Divya Seth: ಸುಷ್ಮಾ ಸೇಠ್ ಮೊಮ್ಮಗಳು, ʻಜಬ್ ವಿ ಮೆಟ್ ʼಚಿತ್ರದ ಖ್ಯಾತ ನಟಿಯ ಪುತ್ರಿ ನಿಧನ - Vistara News

ಸಿನಿಮಾ

Divya Seth: ಸುಷ್ಮಾ ಸೇಠ್ ಮೊಮ್ಮಗಳು, ʻಜಬ್ ವಿ ಮೆಟ್ ʼಚಿತ್ರದ ಖ್ಯಾತ ನಟಿಯ ಪುತ್ರಿ ನಿಧನ

Divya Seth: ವರದಿಯು ಪ್ರಕಾರ ಮಿಹಿಕಾಗೆ ಮೊದಲು ಜ್ವರ ಮತ್ತು ನಂತರ ಮೂರ್ಛೆ ರೋಗ ಇತ್ತು ಎಂದು ವರದಿಯಾಗಿದೆ. ಇದೀಗ ಮಗಳ ಸಾವಿನಿಂದ ಕುಟುಂಬ ಇನ್ನೂ ಆಘಾತದಲ್ಲಿದೆ. ಕಳೆದ ವಾರವಷ್ಟೇ, ಕುಟುಂಬದ ಮೂರು ತಲೆಮಾರಿನ ಫೋಟೊವನ್ನು ದಿವ್ಯಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು.

VISTARANEWS.COM


on

Divya Seth Sushma Seth granddaughter Mihika Shah dies Divya Seth shares the news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿರಿಯ ನಟಿ ಸುಷ್ಮಾ ಸೇಠ್ (Sushma Seth) ಅವರ ಮೊಮ್ಮಗಳು, ನಟಿ ದಿವ್ಯಾ ಸೇಠ್ ಶಾ (Divya Seth) ಅವರ ಪುತ್ರಿ ಮಿಹಿಕಾ ಶಾ (Mihika Shah) ಸೋಮವಾರ ನಿಧನರಾದರು. ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲವಾದರೂ, ಕೆಲವು ವರದಿಗಳ ಪ್ರಕಾರ ಅನಾರೋಗ್ಯದಿಂದಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ದುಃಖದ ಸುದ್ದಿಯನ್ನು ದಿವ್ಯಾ ಅವರು ಮಂಗಳವಾರ ಸೋಷಿಯಲ್‌ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ದಿವ್ಯಾ ಬರೆದುಕೊಂಡಿದ್ದಾರೆ, “ಆಗಸ್ಟ್ 8 ರಂದು ಮಿಹಿಕಾ ಸೇಠ್‌ ಗೌರವ ನಮನ ಪ್ರಾರ್ಥನೆ ನಡೆಯಲಿದೆ ಎಂದು ಪೋಸ್ಟ್ ಮೂಲಕ ತಿಳಿಸಿದ್ದಾರೆ. .” ನೋಟಿನಲ್ಲಿ ದಿವ್ಯಾ ಮತ್ತು ಆಕೆಯ ಪತಿ ಸಿದ್ಧಾರ್ಥ್ ಶಾ ಸಹಿ ಕೂಡ ಇದೆ. ಮಗಳ ಸಾವಿಗೆ ಕಾರಣವನ್ನು ಅವರು ಟಿಪ್ಪಣಿಯಲ್ಲಿ ಬಹಿರಂಗಪಡಿಸಿಲ್ಲ.

ವರದಿಯು ಪ್ರಕಾರ ಮಿಹಿಕಾಗೆ ಮೊದಲು ಜ್ವರ ಮತ್ತು ನಂತರ ಮೂರ್ಛೆ ರೋಗ ಇತ್ತು ಎಂದು ವರದಿಯಾಗಿದೆ. ಇದೀಗ ಮಗಳ ಸಾವಿನಿಂದ ಕುಟುಂಬ ಇನ್ನೂ ಆಘಾತದಲ್ಲಿದೆ. ಕಳೆದ ವಾರವಷ್ಟೇ, ಕುಟುಂಬದ ಮೂರು ತಲೆಮಾರಿನ ಫೋಟೊವನ್ನು ದಿವ್ಯಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ಚಿತ್ರದಲ್ಲಿ, ತನ್ನ ಮಗಳೊಂದಿಗೆ ಹಸಿರು ಉಡುಪಿನಲ್ಲಿ ಮತ್ತು ಅವರ ತಾಯಿ ಕೆಂಪು ಉಡುಪಿನಲ್ಲಿ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

ಮಿಹಿಕಾ ಹಿರಿಯ ನಟಿ ಸುಷ್ಮಾ ಸೇಠ್ ಅವರ ಮೊಮ್ಮಗಳು, ʻಕಭಿ ಖುಷಿ ಕಭಿ ಗಮ್ …, ಚಲ್ ಮೇರೆ ಭಾಯ್, ಕಲ್ ಹೋ ನ ಹೋ, ನಾಗಿನಾ ಮತ್ತು ಸ್ಟೂಡೆಂಟ್ ಆಫ್ ದಿ ಸ್ಟೂಡೆಂಟ್ ಮುಂತಾದ ಚಿತ್ರಗಳಲ್ಲಿ ಜನಪ್ರಿಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮ ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ದಿವ್ಯಾ ಸೇಠ್ ಅವರು ʻಜಬ್ ವಿ ಮೆಟ್ʼ, ʻಲ್ ಧಡಕ್ನೆ ದೋʼ, ʻಆರ್ಟಿಕಲ್ 370ʼ ನಂತಹ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬನೇಗಿ ಅಪ್ನಿ ಬಾತ್ ಮತ್ತು ದೇಖ್ ಭಾಯಿ ದೇಖ್‌ನಂತಹ ದೂರದರ್ಶನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ. 1978ರಲ್ಲಿ ಬಾಲಿವುಡ್‌ನ ಜೂನೂನ್ ಚಿತ್ರದ ಮೂಲಕ ಬೆಳ್ಳಿ ಪರದೆಗೆ ಕಾಲಿಟ್ಟ ಸುಷ್ಮಾ ಸೇಟ್‌, ಸಿಲ್ಸಿಲಾ, ಪ್ರೇಮ್ ರೋಗ್, ರಾಮ್ ತೇರಿ ಗಂಗಾ ಮೈಲಿ, ದೀವಾನಾ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Niharika Konidela: ಮೆಗಾ ಫ್ಯಾಮಿಲಿ ತೆಲುಗು ಚಿತ್ರರಂಗವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಇತರೆ ಹೀರೋಗಳು ಮೆಗಾ ಫ್ಯಾಮಿಲಿಯ ಬೆದರಿಕೆಗೆ ಹೆದರಿದ್ದಾರೆ ಎಂದೆಲ್ಲ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈ ವೇಳೆ ‘ತೆಲುಗು ಚಿತ್ರರಂಗ ಎಂಬುದು ನನ್ನ ಅಪ್ಪನ, ನನ್ನ ತಾತನ ಅಥವಾ ನಮ್ಮ ಕುಟುಂಬ ಆಸ್ತಿಯಲ್ಲ. ಕಷ್ಟ ಪಟ್ಟು ಕೆಲಸ ಮಾಡುವ ಎಲ್ಲರ ಆಸ್ತಿ’ ಎಂದಿದ್ದಾರೆ ನಾಗಬಾಬು.

VISTARANEWS.COM


on

Niharika Konidela Nagendra Babu says Industry Is Not Our Father's Property
Koo

ಆಗಸ್ಟ್ 9 ರಂದು ಬಿಡುಗಡೆಯಾಗಲಿರುವ ನಿಹಾರಿಕಾ ಕೊನಿಡೇಲಾ (Niharika Konidela ) ಅವರ “ಕಮಿಟಿ ಕುರ್ರೊಲ್ಲು” (Committee Kurrollu) ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಚಿತ್ರದ ಪ್ರಚಾರಗಳು ಪ್ರೇಕ್ಷಕರನ್ನು ಆಕರ್ಷಿಸಿವೆ. ಹಾಡುಗಳು ಟೀಸರ್ ಮತ್ತು ಟ್ರೇಲರ್ ಸಿನಿರಸಿಕರ ಮನ ಮುಟ್ಟಿದೆ. ಇತ್ತೀಚೆಗೆ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಅದ್ಧೂರಿಯಾಗಿ ನಡೆಯಿತು. ನಿಹಾರಿಕಾ ಅವರ ತಂದೆ, ಮೆಗಾ ಬ್ರದರ್ ನಾಗಬಾಬು, ಅವರ ಸಹೋದರ ಮೆಗಾ ಪ್ರಿನ್ಸ್ ವರುಣ್ ತೇಜ್ ಮತ್ತು ಅವರ ಸೋದರಸಂಬಂಧಿ ಸಾಯಿ ದುರ್ಗಾ ತೇಜ್ ಅವರು ಈ ಸಮಾರಂಭದಲ್ಲಿ ಭಾಗವಹಿಸಿ, ಚಿತ್ರದ ಸ್ಟಾರ್ ಪವರ್ ಅನ್ನು ಹೆಚ್ಚಿಸಿದ್ದರು. ಈ ವೇಳೆ ‘ತೆಲುಗು ಚಿತ್ರರಂಗ ಎಂಬುದು ನನ್ನ ಅಪ್ಪನ, ನನ್ನ ತಾತನ ಅಥವಾ ನಮ್ಮ ಕುಟುಂಬ ಆಸ್ತಿಯಲ್ಲ. ಕಷ್ಟ ಪಟ್ಟು ಕೆಲಸ ಮಾಡುವ ಎಲ್ಲರ ಆಸ್ತಿ’ ಎಂದಿದ್ದಾರೆ ನಾಗಬಾಬು.

ಮೆಗಾ ಫ್ಯಾಮಿಲಿ ತೆಲುಗು ಚಿತ್ರರಂಗವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಇತರೆ ಹೀರೋಗಳು ಮೆಗಾ ಫ್ಯಾಮಿಲಿಯ ಬೆದರಿಕೆಗೆ ಹೆದರಿದ್ದಾರೆ ಎಂದೆಲ್ಲ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಮಾಜಿ ಸಚಿವೆ ರೋಜಾ ಬಹಿರಂಗವಾಗಿ ಮೆಗಾ ಫ್ಯಾಮಿಲಿಯನ್ನು ರೌಡಿ ಫ್ಯಾಮಿಲಿ ಎಂದು ಸಂಭೋಧಿಸಿದ್ದರು. ಇತ್ತೀಚೆಗಿನ ವರ್ಷಗಳಲ್ಲಿ ಮೆಗಾ ಫ್ಯಾಮಿಲಿಯ ಕುಟುಂಬದ ಸದಸ್ಯರು ಹೆಚ್ಚು ಸಂಖ್ಯೆಯಲ್ಲಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಮಂದಿ ಹೀರೋಗಳೇ ಇದ್ದಾರೆ. ಆದರೆ ಇತ್ತೀಚೆಗೆ ಮೆಗಾ ಫ್ಯಾಮಿಲಿ ಮೇಲೆ ಕೆಲವರು ಆರೋಪ ಮಾಡಿದ್ದಾರೆ.

ಇದೀಗ ನಾಗಬಾಬು ಹೊಸ ಹುಡುಗರ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ; Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವು ಸೋಮವಾರ ಪಿಠಾಪುರಂ ಕ್ಷೇತ್ರದಲ್ಲಿ ನಡೆದಿದ್ದು, ಕಮಿಟಿ ಕುರೋಲ್ಲು ತಂಡದ ಕಲಾವಿದರು ಮತ್ತು ಸಿಬ್ಬಂದಿ ಹಾಜರಿದ್ದರು. ನಿರ್ಮಾಪಕಿಯಾಗಿರುವ ಮಗಳ ಬಗ್ಗೆ ನಟ ನಾಗಬಾಬು ಶ್ಲಾಘಿಸಿದರು. ಹೀಗೆ ನಟ ಮಾತನ್ನು ಮುಂದುವರಿಸುವಾಗ ತೆಲುಗು ಸಿನಿ ಉದ್ಯಮ ಯಾರಿಗೂ ಸೇರಿಲ್ಲ ಮತ್ತು ಯಾವುದೇ ಪ್ರತಿಭಾವಂತ ವ್ಯಕ್ತಿ ಇಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.

ʻʻಈ ಉದ್ಯಮ ನನ್ನ ಅಪ್ಪನ ಆಸ್ತಿಯಲ್ಲ. ಪ್ರತಿಭೆ ಇದ್ದರೆ ಯಾರು ಬೇಕಾದರೂ ಬರಬಹುದು ಎಂದರು. ಅಷ್ಟೆ ಅಲ್ಲ, ತೆಲುಗು ಚಿತ್ರರಂಗ ಎಂಬುದು ಮೆಗಾ ಕುಟುಂಬ, ನಂದಮೂರಿ ಕುಟುಂಬ, ದಗ್ಗುಬಾಟಿ, ಅಕ್ಕಿನೇನಿ ಕುಟುಂಬದ ಆಸ್ತಿಯಲ್ಲ. ಕಷ್ಟ ಪಟ್ಟು ಕೆಲಸ ಮಾಡುವ ಎಲ್ಲರ ಆಸ್ತಿ’ ಎಂದಿದ್ದಾರೆ.

ಯದು ವಂಶಿ ನಿರ್ದೇಶನದಲ್ಲಿ ಚಿತ್ರ ತಯಾರಾಗುತ್ತಿದ್ದು, ಅವರೇ ಕಥೆಯನ್ನೂ ಬರೆದಿದ್ದಾರೆ. ಸಾಯಿಕುಮಾರ್, ಗೋಪರಾಜು ರಮಣ, ಶರಣ್ಯ ಸುರೇಶ್, ಶ್ರೀ ಲಕ್ಷ್ಮಿ, ಟೀನಾ ಶ್ರಾವ್ಯ, ಪ್ರಸಾದ್ ಬೆಹ್ರಾ, ಕೋಟ ಜಯರಾಮ್, ಕಿಟ್ಟಯ್ಯ, ಈಶ್ವರ್ ರಾಚಿರಾಜು, ವಿಶಿಕಾ ಸೇರಿದಂತೆ ಹಲವರು ಇದ್ದಾರೆ. ಇದನ್ನು ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಜಯಲಕ್ಷ್ಮಿ ಅಡಪಾಕ, ನಿಹಾರಿಕಾ ಕೊನಿಡೇಲ, ಪದ್ಮಜಾ ಕೊನಿಡೇಲ ಮತ್ತು ರಮೇಶ್ ಮಾನ್ಯಂ ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಅನುದೀಪ್ ದೇವ್ ಸಂಗೀತ ನೀಡಿದ್ದು, ಎದುರೋಳು ರಾಜು ಅವರ ಛಾಯಾಗ್ರಹಣ ಮತ್ತು ಅನ್ವರ್ ಅಲಿ ಸಂಕಲನ ಮಾಡಿದ್ದಾರೆ. ಚಿತ್ರವು ಆಗಸ್ಟ್ 9 ರಂದು ಬಿಡುಗಡೆಯಾಗುತ್ತಿದೆ. ವರದಿಗಳ ಪ್ರಕಾರ ನಾಗಬಾಬು ಅವರು ತಮ್ಮ ಮಗಳು ನಿಹಾರಿಕಾ ಅವರ ಒತ್ತಾಯದ ಮೇರೆಗೆ ʻಕಮಿಟಿ ಕುರೋಲ್ಲುʼ ಕಥೆಯನ್ನು ಕೇಳಿದ್ದಾರೆ ಮತ್ತು ಅದನ್ನು ಇಷ್ಟಪಟ್ಟಿದ್ದಾರೆ.

Continue Reading

ಬಾಲಿವುಡ್

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Akshay Kumar: ಸಾಜಿದ್ ಖಾನ್ ನಿರ್ದೇಶನದ ಹೇ ಬೇಬಿ ಸಿನಿಮಾ ಇಂಗ್ಲಿಷ್ ಸಿನಿಮಾ ‘ತ್ರೀ ಮೆನ್ ಅಂಡ್ ಎ ಬೇಬಿ’ ಚಿತ್ರದ ರಿಮೇಕ್ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿತ್ತು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕೂಡ ಇದ್ದಳು. ಇದೀಗ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ‘ಖೇಲ್ ಖೇಲ್ ಮೇ’ ಸಿನಿಮಾ ಪ್ರಚಾರ ಮಾಡಲು ಮತ್ತೆ ಮೂವರು ಒಂದಾಗಿದ್ದಾರೆ.

VISTARANEWS.COM


on

Akshay Kumar Riteish Fardeen recreate Heyy Babyy
Koo

ಬೆಂಗಳೂರು: ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಹೇ ಬೇಬಿ’ ಸಿನಿಮಾ 2007ರಲ್ಲಿ ರಿಲೀಸ್ ಆಯಿತು. ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.  ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಇದೀಗ ‘ಹೇ ಬೇಬಿ’ ಚಿತ್ರದ ಸ್ಟೆಪ್ಸ್‌ವನ್ನು ರಿ ಕ್ರಿಯೇಟ್‌ ಮಾಡಿದ್ದಾರೆ. ಅಕ್ಷಯ್ ಅವರ ಮುಂಬರುವ ಚಿತ್ರ, ‘ಖೇಲ್ ಖೇಲ್ ಮೇ’ ಸಿನಿಮಾ ಪ್ರಚಾರ ಮಾಡಲು ಮತ್ತೆ ಮೂವರು ಒಂದಾಗಿ, ಚಿತ್ರದ ಹೊಸ ಹಾಡು ‘ಹೌಲಿ ಹೌಲಿ’ಯ ಸಾಂಗ್‌ಗೆ ಹೆಜ್ಜೆ ಇಟ್ಟಿದ್ದಾರೆ.

ಸಾಜಿದ್ ಖಾನ್ ನಿರ್ದೇಶನದ ಹೇ ಬೇಬಿ ಸಿನಿಮಾ ಇಂಗ್ಲಿಷ್ ಸಿನಿಮಾ ‘ತ್ರೀ ಮೆನ್ ಅಂಡ್ ಎ ಬೇಬಿ’ ಚಿತ್ರದ ರಿಮೇಕ್ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿತ್ತು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕೂಡ ಇದ್ದಳು. ಇದೀಗ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ‘ಖೇಲ್ ಖೇಲ್ ಮೇ’ ಸಿನಿಮಾ ಪ್ರಚಾರ ಮಾಡಲು ಮತ್ತೆ ಮೂವರು ಒಂದಾಗಿದ್ದಾರೆ.

ಅಕ್ಷಯ್ ಅವರು ಮಂಗಳವಾರ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಮೋಜಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಹೀಗೆ ಬರೆದಿದ್ದಾರೆ, “ಹೇ ಬೇಬಿ ಹೌಲಿ ಹೌಲಿಯನ್ನು ಭೇಟಿಯಾದಾಗ, ಈಗ ನೀವು ನಿಮ್ಮ ಸ್ನೇಹಿತರೊಂದಿಗೆ ಹೌಲಿ ಹೌಲಿ ರೀಲ್ಸ್‌ ಮಾಡಿ , ನಮ್ಮೊಂದಿಗೆ ಹಂಚಿಕೊಳ್ಳಿ. ಮತ್ತು 15 ಆಗಸ್ಟ್, 2024 ರಂದು ಚಿತ್ರಮಂದಿರಗಳಲ್ಲಿ ಖೇಲ್ ಖೇಲ್ ಮೇ ಬಿಡುಗಡೆಯಾಗುತ್ತಿದೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ಈ ತಿಂಗಳ ಆರಂಭದಲ್ಲಿ, ‘ಖೇಲ್ ಖೇಲ್ ಮೇ’ ತಂಡ ಟ್ರೈಲರ್ ಅನ್ನು ಬಿಡುಗಡೆ ಗೊಳಿಸಿದರು. ಅಕ್ಷಯ್, ತಾಪ್ಸಿ ಪನ್ನು, ವಾಣಿ ಕಪೂರ್, ಫರ್ದೀನ್ ಖಾನ್ ಮತ್ತು ಆಮಿ ವಿರ್ಕ್ ನಟಿಸಿರುವ ಈ ಚಿತ್ರ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಮರ್ ಕೌಶಿಕ್ ನಿರ್ದೇಶನದ ರಾಜ್‌ಕುಮಾರ್ ರಾವ್ ಮತ್ತು ಶ್ರದ್ಧಾ ಕಪೂರ್ ಅವರ ʻಸ್ಟ್ರೀಟ್ 2ʼ ರೊಂದಿಗೆ ಘರ್ಷಣೆಯಾಗುವ ಈ ಚಿತ್ರವನ್ನು ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅಕ್ಷಯ್ ಕುಮಾರ್ ದೊಡ್ಡ ಫ್ಲಾಪ್ ಕಂಡರು. ‘ಸರ್ಫಿರಾ’ ಕೂಡ ಕಳಪೆ ಗಳಿಕೆ ಮಾಡಿತು.

Continue Reading

ಸ್ಯಾಂಡಲ್ ವುಡ್

Pooja Gandhi: ಮೃತ್ಯುಂಜಯ ಮಂತ್ರ ಪಠಣೆ ಮಾಡ್ತಾರಂತೆ ಪೂಜಾ ಗಾಂಧಿ; ನಟಿಯ ಕನ್ನಡಾಭಿಮಾನಕ್ಕೆ ಕನ್ನಡಿಗರು ಫಿದಾ!

Pooja Gandhi: ಇದೀಗ ನಟಿ ʻʻಪ್ರತಿ ದಿನ ಮಂತ್ರ ಪಠಣ ಮಾಡುತ್ತೇನೆ ಹಾಗೇ ಹನುಮಾನ ಚಾಲೀಸಾ ಹಾಗೂ ಮೃತ್ಯಂಜಯ ಮಂತ್ರದಲ್ಲಿ ನನಗೆ ನಂಬಿಕೆ ಇದೆʼʼಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

VISTARANEWS.COM


on

Pooja Gandhi P reciting the Mrityunjaya mantra Kannadigas
Koo

ಬೆಂಗಳೂರು: ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ (Pooja Gandhi) ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚೆಗೆ ನಟಿ ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದರು. ಇದೀಗ ನಟಿ ʻʻಪ್ರತಿ ದಿನ ಮಂತ್ರ ಪಠಣ ಮಾಡುತ್ತೇನೆ ಹಾಗೇ ಹನುಮಾನ ಚಾಲೀಸಾ ಹಾಗೂ ಮೃತ್ಯಂಜಯ ಮಂತ್ರದಲ್ಲಿ ನನಗೆ ನಂಬಿಕೆ ಇದೆʼʼಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಹನುಮಾನ ಚಾಲೀಸಾ ಹಾಗೂ ಮೃತ್ಯಂಜಯ ಮಂತ್ರದಲ್ಲಿ ಅವರಿಗೆ ನಂಬಿಕೆ ಇದೆ. ಇದು ನನಗೆ ಶಕ್ತಿ ನೀಡಿದೆ ಎನ್ನುವ ಅವರು, ಪ್ರತಿ ದಿನ, ಪ್ರತಿ ಕ್ಷಣವನ್ನು ಎಂಜಾಯ್ ಮಾಡಿ ಎಂಬ ಕಿವಿಮಾತು ಹೇಳಿದ್ದಾರೆ. ʻʻಒತ್ತಡ ಇಲ್ಲದೇ ಯಾರೂ ಈ ಪ್ರಪಂಚದಲ್ಲಿ ಇಲ್ಲ. ಮಕ್ಕಳಿಗೆ ಈಗ ಇದೆ. ನಿರುದ್ಯೋಗಿಗಳಿಗೆ ಇದೆ. ಬಡವರಿಗೆ ಎಲ್ಲರಿಗೂ ಅವರದ್ದೇ ಆದ ಒತ್ತಡ ಇದೆ. ಇದೀಗ ಜನ ಆಧ್ಯಾತ್ಮ ಕಡೆ ಬರುತ್ತಿದ್ದಾರೆʼʼ ಎಂದರು. ಹಾಗೆ ಕನ್ನಡಿಗರಿಗಾಗಿ ಅವರು ಹೊಸ ಪ್ರಾಜೆಕ್ಟ್ ಒಂದನ್ನು ತರುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡ್ತೇನೆ ಎಂದಿರುವ ಪೂಜಾ ಕರ್ನಾಟಕದ ಹೆಮ್ಮೆ ಮೈಸೂರ್ ಸ್ಯಾಂಡಲ್ ಸೋಪ್ ಬಳಕೆ ಮಾಡುತ್ತಾರೆ.

ಇದನ್ನೂ ಓದಿ: Pooja Gandhi: ಕುಪ್ಪಳಿಯ ಕವಿ ಶೈಲದಲ್ಲಿ ಪೂಜಾ ಗಾಂಧಿ ಜೋಡಿ!

ಹಿಂದಿ, ಬಂಗಾಳಿ ಚಿತ್ರಗಳಲ್ಲಿ ನಟಿಸುತ್ತಿದ್ದ ಪೂಜಾ ಗಾಂಧಿ 2006ರಲ್ಲಿ ತೆರೆಕಂಡ ʼಮುಂಗಾರು ಮಳೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಯೋಗರಾಜ್‌ ಭಟ್‌ ನಿರ್ದೇಶನದ ಈ ಚಿತ್ರ ಕನ್ನಡದಲ್ಲಿ ದಾಖಲೆಯ ಕಲೆಕ್ಷನ್‌ ಮಾಡಿತ್ತು. ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ಪೂಜಾ ಗಾಂಧಿ ಈ ಚಿತ್ರದ ಮೂಲಕ ಸ್ಟಾರ್‌ ಆಗಿ ಹೊರ ಹೊಮ್ಮಿದ್ದರು. ಬಳಿಕ ಪೂಜಾ ಗಾಂಧಿ ಪುನೀತ್‌ ರಾಜ್‌ ಕುಮಾರ್‌, ಯಶ್‌, ಉಪೇಂದ್ರ ಮುಂತಾದವರ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದಾರೆ. ಜತೆಗೆ ತಮಿಳು, ತೆಲುಗು, ಮಲೆಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.

Continue Reading

South Cinema

Rishab Shetty: ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು; ಚಿಯಾನ್ ವಿಕ್ರಮ್ ಭೇಟಿ ಬಳಿಕ ರಿಷಬ್ ಶೆಟ್ಟಿ ರಿಯಾಕ್ಷನ್‌!

Rishab Shetty: ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

VISTARANEWS.COM


on

Rishab Shetty meets Chiyaan Vikram after 24 years
Koo

ಬೆಂಗಳೂರು: ಕನ್ನಡ ನಟ ರಿಷಬ್ ಶೆಟ್ಟಿ (Rishab Shetty) ಅವರು ಆಗಸ್ಟ್ 6ರಂದು ಬೆಂಗಳೂರಿನಲ್ಲಿ ತಮಿಳು ನಟ ಚಿಯಾನ್ ವಿಕ್ರಮ್ ಅವರನ್ನು ಭೇಟಿಯಾದರು. ಕೆಲವು ಕ್ಯಾಂಡಿಡ್ ಚಿತ್ರಗಳನ್ನು ಹಂಚಿಕೊಂಡ ರಿಷಬ್, ನಟನಾಗಿ ತನ್ನ ಪ್ರಯಾಣದಲ್ಲಿ ತನಗೆ ಸ್ಫೂರ್ತಿ ನೀಡಿದ ವಿಕ್ರಮ್ ಅವರನ್ನು ಭೇಟಿಯಾಗಲು 24 ವರ್ಷಗಳೇ ಬೇಕಾಯ್ತು ಎಂದು ಬರೆದುಕೊಂಡಿದ್ದಾರೆ. ಚಿಯಾನ್ ವಿಕ್ರಮ್ ಅವರು ಪಾ ರಂಜಿತ್ ನಿರ್ದೇಶನದ ತಮ್ಮ ಮುಂಬರುವ ಚಿತ್ರ ‘ತಂಗಾಲನ್’ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಆಗ ರಿಷಬ್‌ ಅವರನ್ನು ನಟ ಭೇಟಿಯಾಗಿದ್ದಾರೆ.

ಆಗಸ್ಟ್ 6 ರಿಷಬ್ ಶೆಟ್ಟಿ ಜೀವನದಲ್ಲಿ ಮರೆಯಲಾಗದ ದಿನವಾಗಿದೆ. ಎಕ್ಸ್ ಪೇಜ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ರಿಷಬ್, “ನಟನಾಗುವಾಗ ನನ್ನ ಪ್ರಯಾಣದಲ್ಲಿ, ವಿಕ್ರಮ್ ಸರ್ ಯಾವಾಗಲೂ ನನಗೆ ಸ್ಫೂರ್ತಿಯಾಗಿದ್ದರು. 24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂದು ವಿಕ್ರಮ್‌ ಅವರನ್ನು ಭೇಟಿಯಾದೆ. ಹೀಗಾಗಿ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು, ತಂಗಲಾನ್‌ ಸಿನಿಮಾಗೆ ಶುಭ ಹಾರೈಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

‘ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ’ ಪ್ರೀಕ್ವೆಲ್‌ನ ಚಿತ್ರೀಕರಣದಲ್ಲಿದ್ದಾರೆ, ಇದು ಡಿಸೆಂಬರ್ 2024 ರಲ್ಲಿ ಬಿಡುಗಡೆಯಾಗಲಿದೆ. ಚಿಯಾನ್ ವಿಕ್ರಮ್ ‘ತಂಗಲಾನ್’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಆಗಸ್ಟ್ 15 ರಂದು ಬಹು ಭಾಷೆಗಳಲ್ಲಿ ಥಿಯೇಟರ್‌ಗಳಲ್ಲಿ ಬರಲಿದೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

Continue Reading
Advertisement
Vinesh Phogat
ಪ್ರಮುಖ ಸುದ್ದಿ28 mins ago

Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Niharika Konidela Nagendra Babu says Industry Is Not Our Father's Property
ಟಾಲಿವುಡ್38 mins ago

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Bangladesh Unrest
ದೇಶ54 mins ago

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Israel Palestine war
ವಿದೇಶ57 mins ago

Israel Palestine War: ಜೈಲಿನೊಳಗೇ ಪ್ಯಾಲೆಸ್ತೀನ್‌ ಕೈದಿಗಳ ಮೇಲೆ ಇಸ್ರೇಲಿ ಯೋಧರಿಂದ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

nelamangala road accident
ಬೆಂಗಳೂರು59 mins ago

Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

Rishabh Pant
ಕ್ರೀಡೆ1 hour ago

Rishabh Pant: ನೀರಜ್​ ಬಂಗಾರ ಗೆದ್ದರೆ ಅದೃಷ್ಟಶಾಲಿಗೆ ಪಂತ್​ ಕಡೆಯಿಂದ ಸಿಗಲಿದೆ ನಗದು ಬಹುಮಾನ

Akshay Kumar Riteish Fardeen recreate Heyy Babyy
ಬಾಲಿವುಡ್1 hour ago

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Viral Video
Latest2 hours ago

Viral Video: ಮೃಗಾಲಯದಲ್ಲಿ ಮಂಗನ ಎದುರು ಯುವತಿಯ ‘ಕಪಿ ಚೇಷ್ಟೆ’! ಪರಿಣಾಮ ಏನಾಯ್ತು ನೋಡಿ!

chemicals in food
ಬೆಂಗಳೂರು2 hours ago

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಂದೂ ಇಳಿಕೆಯಾದ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು19 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ20 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌