Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್! - Vistara News

ಸಿನಿಮಾ

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

ದೇವರ ಭಾಗ- 1 (Devara Part-1) ಚಿತ್ರದ ಹೊಸ ಹಾಡು ಬಿಡುಗಡೆಯಾಗಿದ್ದು, ಇದರಲ್ಲಿ ಜೂನಿಯರ್ ಎನ್‌ಟಿಆರ್ ತಮಗಿಂತ 14 ವರ್ಷ ಚಿಕ್ಕವಳಾದ ಜಾನ್ವಿಯನ್ನು ರೊಮ್ಯಾನ್ಸ್ ಮಾಡುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಈ ಜೋಡಿ ನೋಡಲು ತುಂಬಾ ವಿಚಿತ್ರವಾಗಿದೆ ಎಂಬುದಾಗಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

Devara Part 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೂನಿಯರ್ ಎನ್‌ಟಿಆರ್ (Jr NTR) ಮತ್ತು ಜಾನ್ವಿ ಕಪೂರ್ (Janhvi Kapoor) ಅಭಿನಯದ ʼದೇವರ ಭಾಗ-1ʼ (Devara Part 1) ಚಿತ್ರದ ಹೊಸ ಹಾಡನ್ನು (new song) ಬಿಡುಗಡೆ ಮಾಡಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ, ಗೇಲಿಗೆ ಗುರಿಯಾಗಿದೆ. ಚುಟ್ಟಮಲ್ಲೆ ಚುಟ್ಟೆಸ್ಟಾಂಡಿ ತುಂಟರಿಚಿಪು.. ಹಾಡಿನ ವಿಡಿಯೋದ ಬಗ್ಗೆ ಸಾಕಷ್ಟು ನೆಗೆಟಿವ್ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಈ ಮ್ಯೂಸಿಕ್ ವಿಡಿಯೋದಲ್ಲಿ ಜೂನಿಯರ್ ಎನ್‌ಟಿಆರ್ ತಮಗಿಂತ 14 ವರ್ಷ ಚಿಕ್ಕವಳಾದ ಜಾನ್ವಿಯನ್ನು ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ಇವರಿಬ್ಬರ ಜೋಡಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಈ ಜೋಡಿ ನೋಡಲು ತುಂಬಾ ವಿಚಿತ್ರವಾಗಿದೆ ಎಂದು ಹೇಳಿದ್ದಾರೆ.

ಈ ಜೋಡಿಯು ತುಂಬಾ ವಿಚಿತ್ರವಾಗಿ ಕಾಣುತ್ತದೆ. ವಯಸ್ಸಿನ ಅಂತರವು ಎದ್ದು ಕಾಣುತ್ತಿದೆ. ರೆಡ್ಡಿಟ್ ಬಳಕೆದಾರರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಈ ಸಂಗೀತ ವಿಡಿಯೋವನ್ನು ಹಂಚಿಕೊಂಡು “ದಯವಿಟ್ಟು ಜೂನಿಯರ್ ಎನ್‌ಟಿಆರ್‌ಗೆ ಹೀಗೆ ಮಾಡಬೇಡಿ” ಎಂದು ಹೇಳಿದ್ದಾರೆ. “ನಾಟು ನಾಟು” ಅನಂತರ ಇದು “ಡೋಂಟ್-ಡು ಡೋಂಟ್-ಡು” ಎಂಬಂತೆ ಭಾಸವಾಗುತ್ತದೆ ಎಂಬುದಾಗಿ ಮತ್ತೊಬ್ಬರು ಕಾಮೆಂಟ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಇದು ತುಂಬಾ ಅಹಿತಕರವಾಗಿದೆ. ಇವರಿಬ್ಬರ ನಡುವಿನ ವಯಸ್ಸಿನ ಅಂತರವು ದೊಡ್ಡದಾಗಿದೆ ಎಂದು ಅವರಿಗೆ ತಿಳಿದಿದೆ ಮತ್ತು ಅದು ಯಾರಿಗಾದರೂ ಅನಾನುಕೂಲತೆಯನ್ನು ಉಂಟು ಮಾಡುತ್ತದೆ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಹಿಪ್ ಥ್ರಸ್ಟಿಂಗ್, ಸೊಂಟದ ಕ್ಲೋಸ್ ಅಪ್‌ಗಳು ಮೊದಲಾದವುಗಳಿಂದ ಭಾರತೀಯ ಚಲನಚಿತ್ರಗಳು ಯಾವಾಗ ಮುಂದಕ್ಕೆ ಹೋಗುತ್ತವೆಯೋ? ಇದು ತುಂಬಾ ಆತಂಕಕಾರಿಯಾಗಿದೆ. ನಾವು ಯಾವಾಗ ಉತ್ತಮ, ಸಂವೇದನಾಶೀಲ ಚಲನಚಿತ್ರಗಳನ್ನು ಮಾಡುತ್ತೇವೆ ಎಂದು ಇನ್ನೊಬ್ಬ ಬಳಕೆದಾರರು ಹೇಳಿಕೊಂಡಿದ್ದಾರೆ.


ಚುಟ್ಟಮಲ್ಲೆ ಹಾಡಿಗೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಇದು ಚಿತ್ರದ ಎರಡನೇ ಹಾಡು. ಚಿತ್ರದ ಮೊದಲ ಸಿಂಗಲ್ ಫಿಯರ್ ಸಾಂಗ್ ಈಗಾಗಲೇ ಹೆಚ್ಚಿನ ನಿರೀಕ್ಷೆಗಳನ್ನು ಉಂಟು ಮಾಡಿತ್ತು. ಅನಿರುದ್ಧ್ ಸಂಗೀತ ಸಂಯೋಜನೆಯ ಜೈಲರ್ ಚಿತ್ರದ ಹಿಟ್ ಟ್ರ್ಯಾಕ್ ಆಗಿರುವ ಹುಕುಂನ ಜನಪ್ರಿಯತೆಯನ್ನು ಇದು ಮೀರಿಸುತ್ತದೆ ಎಂದು ನಿರ್ಮಾಪಕ ನಾಗ ವಂಶಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Actor Yash: ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರುವ ಇದು ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲು ಸಿದ್ಧವಾಗುತ್ತಿದೆ. ಕೊರಟಾಲ ಶಿವ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ನಟಿಸಿದ್ದಾರೆ.


ಇದು ಜಾನ್ವಿ ಮತ್ತು ಸೈಫ್ ಅವರ ಮೊದಲ ತೆಲುಗು ಚಿತ್ರವಾಗಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಕೊಸರಾಜು ಹರಿಕೃಷ್ಣ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Komari Janaiah Naidu: ಟಾಲಿವುಡ್‌ ನಿರ್ದೇಶಕ ಕೊಮರಿ ಜನಯ್ಯ ನಾಯ್ಡು ಆತ್ಮಹತ್ಯೆ

Komari Janaiah Naidu: ವರದಿಗಳ ಪ್ರಕಾರ, ನಾಯ್ಡು ತಮ್ಮ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನು ಗಮನಿಸಿದ ಹೋಟೆಲ್ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ ನಂತರ, ನಾಯ್ಡು ಅವರು ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದರು.

VISTARANEWS.COM


on

Komari Janaiah Naidu
Koo

ಹೈದರಾಬಾದ್: ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು(Komari Janaiah Naidu) (44) ವಿಧಿವಶರಾಗಿದ್ದಾರೆ. ಮಂಗಳವಾರ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ನಲ್ಲಿ ನೇಣುಬಿದಿಕೊಂಡ ಸ್ಥಿತಿಯಲ್ಲಿ ಜನಯ್ಯ ನಾಯ್ಡು ಅವರ ಶವವಾಗಿ ಪತ್ತೆಯಾಗಿದೆ.

ವರದಿಗಳ ಪ್ರಕಾರ, ನಾಯ್ಡು ತಮ್ಮ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನು ಗಮನಿಸಿದ ಹೋಟೆಲ್ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನು ನಿರ್ದೇಶಿಸಿದ ನಂತರ, ನಾಯ್ಡು ಅವರು ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದರು. ಅದರಲ್ಲಿ ಅವರು ಕೆಲವು ವರ್ಷಗಳ ಹಿಂದೆ ‘ಜಿಎಸ್ಟಿ (ಗಾಡ್ ಸೈಥಾನ್ ಟೆಕ್ನಾಲಜಿ)’ ಎಂಬ ಸಣ್ಣ ಚಲನಚಿತ್ರವನ್ನು ಮಾಡಿದರು. ಈ ಚಿತ್ರವು ವಿಫಲವಾಗಿತ್ತು.

ಇನ್ನು ಜನಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜನಯ್ಯನ ಸಾವಿಗೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಯಾವುದೇ ಹಣಕಾಸಿನ ಸಮಸ್ಯೆಗಳಿವೆಯೇ? ಅಥವಾ ಬೇರೆ ಕಾರಣಗಳಿಂದ ಸಾವನ್ನಪ್ಪಿದ್ದಾರೆಯೇ? ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೇ ಭೋಜ್‌ಪುರಿ ಚಿತ್ರರಂಗದ ಅತ್ಯಂತ ಜನಪ್ರಿಯ ನಟಿ ಅಮೃತಾ ಪಾಂಡೆ (Amrita Pandey) ಶನಿವಾರ ಬಿಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾಗಲ್ಪುರದ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಜೋಗ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದಿವ್ಯಧರ್ಮ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್‌ ಫ್ಯಾನ್‌ಗೆ ಕಟ್ಟಿದ ಸೀರೆಯಲ್ಲಿ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಮೂಲಗಳು ಹೇಳಿವೆ. ಆದರೆ ಆತ್ಮಹತ್ಯೆಗೆ ಮುನ್ನ ಅವರು ವಾಟ್ಸಾಪ್‌ನ ಸ್ಟೇಟಸ್‌ನಲ್ಲಿ ಕೆಲವೊಂದು ವಿಚಾರಗಳನ್ನು ತಿಳಿಸಿದ್ದರು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಅಮೃತಾ ಪಾಂಡೆ ಅವರು ತಮ್ಮ ಪತಿಯೊಂದಿಗೆ ಮುಂಬೈಯಲ್ಲಿ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಸಂಬಂಧಿಕರೊಬ್ಬರು ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಅವರು ಬಿಹಾರದ ಭಾಗಲ್ಪುರಕ್ಕೆ ಆಗಮಿಸಿದ್ದರು. ಬಳಿಕ ಕೆಲವು ದಿನ ಇಲ್ಲಿಯೇ ಉಳಿಯಲು ನಿರ್ಧರಿಸಿದ್ದರು. ತಡರಾತ್ರಿಯವರೆಗೆ ಎಚ್ಚರವಾಗಿದ್ದ ಅವರು ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ರಹಸ್ಯ ಟಿಪ್ಪಣಿಯನ್ನು ಪೋಸ್ಟ್ ಮಾಡಿದ್ದರು.

ಕುಟುಂಬದ ಮೂಲಗಳ ಪ್ರಕಾರ ಅಮೃತಾ ತಮ್ಮ ವೃತ್ತಿ ಜೀವನದ ಬಗ್ಗೆ ಚಿಂತಿತರಾಗಿದ್ದರು ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಪ್ತ ಮೂಲಗಳು ತಿಳಿಸಿವೆ. ಅಮೃತಾ ಅವರು 2022ರಲ್ಲಿ ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಚಂದ್ರಮಣಿ ಜಂಗದ್ ಅವರನ್ನು ವಿವಾಹವಾಗಿದ್ದರು. ಚಂದ್ರಮಣಿ ಮುಂಬೈಯಲ್ಲಿ ಅನಿಮೇಷನ್ ಎಂಜಿನಿಯರ್ ಆಗಿದ್ದಾರೆ. ಈ ದಂಪತಿಗೆ ಇನ್ನೂ ಮಕ್ಕಳಾಗಿರಲಿಲ್ಲ.

ಇದನ್ನೂ ಓದಿ: Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

Continue Reading

ಕರ್ನಾಟಕ

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Kannada New Movie: ‘ಸಿ’ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಇದು ಕಿರಣ್ ಸುಬ್ರಮಣಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದ್ದು, ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

C Kannada movie release on August 23
Koo

ಬೆಂಗಳೂರು: ʼಸಿʼ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ (Kannada New Movie) ಈಗಾಗಲೇ ಟೀಸರ್ ಮತ್ತು ಕಂದಾ ಕಂದಾ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದರ ಜತೆಗೆ ಸಿ ಸಿನಿಮಾಗೆ ನಟ ಯೋಗಿ ಮತ್ತು ಖ್ಯಾತ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರ ಬೆಂಬಲ ಕೂಡ ಸಿಕ್ಕಿದೆ‌.

ಅಂದಹಾಗೆ ‘ಸಿ’ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.

ವಿಶೇಷ ಎಂದರೆ ಈ ಹಾಡನ್ನು ಲೂಸ್ ಮಾದ ಖ್ಯಾತಿಯ ನಟ ಯೋಗಿ ರಿಲೀಸ್ ಮಾಡಿದ್ದಾರೆ. ಹಾಡಿನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ಸಿ ಚಿತ್ರತಂಡಕ್ಕೆ ಖುಷಿ ತಂದಿದೆ. ಇನ್ನು ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಕೂಡ ಸಿ ಸಿನಿಮಾದ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಡೀ ಸಿನಿಮಾಗೆ ಒಳ್ಳೆದಾಗಲಿ, ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಅವರು ಹಾರೈಸಿದ್ದಾರೆ.

‘ಸಿ’ ಚಿತ್ರವು ಕಣ್ಣು ಕಾಣದ ಮಗಳು ಹಾಗೂ ಅಪ್ಪನ ನಡುವಿನ ಬಾಂಧವ್ಯದ ಬಗ್ಗೆ ಇದೆ. ಕಣ್ಣು ಕಾಣದ ಮಗಳ ಆಸೆಯನ್ನು ನೆರವೇರಿಸಲು ಅಪ್ಪ ಎಷ್ಟೆಲ್ಲ ಕಷ್ಟ ಪಡುತ್ತಾರೆ, ಮಗಳಿಗಾಗಿ ಅಪ್ಪನ ಹೋರಾಟದ ಕಥೆಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಿರಣ್ ಸುಬ್ರಮಣಿ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಕೊನೆಗೂ ಇಳಿಯಿತು ಬಂಗಾರದ ದರ; ಇಂದು ಚಿನ್ನ ಇಷ್ಟು ಅಗ್ಗ

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿ ಸಿನಿಮಾ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

Continue Reading

ಸಿನಿಮಾ

Spandana Vijay Raghavendra: ಸ್ಪಂದನ ಅಗಲಿ ಒಂದು ವರ್ಷ, ಭಾವುಕ ಪೋಸ್ಟ್‌ ಮಾಡಿದ ವಿಜಯ್‌ ರಾಘವೇಂದ್ರ

Spandana Vijay Raghavendra: ಕಳೆದ ವರ್ಷ ಹೃದಯಾಘಾತದಿಂದ ನಿಧನರಾಗಿದ್ದ ಪತ್ನಿಯನ್ನು ನೆನೆದು ವಿಜಯ್​ ರಾಘವೇಂದ್ರ ಇಂದು ಸೋಶಿಯಲ್​ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಯ ಸಂದೇಶ ಹಾಗೂ ಫೋಟೋ ಪೋಸ್ಟ್‌ ಮಾಡಿದ್ದಾರೆ. ʼಐ ಲವ್ ಯು ಚಿನ್ನ.. ಮೌನದಲಿ ಅರಳಿದ ನಗು ನಿನ್ನದು.. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದುʼ ಎಂದು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

VISTARANEWS.COM


on

spandana vijay raghavendra
Koo

ಬೆಂಗಳೂರು: ನಟ (Sandalwood Actor) ವಿಜಯ್​ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನ (Spandana Spandana Vijay Raghavendra) ಅವರು ಮೃತಪಟ್ಟು (Spandana Death) ಒಂದು ವರ್ಷವೇ ಕಳೆದಿದ್ದು, ಅಗಲಿದ ಪತ್ನಿಯನ್ನು ನೆನೆದುಕೊಂಡು ವಿಜಯ್‌ ರಾಘವೇಂದ್ರ ಸೋಶಿಯಲ್‌ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.

ಕಳೆದ ವರ್ಷ ಹೃದಯಾಘಾತದಿಂದ ನಿಧನರಾಗಿದ್ದ ಪತ್ನಿಯನ್ನು ನೆನೆದು ವಿಜಯ್​ ರಾಘವೇಂದ್ರ ಇಂದು ಸೋಶಿಯಲ್​ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಯ ಸಂದೇಶ ಹಾಗೂ ಫೋಟೋ ಪೋಸ್ಟ್‌ ಮಾಡಿದ್ದಾರೆ. ʼಐ ಲವ್ ಯು ಚಿನ್ನ.. ಮೌನದಲಿ ಅರಳಿದ ನಗು ನಿನ್ನದು.. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದುʼ ಎಂದು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಮ್ ಅವರ ಪುತ್ರಿ. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರು 2007ರ ಆಗಸ್ಟ್ 26ರಂದು ಮದುವೆ ಆಗಿದ್ದರು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ.

ಕಳೆದ ವರ್ಷ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ಮಾಡಲಾಯಿತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಆ.8ರಂದು ಬೆಂಗಳೂರಿಗೆ ತಂದು ಅತ್ಯಸಂಸ್ಕಾರಗಳನ್ನು ಮಾಡಲಾಗಿತ್ತು. ಸ್ಪಂದನಾ ಅವರ ನಿಧನ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಆಘಾತವನ್ನು ಉಂಟು ಮಾಡಿತ್ತು. ಹಲವು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ವಿಜಯ್‌ ರಾಘವೇಂದ್ರಗೆ ಸಾಂತ್ವನ ಹೇಳಿದ್ದರು.

ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಇಂದು ರಾಕಿಂಗ್‌ ಸ್ಟಾರ್‌ ಯಶ್‌ (Rocking Star, Actor Yash) ಭೇಟಿ ನೀಡಿದರು. ಹೊಸ ಚಿತ್ರ ʼಟಾಕ್ಸಿಕ್ʼನ (Toxic) ಶೂಟಿಂಗ್‌ ಇನ್ನು ಮೇಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ದರ್ಶನ ಮಾಡಿದ್ದಾರೆ ಎನ್ನಲಾಗಿದೆ.

ಮಳೆಯಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಜನಸಂದಣಿ ಕಡಿಮೆಯಾಗಿರುವ ಸಮಯದಲ್ಲಿ ರಾಕಿಭಾಯ್ ಟೆಂಪಲ್ ರನ್ (Temple Run) ನಡೆಸಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ದರ್ಶನ ಮಾಡಿದ್ದು, ನಂತರ ಬೆಳ್ತಂಗಡಿಯ ಸೂರ್ಯ ದೇವಸ್ಥಾನಕ್ಕೆ ವಿಸಿಟ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ʼಟಾಕ್ಸಿಕ್ʼ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ನಡುವೆ, ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ​ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ. ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.

ಇದನ್ನೂ ಓದಿ: Spandana Vijay Raghavendra: ಸ್ಪಂದನಾ ಉತ್ತರ ಕ್ರಿಯೆಗೆ ಸಿದ್ಧತೆ; ಸರ್ವರಿಗೂ ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ

Continue Reading

ಸಿನಿಮಾ

Actor Yash: ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

Actor Yash: ʼಟಾಕ್ಸಿಕ್’ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

VISTARANEWS.COM


on

actor yash 1
Koo

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಇಂದು ರಾಕಿಂಗ್‌ ಸ್ಟಾರ್‌ ಯಶ್‌ (Rocking Star, Actor Yash) ಭೇಟಿ ನೀಡಿದರು. ಹೊಸ ಚಿತ್ರ ʼಟಾಕ್ಸಿಕ್ʼನ (Toxic) ಶೂಟಿಂಗ್‌ ಇನ್ನು ಮೇಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ದರ್ಶನ ಮಾಡಿದ್ದಾರೆ ಎನ್ನಲಾಗಿದೆ.

ಮಳೆಯಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಜನಸಂದಣಿ ಕಡಿಮೆಯಾಗಿರುವ ಸಮಯದಲ್ಲಿ ರಾಕಿಭಾಯ್ ಟೆಂಪಲ್ ರನ್ (Temple Run) ನಡೆಸಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ದರ್ಶನ ಮಾಡಿದ್ದು, ನಂತರ ಬೆಳ್ತಂಗಡಿಯ ಸೂರ್ಯ ದೇವಸ್ಥಾನಕ್ಕೆ ವಿಸಿಟ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ʼಟಾಕ್ಸಿಕ್ʼ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.

ಟಾಕ್ಸಿಕ್‌ ಸಿನಿಮಾ ತಂಡದ ವಿರುದ್ಧ ಪ್ರಕರಣ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ನಟನೆಯ ಟಾಕ್ಸಿಕ್‌ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ. ​ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ.

ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.

ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್​ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್​ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ. ಕೆಲವು ದಾಖಲೆಗಳ ಪ್ರಕಾರ, ಎಚ್​ಎಂಟಿ ಸಂಸ್ಥೆಯು ಈ ಜಮೀನನ್ನು ಕೆನರಾ ಬ್ಯಾಂಕ್​ಗೆ ನೀಡಿತ್ತು. ಬಳಿಕ ಕೆನರಾ ಬ್ಯಾಂಕ್, ಕೆವಿಎನ್​ಗೆ ನೀಡಿತ್ತು. ಇದೀಗ ಕೆವಿಎನ್​ ನವರು 20.07 ಎಕರೆ ಜಾಗವನ್ನು ಸಿನಿಮಾ ಸೆಟ್ ನಿರ್ಮಾಣಕ್ಕೆ ಬಳಸಿಕೊಂಡಿದ್ದಾರೆ. ಆದರೆ ಇದು ಅರಣ್ಯ ಪ್ರದೇಶ ಎಂದು ಅರ್ಜಿದಾರರು ವಾದಿಸಿದ್ದಾರೆ. ವಿಚಾರಣೆ ಬಳಿಕವೇ ಸತ್ಯಾಂಶ ಹೊರಬರಲಿದೆ.

20 ಎಕರೆ ಜಾಗದಲ್ಲಿ ಕೋಟಿ ವೆಚ್ಚ ಮಾಡಿ ಸೆಟ್ ನಿರ್ಮಾಣ ಮಾಡಲಾಗಿದ್ದು, ಒಂದೊಮ್ಮೆ ಸೆಟ್ ತೆರವು ಮಾಡಬೇಕು ಎಂದರೆ ಟಾಕ್ಸಿಕ್​ ಚಿತ್ರತಂಡಕ್ಕೆ ಭಾರಿ ನಷ್ಟವಾಗಲಿದೆ. ಸಿನಿಮಾವು 70-80ರ ಕಾಲದಲ್ಲಿ ನಡೆಯಲಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಿನಿಮಾವನ್ನು ಸೆಟ್​ಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಹಾಗಾಗಿ ಸಿನಿಮಾಕ್ಕಾಗಿ ಬೃಹತ್ ಸೆಟ್ ಅನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: Back Benchers Movie: ಬ್ಯಾಕ್ ಬೆಂಚರ್ಸ್‌ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕ ಖುಷಿ!

Continue Reading
Advertisement
DCET 2024
ಕರ್ನಾಟಕ21 mins ago

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

Paris Olympics
ಕ್ರೀಡೆ45 mins ago

Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

Handwork Saree Blouse
ಫ್ಯಾಷನ್1 hour ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Bangladesh Unrest
ದೇಶ1 hour ago

Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

Bangalore Hotels
ಕರ್ನಾಟಕ2 hours ago

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Rohit Sharma
ಕ್ರೀಡೆ2 hours ago

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Almonds
ಆರೋಗ್ಯ2 hours ago

Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Devara Part 1
ಸಿನಿಮಾ2 hours ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ2 hours ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

National Handloom Day
ಫ್ಯಾಷನ್2 hours ago

National Handloom Day: ಮಾಡರ್ನ್‌ ಯುವತಿಯರ ಮನವನ್ನೂ ಗೆಲ್ಲುತ್ತಿರುವ ಹ್ಯಾಂಡ್‌ ಲೂಮ್‌ ಸೀರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು3 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌