Site icon Vistara News

Dhruva Sarja: 3 ವರ್ಷಗಳ ಬಳಿಕ ಧ್ರುವ ಸರ್ಜಾ ಬರ್ತ್‌ಡೇ ಆಚರಣೆ; ಶಾಲಾ ಮಕ್ಕಳಿಗೆ ಆ್ಯಕ್ಷನ್ ಪ್ರಿನ್ಸ್‌ ಸಹಾಯ!

Dhruva Sarja

ಬೆಂಗಳೂರು: ಅಕ್ಟೋಬರ್ 6ರಂದು ಧ್ರುವ ಸರ್ಜಾ (Dhruva Sarja) 34ನೇ ವಸಂತಕ್ಕೆ ಕಾಲಿಡಲಿದ್ದಾರೆ. ಕಳೆದ 3 ವರ್ಷಗಳಿಂದ ಆ್ಯಕ್ಷನ್ ಪ್ರಿನ್ಸ್ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿರಲಿಲ್ಲ (dhruva sarja birthday). ಆದರೆ ಈ ಬಾರಿ ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ .3 ವರ್ಷಗಳ ನಂತರ ಎಲ್ಲಾ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳ ಕೋರಿಕೆಯ ಮೇರೆಗೆ ಆಚರಿಸಲು ನಿರ್ಧರಿಸಿದ್ದೇವೆ ಎಂದು ಧ್ರುವ ಹೇಳಿಕೊಂಡಿದ್ದಾರೆ.

ಈ ತಮ್ಮ ಹುಟ್ಟುಹಬ್ಬದ ದಿನ ಧ್ರುವ ಕಡೆಯಿಂದ ವಿಐಪಿಗಳಲ್ಲಿ ವಿಶೇಷ ಮನವಿ ಇದೆ. “ಧ್ರುವ ಸರ್ಜಾ ಅವರ ಎಲ್ಲಾ ವಿಐಪಿ ಅಭಿಮಾನಿಗಳಿಗೆ, ಸ್ನೇಹಿತರಿಗೆ ಹಾಗೂ ಹಿತೈಷಿಗಳಿಗೆ ತಿಳಿಸುವುದೇನೆಂದರೆ, ಇದೇ ಅಕ್ಟೋಬರ್ 05, 2023 ರಂದು ರಾತ್ರಿ 11.00 ರಿಂದ ಧ್ರುವ ಸರ್ಜಾರವರ ಹುಟ್ಟುಹಬ್ಬವನ್ನು ಅವರ ಮನೆಯ ಬಳಿ ಅದ್ಧೂರಿಯಾಗಿ ಆಚರಿಸುತ್ತೇವೆ. ಚಿರು ಅಣ್ಣನವರ ನಿಧನ ನಂತರ ಧ್ರುವ ಸರ್ಜಾರವರ ಹುಟ್ಟು ಹಬ್ಬವನ್ನು ಆಚರಿಸಲು ಸಾಧ್ಯವಾಗಿರಲಿಲ್ಲ. 3 ವರ್ಷಗಳ ನಂತರ ಎಲ್ಲಾ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳ ಕೋರಿಕೆಯ ಮೇರೆಗೆ ಆಚರಿಸಲು ನಿರ್ಧರಿಸಿದ್ದೇವೆ”

“ಈ ಮೂಲಕ ತಿಳಿಯಪಡೆಸುವುದೇನೆಂದರೆ, ಹುಟ್ಟು ಹಬ್ಬದ ಆಚರಣೆಗೆ ಆಗಮಿಸುತ್ತಿರುವ ಎಲ್ಲಾ ವಿಐಪಿ ಅಭಿಮಾನಿಗಳು ಹಾಗೂ ಹಿತೈಷಿಗಳು ಯಾವುದೇ ರೀತಿಯ ಕೇಕ್‌ಗಳು, ಹೂಗುಚ್ಚಗಳು ಹಾಗೂ ಉಡುಗೊರೆಗಳನ್ನು ತರದೆ, ಬದಲಿಗೆ ಶಾಲಾ ಮಕ್ಕಳಿಗೆ ಉಪಯುಕ್ತವಾಗುವಂತಹ ಪುಸ್ತಕಗಳು, ಪೆನ್ನುಗಳು ಹಾಗೂ ಶಾಲಾ ಬ್ಯಾಗ್‌ಗಳನ್ನು ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿ ಎಂದು ಕೋರಿಕೊಳ್ಳುತ್ತೇವೆ, ಹಾಗೂ ನಾವು ಅವುಗಳನ್ನು ನೇರವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ತಲುಪಿಸುತ್ತೇವೆ. ಜೈ ಆಂಜನೇಯ” ಎಂದು ಧ್ರುವ ತಂಡದ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನೆಯಾಗಿದೆ.

ಆ ಹಣದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಒಂದೊಳ್ಳೆ ನಿರ್ಧಾರ ಕೈಗೊಂಡಿದ್ದಾರೆ. ಇನ್ನು ಧ್ರುವ ಸರ್ಜಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದೆ. ಇತ್ತೀಚೆಗಷ್ಟೆ ಪ್ರೇರಣಾಗೆ ಅದ್ಧೂರಿಯಾಗಿ ಸೀಮಂತ (dhruva sarja wife baby shower) ಕಾರ್ಯಕ್ರಮ ನೆರವೇರಿಸಲಾಗಿತ್ತು.

ಧ್ರುವ ಸರ್ಜಾ ಜನುಮದಿನದಂದೇ ಚಿರಂಜೀವಿ ಸರ್ಜಾ ಸಿನಿಮಾ ರಿಲೀಸ್‌!

ಧ್ರುವ ಸರ್ಜಾ (Dhruva Sarja) ಅವರ ಜನುಮದಿನದ ನಿಮಿತ್ತ ರಿಲೀಸ್‌ ಆಗಲಿದೆ. ಅಕ್ಟೋಬರ್‌ 6ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದೀಗ ಚಿತ್ರತಂಡ ಪ್ರಚಾರ ಕಣಕ್ಕಿಳಿದಿದೆ. ಚಿರಂಜೀವಿ ಸರ್ಜಾ (chiranjeevi sarja) ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ (rangamarthanda). ಇದೀಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ.

ವಿಶೇಷ ಏನೆಂದರೆ, ಧ್ರುವ ಸರ್ಜಾ (rajamarthanda release date) ಅವರ ಬರ್ತ್‌ಡೇ ದಿನವೇ ಈ ಸಿನಿಮಾ ರಿಲೀಸ್‌ ಆಗಲಿದೆ. ಚಿರಂಜೀವಿ ಸರ್ಜಾ ಅವರು ನಿಧನರಾದಾಗ ಚಿತ್ರದ ಡಬ್ಬಿಂಗ್‌ ಆಗಿರಲಿಲ್ಲ. ಸಹೋದರ ಧ್ರುವ ಸರ್ಜಾ ಧ್ವನಿ ನೀಡಿ ಜೀವ ತುಂಬಿದ್ದರು. ಶಿವಕುಮಾರ್ ನಿರ್ಮಾಣದ ಚಿತ್ರ ಇದಾಗಿದೆ. ಇದೊಂದು ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರವಾಗಿದ್ದು ಚಿರಂಜೀವಿ ಸರ್ಜಾ, ದೀಪ್ತಿ ಸತಿ, ತ್ರಿವೇಣಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟೀಸರ್, ಟ್ರೈಲರ್ ಹಾಗೂ ಹಾಡುಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಧರ್ಮವಿಶ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಕೆ. ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ ಅವರ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಪಾತ್ರವರ್ಗದಲ್ಲಿದ್ದಾರೆ.

Exit mobile version