Window Seat Trailer: ಭೂಮಿನೂ ರೌಂಡು, ಕಾಲಾನೂ ರೌಂಡು, ಎಲ್ಲೇ ಸುತ್ತಿದ್ರೂ ಇನ್ನೆಲ್ಲಿಗೆ ಬರ್ಬೇಕು?! - Vistara News

ಸಿನಿಮಾ

Window Seat Trailer: ಭೂಮಿನೂ ರೌಂಡು, ಕಾಲಾನೂ ರೌಂಡು, ಎಲ್ಲೇ ಸುತ್ತಿದ್ರೂ ಇನ್ನೆಲ್ಲಿಗೆ ಬರ್ಬೇಕು?!

ನಿರೂಪಕಿ ಶೀತಲ್‌ ಶೆಟ್ಟಿಯವರ ಚೊಚ್ಚಲ ಸಿನಿಮಾ ವಿಂಡೋ ಸೀಟ್‌ನ ಟ್ರೇಲರ್‌ ಬಿಡುಗಡೆಯಾಗಿದೆ. ಟ್ರೇಲರ್‌ ಹೇಗಿದೆ, ಇದನ್ನು ವೀಕ್ಷಿಸಿದವರು ಏನೆನ್ನುತ್ತಿದ್ದಾರೆ ಎಂಬ ಮಾಹಿತಿ ಇಲ್ಲಿದೆ

VISTARANEWS.COM


on

Window Seat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಿಗ್‌ ಬಾಸ್‌ ಖ್ಯಾತಿಯ ಶೀತಲ್‌ ಶೆಟ್ಟಿ ನಿರ್ದೇಶನದ ಸಿನಿಮಾ ʼವಿಂಡೋ ಸೀಟ್‌ʼನ ಟ್ರೇಲರ್‌ ಬಿಡುಗಡೆಯಾಗಿದೆ. ಆನಂದ್‌ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ನಿರೂಪಕಿಯಾಗಿ ಹೆಸರು ಮಾಡಿರುವ ಶೀತಲ್‌ ಶೆಟ್ಟಿಯವರ ಚೊಚ್ಚಲ ಚಿತ್ರ ಇದಾಗಿದ್ದು, ಈ ಟ್ರೇಲಗ್‌ಗೆ ಅವರೇ ಹಿನ್ನಲೆ ಧ್ವನಿ ನೀಡಿರುವುದು ವಿಶೇಷವಾಗಿದೆ. ಟ್ರೇಲರ್‌ನ ಬ್ಯಾಕ್‌ಗ್ರೌಂಡ್‌ ಮ್ಯೂಸಿಕ್‌ ಪಾಶ್ಚಿಮಾತ್ಯ ಸಂಗೀತ ಶೈಲಿಯಲ್ಲಿದ್ದು, ಇದು ಸ್ಯಾಂಡಲ್‌ವುಡ್‌ನ ಹೊಸ ಪ್ರಯತ್ನ ಎಂದು ಈ ಟ್ರೇಲರ್‌ ವೀಕ್ಷಿಸಿದವರು ಕಾಮೆಂಟ್‌ ಬಾಕ್ಸ್‌ನಲ್ಲಿ ಅಭಿಪ್ರಾಯ ಬರೆದಿದ್ದಾರೆ.

ಈ ಟ್ರೇಲರ್‌ ಮಳೆಯ ದೃಶ್ಯದೊಂದಿಗೆ ಆರಂಭವಾಗಲಿದ್ದು, ಅಲ್ಲಲ್ಲಿ ಕೇಳಿ ಬರುವ ಸಂಭಾಷಣೆಗಳು ಸಿನಿಮಾದ ಬಗ್ಗೆ ಕುತೂಹಲ ಮೂಡಿಸುತ್ತವೆ. ನಿರೂಪ್‌ ಭಂಡಾರಿ ಈ ಸಿನಿಮಾದ ನಾಯಕನಾಗಿದ್ದು, ಟ್ರೇಲರ್‌ನಲ್ಲಿ ಕಾಣಿಸಿಕೊಳ್ಳುವ ಅವರು ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸುವುದರಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ | Vikrant Rona Movie: ‘ರಾ ರಾ ರಕ್ಕಮ್ಮ’ ಸಾಂಗ್‌ ರಿಲೀಸ್‌

ಕುತೂಹಲಕಾರಿ ಕತೆಯನ್ನು ಹೊಂದಿರುವ ಈ ಸಿನಿಮಾದಲ್ಲಿ ನಾಯಕ ನಿರೂಪ್ ಭಂಡಾರಿ ಮಾತ್ರವಲ್ಲದೆ, ಸಂಜನಾ ಆನಂದ್, ಬಡವ ರಾಸ್ಕಲ್ ಖ್ಯಾತಿಯ ಅಮೃತ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸೂರಜ್, ರವಿಶಂಕರ್, ಮಧುಸೂಧನ್ ರಾವ್ ಸೇರಿದಂತೆ ಹಲವು ಕಲಾವಿದರ ದಂಡು ಚಿತ್ರದಲ್ಲಿದೆ. ʼಕೆಎಸ್ ಕೆ ಶೋ ರೀಲ್ʼ ಬ್ಯಾನರ್ ನಡಿ ಮೂಡಿಬರುತ್ತಿರುವ ಈ ಚಿತ್ರವನ್ನು ಜಾಕ್‌ ಮಂಜಿ ನಿರ್ಮಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ವೀರೇಶ್ ಶಿವಮೂರ್ತಿ ಅವರ ಸಂಭಾಷಣೆ ಚಿತ್ರಕ್ಕಿದೆ. ಜುಲೈ 1 ರಂದು ಚಿತ್ರ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಹಿಂದೆ ಚಿತ್ರತಂಡ ಲೆರಿಕಲ್‌ ವಿಡಿಯೋ ರಿಲೀಸ್‌ ಮಾಡಿದ್ದು, ಇದಕ್ಕೆ ವೀಕ್ಷಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ನಿರೂಪ್‌ ಮತ್ತೆ ಕಮ್‌ಬ್ಯಾಕ್‌

ರಂಗಿತರಂಗ, ರಾಜರತ್ನ, ಅಮರ್‌ ಹಾಗೂ ಆದಿ ಲಕ್ಷ್ಮೀ ಪುರಾಣ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ನಿರೂಪ್‌ ಈ ಚಿತ್ರದ ಮೂಲಕ ಬಹಳ ದಿನಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ರಂಗೀ ತರಂಗ ಅವರಿಗೆ ಬಹಳ ಹೆಸರು ತಂದುಕೊಟ್ಟಿತ್ತು. ನಿರೂಪ್‌ ಸದ್ಯ ವಿಕ್ರಾಂತ್‌ ರೋಣಾ ಎಂಬ ಮತ್ತೊಂದು ಚಿತ್ರದಲ್ಲಿಯೂ ಅಭಿನಯಿಸುತ್ತಿದ್ದಾರೆ.

ವಿಕ್ರಾಂತ್‌ ರೋಣ ಚಿತ್ರತಂಡ  ಇತ್ತೀಚೆಗೆ ನಿರೂಪ್‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ, ಪಾತ್ರದ ಹೆಸರು ರಿವೀಲ್ ಮಾಡಿತ್ತು. ಸಂಜಯ್‌ ಗಾಂಭೀರ್‌ ಎಂಬುದು ಪಾತ್ರದ ಹೆಸರಾಗಿದ್ದು, ನಿರೂಪ್‌ ಈ ಚಿತ್ರದಲ್ಲಿ ಬೇಟೆಗಾರನಾಗಿರುವ ಸುಳಿವು ಸಿಕ್ಕಿತ್ತು.

ಇದನ್ನೂ ಓದಿ | ಕಿಚ್ಚ ಸುದೀಪ್‌ V/S ಅಜಯ್‌ ದೇವಗನ್‌: ʼThank Godʼ ಸಿನಿಮಾ ರಿಲೀಸ್‌ ಡೇಟ್‌ ಮುಂದಕ್ಕೆ, ವಿಕ್ರಾಂತ್‌ ರೋಣ ಫಿಕ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗಲಿದೆಯೇ ಎಂಬುವುದು ಕುತೂಹಲ ಮೂಡಿಸಿದೆ. ಈಗಾಗಲೇ ಅನಂತ್‌ ನಾಗ್‌, ಶಿವಣ್ಣ ಮತದಾನ ಹಾಕಲು ಬಂದಿದ್ದಾರೆ. ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್‌ನಾಗ್‌ ಅವರು ಮತ ಚಲಾಯಿಸಿದರು. ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ ಎನದರು.

VISTARANEWS.COM


on

Lok Sabha Election 2024 Anant Nag outrage against non-voters
Koo

ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ (Lok Sabha Election 2024) ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆವರೆಗೆ ಶೇ. 50.93 ಮತದಾನ ದಾಖಲಾಗಿದೆ. ಮತದಾನ ಮುಕ್ತಾಯಕ್ಕೆ ಇನ್ನು ಎರಡು ಗಂಟೆಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗಲಿದೆಯೇ ಎಂಬುವುದು ಕುತೂಹಲ ಮೂಡಿಸಿದೆ. ಈಗಾಗಲೇ ಅನಂತ್‌ ನಾಗ್‌, ಶಿವಣ್ಣ ಮತದಾನ ಹಾಕಲು ಬಂದಿದ್ದಾರೆ. ಅಶ್ವಥ್ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್‌ನಾಗ್‌ ಅವರು ಮತ ಚಲಾಯಿಸಿದರು.

ಮತಹಾಕದವರ ವಿರುದ್ಧ ಹಿರಿಯ ನಟ ಅನಂತ್ ನಾಗ್ ಅವರು ಆಕ್ರೋಶ ಹೊರ ಹಾಕಿದರು. ಅನಂತ್‌ ನಾಗ್‌ ಮಾತನಾಡಿ ʻಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ. ಕಳೆದ ಐದು ಚುನಾವಣೆಗಳಿಂದ ಇದರ ಬಗ್ಗೆಯೇ ಚರ್ಚೆ ಆಗುತ್ತಲೇ ಇದೆ. ಯಾರು ನಿರಂತರವಾಗಿ ಮತ ಹಾಕುವುದಿಲ್ಲವೋ ಅವರನ್ನ ಮತಪಟ್ಟಿಯಿಂದಲೇ ತೆಗೆದುಹಾಕಿ. ಅಲ್ಲಿ ಯೋಧರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದಾರೆ. ಇವರು ಮನೆಯಿಂದ ಹೊರಬಂದು ಒಂದು ಓಟ್ ಮಾಡೋಕಾಗಲ್ವ? ಸ್ವಾತಂತ್ರ್ಯ ಬಂದು 75 ವರ್ಷ ಆಯ್ತು. ಇನ್ನೂ ಎಂಥಹ ಜಾಗೃತಿ ಬೇಕು?. ಇಲ್ಲಿ ಯುವಕರು, ಹಿರಿಯರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರನ್ನೂ ಒಂದೇ ತರಹ ನೋಡಿ. 75 ವರ್ಷಗಲ್ಲಿ ಆಗದ ಕೆಲಸ ಮುಂದೆ ಬರುವ ಸರ್ಕಾರ ಮಾಡಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸಿಗರಿಗೆ ಚೊಂಬು ಹಿಡಿದು ಅಭ್ಯಾಸವಾಗಿದೆ: ಜೋಶಿ ಗೇಲಿ

ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿದರೆ ಉಳಿದ ಹನ್ನೊಂದು ಕ್ಷೇತ್ರಗಳಲ್ಲಿ ಶರವೇಗದ ಮತದಾನ ನಡೆಯುತ್ತಿದ್ದು, ಬೆಳಗ್ಗೆಯಿಂದಲೂ ಮತಗಟ್ಟೆ ಕಡೆ ಉತ್ಸಾಹದಿಂದ ಮತದಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್‌ಗಳಲ್ಲಿ ಇರೋ ಜನರಿಂದ ಈ ಬಾರಿ ದಾಖಲೆ ಮತದಾನವಾಗಿದೆ. ಡಾಲರ್ಸ್ ಕಾಲೋನಿ, ಸದಾಶಿವನಗರ ಹಾಗೂ ಆರ್‌ಆರ್ ನಗರ, ಆನೇಕಲ್‌ ಬೂತ್ನಲ್ಲಿ 3 ಗಂಟೆವರೆಗೂ ಶೇಕಡಾ ಶೇ.65 ಮತದಾನ ದಾಖಲಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

Continue Reading

ಬಾಲಿವುಡ್

Richa Chadda:  ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟ ನಟಿ ರೇಖಾ!

Richa Chadda:ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ‘ಹೀರಾಮಂಡಿ’ ವೀಕ್ಷಿಸಿದ ನಂತರ ರೇಖಾ ಅವರು ರಿಚಾ ಚಡ್ಡಾ ಅವರ ನಟನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಹೀರಾಮಂಡಿ’ ಸಿನಿಮಾ ತಂಡವನ್ನು ಬೆಂಬಲಿಸಲು ಬಾಲಿವುಡ್ ತಾರೆಯರ ಗುಂಪೇ ನೆರೆದಿತ್ತು. ʻಹೀರಾಮಂಡಿʼ ಸಿರೀಸ್‌ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

VISTARANEWS.COM


on

Rekha kisses Richa Chadha baby bump at Heeramandi event
Koo

ಬೆಂಗಳೂರು: ‘ಹೀರಾಮಂಡಿ’ ಚಿತ್ರದ ಪ್ರೀಮಿಯರ್‌ ವೇಳೆ ಹಿರಿಯ ನಟಿ ರೇಖಾ (Richa Chadda) ಅವರು ರಿಚಾ ಚಡ್ಡಾ ಬೇಬಿ ಬಂಪ್‌ಗೆ ಮುತ್ತಿಟ್ಟಿದ್ದಾರೆ. ಈ ಫೋಟೊ ಹಾಗೂ ವಿಡಿಯೊ ವೈರಲ್‌ ಆಗಿದೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಹೀರಾಮಂಡಿ’ ಸಿನಿಮಾ ತಂಡವನ್ನು ಬೆಂಬಲಿಸಲು ಬಾಲಿವುಡ್ ತಾರೆಯರ ಗುಂಪೇ ನೆರೆದಿತ್ತು. ʻಹೀರಾಮಂಡಿʼ ಸಿರೀಸ್‌ ಮೇ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

ರಿಚಾ ಚಡ್ಡಾ ಅವರು ಹಲವು ವೆಬ್​ ಸರಣಿಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಇದೀಗ ‘ಹೀರಾಮಂಡಿ’ ಚಿತ್ರದಲ್ಲಿಯೂ ನಟಿ ಅಭಿನಯಿಸಿದ್ದಾರೆ. ‘ಹೀರಾಮಂಡಿ’ ವೀಕ್ಷಿಸಿದ ನಂತರ ರೇಖಾ ಅವರು ರಿಚಾ ಚಡ್ಡಾ ಅವರ ನಟನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ ಬಹು ನಿರೀಕ್ಷಿತ ಸರಣಿಯಲ್ಲಿ ʻಲಜ್ಜೋʼ ಪಾತ್ರದಲ್ಲಿ ನಟಿಸಿದ್ದಾರೆ.

ರಿಚಾ ಚಡ್ಡಾ ಕೂಡ ಈ ಬಗ್ಗೆ ಮಾತನಾಡಿ ʻʻರೇಖಾ ಅವರಂತಹ ಪೂಜ್ಯರಿಂದ ಪ್ರಶಂಸೆ ಮತ್ತು ಪ್ರೀತಿಯನ್ನು ಸ್ವೀಕರಿಸುತ್ತಿರುವುದು ಖುಷಿಯ ಕ್ಷಣವಾಗಿದೆ. ನನ್ನ ಹೃದಯ ತುಂಬಿದೆ. ‘ಹೀರಾಮಂಡಿ’ ಚಿತ್ರದಲ್ಲಿನ ನನ್ನ ಅಭಿನಯದ ಮೇಲಿನ ಪ್ರೀತಿಯು ನನ್ನನ್ನು ಮೂಕನನ್ನಾಗಿ ಮಾಡಿತುʼʼಎಂದರು.

ಇದನ್ನೂ ಓದಿ: Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ಈ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗಲಿದೆ.

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ!

Raj B Shetty: ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

VISTARANEWS.COM


on

Raj B Shetty entry in duniya Vijay Movie
Koo

ಬೆಂಗಳೂರು: ನಟ ರಾಜ್‌ ಬಿ ಶೆಟ್ಟಿ (Raj B Shetty) ಅವರ `ಟೋಬಿ’ ಸಿನಿಮಾ ಬಿಡುಗಡೆಯಾಗಿ, ಅಷ್ಟೇನೂ ಕಲೆಕ್ಷನ್‌ ಮಾಡಿರಲಿಲ್ಲ. ಅಷ್ಟೋತ್ತಿಗಾಗಲೇ ರಾಜ್‌ ಅವರು ಮಲಯಾಳಂ ಸಿನಿಮಾದಲ್ಲಿ ಬ್ಯುಸಿಯಾದರು. ಮೊದಲ ಮಾಲಿವುಡ್ ಸಿನಿಮಾ ‘ರುಧೀರಂ’ ಶೂಟಿಂಗ್ ಕೂಡ ಮುಗಿದು ರಿಲೀಸ್‌ಗೂ ರೆಡಿಯಾಗಿದೆ. ಮಲಯಾಳಂ ಸ್ಟಾರ್ ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ’45’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ದುನಿಯಾ ವಿಜಯ್ (Duniya Vijay) ಜತೆ ಸೇರಿ ಒಂದು ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ದುನಿಯಾ ವಿಜಯ್ 29ನೇ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಆ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ. ಇದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರು ಬರೆದಿರುವ ‘ಚೋಮನ ದುಡಿ’ ಕಾದಂಬರಿ ಪ್ರೇರಿತ ಸಿನಿಮಾ ಎನ್ನಲಾಗಿದೆ. ಜಡೇಶ ಹಂಪಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜಡೇಶ್‍ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್‍’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Raj B Shetty: ಒಟಿಟಿಯಲ್ಲಿ ಅಬ್ಬರಿಸಲಿದೆ ʻಟೋಬಿʼ!

ರಾಜ್‌ ಬಿ ಶೆಟ್ಟಿ ಅವರು ʼಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ʻಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಟರ್ಬೊದಲ್ಲಿ ತೆಲುಗು ನಟ ಸುನಿಲ್ ಕೂಡ ಕಾಣಿಸಿಕೊಂಡಿದ್ದಾರೆ.

Continue Reading

Lok Sabha Election 2024

Lok Sabha Election 2024: ಬುದ್ಧಿ ಇರೋರು ವೋಟ್‌ ಹಾಕ್ತಿದ್ದಾರೆ ಎಂದ ಕಿಚ್ಚ! ಉಳಿದ ತಾರೆಗಳು ಹೇಳಿದ್ದೇನು?

Lok Sabha Election 2024: ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಈ ಬಾರಿ ಡಾಲಿ ಧನಂಜಯ್‌ ಅವರು ಹಳ್ಳಿ ಸ್ಟೈಲ್‌ನಲ್ಲಿ ಬಂದು ವೋಟ್‌ ಮಾಡಿದರು. ನಟ ಸುದೀಪ್‌ ಅವರು ಮಗಳ ಜತೆ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ. ದೇಶದ ಮೇಲೆ ಪ್ರೀತಿ ಇರುವವರು ವೋಟ್‌ ಹಾಕುತ್ತಿದ್ದಾರೆ, ಮಿಕ್ಕವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ ಎಂದರು ಸುದೀಪ್‌.

VISTARANEWS.COM


on

Lok Sabha Election 2024 sandalwood celebrities reaction
Koo

ಬೆಂಗಳೂರು:  ಲೋಕಸಭಾ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನ ಇಂದು (ಏಪ್ರಿಲ್ 26) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೋಟ್ ಮಾಡುವಂತೆ ಪ್ರಕಾಶ್ ರಾಜ್ ಮನವಿ ಮಾಡಿದರು. ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಕೂಡ ʻನಿಮಗೆ ಯಾರು ಒಳ್ಳೆಯವರು ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿʼ ಎಂದು ಮಾಧ್ಯಮದ ಜತೆ ಮಾತನಾಡಿದರು. ಅಶ್ವಿನಿ ಪುನೀತ್, ಡಾಲಿ ಧನಂಜಯ್, ಸಪ್ತಮಿ ಗೌಡ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೇರಿ ಅನೇಕ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. 

ನಟ ಸುದೀಪ್‌ ಅವರು ಮಗಳ ಜತೆ ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ನಟ ಮಾಧ್ಯಮದ ಜತೆ ಮಾತನಾಡಿ ʻʻತಲೆ ಇರುವವರು, ಬುದ್ಧಿ ಇರುವವರು, ದೇಶದ ಮೇಲೆ ಪ್ರೀತಿ ಇರುವವರು ವೋಟ್‌ ಹಾಕುತ್ತಿದ್ದಾರೆ, ಮಿಕ್ಕವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ. ಯಾರು ವೋಟ್‌ ಹಾಕಲು ಬರುತ್ತ ಇಲ್ಲವೋ ಅವರ ಬಗ್ಗೆ ತುಂಬ ತೆಲೆ ಕೆಡಿಸಿಕೊಳ್ಳುವುದನ್ನು ಬಿಡೋಣʼʼಎಂದರು.

ಇದನ್ನೂ ಓದಿ: Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

ನಟ ಉಪೇಂದ್ರ ಮಾತನಾಡಿ ʻʻವೋಟ್‌ ಮಾಡಲು ತುಂಬ ಜನ ಬರುತ್ತ ಇದ್ದಾರೆ. ಎಲ್ಲರಿಗೂ ಮಹತ್ವ ಗೊತ್ತಿದೆ. ಖಂಡತ ಎಲ್ಲರೂ ಬರ್ತಾರೆ. ಯುವಕರು ಬಂದು ವೋಟ್‌ ಮಾಡಿ. ಪ್ರಜೆಗಳು ವಿಚಾರ ಮಾಡಿ ಮತ ಹಾಕಿʼʼಎಂದರು.

ಈ ಬಾರಿ ಡಾಲಿ ಧನಂಜಯ್‌ ಅವರು ಹಳ್ಳಿ ಸ್ಟೈಲ್‌ನಲ್ಲಿ ಬಂದು ವೋಟ್‌ ಮಾಡಿದರು. ಈ ವೇಳೆ ವಿಸ್ತಾರ ಜತೆಗೆ ಮಾತನಾಡಿ ʻʻಮತದಾನ ಪರ್ಸಂಟೇಜ್‌ ಜಾಸ್ತಿ ಆಗಬೇಕು. ನಾವು ಮತ ಚಲಾಯಿಸಬೇಕು. ಯುವಕರಿಗೆ ಹೇಳೋದು ಏನಂದರೆ ಯೋಚನೆ ಮಾಡಿ ಮತ ಹಾಕಿ. ನೋಡೋದು, ಕೇಳೋದು ಯಾವತ್ತೂ ಸತ್ಯ ಇರುವುದಿಲ್ಲ. ನಮ್ಮ ಭವಿಷ್ಯಕ್ಕೆ ಏನು ಬೇಕು ಎಂದು ಅರಿತು ವೋಟ್‌ ಮಾಡಬೇಕು. ನಮ್ಮ ಮತ ಖಂಡಿತ ಒಳ್ಳೆಯ ನಾಯಕರಿಗೆ ಆಗರುತ್ತೆʼʼಎಂದರು.

ಮತದಾನದ ಬಳಿಕ ನಟಿ ತಾರಾ ಮಾತನಾಡಿ ʻಇವತ್ತು ರಾಷ್ಟ್ರ ಕಟ್ಟುವ ಸಮಯ. ಇಲ್ಲಿ ನಮ್ಮ ನೆಚ್ಚಿನ ನಾಯಕನ್ನು ಆರಿಸುವ ಸಮಯ. ವೋಟ್‌ ಮಾಡುವ ಸಂಭ್ರಮ ನೋಡಿ ಖುಷಿ ಆಗುತ್ತದೆ. ತುಂಬ ಯುವಕರು ವೋಟ್‌ ಮಾಡುತ್ತಿದ್ದಾರೆ. ದೇಶದ ಪ್ರಜೆಯಾಗಿ ವೋಟ್‌ ಮಾಡುವುದು ತುಂಬ ಮುಖ್ಯ. ಎಲ್ಲ ಮಾಧ್ಯಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮಗಿಂತ ಹೆಚ್ಚಾಗಿ ನೀವು ಮನೆ ಮನೆಗೆ ತಲುಪಿ ಮತದಾನದ ಅರಿವು ಮೂಡಿಸಿದ್ದೀರಿʼʼ ಎಂದರು.

ನಟ ಯಶ್ ಮಾತನಾಡಿ ʻʻಮತ ಹಾಕೋದು ನಮ್ಮೆಲ್ಲರ ಕರ್ತವ್ಯ. ಅದು ನಮ್ಮ ಹಕ್ಕು. ದೇಶಕ್ಕಾಗಿ ಮತ ಚಲಾವಣೆ ಮಾಡಬೇಕು. ನಿಮ್ಮ ನಿರ್ಧಾರಗಳಿಂದ ಕಲಿಯುವುದಕ್ಕೆ ಅವಕಾಶ ಸಿಗಲಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಪ್ರಾಯ ಮುಖ್ಯ. ಸಮಯ ಕಳೆದಂತೆ ಮತದಾನ ಹೆಚ್ಚಾಗಬಹುದು. ಅಭಿವೃದ್ಧಿ ಅನ್ನೋದು ಮುಖ್ಯ. ದೇಶಕ್ಕೆ ಈಗ ಒಳ್ಳೆಯ ಅವಕಾಶ ಇದೆ. ಒಳ್ಳೆಯ ಸಮಯʼʼಎಂದು ಹೇಳಿದರು.

ನಟ ಸೃಜನ್ ಲೋಕೇಶ್ ಮಾತನಾಡಿ ʻʻಮತ ಹಾಕಿರುವುದು ಖುಷಿ ಕೊಟ್ಟಿದೆ. ಒತ್ತಾಯದಿಂದ ಯಾರು ಮತದಾನ ಮಾಡಬಾರದು. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ. ಅದು ನಮ್ಮ ಮೂಲ ಹಕ್ಕುʼʼಎಂದರು.

ಮತದಾನ ಮಾಡಿದ ಬಳಿಕ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮಾತನಾಡಿ ʻʻಮತದಾನ ನಮ್ಮಲ್ಲೆರ ಹಕ್ಕು. ಯೋಚನೆ ಮಾಡಿ ಮತದಾನ ಮಾಡಿ. ದೇಶದ ಭವಿಷ್ಯದ ಬಗ್ಗೆ ಯೋಚನೆ ಮಾಡಿ ಮತದಾನ ಮಾಡಿ ಅಂತ ಹೇಳುತ್ತೇನೆ. ಬಂದು ಮತ ಹಾಕಿ ಎಲ್ಲಿಗಾದರೂ ಹೋಗಿ. ಯಾಕೆಂದರೆ ಮತಕ್ಕೆ ತುಂಬಾ ಬೆಲೆ ಇದೆʼʼಎಂದರು.

ನಟಿ ಅಮೂಲ್ಯ ಪತಿ ಜಗದೀಶ್ ಮಾತನಾಡಿ ʻʻವೋಟ್ ಮಾಡಿದ್ದೇವೆ,ಇದು ಎಲ್ಲರ ಹಕ್ಕು. ಈ ಬಾರೀ ತುಂಬಾ ಜನ ವೋಟ್ ಮಾಡ್ತಿದ್ದಾರೆ. ಹೆಚ್ಚು ಜನರು ವೋಟಿಂಗ್‌ಗೆ ಬಂದಿರೋದು ಖುಷಿಯಾಯ್ತು. ಎಲ್ಲರೂ ತಪ್ಪದೇ ಮತದಾನ ಮಾಡಬೇಕುʼʼಎಂದರು.

ಈಗಾಗಲೇ ಡಿಂಪಲ್‌ ಕ್ಷೀನ್‌ ರಚಿತಾ ರಾಮ್‌, ನಿರಂಜನ್‌ ದೇಶಪಾಂಡೆ, ದರ್ಶನ್‌, ವಿಜಯ್‌ ರಾಘವೇಂದ್ರ ಸೇರಿದಂತೆ ಸ್ಟಾರ್ಸ್‌ಗಳು ಮತಚಲಾಯಿಸಿದ್ದಾರೆ.

Continue Reading
Advertisement
Bike Accident
ಕರ್ನಾಟಕ15 mins ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 202419 mins ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ39 mins ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ58 mins ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ1 hour ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ2 hours ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ3 hours ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ3 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ3 hours ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ3 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ11 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202412 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202412 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ18 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌