Site icon Vistara News

ಎಡಗೈಯೇ ಅಪಘಾತಕ್ಕೆ ಕಾರಣ| ದಿಗಂತ್ ನಟನೆಯ ಹೊಸ ಚಿತ್ರದ ಚಿತ್ರೀಕರಣ ಇಂದಿನಿಂದ ಶುರು

ದೂದ್ ಪೇಡ ದಿಗಂತ್

ಬೆಂಗಳೂರು: ಗಾಳಿಪಟ-2 ಭರ್ಜರಿ ಯಶಸ್ಸಿನ ಬಳಿಕ ದೂದ್ ಪೇಡ ದಿಗಂತ್ ‘ಎಡಗೈಯೇ ಅಪಘಾತಕ್ಕೆ ಕಾರಣʼ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರ್ಲ್ಡ್‌ ಲೆಫ್ಟ್‌ ಹ್ಯಾಂಡ್‌ ಡೇ ನಿಮಿತ್ತ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿದ್ದ ಚಿತ್ರತಂಡ ಶುಕ್ರವಾರ (ಸೆ.9) ಬೆಂಗಳೂರಿನ ವರಸಿದ್ಧಿ ವಿನಾಯಕ ದೇಗುಲದಲ್ಲಿ ಮುಹೂರ್ತ ನೆರವೇರಿಸಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಾಮಿಡಿ ಆಗಿರುವ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ಧನು ಹರ್ಷ ಅವರು ದಿಗಂತ್‌ಗೆ ಜೋಡಿಯಾಗಿ ನಟಿಸುತ್ತಿದ್ದು, ರಾಧಿಕಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ʻಎಡಗೈ’ ಆಧಾರಿತ ಪರಿಕಲ್ಪನೆಯ ಸಿನಿಮಾವಾಗಿರುವುದರಿಂದ ಈ ಪಾತ್ರ ತಮಗೆ ವಿಶೇಷವಾಗಿದ್ದು, ಡಿಫರೆಂಟ್ ಶೇಡ್‌ನಲ್ಲಿ ಕಾಣಿಸಿಕೊಳ್ಳುವುದಾಗಿ ಧನು ಹರ್ಷ ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ | ಎಡಗೈಯೇ ಅಪಘಾತಕ್ಕೆ ಕಾರಣ | ದೂದ್‌ ಪೇಡ ದಿಗಂತ್‌ಗೆ ಜೋಡಿಯಾದ ಯುವ ನಟಿ ಧನು ಹರ್ಷ

ಈ ಮೊದಲು ದಿಗಂತ್ ಫಸ್ಟ್ ಲುಕ್‌ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ನಾಯಕಿ ಪರಿಚಯದ ಟೀಸರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿತ್ತು. ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲವಾಗಿ ಮಾಡಲಾಗಿರುತ್ತದೆ. ಆದರೆ ಎಡಗೈ ಬಳಕೆದಾರರ ಸಂಖ್ಯೆ ಬಹಳ ಕಡಿಮೆ ಇದೆ. ಇದರಿಂದ ಅವರಿಗೆ ಒಂದಷ್ಟು ತೊಂದರೆಗಳೂ ಆಗುತ್ತಿವೆ. ಅದರ ಬಗೆಗಿನ ಕಥೆ ಇದಾಗಿದ್ದು, ಶೀಘ್ರದಲ್ಲಿ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಚಿತ್ರತಂಡ ಹೇಳಿಕೊಂಡಿದೆ.

ಇಂದಿನಿಂದ ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Movies | ಸೆಪ್ಟೆಂಬರ್‌ನಲ್ಲಿ ತೆರೆಗೆ ಸಾಲು ಸಾಲು ಸಿನಿಮಾ: ನಿಮಗಿಷ್ಟದ ಚಿತ್ರ ಇದೆಯೇ?

Exit mobile version