Dadasaheb Phalke Award: ವಹೀದಾ ರೆಹಮಾನ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ Vistara News

ಬಾಲಿವುಡ್

Dadasaheb Phalke Award: ವಹೀದಾ ರೆಹಮಾನ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್‌ನಂತಹ ಸೂಪರ್‌ಹಿಟ್‌ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್‌ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ.

VISTARANEWS.COM


on

waheeda rehman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಬಾಲಿವುಡ್‌ನ ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್ (Waheeda Rehman) ಅವರಿಗೆ 2021ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ನೀಡಲಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಘೋಷಿಸಿದ್ದಾರೆ.

85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್‌ನಂತಹ ಸೂಪರ್‌ಹಿಟ್‌ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್‌ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ. ಅವರು ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳನ್ನೂ ಪಡೆದಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು (Dadasaheb Phalke Award) ದೇಶದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿ; ಇದನ್ನು ಕೇಂದ್ರ ಸರ್ಕಾರ ಕೊಡಮಾಡುತ್ತದೆ.

ಎಕ್ಸ್‌ (ಟ್ವಿಟರ್)‌ನಲ್ಲಿನ ಪೋಸ್ಟ್‌ನಲ್ಲಿ, ಅನುರಾಗ್ ಠಾಕೂರ್ ಹೀಗೆ ಬರೆದಿದ್ದಾರೆ: “ವಹೀದಾ ರೆಹಮಾನ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ನಾನು ಅಪಾರ ಸಂತೋಷ ಪಡುತ್ತೇನೆ. ವಹೀದಾಜೀ ಹಿಂದಿ ಚಲನಚಿತ್ರಗಳಲ್ಲಿನ ಅವರ ಪಾತ್ರಗಳಿಗಾಗಿ ವಿಮರ್ಶಾತ್ಮಕ ಮೆಚ್ಚುಗೆ ಪಡೆದಿದ್ದಾರೆ. ಪ್ಯಾಸಾ, ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬಿವಿ ಔರ್ ಗುಲಾಮ್, ಗೈಡ್, ಖಾಮೋಶಿ ಅವುಗಳಲ್ಲಿ ಪ್ರಮುಖವಾದವುಗಳು. 5 ದಶಕಗಳ ಕಾಲದ ತಮ್ಮ ವೃತ್ತಿಜೀವನದಲ್ಲಿ ಅವರು ತಮ್ಮ ಪಾತ್ರಗಳನ್ನು ಮೆರೆದಿದ್ದಾರೆ. ರೇಷ್ಮಾ ಔರ್ ಶೇರಾ ಚಿತ್ರದ ಪಾತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ವಹೀದಾಜಿ ಅವರು ಸಮರ್ಪಣೆ, ಬದ್ಧತೆ ಮತ್ತು ಅತ್ಯುನ್ನತ ಮಟ್ಟವನ್ನು ಸಾಧಿಸಬಲ್ಲ ಭಾರತೀಯ ನಾರಿಯ ಶಕ್ತಿಯನ್ನು ಪ್ರತಿನಿಧಿಸಿದ್ದಾರೆ. ಕಠಿಣ ಪರಿಶ್ರಮದಿಂದ ವೃತ್ತಿಪರ ಶ್ರೇಷ್ಠತೆ ಸಾಧಿಸಿದ್ದಾರೆ. ಸಂಸತ್ತು ಐತಿಹಾಸಿಕ ನಾರಿ ಶಕ್ತಿ ವಂದನೆ ಅಧಿನಿಯಮವನ್ನು ಅಂಗೀಕರಿಸಿರುವ ಸಮಯದಲ್ಲಿ ವಹೀದಾ ಅವರಿಗೆ ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿರುವುದು ಸಕಾಲಿಕ ಹಾಗೂ ಭಾರತೀಯ ಚಿತ್ರರಂಗದ ಪ್ರಾತಿನಿಧಿಕ ಪ್ರಮುಖ ಮಹಿಳೆಯೊಬ್ಬರಿಗೆ ನೀಡಿದ ಸೂಕ್ತವಾದ ಗೌರವ. ನಾನು ಅವರನ್ನು ಅಭಿನಂದಿಸುತ್ತೇನೆ ಮತ್ತು ನಮ್ಮ ಚಲನಚಿತ್ರ ಇತಿಹಾಸದ ಭಾಗವಾಗಿರುವ ಅವರ ಸಾಧನೆಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.”

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯು ದಿವಂಗತ ನಟ ದೇವ್ಆನಂದ್ (Dev Anand) ಅವರ ಶತಮಾನೋತ್ಸವದೊಂದಿಗೆ ಸೇರಿಕೊಂಡಿದೆ. ದೇವ್ ಆನಂದ್ ಹಾಗೂ ವಹೀದಾ ರೆಹಮಾನ್ 1965ರ ಬ್ಲಾಕ್‌ಬಸ್ಟರ್‌ ಚಿತ್ರ ʼಗೈಡ್‌ʼನ ರೊಮ್ಯಾಂಟಿಕ್‌ ಜೋಡಿ. ಈ ವರ್ಷದ ಕೊನೆಯಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ವಹೀದಾ ರೆಹಮಾನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಆಶಾ ಪರೇಖ್ (Asha Parekh) ಹಾಗೂ ಅದರ ಹಿಂದಿನ ವರ್ಷದ (2019) ಪ್ರಶಸ್ತಿಯನ್ನು ರಜನಿಕಾಂತ್‌ (Rajinikanth) ಪಡೆದಿದ್ದರು. ವಹೀದಾ ಸದ್ಯ ಬೆಂಗಳೂರಿನ ನಿವಾಸಿಯಾಗಿದ್ದಾರೆ.

ಇದನ್ನೂ ಓದಿ: Sunday read | ಈ ಚೆಲುವೆ ವನ್ಯಜೀವಿ ಫೋಟೋಗ್ರಫಿ ಮಾಡಿದಾಗ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mamata Banerjee: ಸಲ್ಮಾನ್‌ ಖಾನ್‌ ಜತೆ ಮಮತಾ ಬ್ಯಾನರ್ಜಿ ಡ್ಯಾನ್ಸ್‌! ವಿಡಿಯೊ ಇಲ್ಲಿದೆ

Mamata Banerjee: 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಡ್ಯಾನ್ಸ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

mamtha
Koo

ಕೋಲ್ಕತ್ತಾ: ಸದಾ ರಾಜಕೀಯದಲ್ಲಿ ಬ್ಯುಸಿ ಇರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜಕೀಯವನ್ನೆಲ್ಲ ಮರೆತು ವೇದಿಕೆ ಮೇಲೆ ಡ್ಯಾನ್ಸ್‌ ಮಾಡಿದ್ದಾರೆ. ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಜತೆ ಮಮತಾ ಸ್ಟೆಪ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ. ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ (KIFF) ಮಂಗಳವಾರ (ಡಿಸೆಂಬರ್ 6) ಉದ್ಘಾಟನೆಗೊಂಡಿತು. ಈ ವೇಳೆ ಮಮತಾ ಡ್ಯಾನ್ಸ್‌ ಮಾಡಿ ಬೆರಗು ಮೂಡಿಸಿದರು.

ಸಲ್ಮಾನ್ ಖಾನ್ ಹಾಗೂ ಇತರ ಸೆಲೆಬ್ರಿಟಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಆ ವೇಳೆ ಮಮತಾ ಬ್ಯಾನರ್ಜಿ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ಡ್ಯಾನ್ಸ್ ಮಾಡುವಂತೆ ಮಮತಾ ಬ್ಯಾನರ್ಜಿ ಬಳಿ ಬಂದು ಸಲ್ಮಾನ್ ಖಾನ್ ಮನವಿ ಮಾಡಿದರು. ಅದಕ್ಕೆ ಮಮತಾ ಬ್ಯಾನರ್ಜಿ ಒಪ್ಪಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಸಲ್ಮಾನ್, ಮಮತಾ ಮಾತ್ರವಲ್ಲದೆ ಮಹೇಶ್ ಭಟ್, ಅನಿಲ್ ಕಪೂರ್, ಸೋನಾಕ್ಷಿ ಸಿನ್ಹಾ, ಶತ್ರುಘ್ನ ಸಿನ್ಹಾ ಕೂಡ ಸೊಂಟ ಬಳುಕಿಸಿದ್ದಾರೆ. ವೇದಿಕೆಯಲ್ಲೇ ಇದ್ದ ಸೌರವ್‌ ಗಂಗೂಲಿ ನಗುತ್ತಾ ಚಪ್ಪಾಳೆ ತಟ್ಟುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಮಮತಾ ಬ್ಯಾನರ್ಜಿ ಜಾಸ್ತಿ ಸ್ಟೆಪ್ಸ್‌ ಹಾಕಿಲ್ಲ. ಬರೀ ಕೈ ಬೀಸಿದ್ದಾರೆ. ಇದನ್ನೇ ಕೆಲವರು ಟ್ರೋಲ್‌ ಮಾಡುತ್ತಿದ್ದಾರೆ. ಅಲ್ಲದೆ ಮಮತಾ ಬ್ಯಾನರ್ಜಿ ಅವರಿಂದ ಸ್ಟೆಪ್‌ ಮಾಡಿಸಿದ ಸಲ್ಮಾನ್‌ ಖಾನ್‌ ಅವರಿಗೂ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಡಿಸೆಂಬರ್ 12ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಈ ವೇಳೆ 39 ದೇಶಗಳ 219 ಚಲನಚಿತ್ರ ಪ್ರದರ್ಶನವಾಗಲಿದೆ. ಹಲವು ಸೆಲೆಬ್ರಿಟಿಗಳು, ನಿರ್ದೇಶಕರು, ವಿಮರ್ಶಕರು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Continue Reading

ಬಾಲಿವುಡ್

Animal Movie: 150 ಕೋಣೆಯ ಅರಮನೆಯಲ್ಲಿ ʻಅನಿಮಲ್‌ʼ ಶೂಟಿಂಗ್‌; ಇದು ಯಾರ ಬಂಗಲೆ ನೋಡಿ!

Animal Movie: ಚಿತ್ರದಲ್ಲಿ ಚಿತ್ರಿಸಲಾದ ಐಷಾರಾಮಿ ಬಂಗಲೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಒಡೆತನದ 800 ಕೋಟಿ ರೂ. ಪಟೌಡಿ ಅರಮನೆ ಎಂದರೆ ನೀವು ನಂಬಲೇ ಬೇಕು.

VISTARANEWS.COM


on

Ranbir Kapoor Animal was shot at Saif Ali Khan’s 800 crore Pataudi Palace
Koo

ಬೆಂಗಳೂರು: ರಣಬೀರ್ ಕಪೂರ್ ಅವರ ʻಅನಿಮಲ್‌ʼ ಸಿನಿಮಾ (Animal Movie) ಆರು ದಿನಗಳಲ್ಲಿ ವಿಶ್ವಾದ್ಯಂತ 500 ಕೋಟಿ ರೂ. ಗಡಿ ದಾಟಲು ಸಿದ್ಧವಾಗಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಚಿತ್ರವು ಈಗ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 425 ಕೋಟಿ ರೂ. ಗಳಿಸಿದೆ. ಇದರ ಜತೆಗೆ ಸಾಕಷ್ಟು ಚರ್ಚೆಯಲ್ಲಿರುವುದು ಸಿನಿಮಾದ ಶೂಟಿಂಗ್‌ ಸ್ಪಾಟ್‌. ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಸಿನಿಮಾ ಇಂಗ್ಲೆಂಡ್, ಸ್ಕಾಟ್ಲೆಂಡ್, ಮುಂಬೈ, ಗುರುಗ್ರಾಮ, ದೆಹಲಿ ಮತ್ತು ಮನಾಲಿ ಸೇರಿದಂತೆ ವಿವಿಧ ಕಡೆಗಳಲ್ಲಿ ಶೂಟಿಂಗ್‌ ಆಗಿದೆ. ಇನ್ನು ಬಹುಮುಖ್ಯವಾಗಿ ಚಿತ್ರದಲ್ಲಿ ಚಿತ್ರಿಸಲಾದ ಐಷಾರಾಮಿ ಸಿಂಗ್ ಕುಟುಂಬದ ನಿವಾಸ ಶೂಟಿಂಗ್‌ ಆಗಿದ್ದು, ಬಾಲಿವುಡ್ ನಟ ಸೈಫ್ ಅಲಿ ಖಾನ್ ಒಡೆತನದ 800 ಕೋಟಿ ರೂ. ಮೌಲ್ಯದ ಪಟೌಡಿ ಅರಮನೆಯಲ್ಲಿ ಎಂದರೆ ನೀವು ನಂಬಲೇ ಬೇಕು!

1935ರಲ್ಲಿ ಪಟೌಡಿಯ ಕೊನೆಯ ಆಡಳಿತದ ನವಾಬ್ ಇಫ್ತಿಕರ್ ಅಲಿ ಖಾನ್ ನಿರ್ಮಿಸಿದ ಅರಮನೆಯು, ಸೈಫ್ ಅಲಿ ಖಾನ್ ಅವರ ತಂದೆಯ ಮರಣದ ನಂತರ 2014ರಲ್ಲಿ ಅವರ ಕೈಗೆ ಹಸ್ತಾಂತರವಾಯಿತು. ಹರಿಯಾಣದ ಪಟೌಡಿಯಲ್ಲಿ ಇರುವ ಈ ಪಟೌಡಿ ಅರಮನೆಯು 10 ಎಕರೆಗಳಷ್ಟು ವಿಸ್ತಾರವಾಗಿದೆ. ಮಲಗುವ ಕೋಣೆಗಳು, ಡ್ರೆಸ್ಸಿಂಗ್‌ ರೂಮ್‌ಗಳು, ಒಳಗೊಂಡಂತೆ 150ಕ್ಕೂ ಹೆಚ್ಚು ರೂಮ್‌ಗಳನ್ನು ಹೊಂದಿದೆ. ಹೊರಾಂಗಣದಲ್ಲಿ ಈಜುಕೊಳ, ಕೃಷಿ ಪ್ರದೇಶ, ಒಳಗೊಂಡಿದೆ. ಮೂಲತಃ ಆಸ್ಟ್ರಿಯನ್ ವಾಸ್ತುಶಿಲ್ಪಿ ಕಾರ್ಲ್ ಮೊಲ್ಟ್ಜ್ ವಾನ್ ಹೈಂಜ್ ಅವರ ಸಹಯೋಗದೊಂದಿಗೆ ಬ್ರಿಟಿಷ್ ವಾಸ್ತುಶಿಲ್ಪಿ ರಾಬರ್ಟ್ ಟಾರ್ ರಸ್ಸೆಲ್ ವಿನ್ಯಾಸಗೊಳಿಸಿದ್ದಾರೆ. ಈ ಅರಮನೆಯು ಭಾರತೀಯ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪದ ಶೈಲಿಗಳ ಮಿಶ್ರಣವನ್ನು ಹೊಂದಿದೆ. ಸೈಫ್ ಅಲಿ ಖಾನ್ ಮಾಲೀಕತ್ವವನ್ನು ವಹಿಸಿಕೊಂಡ ನಂತರ ಒಳಾಂಗಣದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆಯಂತೆ. ಪಟೌಡಿ ಅರಮನೆಯಲ್ಲಿ ಈ ಅನಿಮಲ್‌ಗೂ ಮುಂಚೆ ಇತರ ಬಾಲಿವುಡ್ ಸಿನಿಮಾಗಳು ಶೂಟಿಂಗ್‌ ಆಗಿತ್ತು. ಶಾರುಖ್ ಖಾನ್ ಮತ್ತು ಪ್ರೀತಿ ಜಿಂಟಾ ನಟಿಸಿದ ʻವೀರ್ ಝರಾʼ ಮತ್ತು ʻರಂಗ್ ದೇ ಬಸಂತಿʼ ಕೂಡ ಸೇರಿವೆ. ಪಟೌಡಿ ಅರಮನೆಯಲ್ಲಿ ಸೈಫ್‌ ಮತ್ತು ಕರೀನಾ ಕಪೂರ್ ಕುಟುಂಬದ ಕಾರ್ಯಕ್ರಮಗಳೂ ನಡೆದಿವೆ.

ಇದನ್ನೂ ಓದಿ: Animal Box Office: 200 ಕೋಟಿ ರೂ. ಗಡಿ ದಾಟಿದ ʻಅನಿಮಲ್‌ʼ!

Ranbir Kapoor Animal was shot at Saif Ali Khan’s 800 crore Pataudi Palace

ಈಗಾಗಲೇ ಅನಿಮಲ್‌ ಸಿನಿಮಾ ಕಲೆಕ್ಷನ್‌ನಲ್ಲಿ 500 ಕೋಟಿ ರೂ. ಗಡಿ ದಾಟುವಲ್ಲಿ ಇದೆ. ಚಲನಚಿತ್ರ ವ್ಯಾಪಾರ ವಿಶ್ಲೇಷಕ ರಮೇಶ್ ಬಾಲಾ ಟ್ವೀಟ್ ಮಾಡಿ ಉತ್ತರ ಅಮೆರಿಕಾದಲ್ಲಿ ಅತಿ ಹೆಚ್ಚು ಕಲೆಕ್ಷನ್‌ ಮಾಡಿರುವ ಸಿನಿಮಾದಲ್ಲಿ ಅನಿಮಲ್‌ 5ನೇ ಭಾರತೀಯ ಚಲನಚಿತ್ರವಾಗಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ರೆಡ್ ಚಿಲ್ಲಿಸ್ ಎಂಟರ್‌ಟೈನ್‌ಮೆಂಟ್ ಪ್ರಕಾರ. ನಾಲ್ಕು ದಿನಗಳಲ್ಲಿ ಜಾಗತಿಕವಾಗಿ 520.79 ಕೋಟಿ ಗಳಿಸಿದ ಈ ವರ್ಷದ ಅತಿ ದೊಡ್ಡ ಹಿಟ್ ಸಿನಿಮಾ ʻಜವಾನ್‌ʼಗೆ ಹೋಲಿಸಿದರೆ, ಅನಿಮಲ್ ಇನ್ನೂ ಹಿಂದುಳಿದಿದೆ. ತರಣ್ ಆದರ್ಶ್ ಪ್ರಕಾರ ಪಠಾಣ್ ನಾಲ್ಕು ದಿನಗಳಲ್ಲಿ 429 ಕೋಟಿ ರೂ. ಗಳಿಕೆ ಕಂಡಿತ್ತು.

ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

Continue Reading

ದೇಶ

Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Aamir Khan: ಚೆನ್ನೈಯ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್‌ ಖಾನ್‌ ಅವರನ್ನು ರಕ್ಷಿಸಲಾಗಿದೆ. ಸದ್ಯ ಈ ಫೋಟೊ ವೈರಲ್‌ ಆಗಿದೆ.

VISTARANEWS.COM


on

chennai
Koo

ಚೆನ್ನೈ: ಚೆನ್ನೈನ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ (Aamir Khan) ಅವರನ್ನು ರಕ್ಷಿಸಲಾಗಿದೆ. ಆಮೀರ್ ಖಾನ್ ಮತ್ತು ತಮಿಳು ನಟ ವಿಷ್ಣು ವಿಶಾಲ್ (Vishnu Vishal), ಪ್ರವಾಹ ಪೀಡಿತ ಇತರರೊಂದಿಗೆ ರಕ್ಷಣಾ ದೋಣಿಯಲ್ಲಿ ಕುಳಿತಿರುವ ಫೋಟೊ ವೈರಲ್ ಆಗಿದೆ. ಫೋಟೋಗಳಲ್ಲಿ ಆಮೀರ್ ಮತ್ತು ವಿಷ್ಣು ವಿಶಾಲ್ ರಕ್ಷಣಾ ಅಧಿಕಾರಿಗಳಿಂದ ಸಹಾಯ ಪಡೆಯುತ್ತಿರುವುದನ್ನೂ ಕಾಣಬಹುದು. ಸುರಕ್ಷಿತ ಸ್ಥಳಕ್ಕೆ ತೆರಳಿದ ಬಳಿಕ ಅವರು ಫೋಟೊಗಳಿಗೆ ಪೋಸು ನೀಡಿದ್ದಾರೆ.

ಈ ಫೋಟೊ ವಿಷ್ಣು ವಿಶಾಲ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನೆರೆಗೆ ಸಿಲುಕಿದ ನಮ್ಮಂತಹ ನೂರಾರು ಜನರಿಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ಇತರ ಇಲಾಖೆಗಳ ಸಿಬ್ಬಂದಿಗೆ ಧನ್ಯವಾದಗಳು. ಕರಪಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ 3 ದೋಣಿಗಳು ಕಾರ್ಯನಿರ್ವಹಿಸುತ್ತಿರುವುದನ್ನು ನೋಡಿದೆ. ಇಂತಹ ಸಂಧಿಗ್ಧ ಸಮಯದಲ್ಲಿ ತಮಿಳುನಾಡು ಸರ್ಕಾರದ ಉತ್ತಮ ಕೆಲಸ ಮಾಡುತ್ತಿದೆ. ಅವಿರತವಾಗಿ ಕೆಲಸ ಮಾಡುತ್ತಿರುವ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿದ್ಯುತ್ ಮತ್ತು ನೆಟ್‌ವರ್ಕ್‌ ಇಲ್ಲದೆ ಚೆನ್ನೈನ ತಮ್ಮ ಮನೆಯಲ್ಲಿ ಸಿಲುಕಿಕೊಂಡಿದ್ದೇನೆ ಎಂದು ವಿಷ್ಣು ವಿಶಾಲ್‌ ಈ ಹಿಂದೆ ಬಹಿರಂಗಪಡಿಸಿದ್ದರು. ತನ್ನ ಮನೆಯೊಳಗೆ ನೀರು ನುಗ್ಗಿದೆ ಎಂದು ತಿಳಿಸಿದ್ದರು. ಫೋಟೊಗಳನ್ನು ಹಂಚಿಕೊಂಡಿದ್ದ ಅವರು, “ನೀರು ನನ್ನ ಮನೆಯೊಳಗೆ ನುಗ್ಗುತ್ತಿದೆ. ಕರಪಕ್ಕಂನಲ್ಲಿ ನೀರಿನ ಮಟ್ಟ ಅಪಾಯಕಾರಿಯಾಗಿ ಏರುತ್ತಿದೆ. ನಾನು ಸಹಾಯಕ್ಕಾಗಿ ಕರೆ ಮಾಡಿದ್ದೇನೆ. ವಿದ್ಯುತ್ ಇಲ್ಲ, ವೈಫೈ ಇಲ್ಲ, ಫೋನ್ ಸಿಗ್ನಲ್ ಇಲ್ಲ, ಏನೂ ಇಲ್ಲ. ಒಂದು ನಿರ್ದಿಷ್ಟ ಸ್ಥಳದಲ್ಲಿ ಟೆರೇಸ್‌ನಲ್ಲಿ ಮಾತ್ರ ನನಗೆ ಕೆಲವು ಸಿಗ್ನಲ್ ಸಿಗುತ್ತದೆʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಧಾರಾಕಾರ ಮಳೆ

ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ಕಡಲೂರು ಮತ್ತು ತಿರುವಳ್ಳೂರು ಜಿಲ್ಲೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ಚೆನ್ನೈನ ಹೆಚ್ಚಿನ ಭಾಗಗಳು ಪ್ರಸ್ತುತ ನೀರಿನಲ್ಲಿ ಮುಳುಗಿವೆ. ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರವಾಹ ಕಂಡು ಬಂದಿದ್ದು, ರಕ್ಷಣಾ ಸಿಬ್ಬಂದಿ ನಿರಂತರವಾಗಿ ಕಾರ್ಯ ನಿರತರಾಗಿದ್ದಾರೆ. ನಿಂತ ನೀರನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಕೆಲವು ಪ್ರದೇಶಗಳಲ್ಲಿ, ನೀರು ತುಂಬಿದ ರಸ್ತೆಗಳಲ್ಲಿ ಕಾರುಗಳು ತೇಲುತ್ತಿರುವ ದೃಶ್ಯ ವೈರಲ್‌ ಆಗಿತ್ತು.

ಇದನ್ನೂ ಓದಿ: Cyclone Michaung: ಮಿಚಾಂಗ್ ಚಂಡಮಾರುತದಿಂದ 8 ಸಾವು; ಶಾಲೆ, ಬ್ಯಾಂಕ್‌ ಕ್ಲೋಸ್‌

ನೆರವಿಗೆ ಬಂದ ಸಹೋದರರು

ಈ ಮಧ್ಯೆ ತಮಿಳು ಚಿತ್ರರಂಗದ ನಟರಾದ ಸೂರ್ಯ ಮತ್ತು ಕಾರ್ತಿ 10 ಲಕ್ಷ ರೂ.ಗಳ ಆರಂಭಿಕ ದೇಣಿಗೆಯನ್ನು ಘೋಷಿಸಿದ್ದಾರೆ. ಅಗತ್ಯವಿರುವ ಯಾವುದೇ ರೀತಿಯ ಸಹಾಯ ಒದಗಿಸಲು ಈ ಹಣವನ್ನು ಬಳಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ನಟರ ಅಭಿಮಾನಿ ಸಂಘಗಳ ಮೂಲಕ ನೆರವು ನೀಡಲಾಗುತ್ತದೆ.

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡು ಬೀಸುತ್ತಿರುವ ಮಿಚಾಂಗ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ಭೂಕುಸಿತವಾಗಿದೆ. ಕಾರು- ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಮನೆಗಳು ಕುಸಿದಿವೆ. ಕೋಟಿಗಟ್ಟಲೆ ಆಸ್ತಿಗೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ಕ್ರಿಕೆಟ್

‘ಅನಿಮಲ್’ ಸಿನಿಮಾ ನೋಡಿ 3 ಗಂಟೆ ವ್ಯರ್ಥವಾಯಿತು; ಟೀಮ್​ ಇಂಡಿಯಾ ವೇಗಿ ಅಸಮಾಧಾನ

‘ಅನಿಮಲ್’ ಸಿನಿಮಾ ನೋಡಿ(Animal) ಅತ್ಯಮೂಲ್ಯ ಮೂರು ಗಂಟೆಗಳು ವ್ಯರ್ಥವಾಯಿತು ಎಂದು ಟೀಮ್​ ಇಂಡಿಯಾ ವೇಗಿ ​ದೇವ್​ ಉನಾದ್ಕತ್(Jaydev Unadkat) ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

jaydev unadkat
Koo

ಜೈಪುರ: ರಣಬೀರ್ ಕಪೂರ್(Ranbir Kapoor) ಅಭಿನಯದ ‘ಅನಿಮಲ್’ ಚಿತ್ರ(Animal) ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕಲೆಕ್ಷನ್​ ಮಾಡುತ್ತಿದೆ. ಮತ್ತೊಂದೆಡೆ ವಿವಾದಕ್ಕೂ ಕಾರಣವಾಗಿದೆ. ಸ್ತ್ರಿದ್ವೇಷ ವೈಭವಿಕರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧದ ಚಚರ್ಚೆಗಳು ಆರಂಭವಾಗಿದೆ. ಟೀಮ್​ ಇಂಡಿಯಾದ ವೇಗಿ ಜಯ​ದೇವ್​ ಉನಾದ್ಕತ್(Jaydev Unadkat)​ ಕೂಡ ಸಿನಿಮಾ ಬಗ್ಗೆ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

ಅನಿಮಲ್ ಚಿತ್ರವನ್ನು ವೀಕ್ಷಿಸಿದ ಜಯದೇವ್ ಉನಾದ್ಕತ್,” ಇದೊಂದು ಸ್ತ್ರೀ ಅವಮಾನಕರ ಸಿನಿಮಾ ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಸುದೀರ್ಘ ಬರಹಗಳ ಮೂಲಕ ಪೋಸ್ಟ್​ ಮಾಡಿ, ಈ ಚಿತ್ರವನ್ನು ‘ಡಿಸಾಸ್ಟರ್, ಅವಮಾನಕರ’. ಇದೊಂದು ಕರುಣಾಜನಕ ಸಿನಿಮಾ. ಇದನ್ನು ವೀಕ್ಷಿಸಿ ನನ್ನ ಅತ್ಯಮೂಲ್ಯ ಮೂರು ಗಂಟೆಗಳು ವ್ಯರ್ಥವಾಯಿತು. ಇಂದಿನ ಜಗತ್ತಿನಲ್ಲಿ ಸ್ತ್ರಿದ್ವೇಷ ವೈಭವಿಕರ ಮತ್ತು ಪುರುಷರನ್ನು ಪ್ರಬಲರನ್ನಾಗಿ ತೋರಿಸುವುದು ಅವಮಾನಕರ” ಎಂದು ಪೋಸ್ಟ್ ಮಾಡಿದ್ದರು. ಅವರ ಈ ಪೋಸ್ಟ್​ ಎಲ್ಲಡೆ ವೈರಲ್ ಮತ್ತು ಟ್ರೋಲ್​​ ಆಗಿತ್ತು. ಇದೇ ಕಾರಣದಿಂದ ಉನಾದ್ಕತ್ ತಮ್ಮ ಈ ಪೋಸ್ಟನ್ನು ಡಿಲೀಡ್​ ಮಾಡಿದ್ದಾರೆ. ಆದರೆ ಕೆಲ ನೆಟ್ಟಿಗರು ಇದರ ಸ್ಕ್ರೀನ್​ಶಾಟ್​ಗಳನ್ನು ತೆಗೆದಿದ್ದಾರೆ. ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕೃತ್ಯಗಳನ್ನು ವೈಭವೀಕರಿಸಿ ತೋರಿಸಬಾರದು

“ನಾವು ಕಾಡಿನಲ್ಲಿ, ಅರಮನೆಗಳಲ್ಲಿ ವಾಸಿಸುತ್ತಿಲ್ಲ. ಯುದ್ಧಗಳನ್ನು ಮಾಡುತ್ತಿಲ್ಲ. ನಟನೆ ಎಷ್ಟು ಚೆನ್ನಾಗಿತ್ತು ಎಂಬುದು ಮುಖ್ಯವಲ್ಲ, ಕುಟುಂಬ ಸಮೇತರಾಗಿ ವೀಕ್ಷಿಸುವ ಸಿನಿಮಾದಲ್ಲಿ ಇಂತಹ ಕೃತ್ಯಗಳನ್ನು ವೈಭವೀಕರಿಸಿ ತೋರಿಸಬಾರದು. ಮನರಂಜನಾ ಉದ್ಯಮದಲ್ಲಿಯೂ ಸಾಮಾಜಿಕ ಜವಾಬ್ದಾರಿ ಅತ್ಯಗತ್ಯ. ಇದನ್ನು ಎಂದಿಗೂ ಮರೆಯಬಾರದು” ಎಂದು ಉನಾದ್ಕತ್ ತಮ್ಮ ಆಕ್ರೋಶ ಹೊರಕಾಕಿದ್ದಾರೆ.

ರಣಬೀರ್ ಕಪೂರ್ ಈ ಸಿನಿಮಾಕ್ಕಾಗಿ 30– 35 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಈ ಮೊದಲು ರಣಬೀರ್ ಪ್ರತಿ ಚಿತ್ರಕ್ಕೆ 70 ಕೋಟಿ ರೂ. ಸಂಭಾವನೆಯನ್ನು ಪಡಯುತ್ತಿದ್ದರು ಎನ್ನಲಾಗಿದೆ. ಆದರೆ ಅನಿಮಲ್‌ ನಿರ್ಮಾಪಕರಾದ ಭೂಷಣ್ ಕುಮಾರ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರಿಗೆ ಬೆಂಬಲ ಸೂಚಿಸಿ, ಈ ಬಾರಿ ತಮ್ಮ ಸಂಭಾವನೆಯನ್ನು ಶೇ. 50ರಷ್ಟು ಕಡಿಮೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಬಾಬಿ ಡಿಯೋಲ್ 4-5 ಕೋಟಿ ರೂ., ರಶ್ಮಿಕಾ ಮಂದಣ್ಣ ಅವರಂತಹ ಇತರ ಪಾತ್ರವರ್ಗದವರು 4 ರೂ. ಕೋಟಿ, ಮತ್ತು ಅನಿಲ್ ಕಪೂರ್ 2 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Animal Cast Fees: ‘ಅನಿಮಲ್’ ಚಿತ್ರಕ್ಕೆ ರಣಬೀರ್ ಕಪೂರ್ ಪಡೆದ ಸಂಭಾವನೆ ಎಷ್ಟು?

ಅನಿಮಲ್’ ಉತ್ತರ ಅಮೆರಿಕಾದಲ್ಲಿ 1 ಮಿಲಿಯನ್ ಡಾಲರ್‌ ದಾಟಿದೆ. ಈ ಸಾಧನೆ ಮಾಡಿದ ಮೊದಲ ಹಿಂದಿ ಚಿತ್ರ ಇದು. ಇನ್ನೂ ಅನೇಕ ದಾಖಲೆಗಳನ್ನು ಮುರಿಯಲಿದೆʼ ಎಂದು ಎಕ್ಸ್‌ನಲ್ಲಿ ಬರೆಯಲಾಗಿತ್ತು.

ತಂದೆ-ಮಗನ ಕಥೆ

ಚಿತ್ರದ ಕಥೆಯನ್ನು ತಂದೆ ಮತ್ತು ಮಗನ ಸಂಕೀರ್ಣ ಸಂಬಂಧದ ಸುತ್ತ ಹೆಣೆಯಲಾಗಿದೆ. ಅನಿಲ್‌ ಕಪೂರ್‌ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಣಬೀರ್ ಕಪೂರ್‌ ಅರ್ಜುನ್ ಎನ್ನುವ ಪಾತ್ರ ನಿರ್ವಹಿಸಿದ್ದು, ತನ್ನ ಗುರಿಗಳನ್ನು ಸಾಧಿಸಲು ಯಾವುದೇ ಮಟ್ಟಕ್ಕೆ ಹೋಗಲು ಸಿದ್ಧನಿರುವ ವ್ಯಕ್ತಿ ಎಂದು ಚಿತ್ರದಲ್ಲಿ ವಿವರಿಸಲಾಗಿದೆ. ಜತೆಗೆ ತಂದೆ ಮತ್ತು ಮಗನ ನಡುವಿನ ಪ್ರಕ್ಷುಬ್ಧ ಸಂಬಂಧವನ್ನು ಇದು ತೆರೆದಿಡುತ್ತದೆ.

Continue Reading
Advertisement
Khalistani Terrorist Pannun
ದೇಶ7 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema21 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ26 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ43 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ56 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್56 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ1 hour ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ವ್ಯಕ್ತಿ!

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್2 hours ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್2 hours ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ26 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌