ಸಿನಿಮಾ
Window Seat Trailer: ಭೂಮಿನೂ ರೌಂಡು, ಕಾಲಾನೂ ರೌಂಡು, ಎಲ್ಲೇ ಸುತ್ತಿದ್ರೂ ಇನ್ನೆಲ್ಲಿಗೆ ಬರ್ಬೇಕು?!
ನಿರೂಪಕಿ ಶೀತಲ್ ಶೆಟ್ಟಿಯವರ ಚೊಚ್ಚಲ ಸಿನಿಮಾ ವಿಂಡೋ ಸೀಟ್ನ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಹೇಗಿದೆ, ಇದನ್ನು ವೀಕ್ಷಿಸಿದವರು ಏನೆನ್ನುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿದೆ
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಶೀತಲ್ ಶೆಟ್ಟಿ ನಿರ್ದೇಶನದ ಸಿನಿಮಾ ʼವಿಂಡೋ ಸೀಟ್ʼನ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ ಮಾಡಲಾಗಿದೆ.
ನಿರೂಪಕಿಯಾಗಿ ಹೆಸರು ಮಾಡಿರುವ ಶೀತಲ್ ಶೆಟ್ಟಿಯವರ ಚೊಚ್ಚಲ ಚಿತ್ರ ಇದಾಗಿದ್ದು, ಈ ಟ್ರೇಲಗ್ಗೆ ಅವರೇ ಹಿನ್ನಲೆ ಧ್ವನಿ ನೀಡಿರುವುದು ವಿಶೇಷವಾಗಿದೆ. ಟ್ರೇಲರ್ನ ಬ್ಯಾಕ್ಗ್ರೌಂಡ್ ಮ್ಯೂಸಿಕ್ ಪಾಶ್ಚಿಮಾತ್ಯ ಸಂಗೀತ ಶೈಲಿಯಲ್ಲಿದ್ದು, ಇದು ಸ್ಯಾಂಡಲ್ವುಡ್ನ ಹೊಸ ಪ್ರಯತ್ನ ಎಂದು ಈ ಟ್ರೇಲರ್ ವೀಕ್ಷಿಸಿದವರು ಕಾಮೆಂಟ್ ಬಾಕ್ಸ್ನಲ್ಲಿ ಅಭಿಪ್ರಾಯ ಬರೆದಿದ್ದಾರೆ.
ಈ ಟ್ರೇಲರ್ ಮಳೆಯ ದೃಶ್ಯದೊಂದಿಗೆ ಆರಂಭವಾಗಲಿದ್ದು, ಅಲ್ಲಲ್ಲಿ ಕೇಳಿ ಬರುವ ಸಂಭಾಷಣೆಗಳು ಸಿನಿಮಾದ ಬಗ್ಗೆ ಕುತೂಹಲ ಮೂಡಿಸುತ್ತವೆ. ನಿರೂಪ್ ಭಂಡಾರಿ ಈ ಸಿನಿಮಾದ ನಾಯಕನಾಗಿದ್ದು, ಟ್ರೇಲರ್ನಲ್ಲಿ ಕಾಣಿಸಿಕೊಳ್ಳುವ ಅವರು ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ | Vikrant Rona Movie: ‘ರಾ ರಾ ರಕ್ಕಮ್ಮ’ ಸಾಂಗ್ ರಿಲೀಸ್
ಕುತೂಹಲಕಾರಿ ಕತೆಯನ್ನು ಹೊಂದಿರುವ ಈ ಸಿನಿಮಾದಲ್ಲಿ ನಾಯಕ ನಿರೂಪ್ ಭಂಡಾರಿ ಮಾತ್ರವಲ್ಲದೆ, ಸಂಜನಾ ಆನಂದ್, ಬಡವ ರಾಸ್ಕಲ್ ಖ್ಯಾತಿಯ ಅಮೃತ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸೂರಜ್, ರವಿಶಂಕರ್, ಮಧುಸೂಧನ್ ರಾವ್ ಸೇರಿದಂತೆ ಹಲವು ಕಲಾವಿದರ ದಂಡು ಚಿತ್ರದಲ್ಲಿದೆ. ʼಕೆಎಸ್ ಕೆ ಶೋ ರೀಲ್ʼ ಬ್ಯಾನರ್ ನಡಿ ಮೂಡಿಬರುತ್ತಿರುವ ಈ ಚಿತ್ರವನ್ನು ಜಾಕ್ ಮಂಜಿ ನಿರ್ಮಿಸಿದ್ದಾರೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ವೀರೇಶ್ ಶಿವಮೂರ್ತಿ ಅವರ ಸಂಭಾಷಣೆ ಚಿತ್ರಕ್ಕಿದೆ. ಜುಲೈ 1 ರಂದು ಚಿತ್ರ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಹಿಂದೆ ಚಿತ್ರತಂಡ ಲೆರಿಕಲ್ ವಿಡಿಯೋ ರಿಲೀಸ್ ಮಾಡಿದ್ದು, ಇದಕ್ಕೆ ವೀಕ್ಷಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ನಿರೂಪ್ ಮತ್ತೆ ಕಮ್ಬ್ಯಾಕ್
ರಂಗಿತರಂಗ, ರಾಜರತ್ನ, ಅಮರ್ ಹಾಗೂ ಆದಿ ಲಕ್ಷ್ಮೀ ಪುರಾಣ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ನಿರೂಪ್ ಈ ಚಿತ್ರದ ಮೂಲಕ ಬಹಳ ದಿನಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ರಂಗೀ ತರಂಗ ಅವರಿಗೆ ಬಹಳ ಹೆಸರು ತಂದುಕೊಟ್ಟಿತ್ತು. ನಿರೂಪ್ ಸದ್ಯ ವಿಕ್ರಾಂತ್ ರೋಣಾ ಎಂಬ ಮತ್ತೊಂದು ಚಿತ್ರದಲ್ಲಿಯೂ ಅಭಿನಯಿಸುತ್ತಿದ್ದಾರೆ.
ವಿಕ್ರಾಂತ್ ರೋಣ ಚಿತ್ರತಂಡ ಇತ್ತೀಚೆಗೆ ನಿರೂಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ, ಪಾತ್ರದ ಹೆಸರು ರಿವೀಲ್ ಮಾಡಿತ್ತು. ಸಂಜಯ್ ಗಾಂಭೀರ್ ಎಂಬುದು ಪಾತ್ರದ ಹೆಸರಾಗಿದ್ದು, ನಿರೂಪ್ ಈ ಚಿತ್ರದಲ್ಲಿ ಬೇಟೆಗಾರನಾಗಿರುವ ಸುಳಿವು ಸಿಕ್ಕಿತ್ತು.
ಇದನ್ನೂ ಓದಿ | ಕಿಚ್ಚ ಸುದೀಪ್ V/S ಅಜಯ್ ದೇವಗನ್: ʼThank Godʼ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ, ವಿಕ್ರಾಂತ್ ರೋಣ ಫಿಕ್ಸ್
ಕ್ರಿಕೆಟ್
ಸೋಶಿಯಲ್ ಮೀಡಿಯಾಗಳಲ್ಲಿ ಪರಸ್ಪರ ಅನ್ಫಾಲೊ ಮಾಡಿಕೊಂಡ ಶುಭ್ಮನ್, ಸಾರಾ! ಏನಾಯಿತು ಅವರಿಗೆ?
ಶುಭ್ಮನ್ ಮತ್ತು ಸಾರಾ ಅಲಿ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅನ್ಫಾಲೊ ಮಾಡುವ ಮೂಲಕ ಬೇರ್ಪಟ್ಟಿದ್ದಾರೆ ಎಂಬುದಾಗಿ ವರದಿಗಳು ಹೇಳಿವೆ.
ಮುಂಬಯಿ: ಶುಭ್ಮನ್ ಗಿಲ್ ಹಾಗೂ ಸಾರಾ ಅಲಿ ಖಾನ್ ನಡುವಿನ ಹೆಸರು ಕಳೆದ ಕೆಲವು ತಿಂಗಳಿಂದ ವದಂತಿಯ ವಿಷಯವಾಗಿದೆ. ಅವರು ಆಗಾಗ ಅಲ್ಲಿಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದೆ ಅದಕ್ಕೆ ಕಾರಣ. ಈ ಸುದ್ದಿ ಎಲ್ಲೆಡೆ ಹರಡುತ್ತಿದ್ದರೂ. ಅವರು ತಮ್ಮ ಸಂಬಧವನ್ನು ಎಂದೂ ಒಪ್ಪಿಕೊಂಡಿರಲಿಲ್ಲ. ಅಥವಾ ನಿರಾಕರಿಸಿರಲಿಲ್ಲ. ಅದೇನೇ ಇದ್ದರೂ, ಇತ್ತೀಚಿನ ವರದಿಗಳ ಪ್ರಕಾರ ಶುಬ್ಮನ್ ಮತ್ತು ಸಾರಾ ಪ್ರತ್ಯೇಕಗೊಂಡಿದ್ದಾರೆ. ಅದೇ ರೀತಿ ಅವರು ಸೋಶಿಯಲ್ ಮೀಡಿಯಾಗಳಲ್ಲಿ ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿದೆ.
ಅವರಿಬ್ಬರು ಯಾಕೆ ಅನ್ಫಾಲೊ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ, ಊಹಾಪೋಹ ಸುದ್ದಿಗಳ ಪ್ರಕಾರ ಅವರಿಬ್ಬರೂ ಬ್ರೇಕ್ಅಪ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾರಾ ಎಂಬ ಹೆಸರು ಶುಭ್ಮನ್ ಗಿಲ್ ಹೆಸರಿನ ಜತೆ ತಳುಕು ಹಾಕಿಕೊಂಡಿತತ್ತು. ಅವರು ಐಪಿಎಲ್ ಪಂದ್ಯವಾಡುವ ವೇಳೆ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗಾಗಿ ಮೈದಾನಕ್ಕೆ ಇಳಿಯುವ ಸಂದರ್ಭದಲ್ಲಿ ಪ್ರೆಕ್ಷಕರು ಸಾರಾ, ಸಾರ ಎಂದು ಕೂಗುವ ಮೂಲಕ ಹುರಿದುಂಬಿಸುತ್ತಿದ್ದರು.
ಸಾರಾ ಅಲಿಖಾನ್ ಮತ್ತು ಗಿಲ್ ಎಂದಿಗೂ ಸಾಮಾಜಿಕ ಮಾಧ್ಯಮಗಳ ಮೂಲಕ ತಮಾಷೆಗಳಲ್ಲಿ ಭಾಗಿಯಾಗುವುದು ಅಥವಾ ಪ್ರತಿಕ್ರಿಯಿಸುವು ನಡೆದಿರಲಿಲ್ಲ. ಆದರೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅವರು ಪರಸ್ಪರ ಅನುಸರಿಸುತ್ತಿದ್ದರು. ಇದೀಗ ಅವರಿಬ್ಬರ ಪಾಯೋಯರ್ಗಳ ಪಟ್ಟಿಯಲ್ಲಿ ಪರಸ್ಪರ ಹೆಸರುಗಳು ಕಾಣಿಸುತ್ತಿಲ್ಲ. ಹೀಗಾಗಿ ಇಬ್ಬರೂ ಬೇರ್ಪಟ್ಟಿದ್ದಾರೆ ಎಂಬುದಾಗಿ ಅಭಿಮಾನಿಗಳು ಊಹಿಸುತ್ತಿದ್ದಾರೆ.
ಸಾರಾ ಅಲಿ ಖಾಣ್ ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶುಬ್ಮನ್ ಗಿಲ್ ಅಥವಾ ಬೇರೆ ಯಾರೊಂದಿಗಾದರೂ ತನ್ನ ಸಂಬಂಧದ ಕುರಿತು ನಟಿ ಎಂದಿಗೂ ಪ್ರತಿಕ್ರಿಯೆ ಕೊಟ್ಟಿಲ್ಲ. ಮತ್ತೊಂದೆಡೆ, ಗಿಲ್ ತಮ್ಮ ತಂಡ ಗುಜರಾತ್ ಟೈಟನ್ಸ್ ಪರ ಐಪಿಎಲ್ ಪಂದ್ಯಗಳಲ್ಲಿ ಒಂದರ ನಂತರ ಒಂದರಂತೆ ಶತಕಗಳನ್ನು ಬಾರಿಸುತ್ತಿದ್ದಾರೆ. ಈ ಮೂಲಕ ಅಭಿಮಾನಿಗ ಸಂಖ್ಯೆಗಳನ್ನು ಹೆಚ್ಚಿಸುತ್ತಿದ್ದಾರೆ.
ಸುಳಿವು ಕೊಟ್ಟಿದ್ದ ಗಿಲ್
ಶುಭ್ಮನ್ ಗಿಲ್ ಈ ಹಿಂದೆ ಸಚಿನ್ ತೆಂಡೂಲ್ಕರ್ ಅವರ ಮಗಳು ಸಾರಾ ತೆಂಡೂಲ್ಕರ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿದ್ದವರು. ಬಳಿಕ ಅವರಿಬ್ಬರೂ ಬೇರ್ಪಟ್ಟಿದ್ದರು ಎನ್ನಲಾಗಿದೆ. ಇದಾದ ಬಳಿಕ ನಟಿ ಸಾರಾ ಅಲಿ ಖಾನ್ ಜತೆ ಡಿನ್ನರ್ಗೆ ಶುಭ್ಮನ್ ಹೋಗಿದ್ದು ಸುದ್ದಿಯಾಗಿತ್ತು. ಜತೆಗೆ ವಿಮಾನವೊಂದರಲ್ಲಿ ಜತೆಯಾಗಿ ಪ್ರಯಾಣ ಮಾಡಿದ್ದರ ವಿಡಿಯೊಗಳು ಬೆಳಕಿಗೆ ಬಂದಿದ್ದವು.
ಕೆಲವು ತಿಂಗಳ ಹಿಂದೆ, ಸೋನಮ್ ಬಜ್ವಾ ಅವರೊಂದಿಗಿನ ಸಂದರ್ಶನದ ಸಮಯದಲ್ಲಿ ಮಾತನಾಡಿದ ಗಿಲ್, ಸಾರಾ ಜತೆಗಿನ ಡೇಟಿಂಗ್ ಸತ್ಯವೂ ಇರಬಹುದು, ಇಲ್ಲದೆಯೂ ಇರಬಹುದು ಎಂದು ಹೇಳಿದ್ದರು. ಈ ಮೇಲೆ ಅಭಿಮಾನಿಗಳ ಅನುಮಾನ ಹೆಚ್ಚಾಗಿತ್ತು.
ಇದನ್ನೂ ಓದಿ : Shubhman Gill | ಶುಭ್ಮನ್ ಗೆಳತಿ ಯಾರು? ಸಾರಾ ಅಲಿಖಾನ್ ಅಥವಾ ಸಾರಾ ತೆಂಡೂಲ್ಕರ್?
“ನೀವು ಸಾರಾ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ?” ಸೋನಮ್ ಬಾಜ್ವಾ, ಶುಭ್ಮನ್ ಗಿಲ್ ಅವರನ್ನು ಕೇಳಿದ್ದರು. ಅದಕ್ಕೆ ಗಿಲ್ ನಾಚಿಕೆಪಟ್ಟು “ಇರಬಹುದು, ಇಲ್ಲದಿರಬಹುದು” ಎಂದು ಉತ್ತರಿಸಿದ್ದರು.
ಆದರೆ ಸಾರಾ ಯಾರೆಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ತೆಂಡೂಲ್ಕರ್ ಅವರ ಮಗಳು ಸಾರಾ ಅಥವಾ ಪಟೌಡಿ ರಾಜಕುಮಾರಿ ಸಾರಾ ಎಂಬುದಾಗಿ ಅವರು ಹೇಳಿರಲಿಲ್ಲ.
South Cinema
V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್
V manohar: ಜೂನ್ 9ರಂದು ಚಿತ್ರಮಂದಿರಗಳಲ್ಲಿ ದರ್ಬಾರ್ ಸಿನಿಮಾ ಬಿಡುಗಡೆಯಾಗಲಿದೆ. 80 ರಿಂದ 100 ಥಿಯೇಟರ್ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ.
ಬೆಂಗಳೂರು: 23 ವರ್ಷಗಳ ನಂತರ ವಿ.ಮನೋಹರ್ (V Manohar) ನಿರ್ದೇಶನಕ್ಕೆ ಇಳಿದಿದ್ದಾರೆ. ಜೂನ್ 9ರಂದು ಚಿತ್ರಮಂದಿರಗಳಲ್ಲಿ `ದರ್ಬಾರ್’ ಸಿನಿಮಾ ಬಿಡುಗಡೆಯಾಗಲಿದೆ. 80 ರಿಂದ 100 ಥಿಯೇಟರ್ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ.
ಈ ಕುರಿತಂತೆ ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ, “ಸುಮಾರು 23 ವರ್ಷಗಳ ನಂತರ ನಾನು ಮತ್ತೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ. ಅದಕ್ಕೆ ಕಾರಣ ಈ ಸಿನಿಮಾದ ನಟ ಸತೀಶ್. ಸಿನಿಮಾರಂಗಕ್ಕೆ ಬರುವುದಕ್ಕೂ ಮುನ್ನ ನಾನು ಕೆಲ ದಿನಪತ್ರಿಕೆಗಳಿಗೆ ಕಾರ್ಟೂನ್ ಬರೆಯುತ್ತಿದ್ದೆ. ಆಗಿಂದಲೇ ನಾನು ರಾಜಕೀಯದ ಬಗ್ಗೆ ತಿಳಿದುಕೊಂಡಿದ್ದೆ. ರಾಜಕೀಯ ವಿಡಂಬನೆಯ ಕಥೆಯನ್ನು “ದರ್ಬಾರ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆʼʼ ಎಂದರು.
ʻʻದರ್ಬಾರ್’ ಸಿನಿಮಾ ಶುರುವಾದ ನಂತರ ಕೋವಿಡ್ ಹಚ್ಚಾಯಿತು, ಆ ಭಯದಲ್ಲಿಯೇ ಸಿನಿಮಾದ ಶೂಟಿಂಗ್ ಮುಗಿಸಿದ್ದೆವು. ಮದ್ದೂರು ಬಳಿಯ ಹಳ್ಳಿಯೊಂದರಲ್ಲಿ ಸಿನಿಮಾದ ಬಹುತೇಕ ಶೂಟಿಂಗ್ ನಡೆಸಲಾಗಿದೆ. ಈ ಚಿತ್ರದಲ್ಲಿ ಹಲವಾರು ಕಲಾ ಬಳಗ ಹಾಗೂ ರಂಗ ಕಲಾವಿದರ ತಂಡ ಇದೆʼʼಎಂದು ನಿರ್ಮಾಪಕ ಸತೀಶ್ ಮಾಹಿತಿ ಹಂಚಿಕೊಂಡರು.
ಇದನ್ನೂ ಓದಿ: Manoj Bajpayee: ಹೊಸ ದಾಖಲೆ ಬರೆದ ಮನೋಜ್ ಬಾಜಪೇಯಿ ಸಿನಿಮಾ!
3.5 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಮದ್ದೂರು ತಾಲೂಕಿನ ಮಾರದೇವನಹಳ್ಳಿ, ಚನ್ನಸಂದ್ರ, ಆತಗೂರು ತೈಲೂರು, ನಿಡಘಟ್ಟ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ಒಟಿಟಿ
Manoj Bajpayee: ಹೊಸ ದಾಖಲೆ ಬರೆದ ಮನೋಜ್ ಬಾಜಪೇಯಿ ಸಿನಿಮಾ!
ಹೊಸ ಸಿನಿಮಾ ‘ಸಿರ್ಫ್ ಏಕ್ ಬಂದಾ ಕಾಫಿ ಹೈ’ (Sirf Ek Bandaa Kaafi Hai) ಬಿಡುಗಡೆ ಆಗಿ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು: ‘ದಿ ಫ್ಯಾಮಿಲಿ ಮ್ಯಾನ್’ ಮತ್ತು ‘ದಿ ಫ್ಯಾಮಿಲಿ ಮ್ಯಾನ್ 2’ ಸೀರಿಸ್ನಿಂದ ಖ್ಯಾತಿ ಪಡೆದ ಮನೋಜ್ ಬಾಜಪೇಯಿ (Manoj Bajpayee) ಸಾಕಷ್ಟು ಫ್ಯಾನ್ಸ್ ಹೊಂದಿದ್ದಾರೆ. ಇದೀಗ ಮತ್ತೆ ನಟ ಸುದ್ದಿಯಲ್ಲಿದ್ದಾರೆ. ಹೊಸ ಸಿನಿಮಾ ‘ಸಿರ್ಫ್ ಏಕ್ ಬಂದಾ ಕಾಫಿ ಹೈ’ (Sirf Ek Bandaa Kaafi Hai) ಬಿಡುಗಡೆ ಆಗಿ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಒಟಿಟಿಯಲ್ಲಿ 200 ಮಿಲಿಯನ್ (20 ಕೋಟಿ) ನಿಮಿಷಗಳಿಗೂ ಹೆಚ್ಚು ಕಾಲ ಪ್ರದರ್ಶನ ಕಾಣುವ ಮೂಲಕ ಈ ಸಿನಿಮಾ ದಾಖಲೆ ಬರೆದಿದೆ.
ಅಪೂರ್ವ್ ಸಿಂಗ್ ಕಾರ್ಕಿ ಅವರು ‘ಸಿರ್ಫ್ ಏಕ್ ಬಂದಾ ಕಾಫಿ ಹೈ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿನೋದ್ ಭಾನುಶಾಲಿ ಅವರು ನಿರ್ಮಾಣ ಮಾಡಿದ್ದಾರೆ. ಅಂದ್ರಿಜಾ, ಸೂರ್ಯ ಮೋಹನ್, ನಿಖಿಲ್ ಪಾಂಡೆ, ಜೈಹಿಂದ್ ಕುಮಾರ್, ದುರ್ಗಾ ಶರ್ಮಾ ಮುಂತಾದವರು ಕೂಡ ಮನೋಜ್ ಬಾಜಪೇಯಿ ಜತೆ ನಟಿಸಿದ್ದಾರೆ.
ಏನಿದು ಕಥೆ
ದೇವ ಮಾನವ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಆಗುತ್ತದೆ. ಆಕೆಗೆ ನ್ಯಾಯ ಕೊಡಿಸಲು ಹೋರಾಡುವ ವಕೀಲನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್ ಬಾಜಪೇಯಿ ಅವರ ನಟನೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ಮನೋಜ್ ಬಾಜಪೇಯಿ, “ಒಂದೆರಡು ವರ್ಷಗಳ ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ನಂತರ ಚಿತ್ರತಂಡ, ಸುಪರ್ಣ್ ಎಸ್ ವರ್ಮ, ವಿನೋದ್ ಸೇರಿದಂತೆ ಹಲವಾರು ಜನರ ಕೊಡುಗೆ ಅದ್ಭುತವಾಗಿದೆ. ಭಾನುಶಾಲಿ, ನಿರ್ದೇಶಕ ಅಪೂರ್ವ್ ಸಿಂಗ್ ಕರ್ಕಿ ಮತ್ತು ನಟರಾದ ಸೂರ್ಯ ಮೋಹನ್ ಕುಲಶ್ರೇಷ್ಠ ಮತ್ತು ಅದ್ರಿಜಾ ಸಿನ್ಹಾ ಅವರಂತಹ ನಟರಿಂದ ಚಿತ್ರವು ಸಂಭ್ರಮಾಚರಣೆ ಮಾಡುತ್ತಿದೆ”ಎಂದರು.
ಇದನ್ನೂ ಓದಿ: Raghav Chadha : ಬಾಲಿವುಡ್ಗೂ ಎಂಟ್ರಿ ಕೊಡ್ತಾರಾ ಆಪ್ ಎಂಪಿ ರಾಘವ್ ಛಡ್ಡಾ? ಫೋಟೊ ವೈರಲ್
ನಿರ್ಮಾಪಕ ವಿನೋದ್ ಭಾನುಶಾಲಿ ಮಾತನಾಡಿ ʻʻಚಿತ್ರವು ಪಡೆದ ರೀತಿಯ ವೀಕ್ಷಣೆಗಳು, ವರ್ಷದ ದಾಖಲೆಗಳನ್ನು ಮುರಿಯಲಿದೆ. ಇಂದಿನ ಸಮಯದಲ್ಲಿ ನಮ್ಮ ಪ್ರೇಕ್ಷಕರು ಯಾವುದೇ ಭಾಷೆಯಲ್ಲಿದ್ದರೂ ಉತ್ತಮ ಕಥೆ ಇದ್ದರೆ ಆದ್ಯತೆ ನೀಡುತ್ತಾರೆʼʼಎಂದರು.
ಮನೋಜ್ ಬಾಜಪೇಯಿ ‘ಬ್ಯಾಂಡಿಟ್ ಕ್ವೀನ್’, ‘ಸತ್ಯ’, ‘ಪ್ರೇಮ ಕಥಾ’, ‘ದಿಲ್ ಪೇ ಮತ್ ಲೇ ಯಾರ್’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುಚಿತ್ರಗಳಲ್ಲೂ ಅವರು ಅಭಿನಯಿಸಿದ್ದಾರೆ. ನಿರ್ಮಾಪಕನಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ.
ಬಾಲಿವುಡ್
Aahana Kumra: ಐಫಾ ಕಾರ್ಯಕ್ರಮದಲ್ಲಿ ನಟಿ ಅಹಾನಾ ಕುಮ್ರಾಳ ಡ್ರೆಸ್ ಜಾರುವುದರಲ್ಲಿತ್ತು, ಆಗ? ವಿಡಿಯೊ ವೈರಲ್
ನಟಿ ಅಹಾನಾ ಕುಮ್ರಾ (Aahana Kumra) ಅವರು ದುಬೈನಲ್ಲಿ ಐಫಾ ಕಾರ್ಯಕ್ರಮದ ಗ್ರೀನ್ ಕಾರ್ಪೆಟ್ನಲ್ಲಿ ಭಾಗವಹಿಸಿದ್ದು, ಅಲ್ಲಿ ಅವರು ತೊಟ್ಟ ಉಡುಗೆಯಿಂದ ಇರಿಸುಮುರಿಸಾಗಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ದುಬೈ: ಬಾಲಿವುಡ್ನ ಹಲವು ಗಣ್ಯರು ಸದ್ಯ ಅರಬ್ ಸಂಯುಕ್ತ ಸಂಸ್ಥಾನದ ದುಬೈನಲ್ಲಿ ನಡೆಯುತ್ತಿರುವ ಐಫಾ 2023 (IIFA awards 2023) ಕಾರ್ಯಕ್ರಮದಲ್ಲಿದ್ದಾರೆ. ಅದರಂತೆ ನಟಿ ಅಹಾನಾ ಕುಮ್ರಾ (Aahana Kumra) ಕೂಡ ಇದೇ ಕಾರ್ಯಕ್ರಮದಲ್ಲಿದ್ದಾರೆ. ಈ ವೇಳೆ ನಟಿ ತೊಟ್ಟ ಉಡುಗೆ ಅವರಿಗೆ ಸರಿಯಾಗದೆ ಜಾರುತ್ತಿದ್ದು, ನಟಿ ಅದನ್ನು ಜಾರದಂತೆ ಹಲವು ಬಾರಿ ಹಿಡಿದುಕೊಂಡಿದ್ದು ಕಂಡುಬಂದಿದೆ.
ಹೌದು. ಐಫಾ ಕಾರ್ಯಕ್ರಮದ ಗ್ರೀನ್ ಕಾರ್ಪೆಟ್ ಕಾರ್ಯಕ್ರಮದಲ್ಲಿ ಅಹಾನಾ ಭಾಗಿಯಾಗಿದ್ದರು. ಅದರಲ್ಲಿ ಅವರು ಆಫ್ ಶೋಲ್ಡರ್ ಇರುವ ಕಪ್ಪು ಬಣ್ಣದ ಗೌನ್ ಅನ್ನು ತೊಟ್ಟಿದ್ದರು. ಅವರು ಮಾಧ್ಯಮದವರೆದುರು ಕ್ಯಾಮರಾಗಳಿಗೆ ಫೋಸ್ ಕೊಡುವಾಗ ಹಲವು ಬಾರಿ ಡ್ರೆಸ್ ಜಾರಿದೆ. ಹಾಗಾಗಿ ನಟಿ ಅದನ್ನು ಎಳೆದುಕೊಂಡು ಸರಿ ಮಾಡಿಕೊಂಡು ಫೋಸ್ ಕೊಟ್ಟಿದ್ದಾರೆ. ಈ ದೃಶ್ಯಗಳಿರುವ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ: Aahana s Kumra | ಸ್ಟೈಲಿಶ್ ಪರ್ಪಲ್ ಡ್ರೆಸ್ನಲ್ಲಿ ಮಿಂಚಿದ ಅಹಾನಾ ಕುಮ್ರಾ
ಅಂದ ಹಾಗೆ ನಟಿ ಕಳೆದ ವಾರ ಕಾರ್ಯಕ್ರಮದವೊಂದರಲ್ಲಿ ಭಾಗಿಯಾಗಿದ್ದಾ ಅಭಿಮಾನಿಯೊಬ್ಬರಿಗೆ ಸಿಟ್ಟಿನಿಂದ ಬೈದಿದ್ದರು. ನಟಿ ಜತೆ ಫೋಟೋ ತೆಗೆಸಿಕೊಳ್ಳಲೆಂದು ಬಂದ ಅಭಿಮಾನಿಯೊಬ್ಬರು ಆಕೆಯ ಸೊಂಟಕ್ಕೆ ಕೈ ಹಾಕಿದ್ದರು. ಇದರಿಂದ ಸಿಟ್ಟಿಗೆದ್ದ ನಟಿ, “ನನ್ನನ್ನು ಮುಟ್ಟಬೇಡಿ” ಎಂದು ಜೋರಾಗಿಯೇ ಹೇಳಿದ್ದರು. ಆ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿತ್ತು.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಆಕೆ, “ನಾವು ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಓಪನ್ ಆಗಿ ಇರುತ್ತೇವೆ ಎನ್ನುವ ಕಾರಣಕ್ಕೆ ನಮ್ಮೊಂದಿಗೆ ಏನು ಬೇಕಾದರೂ ಮಾಡಬಹುದು ಎಂದು ಕೆಲವರು ಅಂದುಕೊಂಡುಬಿಡುತ್ತಾರೆ. ಆದರೆ ಎಲ್ಲದಕ್ಕೂ ಗಡಿ ಇದ್ದೇ ಇರುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ಸುರಕ್ಷತೆ ಬಹುಮುಖ್ಯ. ಅದಕ್ಕಾಗಿ ಬೌನ್ಸರ್ಗಳನ್ನು ನೇಮಿಸಬೇಕು” ಎಂದು ಹೇಳಿದ್ದರು.
-
ಕರ್ನಾಟಕ22 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ22 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ20 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ16 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ದೇಶ4 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕ್ರಿಕೆಟ್12 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ಕರ್ನಾಟಕ12 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER2 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?