Gowri Movie: ಸಮರ್ಜಿತ್‌ಗೆ ನಾಚಿಕೆಯಿಂದ ದೋಸೆ ತಿನ್ನಿಸಿದ ಸಾನ್ಯಾ ಅಯ್ಯರ್; ಇದೇನು ಡೇಟಿಂಗಾ ಎಂದು ಪ್ರಶ್ನೆ ಇಟ್ಟ ಫ್ಯಾನ್ಸ್! - Vistara News

ಸಿನಿಮಾ

Gowri Movie: ಸಮರ್ಜಿತ್‌ಗೆ ನಾಚಿಕೆಯಿಂದ ದೋಸೆ ತಿನ್ನಿಸಿದ ಸಾನ್ಯಾ ಅಯ್ಯರ್; ಇದೇನು ಡೇಟಿಂಗಾ ಎಂದು ಪ್ರಶ್ನೆ ಇಟ್ಟ ಫ್ಯಾನ್ಸ್!

Gowri Movie: ನ್ಸ್ಟಾಗ್ರಾಮ್‌ನಲ್ಲಿ ಸಾನ್ಯಾ ಅಯ್ಯರ್, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ದೋಸೆ ತಿನ್ನಿಸುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ಸಾನ್ಯಾ ಅಯ್ಯರ್‌ಗೆ ಟೀ ಕುಡಿಸ್ತಿದ್ದಾರೆ ಸಮರ್ಜಿತ್‌.

VISTARANEWS.COM


on

Gowri Movie Saanya Iyer Samar Lankesh eating dosa with together
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮರ್ಜಿತ್ ಲಂಕೇಶ್, ಸಾನ್ಯ ಅಯ್ಯರ್ ಅಭಿನಯದ ‘ಗೌರಿ’ ಚಿತ್ರ ಆಗಸ್ಟ್ 15ರಂದು ರಾಜ್ಯಾದ್ಯಂತ ಗ್ರ್ಯಾಂಡ್ ರಿಲೀಸ್ ಅಗಲು ಸಿದ್ಧವಾಗಿದ್ದು, ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಗೌರಿ ಚಿತ್ರದ (Gowri Movie) ಟ್ರೈಲರ್‌ ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರು ಸೋಮವಾರ ಅನಾವರಣ ಮಾಡಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಸಾನ್ಯಾ ಅಯ್ಯರ್, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ದೋಸೆ ತಿನ್ನಿಸುತ್ತಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ಸಾನ್ಯಾ ಅಯ್ಯರ್‌ಗೆ ಟೀ ಕುಡಿಸ್ತಿದ್ದಾರೆ ಸಮರ್ಜಿತ್‌. ನಾಚಿಕೊಳ್ತಾ ಟೀ ಹೀರುವ ಸಾನ್ಯಾ ಅಯ್ಯರ್, ಸೂಪರ್ ಎಂದು ಕೈಸನ್ನೆ ಮಾಡ್ತಾರೆ. ಸಾನ್ಯಾ ಕೂಡ ಸಮರ್ಜಿತ್‌ಗೆ ದೋಸೆ ತಿನ್ನಿಸಿದ್ದಾರೆ.

ಸಮರ್ಜಿತ್ ಸರ್ಪ್ರೈಸ್ ಆಗಿ ಟೀ ತಟ್ಟೆಯನ್ನು ಸಾನ್ಯಾ ಮುಂದಿಟ್ಟಾಗ ಸ್ವಲ್ಪ ಅನುಮಾನಿಸಿದ್ದ ಸಾನ್ಯಾ, ನಂತರ ನಾಚುತ್ತಲೇ ಟೀ ಕುಡಿದಿದ್ದರು.ದೋಸೆ ತಿನ್ನುವ ಸರದಿ ಸಮರ್ಜಿತ್ ಅವರಿಗೆ ಬಂದಿತ್ತು. ಸಾನ್ಯಾ ದೋಸೆ ತಿನ್ನಿಸಲು ಬಂದರೆ ಸಮರ್ಜಿತ್ ಲಂಕೇಶ್ ನಾಚಿ ನೀರಾಗಿದ್ದರು. ಕೊನೆಗೂ ತುತ್ತು ತಿಂದ ಸಮರ್ಜಿತ್, ಸಾನ್ಯಾ ಕೈನಿಂದ ಬಂದ ದೋಸೆ ಸ್ವೀಟ್ ಆಗಿತ್ತು ಎಂದು ಕಮೆಂಟ್ ಮಾಡಿದ್ದಾರೆ. ಶಿವಾನಂದ ಸರ್ಕಲ್ ನಲ್ಲಿರುವ ಫ್ಯಾಮಿಲಿ ರೆಸ್ಟೋರೆಂಟ್ ಗೆ ಕೂಡ ಜೋಡಿ ಭೇಟಿ ನೀಡಿದ್ದರು. ಅಲ್ಲಿ ಲೈವ್ ಬಂದ ಸಾನ್ಯಾ ಅಯ್ಯರ್, ಚಂದ್ರು ಅವರನ್ನು ಮಾತನಾಡಿಸಿದ್ದಾರೆ. ಗೌರಿ ಚಿತ್ರ ವೀಕ್ಷಣೆ ಮಾಡುವಂತೆ ಚಂದ್ರು ಕೂಡ ಪ್ರೇಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ʻಇವ್ರಿಬ್ರೂ ಮೂವಿ ಮಾಡ್ತಾ ಇದ್ದಾರೋ ಇಲ್ಲ ಡೇಟಿಂಗ್ ಮಾಡ್ತಾ ಇದ್ದಾರೆ ಗೊತ್ತಾಗ್ತಾ ಇಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಇಂದ್ರಜಿತ್​ ಲಂಕೇಶ್ (Indrajit Lankesh)​ ಅವರ ಪುತ್ರ ಸಮರ್ಜಿತ್​ ಲಂಕೇಶ್​ (Samarjit Lankesh) ಅವರು ಹೀರೊ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇಂದ್ರಜಿತ್‌ ಲಂಕೇಶ್ ಅವರು ತಮ್ಮ ಮಗನ ಮೊದಲ ಸಿನಿಮಾಕ್ಕೆ ‘ಗೌರಿ’ ಎಂದು ಟೈಟಲ್ ಇಟ್ಟಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ ಎನ್ನುವ ಶೀರ್ಷಿಕೆ ಇಟ್ಟಿದ್ದು ಏಕೆ ಎನ್ನುವ ಪ್ರಶ್ನೆಗೆ ಇಂದ್ರಜಿತ್ ಅವರು, ʻನನ್ನ ಅಕ್ಕನ ಮೇಲಿ ಪ್ರೀತಿ ಹಾಗೂ ಅಭಿಮಾನಕ್ಕಾಗಿ ಗೌರಿ ಎನ್ನುವ ಶೀರ್ಷಿಕೆ ಇಟ್ಟಿದ್ದೇನೆʼʼಎಂದಿದ್ದರು. ಈ ಸಿನಿಮಾಗಾಗಿ ಸಮರ್ಜಿತ್​ ಲಂಕೇಶ್​ ಅವರು ಡ್ಯಾನ್ಸ್​, ಫೈಟಿಂಗ್​, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಗೌರಿ’ ಚಿತ್ರದಲ್ಲಿ ಸಮರ್ಜಿತ್​ ಲಂಕೇಶ್​ಗೆ ಜೋಡಿಯಾಗಿ ‘ಬಿಗ್​ ಬಾಸ್​’ ಖ್ಯಾತಿಯ ಸಾನ್ಯಾ ಅಯ್ಯರ್​ ಅವರು ನಟಿಸಿದ್ದಾರೆ.

ಈ ಚಿತ್ರಕ್ಕೆ ಎಜೆ ಶೆಟ್ಟಿ ಛಾಯಾಗ್ರಹಣವಿದ್ದು, ಬಿ.ಎ.ಮಧು, ರಾಜಶೇಖರ್, ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಕೆ.ಕಲ್ಯಾಣ್, ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

OTT Releases: ಇಂಡಿಯನ್ 2, ಟರ್ಬೊ ಸೇರಿದಂತೆ ಹಲವು ಹೊಸ ಚಿತ್ರಗಳು ಈ ವಾರ ಒಟಿಟಿಯಲ್ಲಿ!

ಸಂಜಯ್ ದತ್, ರವೀನಾ ಟಂಡನ್ ಅಭಿನಯದ ಘುಡಚಡಿ, ಕಮಲ್ ಹಾಸನ್ ಅವರ ಇಂಡಿಯನ್ 2 ಸೇರಿದಂತೆ ಹಲವು ಹೊಸ ಚಿತ್ರಗಳು, ವೆಬ್ ಸರಣಿಗಳು ಈ ವಾರ ಒಟಿಟಿ ಪ್ರೇಕ್ಷಕರಿಗೆ ಭರ್ಜರಿ ಮನೋರಂಜನೆ (OTT Releases) ಒದಗಿಸಲಿದೆ. ಒಟಿಟಿಯ ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ಜಿಯೋ ಸಿನಿಮಾದಲ್ಲಿ ಈ ವಾರ ಪ್ರದರ್ಶನ ಕಾಣಲಿರುವ ಚಿತ್ರ, ಸರಣಿಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Releases
Koo

ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ಜಿಯೋ ಸಿನಿಮಾ ವೀಕ್ಷಕರು ನೀವಾಗಿದ್ದರೆ ಈ ವಾರ ಪೂರ್ತಿ ಭರ್ಜರಿ ಮನೋರಂಜನೆ ಗ್ಯಾರಂಟಿ. ಹಲವು ಹೊಸ ಚಿತ್ರಗಳು (new film), ವೆಬ್ ಸರಣಿಗಳು (Web series) ಈ ವಾರ ಒಟಿಟಿಯಲ್ಲಿ ತೆರೆ (OTT Releases) ಕಾಣಲಿದೆ. ಹೀಗಾಗಿ ಈ ವಾರಾಂತ್ಯದಲ್ಲಿ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಕಾಲ ಕಳೆಯಲು ಪ್ರವಾಸ, ಲಂಚ್, ಡಿನ್ನರ್ ಯೋಜನೆ ಮಾಡಬೇಕಿಲ್ಲ. ಒಟ್ಟಿಗೆ ಕುಳಿತು ನೋಡಬಹುದಾದ ಚಿತ್ರ, ಸರಣಿಗಳನ್ನು ಮನೆಯಲ್ಲೇ ವೀಕ್ಷಿಸಬಹುದು.

ಈ ಬಾರಿ ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಘುಡಚಡಿ, ಇಂಡಿಯನ್ 2, ಟರ್ಬೊ ಸೇರಿದಂತೆ ಇನ್ನು ಹಲವು ಸಿನಿಮಾ, ವೆಬ್ ಸರಣಿಗಳು ಬಿಡುಗಡೆಯಾಗಲಿದೆ.


ಆರ್ ಯು ಶ್ಯೂರ್‌?

ಪ್ರವಾಸದ ಕುರಿತಾಗಿರುವ ವೆಬ್ ಸರಣಿ ಇದಾಗಿದ್ದು, ಜಂಗ್‌ಕುಕ್ ಮತ್ತು ಜಿಮಿನ್ ಅವರು ವಿವಿಧ ಪ್ರದೇಶಗಳನ್ನು ಅನ್ವೇಷಿಸಿ ನ್ಯೂಯಾರ್ಕ್‌ಗೆ ಭೇಟಿ ನೀಡಲಿದ್ದಾರೆ. ಅಮೆರಿಕದ ಜೆಜು ದ್ವೀಪ, ದಕ್ಷಿಣ ಕೊರಿಯಾ ಮತ್ತು ಜಪಾನ್‌ನ ಸಪೊರೊಗೆ ಅವರು ಭೇಟಿ ನೀಡುವ ಸಂಪೂರ್ಣ ಚಿತ್ರಣವನ್ನು ಈ ವೆಬ್ ಸರಣಿ ಹೊಂದಿದೆ. ಇದು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಆಗಸ್ಟ್ 8ರಂದು ಬಿಡುಗಡೆಯಾಗಲಿದೆ.


ದಿ ಅಂಬ್ರೆಲಾ ಅಕಾಡೆಮಿ ಸರಣಿ- 4

ವಿಶೇಷ ಶಕ್ತಿ ಹೊಂದಿರುವ ದತ್ತು ಪಡೆದ ಒಡಹುಟ್ಟಿದವರ ಕಥೆಯನ್ನು ‘ದಿ ಅಂಬ್ರೆಲಾ ಅಕಾಡೆಮಿ’ ಹೊಂದಿದೆ. ತಂದೆಯ ಸಾವಿನ ಸತ್ಯವನ್ನು ತಿಳಿಯಲು ಅವರು ಒಂದಾಗುವ ಈ ಸರಣಿಯಲ್ಲಿ ಎಲಿಯಟ್ ಪೇಜ್, ಟಾಮ್, ಹಾಪರ್, ಡೇವಿಡ್ ಕ್ಯಾಸ್ಟನೆಡಾ, ಎಮ್ಮಿ ರೇವರ್- ಲ್ಯಾಂಪ್‌ಮನ್, ರಾಬರ್ಟ್ ಶೀಹನ್ ಮತ್ತು ಏಡನ್ ಗಲ್ಲಾಘರ್ ನಟಿಸಿದ್ದಾರೆ. ಇದು ನಾಲ್ಕನೆಯ ಮತ್ತು ಅಂತಿಮ ಸರಣಿಯಾಗಿದ್ದು, ನೆಟ್‌ಫ್ಲಿಕ್ಸ್ ನಲ್ಲಿ ಆಗಸ್ಟ್ 8ರಂದು ಬಿಡುಗಡೆಯಾಗಲಿದೆ.


ಘುಡಚಡಿ

ವಿಭಿನ್ನ ತಲೆಮಾರುಗಳ ಎರಡು ಜೋಡಿಗಳ ಪ್ರೇಮಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್, ಪಾರ್ಥ್ ಸಮತಾನ್, ಖುಶಾಲಿ ಕುಮಾರ್, ಅರುಣಾ ಇರಾನಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್ 9ರಂದು ಜಿಯೋ ಸಿನಿಮಾದಲ್ಲಿ ಬಿಡುಗಡೆಯಾಗಲಿದೆ.


ಗ್ಯಾರಹ್ ಗ್ಯಾರಹ್

ಕೊಲೆ ಪ್ರಕರಣವನ್ನು ಭೇದಿಸಲು ಹೊರಟ ಇಬ್ಬರು ಪೊಲೀಸ್ ಅಧಿಕಾರಿಗಳ ಕಥೆ ಇದು. ರಾಘವ್ ಜುಯಲ್, ಕೃತಿಕಾ ಕಮ್ರಾ ಮತ್ತು ಧೈರ್ಯ ಕರ್ವಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಝೀ5ನಲ್ಲಿ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ.


ಇಂಡಿಯನ್ 2

ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಇಂಡಿಯನ್ 2’ ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಹೊರಗೆಳೆಯಲು ಬಂದ ಸೇನೆಯ ನಾಯಕನೊಬ್ಬನ ಹೋರಾಟದ ಕಥೆ ಇದು. ಇಂಡಿಯನ್ 1996ರ ಹಿಟ್ ಚಲನಚಿತ್ರದ ಮುಂದುವರಿದ ಭಾಗ ಇದಾಗಿದೆ. ಎಸ್. ಶಂಕರ್ ನಿರ್ದೇಶನದ ಈ ಚಿತ್ರದಲ್ಲಿ ಕಮಲ್ ಹಾಸನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ವಿವೇಕ್ ಮತ್ತು ಕಾಜಲ್ ಅಗರ್ವಾಲ್ ನಟಿಸಿರುವ ಈ ಚಿತ್ರ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಈ ನಾಲ್ಕು ಭಾಷೆಯಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ.


ಲೈಫ್ ಹಿಲ್ ಗಯಿ

ಹಳೆಯ ಹೊಟೇಲ್‌ವೊಂದರ ಉತ್ತರಾಧಿಕಾರಕ್ಕಾಗಿ ಒಡಹುಟ್ಟಿದವರು ಪರಸ್ಪರ ಸ್ಪರ್ಧೆಗೆ ಇಳಿಯುವ ಕಥೆಯನ್ನು ಹೊಂದಿರುವ ಇದರಲ್ಲಿ ಕುಶಾ ಕಪಿಲ ಮತ್ತು ದಿವ್ಯೆಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಈ ಚಿತ್ರ ಆಗಸ್ಟ್ 9ರಂದು ಬಿಡುಗಡೆಯಾಗಲಿದೆ.


ಫಿರ್ ಆಯಿ ಹಸೀನ್ ದಿಲ್ರುಬಾ

‘ಹಸೀನ್ ದಿಲ್ರುಬಾʼದ ಮುಂದುವರಿದ ಭಾಗವಾಗಿರುವ ಇದು ರಾಣಿ ಮತ್ತು ರಿಷು ನಡುವೆ ಸುತ್ತುತ್ತದೆ. ತಾಪ್ಸಿ ಪನ್ನು, ವಿಕ್ರಾಂತ್ ಮಾಸ್ಸಿ ಮತ್ತು ಸನ್ನಿ ಕೌಶಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 9 ರಂದು ಇದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Divya Seth: ಸುಷ್ಮಾ ಸೇಠ್ ಮೊಮ್ಮಗಳು, ʻಜಬ್ ವಿ ಮೆಟ್ ʼಚಿತ್ರದ ಖ್ಯಾತ ನಟಿಯ ಪುತ್ರಿ ನಿಧನ


ಟರ್ಬೊ

ತೊಂದರೆಗೆ ಸಿಲುಕಿದ ಜೀಪ್ ಚಾಲಕ ಚೆನ್ನೈಗೆ ಹೋಗುತ್ತಾನೆ. ಅಲ್ಲಿ ವಿಚಿತ್ರ ಘಟನೆಗಳನ್ನು ಎದುರಿಸಬೇಕಾಗುತ್ತದೆ. ವೆಟ್ರಿವೇಲ್ ಷಣ್ಮುಘ ಸುಂದರಂ ಅವರ ಚಿತ್ರದಲ್ಲಿ ಮಮ್ಮುಟ್ಟಿ ಜೊತೆ ರಾಜ್ ಬಿ. ಶೆಟ್ಟಿ, ಸುನಿಲ್ ಮತ್ತು ಅಂಜನಾ ಜಯಪ್ರಕಾಶ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 9ರಂದು ಸೋನಿ ಲೈವ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.


ಡಿಜಾಂಗೋ

ಆಗಸ್ಟ್ 9ರಂದು ಒಟಿಟಿಯಲ್ಲಿ ಇದು ಬಿಡುಗಡೆಯಾಗಲಿದೆ. ಕಾಲ್ಪನಿಕ ನಗರದಲ್ಲಿ ಹುಟ್ಟಿಕೊಳ್ಳುವ ಕಥೆ ಇದು. ಡಿಜಾಂಗೊ ಕಳೆದುಹೋದ ಮಗಳು ಸಾರಾಳನ್ನು ಹುಡುಕುವ ಕಥೆಯನ್ನು ಹೊಂದಿದೆ. ಲಿಸಾ ವಿಕಾರಿ, ಮಥಿಯಾಸ್ ಸ್ಕೋನೆರ್ಟ್ಸ್ ಮತ್ತು ನಿಕೋಲಸ್ ಪಿನೋಕ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಿ ಲೈವ್‌ನಲ್ಲಿ ಇದು ಲಭ್ಯ.

Continue Reading

ಕರ್ನಾಟಕ

Kannada New Movie: ʼಆಪರೇಷನ್ ಕೊಂಬುಡಿಕ್ಕಿʼ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಅನುಪ್ ಹನುಮಂತೇಗೌಡ

Kannada New Movie: ಕನ್ನಡ ಚಿತ್ರರಂಗದ ಕಿರಿಯ ಮತ್ತು ಯಶಸ್ವಿ ನಿರ್ಮಾಪಕ ಅನುಪ್‌ ಹನುಮಂತೇಗೌಡ ಈಗ “ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್” ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ, ಅದರ ಅಡಿಯಲ್ಲಿ “ಆಪರೇಷನ್‌ ಕೊಂಬುಡಿಕ್ಕಿ” ಎಂಬ ಬಿಗ್ ಬಜೆಟ್‌ ಚಿತ್ರ ನಿರ್ಮಾಣದ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.

VISTARANEWS.COM


on

Kannada New Movie
Koo

ಬೆಂಗಳೂರು: ಸೂಪರ್ ಹಿಟ್ ಚಿತ್ರ “ಶಿವಾಜಿ ಸುರತ್ಕಲ್” ಡಿಟೆಕ್ಟಿವ್ ಸರಣಿಗಳ ನಿರ್ಮಾಪಕ ಅನುಪ್ ಹನುಮಂತೇಗೌಡ ತಮ್ಮ ಮೂರನೇ ನಿರ್ಮಾಣದ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ‌. ಹಿರಿಯ ನಿರ್ದೇಶಕ ಎಸ್. ಮಹೇಂದರ್ ಅವರ ನಿರ್ದೇಶನದಲ್ಲಿ ಕಿಶೋರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರಕ್ಕೆ “ಆಪರೇಷನ್ ಕೊಂಬುಡಿಕ್ಕಿ” (Kannada New Movie) ಎಂದು ಹೆಸರಿಟ್ಟಿದ್ದಾರೆ.

ಕನ್ನಡ ಚಿತ್ರರಂಗದ ಕಿರಿಯ ಮತ್ತು ಯಶಸ್ವಿ ನಿರ್ಮಾಪಕ ಅನುಪ್‌ ಹನುಮಂತೇಗೌಡ ಈಗ “ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್” ಎಂಬ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ, ಅದರ ಅಡಿಯಲ್ಲಿ “ಆಪರೇಷನ್‌ ಕೊಂಬುಡಿಕ್ಕಿ” ಎಂಬ ಬಿಗ್ ಬಜೆಟ್‌ ಚಿತ್ರ ನಿರ್ಮಾಣದ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.

“ಗಟ್ಟಿಮೇಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಎಸ್. ಮಹೇಂದರ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕನಾಗಿ “ಕಂಠಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಪ್ರಸ್ತುತ ದಕ್ಷಿಣ ಭಾರತದ ಬಹು ಬೇಡಿಕೆಯ ನಟರಾಗಿರುವ ಅಪ್ಪಟ ಕನ್ನಡಿಗ ಕಿಶೋರ್‌ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ

ಕೆ.ಜಿ.ಎಫ್‌, ಸಲಾರ್‌ ಖ್ಯಾತಿಯ ರವಿ ಬಸ್ರೂರ್‌ ಸಂಗೀತ ನೀಡಲಿದ್ದಾರೆ. ಛಾಯಾಗ್ರಾಹಕರಾಗಿ ಹೆಬ್ಬುಲಿ, ಕ್ರಾಂತಿ ಸಿನಿಮಾಗಳ ಖ್ಯಾತಿಯ ಕರುಣಾಕರ್‌ ಕೆಲಸ ಮಾಡುತ್ತಿದ್ದು, ಕನ್ನಡದ ಹೆಸರಾಂತ ಸಂಕಲನಕಾರ ದೀಪು ಎಸ್. ಕುಮಾರ್‌ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕನ್ನಡದ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಈ ಚಿತ್ರ ಅದ್ಧೂರಿಯಾಗಿ ಮೂಡಿ ಬರಲಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ದೊಡ್ಡ ನಿರ್ಮಾಣ ಸಂಸ್ಥೆಗಳ ನಿರ್ಮಾಪಕರುಗಳ, ದೊಡ್ಡ ದೊಡ್ಡ ಸ್ಟಾರ್‌ಗಳ ಸಿನಿಮಾಗಳು ಮಾತ್ರ ಮಾರುಕಟ್ಟೆಯಲ್ಲಿ ಯಶಸ್ಸುಗಳಿಸುತ್ತಿದೆ. ಈ ಸಮಯದಲ್ಲಿ ಸದಭಿರುಚಿಯ ಚಿತ್ರಗಳನ್ನು ಸೀಮಿತ ಬಜೆಟ್‌ನಲ್ಲಿ ನಿರ್ಮಾಣ ಮಾಡಿ ಮಾರುಕಟ್ಟೆಯಲ್ಲಿ ಜನರಿಗೆ ತಲುಪಿಸಿ ಅದನ್ನು ಯಶಸ್ವಿಗೊಳಿಸಿದ ನಿರ್ಮಾಪಕ ಅನುಪ್‌ ಹನುಮಂತೇಗೌಡ ಈಗ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಬಿಗ್ ಬಾಸ್

Bigg Boss Kannada: ಈ ಬಾರಿ ʻಬಿಗ್‌ ಬಾಸ್‌ ಕನ್ನಡʼ ಹೋಸ್ಟ್‌ ಮಾಡ್ತಿದ್ದಾರಂತೆ ರಿಷಬ್‌ ಶೆಟ್ಟಿ; ಕಿಚ್ಚ ಸುದೀಪ್ ಔಟ್‌?

Bigg Boss Kannada: ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

VISTARANEWS.COM


on

Bigg Boss Kannada host by rishab shetty sudeep Out
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಮುಕ್ತಾಯವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗುತ್ತಿದೆ. ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕಿಚ್ಚ ಸುದೀಪ್‌ ಅವರು ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ. ರಮೇಶ್ ಅರವಿಂದ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಬ್ಬರಲ್ಲಿ ಒಬ್ಬರು ಹೋಸ್ಟ್‌ ಮಾಡಲಿದ್ದಾರೆ ಎನ್ನಲಾಗುತ್ತಿದೆ, ರಮೇಶ್‌ ಅರವಿಂದ ಈಗಾಗಲೇ ಮಹಾನಟಿ ಶೋ ಮೂಲಕ ವೀಕ್ಷಕರನ್ನು ತಲುಪಿದಿದ್ದಾರೆ. ಈಗಾಗಲೆ ಕೋಟ್ಯಾಧಿಪತಿ ಮತ್ತು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರದಲ್ಲಿ ರಮೇಶ್ ಅರವಿಂದ್‌ ಹೋಸ್ಟ್‌ ಮಾಡಿದ್ದಾರೆ.ಇನ್ನು ರಿಷಬ್‌ ಕೂಡ ಮಾಡಬಹುದು ಎನ್ನಲಾಗಿದೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

Continue Reading

ಕಿರುತೆರೆ

Bhoomige Banda Bhagavantha: ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಮುಕ್ತಾಯ: ಅಂಕಿತಾ ಜಯರಾಮ್‌  ಭಾವುಕ ಪೋಸ್ಟ್‌!

VISTARANEWS.COM


on

Bhoomige Banda Bhagavantha came to end
Koo

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದ್ದ ‘ಭೂಮಿಗೆ ಬಂದ ಭಗವಂತ’ಒಟ್ಟು 354 ಸಂಚಿಕೆಗಳನ್ನ ಪೂರೈಸಿದೆ. 2023ರ ಮಾರ್ಚ್ 20 ರಂದು ‘ಭೂಮಿಗೆ ಬಂದ ಭಗವಂತ’ (Bhoomige Banda Bhagavantha) ಸೀರಿಯಲ್ ಆರಂಭಗೊಂಡಿತ್ತು. ಕಳೆದ 2024ರ ಆಗಸ್ಟ್ 4 ರಂದು ‘ಭೂಮಿಗೆ ಬಂದ ಭಗವಂತ’ ಅಂತ್ಯವಾಗಿದೆ. ಮಧ್ಯಮ ವರ್ಗದ ವ್ಯಕ್ತಿಯನ್ನು ಶಿವನೇ ಮಾನವ ರೂಪದಲ್ಲಿ ಭೇಟಿಯಾಗಿ ಮಾರ್ಗದರ್ಶನ ಮಾಡುವ ಸಂದೇಶ ಉಳ್ಳ ಧಾರಾವಾಹಿ ಆಗಿತ್ತು. ಇದೀಗ ನಟಿ ಅಂಕಿತಾ ಜಯರಾಮ್‌ ಈ ಬಗ್ಗೆ ಸುದೀರ್ಘವಾಗಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ʻʻಎಲ್ಲರಿಗೂ ನಮಸ್ಕಾರಗಳು ʻಭೂಮಿಗೆಬಂದ ಭಗವಂತʼ ಧಾರವಾಹಿಯ ನಮ್ಮೆಲ್ಲರ ಪಯಣ ಇಂದು ಆಗಸ್ಟ್ 3 ಮತ್ತು ನಾಳೆ 4 ನೇ ತಾರೀಖಿನ ಸಂಚಿಕೆಯೊಂದಿಗೆ ಕೊನೆಗೊಳ್ಳುತ್ತಿದೆ. ಎಂದು ತಿಳಿಸಲು ಮನಸ್ಸು ಬಹಳ ಭಾರವಾಗಿದೆ. ಮಧ್ಯಮ ವರ್ಗದ ಕುಟುಂಬದಲ್ಲಿ ಪ್ರತಿ ನಿತ್ಯ ನಡೆಯುವ ಘಟನೆಗಳನ್ನು ಆಧರಿಸಿ ತುಂಬಾ ಅಚ್ಚುಕಟ್ಟಾದ ನಿರೂಪಣೆಯೊಂದಿಗೆ ಭಗವಂತನ ಸಂದೇಶದೊಂದಿಗೆ ಎಲ್ಲರ ಮನ ಮನೆಗಳ ಮೆಚ್ಚಿನ ಧಾರಾವಾಹಿಯಾಗಿ ತನ್ನದೇ ಆದ ಪ್ರೇಕ್ಷಕ ವರ್ಗವನ್ನು ಪಡೆದ ಏಕೈಕ ಧಾರಾವಾಹಿ ಯೆಂದು ಹೆಸರು ಪಡೆದದ್ದು ಹೆಮ್ಮೆಯ ವಿಷಯವೆಂದು ಎಲ್ಲರಿಗೂ ತಿಳಿದಿದೆʼ. ಪ್ರಣೀತ ಎಂಬ ಪಾತ್ರಕ್ಕೆ ಹತ್ತಾರು ಮಕ್ಕಳ ಆಡಿಷನ್ ನಂತರದಲ್ಲೂ ಅಂತಿಮವಾಗಿ Ankitha ಈ ಪಾತ್ರಕ್ಕೆ ಸೂಕ್ತ ಎಂದು ಆಯ್ಕೆ ಮಾಡಿದ ನಿದೇ೯ಶಕರಾದ ಆರೂರು ಜಗದೀಶ್ ಸರ್ ರವರಿಗೂ ತುಂಬು ಹೃದಯದ ಧನ್ಯವಾದಗಳುʼʼ.

ʻʻಕುಮಾರ್_ಕೆರಗೋಡು ಸರ್ ಚಿತ್ರೀಕರಣದ ಪ್ರತಿಯೊಂದು ಹಂತದಲ್ಲೂ ನೀವು ನೀಡಿದ ಸಹಕಾರ ಶ್ಲಾಘನೀಯಶಾಲೆಗೆ ತೊಂದರೆಯಾಗದಂತೆ ಹೆಚ್ಚಿಗೆ ರಜಾ ದಿನಗಳಲ್ಲಿ ಚಿತ್ರೀಕರಣದ ಸಮಯವನ್ನು ಹೊಂದಿಸಿಕೊಂಡು ತುಂಬಾ ಅನಿವಾರ್ಯತೆಯ ಸಮಯದಲ್ಲಿ ಮಧ್ಯಾಹ್ನದ ನಂತರ ಡೇಟ್ಸ್ ಹೊಂದಾಣಿಕೆ ಮಾಡಿಕೊಂಡು ನೀವು ನೀಡಿದ ಸಹಕಾರಕ್ಕೆ ತುಂಬು ಹೃದಯದ ಧನ್ಯವಾದಗಳು. ಅಣ್ಣಾವ್ರು ಮಾತಲ್ಲಿ ಹೇಳುವುದಾದರೆ ನಿಮಾ೯ಪಕರು ಕಲಾವಿದರ ಅನ್ನದಾತರು. ತಾಂಡವ ಪ್ರೊಡಕ್ಷನ್ ನ ನಿರ್ಮಾತೃ #ತಾಂಡವರಾಮ್ ರವರು ಈ ಧಾರಾವಾಹಿ ಮುಖಾಂತರ ಹತ್ತಾರು ಕಲಾವಿದರಿಗೆ ತಂತ್ರಜ್ಞರಿಗೆ ನಿಮ್ಮ ನಿರ್ಮಾಣದ ಈ ಧಾರಾವಾಹಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಅನ್ನದಾತರಿಗೆ ತುಂಬು ಹೃದಯದ ಧನ್ಯವಾದಗಳು🙏 ಧಾರಾವಾಹಿಯ ನಾಯಕರಾದ ಪ್ರೀತಿಯ ನವೀನ್ಕೃಷ್ಣ ಸರ್ ಸೆಟ್ ನಲ್ಲಿ
ಪ್ರತಿಯೊಂದು ಸಮಯದಲ್ಲೂ ನೀವು ತೋರಿದ ಪ್ರೀತಿ ಕಾಳಜಿ, ಹಾಗೂ ಅಂಕಿತಳ ಕೀಟಲೆಗಳನ್ನೆಲ್ಲ ಸಹಿಸಿಕೊಂಡ ನಿಮ್ಮ ಸಂಯಮಕ್ಕೆ ಶರಣು ಬಹುಶಃ ನಿಮ್ಮ ಮಕ್ಕಳಿಗಿಂತಲೂ ಹೆಚ್ಚಿನ ಸಲುಗೆಯಿಂದ ಮಾತನಾಡುತ್ತಿದ್ದ ಅಂಕಿತಗೆ ನೀವು ನೀಡಿದ ಪ್ರೀತಿಯೇ ಮುಖ್ಯ ಕಾರಣ. (ಕಡೆಯದಾಗಿ ನನಗೆ ಹೆಣ್ಣು ಮಗಳಿಲ್ಲ ವೆಂಬ ಕೊರಗನ್ನು ನಿಮ್ಮ ಮಗಳು ಅಂಕಿತ ನೀಗಿಸಿದ್ದಾಳೆಂಬ ನಿಮ್ಮ ಮಾತು ಕೇಳಿ ಹೃದಯ ತುಂಬಿ ಬಂತು. ನಿಮ್ಮ ಈ ಪ್ರೀತಿಗೆ ಸದಾ ಆಭಾʼʼ ರಿ.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ʻʻನಮ್ಮ ಕಾರ್ತಿಕ್ ಸಮಾಗ ರವರು ಚಿತ್ರೀಕರಣದಲ್ಲಿ ಅಪರೂಪಕ್ಕೆ ಒಮ್ಮೆ ಭೇಟಿಯಾದ ಸಮಯದಲ್ಲೆಲ್ಲ ಪ್ರೀತಿಯಿಂದ ಕಂದಮ್ಮ ಅಂತ ಕರೆಯುತ್ತಾ ಬಾಯಿ ಸಿಹಿ ಮಾಡ್ಕೋ ಅಂತ ಕ್ಯಾಟ್ಬರಿ ಚಾಕಲೇಟ್ ನೀಡಿ ನೀವು ತೋರುತ್ತಿದ್ದ ನಿಷ್ಕಲ್ಮವಾದ ಮಗುವಿನ ಪ್ರೀತಿಗೆ ಹಾಗೂ ಭಗವಂತನ ಪಾತ್ರಕ್ಕೆ ನೀವು ನಿಮ್ಮದೇ ಆದ ಕೆಲವು ನಿಯಮ ನಿಷ್ಠೆಗಳನ್ನು ಅಳವಡಿಸಿಕೊಂಡು ಶಿವನ ಪಾತ್ರಕ್ಕೆ ಮತ್ತಷ್ಟು ಮೆರಗು ನೀಡಿದ್ದಿರಿ. ಅಭಿಮಾನಿಗಳ ಪಾಲಿಗೆ ನೀವು ಸಾಕ್ಷಾತ್ ಪರಮೇಶ್ವರ. ನಿಮ್ಮ ಜೊತೆಯಲ್ಲಿ ಅಭಿನಯಿಸುವ ಅವಕಾಶ ನೀಡಿದ ಶಿವನ ಪಾದಕ್ಕೆ ನಮೋ ನಮಃ.
ಕೃತಿಕಾ ತಮಗೆ ನೀಡಿದ ಪಾತ್ರದಲ್ಲಿ ಅತ್ಯಂತ ಸಹಜಾಭಿನಯವಾಗಿ ನಟಿಸಿ ಎಲ್ಲರ ಮನಗೆದ್ದು ,ಅಂಕಿತಳಿಗೆ ಗಿರಿಜಮ್ಮ ಳಾಗಿ ತಾಯಿಯ ಪ್ರೀತಿಯನ್ನು ತೋರಿ, ಧಾರಾವಾಹಿಯ ಪ್ರೇಕ್ಷಕರ ವರ್ಗ
(ಅಮ್ಮ ಮಗಳ ರೀಲ್ಸ್ ನೋಡೋದೇ ತುಂಬಾ ಖುಷಿಯಾಗುತ್ತೆ ಅಂತ ಹೇಳಿದಾಗ ಆದ ಸಂತೋಷ ಅಷ್ಟಿಷ್ಟಲ್ಲ. ಕೆಲವೊಮ್ಮೆ ಸರಿ ತಪ್ಪುಗಳ ಬಗ್ಗೆ ತಿಳಿ ಹೇಳುತ್ತಾ ‘ ಸದಾ ಕಾಲ ಪ್ರೀತಿ ತೋರಿ. ಕೆಲವು ಸಲಹೆ ಸೂಚನೆಗಳನ್ನು ನೀಡುತ್ತಿದ್ದನಿಮಗೆ ತುಂಬು ಹೃದಯದ ಧನ್ಯವಾದಗಳು ಸಿಸ್ಟರ್. ಧಾರವಾಹಿಯ ಹಿರಿಯ ಕಲಾವಿದರಾದ #ಉಮೇಶ್ ಸರ್ ರವರು ಅಂಕಿತಗೆ #ತಾತನಿಲ್ಲ ವೆಂಬ ಕೊರಗನ್ನು ನೀಗಿಸಿದ್ದ ನಿಮಗೆ ಶರಣು🙏🙏🙏
ಚಿಕ್ಕಮ್ಮ ಚಿಕ್ಕಪ್ಪ ಪಾತ್ರದಾರಿಗಳಾದ #ಅಶ್ವಿನಿಬಬ್ಲೂ ಹಾಗೂ #ಶೋಧನ್ ಸರ್ ರವರಿಗೂ ತುಂಬು ಹೃದಯದ ಧನ್ಯವಾದಗಳು.
ʻʻಧಾರಾವಾಹಿಯ ಪುಟ್ಟ ತಮ್ಮನ ಪಾತ್ರಧಾರಿ ಅನುರಾಗ್ (ಸ್ಕಂದ) ಹೊರಗಡೆ ಎಲ್ಲಾ ಅಂಕಿತಳಿಗೆ ನಿಜವಾದ ತಮ್ಮನೆಂದೇ ಭಾವಿಸುವಷ್ಟು ಅಂದರೆ (ಮಹಾಥ೯ ಜೊತೆಗಿದ್ದರೂ ಸಹ) ನಿನ್ನ ತಮ್ಮ ಎಲ್ಲಿ ಎಂದು ಎಲ್ಲರೂ ಕೇಳುವಷ್ಟರ ಮಟ್ಟಿಗೆ ನಿಮ್ಮ ಪ್ರೀತಿಯ ಬಾಂಧವ್ಯ ಮೂಡಿ ಬಂದಿದೆ. ನಿನ್ನ ಮುಂದಿನ ಭವಿಷ್ಯ ಉಜ್ಬಲವಾಗಿರಲಿ.
ಪರದೆಯ ಮೇಲೆ ಚಂದವಾಗಿ ಕಾಣುವಂತೆ ಮಾಡಿದ ಮಾಡಿದ ನಾಗೇಂದ್ರ ಸರ್ ಹಾಗೂ ಸಂಧ್ಯಾ ದಂಪತಿಗಳಿಗೂ ತುಂಬು ಹೃದಯದ ಧನ್ಯವಾದಗಳು. ಅಸೋಸಿಯೇಟ್ directors ಸೂರ್ಯ ರಾಕೇಶ್ ಶ್ರವಣ ಪ್ರತಿಯೊಬ್ಬರು ಪ್ರೀತಿಯಿಂದ ತಂಗ್ಯಮ್ಮ ಎಂದು ಕರೆಯುತ್ತಾ scene explain ಮಾಡುತ್ತಿದ್ದ ರೀತಿ ನಿಮ್ಮ ಆತ್ಮೀಯತೆಗೆ ಅಪರೂಪದ ತಂಡಕ್ಕೆ. ಪ್ರತಿಯೊಂದು ಕುಂದು ಕೊರತೆಗಳನ್ನು ನಿಭಾಯಿಸಿದ ಮ್ಯಾನೇಜರ್ ಮಂಜುನಾಥ್ ರವರಿಗೂ
ನಮ್ಮ ಚಾಲಕ ತಂಡದ. ನಾಗರಾಜ್ ಸರ್ ನೀವು ತೋರಿದ ಪ್ರೀತಿಗೆ. ಪ್ರೊಡಕ್ಷನ್ ಡಿಪಾಟ್ ಮೆಂಟ್ ನ ಪ್ರವೀಣ್. ಮತ್ತು ಶಂಕರ್ ಹಾಗೂ ಮಮತ ರವರು ಅಚ್ಚುಕಟ್ಟಾಗಿ ಊಟ ಉಪಚಾರ ನೋಡಿಕೊಂಡ ನಿಮಗೆ ಧನ್ಯವಾದಗಳು
ಕಡೆಯ ದಿನ ಒಟ್ಟಾಗಿ ನಿಮ್ಮನ್ನೆಲ್ಲನ್ನೆಲ್ಲ ಬಿಟ್ಟು ಬರುವಾಗ ಮನಸ್ಸು ನಮ್ಮವರನ್ನೆಲ್ಲ ಬಿಟ್ಟು ದೂರ ಹೋಗುತ್ತಿರುವ ಭಾವನೆಗಳಿಂದ ಭಾರವಾಗಿತ್ತು.
ಜೀಕನ್ನಡ ಆಯೋಜಿಸುತ್ತಿದ್ದ ಇವೆಂಟ್‌ ಗಳಲ್ಲಿ ಸಮಯಕ್ಕೆ ಸರಿಯಾಗಿ ಕರೆಸಿಕೊಂಡು, ಸೂಕ್ತವಾದ ವ್ಯವಸ್ಥೆಯೊಂದಿಗೆ ಎಲ್ಲೂ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದ ಕ್ಲಸ್ಟರ್ ಹೆಡ್ ಆದಂತಹ ಪೃಥ್ವಿ ಸರ್ ರವರ ಕಾಯ೯ ವೈಖರಿ ನಿಜಕ್ಕೂ ಶ್ಲಾಘನೀಯ. ಕಿರು ಪರದೆಯ ಮೇಲೆ ಅತ್ಯಂತ ಸುಂದರವಾಗಿ ಫ್ರೆಂಮ್ ಟು ಫ್ರೆಂ ಮ್ ಕಾಣುವಂತೆ ಮಾಡಿದ ನಮ್ಮ ಕ್ಯಾಮರಾಮ್ಯಾನ್ ಕಾಂತರಾಜು ಹಾಗೂ ರಘು ರವರಿಗೂ ತುಂಬು ಹೃದಯದ ಧನ್ಯವಾದಗಳು.
ಅಪರೂಪಕ್ಕೆ ಭೇಟಿಯಾಗುತ್ತಿದ್ದ.


ಮೂಗೂರು ಸುಂದರ್ ಸರ್ . ಕಾತಿ೯ಕ್ ಜಯರಾಂ . ಪವನ್ ಸರ್ . ದೇಶಪಾಂಡೆ . ದಾನಪ್ಪ. ಚಕ್ರವತಿ೯, ಮಹೇಶ್ ಆಚಾರ್ಯ. ಸುಮತಿ ಹಾಗೂ ಅತಿಥಿ ಪಾತ್ರಧಾರಿಗಳಾಗಿ ಬಂದ ಎಲ್ಲ ಕಲಾವಿದರಿಗೂ ಪ್ರೀತಿಸಿ, ಸಹಕರಿಸಿ, ಪ್ರೋತ್ಸಾಹಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ʼʼಎಂದು ಬರೆದುಕೊಂಡಿದ್ದಾರೆ.

Continue Reading
Advertisement
World Breastfeeding Week 2024
ಆರೋಗ್ಯ13 mins ago

World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

Actor Darshan
ಕ್ರೈಂ15 mins ago

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

IND vs SL 3rd ODI
ಕ್ರೀಡೆ19 mins ago

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

Paris Olympics
ಕ್ರೀಡೆ47 mins ago

Paris Olympics: ನಾಳೆ ನೀರಜ್​ ಚೋಪ್ರಾ ಫೈನಲ್​ ಸ್ಪರ್ಧೆ; ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ

Electric Vehicles
ಆಟೋಮೊಬೈಲ್1 hour ago

Electric Vehicles: ಎಲೆಕ್ಟ್ರಿಕ್‌ ಕಾರು ಖರೀದಿಸಿದವರಿಗೆ ಪೆಟ್ರೋಲ್, ಡೀಸೆಲ್‌ ಕಾರಿಗೆ ಮರಳುವ ಇಚ್ಛೆ; ಕಾರಣ ಏನು?

Wayanad Landslide
ಕರ್ನಾಟಕ1 hour ago

Wayanad Landslide: ಭೂಕುಸಿತ ಸಂತ್ರಸ್ತರಿಗೆ ನೆರವು; ಯುವ ಕಾಂಗ್ರೆಸ್‌ ಮುಖಂಡ ಧ್ರುವ ಜತ್ತಿ ಭೇಟಿ

Blazer Saree Fashion
ಫ್ಯಾಷನ್1 hour ago

Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

Waqf Act
ದೇಶ2 hours ago

Waqf Act: ನಾಳೆ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡನೆ; ಪರಮಾಧಿಕಾರ ರದ್ದು ಸೇರಿ ಏನೆಲ್ಲ ಬದಲು?

Headphone Side Effect
ಆರೋಗ್ಯ2 hours ago

Headphone Side Effect: ಹೆಡ್ ಫೋನ್ ಬಳಕೆಯಿಂದ ಮೆದುಳು, ಹೃದಯದ ಮೇಲೆ ಭೀಕರ ಪರಿಣಾಮ!

Utthana Essay Competition 2024
ಕರ್ನಾಟಕ2 hours ago

Utthana Essay Competition 2024: ಉತ್ಥಾನ ಪ್ರಬಂಧ ಸ್ಪರ್ಧೆಗೆ ಬರಹ ಕಳುಹಿಸಿ; 10,000 ರೂ. ಬಹುಮಾನ ಪಡೆಯಿರಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌