Gadar 2 Movie : ಕೇವಲ 16 ದಿನದಲ್ಲಿ ಕೆಜಿಎಫ್​ 2 ದಾಖಲೆ ಚಿಂದಿ ಮಾಡಿದ ಗದರ್​ 2 - Vistara News

ಪ್ರಮುಖ ಸುದ್ದಿ

Gadar 2 Movie : ಕೇವಲ 16 ದಿನದಲ್ಲಿ ಕೆಜಿಎಫ್​ 2 ದಾಖಲೆ ಚಿಂದಿ ಮಾಡಿದ ಗದರ್​ 2

ಸನ್ನಿ ಡಿಯೋಲ್ ಅವರ ಆ್ಯಕ್ಷನ್​ ಚಿತ್ರ (Gadar 2 Movie) ಬಾಕ್ಸ್ ಆಫೀಸ್ ಶನಿವಾರ 13.75 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದು, ಒಟ್ಟು ಗಳಿಕೆಯನ್ನು 439.95 ಕೋಟಿ ರೂಪಾಯಿಗೆ ಏರಿಸಿದೆ

VISTARANEWS.COM


on

Gadar 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸನ್ನಿ ಡಿಯೋಲ್ (Sunny Deol) ಅಭಿನಯದ ‘ಗದರ್ 2’ ಚಿತ್ರ (Gadar 2 Movie) ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದೆ. 2001 ರ ವಾರ್​ ಡ್ರಾಮಾದ ಮುಂದುವರಿದ ಎರಡನೇ ಭಾಗವಾಗಿರುವ ಈ ಚಿತ್ರವು ಗಲ್ಲಾಪೆಟ್ಟಿಗೆಯ ಕಾಂಚಾಣ ನೃತ್ಯ ಮಾಡುತ್ತಿದೆ . ಒಂದು ವಾರದಿಂದ ಸ್ವಲ್ಪ ಕುಸಿತದ ನಂತರ ಇದೀಗ ಮತ್ತೆ ಕಲೆಕ್ಷನ್​ ಚೇತರಿಸಿಕೊಂಡಿದ್ದು. 2 ಶನಿವಾರ ಒಂದೇ ದಿನ 13.75 ಕೋಟಿ ರೂ.ಗಳನ್ನು ಗಳಿಸಿದೆ. ಈ ಮೂಲಕ 16 ದಿನಗಳ ಸಂಗ್ರಹವನ್ನು 439.95 ಕೋಟಿ ರೂ.ಗೆ ತಲುಪಿದೆ. ಅನಿಲ್ ಶರ್ಮಾ ( Anil Sharma) ನಿರ್ದೇಶನದ ಈ ಚಿತ್ರವು ಈಗ ಕೆಜಿಎಫ್ 2 ಹಿಂದಿಯ ಕಲೆಕ್ಷನ್ (435 ಕೋಟಿ ರೂ.) ಅನ್ನು ಹಿಂದಿಕ್ಕಿ ಮೂರನೇ ಅತಿ ಗಳಿಕೆಯ ಚಿತ್ರ (ಹಿಂದಿ ಭಾಷೆ) ಎನಿಸಿಕೊಂಡಿದೆ.

ಇತ್ತೀಚಿನ ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು ಹಂಚಿಕೊಂಡ ಟ್ರೇಡ್​ ಅನಾಲಿಸ್ಟ್​ ತರಣ್ ಆದರ್ಶ್, ದಂಗಲ್​, ಬಾಹುಬಲಿ2 ಸಿನಿಮಾವನ್ನು ಗಳಿಕೆಯಲ್ಲಿ ಹಿಂದಿಕ್ಕಿದ್ದ ಗದರ್​ 2 ಇದೀಗ ಕೆ.ಜಿಎಫ್​ ಸಿನಿಮಾದ ದಾಖಲೆಯನ್ನೂ ಮುರಿದಿದೆ ಎಂದು ಬರೆದುಕೊಂಡಿದ್ದಅರೆ ಸಿನಿಮಾ ದಾಖಲೆಗಳನ್ನು ಮುರಿಯುತ್ತಲೇ ಇದೆ [ವಾರ 3] ಶುಕ್ರವಾರ 7.10 ಕೋಟಿ, ಶನಿವಾರ 13.75 ಕೋಟಿ. ಒಟ್ಟು: 439.95 ಕೋಟಿ ಆಗಿದೆ ಎಂದು ಹೇಳಿದ್ದಾರೆ.

ಸನ್ನಿ ಡಿಯೋಲ್-ಅಮೀಷಾ ಪಟೇಲ್ ಮುಂಚೂಣಿಯಲ್ಲಿರುವ ಈ ಚಿತ್ರವು ಈಗ ಪಠಾನ್​ (543 ಕೋಟಿ ರೂ.) ಮತ್ತು ಬಾಹುಬಲಿ 2 – ದಿ ಕನ್ ಕ್ಲೂಷನ್ (511 ಕೋಟಿ ರೂ.) ನಂತರದ ಸ್ಥಾನದಲ್ಲಿದೆ. ಗದರ್ 2 ತನ್ನ ನಾಲ್ಕನೇ ವಾರದಲ್ಲಿ 500 ಕೋಟಿ ರೂ.ಗಳನ್ನು ದಾಟುವ ಸಾಧ್ಯತೆಯಿದೆ, ಶಾರುಖ್ ಖಾನ್ ಅವರ ಜವಾನ್ ಸೆಪ್ಟೆಂಬರ್ 7 ರಂದು ಬಿಡುಗಡೆಯಾಗಲಿದೆ. ಇದು ಗದರ್ ಗಳಿಕೆಗೆ ಅತಿದೊಡ್ಡ ಅಡಚಣೆಯಾಗಬಹುದು.

ಗದರ್ 2 ವರ್ಸಸ್ ಪಠಾಣ್​

ಇತ್ತೀಚಿನ ಸಂದರ್ಶನವೊಂದರಲ್ಲಿ, ನಿರ್ದೇಶಕ ಅನಿಲ್ ಶರ್ಮಾ ಅವರು ಚಿತ್ರದ ತಾರೆ ಸನ್ನಿ ಡಿಯೋಲ್ ಅವರೊಂದಿಗೆ ಬಾಕ್ಸ್ ಆಫೀಸ್ ಹೈಪ್​ ಅನ್ನು ನಿರ್ಲಕ್ಷಿಸಿದ್ದರು. ಗದರ್ 2 ನೊಂದಿಗೆ “ಜನರ ಹೃದಯದಲ್ಲಿ ಸ್ಥಾನ ಪಡೆಯಲು” ಬಯಸಿದ್ದೇವೆ ಎಂದು ಹೇಳಿದ್ದರು. ಅದನ್ನು ಮಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ : Gadar 2: ʻಪಠಾಣ್‌ʼ, ʻಕೆಜಿಎಫ್‌ʼ, ʻದಂಗಲ್‌ʼ ದಾಖಲೆ ಮುರಿದ ಗದರ್‌ 2; ನಿಲ್ಲುತ್ತಲೇ ಇಲ್ಲ ಚಿತ್ರದ ಹವಾ!

ಶಾರುಖ್ ಖಾನ್ ಅವರ ಪಠಾಣ್​ ಹಿಂದಿಕ್ಕುವ ನಿಮ್ಮ ಚಿತ್ರವನ್ನು ಹಿಂದಿಕ್ಕುವ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಅನಿಲ್ ಶರ್ಮಾ “ನಾನು ಸಂಖ್ಯೆಗಳನ್ನು ನಂಬುವುದಿಲ್ಲ, ಪ ಠಾಣ್​ ಅಸಾಧಾರಣವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಕೆಜಿಎಫ್ (ಚಾಪ್ಟರ್ 2) ಸಹ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಈಗ, ಗದರ್ 2 ಕೂಡ ಪ್ರದರ್ಶನ ನೀಡುತ್ತಿದೆ. ಈಗ, ಅದು ಎಷ್ಟು ದೂರ ಹೋಗುತ್ತದೆ, ಸಾರ್ವಜನಿಕರು ಅದನ್ನು ಎಷ್ಟು ದೂರ ಕೊಂಡೊಯ್ಯುತ್ತಾರೆ ಎಂದು ನೋಡೋಣ ಎಂದಿದ್ದರು.

ಇದು ಸಾರ್ವಜನಿಕರ ಸಿನಿಮಾ. ನಾವು ಈಗಾಗಲೇ 400 ಕೋಟಿ ರೂ.ಗಳನ್ನು ದಾಟಿದ್ದೇವೆ. ಇದು ಮುಂಬರುವ ವಾರದಲ್ಲಿ 500 ಕೋಟಿ ರೂ.ಗಳನ್ನು ತಲುಪುತ್ತದೆ. ಒಂದು ಹಂತದಲ್ಲಿ 1,000 ಕೋಟಿ ರೂ.ಗಳ ಗಡಿಯನ್ನು ತಲುಪಬಹುದು. ಆದ್ದರಿಂದ, ನಾವು ಸಂಖ್ಯೆಗಳನ್ನು ಮಾತ್ರ ನೋಡುತ್ತಿಲ್ಲ, ನಾವು ಜನರ ಹೃದಯದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಜನರು ಅದನ್ನು ನೋಡುತ್ತಿದ್ದಾರೆ ಮತ್ತು ಪ್ರೀತಿಸುತ್ತಿದ್ದಾರೆ. ಅದು ನಮಗೆ ಸಾಕು. ಇಂದು ಹೊರಬಂದ (ಬಾಕ್ಸ್ ಆಫೀಸ್) ಸಂಖ್ಯೆಗಳು ನಿಜವಾದವು, ನಕಲಿ ಏನೂ ಇಲ್ಲ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

Prajwal Revanna Case : ಗುರುವಾರ ಮಧ್ಯರಾತ್ರಿ 12.47ರ ಸುಮಾರಿಗೆ ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಬಂದಿಳಿಯುತ್ತಿದ್ದಂತೆ ವಲಸೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಅವರು ಎಸ್​​ಐಟಿಗೆ ಹಸ್ತಾಂತರ ಮಾಡಿದರು. ಸಾವಿರಾರು ಮಹಿಳೆಯರಿಗೆ ಅನ್ಯಾಯ ಮಾಡಿ ಅವರ ಕಣ್ಣೀರಿಗೆ ಕಾರಣನಾದ ಪ್ರಜ್ವಲ್​ ರೇವಣ್ಣನನ್ನು ರೇವಣ್ಣನನ್ನು ಬಂಧಿಸಿದ್ದು ಮಹಿಳಾ ಪೊಲೀಸ್ ಅಧಿಕಾರಿಗಳು.

VISTARANEWS.COM


on

prajwal Revanna Case
Koo

ಬೆಂಗಳೂರು : ಜರ್ಮನಿಯ ಮ್ಯೂನಿಕ್​ನಿಂದ 33 ದಿನಗಳ ಕಳ್ಳಾಟದ ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಗುರುವಾರ ರಾತ್ರಿ ಬಂದಿದ್ದ ಪೆನ್​ಡ್ರೈವ್​ ಅಶ್ಲೀಲ ವಿಡಿಯೊ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna Case) ಅವರನ್ನು ಆರಂಭದಲ್ಲಿ ವಶಕ್ಕೆ ಪಡೆದುಕೊಂಡಿರುವುದು ಮಹಿಳಾ ಪೊಲೀಸರು ಎಂಬ ಮಾಹಿತಿ ಬಹಿರಂಗವಾಗಿದೆ. ಎಸ್​ಐಟಿ ಸೇರಿದಂತೆ ವಿವಿಧ ವಿಭಾಗದ ಹಲವಾರು ಪುರುಷ ಅಧಿಕಾರಿಗಳು ಏರ್​ಪೋರ್ಟ್​​ನಲ್ಲಿ ಅವರ ಬಂಧನಕ್ಕೆ ಕಾಯುತ್ತಿದ್ದ ಹೊರತಾಗಿಯೂ ಮಹಿಳಾ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿರುವುದಕ್ಕೆ ವಿಶೇಷ ಕಾರಣಗಳೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಹಿರಿಯ ಅಧಿಕಾರಿಗಳ ಈ ನಡೆ ಮಾತ್ರ ಸೋಜಿಗ ಎನಿಸಿದೆ.

ಗುರುವಾರ ಮಧ್ಯರಾತ್ರಿ 12.47ರ ಸುಮಾರಿಗೆ ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಬಂದಿಳಿಯುತ್ತಿದ್ದಂತೆ ವಲಸೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಅವರು ಎಸ್​​ಐಟಿಗೆ ಹಸ್ತಾಂತರ ಮಾಡಿದರು. ಸಾವಿರಾರು ಮಹಿಳೆಯರಿಗೆ ಅನ್ಯಾಯ ಮಾಡಿ ಅವರ ಕಣ್ಣೀರಿಗೆ ಕಾರಣನಾದ ಪ್ರಜ್ವಲ್​ ರೇವಣ್ಣನನ್ನು ರೇವಣ್ಣನನ್ನು ಬಂಧಿಸಿದ್ದು ಮಹಿಳಾ ಪೊಲೀಸ್ ಅಧಿಕಾರಿಗಳು.

ಮಹಿಳಾ ಇನ್ಸ್‌ಪೆಕ್ಟರ್‌ ಸಹಿತ ಇನ್ನಿತರ ಮಹಿಳಾ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಎಸ್‌ಐಟಿ ಕಚೇರಿಗೆ ಕರೆ ತಂದಿರುವ ವಿಡಿಯೊ ವಿಸ್ತಾರನ್ಯೂಸ್​ಗೆ ಲಭ್ಯವಾಗಿದೆ. ಎಸ್‌ಐಟಿ ಕಚೇರಿಗೆ ಕರೆತರುವ ವೇಳೆ ಪೊಲೀಸರ ವಾಹನದ ಡ್ರೈವರ್‌ ಒಬ್ಬರನ್ನು ಬಿಟ್ಟರೆ ಇನ್ನೆಲ್ಲಾ ಅಧಿಕಾರಿಗಳು ಮಹಿಳೆಯರೇ ಆಗಿದ್ದರು. ಮುಂದಿನ ಸೀಟಿನಲ್ಲಿ ಪ್ರಜ್ವಲ್​ ಅವರ ಹಿಂದೆ ಹಾಗೂ ಮುಂದೆ ಅವರೇ ಇದ್ದರು.

ಇದನ್ನೂ ಓದಿ: Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ! —

ಇದಕ್ಕೆ ನಾನಾ ರೀತಿಯ ವಿಶ್ಲೇಷಣೆ ನೀಡಲಾಗುತ್ತದೆ. ಸಾವಿರಾರ ಮಹಿಳೆಯರಿಗೆ ದೌರ್ಜನ್ಯ ಮಾಡಿರುವ ಪ್ರಜ್ವಲ್​ಗೆ ಅವಮಾನ ಮಾಡಲೆಂದೇ ಅವರನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ ಎಂದು ಕೆಲವರು ಹೇಳಿದರೆ, 33 ದಿನಗಳ ಕಾಲ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಅವರಿಗೆ ಪಾಠ ಕಲಿಸಲೆಂದೇ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಅದೇ ರೀತಿ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಕೆಲವೊಂದು ಮಾಹಿತಿಯನ್ನು ಅವರಿಂದ ಸಂಗ್ರಹಿಸಲು ಅನುಕೂಲವಾಗಲು ಮಹಿಳಾ ಪೊಲೀಸರ ನೆರವು ಪಡೆಯಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಮಾಹಿತಿಯೂ ಇದೆ.

ಎಸ್​ಐಟಿ ಕಚೇರಿಯಲ್ಲಿ ವಿಶ್ರಾಂತಿ

ಏರ್​ಪೋರ್ಟ್​ನಲ್ಲಿ ಬಂಧಿಸಿದ್ದ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ನನ್ನು ನೇರವಾಗಿ ಎಸ್‌ಐಟಿ ಕಚೇರಿಗೆ ಕರೆತಂದ ಬಳಿಕ ಅಲ್ಲೇ ವಿಶ್ರಾಂತಿಗೆ ಅವಕಾಶ ಕೊಟ್ಟರು. ಶುಕ್ರವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಮೆಡಿಕಲ್ ಟೆಸ್ಟ್ ಮುಗಿಸಿದ ಬಳಿಕ ಸುಮಾರು ಹನ್ನೊಂದು ಗಂಟೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಪ್ರಜ್ವಲ್ ಪರ ವಕೀಲರು ಈ ವೇಳೆ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ. ಆದರೆ ಅವರ ಮೇಲೆ ಹಾಕಿರುವ ಕೆಲವೊಂದು ಸೆಕ್ಷನ್​​ಗಳು ಜಾಮೀನು ರಹಿತವಾಗಿದೆ. ಜತೆಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಅವಕಾಶದ ಜೊತೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐಟಿ ಕಸ್ಟಡಿ ಪಡೆಯಲಿದೆ.

ಎರಡು ಅತ್ಯಾಚಾರ ಪ್ರಕರಣ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಎಸ್‌ಐಟಿ ಅಧಿಕಾರಿಗಳು ವಿವರಣೆ ನೀಡಲಿದ್ದಾರೆ. ಹೀಗಾಗಿ ಅರ್ಜಿ ಸಲ್ಲಿಸಿದ್ರೂ ಜಾಮೀನು ಸಿಗದು. ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಈಗಾಗಲೇ ಪ್ರಜ್ವಲ್ ರೇವಣ್ಣನ ಮೊಬೈಲ್ ಫೋನ್‌ಅನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ ಅದರಲ್ಲಿ ಎಷ್ಟು ಡೇಟಾಗಳಿವೆ ಎಂಬುದು ಅಸ್ಪಷ್ಟ.

Continue Reading

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗೆ ಎಸ್‌ಐಟಿ? ಸಿಬಿಐ ತನಿಖೆ ತಪ್ಪಿಸಲು ಪ್ಲಾನ್

Valmiki Corporation Scam: ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಸಚಿವ ಪರಮೇಶ್ವರ್ (G Parameshwara) ಜೊತೆ ಅಧಿಕಾರಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಸಿಎಂ ಮತ್ತು ಹೋಂ ಮಿನಿಸ್ಟರ್ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ.

VISTARANEWS.COM


on

valmiki corporation scam self harming chandrashekar ವಾಲ್ಮೀಕಿ
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki development corporation) ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ (Officer self Harming) ಪ್ರಕರಣದ (Valmiki corporation Scam) ತನಿಖೆಯನ್ನು ಸಿಐಡಿಗೆ (CID) ಒಪ್ಪಿಸಿರುವರಾಜ್ಯ ಸರ್ಕಾರ, ಇದೀಗ ಪ್ರತಿಪಕ್ಷದ ಒತ್ತಡದಿಂದ ಸಿಬಿಐ (CBI) ತನಿಖೆಗೆ ಹೋಗಬಹುದಾದ ಸನ್ನಿವೇಶ ಎದುರಿಸಲು ಎಸ್ಐಟಿ (SIT) ರಚನೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

185 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆಯ (Illegal Money transfer) ಗಂಭೀರ ಸ್ವರೂಪದ ಪ್ರಕರಣ ಇದಾಗಿರುವುದರಿಂದ ಈಗಾಗಲೇ ಸಿಐಡಿ ತನಿಖೆಗೆ ಸರ್ಕಾರ ನೀಡಿದೆ. ಆದರೆ ಪ್ರತಿಪಕ್ಷಗಳು ಸಿಬಿಐ ತನಿಖೆಗೆ ನೀಡಲು ಒತ್ತಾಯಿಸುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಸಚಿವ ಪರಮೇಶ್ವರ್ (G Parameshwara) ಜೊತೆ ಅಧಿಕಾರಿಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ ಎಸ್‌ಐಟಿ ರಚನೆ ಬಗ್ಗೆ ತೀರ್ಮಾನ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಸಿಎಂ ಮತ್ತು ಹೋಂ ಮಿನಿಸ್ಟರ್ ಸಭೆ ಭಾರೀ ಮಹತ್ವ ಪಡೆದುಕೊಂಡಿದೆ.

ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವಂತೆ ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹತ್ತು ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚು ಬ್ಯಾಂಕ್‌ ಹಣದಲ್ಲಿ ಅವ್ಯವಹಾರ ಆಗಿದ್ದರೆ ಇದರಲ್ಲಿ ಸಿಬಿಐ ಎಂಟ್ರಿ ಆಗಬಹುದು. ಇದನ್ನು ಸಿಬಿಐ ಹಾಗೂ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುವ ಮೊದಲೇ ಎಸ್ಐಟಿ ರಚನೆ ಮಾಡಿ ತನಿಖೆ ಇನ್ನಷ್ಟು ಚುರುಕುಗೊಳಿಸಲು ಸರ್ಕಾರ ತೀರ್ಮಾನ ಮಾಡುವ ಸಾಧ್ಯತೆ ಇದೆ. ಜೊತೆಗೆ, ಪ್ರಕರಣದಲ್ಲಿ ಕೇಳಿ ಬಂದಿರುವ ಹೆಸರಾದ ಅಧಿಕಾರಿ ನಾಗರಾಜ್‌, ಸಚಿವ ನಾಗೇಂದ್ರ ಜೊತೆ ಆಪ್ತರಾಗಿರುವುದರಿಂದಲೂ, ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ಇಷ್ಟವಿಲ್ಲದಾಗಿದೆ.

ರಿಪೋರ್ಟ್ ಬರೋತನಕ ಸಚಿವ ನಾಗೇಂದ್ರ ಸೇಫ್?

ಪ್ರಕರಣದಲ್ಲಿ ಸಚಿವ ನಾಗೇಂದ್ರ ಕೈವಾಡವಿದೆ, ಹೀಗಾಗಿ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಹಾಗೇ ಸಿಎಂ ತುರ್ತಾಗಿ ಸಭೆ ನಡೆಸಿದ್ದು, ಡಿಜಿ ಅಲೋಕ್ ಮೋಹನ್‌ರಿಂದ CID ಪ್ರಾಥಮಿಕ ಮಾಹಿತಿ ಪಡೆದು‌ಕೊಂಡಿದ್ದಾರೆ. ಕಾವೇರಿ ನಿವಾಸದಲ್ಲಿ ಒಂದು ಗಂಟೆಗಳ ಕಾಲ‌ ಡಿಸಿಎಂ ಜೊತೆಯೂ ಚರ್ಚೆ ನಡೆಸಿದರು.

ಅಕ್ರಮ ಹಣ ವರ್ಗಾವಣೆ ಸಂಬಂಧ ಈಗಾಗಲೇ ನಿಗಮದ ಎಂಡಿ ಸೇರಿದಂತೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು CIDಗೆ ವಹಿಸಲಾಗಿದೆ. CID ರಿಪೋರ್ಟ್ ಬರೋದಿಕ್ಕಿಂತ ಮುಂಚೆ ಯಾವುದೇ ಕಾರಣಕ್ಕೂ ಸಚಿವರ ಮೇಲೆ ಕ್ರಮ ಸಲ್ಲದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. CID ರಿಪೋರ್ಟ್ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳೋಣ ಎನ್ನುವ ನಿರ್ಧಾರಕ್ಕೆ ಸಿಎಂ, ಡಿಸಿಎಂ ಬಂದಿದ್ದಾರೆ ಎನ್ನಲಾಗಿದೆ.

ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಇಂದು ಮತ್ತೊಂದು ಸುತ್ತಿನ ಸಭೆಯನ್ನು ಸಿಎಂ ಹಾಗೂ ಡಿಸಿಎಂ ನಡೆಸಲಿದ್ದಾರೆ. ಕಾವೇರಿ ನಿವಾಸದಲ್ಲಿ 11 ಗಂಟೆ ನಂತರ ಸಿಎಂ- ಡಿಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ. ನಾಗೇಂದ್ರ ಪ್ರಕರಣ ಸಿಬಿಐಗೆ ವರ್ಗಾವಣೆಯಾದರೆ ನಾಗೇಂದ್ರ ತಲೆದಂಡ ಎಂಬ ಚರ್ಚೆ ಶುರುವಾಗಿದೆ. ರಾಜ್ಯ ಸರ್ಕಾರ CID ತನಿಖೆ ನಂತರ ಕ್ರಮ ಕೈಗೊಳ್ಳೋಣ ಎಂಬ ನಿರ್ಧಾರಕ್ಕೆ ಬಂದಿತ್ತು. ಆದ್ರೆ RBI ರೂಲ್ಸ್ ಪ್ರಕಾರ, 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ಸಿಬಿಐ ಕೂಡ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಮುಂದಿನ ನಡೆಯ ಬಗ್ಗೆ ಇಂದು ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Continue Reading

ಉದ್ಯೋಗ

Job Alert: ಗಮನಿಸಿ; 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 30. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ ಪಂದ್ಯ ನಡೆಯುವ ತಾಣ,ಭಾರತದ ಪಂದ್ಯಗಳ ಪ್ರಸಾರದ ಮಾಹಿತಿ ಹೀಗಿದೆ

T20 World Cup 2024: ಟೀಮ್​ ಇಂಡಿಯಾದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನೇರ ಪ್ರಸಾರದ ಹಕ್ಕನ್ನು ಹೊಂದಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು OTT ಪ್ಲಾಟ್‌ಫಾರ್ಮ್‌ನಲ್ಲಿ ಪಂದ್ಯಗಳನ್ನು ಉಚಿತವಾಗಿ ವೀಕ್ಷಿಸಬಹುದು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿ(T20 World Cup 2024) ಆರಂಭಕ್ಕೆ ಅಮೆರಿಕ ಮತ್ತು ವೆಸ್ಟ್ ಸಜ್ಜಾಗಿದೆ. ಉಭಯ ದೇಶಗಳು ಟೂರ್ನಿಯ ಜಂಟಿ ಆತಿಥ್ಯವಹಿಸಿಕೊಂಡಿದೆ. ನಾಳೆ(ಜೂನ್​ 1) ನಡೆಯುವ ಉದ್ಘಾಟನ ಪಂದ್ಯದಲ್ಲಿ ಅಮೆರಿಕ ತಂಡ ಕೆನಡಾ ತಂಡದ ಸವಾಲು ಎದುರಿಸಲಿದೆ. ಅಮೆರಿಕ ಇದೇ ಮೊದಲ ಬಾರಿಗೆ ಐಸಿಸಿ ಕ್ರಿಕೆಟ್​ ಟೂರ್ನಿಯ ಆತಿಥ್ಯವಹಿಸಿಕೊಂಡಿ​ದೆ. ವೆಸ್ಟ್‌ ಇಂಡೀಸ್‌ನಲ್ಲಿ ಆರು ಹಾಗೂ ಅಮೆರಿಕದ ಮೂರು ಸೇರಿದಂತೆ ಒಟ್ಟು ಒಂಬತ್ತು ತಾಣಗಳಲ್ಲಿ ವಿಶ್ವಕಪ್ ಆಯೋಜನೆಯಾಗಲಿದೆ.

ಭಾಗವಹಿಸುವ ತಂಡಗಳು


ಭಾರತ, ವೆಸ್ಟ್‌ ಇಂಡೀಸ್, ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್, ಪಾಕಿಸ್ತಾನ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ನೆದರ್ಲೆಂಡ್ಸ್, ಅಫಘಾನಿಸ್ತಾನ, ಬಾಂಗ್ಲಾದೇಶ, ಐರ್ಲೆಂಡ್, ಸ್ಕಾಟ್ಲೆಂಡ್, ಕೆನಡಾ, ನೇಪಾಳ, ಒಮಾನ್, ನಮೀಬಿಯಾ, ಉಗಾಂಡ ಮತ್ತು ಪಪುವಾ ನ್ಯೂಗಿನಿ.

ಟಿ20 ವಿಶ್ವಕಪ್ ವಿಜೇತ ತಂಡಗಳು

ದೇಶವರ್ಷ
ಭಾರತ2007
ಪಾಕಿಸ್ತಾನ2009
ಇಂಗ್ಲೆಂಡ್2010
ವೆಸ್ಟ್‌ಇಂಡೀಸ್2012
ಶ್ರೀಲಂಕಾ2014
ವೆಸ್ಟ್‌ಇಂಡೀಸ್2016
ಆಸ್ಟ್ರೇಲಿಯಾ2021
ಇಂಗ್ಲೆಂಡ್2022

ಪಂದ್ಯ ನಡೆಯುವ ತಾಣ

ವೆಸ್ಟ್‌ಇಂಡೀಸ್ಅಮೆರಿಕ
ನೌರ್ತ್ ಸೌಂಡ್ (ಆಯಂಟಿಗುವಾ ಮತ್ತು ಬಾರ್ಬುಡಾ)ಫ್ಲೋರಿಡಾ (ಲೌಂಡರ್‌ಹಿಲ್ )
ಬ್ರಿಡ್ಜ್‌ಟೌನ್ (ಬಾರ್ಬಡೋಸ್)ನ್ಯೂಯಾರ್ಕ್
ಜಾರ್ಜ್‌ಟೌನ್ (ಗಯಾನ)ಟೆಕ್ಸಾಸ್ (ಡಲ್ಲಾಸ್)
ಗ್ರಾಸ್‌ ಐಲ್ (ಸೇಂಟ್ ಲೂಸಿಯಾ)
ಕಿಂಗ್ಸ್‌ಟೌನ್ (ಸೇಂಟ್ ವಿನ್ಸೆಂಟ್)
ತರೌಬಾ (ಟ್ರಿನಿಡಾಡ್‌ ಆಯಂಡ್‌ ಟೊಬಾಗೊ).

ನಾಲ್ಕು ಗುಂಪುಗಳು


‘ಎ’ ಗುಂಪು: ಭಾರತ, ಪಾಕಿಸ್ತಾನ, ಅಮೆರಿಕ, ಕೆನಡಾ, ಐರ್ಲೆಂಡ್

‘ಬಿ’ ಗುಂಪು: ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್, ಇಂಗ್ಲೆಂಡ್

‘ಸಿ’ ಗುಂಪು: ವೆಸ್ಟ್‌ಇಂಡೀಸ್, ಅಪಘಾನಿಸ್ತಾನ, ಉಗಾಂಡ, ಪಪುವಾ ನ್ಯೂಗಿನಿ, ನ್ಯೂಜಿಲೆಂಡ್.

‘ಡಿ’ ಗುಂಪು: ನೆದರ್ಲೆಂಡ್ಸ್, ನೇಪಾಳ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ.

ಭಾರತದ ಪಂದ್ಯಗಳ ಪ್ರಸಾರ

ಟೀಮ್​ ಇಂಡಿಯಾದ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8ಗಂಟೆಗೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ನೇರ ಪ್ರಸಾರದ ಹಕ್ಕನ್ನು ಹೊಂದಿದೆ. ಭಾರತದಲ್ಲಿನ ಸ್ಮಾರ್ಟ್‌ಫೋನ್ ಬಳಕೆದಾರರು ಈ ವರ್ಷದ ಐಸಿಸಿ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಅನ್ನು OTT ಪ್ಲಾಟ್‌ಫಾರ್ಮ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಡಿಸ್ನಿ + ಹಾಟ್‌ಸ್ಟಾರ್​ನಲ್ಲಿ ಪ್ರಸಾರಗೊಳ್ಳಲಿದೆ. 

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಕ್ಷಣಗಣನೆ; ಭಾರತ ಸೇರಿ ಬಲಿಷ್ಠ ತಂಡಗಳ ಪಂದ್ಯದ ವೇಳಾಪಟ್ಟಿ ಇಲ್ಲಿದೆ

20 ತಂಡಗಳು ಭಾಗಿ


ಈ ಬಾರಿ ಟೂರ್ನಿಯಲ್ಲಿ ಗರಿಷ್ಠ 20 ತಂಡಗಳು ಕಣಕ್ಕಿಳಿಯಲಿವೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಟೂರ್ನಿಯಲ್ಲೂ ವಿಭಿನ್ನ ಸ್ವರೂಪವಿದೆ. 20 ತಂಡಗಳನ್ನು ತಲಾ ಐದು ತಂಡಗಳಂತೆ ನಾಲ್ಕು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಗುಂಪು ವಿಭಾಗದಲ್ಲಿ ಪ್ರತಿ ತಂಡಗಳು ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಪ್ರತಿ ಗುಂಪಿನಿಂದ ತಲಾ ಎರಡು ತಂಡಗಳು ಸೂಪರ್ ಎಂಟರ ಹಂತಕ್ಕೆ ತೇರ್ಗಡೆ ಪಡೆಯಲಿವೆ. ಅಲ್ಲೂ ತಲಾ ನಾಲ್ಕು ತಂಡಗಳ ಎರಡು ಗುಂಪುಗಳು ಇದ್ದು, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಲಗ್ಗೆ ಇಡಲಿವೆ.

Continue Reading
Advertisement
theft Case
ಕ್ರೈಂ58 seconds ago

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

bhavani revanna sit notice
ಕ್ರೈಂ4 mins ago

Bhavani Revanna: ʼತನಿಖೆ ಬೇಕಿದ್ರೆ ಮನೆಗೇ ಬನ್ನಿʼ ಎಂದ ಭವಾನಿ ರೇವಣ್ಣ; ʼಆಯ್ತು ಅಲ್ಲಿಗೇ ಬರ್ತೀವಿʼ ಎಂದ ಎಸ್‌ಐಟಿ!

Gold Smuggling
ದೇಶ10 mins ago

Gold Smuggling: ಗುದನಾಳದಲ್ಲಿ 1ಕೆಜಿ ಚಿನ್ನ; ಕೇರಳದಲ್ಲಿ ಗಗನಸಖಿ ಅರೆಸ್ಟ್‌

prajwal Revanna Case
ಪ್ರಮುಖ ಸುದ್ದಿ10 mins ago

Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

India women’s squad
ಕ್ರೀಡೆ18 mins ago

India women’s squad: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ; ತಂಡಕ್ಕೆ ಮರಳಿದ ಪ್ರಿಯಾ ಪೂನಿಯಾ

Maharaja trailer released Vijay Sethupathi has a secret
ಟಾಲಿವುಡ್20 mins ago

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Huligemma Temple Road Accident
ಕೊಪ್ಪಳ38 mins ago

Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

Viral Video
ವೈರಲ್ ನ್ಯೂಸ್49 mins ago

Viral Video: ಬೆಂಕಿ ದುರಂತ ಸ್ಥಳದಲ್ಲಿ ಜಮಾಯಿಸಿದ್ದ ಜನ; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

back benchers Movie Kannada song
ಸ್ಯಾಂಡಲ್ ವುಡ್54 mins ago

Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

valmiki corporation scam self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ57 mins ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗೆ ಎಸ್‌ಐಟಿ? ಸಿಬಿಐ ತನಿಖೆ ತಪ್ಪಿಸಲು ಪ್ಲಾನ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ22 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌