Site icon Vistara News

Dwarakish Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ದ್ವಾರಕೀಶ್!

Dwarakish Birthday celebration with Ba Ma Harish Team

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ (Actor Dwarakish) ಅವರಿಗೆ ಆಗಸ್ಟ್‌ 19 ಜನುಮದಿನ ಸಂಭ್ರಮ. ಇದೀಗ ನಟ 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್ (ba ma harish) ಹಾಗೂ ತಂಡ ನಟ ದ್ವಾರಕೀಶ್ ಅವರನ್ನು ಗೌರವಿಸಿ ಕೇಕ್ ಕಟ್ (Dwarakish Birthday) ಮಾಡಿ ಸಂಭ್ರಮಾಚರಣೆ ಮಾಡಿದೆ. ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ (Bungle Shama Rao Dwarakanath) ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು. ‘ದ್ವಾರಕೀಶ್​ ಚಿತ್ರ’ ನಿರ್ಮಾಣ (Dwarakish Chitra) ಸಂಸ್ಥೆ ಮೂಲಕ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿದ್ದಾರೆ. 

ನಟ ದ್ವಾರಕೀಶ್‌ 2019ರಲ್ಲಿ ತೆರೆಕಂಡ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌ ಅಭಿನಯದ ‘ಆಯುಷ್ಮಾನ್‌ ಭವ’ ಚಿತ್ರವನ್ನು ಕೊನೆಯದಾಗಿ ನಿರ್ಮಾಣ ಮಾಡಿದ್ದರು. ಇತ್ತೀಚಿಗೆ ಚಿತ್ರರಂಗದಿ೦ದ ದೂರ ಉಳಿದಿದ್ದಾರೆ. ದ್ವಾರಕೀಶ್‌ ಹುಟ್ಟುಹಬ್ಬಕ್ಕೆ ಹಿರಿಯ ಕಲಾವಿದರು ಸೇರಿದಂತೆ ಹಲವಾರು ನಟ – ನಟಿಯರು ಸಾಮಾಜಿಕ ಜಾಲತಾಣದಲ್ಲಿ ವಿಶ್‌ ಮಾಡಿದ್ದಾರೆ.

ಮಮತೆಯ ಬಂಧನ(Mamatheya Bandhana), ಮೇಯರ್ ಮುತ್ತಣ್ಣ (Mayor Muthanna), ಭಾಗ್ಯವಂತರು ,ಕಿಟ್ಟು ಪುಟ್ಟು,ಕುಳ್ಳ ಕುಳ್ಳಿ (Kulla Kulli),ಗುರು ಶಿಷ್ಯರು, ಪ್ರಚಂಡ ಕುಳ್ಳ ಸೇರಿದಂತೆ ಅನೇಕ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿದ್ದಾರೆ. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು.1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು.

ಇದನ್ನೂ ಓದಿ: Actor Dwarakish: ಹಿರಿಯ ನಟ ದ್ವಾರಕೀಶ್‌ ಸಾವಿನ ಬಗ್ಗೆ ಅಪಪ್ರಚಾರ: ಸ್ಪಷ್ಟನೆ ಕೊಟ್ಟ ನಟ

ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು.ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ದ್ವಾರಕೀಶ್ ‘ದ್ವಾರಕೀಶ್ ಚಿತ್ರ’ ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.

Exit mobile version