ನಿರ್ಮಾಪಕ ಜಾಕ್‌ ಮಂಜು ಆರೋಗ್ಯದಲ್ಲಿ ಏರುಪೇರು - Vistara News

ಸಿನಿಮಾ

ನಿರ್ಮಾಪಕ ಜಾಕ್‌ ಮಂಜು ಆರೋಗ್ಯದಲ್ಲಿ ಏರುಪೇರು

‘ವಿಕ್ರಾಂತ್ ರೋಣ’, ‘ವಿಂಡೋ ಸೀಟ್’ ಸಿನಿಮಾ ನಿರ್ಮಾಪಕರಾದ ಜಾಕ್‌ ಮಂಜು ಆರೋಗ್ಯದಲ್ಲಿ ಏರು ಪೇರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

ಜಾಕ್‌ ಮಂಜು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಿರ್ಮಾಪಕ ಜಾಕ್‌ ಮಂಜು ಆರೋಗ್ಯದಲ್ಲಿ ಏರುಪೇರಾಗಿ ಬನ್ನೇರುಘಟ್ಟ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ಯಕ್ರಮ ಒಂದರಲ್ಲಿ ಜಾಕ್‌ ಮಂಜು ಬಿದ್ದು ಕಾಲು ಮುರಿದುಕೊಂಡಿದ್ದರು. ಕಳೆದ 20 ದಿನದ ಹಿಂದೆ ಘಟನೆ ಸಂಭವಿಸಿತ್ತು. ಕಾಲು ಪೆಟ್ಟಾಗಿದ್ದರೂ ಕುಂಟುತಲೇ ಫಿಲ್ಮ್‌ ಛೇಂಬರ್‌ ಚುನಾವಣೆಗೆ ಮತದಾನ ಮಾಡಲು ಜಾಕ್‌ ಮಂಜು ಬಂದಿದ್ದರು. ಅಂದಿನಿಂದಲೂ ಕಾಲಿಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬಂದಿರುವ ಸೂಕ್ಷ್ಮತೆ ಇತ್ತೀಚೆಗೆ ತಿಳಿದು ಬಂದಿತ್ತು. ಹೀಗಾಗಿ ಎರಡು‌ ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿ ಆಪರೇಷನ್ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ | Vikrant Rona Movie: ‘ರಾ ರಾ ರಕ್ಕಮ್ಮ’ ಸಾಂಗ್‌ ರಿಲೀಸ್‌

ಜಾಕ್‌ ಮಂಜು ನಿರ್ಮಾಣದ  ‘ವಿಕ್ರಾಂತ್ ರೋಣ’, ‘ವಿಂಡೋ ಸೀಟ್’ ಸಿನಿಮಾ ತೆರೆಗೆ ಬರಲಿರುವ ಸಿನಿಮಾ ಆಗಿದ್ದು, ಜುಲೈ 1ಕ್ಕೆ ‘ವಿಂಡೋ ಸೀಟ್’ ಸಿನಿಮಾ ತೆರೆಗೆ ಬರುತ್ತಿದೆ. ಇದರ ಜತೆಗೆ ಜುಲೈ 28ಕ್ಕೆ ‘ವಿಕ್ರಾಂತ್ ರೋಣ’ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ | Vikrant Rona Film: ಹಿಂದಿಯಲ್ಲಿ ವಿತರಣೆ ಮಾಡಲಿದ್ದಾರೆ ನಟ ಸಲ್ಮಾನ್‌ ಖಾನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

Kangana Ranaut :ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು. .

VISTARANEWS.COM


on

Kangana Ranaut
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್ (Kangana Ranaut )​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್​ಪೋರ್ಟ್​ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

ಕಂಗನಾ ಅವರು ಗುರುವಾರ ಮಧ್ಯಾಹ್ನ 3.30ಕ್ಕೆ ಏರ್​ಪೋರ್ಟ್​ಗೆ ಬಂದಿದ್ದರು. ಕಂಗನಾ ರಣಾವತ್​ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗಾಗಿ ಬರುತ್ತಿದ್ದಾಗ ಕುಲ್ವಿಂದರ್ ಕೌರ್​ ಕೈ ಎತ್ತಿದರು. ಕಂಗನಾ ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಅವರನ್ನು ಪ್ರಸ್ತುತ, ವಿಮಾನ ನಿಲ್ದಾಣದಲ್ಲಿರುವ ಕಮಾಂಡೆಂಟ್ ಕೋಣೆಯಲ್ಲಿ ಕುಳಿತಿರಿಸಲಾಗಿದೆ. ಕಂಗನಾ ದೆಹಲಿಗೆ ತೆರಳಿದ್ದಾರೆ.

ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

Continue Reading

ಪ್ರಮುಖ ಸುದ್ದಿ

Actress Hema: ರೇವ್ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿದ ಪ್ರಕರಣ; ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

Actress Hema: : ಗುರುವಾರ ಆನೇಕಲ್ ಕೋರ್ಟ್‌ಗೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಆನೇಕಲ್​ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​​ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬುಧವಾರ ಹೇಮಾರನ್ನು ಕೋರ್ಟ್​ಗೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅದಕ್ಕೆ ಸಮ್ಮತಿ ಸಿಕ್ಕಿತ್ತು.

VISTARANEWS.COM


on

Actress Hema:
Koo

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ಬಂಧನವಾಗಿದ್ದ ತೆಲುಗು ನಟಿ ಹೇಮಾ (Actress Hema: ) ಅವರ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು ಮತ್ತೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಅವರು ಸಿಸಿಬಿ ಅಧಿಕಾರಿಗಳು ಒಂದು ದಿನದ ಕಸ್ಟಡಿಗೆ ತೆಗೆದುಕೊಂಡಿದ್ದರು. ಗುರುವಾರ ಆ ಅವಧಿ ಮುಕ್ತಾಯಗೊಂಡ ಕಾರಣ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಹಿಂದೆ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದರು.

ಗುರುವಾರ ಆನೇಕಲ್ ಕೋರ್ಟ್‌ಗೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಆನೇಕಲ್​ನ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್​​ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬುಧವಾರ ಹೇಮಾರನ್ನು ಕೋರ್ಟ್​ಗೆ ಹಾಜರುಪಡಿಸಿದ್ದ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಅದಕ್ಕೆ ಸಮ್ಮತಿ ಸಿಕ್ಕಿತ್ತು.

ಏನಿದು ಪ್ರಕರಣ

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ (Telugu actress Hema) ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಚಾಮರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾದಾಗ ಅವರನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.

ನಾನೇನು ತಪ್ಪು ಮಾಡಿಲ್ಲ ಎಂದ ನಟಿ

ಕೋರ್ಟ್‌ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್‌ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್‌ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್‌ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಂಡಿಎಂಎ ಸೇವಿಸಿದ್ದ ನಟಿ

ನಟಿ ಹೇಮಾ ಯಾವ ಡ್ರಗ್ಸ್ ಸೇವಿಸಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಅವರು ಎಂಡಿಎಂಎ ಎಂಬ ಡ್ರಗ್ಸ್ ಅನ್ನು ಸೇವನೆ ಮಾಡಿದ್ದರು ಎಂದು ವರದಿ ಹೇಳುತ್ತಿದೆ. ಮಾತ್ರೆ ರೂಪದಲ್ಲಿ ಇರುವ ಈ ಡ್ರಗ್ಸ್ ಅನ್ನು ಪಾರ್ಟಿಯಲ್ಲಿ ನೀಡಲಾಗಿತ್ತು. ಹೇಮಾ ಅವರು ಈ ಎಂಡಿಎಂಎ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

ಸದ್ಯ ಈ ಪಾರ್ಟಿಯನ್ನು ಆಯೋಜನೆ ಮಾಡಿರುವ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರನ್ನು ಈಗ ವಶಕ್ಕೆ ಪಡೆದುಕೊಳ್ಳಲು ಸಿಸಿಬಿ ಅರ್ಜಿ ಸಲ್ಲಿಸಲು ಮುಂದಾಗಿದೆ. ಅವರನ್ನು ಮತ್ತಷ್ಟು ವಿಚಾರಣೆಗೊಳಪಡಿಸಲು ಪ್ಲ್ಯಾನ್‌ ಮಾಡಿದ್ದು, ಈ ಡ್ರಗ್ಸ್‌ಗಳು ಎಲ್ಲಿಂದ ಬಂದವು? ಯಾರು ವಿತರಣೆ ಮಾಡುತ್ತಿದ್ದಾ

ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದ ತೆಲುಗು ನಟಿ ಹೇಮಾ!

ರೇವ್‌ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

Continue Reading

ಬಾಲಿವುಡ್

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Kangana Ranaut: ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರನೌತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

VISTARANEWS.COM


on

Kangana Ranaut leaves for Delhi in pretty purple saree
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

ಮಂಡಿಯಲ್ಲಿ ಕಂಗನಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳಿಂದ ಸೋಲಿಸಿದ್ದಾರೆ. “ಈ ಪ್ರೀತಿ ಮತ್ತು ವಿಶ್ವಾಸಕ್ಕಾಗಿ ಎಲ್ಲಾ ಮಂಡಿ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು… ಈ ಗೆಲುವು ನಿಮಗೆಲ್ಲರಿಗೂ, ಇದು ಪ್ರಧಾನಿ ಮೋದಿ ಮತ್ತು ಬಿಜೆಪಿ ಮೇಲಿನ ನಿಮ್ಮ ನಂಬಿಕೆಯ ಗೆಲುವುʼʼ ಎಂದು ಕಂಗನಾ ಬರೆದುಕೊಂಡಿದ್ದರು.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ʻʻಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದರು. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದರು.

Continue Reading

ಕಿರುತೆರೆ

Raja Rani Show: ‘ರಾಜಾ ರಾಣಿ’ ಶೋನಲ್ಲಿ ಕುಣಿದು ಕುಪ್ಪಳಿಸಿದ ‘ಕರ್ನಾಟಕ ಜೋಡಿ’; ಹುಣಸೆ ಮರ ಮುಪ್ಪಾದರೆ, ಹುಳಿ ಮುಪ್ಪಾ?

Raja Rani Show: ಈಗಾಗಲೇ ಈ ಶೋನ ಹಲವು ಪ್ರೋಮೋಗಳು ರಿಲೀಸ್‌ ಆಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈಗಾಗಲೇ ದಿವ್ಯಶ್ರೀ ಜಿಜಿ ದಂಪತಿ, ರಂಜಿತಾ ಸೀರುಂಡೆ ರಘು, ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ ಮತ್ತು ಅಕ್ಷತಾ ಸೇರಿ ಇನ್ನೂ ಹಲವು ಜೋಡಿಗಳು ಈ ಸಲದ ಶೋನಲ್ಲಿರಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು.

VISTARANEWS.COM


on

Raja Rani Show performance Karnataka Jodi in colors
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ʻಕರ್ನಾಟಕ ಜೋಡಿʼ (Karnataka Jodi) ಸಿಕ್ಕಾಪಟ್ಟೆ ಫೇಮಸ್ ಆಗಿಬಿಟ್ಟಿದೆ. ಈ ಮಧ್ಯವಯಸ್ಕ ಗೋವಿಂದರಾಜ್ ದಂಪತಿ ‘ ಯಾಮಿನಿ ಯಾಮಿನಿ’ ಹಾಡಿನ ಗುಂಗು ಹಿಡಿಸಿತ್ತು. ಈ ದಂಪತಿ ‘ಕದಂಬ’ ಚಿತ್ರದ ‘ಯಾಮಿನಿ ಯಾರಮ್ಮ ನೀನು ಯಾಮಿನಿ..’ ಸಾಂಗ್‌ಗೆ ಇವರು ಡ್ಯಾನ್ಸ್‌ ಮಾಡಿದಾಗ ಅದು ತುಂಬ ದೊಡ್ಡಮಟ್ಟದಲ್ಲಿ ವೈರಲ್ ಆಯ್ತು (Raja Rani Show). ಆನಂತರ ಇವರ ಫಾಲೋವರ್ಸ್ ಸಂಖ್ಯೆ ಕೂಡ ಜಾಸ್ತಿ ಆಗಿತ್ತು. ಇದೀಗ ಜೋಡಿ  ‘ರಾಜಾ ರಾಣಿ’ ರೀಲೋಡೆಡ್‌ ಶೋನಲ್ಲಿ ಬಂದು ಹೆಜ್ಜೆ ಹಾಕಿದೆ.

ರಾಜಾ ರಾಣಿ ಶೋಗೆ ‘ಕರ್ನಾಟಕ ಜೋಡಿ’ ಬಂದಿರುವ ಕುರಿತ ಪ್ರೋಮೋ ರಿಲೀಸ್ ಆಗಿದೆ. ಅದರಲ್ಲಿ ಇಬ್ಬರು ಕೂಡ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.  “ನಮಗೆ 51 ವಯಸ್ಸು ಆದಮೇಲೆ ನಮ್ಮ ಕೆಲಸ ಶುರುವಾಗಿದೆ. ನಾವು ಇಲ್ಲಿವರೆಗೂ ಬರ್ತಿವಿ ಎಂದು ಗೊತ್ತಿರಲಿಲ್ಲ..” ಎಂದು ಗೋವಿಂದರಾಜ್‌ ಹೇಳಿದ್ದಾರೆ. “ಈ ವಯಸ್ಸಿನಲ್ಲೂ ಇಷ್ಟೊಂದು ರೊಮ್ಯಾನ್ಸ್ ಹೇಗೆ” ಎಂದು ನಿರೂಪಕಿ ಅನುಪಮಾ ಗೌಡ ಕೇಳಿದ್ದಾರೆ. ಅದಕ್ಕೆ ಉತ್ತರಿಸಿರುವ ಗೋವಿಂದರಾಜ್, “ಹುಣಸೆಮರ ಮುಪ್ಪಾದ್ರೂ, ಹುಳಿ ಮುಪ್ಪಾಗುತ್ತಾ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

ಗೋವಿಂದರಾಜ್ ಹಾಗೂ ವೈಲಾ ದಂಪತಿ ಇದೀಗ ಕರ್ನಾಟಕ ಜೋಡಿ ಎಂದೇ ನೆಟ್ಟಿಗರಿಗೆ ಹೆಚ್ಚು ಪರಿಚಿತರಾಗಿಬಿಟ್ಟಿದ್ದಾರೆ. ಸೂಪರ್ ಹಿಟ್ ಸಿನಿಮಾ ಗೀತೆಗಳಿಗೆ ಡ್ಯಾನ್ಸ್ ಮಾಡುತ್ತಾ, ರೀಲ್ಸ್ ಮಾಡುತ್ತಾ ಈ ಜೋಡಿ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದೆ. ಹಾಡಿಗೆ 50ರ ಹರೆಯದ ಜೋಡಿಯ ಸ್ಟೆಪ್ಸ್, ಹಾವಭಾವ ನೋಡಿದವರು ಫಿದಾ ಆಗಿದ್ದರು. ಮುಖ್ಯವಾಗಿ ಕ್ಯಾಮರಾ ವರ್ಕ್ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು. ಪ್ರೀತಿಸಿ ಮದುವೆ ಆಗಿರುವ ಗೋವಿಂದರಾಜ್- ವೈಲಾ ಜೋಡಿ ಬಹಳ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿದ್ದಾರೆ. 26 ವರ್ಷಗಳ ಹಿಂದೆ ವೈಲಾ ಅವರನ್ನು ಮೊದಲ ಬಾರಿ ನೋಡಿದಾಗಲೇ ಗೋವಿಂದರಾಜ್ ಪ್ರೀತಿಲಿ ಬಿದ್ದಿದ್ದರಂತೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದ ಇಬ್ಬರು ಮದುವೆ ಆಗಿ ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ವಾಸವಾಗಿದ್ದಾರೆ.ಗೋವಿಂದರಾಜ್ ಅವರಿಗೆ 50 ವಯಸ್ಸು ಇನ್ನು ವೈಲಾ ಅವರಿಗರ 48 ವರ್ಷ ಎಂದು ಹೇಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಈಗಾಗಲೇ ಈ ಶೋನ ಹಲವು ಪ್ರೋಮೋಗಳು ರಿಲೀಸ್‌ ಆಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈಗಾಗಲೇ ದಿವ್ಯಶ್ರೀ ಜಿಜಿ ದಂಪತಿ, ರಂಜಿತಾ ಸೀರುಂಡೆ ರಘು, ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ ಮತ್ತು ಅಕ್ಷತಾ ಸೇರಿ ಇನ್ನೂ ಹಲವು ಜೋಡಿಗಳು ಈ ಸಲದ ಶೋನಲ್ಲಿರಲಿದ್ದಾರೆ.

Continue Reading
Advertisement
Karnataka weather Forecast
ಮಳೆ3 mins ago

Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Kangana Ranaut
ಪ್ರಮುಖ ಸುದ್ದಿ11 mins ago

Kangana Ranaut : ರೈತ ವಿರೋಧಿ ಹೇಳಿಕೆ ನೀಡಿದ್ದಕ್ಕೆ ಕೋಪ;​ ನಟಿ, ಸಂಸದೆ ಕಂಗನಾ ರಣಾವತ್​ಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ

ಕರ್ನಾಟಕ27 mins ago

Valmiki Corporation Scam: ರಾಜೀನಾಮೆ ಸ್ವಯಂಪ್ರೇರಿತ, ಯಾರ ಒತ್ತಡಕ್ಕೂ ಮಣಿದಿಲ್ಲ: ಬಿ.ನಾಗೇಂದ್ರ

Parachute Pants Fashion
ಫ್ಯಾಷನ್32 mins ago

Parachute Pants Fashion: ಪ್ಯಾರಾಶೂಟ್‌ ಪ್ಯಾಂಟ್ಸ್; ಟೀನೇಜ್‌ ಹುಡುಗಿಯರ ಹೊಸ ಟ್ರೆಂಡ್‌!

Actress Hema:
ಪ್ರಮುಖ ಸುದ್ದಿ32 mins ago

Actress Hema: ರೇವ್ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸಿದ ಪ್ರಕರಣ; ನಟಿ ಹೇಮಾಗೆ ಮತ್ತೆ ನ್ಯಾಯಾಂಗ ಬಂಧನ

Money Guide
ಮನಿ-ಗೈಡ್51 mins ago

Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

Kangana Ranaut leaves for Delhi in pretty purple saree
ಬಾಲಿವುಡ್57 mins ago

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Uric Acid
ಆರೋಗ್ಯ1 hour ago

Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

IND vs PAK T20 Match
ಕ್ರಿಕೆಟ್1 hour ago

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

ಪ್ರಮುಖ ಸುದ್ದಿ1 hour ago

MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌