Gadar 2 Movie : ಕುಟುಂಬವೊಂದರ ಕಣ್ಣೀರ ಕಥೆ ಹೇಳುತ್ತಿದೆ ಗದರ್‌ ಸಿನಿಮಾದ ಖೈರಿಯತ್‌ ಹಾಡು Vistara News

ಬಾಲಿವುಡ್

Gadar 2 Movie : ಕುಟುಂಬವೊಂದರ ಕಣ್ಣೀರ ಕಥೆ ಹೇಳುತ್ತಿದೆ ಗದರ್‌ ಸಿನಿಮಾದ ಖೈರಿಯತ್‌ ಹಾಡು

ಸನ್ನಿ ಡಿಯೋಲ್‌ ನಟನೆಯ ಗದರ್‌ 2 ಸಿನಿಮಾದ (Gadar 2 Movie) ಎರಡನೇ ಹಾಡು ಖೈರಿಯತ್‌ ಬಿಡುಗಡೆಯಾಗಿದೆ. ಹಾಡು ಒಂದೇ ಕುಟುಂಬದ ಮೂರು ಮಂದಿಯ ಕಣ್ಣಿರ ಕಥೆಯನ್ನು ಹೇಳುವಂತಿದೆ.

VISTARANEWS.COM


on

gadar 2 movie song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಸನ್ನಿ ಡಿಯೋಲ್‌ ನಟನೆಯ ಗದರ್‌ 2 ಸಿನಿಮಾ (Gadar 2 Movie) ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಟೀಸರ್‌ ಬಿಡುಗಡೆ ಮಾಡಿದ ಬೆನ್ನಲ್ಲೇ ಸಿನಿಮಾ ತಂಡ ಇದೀಗ ಖೈರಿಯತ್‌ ಹೆಸರಿನ ಹಾಡನ್ನು ಬಿಡುಗಡೆ ಮಾಡಿದೆ. ಮೂರು ನಿಮಿಷಗಳ ಕಾಲ ಇರುವ ಹಾಡಿನಲ್ಲಿ ಒಂದು ಕುಟುಂಬದ ಮೂರು ಜನರ ಕಣ್ಣೀರ ಕಥೆಯನ್ನು ಸೆರೆಹಿಡಿಯಲಾಗಿದೆ.

ಒಂದತ್ತ ತಾರಾ ಸಿಂಗ್‌ (ಸನ್ನಿ ಡಿಯೋಲ್‌) ಬಸ್ಸಿನ ಮೇಲೆ ಕುಳಿತುಕೊಂಡು ಪತ್ರವೊಂದನ್ನು ಓದುತ್ತಾ ಸಾಗುತ್ತಿರುತ್ತಾರೆ. ಇನ್ನೊಂದತ್ತ ತಾರಾ ಸಿಂಗ್‌ ಪತ್ನಿ ಶಕೀನಾ(ಅಮೀಷಾ) ಮನೆಯಲ್ಲಿ ಕುಳಿತುಕೊಂಡು ಮಗನಿಗಾಗಿ ದೇವರ ಪ್ರಾರ್ಥನೆ ಮಾಡುತ್ತಿರುತ್ತಾರೆ. ಹಾಗೆಯೇ ಮತ್ತೊಂದು ಕಡೆಯಲ್ಲಿ ಈ ಇಬ್ಬರ ಮಗನಾದ ಚರಣ್‌ಜೀತ್‌(ಉತ್ಕರ್ಷ್‌ ಶರ್ಮಾ) ತಾನು ತಂದೆ ತಾಯಿಯೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕುತ್ತಿರುತ್ತಾರೆ. ಹಾಡಿನ ಪೂರ್ತಿ ಮೂರೂ ಮಂದಿ ಕಳೆದು ಹೋದ ಕ್ಷಣಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕುವ ದೃಶ್ಯಗಳನ್ನೇ ತೋರಿಸಲಾಗಿದೆ.

ಇದನ್ನೂ ಓದಿ: Meghana Raj: ಮೇಘನಾ ರಾಜ್‌ ನಟನೆಯ ʼತತ್ಸಮ ತದ್ಭವʼ ಸಿನಿಮಾದ ಟೀಸರ್‌ ಔಟ್‌!
ಈ ಖೈರಿಯತ್‌ ಹಾಡನ್ನು ಸಯೀದ್‌ ಕ್ವಾದ್ರಿ ಬರೆದಿದ್ದಾರೆ. ಮಿಥುನ್‌ ಅವರು ಸಂಗೀತ ನಿರ್ದೇಶನ ಮಾಡಿದ್ದು, ಅರಿಜಿತ್‌ ಸಿಂಗ್‌ ಅವರು ಧ್ವನಿ ನೀಡಿದ್ದಾರೆ. ಈ ಹಾಡಿಗೂ ಮೊದಲು ಗದರ್‌ 2 ಸಿನಿಮಾದ ಉದ್ದ್‌ ಜಾ ಕಾಲೆ ಕಾವ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಆ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲ್ಲೆಡೆ ಹರಿದಾಡಿ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದುಕೊಂಡಿತ್ತು.


ಅನಿಲ್ ಶರ್ಮಾ ನಿರ್ದೇಶನದ ಗದರ್ 2 ಚಿತ್ರದಲ್ಲಿ ಸನ್ನಿ ಡಿಯೋಲ್, ಅಮೀಶಾ ಪಟೇಲ್ ಮತ್ತು ಉತ್ಕರ್ಷ್ ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಗದರ್‌: ಏಕ್‌ ಪ್ರೇಮ್‌ ಕಥಾ ಮತ್ತು ಘರ್‌ ಆಜಾ ಪರದೇಸಿ ಹಾಡಿನ ದುಃಖದ ಆವೃತಿಯೂ ಸೇರಿರಲಿದೆ ಎನ್ನುವ ಸುಳಿವನ್ನು ಸಿನಿಮಾದ ಟೀಸರ್‌ ಬಿಟ್ಟುಕೊಟ್ಟಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Sachin Tendulkar: ವಿಕ್ಕಿ ಅವರು ಸಚಿನ್‌ ತೆಂಡೂಲ್ಕರ್ ಅವರೊಂದಿಗಿನ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತೆಂಡೂಲ್ಕರ್ ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಜತೆಗಿದ್ದರು. ಸ್ಕ್ರೀನಿಂಗ್‌ ಆದ ಬಳಿಕ ಸಚಿನ್ ತೆಂಡೂಲ್ಕರ್ ಜತೆ ವಿಕ್ಕಿ ಪೋಸ್ ನೀಡಿದ್ದಾರೆ.

VISTARANEWS.COM


on

Sachin Tendulkar says he is super impressed by Vicky Kaushal
Koo

ಬೆಂಗಳೂರು: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಡಿಸೆಂಬರ್‌ 2ರ ರಾತ್ರಿ ನಟ ವಿಕ್ಕಿ ಕೌಶಲ್ ಅವರ ʻಸ್ಯಾಮ್ ಬಹದ್ದೂರ್‌ʼ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ತೆಂಡೂಲ್ಕರ್ ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಜತೆಗಿದ್ದರು. ಸ್ಕ್ರೀನಿಂಗ್‌ ಆದ ಬಳಿಕ ಸಚಿನ್ ತೆಂಡೂಲ್ಕರ್ ಜತೆ ವಿಕ್ಕಿ ಪೋಸ್ ನೀಡಿದ್ದಾರೆ.

ಸಚಿನ್ ಚಿತ್ರವನ್ನು ಕಂಡು “ಇದು ತುಂಬಾ ಒಳ್ಳೆಯ ಸಿನಿಮಾ. ವಿಕ್ಕಿ ಅವರ ನಟನೆಯಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಫೀಲ್ಡ್ ಮಾರ್ಷಲ್ ಸ್ಯಾಮ್ ನಿಜವಾಗಿಯೂ ಇದ್ದಂತೆ ಭಾಸವಾಯಿತು. ನಮ್ಮ ದೇಶದ ಇತಿಹಾಸ ತಿಳಿಯಲು ಎಲ್ಲಾ ಜನರೇಶನ್‌ ಅವರಿಗೆ ಪ್ರಮುಖ ಚಿತ್ರವಾಗಿದೆʼʼ ಎಂದು ಮಾಧ್ಯಮದ ಮುಂದೆ ಹೇಳಿಕೊಂಡರು.

ವಿಕ್ಕಿ ಅವರು ಸಚಿನ್‌ ತೆಂಡೂಲ್ಕರ್ ಅವರೊಂದಿಗಿನ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಬಾಲ್ಯದ ಹೀರೊ ಇಂದು ನನ್ನ ಸಿನಿಮಾವನ್ನು ನೋಡಿದ್ದಾರೆ. ಧನ್ಯವಾದಗಳು ಸಚಿನ್‌ ಸರ್. ನಿಮ್ಮ ಮಾತುಗಳಿಗೆʼʼಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಬಹದ್ದೂರ್‌ ಭಾರತದಲ್ಲಿ ಮೊದಲ ದಿನದಂದು 5.50 ಕೋಟಿ ರೂ. ಗಳನ್ನು ಗಳಿಸಿತು. ಭಾರತದಲ್ಲಿ ಶನಿವಾರ 9.25 ಕೋಟಿ ರೂ. ನಿವ್ವಳ ಗಳಿಸಿದೆ ಎಂದೂ ವರದಿಯಾಗಿದೆ. ಡಿಸೆಂಬರ್ 2ರಂದು ಚಿತ್ರದ ಒಟ್ಟು ಕಲೆಕ್ಷನ್‌ 15.5 ಕೋಟಿ ರೂ. ಆಗಿದೆ ಎಂದು ವರದಿಯಾಗಿದೆ.

ಮೇಘನಾ ಗುಲ್ಜಾರ್ ನಿರ್ದೇಶಿಸಿದ ಈ ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ತೆಂಡೂಲ್ಕರ್ ಜತೆಗೆ ಕ್ರಿಕೆಟಿಗರಾದ ಜಹೀರ್ ಖಾನ್ ಮತ್ತು ಅಜಿತ್ ಅಗರ್ಕರ್ ಕೂಡ ಪ್ರದರ್ಶನದಲ್ಲಿ ಹಾಜರಾಗಿದ್ದರು.

ಮೇಘನಾ ಗುಲ್ಜಾರ್ ನಿರ್ದೇಶನದ ಚಿತ್ರ, ರಣಬೀರ್ ಕಪೂರ್ ಅವರ ‘ಅನಿಮಲ್‌ ಸಿನಿಮಾ ಜತೆ ಕ್ಲಾಶ್‌ ಆಗಿದೆ. ‘ವಿಕ್ಕಿ ಹೊರತುಪಡಿಸಿ, ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಇದನ್ನೂ ಓದಿ: Sachin Tendulkar : ಲಂಕಾ ವಿರುದ್ಧ ಪಂದ್ಯದ ಬೆಸ್ಟ್​ ಫೀಲ್ಡರ್ ಯಾರೆಂದು ಘೋಷಿಸಿದ ಸಚಿನ್​ ತೆಂಡೂಲ್ಕರ್​

ದೇಶದ ಮೊದಲ ಫೀಲ್ಡ್‌ ಮಾರ್ಷಲ್‌ ಕಥೆ ಇದು. ಈ ಸಿನಿಮಾ 1971ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಸ್ಯಾಮ್‌ ಮಾಣೆಕ್‌ ಶಾ ಅವರ ನಿಜಜೀವನದ ಘಟನೆಗಳನ್ನು ಆಧರಿಸಿದೆ. ವಿಕ್ಕಿ ಕೌಶಲ್ ಅಭಿನಯದ ಸ್ಯಾಮ್ ಬಹದ್ದೂರ್ ದೇಶದ ಮೊದಲ ಫೀಲ್ಡ್‌ ಮಾರ್ಷಲ್‌ ಕಥೆ ಇದು. ಈ ಸಿನಿಮಾ 1971ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಸ್ಯಾಮ್‌ ಮಾಣೆಕ್‌ ಶಾ ಅವರ ನಿಜಜೀವನದ ಘಟನೆಗಳನ್ನು ಆಧರಿಸಿದೆ. ಸ್ಯಾಮ್‌ ಮಾಣೆಕ್‌ ಶಾ ಅವರು ಫೀಲ್ಡ್‌ ಮಾರ್ಷಲ್‌ ಹುದ್ದೆಗೇರಿದ ಮೊದಲ ಭಾರತೀಯ ಸೇನಾ ಅಧಿಕಾರಿ. ಎರಡನೇ ವಿಶ್ವ ಯುದ್ಧದ ಸಮಯದಲ್ಲಿ ತಮ್ಮ ಮಿಲಿಟರಿ ವೃತ್ತಿಜೀವನವನ್ನು ಪ್ರಾರಂಭಿಸಿ, ನಾಲ್ಕು ದಶಕಗಳ ಕಾಲ. ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಐದು ಯುದ್ಧಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Continue Reading

ಬಾಲಿವುಡ್

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

Bobby Deol: ಮುಂಬೈನಲ್ಲಿ ನಟ ಬಾಬಿ ಡಿಯೋಲ್ ಕಾಣಿಸಿಕೊಂಡಾಗ ಮೆಚ್ಚುಗೆಯ ವಿಮರ್ಶೆಗಳಿಗೆ ಪ್ರತಿಕ್ರಿಯಿಸಿದರು. ಬೂದು ಬಣ್ಣದ ಹೂಡಿಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ನಟ ಬಾಬಿ ಡಿಯೋಲ್ ಕಣ್ಣೀರಿಟ್ಟ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Bobby Deol cries after paparazzi praise him as Animal
Koo

ಬೆಂಗಳೂರು: ನಟ ಬಾಬಿ ಡಿಯೋಲ್ (Bobby Deol) ಅವರು ʻಅನಿಮಲ್‌ʼ ಸಿನಿಮಾ ನಟನೆಗಾಗಿ ಭಾರಿ ಮೆಚ್ಚುಗೆ ಗಳಿಸುತ್ತಿದ್ದಾರೆ. ಬಾಬಿ ಡಿಯೋಲ್ ಫ್ಯಾನ್ಸ್‌ ಸೋಷಿಯಲ್‌ ಮೀಡಿಯಾ ಮೂಲಕ ನಟನಿಗೆ ಶುಭ ಹಾರೈಸುತ್ತಿದ್ದಾರೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್, ಅನಿಲ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ಇದ್ದಾರೆ. ಇದೀಗ ಬಾಬಿ ಡಿಯೋಲ್ ಅವರಿಗೆ ಪೋಟೊಗ್ರಾಫರ್‌ಗಳು (ಪಾಪರಾಜಿ) ಅಭಿನಂದನೆ ಸಲ್ಲಿಸುತ್ತಿದ್ದಂತೆ ನಟ ಭಾವುಕರಾದರು. ನಟ ಕಣ್ಣೀರಿಟ್ಟ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮುಂಬೈನಲ್ಲಿ ನಟ ಬಾಬಿ ಡಿಯೋಲ್ ಕಾಣಿಸಿಕೊಂಡಾಗ ಮೆಚ್ಚುಗೆಯ ವಿಮರ್ಶೆಗಳಿಗೆ ಪ್ರತಿಕ್ರಿಯಿಸಿದರು. ಬೂದು ಬಣ್ಣದ ಹೂಡಿ ಉಡುಗೆಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಬಾಬಿ ಡಿಯೋಲ್ ಅವರು ಪೋಟೊಗ್ರಾಫರ್‌ಗಳು (ಪಾಪರಾಜಿ) ಅಭಿನಂದನೆ ಸಲ್ಲಿಸುತ್ತಿದ್ದಂತೆ “ತುಂಬಾ ಧನ್ಯವಾದಗಳು. ದೇವರು ನಿಜವಾಗಿಯೂ ದಯೆ ತೋರಿದ್ದಾನೆ. ನಮ್ಮ ಚಿತ್ರ ಪಡೆಯುತ್ತಿರುವ ಪ್ರೀತಿ ಕನಸಿನಂತೆ ಭಾಸವಾಗುತ್ತಿದೆ” ಎಂದು ಭಾವುಕರಾದರು. ನಟನ ಸಿಬ್ಬಂದಿ ಮತ್ತು ಚಿತ್ರ ತಂಡವು ನಟನನ್ನು ಸಾಂತ್ವನಗೊಳಿಸುತ್ತಿರುವ ವಿಡಿಯೊ ವೈರಲ್‌ ಆಗಿದೆ.

ಈ ವಿಡಿಯೊಗೆ ನಟನ ಅಭಿಮಾನಿಗಳು “ಈ ವರ್ಷ ಡಿಯೋಲ್ ವರ್ಷವಾಗಿದೆ. ಧರ್ಮೇಂದ್ರ ಅವರ ಸಿನಿಮಾ ರಿಲೀಸ್, ಸನ್ನಿಯ ಗದರ್ 2 ಸೂಪರ್ ಹಿಟ್, ಕರಣ್ ಮದುವೆ, ಸನ್ನಿ ಅವರ ಕಿರಿಯ ಮಗನ ಮೊದಲ ಸಿನಿಮಾ ರಿಲೀಸ್… ಬಾಬಿ ಅನಿಮಲ್ ಸಿನಿಮಾ. ಇದರರ್ಥ ಇಡೀ ಕುಟುಂಬ ಸಾಧನೆಗಳನ್ನು ಮಾಡಿ ಸಂತೋಷವಾಗಿದೆ. ಇದು ಯಶಸ್ಸಿನ ಕಣ್ಣೀರು. ನಟ ಅದಕ್ಕೆ ಅರ್ಹರುʼʼ ಎಂದು ಕಮೆಂಟ್‌ ಮಾಡಿದ್ದಾರೆ.

ರಣಬೀರ್ ಜತೆಗೆ, ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ: Ranbir Kapoor: ಬುರ್ಜ್ ಖಲೀಫಾದಲ್ಲಿ ರಣಬೀರ್ ಕಪೂರ್ ಅಭಿನಯದ ʻಅನಿಮಲ್‌ʼ ಪ್ರಿವ್ಯೂ!

ವೈರಲ್‌ ವಿಡಿಯೊ

ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಜತೆಗೆ ಅನಿಮಲ್‌ ಬಿಡುಗಡೆಯಾಗಿದ್ರೂ ಕೂಡ ಜಯಭೇರಿ ಬಾರಿಸಿದೆ. ಈಗ, ಆರಂಭಿಕ ಅಂದಾಜಿನ ಪ್ರಕಾರ, ಎರಡನೇ ದಿನದಲ್ಲಿ ಚಿತ್ರ ಭಾರತದಲ್ಲಿ 63.80 ಕೋಟಿ ರೂ. ಗಳಿಸಿದೆ. ಹೀಗಾಗಿ ಒಟ್ಟು 129.80 ಕೋಟಿ ರೂ. ಎಂದು ವರದಿಯಾಗಿದೆ. ಇದಕ್ಕೂ ಮೊದಲು, ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ವಾರಾಂತ್ಯದಲ್ಲಿ, ಭಾರತದಲ್ಲಿ 150 ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ಮೂಲಕ ಚಿತ್ರದ ಕಲೆಕ್ಷನ್‌ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿದೆ.

Continue Reading

ಬಾಲಿವುಡ್

Animal Box Office: ಬಿಡುಗಡೆಯಾದ ಎರಡೇ ದಿನಕ್ಕೆ 100 ಕೋಟಿ ರೂ. ಕ್ಲಬ್‌ ಸೇರಿಯೇ ಬಿಟ್ಟಿತು; ‌ʻಅನಿಮಲ್‌ʼ ಕಮಾಲ್!

Animal Box Office: ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿದೆ.

VISTARANEWS.COM


on

Ranbir Kapoor film animal crosses Rs 100 crore
Koo

ಬೆಂಗಳೂರು; ರಣಬೀರ್ ಕಪೂರ್-ರಶ್ಮಿಕಾ ಅಭಿನಯದ ‘ಅನಿಮಲ್‌’ ಸಿನಿಮಾ (Animal Box Office) ಬಾಕ್ಸ್ ಆಫೀಸ್ ಕಲೆಕ್ಷನ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಡಿಸೆಂಬರ್ 1ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾ ಭಾರತದಲ್ಲಿ 100 ಕೋಟಿ ರೂ. ಕ್ಲಬ್‌ ಪ್ರವೇಶಿಸಿದೆ. ರಣಬೀರ್ ಜತೆಗೆ, ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ಟ್ರಿಪ್ಟಿ ಡಿಮ್ರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಪಠಾಣ್’ ಮತ್ತು ‘ಗದರ್ 2’ ದಾಖಲೆಯನ್ನು ಹಿಂದಿಕ್ಕಿದೆ ಈ ಸಿನಿಮಾ. ‘ಅನಿಮಲ್‌’ ಬಿಡುಗಡೆಯಾದ ಎರಡು ದಿನಗಳಲ್ಲಿ 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ಚಿತ್ರವಾಗಿ ಹೊರಹೊಮ್ಮಿದೆ.

ವಿಕ್ಕಿ ಕೌಶಲ್ ಅವರ ‘ಸ್ಯಾಮ್ ಬಹದ್ದೂರ್’ ಜತೆಗೆ ಅನಿಮಲ್‌ ಬಿಡುಗಡೆಯಾಗಿದ್ರೂ ಕೂಡ ಜಯಭೇರಿ ಬಾರಿಸಿದೆ. ಈಗ, ಆರಂಭಿಕ ಅಂದಾಜಿನ ಪ್ರಕಾರ, ಎರಡನೇ ದಿನದಲ್ಲಿ ಚಿತ್ರ ಭಾರತದಲ್ಲಿ 63.80 ಕೋಟಿ ರೂ. ಗಳಿಸಿದೆ. ಹೀಗಾಗಿ ಒಟ್ಟು 129.80 ಕೋಟಿ ರೂ. ಎಂದು ವರದಿಯಾಗಿದೆ. ಇದಕ್ಕೂ ಮೊದಲು, ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ವಾರಾಂತ್ಯದಲ್ಲಿ, ಭಾರತದಲ್ಲಿ 150 ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ಮೂಲಕ ಚಿತ್ರದ ಕಲೆಕ್ಷನ್‌ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Animal Box Office: ʻಅನಿಮಲ್‌ʼ ಸೀಕ್ವೆಲ್‌ ಬರೋದು ಕನ್‌ಫರ್ಮ್‌? ಮೊದಲ ದಿನವೇ ಭರ್ಜರಿ ಬ್ಯಾಟಿಂಗ್‌!

ಅನಿಮಲ್‌ ಸಿನಿಮಾದ ಟೀಸರ್‌ ಬಿಡುಗಡೆಯಾಗಿ ಭಾರಿ ಸದ್ದು ಮಾಡಿತ್ತು. ಜತೆಗೆ ನಟಿ ರಶ್ಮಿಕಾ ಮಂದಣ್ಣ ಕ್ಯಾರೆಕ್ಟರ್‌ ಪೋಸ್ಟರ್‌ ಕೂಡ ರಿಲೀಸ್‌ ಆಗಿತ್ತು. ಇದಕ್ಕೆ ನಟಿಯ ಫ್ಯಾನ್ಸ್‌ ಫಿದಾ ಆಗಿದ್ದರು. ಚಿತ್ರತಂಡ ʼಹುವಾ ಮೈನ್‌ʼ ಹಾಡನ್ನು (Animal song Hua Main) ಕೂಡ ರಿಲೀಸ್‌ ಮಾಡಿದೆ. ಈ ಹಾಡಿನಲ್ಲಿ ರಶ್ಮಿಕಾ-ರಣಬೀರ್ ಕಪೂರ್‌ ಲಿಪ್‌ ಲಾಕ್‌ ದೃಶ್ಯಗಳು ಹೆಚ್ಚಿವೆ. ಸಿನಿಮಾದಲ್ಲಿ ಪ್ರೈವೇಟ್ ಜೆಟ್, ಕುಟುಂಬಸ್ಥರ ಮುಂದೆ ಲಿಪ್‌ ಲಾಕ್‌ ಮಾಡಿರುವ ಸೀನ್‌ಗಳಿವೆ. ತೆಲುಗಿನ ʼಅರ್ಜುನ್‌ ರೆಡ್ಡಿʼ, ಹಿಂದಿಯ ʼಕಬೀರ್‌ ಸಿಂಗ್‌ʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ ಗೆದ್ದ ಸಂದೀಪ್‌ ರೆಡ್ಡಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿದೆ.

Continue Reading

ಬಾಲಿವುಡ್

AR Rahman: ಪುಟಾಣಿ ಹುಡುಗಿಯ ಮಾತು ಕೇಳಿ ಎಆರ್ ರೆಹಮಾನ್ ಫಿದಾ; ಕೀಬೋರ್ಡ್ ಕೊಡುತ್ತೇನೆ ಎಂದ ಗಾಯಕ!

AR Rahman: ವಿಡಿಯೊದಲ್ಲಿ ರೆಹಮಾನ್ ಅವರು ‘ಹಮ್ಮಾ ಹಮ್ಮಾ’, ಸಾಂಗ್‌ ಅನ್ನು ಅಭಿಮಾನಿಗಳ ಜತೆ ಹಾಡುತ್ತಿದ್ದರು. ತಕ್ಷಣ ವೇದಿಕೆಯಲ್ಲಿ ತಮ್ಮ ಪಕ್ಕ ಕೂತಿದ್ದ ಪುಟಾನಿ ಹುಡುಗಿ ಕಡೆ ಮೈಕ್‌ ತಿರುಗಿಸಿದರು. ಆಕೆ ಕೂಡ ಖುಷಿಯಿಂದ ‘ಹಮ್ಮಾ ಹಮ್ಮಾ’,ಎಂದು ಹಾಡು ಹೇಳಿದ್ದಾಳೆ.

VISTARANEWS.COM


on

AR Rahman promises to gift keyboard to a young fan
Koo

ಬೆಂಗಳೂರು: ಆಸ್ಕರ್ ಪ್ರಶಸ್ತಿ ವಿಜೇತ ಸಂಯೋಜಕ ಎಆರ್ ರೆಹಮಾನ್ ಅವರು ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕಥಾಕರ್ ಉತ್ಸವದಲ್ಲಿ ಭಾಗವಹಿಸಿದ್ದರು. ಈವೆಂಟ್‌ನಲ್ಲಿ, ಅವರ ಹಾಡುಗಳ ಕೆಲವು ಸಾಲುಗಳನ್ನು ಗುನುಗಲು ಅಭಿಮಾನಿಗಳ ಕಡೆಗೆ ಮೈಕ್‌ ತಿರುಗಿಸಿದರು. ಗಾಯಕ ಮೋಹಿತ್ ಚೌಹಾನ್ ಅವರೊಂದಿಗೆ ಪ್ಯಾನೆಲ್‌ನಲ್ಲಿ ಅತಿಥಿಯಾಗಿದ್ದ ರೆಹಮಾನ್ ‘ಹಮ್ಮಾ ಹಮ್ಮಾ’, ಹಾಡನ್ನು ಹಾಡಿದರು. ಅದೇ ವೇಳೆ ರೆಹಮಾನ್ ಮೈಕ್ ಅನ್ನು ಪುಟ್ಟ ಹುಡುಗಿ ಕಡೆಗೆ ತಿರುಗಿಸಿದಾಗ, ಹುಡುಗಿ ನಾಚಿಕೆಯಿಂದ ಹಾಡಲು ಮುಂದೆ ಬರಲಿಲ್ಲ. ಮಾತ್ರವಲ್ಲ ರೆಹಮಾನ್ ಅವರಿಗೆ ಆಕೆ, ʻನೀವು ಹಾಡಿದಾಗ ಸಂಗೀತ ಮಧುರವಾಗಿತ್ತು ಆದರೆ ನಾನು ಹಾಡಿದಾಗ ಆ ರೀತಿ ಸ್ವರ ಬಂದಿಲ್ಲʼʼ ಎಂದಿದ್ದಾಳೆ. ಈ ವೇಳೆ ರೆಹಮಾನ್ ಅವರು ಪುಟಾಣಿಗೆ ʻʻಪ್ರತಿದಿನ ನೀನು ಸಂಗೀತ ಅಭ್ಯಾಸ ಮಾಡು. ನಿನಗೆ ಕೀಬೋರ್ಡ್ ತಂದು ಕೊಡುತ್ತೇನೆʼʼ ಎಂದು ಹೇಳಿದ್ದಾರೆ. ಈ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ರೆಹಮಾನ್ ಅವರ ಈ ನಡೆ ಬಗ್ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲಿ ರೆಹಮಾನ್ ಅವರು ‘ಹಮ್ಮಾ ಹಮ್ಮಾ’, ಸಾಂಗ್‌ ಅನ್ನು ಅಭಿಮಾನಿಗಳ ಜತೆ ಹಾಡುತ್ತಿದ್ದರು. ತಕ್ಷಣ ವೇದಿಕೆಯಲ್ಲಿ ತಮ್ಮ ಪಕ್ಕ ಕೂತಿದ್ದ ಪುಟಾನಿ ಹುಡುಗಿ ಕಡೆ ಮೈಕ್‌ ತಿರುಗಿಸಿದರು. ಆಕೆ ಕೂಡ ಖುಷಿಯಿಂದ ‘ಹಮ್ಮಾ ಹಮ್ಮಾ’, ಎಂದು ಹಾಡು ಹೇಳಿದ್ದಾಳೆ. ಇದಾದ ಬಳಿಕ ಏಕಾಏಕಿ ಹುಡುಗಿ ನಾಚಿಕೆ ಪಟ್ಟುಕೊಂಡು ರೆಹಮಾನ್ ಅವರಿಗೆ “ನೀವು ಹಾಡಿದಾಗ ಸಂಗೀತ ಮಧುರವಾಗಿತ್ತು ಆದರೆ ನಾನು ಹಾಡಿದಾಗ ಆ ರೀತಿ ಸ್ವರ ಬಂದಿಲ್ಲʼʼ ಎಂದಿದ್ದಾಳೆ. ಆಗ ರೆಹಮಾನ್, “ಇಲ್ಲ, ಇಲ್ಲ, ನನಗೆ 56 ವರ್ಷ, ಅಲ್ವಾ? ನೀನು ನನಗಿಂತ ಚೆನ್ನಾಗಿ ಹಾಡುತ್ತೀಯಾʼʼ ಎಂದು ಹೇಳುವ ಮೂಲಕ ಅವಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

ಇದನ್ನೂ ಓದಿ: AR Rahman: 29 ಲಕ್ಷ ರೂ. ಪಡೆದು ಮೋಸ? ಮತ್ತೊಂದು ವಿವಾದದ ಸುಳಿಗೆ ಸಿಲುಕಿದ ಎ ಆರ್ ರೆಹಮಾನ್‌!

ವೈರಲ್‌ ವಿಡಿಯೊ

ಅದಕ್ಕೆ, ಹುಡುಗಿ “ಇದು ವಯಸ್ಸಿಗೆ ಸಂಬಂಧಿಸಿದ್ದಲ್ಲʼʼ ಎಂದಿದ್ದಾಳೆ. ಇದನ್ನು ರೆಹಮಾನ್ ಕೂಡ ಒಪ್ಪಿದರು. ರೆಹಮಾನ್‌ ಮಾತನಾಡಿ ʻʻಹೌದು, ನೀನು ಹೇಳಿದ್ದು ನಿಜ. ಸಂಗೀತವನ್ನು ಪ್ರತಿದಿನ ನೀನು ಅಭ್ಯಾಸ ಮಾಡಬೇಕು. ನಾನು ನಿನಗೆ ಕೀಬೋರ್ಡ್ ತರುತ್ತೇನೆ. ಮುಂದಿನ ವರ್ಷ, ನೀನು ಇಲ್ಲಿ ಹಾಡಬೇಕು” ಎಂದಿದ್ದಾರೆ. ಇದೀಗ ವಿಡಿಯೊ ವೈರಲ್‌ ಆಗುತ್ತಿದ್ದಂತೆ ʻʻಎಆರ್ ರೆಹಮಾನ್ ಸರ್ ಎಷ್ಟು ವಿನಮ್ರರು” ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ. ಮತ್ತೊಬ್ಬರು “ಸೋ ಕ್ಯೂಟ್ ಅಂಡ್ ಅಡೋರಬಲ್” ಎಂದು ಕಮೆಂಟ್ ಮಾಡಿದ್ದಾರೆ. “ಮ್ಯಾನ್ ಆಫ್ ಸಿಂಪ್ಲಿಸಿಟಿʼʼ ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

Continue Reading
Advertisement
this hat-trick has guaranteed the 2024 victory Says PM Narendra Modi
ದೇಶ57 mins ago

PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

drown in sea
ಉತ್ತರ ಕನ್ನಡ1 hour ago

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

BJP wins three states Congress one
ಕರ್ನಾಟಕ1 hour ago

Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

Team India
ಕ್ರಿಕೆಟ್1 hour ago

IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

Raman_Sao_Choudhary
ದೇಶ2 hours ago

Chhattisgarh Election Result: ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಸಾವೊ, ಚೌಧರಿ, ರಮಣ್ ಸಿಂಗ್!

South Cinema2 hours ago

Yash 19: ಶೀಘ್ರದಲ್ಲೇ ʼಯಶ್ 19ʼ ಚಿತ್ರ ಅನೌನ್ಸ್; ಸುಳಿವು ಕೊಟ್ಟ ರಾಕಿ ಭಾಯ್

BJP win
ದೇಶ2 hours ago

Assembly Elections 2023 : ಗ್ಯಾರಂಟಿಗಳ ವಾರಂಟಿ ಮುಗೀತಾ? ಭರ್ಜರಿ ಆಫರ್‌ ಕೊಟ್ಟವರ ಕಥೆ ಏನಾಯ್ತು?

Congress defeated because Opposing Sanatana Dharma Says Acharya Pramod Krishnam
ದೇಶ3 hours ago

Election Result 2023: ಸನಾತನ ಧರ್ಮ ವಿರೋಧಿಸಿದ್ದಕ್ಕೇ ಕಾಂಗ್ರೆಸ್‌ಗೆ ಸೋಲು; ಪಕ್ಷದ ವಿರುದ್ಧವೇ ತಿರುಗಿ ಬಿದ್ದ ನಾಯಕ!

Bjp Leaders celebration
ಕರ್ನಾಟಕ3 hours ago

Assembly Elections 2023: ಮೂರು ರಾಜ್ಯಗಳಲ್ಲಿ ಜಯಭೇರಿ; ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Election Result 2023 is for good governance and Development says PM Narendra Modi
ದೇಶ3 hours ago

PM Narendra Modi: ಉತ್ತಮ ಆಡಳಿತ, ಅಭಿವೃದ್ಧಿಗೆ ಸಂದ ಜಯ ಎಂದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ11 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ17 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ1 day ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌