Viral Video: ನಿಕ್​ ಜೋನಾಸ್​​ರತ್ತ ಬಿಳಿ ಬಣ್ಣದ ಬ್ರಾ ಎಸೆದ ಅಭಿಮಾನಿ; ಪತ್ನಿ ಪ್ರಿಯಾಂಕಾ ಚೋಪ್ರಾ ಮಾಡಿದ್ದೇನು? - Vistara News

ಬಾಲಿವುಡ್

Viral Video: ನಿಕ್​ ಜೋನಾಸ್​​ರತ್ತ ಬಿಳಿ ಬಣ್ಣದ ಬ್ರಾ ಎಸೆದ ಅಭಿಮಾನಿ; ಪತ್ನಿ ಪ್ರಿಯಾಂಕಾ ಚೋಪ್ರಾ ಮಾಡಿದ್ದೇನು?

ಅಟ್ಲಾಂಟಾದಲ್ಲಿ ಮ್ಯೂಸಿಕ್ ಲೈವ್​ ಕಾನ್ಸರ್ಟ್ ನಡೆದಿತ್ತು. ಪತಿಯೊಂದಿಗೆ ಸಮಾರಂಭಕ್ಕೆ ಪ್ರಿಯಾಂಕಾ ಚೋಪ್ರಾ ಕೂಡ ಹೋಗಿದ್ದರು. ಅಲ್ಲೆಲ್ಲ ಜೋನಾಸ್​ ಅಭಿಮಾನಿಗಳು ತುಂಬಿ-ತುಳುಕುತ್ತಿದ್ದರು.

VISTARANEWS.COM


on

Fan Threw Her Innerwear At Nick Jonas then What Priyanka Chopra Did
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರೀತಿಸಿ ಮದುವೆಯಾದ ಬಾಲಿವುಡ್​ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಮತ್ತು ಗಾಯಕ ನಿಕ್ ಜೋನಾಸ್ (Nick Jonas)​ ಜೋಡಿಗೆ ದೊಡ್ಡ ಅಭಿಮಾನಿ ಬಳಗವಿದೆ. ಇವರಿಬ್ಬರೂ ಸಾರ್ವಜನಿಕವಾಗಿ ಹಲವು ಸಮಾರಂಭ, ಕಾರ್ಯಕ್ರಮಗಳಲ್ಲಿ ಒಟ್ಟಿಗೇ ಕಾಣಿಸಿಕೊಳ್ಳುತ್ತಾರೆ. ಈಗಂತೂ ಒಂದು ಮುದ್ದಾದ ಹೆಣ್ಣು ಮಗುವಿಗೆ ಅಪ್ಪ-ಅಮ್ಮ (ಬಾಡಿಗೆ ತಾಯ್ತನ) ಆಗಿದ್ದಾರೆ. ಇತ್ತೀಚೆಗಷ್ಟೇ ಪ್ರಿಯಾಂಕಾ ಚೋಪ್ರಾ ತಮ್ಮ ಮಗಳು ಮಾಲ್ತಿ ಮೇರಿ ಮುಖವನ್ನು ಬಹಿರಂಗಪಡಿಸಿದ್ದರು. ಈಗ ಈ ಜೋಡಿಯ ಒಂದು ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 2019ರಲ್ಲಿ ನಿಕ್ ಜೋನಾಸ್ ಮತ್ತು ಅವರ ಸಹೋದರರು ಒಂದು ಲೈವ್​ ಕಾನ್ಸರ್ಟ್​ ಏರ್ಪಡಿಸಿದ್ದರು. ಆಗ ನಡೆದ ಘಟನೆಯ ವಿಡಿಯೊ ಇದಾಗಿದ್ದು, ಮತ್ತೀಗ ವೈರಲ್ ಆಗುತ್ತಿದೆ.

ಇದು ಅಟ್ಲಾಂಟಾದಲ್ಲಿ ನಡೆದ ಮ್ಯೂಸಿಕ್ ಲೈವ್​ ಕಾನ್ಸರ್ಟ್ ಆಗಿತ್ತು. ಪತಿಯೊಂದಿಗೆ ಸಮಾರಂಭಕ್ಕೆ ಪ್ರಿಯಾಂಕಾ ಚೋಪ್ರಾ ಕೂಡ ಹೋಗಿದ್ದರು. ಅಲ್ಲೆಲ್ಲ ಜೋನಾಸ್​ ಅಭಿಮಾನಿಗಳು ತುಂಬಿ-ತುಳುಕುತ್ತಿದ್ದರು. ಸಾವಿರಾರು ಜನರ ಮಧ್ಯೆ ಯಶಸ್ವಿಯಾಗಿ ಲೈವ್​ ಕಾನ್ಸರ್ಟ್​ ನಡೆದು, ಮುಕ್ತಾಯಗೊಂಡಿತು. ಹೀಗೆ ಸಮಾರಂಭ ನಡೆಯುತ್ತಿದ್ದಾಗಲೇ ನಿಕ್​ ಜೋನಾಸ್​ ಅಭಿಮಾನಿಯೊಬ್ಬಳು ವೇದಿಕೆಯತ್ತ ತನ್ನ ಬ್ರಾ ಎಸೆದಿದ್ದಾಳೆ. ಕಾನ್ಸರ್ಟ್​ ಮುಕ್ತಾಯವಾದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಪತಿಯ ಸಹೋದರ ಕೆವಿನ್ ಜೋನಾಸ್​ ಜತೆ ಹೋಗುತ್ತಿದ್ದಾಗ ನೆಲದ ಬಿದ್ದಿದ್ದ ಬ್ರಾವನ್ನು ನೋಡಿ ಎತ್ತಿಕೊಂಡು, ಅದನ್ನು ಮೇಲೆತ್ತಿ ಪ್ರದರ್ಶಿಸುತ್ತ ಅಲ್ಲಿಂದ ತೆರಳಿದ್ದಾರೆ. ಬ್ರಾ ಹಿಡಿದ ಪ್ರಿಯಾಂಕಾ ಚೋಪ್ರಾ, ಅದನ್ನು ತಿರುಗಿಸಿ, ತಿರುಗಿಸಿ ಕ್ಯಾಮೆರಾಕ್ಕೆ ತೋರಿಸಿದ್ದಾರೆ. ಈ ವೇಳೆ ಅವರು ನಗುತ್ತಿದ್ದರು. ಅದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಮೊದಲು ಭೇಟಿಯಾಗಿದ್ದು ಮೆಟ್ ಗಾಲಾದಲ್ಲಿ 2017ರಲ್ಲಿ. ಪ್ರಿಯಾಂಕಾ ಚೋಪ್ರಾ ವಯಸ್ಸಿನಲ್ಲಿ ನಿಕ್​ ಜೋನಾಸ್​ಗಿಂತಲೂ ದೊಡ್ಡವರು. ಅದು ಅವರಿಗೆ ಮುಖ್ಯವಾಗಲಿಲ್ಲ, 2018ರಲ್ಲಿ ಜೋಧ್​ಪುರದಲ್ಲಿ ವಿವಾಹವಾದರು. ಸದ್ಯ ಪ್ರಿಯಾಂಕಾ ಚೋಪ್ರಾ ತನ್ನ ಪತಿಯೊಂದಿಗೆ ಅಮೆರಿಕದಲ್ಲಿ ವಾಸವಾಗಿದ್ದಾರೆ. 2022ರಲ್ಲಿ ಅವರು ಬಾಡಿಗೆತಾಯಿ ಮೂಲಕ ಹೆಣ್ಣುಮಗುವನ್ನು ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Heeramandi Premiere: ಕಭಿ ಖುಷಿ ಕಭಿ ಗಮ್ʼ ಸಿನಿಮಾ ಮೂಲಕ ಫರೀದಾ ಹೆಚ್ಚು ಜನಪ್ರೀಯತೆ ಪಡೆದವರು. ಬಳಿ ಬಣ್ಣದ ಉಡುಗೆಯಲ್ಲಿ ನಟಿ ಫರೀದಾ ಕ್ಯೂಟ್‌ ಆಗಿ ಕಾಣುತ್ತಿದ್ದರು. ಪಾಪರಾಜಿಗಳಿಗೆ ಮುದ್ದಾಗಿ ಪೋಸ್‌ ಕೊಟ್ಟರು. ಈ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ನಟಿಯನ್ನು ಕಂಡು ಫ್ಯಾನ್ಸ್‌ ಸಂತಸ ಹೊರಹಾಕಿದ್ದಾರೆ.

VISTARANEWS.COM


on

Heeramandi Premiere Farida Jalal rare public appearance
Koo

ಬೆಂಗಳೂರು:  ʼದೇವ್‌ದಾಸ್‌ʼ ‘ರಾಮ್​ ಲೀಲಾ’, ‘ಬಾಜಿರಾವ್​ ಮಸ್ತಾನಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿದವರು ಸಂಜಯ್ ಲೀಲಾ ಬನ್ಸಾಲಿ. ಇದೀಗ ಸಂಜಯ್‌ ಲೀನಾ ಬನ್ಸಾಲಿ ಅವರು ʻಹೀರಾಮಂಡಿ: ದಿ ಡೈಮಂಡ್ ಬಜಾರ್‌ʼ ಸಿರೀಸ್‌ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಏ.24ರ ಬುಧವಾರದಂದು ʻಹೀರಾಮಂಡಿ: ದಿ ಡೈಮಂಡ್ ಬಜಾರ್‌ʼ (Heeramandi: The Diamond Bazaar) ಸಿರೀಸ್‌ ಪ್ರೀಮಿಯರ್‌ ಶೋ (Heeramandi Premiere) ಇತ್ತು. ಕಾರ್ಯಕ್ರಮವೊಂದರಲ್ಲಿ ಹಿರಿಯ ನಟಿ ಫರೀದಾ ಜಲಾಲ್ (Farida Jalal) ಬಹಳ ಸಮಯದ ನಂತರ ಕ್ಯಾಮೆರಾ ಮುಂದೆ ಕಾಣಿಸಿಕೊಂಡರು. ಈ ಸಿರೀಸ್‌ನಲ್ಲಿ ಫರೀದಾ ಕೂಡ ನಟಿಸಿದ್ದಾರೆ.

ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ಮೂಲಕ ಫರೀದಾ ಹೆಚ್ಚು ಜನಪ್ರೀಯತೆ ಪಡೆದವರು. ಬಳಿ ಬಣ್ಣದ ಉಡುಗೆಯಲ್ಲಿ ನಟಿ ಫರೀದಾ ಕ್ಯೂಟ್‌ ಆಗಿ ಕಾಣುತ್ತಿದ್ದರು. ಪಾಪರಾಜಿಗಳಿಗೆ ಮುದ್ದಾಗಿ ಪೋಸ್‌ ಕೊಟ್ಟರು. ಈ ವಿಡಿಯೊ ಹಾಗೂ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ನಟಿಯನ್ನು ಕಂಡು ಫ್ಯಾನ್ಸ್‌ ಸಂತಸ ಹೊರಹಾಕಿದ್ದಾರೆ. ಅಭಿಮಾನಿಯೊಬ್ಬರು ʻʻಫರೀದಾ ಅವರ ನಟನೆ ಮರೆಯುವಂತಿಲ್ಲʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಇಂದಿಗೂ ನಟಿ ಸುಂದರವಾಗಿ ಕಾಣುತ್ತಿದ್ದಾರೆʼʼಎಂದು ಕಮೆಂಟ್‌ ಮಾಡಿದ್ದಾರೆ. ಹೀರಾಮಂಡಿ ಚಿತ್ರದಲ್ಲಿನ ಫರೀದಾ ಪಾತ್ರವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಫರೀದಾ ಇತ್ತೀಚೆಗೆ ಅಕ್ಷಯ್ ಕುಮಾರ್ ಅವರ ʻವೆಲ್ಕಮ್ ಟು ದಿ ಜಂಗಲ್‌ʼಗೆ ಸಿನಿಮಾಗೆ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Heeramandi Trailer: ʻಹೀರಾಮಂಡಿʼ ಟ್ರೈಲರ್‌ ಕಂಡು ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್‌ ಫಿದಾ!

ಸಂಜಯ್ ಲೀಲಾ ಬನ್ಸಾಲಿಯವರ ( Sanjay Leela Bhansali) ಹದಿನಾಲ್ಕು ವರ್ಷಗಳ ಕನಸಿನ ಕೂಸಾಗಿರುವ ನೆಟ್‌ಫ್ಲಿಕ್ಸ್ ಸೀರೀಸ್ ʻಹೀರಾಮಂಡಿ: ದಿ ಡೈಮಂಡ್ ಬಜಾರ್ʼ ಚಿತ್ರದ (Hiramandi: The Diamond Bazaar) ಬಹು ನಿರೀಕ್ಷಿತ ಟ್ರೈಲರ್‌ ಏಪ್ರಿಲ್‌ 10ರಂದು ಬಿಡುಗಡೆಯಾಗಿತ್ತು. ಅನೇಕ ನಟಿಯರು ಈ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಮೇ 1ರಂದು ಈ ವೆಬ್​ ಸಿರೀಸ್​ ವೀಕ್ಷಣೆಗೆ ಲಭ್ಯವಾಗಲಿದೆ.

ಹೀರಾಮಂಡಿ: ದಿ ಡೈಮಂಡ್ ಬಜಾರ್’ನ ಮೊದಲ ಹಾಡು ‘ಸಕಲ್ ಬನ್’ (Sakal Ban) ಮಿಸ್ ವರ್ಲ್ಡ್ 2024 ರ ಫಿನಾಲೆಯಲ್ಲಿ ಲಾಂಚ್‌ ಆಗಿತ್ತು. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್ ಹೈದರಿ, ರಿಚಾ ಚಡ್ಡಾ, ಸಂಜೀದಾ ಶೇಖ್ ಮತ್ತು ಶರ್ಮಿನ್ ಸೆಗಲ್ ಸೇರಿದಂತೆ ಅನೇಕರು ಈ ಹಾಡಿಗೆ ರ್‍ಯಾಂಪ್‌ ವಾಕ್‌ ಮಾಡಿದ್ದರು.

ಸಂಜಯ್ ಲೀಲಾ ಬನ್ಸಾಲಿ ಚಿತ್ರಗಳೆಂದರೆ ಅಲ್ಲೊಂದು ಅದ್ಭುತ ಮಾಯಾಲೋಕವನ್ನೇ ನಾವು ನಿರೀಕ್ಷಿಸಬಹುದು. “ಹೀರಾಮಂಡಿ” ಸ್ವಾತಂತ್ರ್ಯಪೂರ್ವ ಭಾರತದಲ್ಲಿನ ವೇಶ್ಯೆಯರ ಜೀವನದಲ್ಲಿ ಪ್ರೀತಿ ಮತ್ತು ದ್ರೋಹದ ವಿಷಯಗಳನ್ನು ಅನ್ವೇಷಿಸುತ್ತದೆ. ಮನಿಶಾ ಕೊಯಿರಾಲಾ, ಸೋನಾಕ್ಷಿ ಸಿನ್ಹಾ, ಅದಿತಿ ರಾವ್​ ಹೈದರಿ, ರಿಚಾ ಚಡ್ಡಾ, ಶರ್ಮಿನ್​ ಸೇಗಲ್​, ಸಂಜೀದಾ ಶೇಖ್​ ಮುಂತಾದವರು ‘ಹೀರಾಮಂಡಿ’ ವೆಬ್​ ಸಿರೀಸ್​ನಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Ranbir Kapoor: ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು.ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು.

VISTARANEWS.COM


on

Ranbir Kapoor trainer shares transformation Of Ranbir
Koo

ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ. ಇದೀಗ ಬಾಡಿ ಟ್ರಾನ್ಸ್‌ಫರ್ಮೇಶನ್‌ ಫೋಟೊವನ್ನು ಹಂಚಿಕೊಂಡಿದ್ದಾರೆ.

ಏಪ್ರಿಲ್ 24ರಂದು, ರಣಬೀರ್ ಅವರ ತರಬೇತುದಾರ ಶಿವೋಹಂ (trainer Shivoham) ಅವರು ರಣಬೀರ್‌ ಅವರ ಟ್ರಾನ್ಸ್‌ಫರ್ಮೇಶನ್‌ ಫೋಟೊವನ್ನು ಹಂಚಿಕೊಂಡಿದ್ದಾರೆ. ಮೊದಲಿಗೆ ʻಅನಿಮಲ್‌ʼ ಸಿನಿಮಾ ಲುಕ್‌, ಬಳಿಕ ನಾರ್ಮಲ್‌ ಫೋಟೊ, ಹಾಗೇ ಮೂರನೇ ಫೋಟೊದಲ್ಲಿ ರಾಮನ ಪಾತ್ರಕ್ಕೆ ಫಿಟ್‌ ಆಗಿರುವ ರಣಬೀರ್‌ ಫೋಟೊವನ್ನು ಹಂಚಿಕೊಂಡಿದ್ದಾರೆ.

ಶಿವೋಹಂ ಫೋಟೊ ಜತೆಗೆ ʻ “ಇದೊಂದು ಸುಂದರ ಪ್ರಯಾಣ ಮತ್ತು ಮುಂದಿನ ಬ್ಲಾಕ್ಬಸ್ಟರ್ ಯಶಸ್ಸಿಗೆ! ರಣಬೀರ್‌ ಅವರ ʻರಾಮಾಯಣʼ ಸಿನಿಮಾಗೆ ಶುಭ ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ರಾವಣನಾಗಿ ಕಾಣಿಸಿಕೊಳ್ಳುತ್ತಾರೆ ಎಂಬ ಗಾಸಿಪ್ ಹಬ್ಬಿದೆ.

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು.

ಇದನ್ನೂ ಓದಿ: Ranbir Kapoor: `ರಾಮಾಯಣ’ ಸಿನಿಮಾಗಾಗಿ ಕಠಿಣ ವರ್ಕೌಟ್ ಮಾಡುತ್ತಿರುವ ರಣಬೀರ್ ಕಪೂರ್!

ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

ಸದ್ಯ ಯಶ್ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ಸದ್ಯ ಬೇರೆ ಕಲಾವಿದರ ದೃಶ್ಯಗಳನ್ನು ಸೆರೆಹಿಡಿಯಲಿದ್ದು ನಿಧಾನವಾಗಿ ಯಶ್ ತಂಡ ಸೇರಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.

Continue Reading

ಸಿನಿಮಾ

Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Amitabh Bachchan: ಮೂರು ವರ್ಷಗಳಿಂದ ಲತಾ ಮಂಗೇಶ್ಕರ್​ ಕುಟುಂಬ ಈ ಪ್ರಶಸ್ತಿಯನ್ನು ದಿಗ್ಗಜರಿಗೆ ನೀಡಿ ಗೌರವಿಸಿಕೊಂಡು ಬರುತ್ತಿದೆ. ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್ ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ಈ ಮುಂಚೆ ಮಾಹಿತಿ ಹಂಚಿಕೊಂಡಿದ್ದರು. ಜತೆಗೆ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರು ಭಾರತೀಯ ಸಂಗೀತಕ್ಕೆ ನೀಡಿದ ಕೊಡುಗೆಗಾಗಿ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪುರಸ್ಕಾರವನ್ನು (Master Deenanath Mangeshkar Puraskar) ಪಡೆದರು.

VISTARANEWS.COM


on

Amitabh Bachchan, AR Rahman honoured with Deenanath Mangeshkar award
Koo

ಮುಂಬೈ: ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರಿಗೆ ಏಪ್ರಿಲ್ 24ರಂದು ಮುಂಬೈನ ವಿಲೇ ಪಾರ್ಲೆ ಪ್ರದೇಶದಲ್ಲಿ ʻಲತಾ ದೀನನಾಥ್ ಮಂಗೇಶ್ಕರ್ʼ ಪುರಸ್ಕಾರ (Lata Deenanath Mangeshkar award) ನೀಡಿ ಗೌರವಿಸಲಾಯಿತು. ಜತೆಗೆ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರು ಭಾರತೀಯ ಸಂಗೀತಕ್ಕೆ ನೀಡಿದ ಕೊಡುಗೆಗಾಗಿ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪುರಸ್ಕಾರವನ್ನು (Master Deenanath Mangeshkar Puraskar) ಪಡೆದರು. ಏಪ್ರಿಲ್ 24 ರಂದು ಮುಂಬೈನಲ್ಲಿ ಮಂಗೇಶ್ಕರ್ ಕುಟುಂಬದ ಸದಸ್ಯರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಅಮಿತಾಭ್‌ ಬಚ್ಚನ್ ಅವರಿಗೆ ಗಾಯಕಿ ಉಷಾ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಮಾಡಬೇಕಿದ್ದ ಆಶಾ ಭೋಂಸ್ಲೆ ಅವರು ಅಸ್ವಸ್ಥರಾಗಿರುವ ಕಾರಣ ಪ್ರಶಸ್ತಿಯನ್ನು ನೀಡಲಾಗಲಿಲ್ಲ.

ಮೂರು ವರ್ಷಗಳಿಂದ ಲತಾ ಮಂಗೇಶ್ಕರ್​ ಕುಟುಂಬ ಈ ಪ್ರಶಸ್ತಿಯನ್ನು ದಿಗ್ಗಜರಿಗೆ ನೀಡಿ ಗೌರವಿಸಿಕೊಂಡು ಬರುತ್ತಿದೆ. ಭಾರತೀಯ ಸಿನಿಮಾ, ಸಂಸ್ಕೃತಿ ಮತ್ತು ಸಮಾಜದ ಮೇಲೆ ಅಮಿತಾಭ್​ ಬಚ್ಚನ್ ಅವರು ಬೀರಿದ ಪ್ರಭಾವನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ಈ ಮುಂಚೆ ಮಾಹಿತಿ ಹಂಚಿಕೊಂಡಿದ್ದರು.

ಇದನ್ನೂ ಓದಿ: Amitabh Bachchan: 30 ಅಡಿ ಎತ್ತರದ ಬಂಡೆಯಿಂದ ಜಿಗಿದ ಅಮಿತಾಭ್‌: ನಿಜವಾದ ‘ಆ್ಯಕ್ಷನ್ ಹೀರೊʼ ನೀವೆ ಎಂದ ಫ್ಯಾನ್ಸ್‌!

ಪ್ರಶಸ್ತಿ ಸ್ವೀಕಾರ ಮಾಡಿದ ಬಳಿಕ ಅಮಿತಾಭ್‌ ಬಚ್ಚನ್‌ ಮಾತನಾಡಿ, “ಇಂದು ಈ ಪ್ರಶಸ್ತಿಯನ್ನು ಸ್ವೀಕರಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಪ್ರಶಸ್ತಿಗೆ ನಾನು ಅರ್ಹನೆಂದು ಯಾವುತ್ತೂ ಅಂದುಕೊಂಡಿರಲಿಲ್ಲ. ಹೃದಯನಾಥ್ ಜಿ ಅವರು ನಾನು ಇಲ್ಲಿಗೆ ಬರಲು ಸಾಕಷ್ಟು ಪ್ರಯತ್ನಿಸಿದರು. ಹೃದಯನಾಥ್ ಜೀ, ನಾನು ಕೊನೆಯ ಬಾರಿಗೆ ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಈ ಹಿಂದೆ ನೀವು ಕರೆದಾಗ ನಾನು ಅಸ್ವಸ್ಥನಾಗಿದ್ದೆʼʼಎಂದರು .

ಅಮಿತಾಭ್ ಬಚ್ಚನ್ ತಮ್ಮ ಭಾಷಣದಲ್ಲಿ, ಅವರ ತಂದೆ, ಪ್ರಸಿದ್ಧ ಹಿಂದಿ ಕವಿ ಹರಿವಂಶ ರಾಯ್ ಬಚ್ಚನ್ ಅವರು ಲತಾ ಮಂಗೇಶ್ಕರ್ ಅವರ ಧ್ವನಿಯನ್ನು ಪ್ರೀತಿಸುತ್ತಿದ್ದರು ಎಂದರು. ಮಾತ್ರವಲ್ಲ ಲತಾ ಮಂಗೇಶ್ಕರ್ ಧ್ವನಿ ಅತ್ಯಂತ ಮಾಧುರ್ಯ ಹಾಗೂ ಮಧುವಾಗಿತ್ತು ಎಂದು ಹೇಳಿದರು.

ಎಆರ್ ರೆಹಮಾನ್ ಅವರು ತಮ್ಮ ಇನ್‌ಸ್ಟಾದಲ್ಲಿ ಪ್ರಶಸ್ತಿಯ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. “ಇಂದು ʻಲತಾ ದೀನನಾಥ್ ಮಂಗೇಶ್ಕರ್ʼ ಪ್ರಶಸ್ತಿಯನ್ನು ಪಡೆಯಲು ಗೌರವವಾಗಿದೆ. ನಾನು ಮಂಗೇಶ್ಕರ್ ಕುಟುಂಬದ ಪರಂಪರೆಯನ್ನು ಮತ್ತು ಅವರ ಕಲೆಯ ಸಮರ್ಪಣೆಯನ್ನು ಆರಾಧಿಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ನಟರಾದ ರಣದೀಪ್ ಹೂಡಾ, ಅಶೋಕ್ ಸರಾಫ್, ಹಿನ್ನೆಲೆ ಗಾಯಕ ರೂಪಕುಮಾರ್ ರಾಥೋಡ್ ಮತ್ತು ನಟಿ ಪದ್ಮಿನಿ ಕೊಲ್ಹಾಪುರೆ ಅವರನ್ನು ಸನ್ಮಾನಿಸಲಾಯಿತು.

ಬಹು ಅಂಗಾಂಗ ವೈಫಲ್ಯದಿಂದ 2022ರ ಫೆಬ್ರವರಿ 6ರಂದು ನಿಧನರಾದ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥವಾಗಿ ಮಂಗೇಶ್ಕರ್ ಕುಟುಂಬ ಮತ್ತು ಟ್ರಸ್ಟ್ ಈ ಪ್ರಶಸ್ತಿಯನ್ನು ನೀಡುತ್ತ ಬರುತ್ತಿದೆ.

ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ಹಿರಿಯ ಮರಾಠಿ ಸಿನಿಮಾ ಕಲಾವಿದ ಅಶೋಕ್ ಸರಾಫ್, ಮರಾಠಿ ನಟಿ ಪದ್ಮಿನಿ ಕೊಲ್ಹಾಪುರೆ, ಗಾಯಕ ರೂಪ್‌ಕುಮಾರ್ ರಾಥೋಡ್, ಮರಾಠಿ ರಂಗಭೂಮಿಯ ದಿಗ್ಗಜ ಅತುಲ್ ಪರ್ಚುರೆ ಹಾಗೂ ಖ್ಯಾತ ಲೇಖಕಿ ಮಂಜಿರಿ ಫಡ್ಕೆ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಇದೆ ವೇಳೆ ನಟ, ನಿರ್ದೇಶಕ, ನಿರ್ಮಾಪಕ ರಣದೀಪ್ ಹೂಡಾ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ವಿಶೇಷ ಪ್ರಶಸ್ತಿಯನ್ನು ಸ್ವೀಕರಿಸಿದರು.

Continue Reading

ಸಿನಿಮಾ

Vicky Kaushal: ಛತ್ರಪತಿ ಸಂಭಾಜಿ ಮಹಾರಾಜ ಲುಕ್‌ನಲ್ಲಿ ವಿಕ್ಕಿ ಕೌಶಲ್; ಫೋಟೊ ಲೀಕ್‌!

Vicky Kaushal: ವಿಕ್ಕಿ ಕೌಶಲ್ ಕೂಡ ಈ ಸಿನಿಮಾಗಾಗಿ 25 ಕೆಜಿ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಅವರು ದೇಹದ ತೂಕ ಹೆಚ್ಚಿಸಿಕೊಳ್ಳಲು ಬೇರೆ ಡಯಟ್ ಫಾಲೋ ಮಾಡಲಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಅವರು ಛತ್ರಪತಿ ಸಾಂಬಾಜಿ ಮಹರಾಜ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.

VISTARANEWS.COM


on

Vicky Kaushal transforms into Chhatrapati Sambhaji Maharaj
Koo

ಬೆಂಗಳೂರು: ವಿಕ್ಕಿ ಕೌಶಲ್ (Vicky Kaushal) ತಮ್ಮ ಮುಂದಿನ ಚಿತ್ರ `ಛಾವಾ’ದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದೀಗ ವಿಕ್ಕಿ ಕೌಶಲ್ ಅವರ ಛತ್ರಪತಿ ಸಂಭಾಜಿ ಮಹಾರಾಜ ಲುಕ್ (leaked pics from sets of Chhava) ಲೀಕ್ ಆಗಿದೆ. ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ʻಛಾವಾʼ ಸಿನಿಮಾದ ಎರಡನೇ ಶೆಡ್ಯೂಲ್‌ ಫೋಟೊಗಳು ಎಂದು ವರದಿಯಾಗಿದೆ. ಲೀಕ್ ಆದ ಫೋಟೊದಲ್ಲಿ ವಿಕ್ಕಿ ಉದ್ದನೆಯ ಗಡ್ಡವನ್ನು ಬಿಟ್ಟಿರುವುದು ಕಾಣಬಹುದು. ಬೀಜ್ ಸ್ಲೀವ್‌ಲೆಸ್ ಜಾಕೆಟ್, ತಿಳಿ ಕಂದು ಬಣ್ಣದ ಧೋತಿ ಮತ್ತು ಸಾಂಪ್ರದಾಯಿಕ ಪರಿಕರಗಳನ್ನು ಹಾಕಿಕೊಂಡಿದ್ದಾರೆ. ವಿಕ್ಕಿ ಈ ಹೊಸ ಅವತಾರ ಕಂಡು ಅವರ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ವರದಿಯ ಪ್ರಕಾರ, ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಲಿದ್ದಾರೆ. “ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ಇದನ್ನೂ ಓದಿ: Vicky Kaushal: ರಶ್ಮಿಕಾ ಜತೆ ರೊಮ್ಯಾನ್ಸ್‌ ಮಾಡಲು 25 ಕೆಜಿ ತೂಕ ಹೆಚ್ಚಿಸಿಕೊಳ್ಳಲಿದ್ದಾರೆ ವಿಕ್ಕಿ ಕೌಶಲ್!

ವಿಕ್ಕಿ ಕೌಶಲ್ ಕೂಡ ಈ ಸಿನಿಮಾಗಾಗಿ 25 ಕೆಜಿ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ವಿಕ್ಕಿ ಕೌಶಲ್ ಅವರು ದೇಹದ ತೂಕ ಹೆಚ್ಚಿಸಿಕೊಳ್ಳಲು ಬೇರೆ ಡಯಟ್ ಫಾಲೋ ಮಾಡಲಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೂ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಅವರು ಛತ್ರಪತಿ ಸಾಂಬಾಜಿ ಮಹರಾಜ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಶ್ಮಿಕಾ ಈಗಾಗಲೇ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಧ್ವನಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು.

Continue Reading
Advertisement
Narendra Modi
ದೇಶ2 mins ago

Narendra Modi: ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ10 mins ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Minister Dinesh Gundurao latest statement
ಕರ್ನಾಟಕ42 mins ago

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Namma metro
ಕ್ರೀಡೆ1 hour ago

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Job Alert
ಉದ್ಯೋಗ1 hour ago

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Viral Video
ವೈರಲ್ ನ್ಯೂಸ್2 hours ago

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

world record
ಕ್ರೀಡೆ2 hours ago

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

driver lost control and the jeep hit a tree driver died on the spot
ಕ್ರೈಂ2 hours ago

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

2nd PUC Exam 2 KSRTC BMTC bus travel free for students in exam timing
Lok Sabha Election 20243 hours ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುತ್ತೀರಾ? ಹಾಗಿದ್ರೆ ನಿಮ್ಗೆ ಬಸ್‌ ಪ್ರಯಾಣ ಫ್ರೀ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ6 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ6 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ10 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202411 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌