Gadar 2 OTT: ಅಕ್ಟೋಬರ್ 6 ರಿಂದ ಒಟಿಟಿಯಲ್ಲಿ ಗದರ್ 2 ; ಸ್ಟ್ರೀಮಿಂಗ್ ಎಲ್ಲಿ? - Vistara News

ಬಾಲಿವುಡ್

Gadar 2 OTT: ಅಕ್ಟೋಬರ್ 6 ರಿಂದ ಒಟಿಟಿಯಲ್ಲಿ ಗದರ್ 2 ; ಸ್ಟ್ರೀಮಿಂಗ್ ಎಲ್ಲಿ?

Gadar 2 OTT: ಗದರ್ 2 ಆಗಸ್ಟ್ 11ರಂದು ತೆರೆಗೆ ಬಂದಿತು. ಚಿತ್ರದಲ್ಲಿ ಮನೀಶ್ ವಾಧ್ವಾ, ಗೌರವ್ ಚೋಪ್ರಾ ಮತ್ತು ಸಿಮ್ರತ್ ಕೌರ್ ಕೂಡ ನಟಿಸಿದ್ದಾರೆ.

VISTARANEWS.COM


on

Gadar 2 OTT
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗದರ್ 2 (Gadar 2) ಬಿಡುಗಡೆಯಾದಾಗಿನಿಂದಲೂ ಬಾಕ್ಸ್‌ ಆಫೀಸ್‌ನಲ್ಲಿ ಹಲವು ದಾಖಲೆಗಳನ್ನು ಮುರಿದು 500 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು. ಸನ್ನಿ ಡಿಯೋಲ್ (Sunny Deol) ಮತ್ತು ಅಮೀಷಾ ಪಟೇಲ್ (Ameesha Patel) ಅಭಿನಯದ ಚಿತ್ರ ಈಗ ಒಟಿಟಿಗೆ ಲಗ್ಗೆ ಇಡುತ್ತಿದೆ. ಗದರ್ 2 ಅಕ್ಟೋಬರ್ 6 ರಿಂದ ಜೀ5ನಲ್ಲಿ ಸ್ಟ್ರೀಮಿಂಗ್ ಪ್ರಾರಂಭಿಸಲಿದೆ. ವರದಿಯ ಪ್ರಕಾರ, ಗದರ್ 2 ಸಿನಿಮಾ 500 ಕೋಟಿ ಗಳಿಸಿದ ಮೂರನೇ ಹಿಂದಿ (Shah Rukh Khan’s Pathaan) ಚಲನಚಿತ್ರವಾಗಿ ಹೊರಹೊಮ್ಮಿತ್ತು.

ಜೀ ಸ್ಟುಡಿಯೋಸ್ ನಿರ್ಮಿಸಿದ ಈ ಚಿತ್ರದಲ್ಲಿ ಅಮೀಶಾ ಪಟೇಲ್ ಸಕೀನಾ ಪಾತ್ರದಲ್ಲಿ ಮತ್ತು ಉತ್ಕರ್ಷ್ ಶರ್ಮಾ ಚರಂಜೀತ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ತಾರಾ ಸಿಂಗ್ ನಿಮ್ಮ ಹೃದಯಗಳನ್ನು ಗೆಲ್ಲಲು ಸಿದ್ಧರಾಗಿದ್ದಾರೆ! ಭಾರತದ ಅತಿದೊಡ್ಡ ಬ್ಲಾಕ್‌ಬಸ್ಟರ್ ಕೇವಲ 2 ದಿನಗಳಲ್ಲಿ ಜೀ5ನಲ್ಲಿ ಬರಲಿದೆ ಎಂದು ಜೀ 5 ಪೋಸ್ಟ್‌ ಹಂಚಿಕೊಂಡಿದೆ.

ಗದರ್ 2 ಆಗಸ್ಟ್ 11ರಂದು ತೆರೆಗೆ ಬಂದಿತು. ಚಿತ್ರದಲ್ಲಿ ಮನೀಶ್ ವಾಧ್ವಾ, ಗೌರವ್ ಚೋಪ್ರಾ ಮತ್ತು ಸಿಮ್ರತ್ ಕೌರ್ ಕೂಡ ನಟಿಸಿದ್ದಾರೆ. ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ಗದರ್ 2 ಚಿತ್ರಮಂದಿರಗಳಲ್ಲಿ ತನ್ನ ಆರಂಭಿಕ ದಿನದಂದು 40 ಕೋಟಿ ರೂ. ಗಳಿಸಿತು.

ಇದನ್ನೂ ಓದಿ: Gadar 2: 24 ದಿನಗಳಲ್ಲಿ ಪಠಾಣ್‌, ಬಾಹುಬಲಿ 2 ದಾಖಲೆ ಮುರಿದ ಗದರ್ 2!

ಈ ಗದರ್‌ 2 ಸಿನಿಮಾ 2001ರಲ್ಲಿ ಬಿಡುಗಡೆಯಾದ ಗದರ್‌: ಏಕ್‌ ಪ್ರೇಮ್‌ ಕಥಾ ಸಿನಿಮಾದ ಸೀಕ್ವೆಲ್‌ ಆಗಿದೆ. 2001ರಲ್ಲಿ ಬಿಡುಗಡೆಯಾದಾಗ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಹಣ ಬಾಚಿಕೊಳ್ಳುವುದರೊಂದಿಗೆ ಸಿನಿಮಾ ದಾಖಲೆ ಬರೆದಿತ್ತು. ಇದೀಗ ಅದೇ ರೀತಿಯಲ್ಲಿ ಅದರ ಎರಡನೇ ಭಾಗ ಕೂಡ ಜನರ ಮನಸ್ಸನ್ನು ಕದಿಯುವಲ್ಲಿ ಯಶಸ್ವಿಯಾಗಿದೆ.

1971ರಲ್ಲಿ ಭಾರತ ಪಾಕಿಸ್ತಾನ ನಡುವೆ ಯುದ್ಧ ನಡೆದ ಸಂದರ್ಭದಲ್ಲಿನ ಕಥೆ ಇದಾಗಿದೆ. ಇದರಲ್ಲಿ ಸನ್ನಿ ಅವರು ತಾರಾ ಸಿಂಗ್‌ ಪಾತ್ರದಲ್ಲಿ ನಟಿಸಿದ್ದರೆ, ಆಮಿಷಾ ಅವರು ತಾರಾ ಪತ್ನಿ ಸಕೀನಾ ಪಾತ್ರದಲ್ಲಿ ಹಾಗೆಯೇ ಉತ್ಕರ್ಷ್‌ ಅವರು ಅವರ ಪುತ್ರ ಚರಣ್‌ ಜೀತ್‌ ಸಿಂಗ್‌ ಪಾತ್ರದಲ್ಲಿ ನಟಿಸಿದ್ದಾರೆ. ತರಣ್‌ ಜೀತ್‌ ಸಿಂಗ್‌ ಪಾಕಿಸ್ತಾನದಲ್ಲಿ ಪಾಕ್‌ ಸೇನೆಯ ಕೈಗೆ ಸಿಲುಕಿಕೊಂಡಿದ್ದು, ಆತನನ್ನು ರಕ್ಷಿಸಲೆಂದು ತಾರಾ ಸಿಂಗ್‌ ಪಾಕಿಸ್ತಾನಕ್ಕೆ ತೆರಳುವ ಕಥೆ ಇದರಲ್ಲಿದೆ. ಈ ಸಿನಿಮಾದವನ್ನು ಅನಿಲ್‌ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

Asha Bhosle: ಮೊದಲಿಗೆ ಸೋನು ನಗುತ್ತ ಆಶಾ ಅವರ ಪಾದಗಳಿಗೆ ಮುತ್ತಿಟ್ಟರು. ಆಶಾ ಭೋಂಸ್ಲೆಯ ಪಾದಗಳನ್ನು ಪನ್ನೀರಿನಿಂದ ತೊಳೆದು ಆಶೀರ್ವಾದ ಪಡೆದರು. ವೇದಿಕೆಯಿಂದ ಹೊರಡುವ ಮೊದಲು, ಸೋನು ನಿಗಮ್‌ ಅವರು ಮತ್ತೆ ಗಾಯಕಿಗೆ ಮೈ ಮುಗಿದು ನಮಸ್ಕರಿಸಿದ್ದಾರೆ. ಸೋನು ನಿಗಮ್‌ ಕಾರ್ಯಕ್ರಮದಲ್ಲಿ ಆಶಾ ಭೋಂಸ್ಲೆ ಮತ್ತು ಅವರ ದಿವಂಗತ ಸಹೋದರಿ, ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ನೆನೆದು, ಭಾರತೀಯ ಸಂಗೀತಕ್ಕೆ ಅವರ ಅಪಾರ ಕೊಡುಗೆ ಇದೆ ಎಂದು ಶ್ಲಾಘಿಸಿದರು.

VISTARANEWS.COM


on

Koo

ಬೆಂಗಳೂರು: ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಗೌರವ ಸೂಚಕವಾಗಿ ಗಾಯಕ ಸೋನು ನಿಗಮ್ (Sonu Nigam) ಅವರು ಹಿರಿಯ ಗಾಯಕಿ ಆಶಾ ಭೋಂಸ್ಲೆ (Asha Bhosle) ಅವರ ಪಾದ ತೊಳೆದು ನಮಸ್ಕರಿಸಿದ್ದಾರೆ. ʻಸ್ವರ್ಸ್ವಾಮಿನಿ ಆಶಾʼ (Swarswamini Asha)ಎಂಬ ಶೀರ್ಷಿಕೆಯ ಆಶಾ ಅವರ ಜೀವನಚರಿತ್ರೆ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಸೋನು ನಿಗಮ್‌ ಅವರು ಆಶಾ ಭೋಂಸ್ಲೆಯ ಪಾದಗಳನ್ನು ಪನ್ನೀರಿನಿಂದ ತೊಳೆದು ಆಶೀರ್ವಾದ ಪಡೆದರು. ಈ ಕಾರ್ಯಕ್ರಮದಲ್ಲಿ ನಟ ಜಾಕಿ ಶ್ರಾಫ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೊದಲಿಗೆ ಸೋನು ನಗುತ್ತ ಆಶಾ ಅವರ ಪಾದಗಳಿಗೆ ಮುತ್ತಿಟ್ಟರು. ಆಶಾ ಭೋಂಸ್ಲೆಯ ಪಾದಗಳನ್ನು ಪನ್ನೀರಿನಿಂದ ತೊಳೆದು ಆಶೀರ್ವಾದ ಪಡೆದರು. ವೇದಿಕೆಯಿಂದ ಹೊರಡುವ ಮೊದಲು, ಸೋನು ನಿಗಮ್‌ ಅವರು ಮತ್ತೆ ಗಾಯಕಿಗೆ ಮೈ ಮುಗಿದು ನಮಸ್ಕರಿಸಿದ್ದಾರೆ.

ಕಾರ್ಯಕ್ರಮಕ್ಕೆ ಆಶಾ ಭೋಂಸ್ಲೆ ಅವರು ಪ್ರಿಂಟೆಡ್‌ ಬಿಳಿ ಸೀರೆಯನ್ನು ಧರಿಸಿದ್ದರು. ಸೋನು ನಿಗಮ್‌ ಅವರು ಹಳದಿ ಕುರ್ತಾ ಮತ್ತು ಬಿಳಿ ಪೈಜಾಮಾದಲ್ಲಿ ಕಾಣಿಸಿಕೊಂಡರು. ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ಇಂತಹ ವಿಷಯಗಳನ್ನು ನಾವು ಭಾರತೀಯರು ಎಂದು ಹೆಮ್ಮೆಪಡುತ್ತೇವೆ.”ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻಸೋನು ನಿಗಮ್ ಬಗ್ಗೆ ತುಂಬಾ ಹೆಮ್ಮೆ ಇದೆ. ನಿಜವಾಗಿಯೂ ಗ್ರೇಟ್” ಎಂದು ಬರೆದಿದ್ದಾರೆ. “ಸೋನು ನಿಗಮ್‌ಗೆ ಹ್ಯಾಟ್ಸ್ ಆಫ್! ಎಂತಹ ಆರೋಗ್ಯಕರ ಕ್ಷಣ. ಲತಾ ಜೀ ಅವರು ಇರಬೇಕಿತ್ತುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಸೋನು ನಿಗಮ್‌ ಕಾರ್ಯಕ್ರಮದಲ್ಲಿ ಆಶಾ ಭೋಂಸ್ಲೆ ಮತ್ತು ಅವರ ದಿವಂಗತ ಸಹೋದರಿ, ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ನೆನೆದು, ಭಾರತೀಯ ಸಂಗೀತಕ್ಕೆ ಅವರ ಅಪಾರ ಕೊಡುಗೆ ಇದೆ ಎಂದು ಶ್ಲಾಘಿಸಿದರು.

ಇದನ್ನೂ ಓದಿ: Asha Bhosle: 90ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಗಾಯಕಿ ಆಶಾ ಭೋಂಸ್ಲೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸೋನು ನಿಗಮ್, ‘ಇಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಡುಗಾರಿಕೆ ಕಲಿಯಲು ಹಲವು ದಾರಿಗಳಿವೆ. ಆದರೆ ಹಿಂದಿನ ಕಾಲದಲ್ಲಿ ಲತಾಜಿ ಮತ್ತು ಆಶಾಜಿ ಮಾತ್ರ ಇದ್ದರು. ಆಶಾ ಅವರಿಂದ ನಾವು ಸಾಕಷ್ಟು ಕಲಿತಿದ್ದೇವೆ. ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರಿಂದ ನಾವು ಇನ್ನೂ ಕಲಿಯುವುದು ಬಹಳಷ್ಟಿದೆʼʼಎಂದರು.

ಸಂಗೀತ ಮತ್ತು ದೇಶಭಕ್ತಿ ಎರಡಕ್ಕೂ ಮಂಗೇಶ್ಕರ್ ಕುಟುಂಬದ ಸಮರ್ಪಣೆಯ ಬಗ್ಗೆ ಮೋಹನ್ ಭಾಗವತ್ ಮಾತನಾಡಿದರು. ಕಾರ್ಯಮದಲ್ಲಿ ಆಶಾ ಭೋಂಸ್ಲೆ ಸಹೋದರ, ಸಂಗೀತ ನಿರ್ದೇಶಕ ಹೃದಯನಾಥ್ ಮಂಗೇಶ್ಕರ್ ಕೂಡ ಉಪಸ್ಥಿತರಿದ್ದರು.

ಪಂಡಿತ್ ಹೃದಯನಾಥ್ ಮಂಗೇಶ್ಕರ್, ಉಷಾ ಮಂಗೇಶ್ಕರ್, ಅಶೋಕ್ ಸರಾಫ್, ಸುರೇಶ್ ವಾಡ್ಕರ್, ಶ್ರೀಧರ್ ಫಡ್ಕೆ, ರವೀಂದ್ರ ಸಾಠೆ, ಪದ್ಮಜಾ ಫೆನಾನಿ, ಉತ್ತರ ಕೇಳ್ಕರ್, ಸುದೇಶ್ ಭೋಸ್ಲೆ, ವೈಶಾಲಿ ಸಾಮಂತ್ ಮತ್ತು ಜಾಕಿ ಶ್ರಾಫ್, ನಾನಾ ಪಾಟೇಕರ್, ಪೂನಂ ಧಿಲ್ಲೋ, ಪದ್ಮಿನಿ ಕೊಲ್ಹಾಪುರೆ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್ ಶೇಲಾರ್ ಕೂಡ ಹಾಜರಿದ್ದರು.

Continue Reading

Latest

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Sonakshi Sinha: ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಜೊತೆ ಹೊಸ ಬದುಕಿಗೆ ಕಾಲಿಟ್ಟ ಸೋನಾಕ್ಷಿ ಸಿನ್ಹಾ ಈಗ ಪ್ರೆಗ್ನೆಂಟ್ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊ ತೆಗೆಯಲು ಪ್ರಯತ್ನಿಸಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sonakshi Sinha
Koo

ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇತ್ತೀಚೆಗಷ್ಟೇ ತಮ್ಮ ಪ್ರೇಮಿ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಹೊಸತರಲ್ಲೇ ನಟಿ ತಮ್ಮ ಪತಿಯ ಜೊತೆ ಆಸ್ಪತ್ರೆಯೊಂದರ ಹೊರಗೆ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ, ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾಗಿ ಆಕೆ ಗರ್ಭಿಣಿಯೇ ಎಂಬ ಸಂಶಯ ನೆಟ್ಟಿಗರಲ್ಲಿ ವ್ಯಕ್ತವಾಗಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ನಟಿ ಸೋನಾಕ್ಷಿ ಅವರು ತಮ್ಮ ಪತಿ ಜಹೀರ್ ಅವರ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊಗಳಲ್ಲಿ ಸೆರೆ ಹಿಡಿದಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

Sonakshi Sinha

ಯಾಕೆಂದರೆ ಈ ಹಿಂದೆ ಮದುವೆಯಾದ ಬಾಲಿವುಡ್ ನಟಿಯರಾದ ಆಲಿಯಾ ಭಟ್, ಸ್ವರಾ ಭಾಸ್ಕರ್ ಅವರು ತಮ್ಮ ಮದುವೆಯಾದ ಕೆಲವೇ ದಿನಗಳಲ್ಲಿ ತಾವು ಗರ್ಭಿಣಿ ಎಂದು ಘೋಷಣೆ ಮಾಡಿದ್ದು, ಈ ಬಗ್ಗೆ ಅನೇಕರು ಗಾಸಿಪ್ ಮಾಡಿದ್ದರು. ಹಾಗಾಗಿ ಸೋನಾಕ್ಷಿ ಅವರು ಕೂಡ ಇವರಂತೆ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ನೆಟ್ಟಿಜನ್ ಮನಸ್ಸಿನಲ್ಲಿ ಮೂಡಿದೆ ಎನ್ನಲಾಗಿದೆ. ಹಾಗಾಗಿ ನೆಟ್ಟಿಜನ್ ಸೋನಾಕ್ಷಿಯವರನ್ನು ಗರ್ಭಿಣಿ ಅವತಾರದಲ್ಲಿ ನೋಡಲು ಬಯಸುವುದಾಗಿ ತಿಳಿಸಿದ್ದಾರೆ.

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರು ಜೂನ್ 23ರಂದು ವಿವಾಹವಾದರು. ಅವರ ಮದುವೆಯ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅವರ ಜೋಡಿ ನೋಡಿ ಸ್ವರ್ಗದಲ್ಲಿ ಮಾಡಿದ ಪರಿಪೂರ್ಣ ಜೋಡಿ ಎಂದು ಹೊಗಳಿದ್ದಾರೆ.

Sonakshi Sinha

ಆದರೆ ಇವರಿಬ್ಬರು ಅಂತರ್ಧಮೀಯ ವಿವಾಹವಾಗಿದ್ದರಿಂದ ಈ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಸೋನಾಕ್ಷಿ ಅವರ ತಂದೆ ಶತ್ರುಘ್ನ ಸಿನ್ಹಾ ಕೂಡ ಅಸಮಾಧಾನಗೊಂಡಿದ್ದರು. ಅವರ ಮದುವೆಯಿಂದ ಅವರ ಕುಟುಂಬದವರು ಸಂತೋಷವಾಗಿಲ್ಲ ಎನ್ನಲಾಗಿತ್ತು. ಆದರೆ ಆ ಬಳಿಕ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಈ ದಂಪತಿ ಮದುವೆಗೂ ಮುನ್ನ 7 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಹಾಗಾಗಿ ಇವರು ಲಿವಿಂಗ್ ಟು ಗೇದರ್ ರಿಲೆಷನ್ಶಿಪ್‌ನಲ್ಲಿದ್ದರು ಎಂದು ಅನೇಕರು ಊಹಿಸಿದ್ದರು.

ಆದರೆ ನಟಿ ಈ ವದಂತಿಯನ್ನು ಅಲ್ಲಗೆಳೆದಿದ್ದು, ತಾನು ಹೆತ್ತವರೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸುವ ಮೂಲಕ ಈ ವದಂತಿಗೆ ತೆರೆ ಎಳೆದಿದ್ದರು.

Continue Reading

ಬಾಲಿವುಡ್

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

Bigg Boss OTT 3: ಖ್ಯಾತ ಯುಟ್ಯೂಬರ್‌ ಅರ್ಮಾನ್‌ ಮಲಿಕ್‌ ಅವರು ಯುಟ್ಯೂಬ್‌ ಸೇರಿ ಯಾವುದೇ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದರೂ ಅದು ಲಕ್ಷಾಂತರ ಜನರನ್ನು ತಲುಪುತ್ತದೆ, ಸುದ್ದಿಯಾಗುತ್ತದೆ. ಆದರೆ, ಈಗ ಅರ್ಮಾನ್‌ ಮಲಿಕ್‌ ಬಿಗ್‌ ಬಾಸ್‌ ಮನೆಯಿಲ್ಲಿದ್ದಾರೆ. ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ.

VISTARANEWS.COM


on

Bigg Boss OTT 3 Armaan Malik both Kritika Malik and Payal Malik in bigg bos house
Koo

ಬೆಂಗಳೂರು: ಬಿಗ್ ಬಾಸ್ OTT ಸೀಸನ್‌ನಲ್ಲಿ (Bigg Boss OTT 3) ಅರ್ಮಾನ್ ಮಲಿಕ್ (Arman Malik) ಮತ್ತು ಅವರ ಇಬ್ಬರು ಪತ್ನಿಯರಾದ ಪಾಯಲ್ ಮತ್ತು ಕೃತಿಕಾ ಭಾಗವಹಿಸಿರುವುದು ಗೊತ್ತೇ ಇದೆ.

ಈ ಶೋ ಬಹುಪತ್ನಿತ್ವವನ್ನು ಉತ್ತೇಜಿಸುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಹೊಸ ಪ್ರೋಮೊ ಒಂದು ವೈರಲ್‌ ಆಗಿದೆ.

ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ. ಅರ್ಮಾನ್ ಮತ್ತು ಕೃತಿಕಾ ವಿವಾಹಿತ ಜೋಡಿಯಾಗಿ ಹೇಗೆ ಮರಳಿದರು ಎಂಬುದನ್ನು ಪಾಯಲ್ ವಿವರಿಸಿದ್ದಾರೆ.

ಇದನ್ನೂ ಓದಿ: Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಅವರಿಬ್ಬರ ನಿರ್ಧಾರದಿಂದ ಪಾಯಲ್ ಎಷ್ಟು ದುಃಖಿತರಾಗಿದ್ದಾರೆಂಬುವುದು ಎಂಬುದು ಈ ಪ್ರೋಮೊದಲ್ಲಿದೆ.

Continue Reading

ಸಿನಿಮಾ

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಬೆಳ್ಳುಳ್ಳಿ ಎಸಳು ಪದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ ಎಂಬುದರ ಕುರಿತು ಅವರು ಹೇಳಿರುವುದು ವೈರಲ್ ಆಗಿದೆ.

VISTARANEWS.COM


on

By

Priyanka Chopra
Koo

ಬಾಲಿವುಡ್ ನಟಿ (Bollywood actress) ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತಮ್ಮ ಪಾದಗಳಿಗೆ ಬೆಳ್ಳುಳ್ಳಿಯ (Garlic) ಎಸಳುಗಳನ್ನು ಉಜ್ಜಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಹಲವಾರು ಬಳಕೆದಾರರು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಸಾಕಷ್ಟು ಮಂದಿ ಬೆಳ್ಳುಳ್ಳಿಯನ್ನು ಉಜ್ಜಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಪ್ರಸ್ತುತ ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಪೋಸ್ಟ್ ನೊಂದಿಗೆ ಇದ್ದ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಚಿತ್ರದ ಸೆಟ್‌ಗಳಲ್ಲಿ ಪ್ರಿಯಾಂಕಾಗೆ ಉಂಟಾದ ಗಮನಾರ್ಹ ಗಾಯಗಳನ್ನು ಇದು ಬಹಿರಂಗಪಡಿಸಿದೆ. ನಟಿ ಕೆಲವು ಎಸಳು ಬೆಳ್ಳುಳ್ಳಿ ಮತ್ತು ಲವಂಗವನ್ನು ಬಲವಾಗಿ ಅವಳ ಪಾದಗಳಿಗೆ ಉಜ್ಜುತ್ತಿರುವ ವಿಡಿಯೋ ಇದರಲ್ಲಿದೆ. ಇದು ವಾಸ್ತವವಾಗಿ ಕೆಲವು ಖಾಯಿಲೆಗಳನ್ನು ಎದುರಿಸಲು ಅನೇಕರು ಬಳಸುವ ಸಾಂಪ್ರದಾಯಿಕ ಔಷಧವಾಗಿದೆ.

ಬೆಳ್ಳುಳ್ಳಿಯನ್ನು ಪಾದಗಳಿಗೆ ಉಜ್ಜುವುದು ಏಕೆ?

ನಟಿ ಪ್ರಿಯಾಂಕಾ ಹಂಚಿಕೊಂಡ್ಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಇದು ವೈಜ್ಞಾನಿಕ ಅಂಶಗಳ ಬಗ್ಗೆಯೂ ಚರ್ಚೆಯನ್ನು ಹುಟ್ಟು ಹಾಕಿತ್ತು.

ಟಿಸರ್ ಮತ್ತು ಇನ್‌ಸ್ಟಿಟ್ಯೂಟ್ ವರದಿಯ ಪ್ರಕಾರ ಈ ಪ್ರಕ್ರಿಯೆಯ ಸಾಕಷ್ಟು ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿ ಮತ್ತು ಲವಂಗವನ್ನು ಕತ್ತರಿಸಿ ಪುಡಿ ಮಾಡಿದಾಗ ಇದು ಅಲಿನ್ ಅನ್ನು ಅಲಿನೇಸ್ ಕಿಣ್ವದೊಂದಿಗೆ ಸೇರುವಂತೆ ಮಾಡುತ್ತದೆ. ಇದು ಅಲಿಸಿನ್ ಎಂಬ ಹೊಸ ಸಂಯುಕ್ತವನ್ನು ಸೃಷ್ಟಿಸುತ್ತದೆ. ಬೆಳ್ಳುಳ್ಳಿ ಮತ್ತು ಪುಡಿ ಮಾಡಿದ ಲವಂಗವನ್ನು ಪಾದಗಳ ಮೇಲೆ ಉಜ್ಜಿದಾಗ ಅದು ದೇಹದಲ್ಲಿ ರಕ್ತಪ್ರವಾಹ ಚೆನ್ನಾಗಿ ನಡೆಯಲು ಸಹಾಯ ಮಾಡುತ್ತದೆ.

ವೆರಿವೆಲ್ ಹೆಲ್ತ್ ವರದಿಯ ಪ್ರಕಾರ, ಇದು ಕೆಲವು ರೀತಿಯ ಕ್ಯಾನ್ಸರ್‌ಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಮಧುಮೇಹ, ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ವ್ಯಾಯಾಮದ ಅನಂತರ ಸ್ನಾಯುವಿನ ಚೇತರಿಕೆಗೆ ಸಹಾಯ ಮಾಡುತ್ತದೆ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.


ಪ್ರಯೋಜನಗಳೇನು?

ಕ್ಲೀವ್ ಲ್ಯಾಂಡ್ ಕ್ಲಿನಿಕ್ ವರದಿಯ ಪ್ರಕಾರ, ಬೆಳ್ಳುಳ್ಳಿಯು ಉರಿಯೂತದ ಗುಣಲಕ್ಷಣಗಳ ಜೊತೆಗೆ ಅಪಾರವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಕೀಲು ಮತ್ತು ಸ್ನಾಯುಗಳಲ್ಲಿನ ನೋವನ್ನು ನಿವಾರಿಸಲು ಇದು ಸೂಕ್ತವಾಗಿದೆ. ಬೆಳ್ಳುಳ್ಳಿ ಲವಂಗವನ್ನು ಮೊಡವೆಗಳ ಮೇಲೆ ಉಜ್ಜುವುದರಿಂದ ಮೊಡವೆಗಳನ್ನು ದೂರಮಾಡಬಹುದು. ಆದರೂ ಅದು ನಿಮ್ಮ ಚರ್ಮಕ್ಕೆ ಸೂಕ್ತವೇ ಎಂಬುದನ್ನು ತಿಳಿದುಕೊಳ್ಳಲು ಚರ್ಮಶಾಸ್ತ್ರಜ್ಞರನ್ನು ಸಂಪರ್ಕಿಸಬೇಕು.

ಕೆಂಪು ರಕ್ತ ಕಣಗಳು ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಅನ್ನು ಹೈಡ್ರೋಜನ್ ಸಲ್ಫೈಡ್ ಅನಿಲವಾಗಿ ಪರಿವರ್ತಿಸುತ್ತವೆ. ಇದು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅಂತಿಮವಾಗಿ ಬೆಳ್ಳುಳ್ಳಿ ಕ್ರೀಡಾಪಟುವಿನ ಪಾದಕ್ಕೆ ಚಿಕಿತ್ಸೆ ನೀಡಲು ಉತ್ತಮ ಪ್ರತಿವಿಷವಾಗಿದೆ. ಇದು ಶಿಲೀಂಧ್ರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯನ್ನು ಸತತವಾಗಿ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಕೊಡುತ್ತದೆ. ಬೆಳ್ಳುಳ್ಳಿಯ ಎಣ್ಣೆ ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಹೆಲ್ತ್‌ಲೈನ್ ವರದಿಯ ಪ್ರಕಾರ ಪ್ರತಿ ಊಟದಲ್ಲಿ 1 ಎಸಳಿಗಿಂತ ಹೆಚ್ಚು ಬೆಳ್ಳುಳ್ಳಿಯನ್ನು ಸೇವಿಸಲು ಪ್ರಯತ್ನಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಪ್ರಿಯಾಂಕಾ ಬಳಸುತ್ತಿರುವುದು ಏಕೆ?

ಬಳಕೆದಾರರ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ ಅವರು, ಇದು ಉರಿಯೂತ ಮತ್ತು ದೇಹದ ತಾಪವನ್ನು ಇಳಿಸಲು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

Continue Reading
Advertisement
Gold Rate Today
ಪ್ರಮುಖ ಸುದ್ದಿ10 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್19 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ28 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Mohan Bhagwat
ದೇಶ35 mins ago

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Kalki 2898 AD Yash calls visually stunning spectacle
ಟಾಲಿವುಡ್50 mins ago

Kalki 2898 AD: ʻಕಲ್ಕಿʼ ಸಿನಿಮಾ ಹಾಡಿ ಹೊಗಳಿದ ರಾಕಿಂಗ್‌ ಸ್ಟಾರ್‌ ಯಶ್‌!

IND vs SA Final
ಕ್ರೀಡೆ54 mins ago

IND vs SA Final: ವಿಶ್ವಕಪ್​ ಗೆಲ್ಲಲು ಕೊಹ್ಲಿ, ರೋಹಿತ್​, ದ್ರಾವಿಡ್​ಗೆ ಇದು ಕೊನೆಯ ಅವಕಾಶ!

Law And Order
ಕರ್ನಾಟಕ1 hour ago

Law And Order: ಗದಗ, ರಾಯಚೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ; ಕಾನೂನು ಸುವ್ಯವಸ್ಥೆ ಗತಿ ಏನು?

Actor Darshan Renuka Swamy case In colorskannada shantam Paapam
ಸ್ಯಾಂಡಲ್ ವುಡ್1 hour ago

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Isha Ambani
ವಾಣಿಜ್ಯ1 hour ago

Isha Ambani: ತಾನು ಅವಳಿ ಮಕ್ಕಳಿಗೆ ತಾಯಿಯಾಗಿದ್ದು ಐವಿಎಫ್ ಮೂಲಕ ಎಂದ ಇಶಾ ಅಂಬಾನಿ

Road Accident
ದೇಶ1 hour ago

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ28 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ24 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌