Divya Uruduga: ಅಭಿಮಾನಿಗಳಿಗೆ ಸ್ಪೆಷಲ್‌ ಗಿಫ್ಟ್‌ ಕೊಟ್ಟ ದಿವ್ಯಾ ಉರುಡುಗ-ಅರವಿಂದ್ ! - Vistara News

South Cinema

Divya Uruduga: ಅಭಿಮಾನಿಗಳಿಗೆ ಸ್ಪೆಷಲ್‌ ಗಿಫ್ಟ್‌ ಕೊಟ್ಟ ದಿವ್ಯಾ ಉರುಡುಗ-ಅರವಿಂದ್ !

Divya Uruduga: ನಿರ್ದೇಶಕರೇ ಸಾಹಿತ್ಯ ರಚಿಸಿದ ‘ಹುಚ್ಚುಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈ ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ವಾಸುಕಿ ವೈಭವ್, ಪೃಥ್ವಿ ಭಟ್ ಧ್ವನಿಯಾಗಿದ್ದಾರೆ.

VISTARANEWS.COM


on

Divya Uruduga-Arvind
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ಬಾಸ್ ಜೋಡಿ ದಿವ್ಯಾ ಉರುಡುಗ (Divya Uruduga) ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ (aravind kp). ಈಗ ಬೆಳ್ಳಿತೆರೆಯ ಮೇಲೆಯೂ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ‘ಅರ್ದಂಬರ್ದ’ ಪ್ರೇಮಕಥೆ. ಮುಂದಿನ ತಿಂಗಳು ರಿಲೀಸ್ ಗೆ ಸಿದ್ಧವಾಗಿರುವ ಚಿತ್ರದ ಹಾಡೊಂದನ್ನು ಅಭಿಮಾನಿಗಳೇ ಬಿಡುಗಡೆ ಮಾಡಿದರು. ನಿರ್ದೇಶಕರೇ ಸಾಹಿತ್ಯ ರಚಿಸಿದ ‘ಹುಚ್ಚುಮನಸಿನ ಹುಡುಗಿ’ ಎಂಬ ಹಾಡಲ್ಲಿ ನಾಯಕ, ನಾಯಕಿಯ ಮನದ ಭಾವನೆಗಳನ್ನು ತೆರೆದಿಡಲಾಗಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈ ಹಾಡಿಗೆ ಮ್ಯೂಸಿಕ್ ಕಂಪೋಸ್‌ ಮಾಡಿದ್ದು, ವಾಸುಕಿ ವೈಭವ್, ಪೃಥ್ವಿ ಭಟ್ ಧ್ವನಿಯಾಗಿದ್ದಾರೆ.

ಈಗಾಗಲೇ ಅರ್ದಂಬರ್ದ ಪ್ರೇಮಕಥೆ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲ ಮುಗಿದಿದ್ದು ಸೆನ್ಸಾರ್ ಪ್ರಕ್ರಿಯೆ ನಡೆಯುತ್ತಿದೆ. ಅರವಿಂದ್ ಕೌಶಿಕ್ ನಿರ್ದೇಶನದ ನಮ್ ಏರಿಯಾಲ್ ಒಂದಿನ ಚಿತ್ರದ ಮೂಲಕ ಪೂರ್ಣ ಪ್ರಮಾಣದ ಸಂಗೀತ ಸಂಯೋಜಕರಾಗಿದ್ದ ಅರ್ಜುನ್ ಜನ್ಯ ಮತ್ತೊಮ್ಮೆ ಅರವಿಂದ್ ಜತೆ ಸೇರಿ ಚೆಂದದ ಹಾಡುಗಳನ್ನು ಕಂಪೋಸ್‌ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಅರವಿಂದ್ ಕೌಶಿಕ್ “ನಾನು ಈ ಕಥೆ ಶುರು ಮಾಡಿದಾಗಲೇ ನಾಯಕಿ ಪಾತ್ರಕ್ಕೆ ದಿವ್ಯಾ ಅವರನ್ನು ಆಯ್ಕೆ ಮಾಡಿದೆ. ಅವರನ್ನು ಒಪ್ಪಿಸಿದ ಮೇಲೆ ಅರವಿಂದ್ ಹೀರೊ ಪಾತ್ರ ಮಾಡಿದರೆ ಹೇಗೆ ಅನಿಸಿತು, ದಿವ್ಯಾ ಮೂಲಕ ಅವರನ್ನು ಕೇಳಿದಾಗ ಉತ್ತರ ಹೇಳಲು 2 ದಿನ ತೆಗೆದುಕೊಂಡರು. ಅಲ್ಲದೆ ಅರ್ಜುನ್‌ ಜನ್ಯ ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ 4 ಅದ್ಭುತವಾದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಇವತ್ತಿನ ಕಾಲದಲ್ಲಿ ಪ್ರೀತಿ ಎನ್ನುವುದು ಒಂದು ಭಾವನೆ, ನಮ್ಮ ಕನಸುಗಳ ಜತೆಗೇ ಬೆಳೆಯುತ್ತೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದನ್ನು ನಿಭಾಯಿಸಿಕೊಂಡು ಹೋಗೋದು ಕಷ್ಟ. ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಅದು ಬದುಕಬೇಕಾಗಿರುತ್ತೆ, ಇವತ್ತಿನ ಹಾಡು ಚಿತ್ರದ ಕಥೆಯನ್ನೇ ಹೇಳುತ್ತೆ, ಇದರ ನಂತರ ಇವರಿಬ್ಬರು ಲವ್ ಮಾಡ್ತಾರಾ ಇಲ್ವಾ ಅನ್ನೋದೇ ಕುತೂಹಲ, ಚಿತ್ರವೀಗ ಬಿಡುಗಡೆಯ ಹಂತದಲ್ಲಿದ್ದು, ಈಗ ಪ್ರಚಾರ ಶುರು ಮಾಡಿದ್ದೇವೆ, ನವೆಂಬರ್‌ನಲ್ಲಿ ತೆರೆಗೆ ತರೋ ಪ್ಲಾನಿದೆ” ಎಂದರು.

ಇದನ್ನೂ ಓದಿ: Divya Uruduga: `ಅರ್ಧಂಬರ್ಧ’ ವಿಚಾರ ಹೊರಹಾಕಿದ ʻಬಿಗ್‌ ಬಾಸ್‌ʼ ಖ್ಯಾತಿಯ ದಿವ್ಯಾ ಉರುಡುಗ;ಮದುವೆ ಯಾವಾಗ?


ನಾಯಕ ಅರವಿಂದ್ ಮಾತನಾಡಿ ʻʻಅಭಿನಯ ನಿಜವಾಗಿಯೂ ಕಷ್ಟದ ಕೆಲಸವೇ. ಒಂದಷ್ಟು ದಿನ ವರ್ಕ್‌ ಶಾಪ್‌ ಮಾಡಿ ನಂತರ ಬಣ್ಣ ಹಚ್ಚಿದೆ. ಆರಂಭದ 2-3 ದಿನ ಸ್ವಲ್ಪ ಕಷ್ಟವಾಗಿತ್ತು, ನಿರ್ದೇಶಕ ಅರವಿಂದ್ ಹಾಗೂ ದಿವ್ಯಾ ಇಬ್ಬರೂ ನನಗೆ ತುಂಬಾ ಹೇಳಿಕೊಟ್ಟರು. ನಾನೇನೇ ಮಾಡಿದ್ರೂ ಅದಕ್ಕೆ ನಿರ್ದೇಶಕರೇ ಕಾರಣʼʼ ಎಂದು ಹೇಳಿದರು,
ನಾಯಕಿ ದಿವ್ಯಾ ಮಾತನಾಡಿ ʻʻಈ ಹಾಡನ್ನು ಅಭಿಮಾನಿಗಳಿಗೋಸ್ಕರ ಡೆಡಿಕೇಟ್ ಮಾಡೋಣ ಎಂದು ಅವರಿಂದಲೇ ರಿಲೀಸ್ ಮಾಡಿಸಿದ್ದೇವೆ, ನನ್ನ ಪಾತ್ರದ ಬಗ್ಗೆ ಹೇಳೋದಾದರೆ ಆಕೆ ಸ್ವಲ್ಪ ಮುಂಗೋಪಿಯಾದರೂ, ಮನಸು ಹೂವಿನಂಥದ್ದು, ಜನ ಅವಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಲ್ಲ, ಆಕೆಗಿರುವ ರಿಯಲ್ ಲೈಫ್ ಪ್ರಾಬ್ಲಂಗಳಿಂದ ಹಾಗೆ ನಡೆದುಕೊಳ್ತಾಳೆ ಅಷ್ಟೇʼʼ ಎಂದು ತನ್ನ ಪಾತ್ರದ ಕುರಿತು ವಿವರಿಸಿದರು.

ಬಕ್ಸಾಸ್ ಮೀಡಿಯಾ, ಆರ್‌ಎಸಿ ವಿಷುವಲ್ಸ್ ಮತ್ತು ಲೈಟ್ಹೌಸ್ ಮೀಡಿಯಾದ ಸಹಕಾರದೊಂದಿಗೆ ಈ ಚಿತ್ರವನ್ನು ನಿರ್ಮಿಸಿದೆ. ಬಕ್ಸಸ್ ಪರವಾಗಿ ದಿವ್ಯಾ ಉತ್ತಪ್ಪ, ಲೈಟ್ ಹೌಸ್ ನ ಸಂತೋಷ್ ಉಪಸ್ಥಿತರಿದ್ದರು. ರ‍್ಯಾಪರ್ ಅಲೋಕ್, ಶ್ರೇಯಾ ಬಾಬು, ವೆಂಕಟಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿಶ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹಿರಿಯನಟ ದ್ವಾರಕೀಶ್ ಪುತ್ರ ಅಭಿಲಾಷ್ ವಿಶೇಷ ಪಾತ್ರದ ಮೂಲಕ 25 ವರ್ಷಗಳ ನಂತರ ನಟನೆಗೆ ಮರಳಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

Dolly Dhananjay: ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ.

VISTARANEWS.COM


on

Dolly Dhananjay kotee distribution rights held by KRG Studios
Koo

ಬೆಂಗಳೂರು: ಡಾಲಿಯ ʻಕೋಟಿʼ (Dolly Dhananjay) ಸಿನಿಮಾ ಹವಾ ಎಲ್ಲೆಡೆ ಹಬ್ಬಿಕೊಂಡಿದೆ. ಬಿಡುಗಡೆಗೆ ಕೆಲವೇ ಕೆಲ ದಿನಗಳು ಬಾಕಿ ಇರುವಾಗಲೇ ಈ ಸಿನಿಮಾದೆಡೆಗಿನ ಕ್ರೇಜ್ ಅಚ್ಚರಿದಾಯಕವಾಗಿ ವ್ಯಾಪಿಸಿಕೊಂಡಿದೆ. ಇಂಥಾ ಸಕಾರಾತ್ಮಕ ವಾತಾವರಣದಲ್ಲಿ ದಿನಕ್ಕೊಂದರಂತೆ ಹೊಸಾ ಬಗೆಯ ಸುದ್ದಿಗಳು ಕೋಟಿ ಬಳಗದಿಂದ ಕಡೆಯಿಂದ ಬರುತ್ತಲೇ ಇದ್ದಾವೆ. ಇದೀಗ ʻಕೋಟಿʼ ವಿತರಣಾ ಹಕ್ಕುಗಳು KRG ಸ್ಟುಡಿಯೋಸ್ ಪಾಲಾಗಿದೆ. ಸಿನಿಮಾ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಲೇ, ಭರವಸೆಯಿಂದ ಸದರಿ ಸಂಸ್ಥೆ ಡಾಲಿ ಸಿನಿಮಾ ವಿತರಣಾ ಹಕ್ಕನ್ನು ತನ್ನದಾಗಿಸಿಕೊಂಡಿದೆ.

ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಹಾಗೂ ವಿತರಣೆಯಲ್ಲಿ ಕೆಆರ್ ಜಿ ಸಂಸ್ಥೆ ಒಳ್ಳೆ ಹೆಸರು ಮಾಡಿದೆ. ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಬಡವ ರಾಸ್ಕಲ್, ಪೈಲ್ವಾನ್, 12 ನೇ ಫೇಲ್, ಹನುಮಾನ್ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳು ಈ ಸಂಸ್ಥೆಯ ಮೂಲಕವೇ ಬಿಡುಗಡೆಗೊಂಡಿದೆ. KRG ಸ್ಟುಡಿಯೋಸ್ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಚಲನಚಿತ್ರಗಳನ್ನು ವಿತರಿಸಿದೆ. ಹಾಗೆಂದ ಮಾತ್ರಕ್ಕೆ, ಈ ಸಂಸ್ಥೆಯ ಕಡೆಯಿಂದ ಸಿನಿಮಾವೊಂದು ಬಿಡುಗಡೆಗೊಳ್ಳೋದು ಸಲೀಸಿನ ಸಂಗತಿಯಲ್ಲ. ಅದು ನಿಜಕ್ಕೂ ಪ್ರತಿಷ್ಠೆಯ ಸಂಗತಿ. ಯಾಕೆಂದರೆ, ಎಲ್ಲ ಬಗೆಯಲ್ಲಿಯೂ ಪರಿಪೂರ್ಣವಾಗಿರುವ, ಗೆಲುವಿನ ಲಕ್ಷಣಗಳನ್ನು ಹೊಂದಿರುವ ಚಿತ್ರಗಳನ್ನು ಮಾತ್ರವೇ ಈ ಸಂಸ್ಥೆ ತನ್ನಡಾಗಿಸಿಕೊಳ್ಳುತ್ತೆ. ಇದೀಗ ಕೋಟಿ ವಿತರಣಾ ಹಕ್ಕು ಕೆಆರ್ ಜಿ ಪಾಲಾಗಿರೋದೇ, ಈ ಚಿತ್ರದೆಡೆಗಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಕೋಟಿ ಸಿನಿಮಾವನ್ನು ಇಡೀ ಕೆಆರ್ ಜಿ ಬಳಗ ವೀಕ್ಷಣೆ ಮಾಡಿದೆ. ಭಾವನಾತ್ಮಕ ಎಳೆಯುಳ್ಳ ಈ ಚಿತ್ರ ಐಪಿಎಲ್ ಹಾಗೂ ಚುನಾವಣಾ ಬಳಿಕ ಇಡೀ ಫ್ಯಾಮಿಲಿಗೆ ಹೇಳಿ ಮಾಡಿಸಿದ ಪರಿಪೂರ್ಣವಾದ ಔತಣದಂತಿದೆ ಎಂದಿದೆ.

ಕೆಆರ್‌ಜಿ ಸ್ಟುಡಿಯೋಸ್‌ನ ಸಂಸ್ಥಾಪಕ ಕಾರ್ತಿಕ್ ಗೌಡ ಮಾತನಾಡಿ, “ಧನಂಜಯ್ ಅವರೊಂದಿಗಿನ ನಮ್ಮ ಸಂಬಂಧವು ‘ಕೋಟಿ’ ಮೂಲಕ ಮತ್ತಷ್ಟು ವಿಸ್ತರಿಸಿದೆ. ನಾನು ಸಿನಿಮಾ ನೋಡಿದೆ. ಪರಮೇಶ್ವರ್ ಗುಂಡ್ಕಲ್ ಅವರ ಬರವಣಿಗೆ ಹಾಗೂ ಚಿತ್ರಕಥೆ ಹೆಣೆದಿರುವ ಸೊಗಸನ್ನು ನೋಡಿ ಥ್ರಿಲ್ ಆಗಿದ್ದೇನೆ. ಈ ಚಿತ್ರವನ್ನು ಪ್ರೇಕ್ಷಕರಿಗೆ ಪ್ರಸ್ತುತಪಡಿಸಲು ನಾವು ಉತ್ಸುಕರಾಗಿದ್ದೇವೆ. 250ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಈ ಅವಕಾಶವನ್ನು ನೀಡಿದ ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಅವರಿಗೆ ನಾನು ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

Continue Reading

ಸ್ಯಾಂಡಲ್ ವುಡ್

Sanjana Anand: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಸಂಜನಾ ಆನಂದ್!

Sanjana Anand: ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

VISTARANEWS.COM


on

Sanjana Anand Hot Photoshoot
Koo

ʻಕೆಮೆಸ್ಟ್ರಿ ಆಫ್ ಕರಿಯಪ್ಪʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಂಜನಾ ಆನಂದ್ (Sanjana Anand) ಸಖತ್‌ ಹಾಟ್ ಆಗಿದ್ದಾರೆ. ಮಾಡರ್ನ್ ಡ್ರೆಸ್‌ನಲ್ಲಿ ಪೋಸ್ ನೀಡುತ್ತಿದ್ದಾರೆ.

ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ. 

ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ (Sanjana Anand) ನಾಯಕಿ ಎಂದು ಹೇಳಲಾಗುತ್ತಿತ್ತು.

ದುನಿಯಾ ವಿಜಯ್ ನಟನೆಯ `ಸಲಗ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ನಟಿ ಸಂಜನಾ ಆನಂದ್‌ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading

ಒಟಿಟಿ

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava: ‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ.

VISTARANEWS.COM


on

Bujji and Bhairava Prabhas animated show raises
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಕಾಲಿವುಡ್

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Raghu Thatha: ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು.

VISTARANEWS.COM


on

Raghu Thatha Hombale Films Realease date announced
Koo

ಬೆಂಗಳೂರು: ʼಕೆಜಿಎಫ್‌ʼ ಸರಣಿ, ʼಕಾಂತಾರʼ, ʼಸಲಾರ್‌ʼ ಮುಂತಾದ ಚಿತ್ರಗಳನ್ನು ನಿರ್ಮಿಸಿ ದೇಶಾದ್ಯಂತ ಸಂಚಲನ ಸೃಷಿಸಿದ ಕನ್ನಡದ ಹೊಂಬಾಳೆ ಫಿಲ್ಮ್ಸ್‌ನ (Hombale Films) ಮೊದಲ ತಮಿಳು ಸಿನಿಮಾ ‘ರಘು ತಾತಾ’ (Raghu Thatha). ಇದುವರೆಗೂ ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ನ ಮೊದಲ ಈ ತಮಿಳು ಸಿನಿಮಾದಲ್ಲಿ ಬಹುಭಾಷಾ ನಟಿ, ಪ್ರತಿಭಾವಂತ ಕಲಾವಿದೆ ಕೀರ್ತಿ ಸುರೇಶ್‌ (Keerthy Suresh) ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಈ ಹಿಂದೆ, ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʼʼರಘುತಾತಾ’ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಅಸಿತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆʼʼ ಎಂದು ಚಿತ್ರತಂಡ ಈ ಹಿಂದೆ ಹೇಳಿಕೊಂಡಿತ್ತು. ಈ ಸಿನಿಮಾ ಅಗಸ್ಟ್‌ 15ರಂದು ತೆರೆಗೆ ಅಪ್ಪಳಿಸಲಿದೆ.

ಇದನ್ನೂ ಓದಿ: Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

ಗಮನ ಸೆಳೆದ ಕೀರ್ತಿ ಸುರೇಶ್‌

ಈ ಮುಂಚೆ ಬಿಡುಗಡೆಯಾದ ಒಂದು ನಿಮಿಷದ ಟೀಸರ್‌ನಲ್ಲಿ, ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೋರಾಡುವ ಯುವತಿಯಾಗಿ ಕೀರ್ತಿ ಸುರೇಶ್‌ ಮಿಂಚಿದ್ದರು. ಉದ್ಯೋಗ ಬಡ್ತಿಗಾಗಿ ಹಿಂದಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಬೇಕು ಎನ್ನುವ ಷರತ್ತನ್ನು ಆಕೆ ವಿರೋಧಿಸುತ್ತಾಳೆ. ಅನೇಕ ಜನರನ್ನು ಸಂಘಟಿಸಿ ಬೀದಿಗಿಳಿದು ಹೋರಾಡುತ್ತಾಳೆ. ಸದ್ಯ ಇದಿಷ್ಟು ವಿಚಾರ ಟೀಸರ್‌ ಮೂಲಕ ಬಹಿರಂಗಗೊಂಡಿತ್ತು. ರೆಟ್ರೋ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ದಿಟ್ಟ ಯುವತಿ ಪಾತ್ರದಲ್ಲಿ ಕಂಡು ಬಂದಿರುವ ಕೀರ್ತಿ ಸುರೇಶ್‌ ಪಾತ್ರಕ್ಕೆ ಅಭಿಮಾನಿಗಳು ಮನ ಸೋತಿದ್ದರು.

ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್‌ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಯಾಮಿನಿ ಯಜ್ನಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದು, ʼಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. 

ಪುಷ್ಪ ಸಿನಿಮಾಗೆ ಸೆಡ್ಡು ಹೊಡೆದ ಹೊಂಬಾಳೆ!

ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು.ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

Continue Reading
Advertisement
Neha Gowda is pregnant the actress shared the good news
ಕಿರುತೆರೆ7 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ7 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ9 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ16 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ23 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್27 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ51 mins ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

KCET Result 2024
ಬೆಂಗಳೂರು51 mins ago

KCET Result 2024 : ಜೂನ್‌ ಮೊದಲ ವಾರ ಸಿಇಟಿ ಪರೀಕ್ಷೆ ಫಲಿತಾಂಶ ಖಚಿತ!

Heat Wave
ದೇಶ1 hour ago

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

driving licence
ಪ್ರಮುಖ ಸುದ್ದಿ1 hour ago

New Driving Licence Rules: ಇಂದಿನಿಂದ ಹೊಸ ಟ್ರಾಫಿಕ್‌ ರೂಲ್ಸ್: ತರಬೇತಿ ಕೇಂದ್ರಗಳಲ್ಲೇ ಟೆಸ್ಟ್‌, ಅಪ್ರಾಪ್ತರಿಗೆ ವಾಹನ ಕೊಟ್ರೆ ನೋಂದಣಿ ರದ್ದು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌