Dolly dhananjay | ಡಾಲಿಯಿಂದ ಮಹತ್ವದ ಘೋಷಣೆ; ಇದು ಡಾಲಿ ಫೆಸ್ಟಿವಲ್ ಕಣೋ ಎಂದ ಫ್ಯಾನ್ಸ್‌! - Vistara News

ಸಿನಿಮಾ

Dolly dhananjay | ಡಾಲಿಯಿಂದ ಮಹತ್ವದ ಘೋಷಣೆ; ಇದು ಡಾಲಿ ಫೆಸ್ಟಿವಲ್ ಕಣೋ ಎಂದ ಫ್ಯಾನ್ಸ್‌!

ಡಾಲಿ ಧನಂಜಯ್‌ (Dolly dhananjay ) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜನುಮದಿನಕ್ಕೆ ಸಿನಿಮಾಗಳನ್ನು ಅನೌನ್ಸ್‌ ಮಾಡಿದ್ದಾರೆ. ಅಲ್ಲದೆ, ವರ್ಷದಲ್ಲಿ ತಮ್ಮದೇ ಪ್ರೊಡಕ್ಷನ್‌ ಅಡಿಯಲ್ಲಿ ವರ್ಷಕ್ಕೆ 2 ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿಕೊಂಡಿದ್ದಾರೆ.

VISTARANEWS.COM


on

Dolly dhananjay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್‌ (Dolly dhananjay) ತಮ್ಮ ಹುಟ್ಟುಹಬ್ಬದ ನಿಮಿತ್ತ ಸಾಲು ಸಾಲು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ತೆರೆಕಾಣಲಿರುವ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಂದಕ್ಕಿಂತ ಒಂದು ವಿಭಿನ್ನ ಸಿನಿಮಾಗಳನ್ನು ಮಾಡುತ್ತ ಬಂದಿರುವ ಡಾಲಿ ಧನಂಜಯ್‌ ಅವರು ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಸರಾಸರಿ ಎರಡು ತಿಂಗಳಿಗೆ ಒಂದರಂತೆ ಅವರ ಅಭಿನಯದ ಸಿನಿಮಾಗಳು ರಿಲೀಸ್‌ ಆಗಲಿವೆ.

ಕನ್ನಡ ಮಾತ್ರವಲ್ಲದೆ ತೆಲುಗು , ತಮಿಳು ಸಿನಿಮಾದಲ್ಲಿ ಕೂಡ ಡಾಲಿ ಅವರ ಓಡಾಟ ಸಖತ್‌ ಆಗಿದೆ. ಡಾಲಿ ಅವರ ಸಿನಿಮಾಗಳ ಮಧ್ಯೆ ಅವರ ಜನುಮದಿನ ‘ಕೆಜಿಎಫ್’ ನಿರ್ಮಾಪಕ, ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು ಅರ್ಪಿಸಿರುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ನಿರ್ಮಿಸುತ್ತಿರುವ ‘ಉತ್ತರಕಾಂಡ’ ಚಿತ್ರದಲ್ಲಿ ಧನಂಜಯ್ ನಾಯಕರಾಗಿ ಅಭಿನಯಿಸುತ್ತಿದ್ದಾರೆ. 

ಇದನ್ನೂ ಓದಿ | Once Upon a Time In Jamaligudda | ಜಮಾಲಿಗುಡ್ಡ ಮೆಲೋಡಿ ಹಾಡಿನ ಪ್ರೋಮೊ ಮಾಡ್ತಿದೆ ಮೋಡಿ!

ಉತ್ತರಕಾಂಡ ಸಿನಿಮಾ

‘ರತ್ನನ್ ಪ್ರಪಂಚ’ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ‘ಉತ್ತರಕಾಂಡ’ ಚಿತ್ರ ಮೂಡಿಬರುತ್ತಿದೆ. ಇದೇ ಬ್ಯಾನರ್‌ನಲ್ಲಿ ಹೊಯ್ಸಳ ಸಿನಿಮಾ ಕೂಡ ಮೂಡಿ ಬರುತ್ತಿದೆ. ಉತ್ತರಕಾಂಡ ಚಿತ್ರವು ಉತ್ತರ ಕರ್ನಾಟಕದ ಗ್ಯಾಂಗ್‌ ಸ್ಟರ್‌ ಕತೆಯನ್ನು ಆಧರಿಸಿದೆ. ಉತ್ತರ ಕರ್ನಾಟಕದಲ್ಲಿಯೇ ಹೆಚ್ಚಿನ ಭಾಗ ಚಿತ್ರೀಕರಣ ಆಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಸಿನಿಮಾಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ಸ್ವಾಮಿ ಅವರ ಛಾಯಾಗ್ರಹಣವಿದೆ.

ಡಾಲಿ ಫೆಸ್ಟಿವಲ್‌ !

ಸೆಪ್ಟೆಂಬರ್‌ನಲ್ಲಿ ʼಮಾನ್ಸೂನ್‌ ರಾಗʼ (Monsoon Raaga), ಸೆಪ್ಟೆಂಬರ್‌ನಲ್ಲಿ ʼಒನ್ಸ್‌ ಅಪಾನ್‌ ಅ ಟೈಮ್‌ ಇನ್‌ ಜಮಾಲಿಗುಡ್ಡʼ (‘Once Upon A Time in Jamaligudda’), ಅಕ್ಟೋಬರ್‌ನಲ್ಲಿ ʼಹೆಡ್‌ ಬುಷ್‌ʼ (Head Bush), ನವೆಂಬರ್‌ನಲ್ಲಿ ʼಹೊಯ್ಸಳʼ (Hoysala ), ಅಲ್ಲದೆ ಈ ನಡುವೆ ಜಗ್ಗೇಶ್‌ ಜತೆಗಿನ ʼತೋತಾಪುರಿʼ (Totapuri) ಸಿನಿಮಾ ಕೂಡ ರಿಲೀಸ್‌ ಆಗಲಿದೆ.

ಡಾಲಿ ಪಿಕ್ಚರ್ಸ್‌ ನಿರ್ಮಾಣ ಸಂಸ್ಥೆ

ಇದರ ಬೆನ್ನಲ್ಲೆ ಜನುಮದಿನದ ದಿನದಂದು ತಮ್ಮ ಹೊಸ ಹೆಜ್ಜೆಯ ಕುರಿತು ಹಂಚಿಕೊಂಡಿದ್ದಾರೆ. ʻಬಡವ ರಾಸ್ಕಲ್‌ ಸಿನಿಮಾʼ ಮೂಲಕ ಪ್ರೊಡ್ಯೂಸರ್‌ ಆದ ಡಾಲಿ ಅವರು ಈ ಮೂಲಕ ನಿರ್ಮಾಣ ಸಂಸ್ಥೆಯೊಂದನ್ನು ಆರಂಭಿಸಿದ್ದಾರೆ. ಧನಂಜಯ್‌ ಅವರು ಈ ಮೂಲಕ ಒಳ್ಳೆಯ ಲಾಭ ಕಂಡಿದ್ದಾರೆ.

ಇದೀಗ ಡಾಲಿ ಧನಂಜಯ್‌ ಅವರು ʻʻಡಾಲಿ ಪಿಕ್ಚರ್ಸ್‌ʼʼ ಎಂಬ ಕನಸೊಂದನ್ನು ಹುಟ್ಟುಹಾಕಿದ ಸಂಸ್ಥೆ ಕುರಿತು ಘೋಷಣೆ ಮಾಡಿದ್ದಾರೆ. ʻʻಅವರು ಯಾವುದೆ ಸಿನಿಮಾ ಹಿನ್ನೆಲೆ ಇಲ್ಲದೆ, ಒಂದು ಹಿಡಿಯಷ್ಟು ಆಸೆ ಮತ್ತು ಬೆಟ್ಟದಷ್ಟು ಪ್ರತಿಭೆ ಕಟ್ಟಿಕೊಂಡು ಗಾಂಧಿನಗರಕ್ಕೆ ಕಾಲಿಟ್ಟರು.

ಒಂದೇ ಒಂದು ಪಾತ್ರ ದಕ್ಕಿಸಿಕೊಳ್ಳಲು ಬಹಳಷ್ಟು ಕಸರತ್ತು ಪಡಬೇಕಾದ ಕಾಲವಿತ್ತು. ಅನೇಕ ಅಡಚಣೆಗಳನ್ನು ದಾಟಿ ಸಾಗಿದ ಅವರ ಪಯಣ ಕರುನಾಡಿಗೆ ತಿಳಿಯದ ಕಥೆಯೇನಲ್ಲ. ‘ಡಾಲಿ’ ಪಾತ್ರಕ್ಕೆ ಸಿಕ್ಕಿದ ಜನಮನ್ನಣೆ ಹಾಗೂ ‘ನಟರಾಕ್ಷಸ’ ಎಂಬ ಬಿರುದಿನ ಮೂಲಕ ತಮ್ಮ ಅಷ್ಟೂ ಪ್ರಯತ್ನಕ್ಕೆ ಸಾರ್ಥಕತೆ ದೊರೆತಿದೆʼʼ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಮುಂದೆ ಪ್ರತಿ ವರ್ಷ ಡಾಲಿ ಪಿಕ್ಚರ್ಸ್​ ವತಿಯಿಂದ ಕನಿಷ್ಠ ಎರಡು ಸಿನಿಮಾಗಳನ್ನಾದರೂ ನಿರ್ಮಾಣ ಮಾಡುವುದಾಗಿ ಹಾಗೂ ಇದರಲ್ಲಿ ಮುಖ್ಯವಾಗಿ ಒಂದು ಸಿನಿಮಾವನ್ನು ಹೊಸ ಪ್ರತಿಭೆಗಳಿಗೆ ಮೀಸಲಿಡುವುದಾಗಿ ಡಾಲಿ ಘೋಷಿಸಿದ್ದಾರೆ. ನಮ್ಮನ್ನು ಇಷ್ಟು ವರ್ಷ ಕೈ ಹಿಡಿದು ನಡೆಸಿದ್ದೀರಿ, ಹಾಗೇ ಇನ್ನು ಮುಂದೆ ಕೂಡ ನಮ್ಮ ಈ ಹೊಸ ಪ್ರಯತ್ನಕ್ಕೆ ನಿಮ್ಮ ಪ್ರೀತಿ, ವಿಶ್ವಾಸ ಹಾರೈಕೆ ಇರಲಿ ಎಂದು ಬಯಸುತ್ತೇವೆ’ ಎಂದು ಪತ್ರದ ಮೂಲಕ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ | Monsoon Raaga | ಡಾಲಿ-ರಚಿತಾ ಅಭಿನಯದ ಮಾನ್ಸೂನ್ ರಾಗ ಸಿನಿಮಾ ಟ್ರೈಲರ್‌ಗೆ ಭಾರಿ ಮೆಚ್ಚುಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Sonakshi Sinha: ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಜೊತೆ ಹೊಸ ಬದುಕಿಗೆ ಕಾಲಿಟ್ಟ ಸೋನಾಕ್ಷಿ ಸಿನ್ಹಾ ಈಗ ಪ್ರೆಗ್ನೆಂಟ್ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊ ತೆಗೆಯಲು ಪ್ರಯತ್ನಿಸಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sonakshi Sinha
Koo

ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇತ್ತೀಚೆಗಷ್ಟೇ ತಮ್ಮ ಪ್ರೇಮಿ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಹೊಸತರಲ್ಲೇ ನಟಿ ತಮ್ಮ ಪತಿಯ ಜೊತೆ ಆಸ್ಪತ್ರೆಯೊಂದರ ಹೊರಗೆ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ, ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾಗಿ ಆಕೆ ಗರ್ಭಿಣಿಯೇ ಎಂಬ ಸಂಶಯ ನೆಟ್ಟಿಗರಲ್ಲಿ ವ್ಯಕ್ತವಾಗಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ನಟಿ ಸೋನಾಕ್ಷಿ ಅವರು ತಮ್ಮ ಪತಿ ಜಹೀರ್ ಅವರ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊಗಳಲ್ಲಿ ಸೆರೆ ಹಿಡಿದಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

Sonakshi Sinha

ಯಾಕೆಂದರೆ ಈ ಹಿಂದೆ ಮದುವೆಯಾದ ಬಾಲಿವುಡ್ ನಟಿಯರಾದ ಆಲಿಯಾ ಭಟ್, ಸ್ವರಾ ಭಾಸ್ಕರ್ ಅವರು ತಮ್ಮ ಮದುವೆಯಾದ ಕೆಲವೇ ದಿನಗಳಲ್ಲಿ ತಾವು ಗರ್ಭಿಣಿ ಎಂದು ಘೋಷಣೆ ಮಾಡಿದ್ದು, ಈ ಬಗ್ಗೆ ಅನೇಕರು ಗಾಸಿಪ್ ಮಾಡಿದ್ದರು. ಹಾಗಾಗಿ ಸೋನಾಕ್ಷಿ ಅವರು ಕೂಡ ಇವರಂತೆ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ನೆಟ್ಟಿಜನ್ ಮನಸ್ಸಿನಲ್ಲಿ ಮೂಡಿದೆ ಎನ್ನಲಾಗಿದೆ. ಹಾಗಾಗಿ ನೆಟ್ಟಿಜನ್ ಸೋನಾಕ್ಷಿಯವರನ್ನು ಗರ್ಭಿಣಿ ಅವತಾರದಲ್ಲಿ ನೋಡಲು ಬಯಸುವುದಾಗಿ ತಿಳಿಸಿದ್ದಾರೆ.

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರು ಜೂನ್ 23ರಂದು ವಿವಾಹವಾದರು. ಅವರ ಮದುವೆಯ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅವರ ಜೋಡಿ ನೋಡಿ ಸ್ವರ್ಗದಲ್ಲಿ ಮಾಡಿದ ಪರಿಪೂರ್ಣ ಜೋಡಿ ಎಂದು ಹೊಗಳಿದ್ದಾರೆ.

Sonakshi Sinha

ಆದರೆ ಇವರಿಬ್ಬರು ಅಂತರ್ಧಮೀಯ ವಿವಾಹವಾಗಿದ್ದರಿಂದ ಈ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಸೋನಾಕ್ಷಿ ಅವರ ತಂದೆ ಶತ್ರುಘ್ನ ಸಿನ್ಹಾ ಕೂಡ ಅಸಮಾಧಾನಗೊಂಡಿದ್ದರು. ಅವರ ಮದುವೆಯಿಂದ ಅವರ ಕುಟುಂಬದವರು ಸಂತೋಷವಾಗಿಲ್ಲ ಎನ್ನಲಾಗಿತ್ತು. ಆದರೆ ಆ ಬಳಿಕ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಈ ದಂಪತಿ ಮದುವೆಗೂ ಮುನ್ನ 7 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಹಾಗಾಗಿ ಇವರು ಲಿವಿಂಗ್ ಟು ಗೇದರ್ ರಿಲೆಷನ್ಶಿಪ್‌ನಲ್ಲಿದ್ದರು ಎಂದು ಅನೇಕರು ಊಹಿಸಿದ್ದರು.

ಆದರೆ ನಟಿ ಈ ವದಂತಿಯನ್ನು ಅಲ್ಲಗೆಳೆದಿದ್ದು, ತಾನು ಹೆತ್ತವರೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸುವ ಮೂಲಕ ಈ ವದಂತಿಗೆ ತೆರೆ ಎಳೆದಿದ್ದರು.

Continue Reading

ಸ್ಯಾಂಡಲ್ ವುಡ್

Dhanya Ramkumar: ʻದಿಯಾʼ ಹೀರೊಗೆ ಜೋಡಿಯಾದ ದೊಡ್ಮನೆ ಬ್ಯೂಟಿ!

Dhanya Ramkumar: ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

VISTARANEWS.COM


on

Dhanya Ramkumar heroine in choukidaar cinema
Koo

ಬೆಂಗಳೂರು: ʻರಥಾವರʼ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್. ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್‌ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ ಧನ್ಯರಾಮ್ ಕುಮಾರ್‌ಗೆ (Dhanya Ramkumar) ಪೃಥ್ವಿ ಅಂಬಾರ್‌ ಜೋಡಿಯಾಗಿ ನಟಿಸುತ್ತಿದ್ದಾರೆ.

ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ʻಚೌಕಿದಾರ್ʼ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೊಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ʻನಿನ್ನ ಸನಿಹಕೆʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿತರಾಗಿದ್ದ ಧನ್ಯ ಇತ್ತೀಚೆಗಷ್ಟೇ ʻಜಡ್ಜಮೆಂಟ್ʼ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ಕಾಲಪತ್ತರ್ ರಿಲೀಸ್ ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ.

ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

ಇದನ್ನೂ ಓದಿ: Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿತ್ತು. ಚೌಕಿದಾರ್ ಸಿನಿಮಾಗೆ ಬಹುಭಾಷಾ ನಟ ಸಾಯಿಕುಮಾರ್ ಎಂಟ್ರಿ ಕೊಟ್ಟಿದದರು. ಆದ್ರೆ ಡೈಲಾಗ್ ಕಿಂಗ್ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಕೊಟ್ಟಿಲ್ಲ.

ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ ಮೂರನೇ ತಾರೀಖಿನಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

Continue Reading

ಸಿನಿಮಾ

Kalki 2898 AD 2: ಶೀಘ್ರದಲ್ಲೇ ಬರಲಿದೆ ಕಲ್ಕಿ 2898ಎಡಿ ಭಾಗ- 2!

2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಈ ಬಗ್ಗೆ ಚಿತ್ರ ತಂಡ ಈಗ ಸುಳಿವನ್ನೂ ಕೊಟ್ಟಿದೆ. ಹಾಗಾದರೆ ಕಲ್ಕಿ 2898ಎಡಿ ಭಾಗ- 2 (Kalki 2898 AD 2) ಯಾವಾಗ ಬರಲಿದೆ ಎನ್ನುವ ಕುರಿತು ಚಿತ್ರ ತಂಡ ಹೇಳಿರುವುದೇನು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Kalki 2898 AD 2
Koo

ವಿಶ್ವದಾದ್ಯಂತ (world) ಅದ್ಧೂರಿಯಾಗಿ ಬಿಡುಗಡೆಯಾದ 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ (Kalki 2898 AD 2) ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ.

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ. ಮಾತ್ರವಲ್ಲದೆ ಇದೀಗ ಚಿತ್ರ ತಂಡ ಪ್ರೇಕ್ಷಕರಿಗೆ ಇನ್ನೊಂದು ಸಿಹಿ ಸುದ್ದಿಯನ್ನೂ ನೀಡಿದೆ.

ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಮಹಾಕಾವ್ಯವನ್ನು ಆಧರಿಸಿದ ಚಿತ್ರವೂ ಸಂಪೂರ್ಣವಾಗಿ ತೆರೆದುಕೊಳ್ಳಲು ಒಂದಕ್ಕಿಂತ ಹೆಚ್ಚು ಕಂತುಗಳ ಅಗತ್ಯವಿದೆ ಎಂದು ನಿರ್ದೇಶಕ ನಾಗ್ ಅಶ್ವಿನ್ ಕೂಡ ದೃಢಪಡಿಸಿದ್ದಾರೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

ಭವ್ಯವಾದ ವೈಜ್ಞಾನಿಕ ಮಹಾಕಾವ್ಯ ‘ಕಲ್ಕಿ 2898ಎಡಿ’ ಚಿತ್ರಮಂದಿರಗಳಿಗೆ ಆಗಮಿಸಿದ್ದು, ಹಿಂದೂ ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲು ದೈವಿಕ ಜೀವಿಗಳ ಮೂಲವನ್ನು ವಿವರಿಸುವ ಈ ಚಿತ್ರವೂ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕಥಾಹಂದರ, ಉಸಿರುಕಟ್ಟುವ ದೃಶ್ಯವಳಿಗಳು ಮತ್ತು ವಿಶಿಷ್ಟ ಪರಿಕಲ್ಪನೆ ಮಂತ್ರಮುಗ್ಧರನ್ನಾಗಿಸುತ್ತದೆ. ಇದು ಭಾರತೀಯ ಚಿತ್ರರಂಗದಲ್ಲಿ ಒಂದು ಅದ್ಭುತ ಸಾಧನೆಯನ್ನು ಸೂಚಿಸುತ್ತದೆ.

ಈ ಚಿತ್ರವು ಭಾರತದ ‘ಅವೆಂಜರ್ಸ್ ಕ್ಷಣ’. ವೈಜ್ಞಾನಿಕ, ಕಾಲ್ಪನಿಕ ಮತ್ತು ಪುರಾಣದ ಅಂಶಗಳನ್ನು ಅದ್ಭುತವಾಗಿ ಸಂಯೋಜಿಸುತ್ತದೆ. ಚಿತ್ರದ ಸುತ್ತ ಹೆಚ್ಚಿನ ನಿರೀಕ್ಷೆಗಳಿವೆ ಎಂದು ರಾಣಾ ದಗ್ಗುಬಾಟಿ ಅಭಿಪ್ರಾಯ ಪಟ್ಟಿದ್ದಾರೆ.


Sacnilk.com ನ ಅಂದಾಜು ಪ್ರಕಾರ ಚಿತ್ರವು ಆರಂಭದ ದಿನದಂದು 180 ಕೋಟಿ ರೂ. ಗೂ ಅಧಿಕ ಆದಾಯ ಗಳಿಸಿ ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಆಗುವ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿದೆ.

ಇಂಡಸ್ಟ್ರಿ ಟ್ರ್ಯಾಕರ್ ಪ್ರಕಾರ, ನಾಗ್ ಅಶ್ವಿನ್ ನಿರ್ದೇಶಿಸಿದ ಕಲ್ಕಿ 2898ಎಡಿ ಎಲ್ಲಾ ಭಾಷೆಗಳಲ್ಲಿ ಮೊದಲ ದಿನದಲ್ಲಿ ಭಾರತದಲ್ಲಿ ಸುಮಾರು 95 ಕೋಟಿ ರೂಪಾಯಿ ಗಳಿಸಿದೆ. ಆದರೆ ಅದರ ಒಟ್ಟು ಸಂಗ್ರಹವು ಸುಮಾರು 115 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಒಟ್ಟಾರೆಯಾಗಿ ಚಿತ್ರವು ಮೊದಲ ದಿನ ವಿಶ್ವದಾದ್ಯಂತ 180 ಕೋಟಿ ರೂ ಗಳಿಸಿದೆ. ಈ ಭಾರಿ ಸಂಗ್ರಹದೊಂದಿಗೆ ಕಲ್ಕಿ 2898 ಎಡಿ ಕೆಜಿಎಫ್ 2 ನ 159 ಕೋಟಿ ರೂ., ಸಲಾರ್ ನ 158 ಕೋಟಿ ರೂ., ಲಿಯೋ ನ 142.75 ಕೋಟಿ ರೂ. ಜಾಗತಿಕ ಆರಂಭಿಕ ದಾಖಲೆಗಳನ್ನು ಹಿಂದಿಕ್ಕಿದೆ.

ಸಾಹೂ 130 ಕೋಟಿ ರೂ., ಜವಾನ್ 129 ಕೋಟಿ ರೂ., ಆರ್ ಆರ್ ಆರ್ ಇನ್ನೂ 223 ಕೋಟಿ ರೂ. ಕಲೆಕ್ಷನ್‌ಗಳೊಂದಿಗೆ ಅತೀ ಹೆಚ್ಚು ಭಾರತೀಯ ಓಪನರ್ ಆಗಿ ಉಳಿದಿದೆ. ಬಾಹುಬಲಿ 2 ತನ್ನ ಆರಂಭಿಕ ದಿನದಲ್ಲಿ 217 ಕೋಟಿ ರೂ. ಗಳಿಸಿತು.

Continue Reading

ಬಾಲಿವುಡ್

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

Bigg Boss OTT 3: ಖ್ಯಾತ ಯುಟ್ಯೂಬರ್‌ ಅರ್ಮಾನ್‌ ಮಲಿಕ್‌ ಅವರು ಯುಟ್ಯೂಬ್‌ ಸೇರಿ ಯಾವುದೇ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದರೂ ಅದು ಲಕ್ಷಾಂತರ ಜನರನ್ನು ತಲುಪುತ್ತದೆ, ಸುದ್ದಿಯಾಗುತ್ತದೆ. ಆದರೆ, ಈಗ ಅರ್ಮಾನ್‌ ಮಲಿಕ್‌ ಬಿಗ್‌ ಬಾಸ್‌ ಮನೆಯಿಲ್ಲಿದ್ದಾರೆ. ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ.

VISTARANEWS.COM


on

Bigg Boss OTT 3 Armaan Malik both Kritika Malik and Payal Malik in bigg bos house
Koo

ಬೆಂಗಳೂರು: ಬಿಗ್ ಬಾಸ್ OTT ಸೀಸನ್‌ನಲ್ಲಿ (Bigg Boss OTT 3) ಅರ್ಮಾನ್ ಮಲಿಕ್ (Arman Malik) ಮತ್ತು ಅವರ ಇಬ್ಬರು ಪತ್ನಿಯರಾದ ಪಾಯಲ್ ಮತ್ತು ಕೃತಿಕಾ ಭಾಗವಹಿಸಿರುವುದು ಗೊತ್ತೇ ಇದೆ.

ಈ ಶೋ ಬಹುಪತ್ನಿತ್ವವನ್ನು ಉತ್ತೇಜಿಸುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಹೊಸ ಪ್ರೋಮೊ ಒಂದು ವೈರಲ್‌ ಆಗಿದೆ.

ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ. ಅರ್ಮಾನ್ ಮತ್ತು ಕೃತಿಕಾ ವಿವಾಹಿತ ಜೋಡಿಯಾಗಿ ಹೇಗೆ ಮರಳಿದರು ಎಂಬುದನ್ನು ಪಾಯಲ್ ವಿವರಿಸಿದ್ದಾರೆ.

ಇದನ್ನೂ ಓದಿ: Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಅವರಿಬ್ಬರ ನಿರ್ಧಾರದಿಂದ ಪಾಯಲ್ ಎಷ್ಟು ದುಃಖಿತರಾಗಿದ್ದಾರೆಂಬುವುದು ಎಂಬುದು ಈ ಪ್ರೋಮೊದಲ್ಲಿದೆ.

Continue Reading
Advertisement
UGC NET Exam
ದೇಶ2 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ3 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ3 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ5 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ5 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ5 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ5 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ5 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ6 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ8 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌