Dolly Dhananjay: ಹ್ಯಾಟ್ರಿಕ್ ಗೆಲುವಿನ ಖುಷಿಯಲ್ಲಿ ಡಾಲಿ ಧನಂಜಯ್: 'ಟಗರು ಪಲ್ಯ'ವೂ ಹಿಟ್! - Vistara News

South Cinema

Dolly Dhananjay: ಹ್ಯಾಟ್ರಿಕ್ ಗೆಲುವಿನ ಖುಷಿಯಲ್ಲಿ ಡಾಲಿ ಧನಂಜಯ್: ‘ಟಗರು ಪಲ್ಯ’ವೂ ಹಿಟ್!

Dolly Dhananjay: ಈಗಾಗಲೇ ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿ ಸಕ್ಸೆಸ್‌ ಕಂಡಿದ್ದ ಡಾಲಿ ಇದೀಗ ಮತ್ತೊಂದು ಸೂಪರ್ ಸಕ್ಸೆಸ್‌ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಧನಂಜಯ್ ನಿರ್ಮಾಣದಲ್ಲೂ ದಾಖಲೆ ಬರೆದಿದ್ದಾರೆ.

VISTARANEWS.COM


on

Dolly Dhananjay tagaru palya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಾಲಿ ಧನಂಜಯ (Dolly Dhananjay), ನಟನೆ ಜತೆಗೆ ನಿರ್ಮಾಣದಲ್ಲೂ ಬ್ಯುಸಿಯಾಗಿರೊ ಸ್ಟಾರ್ . ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಧನಂಜಯ ತನ್ನದೆ ನಿರ್ಮಾಣ ಸಂಸ್ಥೆ ಡಾಲಿ ಪಿಚ್ಚರ್ ಕಡೆಯೂ ಅಷ್ಟೇ ತಲೆಕೆಡಿಸಿಕೊಂಡಿದ್ದಾರೆ. ಈಗಾಗಲೇ ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಿ ಸಕ್ಸೆಸ್‌ ಕಂಡಿದ್ದ ಡಾಲಿ ಇದೀಗ ಮತ್ತೊಂದು ಸೂಪರ್ ಸಕ್ಸೆಸ್‌ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಧನಂಜಯ್ ನಿರ್ಮಾಣದಲ್ಲೂ ದಾಖಲೆ ಬರೆದಿದ್ದಾರೆ.

‘ಬಡವ ರಾಸ್ಕಲ್’ ಸಿನಿಮಾಗೆ ಬಂಡವಾಳ ಹೂಡುವ ಮೂಲಕ ನಿರ್ಮಾಣಕ್ಕೆ ಇಳಿದ ಡಾಲಿ ಇದೀಗ ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿದ್ದಾರೆ. ‘ಡಾಲಿ ಪಿಚ್ಚರ್’ ಎನ್ನುವ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿರುವುದೇ ಉತ್ತಮ ಸಿನಿಮಾಗಳನ್ನು ನೀಡಬೇಕು, ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಎನ್ನುವ ಉದ್ದೇಶಕ್ಕೆ. ‘ಬಡವರ ಮಕ್ಕಳು ಬೆಳಿಬೇಕು ಎಂದು ಹೇಳುವ ಡಾಲಿ ಯುವ ಪ್ರತಿಭಾವಂತರಿಗೆ ಅವಕಾಶ ನೀಡುವ ಮೂಲಕ ಉತ್ತಮ ಸಿನಿಮಾಗಳನ್ನು ತನ್ನ ಬ್ಯಾನರ್‌ನಲ್ಲಿ ಕಟ್ಟಿಕೊಡುತ್ತಿದ್ದಾರೆ.

ಬಡವ ರಾಸ್ಕಲ್ ಸಿನಿಮಾದಲ್ಲಿ ನಟನೆ ಜತೆಗೆ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಡಾಲಿ ಅಷ್ಟೇ ಅಚ್ಚುಕಟ್ಟಾಗಿ ನಿಭಾಯಿಸುವ ಜತೆಗೆ ಮೊದಲ ಪ್ರಯತ್ನದಲ್ಲೇ ದೊಡ್ಡ ಮಟ್ಟದ ಗೆಲುವು ದಾಖಲಿಸಿದರು. ಅದೇ ಹುಮ್ಮಸ್ಸಿನಲ್ಲಿ ಡಾಲಿ ಮತ್ತೊಂದು ಸಿನಿಮಾಗೆ ಬಂಡವಾಳ ಹೂಡಿ ಗೆಲುವು ಕಂಡರು. ಡಾಲಿ ನಿರ್ಮಾಣದಲ್ಲಿ ಮೂಡಿಬಂದ ಎರಡನೇ ಸಿನಿಮಾ ‘ಹೆಡ್ ಬುಷ್’.

ಇದನ್ನೂ ಓದಿ: Actor Nagbhushan: 175 ಥಿಯೇಟರ್‌ಗಳಲ್ಲಿ ಟಗರು ಪಲ್ಯ ಮೆರವಣಿಗೆ; ಅಕ್ಟೋಬರ್ 27ಕ್ಕೆ ತೆರೆಗೆ!

ಬೆಂಗಳೂರಿನ ಭೂಗತ ಪಾತಾಕಿ ಡಾನ್ ಜಯರಾಜ್ ಜೀವನ ಆಧಾರಿತ ಕಥೆಗೆ ಜೀವ ತುಂಬುವ ಜತೆಗೆ ಹಣವನ್ನು ಹೂಡಿದರು ಧನಂಜಯ. ಜಯರಾಜ್ ಆಗಿ ಸ್ವತಃ ಧನಂಜಯ್ ಅವರೇ ಕಾಣಿಸಿಕೊಂಡರು. ಹೆಡ್ ಬುಷ್ ಚಿತ್ರಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ಮೂಲಕ ಡಾಲಿ ಪಿಚ್ಚರ್ ಸಕ್ಸಸ್ ಲಿಸ್ಟ್‌ಗೆ ಸೇರಿತು. ಬ್ಯಾಕ್ ಟು ಬ್ಯಾಕ್ ಹಿಟ್ ನೀಡಿದ ಖುಷಿಯಲ್ಲಿ ಧನಂಜಯ್ ‘ಟಗರು ಪಲ್ಯ’ ಸಿನಿಮಾ ಕೈಗೆತ್ತಿಕೊಂಡರು.

‘ಟಗರು ಪಲ್ಯ’ ಸಿನಿಮಾದಲ್ಲಿ ಧನಂಜಯ್ ಕಾಣಿಸಿಕೊಂಡಿಲ್ಲ. ಬದಲಿಗೆ ನಟ ನಾಗಭೂಷಣ್, ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸಿದ್ದಾರೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಟಗರು ಪಲ್ಯ ಕೂಡ ಸೂಪರ್ ಸಕ್ಸಸ್ ಆಗಿದೆ. ಅಕ್ಟೋಬರ್ 27ಕ್ಕೆ ರಿಲೀಸ್ ಆಗಿರುವ ಟಗರು ಪಲ್ಯ

ಇದನ್ನೂ ಓದಿ: Elephant Attack: ಕಾಡಾನೆ ತುಳಿತಕ್ಕೆ ಹಾಡಿ ನಿವಾಸಿ ಬಲಿ

ಇದನ್ನೂ ಓದಿ: Actor Nagabhushan: ರಕ್ಷಿತ್‌ ಶೆಟ್ಟಿ ಸಿನಿಮಾ ಬಿಡುಗಡೆ ದಿನವೇ ನಾಗಭೂಷಣ್‌ ಅಭಿನಯದ ʻಟಗರು ಪಲ್ಯʼ ರಿಲೀಸ್‌!

ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವಿನ ಖುಷಿಯಲ್ಲಿದ್ದಾರೆ ಡಾಲಿ. ಸಿನಿಮಾ ನೋಡಿದ ಪ್ರತಿಯೊಬ್ಬರು ಮೆಚ್ಚಿಕೊಂಡಿದ್ದಾರೆ. ಫ್ಯಾಮಿಲಿ ಸಮೇತರಾಗಿ ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಎಂಜಾಯ್ ಮಾಡ್ತಿದ್ದಾರೆ .ಬಿಡುಗಡೆ ಆದ ಎರಡೇ ದಿನಕ್ಕೆ ಪ್ರೇಕ್ಷಕರ ಬೇಡಿಕೆ ಮೇರೆಗೆ ಥಿಯೇಟರ್‌ಗಳ ಸಂಖ್ಯೆ ದುಪ್ಪಟ್ಟಾಗಿದೆ . ಈ ಮೂಲಕ ನಟ ರಾಕ್ಷಸ ಧನಂಜಯ ನಿರ್ಮಾಣದಲ್ಲೂ ಕಿಂಗ್ ಎನ್ನುವುದನ್ನು ಸಾಬೀತು ಪಡಿಸಿದ್ದಾರೆ. ಡಾಲಿ ಪಿಚ್ಚರ್ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ, ಇನ್ನಷ್ಟು ಉತ್ತಮ ಸಿನಿಮಾಗಳು ಬರಲಿ ಎನ್ನುವುದೇ ಅಭಿಮಾನಿಗಳ ಆಶಯವಾಗಿದೆ ಅದೇ ರೀತಿ ಡಾಲಿ ಕೂಡ ಉತ್ತಮ ಸದಭಿರುಚಿ ಸಿನಿಮಾಗಳನ್ನ ಪ್ರೇಕ್ಷಕರಿಗೆ ನೀಡುವ ಪಣ ತೊಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Family Drama Film Review: ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ. ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗಿಯೇ ಇದೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರ ಮನರಂಜಿಸುತ್ತದೆ. ವೇಗ ಹೆಚ್ಚಿಸಿ ಮೊದಲಾರ್ಧದ ಡ್ರಾಮಾಗೆ ಕೊಂಚ ಕತ್ತರಿ ಹಾಕಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗುತ್ತದೆ.

VISTARANEWS.COM


on

Family Drama Film Review
Koo

-ಶಿವರಾಜ್ ಡಿ ಎನ್, ಬೆಂಗಳೂರು
ಫ್ಯಾಮಿಲಿ ಸಮೇತ ಕೂತು ನೋಡಬಹುದಾದಂತ ಡಾರ್ಕ್ ಕಾಮಿಡಿ ಸಿನಿಮಾ ‘ಫ್ಯಾಮಿಲಿ ಡ್ರಾಮಾ’. ದಿ ಯಂಗ್ ಮೈಂಡ್ ಮೂವಿ.. ಸಿನಿಮಾ ಅಂದ್ರೆ ಅಲ್ಲೊಂದು ದೊಡ್ಡ ಸ್ಟಾರ್ ಕಾಸ್ಟ್, ಮಾಸ್ ಡೈಲಾಗ್, ರಗಡ್ ಫೈಟ್, ಮೆಲೋಡಿಯಸ್ ಸಾಂಗ್, ಮಿನಿಮಮ್ ಅಂದ್ರೂ ಒಂದ್ ಇಪ್ಪತ್ತೈದ್ ಮೂವತ್ ಕೋಟಿ ಖರ್ಚಾಗಿರ್ಬೇಕು.. ಸಿನಿಮಾ ಅಂದ್ರೇ ಹಾಗಿರ್ಬೇಕು ಹೀಗಿರ್ಬೇಕು ಎನ್ನುವ ಚೌಕಟ್ಟಿನೊಳಗಿನ ಪ್ರೇಕ್ಷಕರಿಗೆ ಈ ಸಿನಿಮಾ ಕಷ್ಟ ಆಗಬಹುದು.! ಇದೆಲ್ಲದರಾಚೆ ನಿಂತು ನೋಡುವ, ನಮ್ಮ ಕನ್ನಡ ಸಿನಿಮಾಗಳಲ್ಲೀ ಇನ್ನೂ ಏನೋ ಬೇಕು ಎಂದು ಹಾತೊರೆಯುವ ಪ್ರೇಕ್ಷಕರಿಗೆ ಇದೊಂದು ಉತ್ತಮ ಸಿನಿಮಾ (Family Drama Film Review) ಅನ್ನಿಸ ಬಹುದು.

ಅಬ್ಬಬ್ಬಬಬ್ಬಾ.. ಇಂತಹ ಗ್ಯಾಂಗ್ ವಾರ್ ಸಿನಿಮಾ.! ಕನ್ನಡ ಸಿನಿಮಾದಲ್ಲಿ ನಾ ಹಿಂದೆಂದೂ ಕಂಡಿಲ್ಲ, ಗುಂಡಿನ ಚಕಮಕಿಯಲ್ಲಿ ಕಾಣುವ ಗನ್ನುಗಳೇ ಪ್ರೇಕ್ಷಕರನ್ನ ದಂಗಾಗಿಸಬಹುದು.! ಸೀದಾ ವಿಷಯಕ್ಕೆ ಬರೋಣ ಎನ್ನುವುದಾದರೇ ಇದೊಂದು ಗ್ಯಾಂಗ್ ವಾರ್ ಕಥೆಯ ಸಿನಿಮಾ ಅಲ್ಲ. ಗ್ಯಾಂಗ್ ವಾರ್ ಒಂದು ಫ್ಯಾಮಿಲಿಯೊಳಗೆ ಹೇಗೆ ನುಸುಳುತ್ತದೆ, ಆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗೆ ಏನೆಲ್ಲ ಡ್ರಾಮಾ ನೆಡೆಯುತ್ತದೆ ಎನ್ನುವ ಚಿತ್ರಕಥೆಯ ಡಾರ್ಕ್ ಕಾಮಿಡಿ ಸಿನಿಮಾ.

ಯುವ ಪ್ರೇಮಿಗಳ ರೀತಿ ನೀತಿ, ತಂದೆ ತಾಯಿಯ ಕಾಣದ ಕಾಳಜಿ ಜೊತೆಗೆ ಮಿಡಲ್ ಕ್ಲಾಸ್ ಫ್ಯಾಮಿಲಿಯೊಳಗಿನ ಡ್ರಾಮಾ ಇಷ್ಟವಾಗುತ್ತದೆ. ಈ ಕಾಮಿಡಿಯೊಳಗೂ ಸೀರಿಯಸ್ ವಿಷಯ ಏನಿದೆ ಅಂತ ನೋಡೋದಾದ್ರೆ ಹೊಸಬರಾದರೂ ಕಥಾಹಂದರಕ್ಕೆ ಎಳೆತಂದಿರುವ ವಿಷಯ ಹಾಗೂ ಪ್ರಾಮುಖ್ಯತೆಯನ್ನೆ ಕೊಡದೆ ಅದೂ ಕಾಮನ್ ಗುರು ಎನ್ನುವಂತೆ ತೇಲಿಸಿ ಬಿಟ್ಟಿರುವ ಸೂಕ್ಷ್ಮತೆಯೂ ಶಭಾಸ್ ಎನ್ನಿಸಬಹುದು. ಅದು ಹೇಗೆ ಎಂದರೇ ಹೆಣ್ಣೊಂದು ಧಮ್ ಹೊಡೆಯೋದನ್ನ ಬಿಟ್ಟ ಕಣ್ಣು ಬಿಟ್ಟ ಹಾಗೆ ನೋಡುವ ಸಮಾಜದಲ್ಲಿ ಇಲ್ಲೊಂದು ಮಿಡಲ್ ಕ್ಲಾಸ್ ಹುಡುಗಿಯರೂ ಉಫ್ ಅಂತಾ ಹೊಗೆ ಬಿಡುವುದನ್ನ ಸಾಮನ್ಯವೆಂಬಂತೆ ಬಿಟ್ಟಿರುವುದು. ಇಂದಿನ ಹುಡುಗರ ಬಾಯಲ್ಲಿ ಸರ್ವೇ ಸಾಮಾನ್ಯವಾಗಿ ಬರುವ ದುಡ್ಡಿದ್ದರೇ ಮಾತ್ರ ಹುಡುಗಿಯ ನಮ್ಮ ಜೊತೆಗಿರ್ತಾರೆ ಎನ್ನುವ ಲಾಜಿಕ್ ಸ್ಕ್ರಾಚ್ ಮಾಡಿರೋದು ಕೂಡ ಒಳ್ಳೆಯ ವಿಷಯವೆ. ಚಿತ್ರ ಎಲ್ಲವರ್ಗದಲ್ಲೂ ಅಚ್ಚುಕಟ್ಟಾಗಿ ರೂಪುಗೊಂಡಿದೆ, ಪ್ರೇಕ್ಷಕರನ್ನ ಮನರಂಜಿಸುತ್ತದೆ, ವೇಗ ಹೆಚ್ಚಿಸಿ ಮೊದಲಾರ್ದದ ಡ್ರಾಮಾಗೆ ಕೊಂಚ ಕತ್ತರಿ ಹಾಕ ಬಹುದಿತ್ತು ಅನಿಸುತ್ತದೆ. ಸೆಮಿ ಸೆಮಿ ಹಾಡು ಸಿಕ್ಕಾಬಟ್ಟೆ ಇಷ್ಟ ಆಗತ್ತೆ.

ಕೆಲ ದೃಶ್ಯದ ಕಲರ್ ಗ್ರೇಡಿಂಗ್ ವಿಶೇಷವಾಗಿದೆ. ಸಿಂಧೂ ಶ್ರೀನಿವಾಸ ಮೂರ್ತಿ, ಪೂರ್ಣಚಂದ್ರ ಮೈಸೂರು, ಅಭಯ್, ಅನನ್ಯಾ ಅಮರ್, ರೇಖಾ ಕೂಡ್ಲಿಗಿ, ವಿರೀಶ್ ಕೆ ಮಂಜುನಾಥ್, ಮಹದೇವ್ ಹಡಪದ್‌,ಆಶಿತ್, ಸಿರಿ ರವಿಕುಮಾರ್ ಸೇರಿದಂತೆ ಎಲ್ಲ ಕಲಾವಿದರ ಅಭಿನವೂ ಅತ್ಯುತ್ತಮವಾಗಿದೆ. ಅಭಯ ಹಾಗು ಅಮ್ಮನ ಪಾತ್ರ ,ಡಾನ್ ಪ್ರಕಾಶ, ವಿಷ್ಣು ಸೇರಿದಂತೆ ಟೋಬಿ, ಸಿಗರೇಟ್ ಹುಡುಗಿಯರು, ಅನಾಲಿಸಿಸ್ ಮಾಡಿ ಐಡಿಯಾ ಕೊಡುವ ಚೋಟು ಸೇರಿಂದಂತೆ ಚೇತನ್ ಅಮಯ್ಯ್ ಅವರ ವಿಶಿಷ್ಟ ಸಂಗೀತವೂ ಗಮನ ಸೆಳೆಯುತ್ತದೆ. ದಬ್ಬುಗುಡಿ ಮುರಳಿಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು. ಆಕರ್ಶ್ ಹೆಚ್ ಪಿ ಆಕ್ಷನ್ ಕಟ್ ಹೇಳಿದ್ದಾರೆ. ಆಶಿಶ್ ಹುಳಕೊಂಡ್ ಸಂಕಲನ ಹಾಗೂ ಸಿದ್ದಾರ್ಥ್ ಸುನೀಲ್ ಛಾಯಾಗ್ರಹಣವಿದೆ.

ಇದನ್ನೂ ಓದಿ: Family Drama Trailer: ʻಡೇರ್ ಡೆವಿಲ್ ಮುಸ್ತಾಫ’ ತಂಡದಿಂದ ವಿಭಿನ್ನ ಸಿನಿಮಾ!

ಕನ್ನಡಕ್ಕೆ ಇದೊಂದು ವಿಶಿಷ್ಟ ರೀತಿಯಾ ಸಿನಿಮಾ, ಚಿತ್ರದಲ್ಲಿ ಕಾಮಿಡಿ ಇದೆ, ಸಸ್ಪೆನ್ಸ್ ಇದೆ, ಹೊಸತಂಡದ ಹೊಸತನ ಹೊಸದಾಗೆ ಇದೆ, ಅದೇನಿದಿಯಪ್ಪಅಂತ ಹೊಸತು ಅನ್ನೋದನ್ನ ತಪ್ಪದೇ ಚಿತ್ರಮಂದಿರಕ್ಕೆ ಬೇಟಿಕೊಟ್ಟು ನೋಡಿ ಚಿತ್ರ ನಿಮ್ಮನು ರಂಜಿಸೋದು ಖಂಡಿತ.

Continue Reading

ಸ್ಯಾಂಡಲ್ ವುಡ್

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ.

VISTARANEWS.COM


on

Kannada New Movie children's adventure story-based film bhavati
Koo

ಬೆಂಗಳೂರು: `ಬಂಗಾರಿ’, ಶಿವನಪಾದ’ ಸೇರಿದಂತೆ ಹಲವಾರು (Kannada New Movie) ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.

ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದು ನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.

Continue Reading

ಸಿನಿಮಾ

Sai Pallavi: ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಸಾಯಿ ಪಲ್ಲವಿ ಡೇಟಿಂಗ್‌?

Sai Pallavi: ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್‌ಗಳು ಈ ವದಂತಿಗಳನ್ನು ತಳ್ಳಿಹಾಕುತ್ತಿದ್ದಾರೆ.

VISTARANEWS.COM


on

Sai Pallavi Dating a Married Actor Who Has Two Kids
Koo

ಬೆಂಗಳೂರು: ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಪ್ರಸಿದ್ಧ ನಟಿಯರಲ್ಲಿ ಒಬ್ಬರು. 2015 ರ ಮಲಯಾಳಂ ಚಲನಚಿತ್ರ ‘ಪ್ರೇಮಂ’ನಲ್ಲಿನ ಅಭಿನಯದೊಂದಿಗೆ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದರು. ಕಲಿ, ಮಾರಿ 2, ಗಾರ್ಗಿ ಮತ್ತು ಇತರ ಅನೇಕ ಚಲನಚಿತ್ರಗಳ ಮೂಲಕ ಹೆಸರು ಗಳಿಸಿದ್ದಾರೆ. ಸಿನಿಮಾ ಜತೆಗೆ ನಟಿ ಆಗಾಗ ವೈಯಕ್ತಿಕ ವಿಚಾರಗಳಿಗಾಗಿ ಸುದ್ದಿಯಲ್ಲಿ ಇರುತ್ತಾರೆ. ಸದ್ಯ ನಟಿ ಮದುವೆಯಾಗಿ ಮಕ್ಕಳಿರುವ ಸಹ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಾಕಷ್ಟು ವೈರಲ್‌ ಆಗಿದೆ.

ಇತ್ತೀಚೆಗೆ, ಸಾಯಿ ಪಲ್ಲವಿ ಮದುವೆಯಾಗಿರುವ ಪ್ರಸಿದ್ಧ ನಟನೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹುಟ್ಟಿಕೊಂಡಿವೆ. ಈ ಸುದ್ದಿ ವಿಶೇಷವಾಗಿ ಅವರ ಅಭಿಮಾನಿಗಳನ್ನು ಆಶ್ಚರ್ಯಗೊಳಿಸಿದೆ. ನಟಿಯ ಫಾಲೋವರ್ಸ್‌ಗಳು ಈ ವದಂತಿಗಳನ್ನು ತಳ್ಳಿಹಾಕುತ್ತಿದ್ದಾರೆ. ಸದ್ಯ ಈ ಸುದ್ದಿ ನ್ಯಾಷನಲ್ ಲೆವೆಲ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ ಈ ನಟ ಯಾರು ಎನ್ನೋದನ್ನು ಮಾತ್ರ ವರದಿಗಳಲ್ಲಿ ತಿಳಿಸಲಾಗಿಲ್ಲ. ಸದ್ಯಕ್ಕೆ ಈ ವದಂತಿಗಳಿಗೆ ಸಾಯಿ ಪಲ್ಲವಿ ಉತ್ತರ ನೀಡಿಲ್ಲ.

ಸದ್ಯ ಸಾಯಿ ಪಲ್ಲವಿ ಕೈಯಲ್ಲಿ ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನದ ತಮಿಳು ಚಿತ್ರ ಶಿವಕಾರ್ತಿಕೇಯನ್ ಜೊತೆ ನಟಿಸುತ್ತಿರುವ ಅಮರನ್, ನಾಗಚೈತನ್ಯ ಸಿನಿಮಾ ‘ತಾಂಡೇಲ್’ ಹಾಗೂ ಬಾಲಿವುಡ್‌ನ ‘ರಾಮಾಯಣ’ ಕೈಯಲ್ಲಿದೆ. ಟ್ರೆಡಿಷನಲ್ ಲುಕ್‌ನಲ್ಲಿ ನಟಿಸಿ ಜನರ ಮನಗೆದ್ದಿರುವ ಸಾಯಿ ಪಲ್ಲವಿ ದಕ್ಷಿಣ ಭಾರತದ ಸ್ಟಾರ್ ನಟಿಯರಲ್ಲಿ ಒಬ್ಬರು. ‘ಪ್ರೇಮಂ’, ಮಿಡಲ್ ಕ್ಲಾಸ್ ಅಬ್ಬಾಯ್, ಲವ್ ಸ್ಟೋರಿ, ಎನ್‌ಜಿಕೆ, ಗಾರ್ಗಿ, ಫಿದಾ, ಮಾರಿ 2 ಅಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಒಂದಿಷ್ಟು ದಿನ ಸಿನಿಮಾದಿಂದ ದೂರ ಉಳಿದಿದ್ದರೂ, ಅವರ ಕೈಯಲ್ಲೀಗ ಮೆಗಾ ಪ್ರಾಜೆಕ್ಟ್‌ಗಳು ಇವೆ.

ಇದನ್ನೂ ಓದಿ” Sai Pallavi Mass Dance: ಆಮೀರ್​ ಖಾನ್​ ಪುತ್ರನ ಜತೆ ಪಬ್‌ನಲ್ಲಿ ಕುಣಿದು ಕುಪ್ಪಳಿಸಿದ ಸಾಯಿ ಪಲ್ಲವಿ!

ಶಿವ ಆರೂರ್ ಮತ್ತು ರಾಹುಲ್ ಸಿಂಗ್ ಅವರ ‘ಇಂಡಿಯಾಸ್ ಮೋಸ್ಟ್ ಫಿಯರ್‌ಲೆಸ್: ಟ್ರೂ ಸ್ಟೋರೀಸ್ ಆಫ್ ಮಾಡರ್ನ್ ಮಿಲಿಟರಿ’ ಪುಸ್ತಕವನ್ನು ಆಧರಿಸಿದ ಈ ಚಿತ್ರದಲ್ಲಿ ಶಿವಕಾರ್ತಿಕೇಯನ್, ಭುವನ್ ಅರೋರಾ, ಲಲ್ಲು, ಶ್ರೀಕುಮಾರ್ ಮತ್ತು ಶ್ಯಾಮ್ ಮೋಹನ್ ಸಹ ನಟಿಸಿದ್ದಾರೆ. ಇದು ಅಕ್ಟೋಬರ್ 31, 2024 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ರಾಮಾಯಣದೊಂದಿಗೆ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ ನಟಿ. ಈ ಚಿತ್ರದಲ್ಲಿ ಅವರು ಸೀತಾ ದೇವಿಯ ಪಾತ್ರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಜೋಡಿ ಈಗಾಗಲೇ ಮುಂಬೈನಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಿದೆ ಮತ್ತು ಚಿತ್ರವು 2025 ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

Continue Reading

ಕರ್ನಾಟಕ

Actor Darshan: ಜೈಲಲ್ಲಿ ದರ್ಶನ್ ಭೇಟಿಯಾದ ಟಾಲಿವುಡ್ ಖ್ಯಾತ ನಟ ನಾಗಶೌರ್ಯ

Actor Darshan: ಸ್ಯಾಂಡಲ್‌ವುಡ್ ಸ್ಟಾರ್ಸ್ ಜತೆಗೆ ಟಾಲಿವುಡ್ ಸ್ಟಾರ್ಸ್ ಇಂದಲೂ ದರ್ಶನ್‌ ಭೇಟಿಗೆ ಯತ್ನ ನಡೆಯುತ್ತಿದೆ. ಇದೀಗ ತೆಲುಗಿನ ಖ್ಯಾತ ನಟ ನಾಗಶೌರ್ಯ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದಾಗ ದರ್ಶನ್‌ ಬೆಂಬಲಕ್ಕೆ ಈ ನಟ ನಿಂತಿದ್ದರು.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಆಪ್ತರು ಸೇರಿ ಹಲವು ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ಆದರೆ, ಕೆಲವರಿಗೆ ಮಾತ್ರ ಭೇಟಿಯಾಗಲು ಅವಕಾಶ ಸಿಕ್ಕಿದೆ. ಈ ನಡುವೆ ತೆಲುಗಿನ ಖ್ಯಾತ ನಟ ನಾಗಶೌರ್ಯ (Naga Shaurya), ಸದ್ದಿಲ್ಲದೆ ನಟ ದರ್ಶನ್‌ರನ್ನು (Actor Darshan) ಭೇಟಿಯಾಗಿದ್ದಾರೆ.

ಸ್ಯಾಂಡಲ್‌ವುಡ್ ಸ್ಟಾರ್ಸ್ ಜತೆಗೆ ಟಾಲಿವುಡ್ ಸ್ಟಾರ್ಸ್ ಇಂದಲೂ ದರ್ಶನ್‌ ಭೇಟಿಗೆ ಯತ್ನ ನಡೆಯುತ್ತಿದೆ. ರೇಣುಕಾಸ್ವಾಮಿ ಕೊಲೆಯಾದಾಗ ದರ್ಶನ್‌ ಬೆಂಬಲಕ್ಕೆ ನಿಂತಿದ್ದ ತೆಲುಗಿನ ಖ್ಯಾತ ನಟ ನಾಗಶೌರ್ಯ, ದರ್ಶನ್ ಕುಟುಂಬದ ಜತೆ ಹೋಗಿ ಜೈಲಲ್ಲಿ ದಾಸನ ದರ್ಶನ ಪಡೆದಿದ್ದಾರೆ.

ತನ್ನನ್ನು ನೋಡಲು ಬಂದ ನಾಗಶೌರ್ಯರ ಯೋಗಕ್ಷೇಮವನ್ನು ದರ್ಶನ್ ವಿಚಾರಿಸಿದ್ದಾರೆ. ಹೇಗಿದ್ಯಾ ಹೀರೊ, ಹೇಗೆ ನಡೆಯುತ್ತಿದೆ ಪ್ರಾಜೆಕ್ಟ್, ಯಾವ ಫಿಲಂ ಶೂಟಿಂಗ್ ನಡೆಯುತ್ತಿದೆ. ರಿಲೀಸ್ ಯಾವಾಗ ಅಂತೆಲ್ಲಾ ದರ್ಶನ್ ಮಾತುಕತೆ ನಡೆಸಿದ್ದು, ಆತ್ಮೀಯವಾಗಿ ಮಾತನಾಡಿ ನಾಗಶೌರ್ಯರನ್ನು ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ | Shekhar Home:  ಪತ್ತೇದಾರಿ ಕಾದಂಬರಿ ಆಧಾರಿತ ಸಿರೀಸ್‌ನಲ್ಲಿ ಅಬ್ಬರಿಸಲಿದ್ದಾರೆ ಕೇ ಕೇ ಮೆನನ್; ಫಸ್ಟ್‌ ಲುಕ್‌ ಔಟ್!‌

ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ: ನಾಗ ಶೌರ್ಯ

ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಇತ್ತೀಚೆಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರುಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದರು.

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದರು.

ಇದನ್ನೂ ಓದಿ | Most Beautiful woman: ವಿಶ್ವದ ಅತ್ಯಂತ ಸುಂದರ ಮಹಿಳೆಯರ ಪಟ್ಟಿ ಬಿಡುಗಡೆ; ಟಾಪ್ 10ನಲ್ಲಿ ಏಕೈಕ ಬಾಲಿವುಡ್ ನಟಿ!

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದರು. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದರು. ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕಿದ್ದರು.

Continue Reading
Advertisement
puneeth kerehalli dog meat
ಕ್ರೈಂ5 mins ago

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Family Drama Film Review
ಸಿನಿಮಾ18 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ42 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ56 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌