Deepika Padukone | ಪಠಾಣ್‌ ಕೇಸರಿ ವಿವಾದ : ಸ್ತ್ರೀ ದ್ವೇಷಿಗಳ ವಿರುದ್ಧ ಕಿಡಿಕಾರಿದ ಮೋಹಕ ತಾರೆ ರಮ್ಯಾ, ಟ್ವೀಟ್‌ ವೈರಲ್‌! - Vistara News

ಬಾಲಿವುಡ್

Deepika Padukone | ಪಠಾಣ್‌ ಕೇಸರಿ ವಿವಾದ : ಸ್ತ್ರೀ ದ್ವೇಷಿಗಳ ವಿರುದ್ಧ ಕಿಡಿಕಾರಿದ ಮೋಹಕ ತಾರೆ ರಮ್ಯಾ, ಟ್ವೀಟ್‌ ವೈರಲ್‌!

ಸಾಕಷ್ಟು ಟ್ರೋಲ್‌ಗಳಿಗೆ ಒಳಗಾಗಿರುವ ಸಮಂತಾ, ರಶ್ಮಿಕಾ, ಸಾಯಿ ಪಲ್ಲವಿ, ದೀಪಿಕಾ (Deepika Padukone) ಪರ ನಟಿ ರಮ್ಯಾ ಧ್ವನಿ ಎತ್ತಿದ್ದಾರೆ. 

VISTARANEWS.COM


on

Deepika Padukone
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಶಾರುಖ್‌ ಖಾನ್‌ ಹಾಗೂ ದೀಪಿಕಾ ಪಡುಕೋಣೆ (Deepika Padukone ) ಕಾಂಬಿನೇಶನ್‌ ಚಿತ್ರ ʻಪಠಾಣ್‌ʼ ಕೇಸರಿ ಬಿಕಿನಿ ವಿಚಾರಕ್ಕೆ ಸುದ್ದಿಯಲ್ಲಿದೆ. ಈ ಬಗ್ಗೆ ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾ ಅವರು ಟ್ವೀಟ್‌ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಾಕಷ್ಟು ಟ್ರೋಲ್‌ಗಳಿಗೆ ಒಳಗಾಗಿರುವ ಸಮಂತಾ, ರಶ್ಮಿಕಾ, ಸಾಯಿ ಪಲ್ಲವಿ, ದೀಪಿಕಾ ಪರ ನಟಿ ರಮ್ಯಾ ಧ್ವನಿ ಎತ್ತಿದ್ದಾರೆ. 

”ಸಮಂತಾ ತನ್ನ ವಿಚ್ಛೇದನಕ್ಕಾಗಿ, ಸಾಯಿ ಪಲ್ಲವಿ ಅವರ ಅಭಿಪ್ರಾಯಕ್ಕಾಗಿ, ಪ್ರೀತಿಸಿ ಬೇರೆಯಾಗಿದ್ದಕ್ಕೆ ರಶ್ಮಿಕಾ, ದೀಪಿಕಾ ಅವರ ಬಟ್ಟೆಗಾಗಿ ಮತ್ತು ಅನೇಕ ಮಹಿಳೆಯರು ಎಲ್ಲದಕ್ಕೂ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ. ಆಯ್ಕೆಯ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು. ಮಹಿಳೆಯರು ಮಾ ದುರ್ಗೆಯ ಮೂರ್ತರೂಪವಾಗಿದ್ದಾರೆ. ಸ್ತ್ರೀದ್ವೇಷವು ನಾವು ಎದುರಿಸಬೇಕಾದ ದುಷ್ಟತನವಾಗಿದೆʼʼಎಂದು ಟ್ವೀಟ್‌ ಮಾಡಿದ್ದಾರೆ. ಈ ಮೂಲಕ ಸ್ತ್ರೀ ದ್ವೇಷಿಗಳ ವಿರುದ್ಧ ನಟಿ ಕಿಡಿಕಾರಿದ್ದಾರೆ.

ʻಪಠಾಣ್’ ಸಿನಿಮಾದ ʻಬೇಷರಮ್‌ ರಂಗ್’ ಹಾಡಿನ ಕಾಂಟ್ರವರ್ಸಿಗೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಈ ಚಿತ್ರದ ಹಾಡಿನಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದಾರೆ ಎಂದು ಹಲವರ ವಿರೋಧಕ್ಕೆ ಕಾರಣವಾಗಿತ್ತು. ನಾಲ್ಕೈದು ದಿನಗಳಿಂದ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೀಗ ಈ ವಿಚಾರವಾಗಿ ದೀಪಿಕಾ ಪರ ರಮ್ಯಾ ನಿಂತಿದ್ದಾರೆ.

ಇದನ್ನೂ ಓದಿ | Shahrukh Khan | ʻಪಠಾಣ್‌ʼ ಸಿನಿಮಾ ಸಾಂಗ್‌ ಔಟ್‌: ಸಖತ್‌ ಹಾಟ್‌ ಆಗಿ ಮಿಂಚಿದ ದೀಪಿಕಾ ಪಡುಕೋಣೆ!

ಏನಿದು ವಿವಾದ?
ಪಠಾಣ್ ಸಿನಿಮಾದ ʻಬೇಷರಮ್‌ ರಂಗ್‌’ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಎಂತಲೇ ಮಾಡಿದ ಹುನ್ನಾರ ಎಂದು ಹಿಂದುಪರ ಸಂಘಟನೆಗಳು ಆರೋಪಿಸುತ್ತಿವೆ. ‘ಬೇಷರಮ್‌ ರಂಗ್‌’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಮೆಂಟ್ ಕೂಡ ಮಾಡುತ್ತಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್‌ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.

ಇದನ್ನೂ ಓದಿ | Shahrukh Khan | ಶುರುವಾಯ್ತು ಬಾಯ್ಕಾಟ್‌ ಅಭಿಯಾನ: ʻಪಠಾಣ್‌ʼ ಸಿನಿಮಾ ವಿರುದ್ಧ ನೆಟ್ಟಿಗರ ಆಕ್ರೋಶ, ಏನಿದು ವಿವಾದ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

Anant Ambani Radhika: ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28-30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ 4380 ಕಿ. ಮೀ ದೂರ ಚಲಿಸಿದೆ ಎನ್ನಲಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

VISTARANEWS.COM


on

Anant Ambani Radhika 2nd pre wedding bash
Koo

ಬೆಂಗಳೂರು: ಗುಜರಾತ್‌ನ ಜಾಮ್‌ನಗರದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಪೂರ್ವ (Anant Ambani Radhika) ಕಾರ್ಯಕ್ರಮವು (Pre Wedding) ಇತ್ತೀಚೆಗೆ ಅದ್ಧೂರಿಯಾಗಿ ನಡೆದಿತ್ತು. ಈ ವಿವಾಹ ಪೂರ್ವ ಸಮಾರಂಭದ ನಂತರ, ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಆಯೋಜಿಸಲಿದ್ದಾರೆ ಎಂದು ವರದಿಯಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇರಲಿದ್ದಾರಂತೆ.

ಇದನ್ನೂ ಓದಿ: Anant Ambani Radhika Merchant: ಹೀಗಿದೆ ನೋಡಿ! ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ ಕಾರ್ನಿವಲ್‌ನ ರಾಯಲ್ ಡ್ರೆಸ್‌ಕೋಡ್ಸ್!

ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading

ಸಿನಿಮಾ

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

Katrina Kaif: ಜೀ ಲೆ ಜರಾ’ ಚಿತ್ರದ ಶೂಟಿಂಗ್ ಮುಗಿದ ನಂತರ ನಾನು ಮತ್ತು ವಿಕ್ಕಿ ಮೊದಲ ಮಗುವನ್ನು ಹೊಂದಲಿದ್ದೇವೆʼ ಎಂದು ಕತ್ರಿನಾ ತನ್ನ ಸ್ನೇಹಿತರಿಗೆ ಹೇಳಿರುವುದಾಗಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. “ನಾನು ವಿಜಯ್ ಸೇತುಪತಿ ಮತ್ತು ಫರ್ಹಾನ್ ಅಖ್ತರ್ ಅವರೊಂದಿಗೆ ಮಾಡುತ್ತಿರುವ ಚಿತ್ರಗಳ ಶೂಟಿಂಗ್ ಮುಗಿಸಿದ ನಂತರವೇ ಮಗುವನ್ನು ಯೋಜಿಸುತ್ತೇನೆ” ಎಂದು ಕತ್ರಿನಾ ತಮ್ಮ ಸ್ನೇಹಿತರಿಗೆ ಹೇಳಿದ್ದರಂತೆ. ಈಗಾಗಲೇ `ಮೆರ್ರಿ ಕ್ರಿಸ್‌ಮಸ್’ ಬಿಡುಗಡೆಯಾಗಿದೆ.

VISTARANEWS.COM


on

Katrina Kaif And Vicky Kaushal Together In London
Koo

ಬೆಂಗಳೂರು: ವಿಕ್ಕಿ ಕೌಶಲ್ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif) ಪ್ರಸ್ತುತ ಲಂಡನ್‌ನಲ್ಲಿ ವಕೇಶನ್‌ ಮೂಡ್‌ನಲ್ಲಿದ್ದಾರೆ. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಲಂಡನ್‌ನಲ್ಲಿ ಓಡಾಡುತ್ತಿರುವ ವಿಡಿಯೊಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವಿಶೇಷ ಅಂದರೆ ಕತ್ರಿನಾ ಪ್ರಗ್ನೆಂಟ್‌ ಅಂತೆ ಕಂಡಿದ್ದಾರೆ. ಕತ್ರಿನಾ ಕೈಫ್ ಅವರು ಕಪ್ಪು ಬಣ್ಣದ ಬ್ಲೇಜರ್ ಹಾಕಿದ್ದಾರೆ. ಅವರ ಹೊಟ್ಟೆ ಉಬ್ಬಿದಂತೆ ಕಾಣಿಸಿದೆ ಅವರ ಅಭಿಮಾನಿಗಳಿಗೆ! ಇದರಿಂದ ಅನೇಕರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ವಿಡಿಯೊ ಜತೆಗೆ “ನಮ್ಮ ಬಾಲಿವುಡ್ ಪವರ್ ಕಪಲ್ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಲಂಡನ್‌ನ ಬೇಕರ್ ಸ್ಟ್ರೀಟ್‌ನಲ್ಲಿ ಅಡ್ಡಾಡುತ್ತಿದ್ದಾರೆ. ವಿಕ್ಕಿ ಅವರು ಪತ್ನಿಯ ಕೈಯನ್ನು ಹಿಡಿದು ನಡೆಯುತ್ತಿದ್ದಾರೆʼʼ ಎಂದು ಅಭಿಮಾನಿಯೊಬ್ಬರು ಪೋಸ್ಟ್‌ ಮಾಡಿದ್ದಾರೆ. ವಿಕ್ಕಿ ಮೇ 16ರಂದು ಲಂಡನ್‌ನಲ್ಲಿ ತಮ್ಮ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕತ್ರಿನಾ ಕೈಫ್ ಫೋಟೊಗಳನ್ನು ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದ್ದರು.

ʻಜೀ ಲೆ ಜರಾ’ ಚಿತ್ರದ ಶೂಟಿಂಗ್ ಮುಗಿದ ನಂತರ ನಾನು ಮತ್ತು ವಿಕ್ಕಿ ಮೊದಲ ಮಗುವನ್ನು ಹೊಂದಲಿದ್ದೇವೆʼ ಎಂದು ಕತ್ರಿನಾ ತನ್ನ ಸ್ನೇಹಿತರಿಗೆ ಹೇಳಿರುವುದಾಗಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. “ನಾನು ವಿಜಯ್ ಸೇತುಪತಿ ಮತ್ತು ಫರ್ಹಾನ್ ಅಖ್ತರ್ ಅವರೊಂದಿಗೆ ಮಾಡುತ್ತಿರುವ ಚಿತ್ರಗಳ ಶೂಟಿಂಗ್ ಮುಗಿಸಿದ ನಂತರವೇ ಮಗುವನ್ನು ಯೋಜಿಸುತ್ತೇನೆ” ಎಂದು ಕತ್ರಿನಾ ತಮ್ಮ ಸ್ನೇಹಿತರಿಗೆ ಹೇಳಿದ್ದರಂತೆ. ಈಗಾಗಲೇ `ಮೆರ್ರಿ ಕ್ರಿಸ್‌ಮಸ್’ ಬಿಡುಗಡೆಯಾಗಿದೆ.

ಇದನ್ನೂ ಓದಿ: Katrina Kaif : ಸಿಎಸ್​ಕೆ ಬ್ರಾಂಡ್ ಅಂಬಾಸಿಡರ್ ಆದ ಕತ್ರಿಕಾ ಕೈಫ್

ಇದನ್ನೂ ಓದಿ: Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

ಕತ್ರಿನಾ ಕೈಫ್-‌ವಿಕ್ಕಿ ಕೌಶಲ್‌ ತಮ್ಮ ಮೊದಲ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇಬ್ಬರೂ ಈ ಸುದ್ದಿಯನ್ನೇನೂ ಖಚಿತಪಡಿಸಿಲ್ಲ. ಇಬ್ಬರೂ 2021ರ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ವಿಕ್ಕಿ ಕೌಶಲ್ ಛಾವಾ, ಬ್ಯಾಡ್ ನ್ಯೂಸ್‌ ಮತ್ತು ಲವ್ & ವಾರ್‌ನಂತಹ ಸಿನಿಮಾಗಳು ಕೈಯಲ್ಲಿವೆ. ಕತ್ರಿನಾ ಕೈಫ್ ಕೊನೆಯದಾಗಿ ವಿಜಯ್ ಸೇತುಪತಿ ಜೊತೆಗೆ ʻಮೆರ್ರಿ ಕ್ರಿಸ್‌ಮಸ್‌ʼನಲ್ಲಿ ಕಾಣಿಸಿಕೊಂಡರು.

ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿಯ ಪ್ರಕಾರ, ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಲಿದ್ದಾರೆ. “ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

Continue Reading

ಬಾಲಿವುಡ್

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

Cannes 2024: ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

VISTARANEWS.COM


on

Cannes 2024 Sonam Kapoor dubs this outfit the best at Cannes this year
Koo

ಬೆಂಗಳೂರು: ನಟಿ ಸೋನಮ್ ಕಪೂರ್ (Sonam Kapoor) ದೆಹಲಿ ಮೂಲದ ಫ್ಯಾಷನ್ ಪ್ರಭಾವಿ ನ್ಯಾನ್ಸಿ ತ್ಯಾಗಿ ಅವರ (Nancy Tyagi) ಫ್ಯಾಷನ್‌ಗೆ ಫಿದಾ ಆಗಿದ್ದಾರೆ. ಈ ಬಾರಿಯ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ನ್ಯಾನ್ಸಿ ತ್ಯಾಗಿ ಭಾಗಿಯಾಗಿದ್ದರು. ಕಾನ್‌ ಫಿಲ್ಮ್‌ ಫೆಸ್ಟಿವಲ್‌ (Cannes 2024) ಫ್ಯಾಶನ್ ಸ್ಟೇಟ್‌ಮೆಂಟ್‌ಗಳಿಗೆ ಹೆಸರುವಾಸಿಯಾಗಿರುವ ಸೋನಮ್ ಅವರು ನ್ಯಾನ್ಸಿ ತ್ಯಾಗಿ ಅವರ ಪೋಸ್ಟ್‌ವನ್ನು ರಿ ಪೋಸ್ಟ್‌ ಮಾಡಿ ಹೊಗಳಿದ್ದಾರೆ.

ಐಶ್ವರ್ಯಾ ರೈ ಮತ್ತು ಕಿಯಾರಾ ಆಡ್ವಾಣಿ ಅವರ ಇತ್ತೀಚಿನ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ ಲುಕ್‌ಗಿಂತ ನ್ಯಾನ್ಸಿ ತ್ಯಾಗಿ ಅವರ ಸ್ಟೈಲ್‌ಗೆ ಫಿದಾ ಆಗಿದ್ದಾರೆ ಸೆಲೆಬ್ರಿಟಿಗಳು. “ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ಅತ್ಯುತ್ತಮ ಉಡುಗೆ” ಎಂದು ಹೇಳುವ ಮೂಲಕ ನ್ಯಾನ್ಸಿಯನ್ನು ಹೊಗಳಿದರು ಸೋನಮ್‌. ಮೊದಲ ದಿನ ನ್ಯಾನ್ಸಿ ತ್ಯಾಗಿ 1,000 ಮೀಟರ್‌ಗಿಂತಲೂ ಹೆಚ್ಚು ಫ್ಯಾಬ್ರಿಕ್‌ ಬಟ್ಟೆಯನ್ನು ಬಳಸಿ ತಯಾರಿಸಿದ ಸುಂದರವಾದ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಈ ಡ್ರೆಸ್ ಡಿಸೈನರ್ ಮಾಡಿದ್ದಲ್ಲ.. ಸ್ವತಃ ನಾನೇ ತಯಾರಿಸಿದ್ದು ಎಂದು ಹೇಳಿಕೊಂಡಿದ್ದಾರೆ. ಈ ಗೌನ್‌ ತಯಾರಿಸಲು ನ್ಯಾನ್ಸಿ ತ್ಯಾಗಿ ಅವರಿಗೆ ಬರೋಬ್ಬರಿ ಒಂದು ತಿಂಗಳು ಬೇಕಾಯ್ತಂತೆ. ಇದೀಗ ಎರಡನೇ ದಿನ ಸೀರೆಯುಟ್ಟಿದ್ದಾರೆ.

“ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನ ನನ್ನ ಎರಡನೇ ಉಡುಗೆಯನ್ನು ನಾನು ವಿಶೇಷ ಸಮಾರಂಭದಲ್ಲಿ ಧರಿಸಿದ್ದೇನೆ, ಇದು ಸಂಪೂರ್ಣವಾಗಿ ನಾನೇ ಮಾಡಿದ ಮತ್ತೊಂದು ಸೃಷ್ಟಿಯಾಗಿದೆ. ಇದು ಕೈ ಕಸೂತಿಯನ್ನು ಒಳಗೊಂಡಿರುವ ಸೀರೆಯಾಗಿದೆʼʼ ಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ದೆಹಲಿ ಮೂಲದ ಫ್ಯಾಷನ್ ಬ್ಲಾಗರ್ ನ್ಯಾನ್ಸಿ ತ್ಯಾಗಿ ಮೊದಲಿನಿಂದಲೂ ತಾನು ರಚಿಸುವ ಬಟ್ಟೆಗಳ ವಿನ್ಯಾಸದ ವಿಡಿಯೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಇದನ್ನೂ ಓದಿ: Cannes 2024: ಆಸ್ಕರ್‌ ಪ್ರಶಸ್ತಿಯ ಆಕಾರದಂತೆ ಕಂಡ ಶೋಭಿತಾ ಧೂಲಿಪಾಲ!

ಇದನ್ನೂ ಓದಿ: Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

ಸೋಮವಾರ ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಮಿನುಗುವ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ನಡೆದಾಗ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆಕರ್ಷಕವಾಗಿ ಕಾಣುತ್ತಿದ್ದರು. ಜಾಕ್ವೆಲಿನ್ ಹೊರತಾಗಿ, ಕಿಯಾರಾ ಆಡ್ವಾಣಿ ಮತ್ತು ಶೋಭಿತಾ ಧೂಲಿಪಾಲ. ಐಶ್ವರ್ಯಾ ರೈ ಭಾಗಿಯಾಗಿದ್ದರು. ಅದಿತಿ ರಾವ್ ಹೈದರಿ ಕೂಡ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮೇ 25ರಂದು ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ 77ನೇ ಆವೃತ್ತಿ ಮುಕ್ತಾಯವಾಗಲಿದೆ.

Continue Reading

ಬಾಲಿವುಡ್

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Star Kids with Sanskrit Names: ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹೆಸರು ಸಂಸ್ಕೃತದಿಂದ ಬಂದಿದೆ. ಯಾಮಿ ಮಾತ್ರವಲ್ಲ ಈ ನಡುವೆ ಸ್ಟಾರ್ಸ್‌ಗಳು ತಮ್ಮ ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರುಗಳನ್ನೇ ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಿದ್ದಾರೆ. ಹಾಗಾದ್ರೆ ಯಾರೆಲ್ಲ ಎಂಬುದು ಮುಂದೆ ಓದಿ!

VISTARANEWS.COM


on

Star Kids with Sanskrit Names From Yami Gautam to Priyanka Chopra
Koo

ಬೆಂಗಳೂರು: ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ʻವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಮಗುವಿನ ಹೆಸರಿಗೆ ಫಿದಾ (Star Kids with Sanskrit Names) ಆಗಿದ್ದಾರೆ. ʻವೇದವಿದ್ʼ ಹೆಸರು ಎಷ್ಟು ವಿಶಿಷ್ಟ ಮತ್ತು ಅಸಾಮಾನ್ಯ ಎಂದು ಹೇಳುತ್ತಿದ್ದಾರೆ. ಈ ಹೆಸರು ಸಂಸ್ಕೃತದಿಂದ ಬಂದಿದೆ. ಯಾಮಿ ಮಾತ್ರವಲ್ಲ ಈ ನಡುವೆ ಸ್ಟಾರ್ಸ್‌ಗಳು ತಮ್ಮ ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರುಗಳನ್ನೇ ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಿದ್ದಾರೆ. ಹಾಗಾದ್ರೆ ಯಾರೆಲ್ಲ ಎಂಬುದು ಮುಂದೆ ಓದಿ!

ವಮಿಕಾ ಕೊಹ್ಲಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ 2021ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅವಳೇ ಈ ವಮಿಕಾ. ವಮಿಕಾ ಎಂಬುದು ದುರ್ಗಾ ದೇವಿಯ ಹೆಸರು. ದುರ್ಗಾ ದೇವಿಯನ್ನು ವಮಿಕಾ ಎಂದೂ ಕರೆಯುತ್ತಾರೆ. ಇದೇ ಕಾರಣದಿಂದ ಪುತ್ರಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಅರ್ಧನಾರೀಶ್ವರನ ಒಂದು ಸ್ತ್ರೀ ಭಾಗ ವಮಿಕಾ ಎಂದು ಹಲವರು ತಿಳಿಸಿದ್ದಾರೆ. ಇನ್ನು ವಮಿಕಾ ಹೆಸರಿನಲ್ಲಿ ವಿರಾಟ್​ ಅವರ ಹೆಸರಿನ ʻವʼ ಅಕ್ಷರ ಮತ್ತು ಅನುಷ್ಕಾರ ಹೆಸರಿನ ʻಕಾʼ ಅಕ್ಷರ ಸಹ ಇದೆ. ಅಷ್ಟೇ ಅಲ್ಲದೆ, ವಮಿಕಾ ಅಂದರೆ ಯಶಸ್ಸು, ಶಾಂತಿಯನ್ನು ಸೂಚಿಸುತ್ತದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ರಾಹಾ ಕಪೂರ್

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗಳಿಗೆ ರಾಹಾ ಕಪೂರ್ ಎಂದು ಹೆಸರಿಟ್ಟಿದ್ದಾರೆ. ಬಾಲಿವುಡ್‌ ಸ್ಟಾರ್‌ ದಂಪತಿ ರಣಬೀರ್ ಕಪೂರ್‌- ಅಲಿಯಾ ಭಟ್‌ ದಂಪತಿ ತಮ್ಮ ಪುತ್ರಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ರಾಹ ಎಂದರೆ ಅದರ ಮೂಲ ಅರ್ಥ ದೈವಿಕ ಮಾರ್ಗ ಎಂದು. ಸ್ವಾಹಿಲಿ ಭಾಷೆಯಲ್ಲಿ ಸಂತೋಷ ಎಂಬ ಅರ್ಥವಿದೆ. ಸಂಸ್ಕೃತದಲ್ಲಿ ಕುಲ ಎಂಬ ಅರ್ಥವಿದೆ. ಬಾಂಗ್ಲಾದಲ್ಲಿ ವಿಶ್ರಾಂತಿ, ಆರಾಮ ಹಾಗೂ ನಿರಾಳ ಎಂಬ ಅರ್ಥವಿದೆ. ಅರೇಬಿಕ್‌ನಲ್ಲಿ ಸಂತೋಷ, ಸ್ವಾತಂತ್ರ್ಯ ಹಾಗೂ ಆನಂದ ಎಂಬ ಅರ್ಥವಿದೆ.

ಅಕಾಯ್ ಕೊಹ್ಲಿ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಹಾಗೂ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿಯ ಎರಡನೇ ಮಗುವಿಗೆ ಅಕಾಯ್ ಎಂದು ಹೆಸರಿಟ್ಟಿದ್ದಾರೆ. ಇದು ‘ಕಾಯಾ’ ಎಂಬ ಹಿಂದಿ ಪದದಿಂದ ಬಂದಿದೆ. ಇದರರ್ಥ ‘ದೇಹ’. ಅಕಾಯ್ ಎಂದರೆ ತನ್ನ ಭೌತಿಕ ದೇಹಕ್ಕಿಂತ ಹೆಚ್ಚಿನದನ್ನು ಹೊಂದಿರುವವನು. ಇನ್ನು ಟರ್ಕಿಶ್ ಭಾಷೆಯಲ್ಲಿ ‘ಅಕಾಯ್’ ಎಂಬ ಪದದ ಅರ್ಥ ‘ಹೊಳೆಯುವ ಚಂದ್ರ’ (Shining moon). ಒಟ್ಟಿನಲ್ಲಿ ದಂಪತಿ ತಮ್ಮ ಮಗನಿಗೆ ವಿಶಿಷ್ಟ ಹೆಸರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ಮಾಲತಿ ಮೇರಿ ಚೋಪ್ರಾ ಜೋನಾಸ್

ಮಾಲತಿ ಸಂಸ್ಕೃತ ಮೂಲದ ಪದವಾಗಿದ್ದು, ಹೂವಿನ ಸುವಾಸನೆ, ಬೆಳದಿಂಗಳು ಎಂಬರ್ಥವಿದೆ. ಮೇರಿ ಎಂದರೆ ಲ್ಯಾಟಿಲ್ ಸ್ಟೆಲಾ ಮೇರಿಸ್ ಎಂದರ್ಥ, ಅಂದರೆ ಸಮುದ್ರದ ತಾರೆ. ಫ್ರೆಂಚ್‌ನಲ್ಲಿ ಜೀಸ್‌ಸ್‌ನ ತಾಯಿ ಎಂಬರ್ಥ ಕೂಡ ಇದೆ.

ವೇದವಿದ್

ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ. ಈ ಹೆಸರಿನ ಅರ್ಥ ವೇದಗಳಲ್ಲಿ ಚೆನ್ನಾಗಿ ಪಾರಂಗತನಾದವನು ಎಂದು.

ಕ್ಲೀಂಕಾರ ಕೊನಿಡೆಲಾ

11 ವರ್ಷದ ಬಳಿಕ ರಾಮ್‌ಚರಣ್‌ (Ram Charan) ಹಾಗೂ ಉಪಾಸನಾ ಪೋಷಕರಾಗಿದ್ದರು. ಲಲಿತಾ ಸಹಸ್ರನಾಮ ನಾಮದಿಂದ ಮಗಳಿಗೆ ಹೆಸರನ್ನು ಇಟ್ಟರು. ಮಗುವಿನ ಹೆಸರು ‘ಕ್ಲೀಂಕಾರ ಕೊನಿಡೆಲಾ’ ‘ಕ್ಲೀಂಕಾರ’ ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ದೈವಿಕ ತಾಯಿಯಾದ ‘ಶಕ್ತಿ’ಯ ಪರಮೋಚ್ಚ ಶಕ್ತಿ ಎಂದು ಅರ್ಥ.

Continue Reading
Advertisement
RCB vs RR
ಕ್ರೀಡೆ54 seconds ago

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

India Skills National Competition 2024 Grand Finale 58 Winners to Represent India at World Skills
ದೇಶ4 mins ago

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

Cm Siddaramaiah hits out at BJP for Gaurantee Scheme
ರಾಜಕೀಯ6 mins ago

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

Meghana Raj Mother Day Gift Shopping to mother
ಸ್ಯಾಂಡಲ್ ವುಡ್8 mins ago

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Prashant Kishor
ದೇಶ16 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ16 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Kempegowda International Airport parking
ಬೆಂಗಳೂರು32 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ38 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು52 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema1 hour ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌