Site icon Vistara News

Duniya Vijay: ದೀಪಾವಳಿಗೆ ದುನಿಯಾ ವಿಜಯ್ ʻಭೀಮʼನ ದರ್ಶನ!

Duniya Vijay Bheema

ಬೆಂಗಳೂರು: ದುನಿಯಾ ವಿಜಯ್ (Duniya Vijay) ಸದ್ಯ ‘ಭೀಮ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ವಿಜಯ್‌ ರಿಲೀಸ್ ತಯಾರಿಯಲ್ಲಿದ್ದಾರೆ. ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ “ಭೀಮʼ ಸಿನಿಮಾ ಕೆಲಸಗಳು‌ ಕೊನೆಯ ಹಂತ ತಲುಪುತ್ತಿದ್ದು, ಚಿತ್ರತಂಡ ಸಿನಿಮಾ ರಿಲೀಸ್‌ ಡೇಟ್ ಫಿಕ್ಸ್ ಮಾಡಿಕೊಳ್ಳುತ್ತಿದೆ. ನವೆಂಬರ್‌ನಲ್ಲಿ ಸಿನಿಮಾ ತೆರೆ ಕಾಣುವುದಕ್ಕೆ ಸಜ್ಜಾಗಿದೆ. ನವೆಂಬರ್‌ನಲ್ಲಿ ದೀಪಾವಳಿ ಸಮಯದಲ್ಲಿ ಸಿನಿಮಾವನ್ನು ರಿಲೀಸ್‌ ಮಾಡಲು ಪ್ಲಾನ್‌ ಹಾಕಿಕೊಂಡಿರುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಜತೆಗೆ ಪ್ರಚಾರ ಕಾರ್ಯ ಶುರು ಮಾಡಲಿದೆ.

`ಭೀಮ’ ಸಿನಿಮಾಗಾಗಿ ಕವಿರಾಜ್ ವಿಶೇಷ ಹಾಡೊಂದನ್ನು ಬರೆದಿದ್ದಾರೆ. ಅಂದು ‘ಪದ್ಮಾವತಿ’ ಎಂದು ಮೋಡಿ ಮಾಡಿದ್ದ ಕವಿರಾಜ್ ಇದೀಗ, ‘ಬೇಡ ಬೇಡ ದೊಡ್ಡ ಪಾರ್ಟಿ…’ ಎನ್ನುತ್ತ ಮತ್ತೆ ಬರ್ತಿದ್ದಾರೆ. ಈ ಬಗ್ಗೆ ಕವಿರಾಜ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

‘ಬೇಡ ದೊಡ್ಡ ದೊಡ್ಡ ಪಾರ್ಟಿ.. ಕುಡಿಸು ನೀ ಸಾಕು ಬೈ ಟೂ ಟೀ…’ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡು ಭೀಮ ಸಿನಿಮಾದ ಹೈ ವೋಲ್ಟೇಜ್ ಹಾಡು ಇದಾಗಿದೆ. ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಈಗಾಗಲೇ ಹೆಚ್ಚಾಗಿದ್ದು, ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಇದನ್ನೂ ಓದಿ: Duniya Vijay: ಕವಿರಾಜ್ ಜತೆ ಪಾರ್ಟಿಗೆ ರೆಡಿಯಾದ ದುನಿಯಾ ವಿಜಿ ; ಬಿಗ್‌ ಅಪ್‌ಡೇಟ್‌ ಕೊಟ್ಟʻಭೀಮʼ !

ʼಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Nandamuri Balakrishna | ಬಾಲಯ್ಯ ಜತೆ ನಟಿಸುವುದು ಸಣ್ಣ ವಿಷಯವೇನಲ್ಲ: ದುನಿಯಾ ವಿಜಯ್‌

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.

Exit mobile version