Shah Rukh Khan: ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್! - Vistara News

ಬಾಲಿವುಡ್

Shah Rukh Khan: ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್!

Shah Rukh Khan: ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

VISTARANEWS.COM


on

Dunki New Posters Shah Rukh Khan Diwali
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್ ಕಿಂಗ್ ಖಾನ್ (Shah Rukh Khan) ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರಿ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್‌ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ.

ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: Shahrukh Khan: ಪಠಾಣ್‌ನಿಂದ ಜವಾನ್‌, ಡಂಕಿ ಸಿನಿಮಾಗಳಿಗೆ ಲಾಭವಾಗುತ್ತಾ? ಶಾರುಖ್‌ ಬಗ್ಗೆ ಭವಿಷ್ಯ ನುಡಿದ ತಜ್ಞರು!

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿದ ನಟಿ ಸುಚಿತ್ರಾ ಕೃಷ್ಣಮೂರ್ತಿ ಮುಖ ಊದಿಕೊಂಡಂತೆ ಕಂಡಿದೆ.ನಟಿ ಸೌಂದರ್ಯ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ವಿಷಯಗಳ ಬಗ್ಗೆಯೂ ಧ್ವನಿಯಾಗುತ್ತಾರೆ. ಸಿನಿಮಾ ವಿಚಾರಕ್ಕೆ ಬಂದರೆ, 2022ರಲ್ಲಿ ಬಿಡುಗಡೆಯಾದ ಅಮೆಜಾನ್ ಪ್ರೈಮ್ ವಿಡಿಯೊ ಶೋ ʻಗಿಲ್ಟಿ ಮೈಂಡ್ಸ್‌ʼನಲ್ಲಿ (Guilty Minds) ಸುಚಿತ್ರಾ ಕೊನೆಯದಾಗಿ ಕಾಣಿಸಿಕೊಂಡರು.

VISTARANEWS.COM


on

Suchitra Krishnamoorthi Reveals Her Face Swelled Like A Balloon
Koo

ಬೆಂಗಳೂರು: ʻಕಭಿ ಹಾಂ ಕಭಿ ನಾʼ (Kabhi Haan Kabhi Naa) ಚಿತ್ರದಲ್ಲಿ ಶಾರುಖ್ ಖಾನ್ ಜತೆ ನಟಿಸಿದ ನಟಿ ಸುಚಿತ್ರಾ ಕೃಷ್ಣಮೂರ್ತಿ ಅವರ ಇತ್ತೀಚಿನ ಫೋಟೊಗಳು ವೈರಲ್‌ ಆಗಿವೆ. ಸುಚಿತ್ರಾ ಕೃಷ್ಣಮೂರ್ತಿ (Suchitra Krishnamoorthi) ಅವರ ಮುಖ ಊದಿಕೊಂಡಂತೆ ಕಂಡಿದೆ. ಇದಾದ ಬಳಿಕ ನಟಿಗೆ ಹಲವರು ಈ ಬಗ್ಗೆ ಪ್ರಶ್ನೆ ಇಟ್ಟಿದ್ದಾರೆ. ಇದೀಗ ನಟಿ ಸೌಂದರ್ಯ ಚಿಕಿತ್ಸೆಗೆ ಒಳಗಾಗಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.

ಈವೆಂಟ್‌ನಿಂದ ತನ್ನ ಇತ್ತೀಚಿನ ಫೋಟೊವನ್ನು ಹಂಚಿಕೊಂಡ ಸುಚಿತ್ರಾʻʻಕಲಾ ಪ್ರದರ್ಶನದಲ್ಲಿ ನಾನು ಭಾಗಿಯಾಗಿದ್ದೆ. ಆಗ ನನ್ನ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಮುಖ ಕೂಡ ಊದಿಕೊಂಡಂತೆ ಕಂಡಿತ್ತು. ಇದಾದ ಬಳಿಕ ಅನೇಕರು ನನ್ನ ಆರೋಗ್ಯವನ್ನು ವಿಚಾರಿಸುತ್ತಿದ್ದರು. ಮೊಣಕಾಲು ಕೂಡ ಕೆಲವು ದಿನಗಳಿಂದ ತೀವ್ರ ನೋವು ಆಗುತ್ತಿತ್ತು. ಅಷ್ಟೇ ಅಲ್ಲ ನನ್ನ ಮುಖ ಕೂಡ ಬಲೂನ್‌ನಂತೆ ಊದಿಕೊಂಡಿದೆ. ಕಾರಣ ಸೌಂದರ್ಯ ಚಿಕಿತ್ಸೆಯನ್ನು ಮಾಡಿದ್ದೇನೆ. ಹೀಗಾಗಿ ಮುಖ ಮರೆಮಾಚಲು ಪ್ರಯತ್ನಿಸಲಿಲ್ಲ. ಮತ್ತೆ ಮುಖ ಮುಂಚಿನಂತಾಗುತ್ತದೆ. ಸಮಯಬೇಕಷ್ಟೆʼʼ ಎಂದಿದ್ದಾರೆ.

ʻʻಕಾರ್ಯಕ್ರಮವೊಂದರಲ್ಲಿ ಜಾವೇದ್ ಅಖ್ತರ್ ಜತೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದೆ. ಕ್ಷಮಿಸಿ ಗ್ಲ್ಯಾಮರ್‌ ಆಗಿ ಕಾಣಿಸಿಕೊಂಡಿಲ್ಲ. ನಿಮ್ಮ ಮತ್ತು ಕಾಳಜಿ ಪ್ರೀತಿಗಾಗಿ ಧನ್ಯವಾದʼʼ ಎಂದು ನಟಿ ತಮ್ಮ ಫಾಲೋವರ್ಸ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: Shah Rukh Khan: ದೇವದಾಸ್ ಚಿತ್ರದಲ್ಲಿ ಶಾರುಖ್ ಖಾನ್ ನಿಜವಾಗ್ಲೂ ಕುಡಿದಿದ್ದರೆ?

ಸುಚಿತ್ರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ಸಾಮಾಜಿಕ ಮಾಧ್ಯಮದ ಮೂಲಕ ಹಲವು ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ವಿವಿಧ ವಿಷಯಗಳ ಬಗ್ಗೆಯೂ ಧ್ವನಿಯಾಗುತ್ತಾರೆ.

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಎಸ್ ಎಸ್ ಎಲ್ ಸಿಯಲ್ಲಿ ಟಾಪರ್ (SSLC Topper) ಆಗಿರುವ ಪ್ರಾಚಿ ನಿಗಮ್ ಮುಖದ ಬಗ್ಗೆ ಹೆಚ್ಚು ಟ್ರೋಲ್‌ ಆಗಿತ್ತು. ಪ್ರಾಚಿ ನಿಗಮ್ ಬಗ್ಗೆ ಜಾಹೀರಾತನ್ನು ಹಾಕಿದ್ದಕ್ಕಾಗಿ ಸುಚಿತ್ರಾ ಬಾಂಬೆ ಶೇವಿಂಗ್ ಕಂಪನಿ ಮತ್ತು ಅದರ ಮಾಲೀಕರ ಮೇಲೆ ನಟಿ ಆಕ್ರೋಶ ಹೊರಹಾಕಿದ್ದರು. ಸಿನಿಮಾ ವಿಚಾರಕ್ಕೆ ಬಂದರೆ, 2022ರಲ್ಲಿ ಬಿಡುಗಡೆಯಾದ ಅಮೆಜಾನ್ ಪ್ರೈಮ್ ವಿಡಿಯೊ ಶೋ ʻಗಿಲ್ಟಿ ಮೈಂಡ್ಸ್‌ʼನಲ್ಲಿ (Guilty Minds) ಸುಚಿತ್ರಾ ಕೊನೆಯದಾಗಿ ಕಾಣಿಸಿಕೊಂಡರು.

Continue Reading

ಸಿನಿಮಾ

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Vettaiyan Movie: ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ.

VISTARANEWS.COM


on

Vettaiyan Movie Rajinikanth And Amitabh Bachchan Poses Together
Koo

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ʼವೆಟ್ಟೈಯಾನ್ʼ (Vettaiyan Movie) ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು.  ಅಮಿತಾಭ್‌ ಬಚ್ಚನ್ ಸೇರಿದಂತೆ ಬೃಹತ್ ತಾರಾಗಣವನ್ನು ಒಳಗೊಂಡಿರುವ ʼವೆಟ್ಟೈಯಾನ್ʼ ನಿರ್ಮಾಣದ ಕೊನೆಯ ಹಂತದಲ್ಲಿದೆ. ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.

‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ತಮಿಳು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ. ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

ಇದನ್ನೂ ಓದಿ: Jailer Cinema : ಬದರೀನಾಥ್​​ ದೇಗುಲಕ್ಕೆ ಭೇಟಿ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್​

ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.

Continue Reading

ಬಾಲಿವುಡ್

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

Urfi Javed: ವೈರಲ್‌ ಆದ ವಿಡಿಯೊದಲ್ಲಿ ಉರ್ಫಿ ಅವರು ಚಪ್ಪಾಳೆ ತಟ್ಟುವಾಗ ಉಡುಪಿನಿಂದ ಚಿಟ್ಟೆಗಳು ಹಾರಿಹೋಗುತ್ತವೆ. ಉರ್ಫಿ ಧರಿಸಿರುವ ಬ್ಲ್ಯಾಕ್​ ಗೌನ್​​ ಮೇಲಿರುವ ಎಲೆ, ಹೂಗಳು ತನ್ನಷ್ಟಕ್ಕೆ ಅರಳಿಕೊಳ್ಳುತ್ತವೆ. ಒಂದಿಷ್ಟು ಡಿಸೈನ್ಸ್​​​ ನಟಿಯ ಸುತ್ತ ಬೀಳುತ್ತವೆ. ಈ ಬಾರಿ ಉರ್ಫಿ ಉಡುಪಿಗೆ ಸಮಂತಾ ರುತ್ ಪ್ರಭು ಸೇರಿದಂತೆ ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚಿದ್ದಾರೆ.

VISTARANEWS.COM


on

Urfi Javed magical butterflies dress Samantha reacts
Koo

ಬೆಂಗಳೂರು: ವಿಶಿಷ್ಟವಾದ ಬಟ್ಟೆಗಳಿಂದಲೇ ಹೆಸರುವಾಸಿಯಾಗಿರುವ ಸ್ಟೈಲ್ ಐಕಾನ್‌ ಉರ್ಫಿ ಜಾವೇದ್ (Urfi Javed) ಇದೀಗ ಮತ್ತೊಂದು ಅವತಾರದಲ್ಲಿ ಕಂಡಿದ್ದಾರೆ. ಈ ಬಾರಿ ಉರ್ಫಿ ಉಡುಪಿಗೆ ಸಮಂತಾ ರುತ್ ಪ್ರಭು ಸೇರಿದಂತೆ ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚಿದ್ದಾರೆ. ಉರ್ಫಿ ಕಪ್ಪು ಬಣ್ಣದ ಲೆಹೆಂಗಾ ಧರಿಸಿದ್ದರು. ಉರ್ಫಿ ಈ ಸಲ 3D ಫ್ಲವರ್​​ ಗೌನ್​​​​ ಧರಿಸಿದ್ದಾರೆ. ಇದರಲ್ಲಿರುವ ಮ್ಯಾಜಿಕಲ್​​ ಬಟರ್‌ಫ್ಲೈ, ಪ್ಲವರ್​​ ಥೀಮ್ ಗೌನ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾಗಿ ಗಮನ ಸೆಳೆಯುತ್ತಿದ್ದು, ಸಾಕಷ್ಟು ಮಂದಿ ಲೈಕ್‌ ಮಾಡಿದ್ದಾರೆ​.

ವೈರಲ್‌ ಆದ ವಿಡಿಯೊದಲ್ಲಿ ಉರ್ಫಿ ಅವರು ಚಪ್ಪಾಳೆ ತಟ್ಟುವಾಗ ಉಡುಪಿನಿಂದ ಚಿಟ್ಟೆಗಳು ಹಾರಿಹೋಗುತ್ತವೆ. ಉರ್ಫಿ ಧರಿಸಿರುವ ಬ್ಲ್ಯಾಕ್​ ಗೌನ್​​ ಮೇಲಿರುವ ಎಲೆ, ಹೂಗಳು ತನ್ನಷ್ಟಕ್ಕೆ ಅರಳಿಕೊಳ್ಳುತ್ತವೆ. ಒಂದಿಷ್ಟು ಡಿಸೈನ್ಸ್​​​ ನಟಿಯ ಸುತ್ತ ಬೀಳುತ್ತವೆ. ಅವು ಹೂ ಮತ್ತು ಚಿಟ್ಟೆಯಾಕಾರದಲ್ಲಿ ಕಂಡುಬಂದಿದ್ದು ಅದ್ಭುತ ಗಾರ್ಡನ್​​ ಥೀಮ್​ ಡ್ರೆಸ್​​​​​ನಂತೆ ಭಾಸವಾಗುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಡ್ರೆಸ್‌ನಲ್ಲಿರುವವಿಡಿಯೊವನ್ನು ಹಂಚಿಕೊಂಡ ಉರ್ಫಿ, “ಮ್ಯಾಜಿಕ್ʼʼ ಎಂದು ಬರೆದಿದ್ದಾರೆ. ವಿಡಿಯೊಗೆ ಪ್ರತಿಕ್ರಿಯಿಸಿದ ಕುಶಾ ಕಪಿಲಾ, “ರಾಣಿ ರೀತಿ ಕಾಣುತ್ತಿದ್ದೀರಾ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Uorfi Javed: ಉಫ್‌! 100 ಕೆ.ಜಿ. ತೂಕದ ಗೌನ್ ಧರಿಸಿದ ಉರ್ಫಿ ಜಾವೇದ್‌; ವಿಡಿಯೊ ಇಲ್ಲಿದೆ

ಉರ್ಫಿಯ ಉಡುಪಿಗೆ ಸಮಂತಾ ರಿಯಾಕ್ಷನ್‌!

ಸಮಂತಾ ರುತ್ ಪ್ರಭು ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಉರ್ಫಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಸುಂದರವಾಗಿದೆ ಉರ್ಫಿ”ಎಂದು ಬರೆದುಕೊಂಡಿದ್ದಾರೆ. ಸಮಂತಾ ಶೇರ್‌ ಮಾಡಿಕೊಂಡ ಪೋಸ್ಟ್‌ನಲ್ಲಿ ಉರ್ಫಿ ಅವರು ಗೌನ್‌ವನ್ನು ಹೇಗೆ ತಯಾರಿಸಿದ್ದಾರೆ ಎಂಬುದರ ಕುರಿತು ಇದೆ. “ಹಾರುವ ಚಿಟ್ಟೆಗಳ ಉಡುಗೆ” ಎಂಬ ಶೀರ್ಷಿಕೆ ಶೇರ್‌ ಮಾಡಿಕೊಂಡ ವಿಡಿಯೊದಲ್ಲಿ ಇದೆ. ಮತ್ತೋರ್ವ ಅಭಿಮಾನಿ, ಉರ್ಫಿ ಸುಂದರವಾಗಿ ಕಾಣುತ್ತಿದ್ದಾರೆ ಎಂಬರ್ಥದಲ್ಲಿ ಬರೆದಿದ್ದಾರೆ. ಅಭಿಮಾನಿಗಳು ನಟಿಯನ್ನು ಮೆಟ್ ಗಾಲಾ 2024ರಲ್ಲಿ ನೋಡಲು ಬಯಸಿದ್ದಾರೆ.

ಬಾಲಿವುಡ್‌ಗೆ ಪದಾರ್ಪಣೆ

ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು. ಬಾಲಿವುಡ್‌ ಕಲಾವಿದರಾದ ತುಷಾರ್ ಕಪೂರ್ ಮತ್ತು ಮೌನಿ ರಾಯ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಇದು ಉರ್ಫಿ ಜಾವೇದ್‌ ಅಭಿನಯದ ಮೊದಲ ಬಾಲಿವುಡ್‌ ಚಿತ್ರ. ಬಿಗ್‌ಬಾಸ್‌ ರಿಯಾಲಿಟಿ ಶೋದ ಮೂಲಕ ಗಮನ ಸೆಳೆದಿದ್ದ ಅವರು ಸಿನಿಮಾದಲ್ಲಿ ಯಾವ ರೀತಿ ಕಾಣಿಸಿಕೊಳ್ಳಬಹುದು ಎನ್ನುವ ಕುತೂಹಲ ಮೂಡಿತ್ತು. ಮಾತ್ರವಲ್ಲ ಅವರು ಸ್ಪ್ಲಿಟ್‌ವಿಲ್ಲಾ ಎಕ್ಸ್ 5 (Splitsvilla X5) ಶೋದಲ್ಲಿಯೂ ಕಾಣಿಸಿಕೊಂಡಿದ್ದಾರೆ.

Continue Reading

ಬಾಲಿವುಡ್

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

Bharti Singh: ಭಾರತಿ ಸಿಂಗ್ ಅವರಿದ್ದ ಎತ್ತರಕ್ಕೆ ಹೋಲಿಸಿ ನೋಡಿದರೆ ಅತಿಯಾದ ತೂಕ ಹೊಂದಿದ್ದರು. ಹೀಗಾಗಿ ಅವರ 15 ಕೆಜಿ ತೂಕ ಇಳಿಸಿಕೊಂಡ ನಂತರದಲ್ಲಿ ಗರ್ಭಿಣಿಯಾಗಿದ್ದರು. ಈಗಾಗಲೇ ಸಾಕಷ್ಟು ರಿಯಾಲಿಟಿ ಶೋ, ಪ್ರಶಸ್ತಿ ಸಮಾರಂಭಗಳನ್ನು ಭಾರತಿ ನಿರೂಪಣೆ ಮಾಡಿದ್ದಾರೆ. ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ.

VISTARANEWS.COM


on

Bharti Singh admitted to hospital
Koo

ಬೆಂಗಳೂರು: ಬಾಲಿವುಡ್‌ನ ಖ್ಯಾತ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್‌ (Bharti Singh) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ತಮ್ಮ ದೈನಂದಿನ ವ್ಲಾಗ್‌ಗಳ ಮೂಲಕ ಯೂಟ್ಯೂಬ್‌ನಲ್ಲಿ ಹೆಚ್ಚು ಫಾಲೋವರ್ಸ್‌ ಹೊಂಸಿರುವ ಭಾರತಿ ಸಿಂಗ್‌ ಆಗಾಗ ಅಪ್‌ಡೇಟ್‌ (Bharti Singh admitted) ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ನಟಿ ತಮ್ಮ ವ್ಲಾಗ್‌ನಲ್ಲಿ ತೀವ್ರವಾದ ಹೊಟ್ಟೆ ನೋವಿನ ಬಳಿಕ ಆಸ್ಪತ್ರೆಗೆ ದಾಖಲಾಗಿರುವುದನ್ನು ಬಹಿರಂಗಪಡಿಸಿದ್ದಾರೆ. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅವರ ಫ್ಯಾನ್ಸ್‌ ಚಿಂತೆಗೀಡಾಗಿದ್ದಾರೆ.

ಕೋಕಿಲಾಬೆನ್ ಆಸ್ಪತ್ರೆಯಲ್ಲಿ ನಟಿ ದಾಖಲಾಗಿದ್ದು ಡ್ರಿಪ್‌ಗಳನ್ನು ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ. ಭಾರತಿ ಸಿಂಗ್ ಅವರು ಪಿತ್ತಕೋಶದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವ್ಲಾಗ್‌ನಲ್ಲಿ ಭಾರತಿ ಭಾವುಕರಾಗಿರುವುದನ್ನು ಕಾಣಬಹುದು.

ವ್ಲಾಗ್‌ನಲ್ಲಿ ಭಾರತಿ ಮಾತನಾಡಿ ʻʻನನಗೆ ನೋವು ಸಹಿಸಲು ಸಾಧ್ಯವಾಗುತ್ತಿರಲಿಲ್ಲ. ಪಿತ್ತಕೋಶದಲ್ಲಿ ಕಲ್ಲು ಇದೆ ಎಂದು ಆನಂತರ ಗೊತ್ತಾಯಿತು. ಪರಿಣಾಮವಾಗಿ, ನಾನು ಏನನ್ನೂ ತಿನ್ನಲು ಸಾಧ್ಯವಾಗಲಿಲ್ಲ. ವಾಂತಿ ಕೂಡ ಆಗಿತ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

ಭಾರತಿ ಸಿಂಗ್‌ ಅಭಿಮಾನಿಗಳು ಇದೀಗ ಕಮೆಂಟ್‌ ಮೂಲಕ ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತಿದ್ದಾರೆ. ಒಬ್ಬರು ʻʻಈ ವಿಡಿಯೊ ನೋಡಿ ನನಗೆ ಅಳು ಬಂತು. ಬೇಗ ಗುಣಮುಖರಾಗಿ. ದುರ್ಗಾ ಮಾತೆ ಆಶೀರ್ವದಿಸುತ್ತಾಳೆ.”ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ʻʻನೀವು ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಅತ್ತಿದ್ದು ನೋಡಿದೆ. ನನಗೂ ಅಳು ಬಂತುʼʼಎಂದು ಕಮೆಂಟ್‌ ಮಾಡಿದ್ದಾರೆ.

ಭಾರತಿ ಸಿಂಗ್ ಅವರಿದ್ದ ಎತ್ತರಕ್ಕೆ ಹೋಲಿಸಿ ನೋಡಿದರೆ ಅತಿಯಾದ ತೂಕ ಹೊಂದಿದ್ದರು. ಹೀಗಾಗಿ ಅವರ 15 ಕೆಜಿ ತೂಕ ಇಳಿಸಿಕೊಂಡ ನಂತರದಲ್ಲಿ ಗರ್ಭಿಣಿಯಾಗಿದ್ದರು. ಈಗಾಗಲೇ ಸಾಕಷ್ಟು ರಿಯಾಲಿಟಿ ಶೋ, ಪ್ರಶಸ್ತಿ ಸಮಾರಂಭಗಳನ್ನು ಭಾರತಿ ನಿರೂಪಣೆ ಮಾಡಿದ್ದಾರೆ.

Continue Reading
Advertisement
Summer Tour
ಪ್ರವಾಸ5 mins ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ8 mins ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ17 mins ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ40 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್42 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ45 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ54 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ57 mins ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Suchitra Krishnamoorthi Reveals Her Face Swelled Like A Balloon
ಬಾಲಿವುಡ್1 hour ago

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Wedding Season Hair Fashion
ಫ್ಯಾಷನ್1 hour ago

Wedding Season Hair Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಎಂಟ್ರಿ ನೀಡಿದ ಆರ್ಟಿಫಿಶಿಯಲ್‌ ಹೇರ್‌ ಎಕ್ಸ್‌ಟೆನ್ಷನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌