Rishab Shetty: ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಸಿಕ್ಕಿದ್ದು ಕಾಂತಾರ ಕನ್ನಡ ಸಿನಿಮಾಕ್ಕೆ ಅಲ್ಲ, ಹಿಂದಿಗೆ ಎಂದ ರಿಷಬ್​ ಶೆಟ್ಟಿ - Vistara News

ಸಿನಿಮಾ

Rishab Shetty: ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಸಿಕ್ಕಿದ್ದು ಕಾಂತಾರ ಕನ್ನಡ ಸಿನಿಮಾಕ್ಕೆ ಅಲ್ಲ, ಹಿಂದಿಗೆ ಎಂದ ರಿಷಬ್​ ಶೆಟ್ಟಿ

ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲು ಮುಂಬಯಿಗೆ ತೆರಳಿದ್ದ ನಟ ರಿಷಬ್​ ಶೆಟ್ಟಿ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಲ್ಲಿನ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

VISTARANEWS.COM


on

Dada saheb phalke award 2023 for hindi Kantara Says Rishab Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ (dada saheb phalke award 2023) ಪ್ರಶಸ್ತಿ ಸ್ವೀಕರಿಸಲು ಮುಂಬಯಿಗೆ ತೆರಳಿದ್ದ, ‘ಕಾಂತಾರ’ ನಟ ರಿಷಬ್​ ಶೆಟ್ಟಿ (Rishab Shetty) ಇಂದು ಬೆಂಗಳೂರಿಗೆ ಬಂದು ಇಳಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಇದು ಕಾಂತಾರ ಹಿಂದಿ ಸಿನಿಮಾಕ್ಕೆ ಕೊಟ್ಟ ಪ್ರಶಸ್ತಿ. ಕನ್ನಡಕ್ಕೆ ಬಂದಿದ್ದಲ್ಲ. ಆದರೂ ಎಲ್ಲೆಡೆ ಕನ್ನಡ ಸಿನಿಮಾಗಳ ಬಗ್ಗೆ ವಿಶೇಷ ಗೌರವ ಮೂಡುತ್ತಿದೆ. ಪ್ರಶಸ್ತಿ ಸಿಕ್ಕಿದ್ದು ತುಂಬಾ ಖುಷಿ ಆಯಿತು’ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಅವರು ‘ನಾನು ಪ್ರಶಸ್ತಿ ಸ್ವೀಕರಿಸಲು ನಮ್ಮ ಸಾಂಪ್ರದಾಯಿಕ ಉಡುಪಿನಲ್ಲಿಯೇ ಹೋಗಿದ್ದೆ. ಅಲ್ಲಿದ್ದವರೆಲ್ಲ ಗುರುತಿಸಿದ್ದು ಖುಷಿಯಾಯಿತು. ನಾವಿನ್ನು ಕಾಂತಾರ 2 ಕೆಲಸ ಶುರು ಮಾಡುತ್ತೇವೆ. ಮಾರ್ಚ್​ನಿಂದ ಫೋನ್ ಆಫ್​ ಮಾಡುತ್ತೇನೆ’ ಎಂದು ಹೇಳಿದರು. ರಿಷಬ್​ ಶೆಟ್ಟಿಯವರು ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಭರವಸೆಯ ನಟ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: Rishab Shetty: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

Movies on Israel: ಯುದ್ಧದ ಸನ್ನಿವೇಶವನ್ನು ಹಲವಾರು ಚಲನಚಿತ್ರಗಳು ಸೆರೆ ಹಿಡಿದಿದ್ದರೂ ಅದು ಜನಸಾಮಾನ್ಯರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಕಡಿಮೆ. ಆದರೆ ಈ ಐದು ಚಲನಚಿತ್ರಗಳು ಮಾತ್ರ ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷದಿಂದ (Israel-Palestine Conflict) ಆಗುತ್ತಿರುವ ಪ್ರಮುಖ ಸಮಸ್ಯೆಗಳು ಮತ್ತು ಸಂಘರ್ಷದ ಮಧ್ಯೆ ವಾಸಿಸುವ ಜನರ ಬದುಕನ್ನು ತೆರೆದಿಟ್ಟಿದೆ. ತಮ್ಮ ದೇಶದ ಮೇಲೆ, ತಮ್ಮ ಜನರ ಮೇಲೆ ದಾಳಿ ಮಾಡುವ ಪ್ಯಾಲೇಸ್ತಿನ್‌ ಉಗ್ರರ ಮೇಲೆ ಇಸ್ರೇಲ್‌ ಬೇಹುಗಾರಿಕೆ ಪಡೆ ಪ್ರತಿದಾಳಿ ನಡೆಸುವ, ಅವರನ್ನು ಹುಡುಕಿ ಹುಡುಕಿ ನಾಶಪಡಿಸುವ ದೃಶ್ಯಗಳು ರೋಚಕವಾಗಿವೆ.

VISTARANEWS.COM


on

By

Movies on Israel
Koo

ಇಸ್ರೇಲ್-ಪ್ಯಾಲೇಸ್ತಿನ್‌ ಸಂಘರ್ಷ (Israel-Palestine Conflict) ಕೆಲವು ತಿಂಗಳುಗಳಿಂದ (Movies on Israel) ಉಲ್ಬಣಗೊಂಡಿದೆ. ಇದರಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ವಸತಿ ಕಳೆದುಕೊಂಡು ಬೇರೆ ಸ್ಥಳಗಳಿಗೆ ವಲಸೆ ಹೋಗಿದ್ದಾರೆ. ಯುದ್ಧದ (war) ಸನ್ನಿವೇಶವನ್ನು ಹಲವಾರು ಚಲನಚಿತ್ರಗಳು (film) ಸೆರೆ ಹಿಡಿದಿದ್ದರೂ ಅದು ಜನಸಾಮಾನ್ಯರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಕಡಿಮೆ. ಆದರೆ ಈ ಐದು ಚಲನಚಿತ್ರಗಳು ಮಾತ್ರ ಯುದ್ಧದ ಚಿತ್ರಣವನ್ನು ಮನಮುಟ್ಟುವಂತೆ ಕಟ್ಟಿ ಕೊಟ್ಟಿದೆ.

ಮ್ಯೂನಿಚ್

2005ರ ಈ ಚಲನಚಿತ್ರವು ಪಶ್ಚಿಮ ಜರ್ಮನಿಯ ಮ್ಯೂನಿಚ್‌ನಲ್ಲಿ 1972ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ 11 ಇಸ್ರೇಲ್ ಕ್ರೀಡಾಪಟುಗಳು ಮತ್ತು ಅಧಿಕಾರಿಗಳ ಅಪಹರಣ-ಹತ್ಯೆಯನ್ನು ಆಧರಿಸಿದೆ.


ಹೆಸರಾಂತ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ನಿರ್ದೇಶನದ ಈ ಚಲನಚಿತ್ರವು ‘ಬ್ಲ್ಯಾಕ್ ಸೆಪ್ಟೆಂಬರ್’ ಎಂಬ ಪ್ಯಾಲೆಸ್ತೀನಿಯನ್ ಭಯೋತ್ಪಾದಕ ಸಂಘಟನೆ ನಡೆಸಿದ ಭೀಕರ ಹತ್ಯೆಯ ಅನಂತರದ ಪರಿಣಾಮಗಳನ್ನು ಬಿಂಬಿಸಿದೆ. ಸೇಡಿನ ಕಥೆಯನ್ನು ಆಧರಿಸಿರುವ ಈ ಚಿತ್ರವು ಮುಯ್ಯಿಗೆ ಮುಯ್ಯಿ ಎಂಬಂತೆ ‘ಕಣ್ಣಿಗೆ ಕಣ್ಣು’ ಎಂಬುದನ್ನು ಉಲ್ಲೇಖಿಸುತ್ತದೆ. ತನ್ನ ದೇಶದ ಕ್ರೀಡಾಪಟುಗಳ ಬರ್ಬರ ಹತ್ಯೆ ನಡೆಸಿದ ಉಗ್ರರನ್ನು ಇಸ್ರೇಲ್‌ ಬೇಹುಗಾರಿಕೆ ಪಡೆ ಹುಡುಕಿ ಹುಡುಕಿ ಕೊಲ್ಲುವ ಸನ್ನಿವೇಶಗಳು ರೋಮಾಂಚನಗೊಳಿಸುತ್ತವೆ.

ರೈಡ್ ಆನ್ ಎಂಟೆಬ್ಬೆ

1977ರ ಈ ಚಲನಚಿತ್ರವು ʼಆಪರೇಷನ್ ಎಂಟೆಬ್ಬೆʼ ಮೇಲೆ ಆಧರಿತವಾಗಿದೆ. ನಾಲ್ವರು ಪ್ಯಾಲೇಸ್ತಿನಿಯನ್‌ ಭಯೋತ್ಪಾದಕರು ಹಲವಾರು ಇಸ್ರೇಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಫ್ರಾನ್ಸ್ ಏರ್‌ಬಸ್ ಎ300 ಅನ್ನು ಹೈಜಾಕ್ ಮಾಡಿದ ಅನಂತರ ಇಸ್ರೇಲ್ ಸರ್ಕಾರವು ಯೋಜಿಸಿದ ರಕ್ಷಣಾ ಕಾರ್ಯಾಚರಣೆ ಇದಾಗಿದೆ.


ಚಿತ್ರವು ಉಗಾಂಡಾದ ಎಂಟೆಬ್ಬೆ ವಿಮಾನ ನಿಲ್ದಾಣದಿಂದ ಡೇರ್‌ಡೆವಿಲ್ ರಕ್ಷಣಾ ಕಾರ್ಯಾಚರಣೆಗಳ ಮೇಲೆ ಕೇಂದ್ರೀಕರಿಸುತ್ತದೆ. ‘ಆಪರೇಷನ್ ಥಂಡರ್ಬೋಲ್ಟ್’ ಶೀರ್ಷಿಕೆಯ ಕಾರ್ಯಾಚರಣೆಯು ಅತ್ಯಂತ ಕಷ್ಟಕರವಾಗಿತ್ತು. ಯಾಕೆಂದರೆ ಭಯೋತ್ಪಾದಕರು ಉಗಾಂಡಾದ ಅಧ್ಯಕ್ಷ ಇದಿ ಅಬಿನ್ ಅವರ ಬೆಂಬಲವನ್ನು ಹೊಂದಿದ್ದರು. ಆದರೂ ಇಸ್ರೇಲ್‌ ಯೋಧರು ಭಾರಿ ಸಾಹಸದಿಂದ ಮೇಲುಗೈ ಸಾಧಿಸಿದರು. ಈ ಚಿತ್ರವು ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಪಡೆದಿದೆ.

ಅಜಾಮಿ

ಈ ಚಲನಚಿತ್ರದ ಕತೆಯನ್ನು ಪ್ಯಾಲೇಸ್ತಿನಿಯನ್ ಸ್ಕ್ಯಾಂಡರ್ ಕಾಪ್ಟಿ ಮತ್ತು ಇಸ್ರೇಲ್ ಯಹೂದಿ ಯಾರೋನ್ ಶಾನಿ ಬರೆದಿದ್ದಾರೆ. ಇದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಜೀವನದ ಸುತ್ತ ಸುತ್ತುತ್ತದೆ.


ಇಸ್ರೇಲ್‌ನ ಟೆಲ್ ಅವಿವ್‌ನಲ್ಲಿರುವ ಜಾಫಾ ಚಿತ್ರದ ಕೇಂದ್ರ ಬಿಂದು. ಇಲ್ಲಿ ಹಲವಾರು ಪಾತ್ರಗಳಿವೆ. ಅವರೆಲ್ಲರೂ ಬಡವರು ಮತ್ತು ಸಾಕಷ್ಟು ಸಂಘರ್ಷವನ್ನು ಎದುರಿಸುತ್ತಾರೆ. ಇಸ್ರೇಲ್ – ಅರಬ್ ಜಗತ್ತಿನಲ್ಲಿ ಜೀವನದ ಸಂಪೂರ್ಣ ವಾಸ್ತವ, ಹಿಂಸೆ, ಪ್ರೀತಿ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಈ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಪ್ಯಾರಡೈಸ್ ನೌ

ಈ ಚಿತ್ರವು ಟೆಲ್ ಅವೀವ್‌ನ ಮಿಲಿಟರಿ ಚೆಕ್‌ಪಾಯಿಂಟ್‌ನಲ್ಲಿ ಬಾಂಬ್‌ಗಳನ್ನು ಸ್ಫೋಟಿಸುವ ಕಾರ್ಯವನ್ನು ವಹಿಸಿಕೊಂಡಿರುವ ಇಬ್ಬರು ಪ್ಯಾಲೇಸ್ತಿನಿಯನ್ ಆತ್ಮಹತ್ಯಾ ಬಾಂಬರ್‌ಗಳನ್ನು ಆಧರಿಸಿದೆ. ಮದುವೆಯಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಇಬ್ಬರು ಇಸ್ರೇಲ್ ಪ್ರಜೆಗಳಂತೆ ವೇಷ ಧರಿಸಿ ಸ್ಫೋಟಕ್ಕೆ ಮುಂದಾಗಿದ್ದರು.


ಇಸ್ರೇಲ್ ಗಡಿ ದಾಟುವಾಗ ನಡೆಯುವ ಘಟನೆಗಳು, ಆತ್ಮಹತ್ಯಾ ಬಾಂಬರ್‌ಗಳಾಗಲು ಕಾರಣವಾಗುವ ಭಾವನಾತ್ಮಕ ಮತ್ತು ಮಾನಸಿಕ ಅಂಶಗಳನ್ನು ಸೂಕ್ಷ್ಮವಾಗಿ ಸಿನೆಮಾದಲ್ಲಿ ಮನೋಜ್ಞವಾಗಿ ಚಿತ್ರಿಸಲಾಗಿದೆ. ಇದು ಅತ್ಯುತ್ತಮ ವಿದೇಶಿ ಚಿತ್ರ ಎಂಬ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿದೆ.

ಲೆಮನ್ ಟ್ರೀ

ಪ್ಯಾಲೇಸ್ತಿನಿಯನ್ ಮಹಿಳೆಯ ಹೋರಾಟದ ಕಟುವಾದ ಮತ್ತು ಸುಂದರವಾದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇಸ್ರೇಲ್ ಅಧಿಕಾರಿಗಳು ತನ್ನ ನಿಂಬೆ ತೋಟದಲ್ಲಿನ ಮರಗಳನ್ನು ಕಿತ್ತು ಹಾಕುವುದನ್ನು ತಡೆಯುವುದು ಈ ಚಿತ್ರದ ಸಾರ. ಪ್ರಪಂಚದಾದ್ಯಂತದ ವಿವಿಧ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇಸ್ರೇಲಿ ರಕ್ಷಣಾ ಸಚಿವ ಇಸ್ರೇಲ್ ನವೊನ್ ಅವರು ಪ್ಯಾಲೇಸ್ತಿನಿಯನ್ ಮಹಿಳೆ ಸಲ್ಮಾ ಅವರ ಮನೆಯ ಪಕ್ಕದಲ್ಲಿ ವಾಸಿಸುತ್ತಿದ್ದರು.


ಇದನ್ನೂ ಓದಿ: Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

ಸಲ್ಮಾ ಅವರ ನಿಂಬೆ ತೋಟ ಅವರಿಗೆ ರಹಸ್ಯವಾಗಿ ಕಾಣುತ್ತದೆ ಮತ್ತು ಬೆದರಿಕೆಯನ್ನು ಒಡ್ಡಿದಂತೆ ಭಾಸವಾಗುತ್ತದೆ. ಹೀಗಾಗಿ ಅಧಿಕಾರಿಗಳು ಎಲ್ಲಾ ಮರಗಳನ್ನು ಕಿತ್ತುಹಾಕಲು ಯೋಜಿಸುತ್ತಾರೆ. ಆದರೆ ಸಲ್ಮಾ ಮತ್ತು ಅವರ ವಕೀಲರು ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಳ್ಳಲು ನಿರ್ಧರಿಸುತ್ತಾರೆ. ಚಲನಚಿತ್ರವು ವಿವಿಧ ವಿಷಯಗಳ ಮೇಲೆ ನೆಲೆಸಿದೆ. ಮಾನವ ಸಹಾನುಭೂತಿ ಮತ್ತು ಭಾವನೆಯ ಮೇಲೂ ಬೆಳಕು ಚೆಲ್ಲಿದೆ.

Continue Reading

ಕಾಲಿವುಡ್

Charuhasan Srinivasan: ಕಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು

Charuhasan Srinivasan: ನಟಿ, ನಿರ್ದೇಶಕಿ, ನಿರ್ಮಾಪಕ ಮತ್ತು ಲೇಖಕಿ ಸುಹಾಸಿನಿ ಮಣಿರತ್ನಂ ಅವರು ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಸುಹಾಸಿನಿ ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಚಾರುಹಾಸನ್ ಶ್ರೀನಿವಾಸನ್ ಅವರು ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಾರೆ.

VISTARANEWS.COM


on

Charuhasan Srinivasan Hospitalised, Daughter Suhasini Shares Emotional Post
Koo

ಬೆಂಗಳೂರು: ಹಿರಿಯ ನಟ ಕಮಲ್ ಹಾಸನ್ (Kamal Haasan) ಅವರ ಹಿರಿಯ ಸಹೋದರ, ಚಾರುಹಾಸನ್ ಶ್ರೀನಿವಾಸನ್ (Charuhasan Srinivasan) ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹಿರಿಯ ಮಗಳು, ನಟಿ, ನಿರ್ದೇಶಕಿ, ನಿರ್ಮಾಪಕ ಮತ್ತು ಲೇಖಕಿ ಸುಹಾಸಿನಿ ಮಣಿರತ್ನಂ ಅವರು ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಸುಹಾಸಿನಿ ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಚಾರುಹಾಸನ್ ಶ್ರೀನಿವಾಸನ್ ಅವರು ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಾರೆ.

ಫೋಟೋವನ್ನು ಹಂಚಿಕೊಂಡ ನಟಿ ಹೀಗೆ ಬರೆದಿದ್ದಾರೆ, “ ನೀವು ಇದನ್ನು ನನ್ನ ತಂದೆಗೆ ವೈದ್ಯಕೀಯ ವಾಸ್ತವ್ಯ ಎಂದು ಕರೆಯುತ್ತೀರಾ? ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು, ದಾದಿಯರು ಮತ್ತು ಹೆಣ್ಣುಮಕ್ಕಳಿಂದ ಪ್ರೀತಿ ಮತ್ತು ಕಾಳಜಿಯೊಂದಿಗೆʼಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಪೋಸ್ಟ್ ನೋಡಿದ ಅಭಿಮಾನಿಗಳು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಚಾರುಹಾಸನ್ ಶ್ರೀನಿವಾಸನ್ ನಟ, ನಿರ್ದೇಶಕ ಮತ್ತು ನಿವೃತ್ತ ವಕೀಲರು. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಲನಚಿತ್ರ ತಬರನ ಕಥೆ (1987) ಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಮತ್ತು ಅತ್ಯುತ್ತಮ ನಟ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು.

ಕುಬಿ ಮತ್ತು ಇಯಾಲ, ರಘುವಿಂತೆ ಸ್ವಂತ ರಜಿಯಾ, ಮೀಂದುಂ ಒರು ಕಾತಲ್ ಕಥೈ, ನೇತಿ ಸಿದ್ಧಾರ್ಥ, ಮತ್ತು ಡಿಯರ್ ಕಾಮ್ರೇಡ್ ಮುಂತಾದ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಪುದಿಯ ಸಂಗಮಮ್ (1982) ಮತ್ತು ಐಪಿಸಿ 215 (2003) ಎಂಬ ಎರಡು ಚಲನಚಿತ್ರಗಳನ್ನು ನಿರ್ದೇಶಿಸಿದರು.

ಸಿನಿಮಾ ಜತೆಗೆ, ಥಿಂಕಿಂಗ್ ಆನ್ ಮೈ ಫೀಟ್: ಚಾರುಹಾಸನ್ ಆಟೋಬಯೋಗ್ರಫಿ, ನವದೆಹಲಿಯ ಲಿಫೈ ಪಬ್ಲಿಕೇಷನ್ಸ್, ಬಯೋಗ್ ಎಂಬ ಪುಸ್ತಕಗಳು ಪ್ರಕಟವಾಗಿದೆ, ಇದು 2015 ರಲ್ಲಿ ನವದೆಹಲಿ ವಿಶ್ವ ಪುಸ್ತಕ ಮೇಳದಲ್ಲಿ ಬಿಡುಗಡೆಯಾಯಿತು.

ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ, ಚಾರುಹಾಸನ್ ಜನವರಿ 5, 1931 ರಂದು ವಕೀಲ ಮತ್ತು ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಡಿ. ಶ್ರೀನಿವಾಸನ್ ಮತ್ತು ರಾಜಲಕ್ಷ್ಮಿ ದಂಪತಿಗೆ ಜನಿಸಿದರು. ಚಾರುಹಾಸನ್ ಹಿರಿಯ ಮಗ ಮತ್ತು ಕಮಲ್ ಹಾಸನ್ ಕಿರಿಯ ಸಹೋದರ.

ಚಾರುಹಾಸನ್ ಕೋಮಲಂ ಅವರನ್ನು ವಿವಾಹವಾಗಿದ್ದಾರೆ. ನಂದಿನಿ, ಸುಹಾಸಿನಿ ಮತ್ತು ಸುಭಾಸಿನಿ ಎಂಬ ಮೂವರು ಪುತ್ರಿಯರನ್ನು ಹೊಂದಿದ್ದಾರೆ. ಸುಹಾಸಿನಿ ನಟಿ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Actor Darshan: ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

VISTARANEWS.COM


on

Darshan Judicial Custody extended till 14th August
Koo

ಬೆಂಗಳೂರು: ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ದರ್ಶನ್‌ಗೆ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಇಂದು (ಆಗಸ್ಟ್​ 1) ಈ ಕೇಸ್​ನ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರು ಆಗಸ್ಟ್ 14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ನೀಡಿದ್ದಾರೆ. ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಪರಪ್ಪನ ಆಗ್ರಹಾರದಿಂದ 13 ಹಾಗೂ ತುಮಕೂರು ಜೈಲಿನಿಂದ ನಾಲ್ವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ನಟ ದರ್ಶನ್‌ಗೆ ಆ. 20ರವರೆಗೆ ಜೈಲೂಟವೇ ಫಿಕ್ಸ್‌

ನಟ ದರ್ಶನ್‌ ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಆ.20ಕ್ಕೆ ಮುಂದೂಡಿದೆ. ಹೀಗಾಗಿ ಇನ್ನೂ 21 ದಿನ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರ ಮತ್ತು ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕರ್ನಾಟಕ ಕಾರಾಗೃಹಗಳ ಕಾಯ್ದೆ ಓದುತ್ತಾ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ ಅವರು, ಮ್ಯಾನ್ಯುವಲ್ ಪ್ರಕಾರ ವಿಚಾರಣಾಧೀನ ಕೈದಿಗೆ ಸ್ವಂತ ಖರ್ಚಿನಲ್ಲಿ ಖಾಸಗಿ ಊಟ ಪಡೆಯೋದಕ್ಕೆ ಅವಕಾಶ ಇದೆ. ಅಧೀನ ನ್ಯಾಯಾಲಯ ಇಲ್ಲಿ ಆ್ಯಕ್ಟ್‌ಗಿಂತ ಮ್ಯಾನ್ಯುಯಲ್ ಬಗ್ಗೆ ಪರಿಗಣಿಸಿದೆ. ಕರ್ನಾಟಕ ಪ್ರಿಸನ್ಸ್ ಆ್ಯಕ್ಟ್ 1963 ಅನ್ನು ಪರಿಗಣಸಿಯೇ ಇಲ್ಲ. ಸೆಕ್ಷನ್ 30ರಡಿಯಲ್ಲಿ ಮನೆ ಊಟ ಪಡೆಯಲು ಅವಕಾಶ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಇನ್ನು ದರ್ಶನ್‌ಗೆ ಅನಾರೋಗ್ಯವಾಗಿರುವ ಬಗ್ಗೆ ವರದಿ ಇದೆ. ಜೈಲಿನ ಮುಖ್ಯ ಆರೋಗ್ಯಾಧಿಕಾರಿ ವರದಿ ನೀಡಿದ್ದಾರೆ ಎಂದು ವಕೀಲರು ಹೇಳಿದ್ದಕ್ಕೆ, ಪ್ರತಿ ವಿಚಾರಣಾಧೀನ ಕೈದಿಯೂ ಈ ಸಮಸ್ಯೆ ಎದುರಿಸುತ್ತಾರೆ. ಅವರು ಮನುಷ್ಯರೇ ಅಲ್ಲವೇ ಎಂದು ಜಡ್ಜ್ ಪ್ರಶ್ನೆ ಮಾಡಿದರು. ನ್ಯೂಟ್ರಿಷನ್ ಕೊರತೆ ಇದ್ದರೆ ಜೈಲಿನ ವೈದ್ಯಾಧಿಕಾರಿ ಪ್ರಿಸ್ಕ್ರಿಪ್ಷನ್ ನೀಡುತ್ತಾರೆ ಎಂದು ಹೇಳಿದರು. ಡಾಕ್ಟರ್ ಏನು ಹೇಳುತ್ತಾರೋ ಅದನ್ನು ಜೈಲಿನಲ್ಲಿ ನೀಡಲಾಗುತ್ತದೆ. ಸೆಕ್ಷನ್ 30ರ ಬಗ್ಗೆ ಹೇಳಲು ಅವಕಾಶ ಇದೆ. ಆದರೆ ಮನೆ ಊಟದ ಬಗ್ಗೆ ಯಾಕೆ ಎಂದು ಜಡ್ಜ್‌ ಪ್ರಶ್ನಿಸಿದರು.

ಈ ವೇಳೆ ವೈದ್ಯಾಧಿಕಾರಿಗಳು, ದರ್ಶನ್‌ ಅನಾರೋಗ್ಯದ ಬಗ್ಗೆ ವರದಿಯನ್ನು ನೀಡಿದ್ದಾರೆ ಎಂದು ಪ್ರಭುಲಿಂಗ ನಾವದಗಿ ಉತ್ತರಿಸಿ, ಜೈಲಿನ ಮುಖ್ಯ ಆರೋಗ್ಯ ಅಧಿಕಾರಿಯ ವೈದ್ಯಕೀಯ ವರದಿ ಸಲ್ಲಿಸಿದರು. ಡಾಕ್ಟರ್ ಇದಕ್ಕಾಗಿಯೇ ಸ್ಪೆಸಿಫಿಕ್ ಆಗಿ ಹೇಳಿರಬೇಕು ಅಲ್ವಾ? ಆಗ ಮಾತ್ರ ಪರಿಗಣನೆಗೆ ಅವಕಾಶ ಇದೆ ಎಂದು ಜಡ್ಜ್‌ ಹೇಳಿದರು.

Continue Reading

ಕಿರುತೆರೆ

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Kannada Serials TRP: ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

VISTARANEWS.COM


on

Kannada Serials TRP TOP 5 bhagyalakshmi puttakkana makkalu number 1
Koo

ಬೆಂಗಳೂರು: 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಎನ್ನುವುದು ವಿಶೇಷ.ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

‘ಲಕ್ಷ್ಮೀ ನಿವಾಸ’

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

‘ಸೀತಾ ರಾಮ’ ಧಾರಾವಾಹಿ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ʻಭಾಗ್ಯಲಕ್ಷ್ಮೀ’

ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

Continue Reading
Advertisement
Wayanad landslides
ದೇಶ6 mins ago

Wayanad Landslide: ವಯನಾಡು ಹಿಂದೆ ಹೇಗಿತ್ತು? ಈಗ ಹೇಗಿದೆ? ದುರಂತ ಸ್ಥಳದ ದೃಶ್ಯ ಸೆರೆ ಹಿಡಿದ ಇಸ್ರೋ

Namma Metro
ಬೆಂಗಳೂರು15 mins ago

Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

Paris Olympics
ಕ್ರೀಡೆ16 mins ago

Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ

Actor Darshan Lost KG In 25 Days
ಕ್ರೈಂ55 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

Gold Rate Today
ಕರ್ನಾಟಕ55 mins ago

Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

KSET 2024
ನೋಟಿಸ್ ಬೋರ್ಡ್56 mins ago

KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

Stock Market
ದೇಶ1 hour ago

Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

Swapnil Kusale
ಕ್ರೀಡೆ2 hours ago

Swapnil Kusale: ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ 1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

raichur food poisoning 1
ಕ್ರೈಂ2 hours ago

Food Poisoning: ವಿಷ ಬೆರೆತ ಮಟನ್‌ ಸೇವಿಸಿ ಒಂದೇ ಕುಟುಂಬದ ನಾಲ್ವರ ಘೋರ ಸಾವು; ಆತ್ಮಹತ್ಯೆ ಶಂಕೆ

Paris Olympics
ಕ್ರೀಡೆ2 hours ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ23 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ23 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌