Dwarakish Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ದ್ವಾರಕೀಶ್! - Vistara News

South Cinema

Dwarakish Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ದ್ವಾರಕೀಶ್!

Dwarakish Birthday: ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ (Bungle Shama Rao Dwarakanath) ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. ‘ದ್ವಾರಕೀಶ್​ ಚಿತ್ರ’ ನಿರ್ಮಾಣ (Dwarakish Chitra) ಸಂಸ್ಥೆ ಮೂಲಕ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿದ್ದಾರೆ. 

VISTARANEWS.COM


on

Dwarakish Birthday celebration with Ba Ma Harish Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (Actor Dwarakish) ಅವರಿಗೆ ಆಗಸ್ಟ್‌ 19 ಜನುಮದಿನ ಸಂಭ್ರಮ. ಇದೀಗ ನಟ 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್ (ba ma harish) ಹಾಗೂ ತಂಡ ನಟ ದ್ವಾರಕೀಶ್ ಅವರನ್ನು ಗೌರವಿಸಿ ಕೇಕ್ ಕಟ್ (Dwarakish Birthday) ಮಾಡಿ ಸಂಭ್ರಮಾಚರಣೆ ಮಾಡಿದೆ. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ (Bungle Shama Rao Dwarakanath) ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. ‘ದ್ವಾರಕೀಶ್​ ಚಿತ್ರ’ ನಿರ್ಮಾಣ (Dwarakish Chitra) ಸಂಸ್ಥೆ ಮೂಲಕ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿದ್ದಾರೆ. 

ನಟ ದ್ವಾರಕೀಶ್‌ 2019ರಲ್ಲಿ ತೆರೆಕಂಡ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ ಅಭಿನಯದ ‘ಆಯುಷ್ಮಾನ್‌ ಭವ’ ಚಿತ್ರವನ್ನು ಕೊನೆಯದಾಗಿ ನಿರ್ಮಾಣ ಮಾಡಿದ್ದರು. ಇತ್ತೀಚಿಗೆ ಚಿತ್ರರಂಗದಿ೦ದ ದೂರ ಉಳಿದಿದ್ದಾರೆ. ದ್ವಾರಕೀಶ್‌ ಹುಟ್ಟುಹಬ್ಬಕ್ಕೆ ಹಿರಿಯ ಕಲಾವಿದರು ಸೇರಿದಂತೆ ಹಲವಾರು ನಟ – ನಟಿಯರು ಸಾಮಾಜಿಕ ಜಾಲತಾಣದಲ್ಲಿ ವಿಶ್‌ ಮಾಡಿದ್ದಾರೆ.

ಮಮತೆಯ ಬಂಧನ(Mamatheya Bandhana), ಮೇಯರ್ ಮುತ್ತಣ್ಣ (Mayor Muthanna), ಭಾಗ್ಯವಂತರು ,ಕಿಟ್ಟು ಪುಟ್ಟು,ಕುಳ್ಳ ಕುಳ್ಳಿ (Kulla Kulli),ಗುರು ಶಿಷ್ಯರು, ಪ್ರಚಂಡ ಕುಳ್ಳ ಸೇರಿದಂತೆ ಅನೇಕ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿದ್ದಾರೆ. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು.1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು.

ಇದನ್ನೂ ಓದಿ: Actor Dwarakish: ಹಿರಿಯ ನಟ ದ್ವಾರಕೀಶ್‌ ಸಾವಿನ ಬಗ್ಗೆ ಅಪಪ್ರಚಾರ: ಸ್ಪಷ್ಟನೆ ಕೊಟ್ಟ ನಟ

ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು.ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ದ್ವಾರಕೀಶ್ ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading

ಸ್ಯಾಂಡಲ್ ವುಡ್

Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

Chandan Shetty: ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

VISTARANEWS.COM


on

Chandan Shetty Niveditha gowda roumers on srujan lokesh
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಕೆಲವರು ನಟ ಸೃಜನ್ ಲೋಕೇಶ್ ಹೆಸರು ಎಳೆದುತಂದು ಟ್ರೋಲ್ ಮಾಡಿದ್ದರು. ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

ಮೂರನೇ ವ್ಯಕ್ತಿಯನ್ನು ಸಂಬಂಧಿಸಿ ಸಂಬಂಧ ಕೂಡ ಕಲ್ಪಿಸುತ್ತಿದ್ದಾರೆ. ಆದರೆ ಅವರು ನಮಗೆ ಫ್ಯಾಮಿಲಿ ತರ. ಆ ವ್ಯಕ್ತಿ ಜತೆ ಹೆಸರು ಸೇರಿಸಿದ್ದು ಸರಿಯಲ್ಲ. ಇದು ಕನ್ನಡಿಗರಾಗಿ ನಮಗೆ ಶೋಭೆ ಅಲ್ಲ. ಯಾಕೆಂದರೆ ಆ ವ್ಯಕ್ತಿಯ ಮನೆಗೆ ನಾನು ಕೂಡ ಅನೇಕ ಬಾರಿ ಹೋಗಿದ್ದೇನೆ. ತುಂಬ ಒಳ್ಳೆಯ ಕುಟುಂಬ ಅವರದ್ದುʼʼಎಂದರು ಚಂದನ್‌.

ಇನ್ನು ನಿವೇದಿತಾ ಕೂಡ ʻʻಆ ರೀತಿಯ ಪೋಸ್ಟ್​ಗಳನ್ನು ನೋಡಿದಾಗ ನನಗೆ ನೋವಾಯಿತು. ನಾವೆಲ್ಲ ಫ್ಯಾಮಿಲಿ ಫ್ರೆಂಡ್ಸ್​. ಪ್ರತಿ ವರ್ಷ ಅವರು ನನ್ನ ಜನ್ಮದಿನಕ್ಕೆ ವಿಶ್​ ಮಾಡುತ್ತಾರೆ. ನಾನು ಕೂಡ ಅವರಿಗೆ ವಿಶ್​ ಮಾಡುತ್ತೇನೆ. ಈ ವರ್ಷವೇ ಈ ರೀತಿ ವದಂತಿ ಹಬ್ಬಿದ್ದು ಯಾಕೆ ಅಂತ ಗೊತ್ತಿಲ್ಲ. ಇದರಿಂದ ಅವರ ಫ್ಯಾಮಿಲಿಯವರಿಗೆ ತುಂಬ ನೋವಾಗುತ್ತದೆ. ಫ್ಯಾಮಿಲಿ ಎಲ್ಲರಿಗೂ ಇರತ್ತೆ, ಬೇರೆಯವರ ಇಮೋಷನ್‌ ಹರ್ಟ್‌ ಮಾಡಬೇಡಿ. ಬೇಸ್‌ಲೆಸ್‌ ಆಗಿ ಏನೇನೊ ಹೇಳಬಾರದು. ನಾವಿಬ್ಬರೂ ಒಮ್ಮತದಿಂದ ನಿರ್ಧಾರ ಮಾಡಿಯೇ ಡಿವೋರ್ಸ್‌ ಪಡೆದುಕೊಂಡಿದ್ದೇವೆ. ನಾವು ಸೆಲೆಬ್ರಿಟಿಯಾಗಿ ನಮ್ಮ ಫಾಲ್ಲೋವರ್ಸ್ ಯಾರಿಗೂ ಡಿವೋರ್ಸ್ ಕೊಡಿ ಎಂದು ಪ್ರಚೋದನೆ ಕೊಡುತ್ತಿಲ್ಲ ʼʼಎಂದರು.

ಇದನ್ನೂ ಓದಿ: Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

ಕೊನೆಯದಾಗಿ ಚಂದನ್‌ ಮಾತನಾಡಿ ʻʻನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

Continue Reading

ಸಿನಿಮಾ

Chandan Shetty: ನಮ್ಮ ಖುಷಿ ಮೇಲೆ ಪ್ರಶಾಂತ್‌ ಸಂಬರಗಿ ಕಣ್ಣು; ಟಾಂಗ್‌ ಕೊಟ್ಟ ಚಂದನ್‌ ಶೆಟ್ಟಿ

Chandan Shetty: ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

VISTARANEWS.COM


on

Chandan Shetty reaction about prashant sambaragi statement on divorce
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಇದಾದ ಬಳಿಕ ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

“ಮಾಧ್ಯಮಗಳಲ್ಲಿ ಮೂರನೇ ವ್ಯಕ್ತಿ ನಮ್ಮ ಸಂಬಂಧದ ಬಗ್ಗೆ ಕೊಟ್ಟಿರುವ ಹೇಳಿಕೆ ನಿಜವಲ್ಲ. ಇದು ನಮ್ಮ ವೈಯಕ್ತಿಕ ಜೀವನ. ನಾವಿಬ್ರು ಖುಷಿಯಾಗಿರಬೇಕು ಎಂದೇ ದೂರ ಆಗಿರುವುದು. ಆದರೆ ಆ ವ್ಯಕ್ತಿ ನಮ್ಮ ಖುಷಿ ನೋಡುವುದಕ್ಕೆ ಆಗ್ತಿಲ್ಲ ಅನ್ನಿಸುತ್ತದೆ. ನಮ್ಮ ಜೋಡಿ ನೋಡಿ ಎಲ್ಲರೂ ಖುಷಿ ಪಡ್ತಾ ಇದ್ದರು. ಬೇರೆ ಕಡೆ ನಾನು ಸಂದರ್ಶನ ಒಬ್ಬರು ಕೊಟ್ಟಿರುವುದು ನೋಡಿದೆ. ನಾನು ಯಾರಿಗೂ ಫ್ರೆಂಡ್‌ ಅಂದಿಲ್ಲ, ಆ ವ್ಯಕ್ತಿ ಜತೆ ನಾನು ಏನೂ ಆ ತರ ಮಾತನಾಡಿಲ್ಲ. ಈ ರೀತಿ ಅವರು ಮಾತನಾಡಿದ್ದು ಸುಳ್ಳು. ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಬೇರೆ ಅವರ ವೈಯಕ್ತಿಕ ಜೀವನ ಬಗ್ಗೆ ಯಾಕೆ ಹೀಗೆ ಮಾತನಾಡುತ್ತಿದ್ದೀರಾ ಗೊತ್ತಿಲ್ಲ. ನಾವು ಪೋಷಕರು ಜತೆ ಮಾತನಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮಿಬ್ಬರ ಮಧ್ಯೆ ಇಲ್ಲದೇ ಇರುವ ಉಹಾ ಪೋಹಾ ಬೀಜ ಬಿತ್ತಬೇಡಿ. ಇಲ್ಲಿಗೆ ಈ ವಿಚಾರ ನಿಲ್ಲಿಸಿ. ವದಂತಿಗಳಿಗೆ ಕಿವಿ ಕೊಡಬೇಡಿ. ಆದರೆ ನಾವು ಬ್ಯಾಲೆನ್ಸ್‌ ಮಾಡೋಕೆ ನೋಡಿದ್ವಿ ಆದರೆ ಆಗಿಲ್ಲʼʼಅಷ್ಟೇ ಅಂದರು.

ಇದನ್ನೂ ಓದಿ: Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

ಪ್ರಶಾಂತ್‌ ಸಂಬರಗಿ ಹೇಳಿದ್ದೇನು?

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದಿದ್ದರು.

ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದಿದ್ದರು.

ʻʻಚಂದನ್ ಅಮೆರಿಕಾಗೆ ಮ್ಯೂಸಿಕ್ ಕಾರ್ಯಕ್ರಮಕ್ಕೆ ಹೋಗಿದ್ದ. ಆಗ ನಿವೇದಿತಾ ಹೋಗಲಿಲ್ಲ. ನನ್ನ ಮೊದಲನೇ ಪ್ರಶ್ನೆ ಇದ್ದಿದ್ದು ಯಾಕೆ ಅವಳನ್ನು ಕರೆದುಕೊಂಡು ಹೋಗುತ್ತಿಲ್ಲ ಅಂತ. ಆದರೆ, ಬೇರೆ ಟ್ರಿಪ್‌ಗೆ ನೀನು ಕರ್ಕೊಂಡು ಹೋಗಿಲ್ಲ. ಬೇರೆಯವರು ಕರ್ಕೊಂಡು ಹೋಗ್ತಾರೆ. ನೀನು ನಿನ್ನ ಎಮೋಷನ್ಸ್‌ಗೆ ಸ್ಪಂದಿಸಿಲ್ಲ ಅಂದರೆ, ಬೇರೆ ಯಾರೋ ಕೊಡ್ತಾರೆ. ನೀನು ನಿನ್ನ ವಸ್ತುವನ್ನು ಕಾಪಾಡಿಕೋ ಅಂತ ಅನೇಕ ಬಾರಿ ಹೇಳಿದ್ದೇನೆ” ಎಂದು ಪ್ರಶಾಂತ್ ಸಂಬರಗಿ ಹೇಳಿದ್ದರು.

ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದಿದ್ದರು ಪ್ರಶಾಂತ್‌ ಸಂಬರಗಿ.

Continue Reading

ಸಿನಿಮಾ

Niveditha Gowda: ಸೃಜನ್‌, ಸಂಬರಗಿ, ಜೀವನಾಂಶ, ಮಗು; ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ಚಂದನ್‌-ನಿವೇದಿತಾ!

ಸುದ್ದಿಗೋಷ್ಠಿಗೆ ಇಬ್ಬರೂ ಪ್ರತ್ಯೇಕವಾಗಿ ಬಂದರು. ಡಿವೋರ್ಸ್‌ ವಿಚಾರ ಬಹಿರಂಗವಾದ ಬಳಿಕ ಕೆಲವು ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಚಂದನ್‌ ಹಾಗೂ ನಿವೇದಿತಾ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

VISTARANEWS.COM


on

Niveditha Gowda Chandan Shetty Divorce Case
Koo

ಬೆಂಗಳೂರು: ಚಂದನ್‌ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ ಪಡೆದುಕೊಂಡಿರುವುದು ಗೊತ್ತೇ ಇದೆ. ಇನ್‌ಸ್ಟಾದಲ್ಲಿ ಪೋಸ್ಟ್‌ ಮೂಲಕ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಕೂಡ ಹಂಚಿಕೊಂಡಿದೆ. ಈಗ ಇಬ್ಬರೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಗೆ ಇಬ್ಬರೂ ಪ್ರತ್ಯೇಕವಾಗಿ ಬಂದರು. ಡಿವೋರ್ಸ್‌ ವಿಚಾರ ಬಹಿರಂಗವಾದ ಬಳಿಕ ಕೆಲವು ವದಂತಿಗಳು ಹಬ್ಬಿದ್ದವು. ಈ ಬಗ್ಗೆ ಚಂದನ್‌ ಹಾಗೂ ನಿವೇದಿತಾ ಸ್ಪಷ್ಟನೆ ಕೊಟ್ಟಿದ್ದಾರೆ.

ಚಂದನ್‌ ಈ ಬಗ್ಗೆ ಮಾತನಾಡಿ ʻʻಮಾಧ್ಯಮದ ಮೇಲೆ ಇರುವ ಗೌರವ, ಸರಿಯಾದ ವಿಷಯವನ್ನು ಜನೆತೆಗೆ ತಲುಪಿಸುವ ಪ್ರಯತ್ನಕ್ಕೆ ನಾವು ಈಗ ನಿಮ್ಮ ಮುಂದೆ ಬಂದಿದ್ದೇನೆ. ಇದೇ 6ನೇ ತಾರಿಖು ಅರ್ಜಿ ಸಲ್ಲಿಸಿದ್ದೀವಿ. ನಮ್ಮಿಬ್ಬರಿಗೂ ನ್ಯಾಯಾಲಯ ಕಾನೂನಾತ್ಮಕವಾಗಿ ವಿಚ್ಛೇದನ ಕೊಟ್ಟಿದೆ. ತುಂಬ ಚೆನ್ನಾಗಿಯೇ ಇದ್ದರು, ಈಗ ಯಾಕೆ ದೂರ ಆದರು ಎಂದು ಹಲವರು ಪ್ರಶ್ನೆ ಕೇಳುತ್ತಲೇ ಇದ್ದರು. ಈ ಬಗ್ಗೆ ಈಗಾಗಲೇ ನಾವು ಸೋಷಿಯಲ್‌ ಮೀಡಿಯಾ ಮೂಲಕ ಪೋಸ್ಟ್‌ ಮಾಡಿದ್ದೇವೆ. ನಮ್ಮಿಬ್ಬರ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬುತ್ತಿವೆʼʼಎಂದರು.

ನಮ್ಮಿಬ್ಬರ ಆಲೋಚನೆ, ಜೀವನಶೈಲಿ ಬೇರೆ

ʻʻಮೊದಲಿಗೆ ನಾವಿಬ್ಬರೂ ದೂರ ಆಗಲು ಕಾರಣ, ನಮ್ಮಿಬ್ಬರ ಆಲೋಚನೆಗಳು ಬೇರೆ ಬೇರೆ. ನಿವೇದಿತಾ ಜೀವನಶೈಲಿ ಇನ್ನೊಂದು ಆಯಾಮ ಇತ್ತು. ನಾವಿಬ್ಬರು ಕೂಡ ಹಲವು ವರ್ಷಗಳಿಂದ ಅರ್ಥ ಮಾಡಿಕೊಂಡು ಸಾಗಬೇಕು ಎಂದು ಪ್ರಯತ್ನ ಪಟ್ಟಿದ್ದೇವು. ಆದರೆ ಇಬ್ಬರ ಜೀವನ ಶೈಲಿ ಬೇರೆಯಾಗಿತ್ತು. ಯಾರಿಗೂ ಯಾರ ಮೇಲೂ ಫೋರ್ಸ್‌ ಮಾಡಿಕೊಂಡು ಬದುಕಬಾರದು. ಹೀಗಾಗಿ ನಾವಿಬ್ಬರು ಒಮ್ಮತದಿಂದ ಒಟ್ಟಿಗೆ ನಿರ್ಧಾರ ಮಾಡಿಕೊಂಡು, ಖುಷಿಯಾಗಿ ಇರಬೇಕು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ. ನಮ್ಮಿಬ್ಬರ ಮಧ್ಯೆ ಯಾವುದೇ ವೈಮನಸ್ಸು ಇಲ್ಲ. ಇಬ್ಬರ ಮಧ್ಯೆಯೂ ಗೌರವ ಇದೆ. ನಮಗೆ ಸ್ನೇಹಿತರು ಹಾಗೇ ನಮ್ಮ ಇನ್‌ಸ್ಟಾ ಫಾಲೋವರ್ಸ್‌ ಸಪೋರ್ಟ್‌ ಮಾಡಿದ್ದೀರಾ ತುಂಬ ಧನ್ಯವಾದʼʼಎಂದರು ಚಂದನ್‌.

ಇದನ್ನೂ ಓದಿ: Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

ಮಕ್ಕಳ ವಿಚಾರಕ್ಕೆ ದೂರ ಆದ್ರಾ?

ʻʻನಮ್ಮಿಬ್ಬರ ವೈಯಕ್ತಿಕ ವಿಚಾರವನ್ನು ಈಗ ಬೇರೆ ರೀತಿಯಲ್ಲಿ ಸೃಷ್ಟಿ ಮಾಡುತ್ತಿರುವ ಕಾರಣ ಇಲ್ಲಿಗೆ ಬಂದಿದ್ದೇವೆ. . ನಿವೇದಿತಾ ಅವರು ಜೀವನಾಂಶ ಪಡೆದಿಲ್ಲ. ಅವರಿಗೆ ನಾನು ಕೊಟ್ಟಿಲ್ಲ ʼʼಎಂದರು ಚಂದನ್‌. ʻʻಮಕ್ಕಳು ವಿಚಾರಕ್ಕೆ ನಾವಿಬ್ಬರೂ ದೂರ ಆಗಿದ್ದೇವೆ ಎಂಬುದು ಸುಳ್ಳು. ನಿವೇದಿತಾ ಅವರಿಗೆ ಸಿನಿಮಾದಲ್ಲಿ ಒಳ್ಳೆಯ ಕರಿಯರ್‌ ಇದೆ. ನನಗೂ ತುಂಬ ಪ್ಲ್ಯಾನ್ಸ್‌ ಇದೆ. ಈ ಎಲ್ಲ ವದಂತಿ ಸುಳ್ಳು. ಅವರು ಯಾರ ಮೇಲೆ ಡಿಪೆಂಡ್‌ ಆಗಿಲ್ಲ ಕೂಡ. ಮೂರನೇ ವ್ಯಕ್ತಿಯನ್ನು ಸಂಬಂಧಿಸಿ ಸಂಬಂಧ ಕೂಡ ಕಲ್ಪಿಸುತ್ತಿದ್ದಾರೆ. ಆದರೆ ಅವರು ನಮಗೆ ಫ್ಯಾಮಿಲಿ ತರ. ಆ ವ್ಯಕ್ತಿ ಜತೆ ಹೆಸರು ಸೇರಿಸಿದ್ದು ಸರಿಯಲ್ಲ. ಇದು ಕನ್ನಡಿಗರಿಗಾ ನಮಗೆ ಶೋಭೆ ಅಲ್ಲʼʼ ಎಂದರು.

ನಾನು ಯಾರಿಗೂ ಸ್ನೇಹಿತ ಅಲ್ಲ, ಆ ಸಂದರ್ಶನ ಸುಳ್ಳು!

ಬೇರೆ ಕಡೆ ನಾನು ಸಂದರ್ಶನ ಒಬ್ಬರು ಕೊಟ್ಟಿರುವುದು ನೋಡಿದೆ. ನಾನು ಯಾರಿಗೂ ಫ್ರೆಂಡ್‌ ಅಂದಿಲ್ಲ, ಆ ವ್ಯಕ್ತಿ ಜತೆ ನಾನು ಏನೂ ಆ ತರ ಮಾತನಾಡಿಲ್ಲ. ಈ ರೀತಿ ಅವರು ಮಾತನಾಡಿದ್ದು ಸುಳ್ಲು. ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಬೇರೆ ಅವರ ವೈಯಕ್ತಿಕ ಜೀವನ ಬಗ್ಗೆ ಯಾಕೆ ಹೀಗೆ ಮಾತನಾಡುತ್ತಿದ್ದೀರಾ ಗೊತ್ತಿಲ್ಲ. ನಾವು ಪೋಷಕರು ಜತೆ ಮಾತನಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮಿಬ್ಬರ ಮಧ್ಯೆ ಇಲ್ಲದೇ ಇರುವ ಉಹಾ ಪೋಹಾ ಬೀಜ ಬಿತ್ತಬೇಡಿ. ಇಲ್ಲಿಗೆ ಈ ವಿಚಾರ ನಿಲ್ಲಿಸಿ. ವದಂತಿಗಳಿಗೆ ಕಿವಿ ಕೊಡಬೇಡಿ. ಆದರೆ ನಾವು ಬ್ಯಾಲೆನ್ಸ್‌ ಮಾಡೋಕೆ ನೋಡಿದ್ವಿ ಆದರೆ ಆಗಿಲ್ಲʼʼಅಷ್ಟೇ ಅಂದರು.

ಬೆಂಬಲ ಇರಲಿ

ʻʻಕೊನೆದಾಗಿ ನಮಗೆ ಸಪೋರ್ಟ್‌ ಮಾಡಿದ ಫ್ಯಾನ್ಸ್‌ ಮಾಧ್ಯಮಕ್ಕೆ ಧನ್ಯವಾದ. ಇನ್ನೊಂದು ನನ್ನ ಬಗ್ಗೆ ವಿಡಿಯೊವೊಂದು ಹರಿದಾಡುತ್ತಿತ್ತು. ನಾನು ಡಿಪ್ರೆಶನ್‌ಗೆ ಹೋಗಿದ್ದೆ ಎಂದು. ಅದು 2023ರಲ್ಲಿ ಮಾಡಿದ ವಿಡಿಯೊ. ಆ ವಿಡಿಯೊ ನಾನು ಸಿನಿಮಾ ಬಗ್ಗೆ ಮಾತನಾಡಿದ್ದೆ. ಆದರೆ ಸೋಷಿಯಲ್‌ ಮೀಡಿಯಾದಲ್ಲಿ ಕೊನೆಯಲ್ಲಿ ನಾನು ಮಾತನಾಡಿದ ಮಾತುಗಳನ್ನು ಕಟ್‌ ಮಾಡಿ, ಈ ಬೇರೆ ವಿಚಾರಕ್ಕೆ ಲಿಂಕ್‌ ಮಾಡಿದ್ದಾರೆ. ಕೆಟ್ಟ ಸುದ್ದಿ ಬೇಗ ಹರಡುತ್ತೆ. ಈ ರೀತಿ ಅಪ್ರಪಚಾರ ಮಾಡಬೇಡಿ. ಸ್ವಲ್ಪ ಸಮಯ ಕೂಡ ನಾನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಿನಿಮಾಗಳು ಬರುತ್ತಿವೆ. ಹೊಸ ಸಾಂಗ್‌ಗಳು ಬರುತ್ತಿವೆ. ನಿವೇದಿತಾ ಅವರು ಕೂಡ ಹಲವು ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ಮೇಲೆ ಸಹಕಾರ ಇರಲಿʼʼಎಂದರು.

ಇನ್ನು ನಿವೇದಿತಾ ಕೂಡ ʻʻವದಂತಿಗಳು ಕೇಳಿ ಬೇಜಾರಾಯ್ತು. ಫ್ಯಾಮಿಲಿ ಎಲ್ಲರಿಗೂ ಇರತ್ತೆ, ಬೇರೆಯವರ ಇಮೋಷನ್‌ ಹರ್ಟ್‌ ಮಾಡಬೇಡಿ. ಬೇಸ್‌ಲೆಸ್‌ ಆಗಿ ಏನೇನೊ ಹೇಳಬಾರದು. ನಾವಿಬ್ಬರೂ ಒಮ್ಮತದಿಂದ ನಿರ್ಧಾರ ಮಾಡಿಯೇ ಡಿವೋರ್ಸ್‌ ಪಡೆದುಕೊಂಡಿದ್ದೇವೆ. ನಾವು ಸೆಲೆಬ್ರಿಟಿಯಾಗಿ ನಮ್ಮ ಫಾಲ್ಲೋವರ್ಸ್ ಯಾರಿಗೂ ಡಿವೋರ್ಸ್ ಕೊಡಿ ಎಂದು ಪ್ರಚೋದನೆ ಕೊಡುತ್ತಿಲ್ಲ ʼʼಎಂದರು.

ಕೊನೆಯದಾಗಿ ಚಂದನ್‌ ಮಾತನಾಡಿ ʻʻನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

Continue Reading
Advertisement
Actor Darshan
ಪ್ರಮುಖ ಸುದ್ದಿ13 mins ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ22 mins ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ23 mins ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ31 mins ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Virat Kohli
ಕ್ರೀಡೆ1 hour ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್1 hour ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ1 hour ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ1 hour ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

T20 World Cup 2024
ಕ್ರಿಕೆಟ್2 hours ago

T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Narenda Modi
Lok Sabha Election 20242 hours ago

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌