Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ - Vistara News

ಸಿನಿಮಾ

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Dhanya Ramkumar : ನಟ ಕಂ ನಿರ್ದೇಶಕ ವಿಕ್ಕಿ ವರುಣ್ ಹಾಗೂ ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರ ಮುಂದಿನ ಸೆಪ್ಟೆಂಬರ್ 13ರಂದು ಬಿಡುಗಡೆಗೊಳ್ಳಲಿದೆ.

VISTARANEWS.COM


on

Dhanya Ramkumar-Vicky Varun starrer Kaalapathar to release on September 13
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ಧನ್ಯಾ ರಾಮ್‌ಕುಮಾರ್ (Dhanya Ramkumar) ನಟನೆ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್.ವಾಸು ‘ಕಾಲಾಪತ್ಥರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು.

Dhanya Ramkumar-Vicky Varun starrer Kaalapathar to release on September 13

ಚಿತ್ರದ ಕುರಿತು ಮಾತಾನಾಡಿದ ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಆಭಾರಿ. ಈಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇನ್ನು ಮುಂದೆ ನಿಮ್ಮ ಪ್ರೋತ್ಸಾಹ ಹೆಚ್ಚು ಬೇಕು ಎಂದರು.

Dhanya Ramkumar-Vicky Varun starrer Kaalapathar to release on September 13

ನನ್ನದು ಈ ಚಿತ್ರದಲ್ಲಿ ಶಿಕ್ಷಕಿಯ ಪಾತ್ರ . ಗಂಗ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ ಎಂದು ನಾಯಕಿ ಧನ್ಯ ರಾಮಕುಮಾರ್ ತಿಳಿಸಿದರು. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ದರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ ಎಂದರು.

ಇದನ್ನೂ ಓದಿ: Kannada New Movie: ‘ಕಲ್ಕಿ’ ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ!

ಕಪ್ಪುಕಲ್ಲಿನ ಕಥೆ ಬಿಚ್ಚಿಟ್ಟ ವಿಕ್ಕಿ

ನಾನು ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೆಪ್ಟೆಂಬರ್‌ಗೆ ಸೂರಿ ಅವರ ನಿರ್ದೇಶನದಲ್ಲಿ ನಾನು ನಾಯಕನಾಗಿ ನಟಿಸಿದ್ದ “ಕೆಂಡಸಂಪಿಗೆ” ಚಿತ್ರ ತೆರೆಕಂಡು ಒಂಭತ್ತು ವರ್ಷಗಳಾಗುತ್ತಿದೆ. ನಾನು ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರ ಕೂಡ ಸೆಪ್ಟೆಂಬರ್‌ನಲ್ಲೇ ಬಿಡುಗಡೆಯಾಗುತ್ತಿರುವುದು ಖುಷಿಯಾಗಿದೆ. “ಕಾಲಾಪತ್ಥರ್”, ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ಸತ್ಯಪ್ರಕಾಶ್ ಅವರು ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ. ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ. ನಮ್ಮ ಚಿತ್ರವನ್ನು “ಮಾರ್ಟಿನ್” ಚಿತ್ರದ ನಿರ್ಮಾಪಕರಾದ ಉದಯ್ ಕೆ ಮೆಹ್ತಾ ಅವರು ವಿತರಣೆ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ದೇಶಕ ಹಾಗೂ ನಾಯಕ ವಿಕ್ಕಿ ವರುಣ್‌. ಛಾಯಾಗ್ರಾಹಕ ಸಂದೀಪ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Actor Darshan : ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ನಟನ ಗೆಳತಿ ಪವಿತ್ರಾ (Pavithra Gowda) ಲಾಕ್‌ ಆಗಿದ್ದೆ ರೋಚಕವಾಗಿದೆ. ಇನ್ನೂ ತನ್ನ ಜತೆಗೆ ಇದ್ದ ಹುಡುಗರನ್ನು ನಂಬಿಯೇ ನಾನು ಕೆಟ್ಟಿದ್ದು ಎಂದು ದರ್ಶನ್‌ ಅಳಲು ತೊಡಿಕೊಂಡಿದ್ದಾರೆ. ಇಷ್ಟಕ್ಕೂ ಬಂಧನದ ದಿನ ಏನೆಲ್ಲ ಆಯಿತು ಎಂಬ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಗ್ಯಾಂಗ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಈ ಮಧ್ಯೆ ಪೊಲೀಸರ ಬಳಿ ದರ್ಶನ್‌ ಆಪ್ತೆ ಪವಿತ್ರಾಗೌಡ ಲಾಕ್ ಆಗಿದ್ದೆ ರೋಚಕವಾಗಿದೆ.

ದರ್ಶನ್ ಬಂಧನಕ್ಕೆ ಹೊರಟಿದ್ದ ವೇಳೆಯೇ ಪೊಲೀಸರು ಪವಿತ್ರಾಗೂ ಬಲೆ ಬೀಸಿದ್ದರು. ಜೂನ್ 11ರ ಬೆಳಗ್ಗೆ ದರ್ಶನ್ ಬಂಧಿಸಲು ಮೈಸೂರಿಗೆ ತೆರಳಿದ್ದಾಗ, ಈ ವೇಳೆ ಎರಡು ತಂಡ ರಚಿಸಿ ಪವಿತ್ರಾ ಗೌಡಗೂ ಬಲೆ ಬೀಸಿದ್ದರು. ಆದರೆ ಪೊಲೀಸರ ಎರಡೂ ತಂಡಕ್ಕೂ ಚಾಲಾಕಿ ಪವಿತ್ರಾ ಸಿಕ್ಕಿರಲಿಲ್ಲ.

ಹೀಗಾಗಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಪೊಲೀಸರು ಮೈಸೂರಿನಲ್ಲೇ ದರ್ಶನ್ ಮೂಲಕವೇ ಪವಿತ್ರಾಳನ್ನು ಸಂಪರ್ಕಿಸಿದ್ದರು. ದರ್ಶನ್ ಫೋನ್‌ನಿಂದಲೇ ಪವಿತ್ರಾಗೌಡಗೆ ಫೋನ್ ಮಾಡಿಸಿ ಎಲ್ಲೂ ಹೋಗದಂತೆ ಸೂಚನೆ ನೀಡಲಾಗಿತ್ತು. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗು ಎಂದು ದರ್ಶನ್‌ ಪವಿತ್ರಾಗೆ ಹೇಳಿದ್ದರು. ಹೀಗಾಗಿ ದರ್ಶನ್ ಮಾತಿನಂತೆ ಪೊಲೀಸ್ ಠಾಣೆಗೆ ಪವಿತ್ರಾ ಹಾಜರಾಗಿದ್ದರು. ಪವಿತ್ರಾ ಕಾಮಾಕ್ಷಿಪಾಳ್ಯ ಠಾಣೆಯ ಬದಲು ಆರ್ ಆರ್ ನಗರ ಠಾಣೆಗೆ ಹಾಜರಾಗಿದ್ದಳು. ತದನಂತರ ಕಾಮಾಕ್ಷಿಪಾಳ್ಯ ಪೊಲೀಸರು ಕರೆತಂದು ಬಂಧಿಸಿದ್ದರು.

ಇದನ್ನೂ ಓದಿ:Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

ಠಾಣೆಗೆ ಬಂದ ಕೂಡಲೇ ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?

ಮೈಸೂರಿನಲ್ಲಿ ಬಂಧಿಸಿ ದರ್ಶನ್‌ನನ್ನು ಬೆಂಗಳೂರಿಗೆ ಕರೆತರಲಾಗಿತ್ತು. ಠಾಣೆಗೆ ಬರುತ್ತಿದ್ದಂತೇ ದರ್ಶನ್ ಹೇಳಿದ ಮೊದಲ ಮಾತೇನು ಗೊತ್ತಾ? ನನ್ನ ಜತೆ‌ ಇದ್ದ ಈ ಹುಡುಗರಿಂದ ನಾನು ಹಾಳಾದೆ ಎಂದಿದ್ದರಂತೆ. ಹುಡುಗರನ್ನು ನಂಬಿ ನಾನು ಕೆಟ್ಟೆ ಎಂದು ಹೇಳಿಕೊಂಡಿದ್ದರಂತೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಪುಸ್ತಕದ ಮೊರೆ ಹೋದ ದರ್ಶನ್‌

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಖೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kannada New Movie: ‘ಕಲ್ಕಿ’ ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ!

“ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು” ಚಿತ್ರಕ್ಕೆ ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ (Kannada New Movie) ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ನಂತರ ಸಂತೋಷ್ ನಾರಾಯಣನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ.ರಂಜಿತ್ ಅವರ “ಅಟ್ಟಕತ್ತಿ” ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದ ಇವರು, “ಕಾಲ”, ” ಕಬಾಲಿ”, “ಭೈರವ”, ” ದಸರಾ” ಹಾಗೂ ಇತ್ತೀಚಿಗೆ ತೆರೆಕಂಡ “ಕಲ್ಕಿ” ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಹಲವು ಚಿತ್ರಗಳಲ್ಲಿ ಹಾಡಿದ್ದಾರೆ ಕೂಡ‌.

“ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. “ಬಲರಾಮನ ದಿನಗಳು” ನನ್ನ 51ನೇ ಚಿತ್ರ ಹಾಗೂ ನಾನು ಸಂಗೀತ ನೀಡುತ್ತಿರುವ ಕನ್ನಡದ ಮೊದಲ ಚಿತ್ರ. ಪದ್ಮಾವತಿ ಫಿಲಂಸ್, ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಅವರ ಜತೆಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಗುರುಗಳಾದ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ರಘು ದೀಕ್ಷಿತ್ ಅವರ “ನಿನ್ನ ಪೂಜೆಗೆ ಬಂದೆ ಮಾದೇಶ್ವರ” ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ ಎಂದು ಹೇಳಿದ ಸಂತೋಷ್ ನಾರಾಯಣನ್, ಈ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ಇದು ನನ್ನ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. “ಬಲರಾಮನ ದಿನಗಳು” ಗೆ ಬಲ ನೀಡುವುದಕ್ಕೆ ಸಂತೋಷ್‍ ನಾರಾಯಣನ್ ಅವರು ಇಲ್ಲಿಗೆ ಬಂದಿದ್ದಾರೆ. ಸಂತೋಷ್‍ ನಾರಾಯಣನ್ ಅವರೇ ಯಾಕೆ? ಎಂಬ ಪ್ರಶ್ನೆ ಬರಬಹುದು. ಅವರ ಕೆಲಸವನ್ನು ನಮ್ಮಲ್ಲಿ ಜನ ಒಪ್ಪಿಕೊಂಡಿದ್ದಾರೆ. ಅವರು ಯಾರು ಎಂದು ಗೊತ್ತಿಲ್ಲದಿರಬಹುದು, ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್ ಸಿನಿಮಾ ಸಂಬಂಧಪಟ್ಟ ಯಾವುದೇ ಪೋಸ್ಟ್ ನೋಡಿ, ಇವರ ಸಿಗ್ನೇಚರ್ ಸಂಗೀತ ಇದ್ದೇ ಇರುತ್ತದೆ. ಹಾಗಾಗಿ, ನಮ್ಮ ಚಿತ್ರತಂಡದವರೆಲ್ಲಾ ನಿರ್ಧಾರ ತೆಗೆದುಕೊಂಡು ಅವರನ್ನು ಕರೆಸಿದ್ದೇವೆ. ಇದೊಂದು ಗ್ಯಾಂಗ್‍ಸ್ಟರ್ & ಕಲ್ಟ್ ಸಿನಿಮಾ ಆಗಿರುವುದರಿಂದ ಅವರೇ ಸೂಕ್ತ ಎಂದನಿಸಿತು. ಅವರು ದೊಡ್ಡ ಸಂಗೀತ ನಿರ್ದೇಶಕ. ಅವರನ್ನು ಕರೆದುಕೊಂಡು ಬರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು. ಚಿತ್ರ ವಿಭಿನ್ನವಾಗಿದೆ, 70-80ರ ಕಾಲಘಟ್ಟದ ಚಿತ್ರವಾಗಿರುವುದರಿಂದ ಸಾಕಷ್ಟು ಪ್ರಯೋಗ ಮಾಡಬಹುದು ಎಂದು ಖುಷಿಪಟ್ಟು ಒಪ್ಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕನ್ನಡಕ್ಕೆ ಕರೆದುಕೊಂಡು ಬಂದಿರುವ ಹೆಮ್ಮೆ ಇದೆ. ಚಿತ್ರದ ಕುರಿತು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು ನಾಯಕ ಟೈಗರ್.

ಇದು 90 ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಕಾಲ್ಪನಿಕ ಕಥೆ. ಟೈಗರ್ ಅವರ ಚಿತ್ರವನ್ನು ನಿರ್ದೇಶಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರಾದ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಗೆ ವಂದನೆಗಳು. ಸಂತೋಷ್ ನಾರಾಯಣ್ ಅವರ ಸಂಗೀತ ನಿರ್ದೇಶನದಲ್ಲಿ ಒಳ್ಳೆಯ ಹಾಡುಗಳು ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದರು.

ಇದನ್ನೂ ಓದಿ: Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ನಾನು ಚಿಕ್ಕ ವಯಸ್ಸಿನಿಂದ ಟೈಗರ್ ಅವರ ಅಭಿಮಾನಿ ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್, ಇಂದು ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ನಿರ್ಮಾಣ ಮಾಡುತ್ತಿರುವುದು ಸಂತೋಷವಾಗಿದೆ. ನಮ್ಮ ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಿದು. ನಮ್ಮ ಮೊದಲ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ ಹಾಗೂ ಕೆ.ಎಂ.ಚೈತನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ ಚಿತ್ರದ ಘೋಷಣೆ ಮಾಡಿದಾಗ ತಾವೆಲ್ಲರು ನೀಡಿದ ಪ್ರೋತ್ಸಾಹಕ್ಕೆ ಚಿರ ಋಣಿ. ನನ್ನ ಕನಸಿಗೆ ಆಸರೆಯಾದ ಅಪ್ಪ ಅಮ್ಮನಿಗೆ ಧನ್ಯವಾದ. ಮುಂದೆ ಕೂಡ ನಿಮ್ಮ ಪ್ರೋತ್ಸಾಹ ಹೀಗೆ ಇರಲಿ ಎಂದರು ನಿರ್ಮಾಪಕ ಶ್ರೇಯಸ್. ನಿರ್ಮಾಪಕಿ ಪದ್ಮಾವತಿ ಜಯರಾಂ ಹಾಗೂ ಜಯರಾಂ ಅವರು ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

ಸಿನಿಮಾ

Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್

Pranitha Subhash: ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸುತ್ತಿದ್ದು, ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಬೇಬಿ ಶಾವರ್ ಪಾರ್ಟಿ ಆಯೋಜಿಸಿದ್ದು, ಅದರ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Pranitha Subhash
Koo

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್ (Pranitha Subhash) 2ನೇ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಬೇಬಿ ಬಂಪ್ (Baby Bump) ಫೋಟೋಶೂಟ್‌ವೊಂದನ್ನು ಮಾಡಿಸಿಕೊಂಡಿದ್ದಾರೆ. ಭರ್ಜರಿಯಾಗಿ ಬೇಬಿ ಶವರ್‌ ಮಾಡಿಸಿಕೊಂಡಿರುವ ಪ್ರಣೀತಾ, ಇದೀಗ ಇನ್‌ಸ್ಟಾಗ್ರಾಂನಲ್ಲಿ ಈ ಫೊಟೋಗಳನ್ನು ಹಂಚಿಕೊಂಡಿದ್ದು, ಮತ್ತೆ ತಾಯಿಯಾಗ್ತಿರುವ ಬಗ್ಗೆ ಖುಷಿ ಶೇರ್‌ ಮಾಡಿಕೊಂಡಿದ್ದಾರೆ. ಇನ್ನು ಫೋಟೋಶೂಟ್‌ನಲ್ಲಿ ನಟಿ ಸಖತ್‌ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ನಟಿಯ ಫೊಟೋ ನೋಡಿದ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸುತ್ತಿದ್ದು, ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಬೇಬಿ ಶಾವರ್ ಪಾರ್ಟಿ ಆಯೋಜಿಸಿದ್ದು, ಅದರ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಪಕ್ಕಾ ವೆಸ್ಟರ್ನ್ ಸ್ಟೈಲ್ ಬೇಬಿ ಶವರ್ ಪಾರ್ಟಿಯಾಗಿದ್ದು ಪ್ರಣಿತಾ ಕುಟುಂಬ ವೈಟ್ ಅಂಡ್ ವೈಟ್ ಥೀಮ್ ಉಡುಗೆಯಲ್ಲಿ ಮಿಂಚಿದೆ.

ಇನ್ನು ಪತಿ ನಿತಿನ್‌ ರಾಜು ಮತ್ತು 2ವರ್ಷದ ಮಗಳು ಆರ್ನಾ ಜೊತೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ್ದಾರೆ. 2021ರಲ್ಲಿ ಉದ್ಯಮಿ ನಿತಿನ್‌ ರಾಜು ಅವರನ್ನು ವರಿಸಿದ್ದ ಪ್ರಣೀತಾ, 2022ರಲ್ಲಿ ಮೊದಲ ಮಗಳಾಗಿ ಆರ್ನಾ ಆಗಮಿಸಿದ್ದಳು. ಈ ವಿಶೇಷ ಬೇಬಿ ಶವರ್‌ ಕಾರ್ಯಕ್ರಮದ ಫೋಟೋಗಳನ್ನು ನಟಿ ಪ್ರಣೀತಾ ಸುಭಾಷ್‌ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

ಪ್ರಣಿತಾ ಸುಭಾಷ್ 2022ರಲ್ಲಿ ಹೆಣ್ಣು ಮಗವಿಗೆ ಜನ್ಮ ನೀಡಿದ್ದರು. ಅದಾದ ಬಳಿಕ ಚಿತ್ರರಂಗದಿಂದ ಕೊಂಚ ಬಿಡುವು ಪಡೆದಿದ್ದರು. ಇತ್ತೀಚೆಗೆ ಮತ್ತೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದರು. ಇದೀಗ ಮತ್ತೊಮ್ಮೆ ಸಿಹಿ ಸುದ್ದಿ ಹಂಚಿಕೊಂಡಿದ್ದು, ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

2021ರಲ್ಲಿ ವಿವಾಹ

ಪ್ರಣಿತಾ 2021ರ ಮೇ ತಿಂಗಳಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜು ಅವರನ್ನು ಮದುವೆಯಾಗಿದ್ದರು. 2010ರಲ್ಲಿ ದರ್ಶನ್‌ ಅಭಿನಯದ ‘ಪೊರ್ಕಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಪ್ರಣಿತಾ ಕಡಿಮೆ ಸಮಯದಲ್ಲೇ ಸ್ಟಾರ್ ನಟರಾದ ಶಿವರಾಜ್ ಕುಮಾರ್, ಗಣೇಶ್, ತೆಲುಗು ನಟ ಪವನ್ ಕಲ್ಯಾಣ್, ಸಿದ್ದಾರ್ಥ್ ಹಾಗೂ ತಮಿಳು ನಟ ಸೂರ್ಯ, ಬಾಲಿವುಡ್ ನಟ ಅಜಯ್ ದೇವಗನ್, ಮಲಯಾಳಂ ನಟ ದಿಲೀಪ್‌ ಜತೆ ನಟಿಸಿ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿದ್ದರು. ಜನಪ್ರಿಯತೆಯ ತುತ್ತ ತುದಿಯಲ್ಲಿರುವಾಗಲೇ ವೈವಾಹಿಕ ಜೋವನಕ್ಕೆ ಕಾಲಿಟ್ಟಿದ್ದರು. ಬಳಿಕ ಮಗುವಿನ ಲಾಲನೆ-ಪಾಲನೆಗಾಗಿ ಕೊಂಚ್‌ ಬ್ರೇಕ್‌ ಪಡೆದುಕೊಂಡಿದ್ದರು. ಮಗುವಾದ ಬಳಿಕವೂ ಫಿಟ್‌ ಆಗಿದ್ದ ಅವರನ್ನು ಅಭಿಮಾನಿಗಳು ಸಂತೂರ್‌ ಮಮ್ಮಿ ಎಂದೇ ಕರೆಯುತ್ತಿದ್ದರು.

ಮಾಲಿವುಡ್‌ ಚಿತ್ರದ ಮೂಲಕ ಕಂಬ್ಯಾಕ್‌

‘ಪೊರ್ಕಿ’ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅವರು ಬಳಿಕ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿಯೂ ಅಭಿನಯಿಸಿ ಈ ವರ್ಷ ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದರು. ಆ ಮೂಲಕ ಮಾಲಿವುಡ್‌ನಿಂದ ಕಂಬ್ಯಾಕ್‌ ಮಾಡಿದ್ದರು. ಮಾಲಿವುಡ್‌ನ ಜನಪ್ರಿಯ ನಾಯಕ ದಿಲೀಪ್‌ (Dileep) ಅಭಿನಯದ ʼತಂಕಮಣಿʼ (Thankamani) ಚಿತ್ರದಲ್ಲಿ ಪ್ರಣಿತಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ 2024ರ ಮಾರ್ಚ್‌ನಲ್ಲಿ ತೆರೆಕಂಡಿತ್ತು. ಮೇಯಲ್ಲಿ ರಿಷಿ ಜತೆ ಪ್ರಣಿತಾ ಮೊದಲ ಬಾರಿ ಅಭಿನಯಿಸಿದ ʼರಾಮನ ಅವತಾರʼ ಕನ್ನಡ ಚಿತ್ರ ಬಿಡುಗಡೆಯಾಗಿತ್ತು.

ಮೊದಲ ಬಾರಿ ಮಲಯಾಳಂ ಚಿತ್ರದಲ್ಲಿ ಕಾಣಿಸಿಕೊಂಡ ಪ್ರಣಿತಾಗೆ ಪವರ್‌ ಫುಲ್‌ ಪಾತ್ರವೇ ದೊರೆತಿತ್ತು. ಅರ್ಪಿತಾ ನಾಥ್‌ ಐಪಿಎಸ್‌ ಆಗಿ ಅವರು ತೆರೆ ಮೇಲೆ ಮಿಂಚಿದ್ದರು. 2021ರಲ್ಲಿ ತೆರೆಕಂಡ ಬಾಲಿವುಡ್‌ ʼಹಂಗಾಮ 2ʼ ಮತ್ತು ʼಭುಜ್‌: ದಿ ಪ್ರೈಡ್‌ ಆಫ್‌ ಇಂಡಿಯಾʼ ಚಿತ್ರಗಳ ಬಳಿಕ 3 ವರ್ಷ ಪ್ರಣಿತಾ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಬಣ್ಣದ ಲೋಕಕ್ಕೆ ಮರಳಿದ್ದ ಅವರು ಫೋಟೊ ಶೂಟ್‌, ಜಾಹೀರಾತು ಮೂಲಕ ಸಕ್ರಿಯರಾಗಿದ್ದರು. ಈ ಮಧ್ಯೆ ಅವರು ಕನ್ನಡ ಮಾಧ್ಯಮ ಶಾಲೆಗಳಿಗೆ ಸಹಾಯ ಹಸ್ತ ಚಾಚುವ ಮೂಲಕ ಸಮಾಜ ಸೇವೆಯಲ್ಲಿಯೂ ತೊಡಗಿದ್ದರು. ಕೈಯಲ್ಲಿರುವ ಸಿನಿಮಾಗಳ ಚಿತ್ರೀಕರಣಗಳನ್ನೆಲ್ಲ ಮುಗಿಸಿರುವ ಅವರು ಸದ್ಯ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Pranitha Subhash: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಸುಭಾಷ್‌; ಬೇಬಿ ಬಂಪ್ ಫೋಟೊ ಹಂಚಿಕೊಂಡ ನಟಿ

Continue Reading

ಬೆಂಗಳೂರು

Kannada New Movie: ಮುತ್ತುರಾಜ್ ನಿರ್ದೇಶನದ ‘ಲಿಪ್ ಲಾಕ್’ ಚಿತ್ರಕ್ಕೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಚಾಲನೆ

“ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ “ಲಿಪ್ ಲಾಕ್” ನೂತನ ಚಿತ್ರದ (Kannada New Movie) ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರ ಸಹೋದರಿ ಸ್ಪೂರ್ತಿ ಕೃಷ್ಣಮೂರ್ತಿ ಆರಂಭ ಫಲಕ ತೋರಿದರು. ನಿರ್ದೇಶಕರ ಪುತ್ರ ಲಿಖಿತ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಈ ಕುರಿತ ವಿವರ ಇಲ್ಲಿದೆ,

VISTARANEWS.COM


on

Kannada new movie
Koo

ಬೆಂಗಳೂರು: ಒಂದೇ ಟೇಕ್‌ನಲ್ಲಿ ಚಿತ್ರೀಕರಣವಾಗಿದ್ದ “ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”. ಇತ್ತೀಚೆಗೆ ಈ ನೂತನ ಚಿತ್ರದ (Kannada New Movie) ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರ ಸಹೋದರಿ ಸ್ಪೂರ್ತಿ ಕೃಷ್ಣಮೂರ್ತಿ ಆರಂಭ ಫಲಕ ತೋರಿದರು. ನಿರ್ದೇಶಕರ ಪುತ್ರ ಲಿಖಿತ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಎಲ್ಲರೂ ಅಂದುಕೊಂಡಿರುವ “ಲಿಪ್ ಲಾಕ್” ಬೇರೆ. ಆದರೆ “ಲಿಪ್ ಲಾಕ್” ನಿಜವಾದ ಅರ್ಥ ಬೇರೆ ಎಂದು ತಿಳಿಸುವ ನಿರ್ದೇಶಕ ಮುತ್ತುರಾಜ್, ಇದೊಂದು ಪರಿಶುದ್ಧ ಪ್ರೇಮಕಥೆ. ಯಾವುದೇ ಮುಜುಗರವಿಲ್ಲದೆ ಕುಟುಂಬ ಸಮೇತ ಬಂದು ಎಲ್ಲರೂ ನೋಡಬಹುದಾದ ಕೌಟುಂಬಿಕ ಕಥೆಯೂ ಹೌದು. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತದೆ‌. ಕರಣ್ ಆರ್ಯನ್, ತ್ರಿವಿಕ್ರಮ್ ಹಾಗೂ ಚಿತ್ರದ ನಿರ್ಮಾಪಕರೂ ಆಗಿರುವ ಹೇಮಂತ್ ಕುಮಾರ್ ಈ ಚಿತ್ರದ ನಾಯಕರಾಗಿದ್ದು, ನಾಯಕಿಯರಾಗಿ ದೀಪ, ಜಗದೀಶ್, ಸೃಷ್ಟಿ, ನಿಹಾರಿಕಾ ನಟಿಸುತ್ತಿದ್ದಾರೆ. ಜಗಪ್ಪ, ಆನಂದ್, ಕರಿಬಸವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಲೋಕಿ ತವಸ್ಯ ಸಂಗೀತ ನಿರ್ದೇಶನ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿದೆ‌ ಎಂದರು.

ನಿರ್ಮಾಪಕನಾಗಿ ಇದು ಮೊದಲ ಚಿತ್ರ. ಹೇಮಂತ್ ಸಿನಿಮಾಸ್ ಹಾಗೂ ಪರಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ಮಾಣದ ಜತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ ಎಂದರು ಹೇಮಂತ್ ಕೃಷ್ಣಮೂರ್ತಿ.

ನಿರ್ದೇಶಕರು ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ನನ್ನದು ಈ ಚಿತ್ರದಲ್ಲಿ ಕೆಳ ಮಧ್ಯಮ ವರ್ಗದ ಹುಡುಗನ ಪಾತ್ರ‌ ಎಂದರು ನಟ ಕರಣ್ ಆರ್ಯನ್.

ಇದನ್ನೂ ಓದಿ: Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ನನ್ನ ಪಾತ್ರ ಕೂಡ ವಿಭಿನ್ನವಾಗಿದೆ. “ಬ್ಯಾಡ್ ಮ್ಯಾನರ್ಸ್” ಚಿತ್ರದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದರು”ಪದ್ಮಾವತಿ ” ಧಾರಾವಾಹಿ ಖ್ಯಾತಿಯ ತ್ರಿವಿಕ್ರಮ್. ಈ ವೇಳೆ ನಟಿಯರಾದ ದೀಪ ಜಗದೀಶ್ , ಸೃಷ್ಟಿ ಹಗೂ ನಿಹಾರಿಕಾ ಕೂಡ ಚಿತ್ರದ ಕುರಿತು ಮಾತನಾಡಿದರು.

Continue Reading
Advertisement
Yuvraj Singh
ಕ್ರೀಡೆ31 seconds ago

Yuvraj Singh: ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರೆ ಯುವರಾಜ್​ ಸಿಂಗ್; ಯಾವ ತಂಡ?

Physical abuse attempted rape of school girl The public who beat up the man
ಚಿಕ್ಕೋಡಿ8 mins ago

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರು ಗ್ರಾಮಾಂತರ41 mins ago

Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

Cricket meets shooting
ಕ್ರೀಡೆ44 mins ago

Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

Gold Rate Today
ಚಿನ್ನದ ದರ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Actor darshan
ಸ್ಯಾಂಡಲ್ ವುಡ್1 hour ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ2 hours ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ2 hours ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ2 hours ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ2 hours ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ22 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌