Site icon Vistara News

Ram Mandir: ರಾಮ ಮಂದಿರ ʻಪ್ರಾಣ ಪ್ರತಿಷ್ಠಾಪನೆʼ ದಿನ ಧ್ರುವ ಸರ್ಜಾ ಮಗ, ಮಗಳಿಗೆ ಯಾವ ಹೆಸರಿಟ್ಟಿದ್ದಾರೆ?

Dhruva sarja

ಬೆಂಗಳೂರು: ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ (Pran Pratishtha) ನೆರವೇರಿಸಲಾಗಿದೆ. ಇದರೊಂದಿಗೆ ಅಸಂಖ್ಯ ರಾಮಭಕ್ತರ ಕನಸು ಸಾಕಾರಗೊಂಡಿದೆ. ಚಿತ್ರರಂಗದವರು, ಕ್ರಿಕೆಟ್ ದಿಗ್ಗಜರು, ರಾಜಕಾರಣಿಗಳು ಸೇರಿ ಅನೇಕ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವಿಶೇಷ ದಿನದಂದು ಧ್ರುವ ಸರ್ಜಾ ಅವರು ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ (Rudrakshi) ಮತ್ತು ಮಗನಿಗೆ ಹಯಗ್ರೀವ (Hayagriva) ಎಂದು ನಾಮಕರಣ ಮಾಡಿದ್ದಾರೆ. 2022ರ ಅಕ್ಟೋಬರ್ 2ರಂದು ಮಗಳ ಜನನ ಆಗಿತ್ತು. 2023ರ ಸೆಪ್ಟೆಂಬರ್‌ನಲ್ಲಿ ಗಂಡು ಮಗು ಜನಿಸಿತ್ತು.

ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ ಧ್ರುವ ಸರ್ಜಾ.

ಜ್ಯೋತಿ ಬೆಳಗಿಸಿ, ರಾಮನ ಕೃಪೆಗೆ ಪಾತ್ರರಾಗೋಣ ಎಂದಿದ್ದ ಧ್ರುವ ಸರ್ಜಾ!

ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಬಳಿಕ, ಪೂಜಾ ವಿಧಿವಿಧಾನಗಳು ಪೂರ್ಣಗೊಂಡ ಮೇಲೆ ದೇಶದ ಪ್ರತಿಯೊಂದು ಮನೆಯಲ್ಲಿ ರಾಮಜ್ಯೋತಿ ಬೆಳಗಲಿ ಎಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದ್ದರು. ಈ ಬಗ್ಗೆ ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಸಾಥ್‌ ಕೊಟ್ಟಿದ್ದರು.

ಇದನ್ನೂ ಓದಿ: Ram Mandir : ಪ್ರಾಣಪ್ರತಿಷ್ಠಾಪನೆ ಪ್ರಕ್ರಿಯೆಯಲ್ಲಿ ಮೋದಿಗೆ ಮಾರ್ಗದರ್ಶನ ಮಾಡಿದವರು ಪೇಜಾವರ ಶ್ರೀ

ʻʻಮರ್ಯಾದಾ ಪುರೋಷೋತ್ತಮ ರಾಮ‌, ನಮ್ಮೆಲ್ಲರಿಗೂ ಆದರ್ಶಪುರುಷ; ಕೋಟ್ಯಂತರ ಭಕ್ತರು ಕಾತರದಿಂದ ಎದುರು ನೋಡುತ್ತಿರೋ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಇದೇ ಜನವರಿ 22ರಂದು ನಡೆಯಲಿದೆ. ಈ ಸುಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಮನಗಳಲ್ಲಿ ಜ್ಯೋತಿ ಬೆಳಗಿಸೋ ಮೂಲಕ ರಾಮನ ಕೃಪೆಗೆ ಪಾತ್ರರಾಗೋಣ. ಜೈ ಆಂಜನೇಯʼʼ ಎಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು.

Exit mobile version