪಾನ್‌ನಲ್ಲಿ ಕಳೆದ ವರ್ಷ ಅಕ್ಟೋಬರ್‌ 21ರಂದು ಬಿಡುಗಡೆಯಾಗಿತ್ತು. ಇದೀಗ 20ನೇ ವಾರದ ಪ್ರದರ್ಶನಕ್ಕೆ ಕಾಲಿಟ್ಟಿರುವ ಸಿನಿಮಾ ಜಪಾನ್‌ನಲ್ಲಿ ಬರೋಬ್ಬರಿ 80 ಕೋಟಿ ರೂ. ಗಳಿಸಿ ದಾಖಲೆ ಬರೆದಿದೆ. ಮೊನ್ನೆಯಷ್ಟೇ ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಕೂಡ ಬಂದಿದೆ.

ಇದನ್ನೂ ಓದಿ: MM Keeravani : ಆಸ್ಕರ್‌ ಗೆದ್ದ ಕೀರವಾಣಿಗೆ ಶುಭ ಹಾರೈಸಿದ ಖ್ಯಾತ ಪಿಯಾನಿಸ್ಟ್ ಕಾರ್ಪೆಂಟರ್; ಕಣ್ಣೀರಿಟ್ಟ ಸಂಗೀತ ನಿರ್ದೇಶಕ
ಆರ್‌ಆರ್‌ಆರ್‌ ಸಿನಿಮಾ ಜಪಾನ್‌ನ 44 ನಗರಗಳ 209 ಸಿನಿಮಾ ಮಂದಿರಗಳಲ್ಲಿ, 31 ಐಮ್ಯಾಕ್ಸ್‌ ತೆರೆಗಳಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾ 80 ಕೋಟಿಗೂ ಅಧಿಕ ರೂ. ಸಂಪಾದನೆ ಮಾಡಿದ್ದು, ಜಪಾನ್‌ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿಕೊಂಡ ಮೊದಲ ಭಾರತೀಯ ಸಿನಿಮಾ ಎನ್ನುವ ಖ್ಯಾತಿಯನ್ನೂ ಪಡೆದುಕೊಂಡಿದೆ.


ಈ ಬಗ್ಗೆ ಟ್ವಿಟರ್‌ನಲ್ಲಿ ಸಿನಿಮಾದ ಅಧಿಕೃತ ಖಾತೆಯಾದ ʼಆರ್‌ಆರ್‌ಆರ್‌ʼನಿಂದ ಟ್ವೀಟ್‌ ಮಾಡಿ ಮಾಹಿತಿ ನೀಡಲಾಗಿದೆ. “ಆರ್‌ಆರ್‌ಆರ್‌ ಸಿನಿಮಾ ಕ್ರಮೇಣವಾಗಿ ಜಪಾನ್‌ನ ಬೇರುಗಳಲ್ಲಿ ತೂರಿಕೊಳ್ಳುತ್ತಿದೆ. ಚಿತ್ರವು ಅಸಾಧಾರಣ ಹೆಜ್ಜೆಗಳನ್ನು ಇಡುತ್ತಿದೆ. 20ನೇ ವಾರಕ್ಕೆ ಕಾಲಿಟ್ಟಿರುವ ಸಿನಿಮಾ 202 ಚಿತ್ರಮಂದಿರಗಳಲ್ಲಿ ಪ್ರದರ್ಶನ ನೀಡುತ್ತಿದೆ” ಎಂದು ಸಿನಿತಂಡ ಹೇಳಿದೆ.

ಇದನ್ನೂ ಓದಿ: Oscars 2023: ದಿ ಎಲಿಫೆಂಟ್​ ವಿಸ್ಪರರ್ಸ್, ಆರ್‌ಆರ್‌ಆರ್‌ ತಂಡವನ್ನು ಶ್ಲಾಘಿಸಿದ ಪ್ರಿಯಾಂಕ ಚೋಪ್ರಾ
ಜಪಾನ್‌ನಲ್ಲಿ ಈಗಾಗಲೇ 80 ಕೋಟಿ ರೂ. ಗಳಿಸಿಕೊಂಡಿರುವ ಆರ್‌ಆರ್‌ಆರ್‌ ಸಿನಿಮಾ ಶೀಘ್ರವೇ 100 ಕೋಟಿ ರೂ. ಗಳಿಕೆ ದಾಟುವ ಸಾಧ್ಯತೆಯಿದೆ. ವಿಶ್ವಾದ್ಯಂತ ಸಿನಿಮಾ ಸಾವಿರ ಕೋಟಿ ರೂ.ಗೂ ಅಧಿಕ ಸಂಪಾದನೆ ಮಾಡಿಕೊಂಡಿದೆ.

Continue Reading

Oscars 2023

Actor Jr NTR: ಆಸ್ಕರ್‌ ಕಾರ್ಯಕ್ರಮಕ್ಕೆ ದುಬಾರಿ ವಾಚ್ ತೊಟ್ಟಿದ್ದ ಜೂ. ಎನ್‌ಟಿಆರ್‌! ಆ ವಾಚ್ ಬೆಲೆ ಎಷ್ಟು?

ಟಾಲಿವುಡ್‌ ಹೀರೋ ಜೂ. ಎನ್‌ಟಿಆರ್‌ ಅವರು ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ದುಬಾರಿ ಬೆಲೆಯ ವಾಚ್‌ ಧರಿಸಿದ್ದರು. ಅದರ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Koo

ಹೈದರಾಬಾದ್:‌ ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡು ಆಸ್ಕರ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿನಿಮಾ ರಂಗದ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಸಂತಸದಲ್ಲಿ ಚಿತ್ರತಂಡವಿದೆ. ಅಂದ ಹಾಗೆ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜೂನಿಯರ್‌ ಎನ್‌ಟಿಆರ್‌ ಅವರು ತೊಟ್ಟಿದ್ದ ವಾಚ್‌ ಇದೀಗ ಭಾರೀ ಸುದ್ದಿಯಲ್ಲಿದೆ.

ಇದನ್ನೂ ಓದಿ: Jr NTR: ಆಸ್ಕರ್‌ನಿಂದ ಹಿಂತಿರುಗಿದ ಬಳಿಕ ಜ್ಯೂ. ಎನ್‌ಟಿಆರ್‌ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ
ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ತೆರಳಿದ್ದ ಜೂ .ಎನ್‌ಟಿಆರ್‌ ಮತ್ತು ರಾಮ್‌ ಚರಣ್‌ ಅವರು ಸೆಮಿ ವೆಸ್ಟರ್ನ್‌ ಶೈಲಿಯ ಸೂಟ್‌ಗಳನ್ನು ಧರಿಸಿದ್ದರು. ಹಾಗೆಯೇ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ಕುರ್ತಾ ಹಾಗೂ ಲೇಯರ್ಡ್‌ ಪ್ಯಾಂಟ್‌ ಧರಿಸಿ ಭಾರತದ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದರು. ವಿಶೇಷವಾಗಿ ಜೂ. ಎನ್‌ಟಿಆರ್‌ ಅವರು ಪಟೇಕ್‌ ಫಿಲ್ಲಿಪೆ ನೌಟಿಲಸ್‌ ಟ್ರಾವೆಲ್‌ ಟೈಮ್‌ ಕಂಪನಿಯ ವಾಚ್‌ ಅನ್ನು ತೊಟ್ಟಿದ್ದರು. ಈ ವಾಚ್‌ನ ಬೆಲೆ ಬರೋಬ್ಬರಿ 1,90,000 ಡಾಲರ್‌ ಅಂದರೆ 1.56 ಕೋಟಿ ರೂಪಾಯಿ!‌

ಜೂ. ಎನ್‌ಟಿಆರ್‌ ಅವರು ತೊಟ್ಟಿದ್ದ ಈ ವಾಚ್‌ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಅಂದ ಹಾಗೆ ಜೂ. ಎನ್‌ಟಿಆರ್‌ ಅವರು ಬ್ರಾಂಡೆಡ್‌ ವಾಚ್‌ಗಳನ್ನು ಇಷ್ಟಪಡುವ ವ್ಯಕ್ತಿ. ಈ ಹಿಂದೆಯೂ ಕೂಡ ಅನೇಕ ಕಾರ್ಯಕ್ರಮಗಳಿಗೆ ಅವರು ಭಾರೀ ಬೆಲೆ ಬಾಳುವ ವಾಚ್‌ಗಳನ್ನು ತೊಟ್ಟು ಬಂದಿದ್ದರು. ಅವರ ವಾಚ್‌ ಕಲೆಕ್ಷನ್‌ ಬಗ್ಗೆಯೂ ಹಲವು ಬಾರಿ ಚರ್ಚೆಗಳು ನಡೆದಿವೆ.

Continue Reading

Oscars 2023

Oscars 2023: ಎಲ್ಲೇ ಹೋದರೂ ಸಣ್ಣ ದೇವಾಲಯ ಸ್ಥಾಪಿಸುವ ರಾಮ್ ಮತ್ತು ಪತ್ನಿ ಉಪಾಸನಾ!

Oscars 2023: ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಆಸ್ಕರ್‌ ಗೆದ್ದ ಆರ್‌ಆರ್‌ಆರ್‌ (RRR Movie)ಚಿತ್ರದ ನಟ ರಾಮ್ ಚರಣ್ (Ram Charan) ಹಾಗೂ ಅವರ ಪತ್ನಿ ಉಪಾಸನಾ ಅವರ ಧಾರ್ಮಿಕ ಮನೋಭಾವನೆಗೆ ಮತ್ತೊಂದು ಸಾಕ್ಷ್ಯ ದೊರೆತಿದೆ.

VISTARANEWS.COM


on

Oscars 2023: Ram and his wife set up a small temple Whenever the go
Koo

ನವದೆಹಲಿ: ಸೋಮವಾರ ಆಸ್ಕರ್ ಘೋಷಣೆಯಾಗುವ ಸ್ಥಳಕ್ಕೆ ಹೋಗುವ ಮುನ್ನ ರಾಮ್ ಚರಣ್ (Ram Charan) ಮತ್ತು ಅವರ ಪತ್ನಿ ಉಪಾಸನಾ ಅವರು ತಮ್ಮ ಮನೆಯಲ್ಲಿರುವ ಚಿಕ್ಕ ದೇಗುಲದಲ್ಲಿ ಪ್ರಾರ್ಥನೆ ಮಾಡಿ ಬಂದಿದ್ದರಂತೆ. ಈ ಜೋಡಿ ಎಲ್ಲೇ ಹೋದರೂ, ತಾವಿರುವಲ್ಲೇ ಚಿಕ್ಕ ದೇವಾಲಯವನ್ನು ರೆಡಿ ಮಾಡಿ, ಪೂಜಿಸುತ್ತಾರಂತೆ. ಇದು ಅವರಿಗೆ ಭಾರತದ ಜತೆ ಸಂಪರ್ಕ ಹೊಂದಲು ಸಹಾಯ ಮಾಡುತ್ತದಂತೆ. ಈ ಮಾಹಿತಿಯನ್ನು ರಾಮ್ ಚರಣ್ ಅವರು ಹಂಚಿಕೊಂಡಿದ್ದು, ಲಾಸ್ ಏಂಜಲೀಸ್‌ನಲ್ಲಿರುವ ತಮ್ಮ ಮನೆಯಲ್ಲಿ ರೂಪಿಸಿದ ಚಿಕ್ಕ ದೇಗುಲದ ಫೋಟೋ ತೆಗೆಯಲು ಮಾಧ್ಯಮದವರಿಗೆ ಅವಕಾಶ ಮಾಡಿಕೊಟ್ಟರೆನ್ನಲಾಗಿದೆ(Oscars 2023:).

ಆಸ್ಕರ್‌ಗಾಗಿ ಡಾಲ್ಬಿ ಥಿಯೇಟರ್‌ಗೆ ಹೊರಡುವ ಮೊದಲು ದಂಪತಿಗಳು ಹೇಗೆ ತಯಾರಿ ನಡೆಸಿದ್ದಾರೆ ಎಂಬುದನ್ನು ನೋಡಲು ವ್ಯಾನಿಟಿ ಫೇರ್ ಮ್ಯಾಗ್‌ಜಿನ್ ತಂಡವು ರಾಮ್ ಅವರ ಇರುವ ಮನೆಗೆ ಆಗಮಿಸಿತ್ತು. ಈ ತಂಡವನ್ನು ರಾಮ್ ಅವರು ಸ್ವಾಗತಿಸಿದರು. ಕ್ಯಾಮೆರಾಗಳಿಗೆ ತಮ್ಮ ಬಟ್ಟೆಗಳನ್ನು ತೋರಿಸುವುದರ ಜೊತೆಗೆ, ಅವರು ಪ್ರಪಂಚದ ಎಲ್ಲೇ ಇದ್ದರೂ ಅವರು ಅನುಸರಿಸುವ ಆಚರಣೆಯ ಮಾಹಿತಿಯನ್ನು ರಾಮ್ ಅವರು ಹಂಚಿಕೊಂಡರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಆಸ್ಕರ್‌ ಗೆಲುವು ಆರೋಗ್ಯಕರ ಸ್ಪರ್ಧೆಗೆ ನಾಂದಿಯಾಗಲಿ

ಈ ವೇಳೆ ವ್ಯಾನಿಟಿ ಫೇರ್ ಮ್ಯಾಗ್‌ಜಿನ್ ಜತೆ ಮಾತನಾಡಿದ ರಾಮ್ ಚರಣ್ ಅವರು, ನಾನು ಎಲ್ಲಿಗೆ ಹೋದರೂ, ನನ್ನ ಹೆಂಡತಿ ಮತ್ತು ನಾನು ಈ ಸಣ್ಣ ದೇವಾಲಯವನ್ನು ಸ್ಥಾಪಿಸುತ್ತೇವೆ. ಈ ಆಚರಣೆಯು ನಮ್ಮ ಶಕ್ತಿಗಳು ಮತ್ತು ಭಾರತದೊಂದಿಗೆ ನಮ್ಮನ್ನು ಸಂಪರ್ಕಿಸುತ್ತದೆ. ಇಲ್ಲಿರಲು ನಮಗೆ ಸಹಾಯ ಮಾಡಿದ ಎಲ್ಲದಕ್ಕೂ ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಕೃತಜ್ಞತೆ ಸಲ್ಲಿಸುವುದು ಮುಖ್ಯ ಎಂದು ಹೇಳಿದರು. ರಾಮ್ ಮತ್ತು ಉಪಾಸನಾ ಸಮಾರಂಭಕ್ಕೆ ಹೊರಡುವ ಮೊದಲು ಒಂದು ಸಣ್ಣ ಪ್ರಾರ್ಥನೆಯನ್ನು ಮಾಡಿದರು ಎಂದು ವರದಿಯಾಗಿದೆ.

Continue Reading

Oscars 2023

Budget Session 2023: ಮೋದಿ, ಆರ್‌ಆರ್‌ಆರ್ ಆಸ್ಕರ್ ಗೆದ್ದಿರುವ ಕ್ರೆಡಿಟ್ ತೆಗೆದುಕೊಳ್ಳಬೇಡಿ! ಖರ್ಗೆ ವ್ಯಂಗ್ಯ

Budget Session 2023: ಪ್ರಧಾನಿ ನರೇಂದ್ರ ಮೋದಿ ಅವರೇ, ಆರ್ ಆರ್ ಆರ್ ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಗೆದ್ದಿದ್ದು, ಅವುಗಳ ಕ್ರೆಡಿಟ್ ತೆಗೆದುಕೊಳ್ಳಲು ಹೋಗಬೇಡಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.

VISTARANEWS.COM


on

Don't take credit oscar winning films, Kharge requested to Modi at Budget Session 2023
Koo

ನವದೆಹಲಿ: ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಆರ್‌ಆರ್‌ಆರ್ ಸಿನಿಮಾ ಮತ್ತು ಡ್ಯಾಕುಮೆಂಟರಿ ಶಾರ್ಟ್ ಫಿಲ್ಮ್ ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಗೆದಿದ್ದು, ಅದರ ಕ್ರೆಡಿಟ್ ಅನ್ನು ನರೇಂದ್ರ ಮೋದಿ ಅವರು ತೆಗೆದುಕೊಳ್ಳಬಾರದು ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ವ್ಯಂಗ್ಯ ಮಾಡಿದ್ದಾರೆ(Budget Session 2023).

ಆರ್‌ಆರ್‌ಆರ್ ಸಿನಿಮಾ ತೆಲುಗು ಸಿನಿಮಾವಾದ್ರೆ, ಎಲಿಫೆಂಟ್ ವಿಸ್ಪರರ್ಸ್ ತಮಿಳು ಸಾಕ್ಷ್ಯ ಚಿತ್ರವಾಗಿದ್ದು, ಎರಡೂ ದೇಶದ ಸಿನಿಮಾ ಕ್ಷೇತ್ರಕ್ಕೆ ಕಾಣಿಕೆ ನೀಡಿವೆ ಎಂದು ಖರ್ಗೆ ಅವರು ಹೇಳಿದರು. ನಾವು (ಬಿಜೆಪಿ) ನಿರ್ದೇಶನ ಮಾಡಿದ್ದೇವೆ, ನಾವು (ಬಿಜೆಪಿ) ಹಾಡು ಬರೆದಿದ್ದೇವೆ ಎಂದೋ ಅಥವಾ ಮೋದಿಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ ಎಂದು ಆಡಳಿತ ಪಕ್ಷವು ಕ್ರೆಡಿಟ್ ತೆಗೆದುಕೊಳ್ಳಬಾರದು. ಇದು ನನ್ನ ವಿನಂತಿ ಮಾತ್ರ. ಇವು ದೇಶದ ಕೊಡುಗೆಯಾಗಿದೆ ಎಂದು ಖರ್ಗೆ ಸಂಸತ್ತಿನಲ್ಲಿ ಹೇಳಿದರು.

ಇದನ್ನೂ ಓದಿ: Oscars 2023 : ಆರ್‌ಆರ್‌ಆರ್, ದಿ ಎಲಿಫೆಂಟ್ ವಿಸ್ಪರರ್ಸ್ ತಂಡಗಳಿಗೆ ಪಿಎಂ ಮೋದಿ, ರಾಹುಲ್ ಶುಭಾಶಯ

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಆರ್ ಆರ್ ಆರ್ ಚಿತ್ರದ ಕತೆ ಬರೆದವರು ವಿ ವಿಜಯೇಂದ್ರ ಪ್ರಸಾದರು. ಅವರನ್ನು ಮೋದಿ ನೇತೃತ್ವದ ಸರ್ಕಾರವೇ ಸಂಸತ್ತಿಗೆ ನಾಮನಿರ್ದೇಶನ ಮಾಡಿದೆ ಎಂಬುದು ವಾಸ್ತವಾಂಶ ಎಂದರು. ಗೋಯಲ್ ಅವರು ಈ ಮಾತಿಗೆ ತೀವ್ರ ವಿರೋಧ ವ್ಯಕ್ತವಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರೆಲ್ಲರೂ ಆಸ್ಕರ್ ವಿಜೇತ ಆರ್ ಆರ್ ಆರ್ ಹಾಗೂ ಸಾಕ್ಷ್ಯ ಚಿತ್ರ ದಿ ಎಲೆಫೆಂಟ್ ವಿಸ್ಪರರ್ಸ್ ಚಿತ್ರ ತಂಡಗಳಿಗೆ ಶಭಾಶಯ ಕೋರಿದ್ದಾರೆ.

Continue Reading
Advertisement
srinivasa prasad sutturu sri
ಕರ್ನಾಟಕ22 mins ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ44 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ49 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್1 hour ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ1 hour ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ1 hour ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್2 hours ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ2 hours ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ2 hours ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202418 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202423 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌