Site icon Vistara News

ʼಸಾವಿತ್ರಿಬಾಯಿ ಫುಲೆʼಗೆ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಲಿ: ತಾರಾ ಅನುರಾಧಾ ಮನವಿ

ಸಿಎಂಗೆ ತಾರಾ ಮನವಿ

ಧಾರವಾಡ: ಸಾವಿತ್ರಿಬಾಯಿ ಫುಲೆ ಸಿನಿಮಾ ಜುಲೈ 31ರಿಂದ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಹಿರಿಯ ಚಿತ್ರನಟಿ ತಾರಾ ಅನುರಾಧಾ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಮನವಿಯನ್ನೂ ಸರ್ಕಾರದ ಮುಂದೆ ಇಟ್ಟಿದ್ದಾರೆ.

ಸಾವಿತ್ರಿಬಾಯಿ ಫುಲೆ ಚಿತ್ರದಲ್ಲಿ ತಾರಾ ಅವರು ಸಾವಿತ್ರಿಬಾಯಿ ಆಗಿ ಕಾಣಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಈ ಚಿತ್ರ ಬಿಡುಗಡೆಗೊಂಡಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಚಿತ್ರವನ್ನು ಮತ್ತೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ | Rocketry: The Nambi Effect | ಮಾಧವನ್ ನಿರ್ದೇಶಿಸಿ ನಟಿಸಿರುವ ʼರಾಕೆಟ್ರಿʼಯ 7 ದಿನದ ಕಲೆಕ್ಷನ್‌?

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ನಟಿ ತಾರಾ, ʻರಾಜ್ಯದ ಶಿಕ್ಷಕಿಯರು ಮುಂದೆ ಬಂದು ಚಿತ್ರವನ್ನು ಬಿಡುಗಡೆ ಮಾಡಲೇಬೇಕೆಂದು ಕೈ ಜೋಡಿಸಿದ್ದಾರೆ. ಆದ್ದರಿಂದ ಪುನರ್‌ ಪ್ರದರ್ಶನ ಮಾಡುತ್ತಿದ್ದೇವೆ. ಈ ಜುಲೈ 31 ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಅಲ್ಲದೆ, ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿ ಅವರ ಬಳಿ ವಿನಂತಿಸಿಕೊಳ್ಳುವುದಾಗಿ ಹೇಳಿದರು.

ಇದನ್ನೂ ಓದಿ | Driver Jamuna Movie |ನಟಿ ಐಶ್ವರ್ಯಾ ರಾಜೇಶ್ ನಟನೆಯ ಡ್ರೈವರ್ ಜಮುನಾ ಟ್ರೈಲರ್‌ ಔಟ್‌

Exit mobile version