Satish Kaushik: ಸ್ನೇಹಿತ ಸತೀಶ್ ಕೌಶಿಕ್ ನೆನೆದು ಭಾವುಕರಾದ ಅನಿಲ್‌ ಕಪೂರ್‌, ಅನುಪಮ್ ಖೇರ್; ವಿಡಿಯೊ ವೈರಲ್‌! - Vistara News

South Cinema

Satish Kaushik: ಸ್ನೇಹಿತ ಸತೀಶ್ ಕೌಶಿಕ್ ನೆನೆದು ಭಾವುಕರಾದ ಅನಿಲ್‌ ಕಪೂರ್‌, ಅನುಪಮ್ ಖೇರ್; ವಿಡಿಯೊ ವೈರಲ್‌!

ಅನುಪಮ್‌ ಖೇರ್‌ ವಿಡಿಯೊ ಶೇರ್‌ ಮಾಡಿಕೊಂಡಿದ್ದು, ಕೊನೆಯ ದಿನಗಳಲ್ಲಿ ತಮ್ಮ ಸ್ನೇಹಿತ ಸತೀಶ್ ಕೌಶಿಕ್ (Satish Kaushik)ಅವರೊಂದಿಗೆ ಸಂಭಾಷಣೆ ಕುರಿತು ವೇದಿಕೆಯಲ್ಲಿ ಮಾತನಾಡಿದರು. ಈ ವೇಳೆ ವೇದಿಕೆಗೆ ಅನಿಲ್‌ ಕಪೂರ್‌ ಅವರನ್ನು ಅನುಪಮ್‌ ಖೇರ್‌ ಕರೆಯುತ್ತಿದ್ದಂತೆ ಅನಿಲ್‌ ಕಪೂರ್‌ ಭಾವುಕರಾಗಿ, ಕಣ್ಣೀರು ಹಾಕಿದ್ದಾರೆ.

VISTARANEWS.COM


on

Emotional Anil Kapoor at Satish Kaushik's memorial
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನುಪಮ್ ಖೇರ್ ಅವರು ತಮ್ಮ ದಿವಂಗತ ಸ್ನೇಹಿತ ಸತೀಶ್ ಕೌಶಿಕ್ (Satish Kaushik) ಅವರ ಜನ್ಮದಿನದ ವಾರ್ಷಿಕೋತ್ಸವದಂದು ಅವರ ನೆನಪಿಗಾಗಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಅನಿಲ್ ಕಪೂರ್ ಸೇರಿದಂತೆ ಹಲವಾರು ತಾರೆಗಳು ಮತ್ತು ಸಿನಿಮಾದ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು. ಈವೆಂಟ್‌ನ ವಿಡಿಯೊವನ್ನು ಅನುಪಮ್ ಖೇರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಅನುಪಮ್‌ ಖೇರ್‌ ವಿಡಿಯೊ ಶೇರ್‌ ಮಾಡಿಕೊಂಡಿದ್ದು, ಕೊನೆಯ ದಿನಗಳಲ್ಲಿ ತಮ್ಮ ಸ್ನೇಹಿತ ಸತೀಶ್ ಕೌಶಿಕ್ ಅವರೊಂದಿಗೆ ಸಂಭಾಷಣೆ ಕುರಿತು ವೇದಿಕೆಯಲ್ಲಿ ಮಾತನಾಡಿದರು. ಈ ವೇಳೆ ವೇದಿಕೆಗೆ ಅನಿಲ್‌ ಕಪೂರ್‌ ಅವರನ್ನು ಅನುಪಮ್‌ ಖೇರ್‌ ಕರೆಯುತ್ತಿದ್ದಂತೆ ಅನಿಲ್‌ ಕಪೂರ್‌ ಭಾವುಕರಾಗಿ, ಕಣ್ಣೀರು ಹಾಕಿದ್ದಾರೆ. ವೇದಿಕೆಗೆ ಬರಲು ನಿರಾಕರಿಸಿದ್ದಾರೆ. ಅವರನ್ನು ನೋಡಿ ಅನುಪಮ್ ಕೂಡ ಭಾವುಕರಾದರು.

ಅನಿಲ್‌ ಕಪೂರ್‌ ಅಳುತ್ತಿದ್ದಂತೆ ಅನಪಮ್‌ ಖೇರ್‌ ವೇದಿಕೆ ಮೇಲಿಂದ ʻʻಬಾ ಅನಿಲ್‌. ಹಿರೋಗಳು ಯಾವಾಗಲೂ ಅಳುತ್ತಾರೆ, ಸ್ನೇಹಿತರೂ ಕೂಡʼʼ ಎಂದು ಅನುಪಮ್ ಅವರಿಗೆ ವೇದಿಕೆಗೆ ಬರುವಂತೆ ಹೇಳಿದರು.

ಸತೀಶ್ ಕೌಶಿಕ್ ಅವರ ಅದ್ಭುತ ಜೀವನವನ್ನು ಆಚರಿಸಲು ಅವರ ನೆನಪಿಗೆ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈವೆಂಟ್‌ನಲ್ಲಿ ಅನುಪಮ್ ಖೇರ್ ಅವರು ಸಹ ಸ್ನೇಹಿತನ ಮೊದಲ ಅನಿಸಿಕೆ ಮತ್ತು ನಂತರ ಅವರನ್ನು ಮುಂಬೈನಲ್ಲಿ ಭೇಟಿಯಾದ ಬಗ್ಗೆ ಪ್ರಸ್ತಾಪಿಸಿದರು. ನಟನೊಂದಿಗಿನ ಬಾಂಧವ್ಯ, ಇಬ್ಬರೂ 48 ವರ್ಷಗಳನ್ನು ಒಟ್ಟಿಗೆ ಕಳೆದರ ಬಗ್ಗೆ ವಿವರಿಸಿದರು.

ಇದನ್ನೂ ಓದಿ: Satish Kaushik: ಸತೀಶ್ ಕೌಶಿಕ್ ನಿಧನದ ಮುಂಚೆ ಫಾರ್ಮ್‌ ಹೌಸ್‌ನಲ್ಲಿ ಔಷಧ ಪತ್ತೆ: ತನಿಖೆ ಕೈಗೊಂಡ ಪೊಲೀಸರು

ಅನಿಲ್‌ ಕಪೂರ್‌ ಭಾವುಕರಾದ ಕ್ಷಣ

ಮಾಧ್ಯಮದೊಂದಿಗೆ ಮಾತನಾಡಿದ ಅನುಪಮ್ ಖೇರ್, “ಯಾರೊಬ್ಬರ ಸಾವಿನ ಬಗ್ಗೆ ಶೋಕಿಸುವುದಕ್ಕಿಂತ, ನಾವು ಅವರ ಜೀವನವನ್ನು ಆಚರಿಸಬೇಕು. ಸುಮಾರು 11 ವರ್ಷಗಳ ಹಿಂದೆ, ನನ್ನ ತಂದೆ ನಿಧನರಾದರು. ನನ್ನ ತಂದೆ ತಾಯಿಗೆ ಮದುವೆಯಾಗಿ 59 ವರ್ಷಗಳಾಗಿವೆ. ನಂತರ ನಾನು ನನ್ನ ತಂದೆಯ ಜೀವನವನ್ನು ಆಚರಿಸಲು ಶುರು ಮಾಡಿದೆ. ಇದರಿಂದ ನನ್ನ ತಾಯಿ ತನ್ನ ಉಳಿದ ಜೀವನವನ್ನು ಸಂತೋಷದಿಂದ ಕಳೆಯಬಹುದು. ಅದರಂತೆ ಇದು ಕೂಡ. ಸತೀಶ್ ಮತ್ತು ನಾನು ಸುಮಾರು 48 ವರ್ಷಗಳಿಂದ ಸ್ನೇಹಿತರಾಗಿದ್ದೇವೆ ಮತ್ತು ಮುಂದೆಯೂ ಇರುತ್ತೇವೆʼʼಎಂದು ಹೇಳಿಕೊಂಡರು. ಸತೀಶ್ ಕೌಶಿಕ್ ಮಾರ್ಚ್ 8ರಂದು ನವದೆಹಲಿಯಲ್ಲಿ ಹೃದಯ ಸ್ತಂಭನದಿಂದ ನಿಧನರಾದರು. ಅನುಪಮ್ ಖೇರ್ ಅವರ ನಿಧನದ ಸುದ್ದಿಯನ್ನು ಮೊದಲು ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದರು.

1965ರ ಏಪ್ರಿಲ್‌ 13ರಂದು ಹರ್ಯಾಣದಲ್ಲಿ ಜನಿಸಿದ ಸತೀಶ್‌ ಕೌಶಿಕ್‌, ಬಾಲಿವುಡ್‌ನ ಖ್ಯಾತ ನಟ, ಕಾಮೆಡಿಯನ್‌, ನಿರ್ದೇಶಕ ಹಾಗೂ ನಿರ್ಮಾಪಕ ಕೂಡ. ಬಾಲಿವುಡ್‌ಗೆ ಆಗಮಿಸುವ ಮುನ್ನ ಅವರು ಹಲವಾರು ನಾಟಕಗಳಲ್ಲಿ ನಟಿಸಿದ್ದರು. ಮಿ.ಇಂಡಿಯಾ ಫಿಲಂನ ಕಲಂದರ್‌, ದೀವಾನಾ ಮಸ್ತಾನಾದ ಪಪ್ಪು ಪೇಗರ್‌, ಬ್ರಿಕ್‌ ಲೇನ್‌ನ ಚಾನು ಅಹ್ಮದ್‌ ಮುಂತಾದ ಪಾತ್ರಗಳಲ್ಲಿ ಅವರು ನಟಿಸಿದ್ದರು. 1990ರ ರಾಮ್‌ ಲಖನ್‌ ಹಾಗೂ 1997ರ ಸಾಜನ್‌ ಚಲೇ ಸಸುರಾಲ್‌ ಸಿನಿಮಾಗಳಲ್ಲಿನ ನಟನೆಗಳಿಗೆ ಫಿಲಂಫೇರ್‌ ಅತ್ಯುತ್ತಮ ಹಾಸ್ಯನಟ ಪ್ರಶಸ್ತಿಯನ್ನೂ ಪಡೆದಿದ್ದರು. ಅವರಿಗೆ ಪತ್ನಿ ಹಾಗೂ ಮಗಳು ಇದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

 L2 Empuraan: ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು.

VISTARANEWS.COM


on

L2 Empuraan first look poster shared by Prithviraj Sukumaran
Koo

ಬೆಂಗಳೂರು: ಇಂದು ಮಾಲಿವುಡ್‌ ಸ್ಟಾರ್‌ ಮೋಹನ್‌ಲಾಲ್ (Mohanlal as Khureshi Abraam ) ಅವರ 64ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಟ ಪೃಥ್ವಿರಾಜ್ ಸುಕುಮಾರನ್ ʻL2 ಎಂಪುರಾನ್‌ʼ (L2 Empuraan) ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೃಥ್ವಿರಾಜ್ ಅವರ ನಿರ್ದೇಶನದಲ್ಲಿ, ಮೋಹನ್‌ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ 2019ರ ಬ್ಲಾಕ್‌ಬಸ್ಟರ್ ಚಲನಚಿತ್ರ ʻಲೂಸಿಫರ್‌ʼನ ಮುಂದುವರಿದ ಭಾಗವಾಗಿದೆ.

ʻL2 ಎಂಪುರಾನ್‌ʼಗಾಗಿ ಮೋಹನ್‌ಲಾಲ್‌ನ ಜಾಕೆಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಭದ್ರತಾ ಸಿಬ್ಬಂದಿಗಳ ನಡುವೆ ಖಡಕ್‌ ಆಗಿ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್‌ ಇದು. ಲೂಸಿಫರ್ ಪೃಥ್ವಿರಾಜ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಅದಾದ ಬಳಿಕ ʻಬ್ರೋ ಡ್ಯಾಡಿʼ ಸಿನಿಮಾವನ್ನು ಒಟ್ಟಿಗೆ ಮಾಡಿದ್ದರು. ಮತ್ತೆ ಈ ಜೋಡಿ L2E-ಎಂಪುರಾನ್‌ ಮೂಲಕ ಒಂದಾಗಿದೆ.

ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು. ಮೋಹನ್‌ಲಾಲ್ ಅವರಲ್ಲದೆ, ಚಿತ್ರದಲ್ಲಿ ವಿವೇಕ್ ಒಬೆರಾಯ್, ಮಂಜು ವಾರಿಯರ್, ಟೊವಿನೋ ಥಾಮಸ್, ಪೃಥ್ವಿರಾಜ್ ಸುಕುಮಾರನ್, ಇಂದ್ರಜಿತ್ ಸುಕುಮಾರನ್, ಸಾನಿಯಾ ಐಯಪ್ಪನ್, ಸಾಯಿ ಕುಮಾರ್, ಜಾನ್ ವಿಜಯ್, ಸಚಿನ್ ಖೇಡೇಕರ್, ಬೈಜು ಸಂತೋಷ್, ಕಲಾಭವನ್ ಶಾಜೋನ್, ಫಾಜಿಲ್, ಸುರೇಶ್ ಚಂದ್ರ ಮೆನನ್ ಮತ್ತು ನೈಲಾ ಉಷಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೋಹನ್ ಲಾಲ್ ಕೊನೆಯದಾಗಿ ಕಾಣಿಸಿಕೊಂಡದ್ದು ಫ್ಯಾಂಟಸಿ ನಾಟಕ ಮಲೈಕೊಟ್ಟೈ ವಾಲಿಬನ್ (2024), ಇದನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಕಾಲಿವುಡ್

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Actress Nayanthara: ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ ನಯನತಾರಾ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು. ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Actress Nayanthara twin sons on auto ride
Koo

ಬೆಂಗಳೂರು: ನಯನತಾರಾ (Actress Nayanthara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗ್ ಅವರನ್ನು ಚೆನ್ನೈನಲ್ಲಿ ಆಟೋ ಸವಾರಿ ಮಾಡಿಸಿದ್ದಾರೆ. ಮೇ 20ರಂದು ‘ನಯನತಾರಾ’ ವೀಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼ ಎಂದು ಹೇಳಿಕೊಂಡಿದ್ದರು. ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇದನ್ನೂ ಓದಿ: Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಯನತಾರಾ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

Actor Upendra: ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಪ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.

VISTARANEWS.COM


on

Actor Upendra Ajaneesh Visited Hangary To Record Music
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ (Actor Upendra) ಅವರ ‘ಯುಐ’ ಸಿನಿಮಾ ಚಿತ್ರೀಕರಣ ಮುಗಿದು ಇದೀಗ ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷವಷ್ಟೇ ‘UI’ ಸಿನಿಮಾವನ್ನು ಅನೌನ್ಸ್ ಮಾಡುವುದಾಗಿ ಘೋಷಿಸಿದ್ದರು. ಇದೂವರೆಗೂ ಉಪ್ಪಿ ನಿರ್ದೇಶಿಸಿದ ಸಿನಿಮಾಗಳಲ್ಲೇ ಹೆಚ್ಚಿನ ಬಜೆಟ್‌ ಸಿನಿಮಾದಾಗಿದೆ. ಇದೀಗ ಈ ಸಿನಿಮಾ ಬಜೆಟ್ ಸುಮಾರು 100 ಕೋಟಿ ರೂ. ಎಂದು ವರದಿಗಳಾಗಿವೆ. ಇದೀಗ ನಿರ್ದೇಶಕ ಉಪೇಂದ್ರ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಯೂರೋಪಿಯಾ ದೇಶವಾದ ಹಂಗೆರಿಗೆ ಹೋಗಿದ್ದಾರೆ.ಅಜನೀಶ್ ಲೋಕನಾಥ್ ಲೈವ್ ಮ್ಯೂಸಿಕ್ ರೆಕಾರ್ಡ್ ಮಾಡಲು ಹಂಗೆರಿಯನ್ನು ಆರಿಸಿಕೊಂಡಿದ್ದಾರೆ.

ತಮ್ಮ ಸಿನಿಮಾದ ಹಾಡುಗಳಿಗೆ ಉಪೇಂದ್ರ ಅವರೇ ಸಾಹಿತ್ಯವನ್ನು ಬರೆಯುತ್ತಾರೆ. ಹಾಗಾಗಿ ಸಂಗೀತ ನಿರ್ದೇಶಕರ ಜೊತೆಗೆ ಉಪ್ಪಿ ಸಹ ಹಂಗೆರಿಗೆ ತೆರಳಿದ್ದಾರೆ. ಅಲ್ಲದೆ ಅಲ್ಲಿ ಸಿನಿಮಾದ ಇನ್ನಿತರೆ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳನ್ನು ಸಹ ಮಾಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ‘ಎ’ ಸಂಗೀತದೊಂದಿಗೆ ಆರಂಭವಾಗುವ ವಿಡಿಯೊನಲ್ಲಿ ಉಪ್ಪಿ ಹಾಗೂ ಅಜನೀಶ್ ಲೋಕನಾಥ್ ಹಂಗೆರಿಯ ನಗರವೊಂದರಲ್ಲಿ ನಿಂತು ಚರ್ಚೆ ಮಾಡುತ್ತಿರುವ ದೃಶ್ಯಗಳಿವೆ.

ಇದನ್ನೂ ಓದಿ: Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿರುವ ಉಪ್ಪಿ, ಜತೆಗೆ ಈ ಚಿತ್ರದಲ್ಲಿ ಯುವ ತಂತ್ರಜ್ಞರು‌ ಕೆಲಸ ಮಾಡುತ್ತಿದ್ದಾರೆ. ಉಪ್ಪಿ ಕ್ಯಾಪ್‌ ಹಾಕಿ, ಮೈಕ್‌ ಹಿಡಿದು ನಿರ್ದೇಶನಕ್ಕೆ ಇಳಿದಿದ್ದು, ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಇತಿಹಾಸ ಮರುಕಳಿಸಲಿದೆಯಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ.

ʻತರ್ಲೆ ನನ್ಮಗʼ, ʻಆಪರೇಷನ್ ಅಂತʼ, ʻಶ್ʼ..!, ʻಓಂʼ, ʻಉಪ್ಪಿ-2ʼ, ʻಸೂಪರ್ʼ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ʻಉಪ್ಪಿ 2ʼ ನಂತರ ಬುದ್ಧಿವಂತನ ನಿರ್ದೇಶನದಲ್ಲಿ ಯಾವ ಸಿನಿಮಾ ಕೂಡ ತೆರೆಗೆ ಬರಲಿಲ್ಲ.

ಈ ಸಿನಿಮಾದಲ್ಲಿ 3ಡಿ ಬಾಡಿ ಸ್ಕ್ಯಾನ್ ಬಳಸಿದ್ದಾರೆ. ಸುಮಾರು 200 ಕ್ಯಾಮೆರಾಗಳನ್ನು ಬಳಸಿ ಶೂಟ್ ಮಾಡಲಾಗಿದ್ದು, ಈ ತಂತ್ರಜ್ಞಾನ ಬಳಸಿದ್ದು ಏಪ್ಯಾದಲ್ಲಿಯೇ ಮೊದಲ ಸಿನಿಮಾ ಎನ್ನಲಾಗಿದೆ. ʻಅವತಾರ್ 2′ ಸಿನಿಮಾಗೆ ಈ ತಂತ್ರಜ್ಞಾನವನ್ನು ಬಳಸಲಾಗಿತ್ತು. ಇಷ್ಟೇ ಅಲ್ಲದೆ ಸುಮಾರು 14 ಸಾವಿರ ವಿಎಫ್‌ಎಕ್ಸ್ ಶಾಟ್ಸ್ ಬಳಸಲಾಗಿದೆ.

ಸದ್ಯ ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ದುಬಾರಿ ಸಿನಿಮಾಗಳಲ್ಲಿ ‘UI’ ಕೂಡ ಒಂದು. ತನ್ನ ಕನಸನ್ನು ಸಿನಿಪ್ರಿಯರು ಒಟಿಟಿಯಲ್ಲಿ ಅಲ್ಲದೆ ಥಿಯೇಟರ್‌ನಲ್ಲೇ ಸಿನಿಮಾ ನೋಡಬೇಕು ಅಂತ ಉಪ್ಪಿ ಆಸೆ ಪಟ್ಟು ಅದ್ಧೂರಿಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಎಡಿಟಿಂಗ್ ಹಂತದಲ್ಲಿದ್ದು, ಮುಂದಿನ ತಿಂಗಳಿಂದ ಪ್ರಚಾರ ಶುರು ಮಾಡುವ ಸಾಧ್ಯತೆಯಿದೆ.ಟಗರು, ಸಲಗ ಖ್ಯಾತಿಯ ಕೆ.ಪಿ. ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯವರು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: `ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರಿಂದ ಬರ್ತಿದೆ ಮತ್ತೊಂದು ಅದ್ಧೂರಿ ಚಿತ್ರ!

Kannada New Movie: ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

VISTARANEWS.COM


on

Kannada New Movie sanju weds geetha another movie came
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ “ಸಂಜು ವೆಡ್ಸ್ ಗೀತಾ“, ” ಹಾಗೆ ಸುಮ್ಮನೆ” ಚಿತ್ರಗಳ ನಿರ್ಮಾಪಕರಾದ (Kannada New Movie) ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ. “ಕವಲುದಾರಿ”, “ಆಪರೇಷನ್ ಅಲುಮೇಲಮ್ಮ” ಚಿತ್ರಗಳ ಮೂಲಕ ಜನಪ್ರಿಯರಾಗಿ ತಮ್ಮದೇ ಆದ ಅಭಿಮಾನಿ ವಲಯ ಹೊಂದಿರುವ ರಿಷಿ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ ಮತ್ತು ಕೆ.ಸಿ.ಶಿವಾನಂದ್ ಈ ನೂತನ ಚಿತ್ರದ ಸಹ ನಿರ್ಮಾಪಕರು.

ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೇ ಆಗಿರುವ ಕಿಶೋರ್ ಭಾರ್ಗವ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಡಿಸ್ನಿ ಹಾಟ್‌ಸ್ಟಾರ್‌ ನಿರ್ಮಾಣದ “ಸೈತಾನ್” ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಹೆಸರು ಮಾಡಿದ್ದಾರೆ. ತಮಿಳುನಾಡಿನಲ್ಲೂ ರಿಷಿ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುತ್ತಾರೆ ನಿರ್ಮಾಪಕ ಪ್ರಮೋದ್ ನಾರಾಯಣ್.

ಈಗಾಗಲೇ ರಿಷಿ ನಟನೆಯ ʻರಾಮನ ಅವತಾರ ಸಿನಿಮಾ ಎರಡನೇ ವಾರ ಚಿತ್ರಮಂದಿರದಲ್ಲಿ ಓಡುತ್ತಿದೆ. ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

ʻಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ.

Continue Reading
Advertisement
Prashant Kishor
ದೇಶ8 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ8 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Kempegowda International Airport parking
ಬೆಂಗಳೂರು24 mins ago

Kempegowda International Airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಹಣ ಕೊಡಬೇಕು!

Abhijit Gangopadhyay
ದೇಶ30 mins ago

Abhijit Gangopadhyay: ದೀದಿ ವಿರುದ್ಧ ಮಾಜಿ ಜಡ್ಜ್‌ ಅವಹೇಳನಕಾರಿ ಹೇಳಿಕೆ; 24 ಗಂಟೆಗಳ ಕಾಲ ಚುನಾವಣಾ ಪ್ರಚಾರಕ್ಕೆ ತಡೆ

2nd Puc Result
ಬೆಂಗಳೂರು45 mins ago

2nd PUC Result : ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ; ಫಲಿತಾಂಶವನ್ನು ಮೊಬೈಲ್‌ನಲ್ಲೇ ನೋಡಿ

L2 Empuraan first look poster shared by Prithviraj Sukumaran
South Cinema55 mins ago

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

Shane Watson Apologize
ಕ್ರಿಕೆಟ್1 hour ago

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Viral Video
ವೈರಲ್ ನ್ಯೂಸ್1 hour ago

Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

DK Shivakumar speaks about KPCC president post
ಬೆಂಗಳೂರು1 hour ago

‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

Chitta Ranjan Dash
ದೇಶ2 hours ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌