Harshika Poonacha: ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮಿರ ಮಿರ ಮಿಂಚಿದ ಹರ್ಷಿಕಾ ಪೂಣಚ್ಚ; ಹೇಗಿತ್ತು ಫೋಟೊಶೂಟ್ - Vistara News

ಸಿನಿಮಾ

Harshika Poonacha: ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮಿರ ಮಿರ ಮಿಂಚಿದ ಹರ್ಷಿಕಾ ಪೂಣಚ್ಚ; ಹೇಗಿತ್ತು ಫೋಟೊಶೂಟ್

Harshika Poonacha: ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಹರ್ಷಿಕಾ ಪೂಣಚ್ಚ, ಇದೀಗ 7 ತಿಂಗಳು ತುಂಬಿದ ಹಿನ್ನೆಲೆ ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

VISTARANEWS.COM


on

Harshika Poonachas photoshoot with Ravi Varmas painting theme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಹರ್ಷಿಕಾ ಪೂಣಚ್ಚ, ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ಸುಂದರಿ ಹರ್ಷಿಕಾ ತಿಳಿ ಗುಲಾಬಿ ಬಣ್ಣದ ಸೀರೆಗೆ ಹಸಿರು ಬಳೇ ತೊಟ್ಟು ಕ್ಯಾಮೆರಾಗೆ ಫೋಸ್‌ ಕೊಟ್ಟಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದರು. 2023ರ ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ (Bhuvann Ponnannaa) ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ಕೊಟ್ಟಿದ್ದರು.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಹಾರೈಸಿದ್ದರು.

ತಾವು ಪೋಷಕರಾಗುತ್ತಿರುವ ವಿಚಾರವನ್ನು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

ಕೊಡವ ಶೈಲಿಯಲ್ಲಿ ಗಮನ ಸೆಳೆದಿದ್ದ ಫೋಟೊ ಶೂಟ್

ಹರ್ಷಿಕಾ ಮತ್ತು ಭುವನ್ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದರು. ತಮ್ಮ ಚೊಚ್ಚಲ ಮಗುವಿನ ಆಗಮನದ ಸಿಹಿ ಸುದ್ದಿ ತಿಳಿಸಲು ಪುರಾತನ ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಳಸಿಕೊಂಡು, ಸಂಪ್ರದಾಯವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದರು.

ಅದರ ಜತೆಗೆ, ʼʼಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ. ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲೂ ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹರ್ಷಿಕಾ ಮತ್ತು ಭುವನ್‌ ಬರೆದುಕೊಂಡಿದ್ದರು.

ಹೇಗಿತ್ತು ಸಿನಿ ಪಯಣ

2008ರಲ್ಲಿ ʼಪಿಯುಸಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹರ್ಷಿಕಾ ಬಳಿಕ ಕೊಡವ, ಕೊಂಕಣಿ, ತೆಲುಗು, ಮಲಯಾಳಂ, ಬೋಜಪುರಿ, ತಮಿಳು ಮುಂತಾದ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ. 2010ರಲ್ಲಿ ತೆರೆಕಂಡದ ಕನ್ನಡದ ʼತಮಸ್ಸುʼ ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಅವರು ಸದ್ಯ ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಇನ್ನು ಸ್ಯಾಂಡಲ್‌ವುಡ್‌ ನಟ ಭುವನ್‌ ಪೊನ್ನಣ್ಣ 2010ರಲ್ಲಿ ತೆರೆಕಂಡ, ಸುದೀಪ್‌ ಅಭಿನಯದ ʼಜಸ್ಟ್‌ ಮಾತ್‌ ಮಾತಲ್ಲಿʼ ಚಿತ್ರದ ಮೂಲಕ ಬಣ್ಣ ಲೋಕ ಪ್ರವೇಶಿಸಿದ್ದರು. ಗಣೇಶ್‌ ಜತೆಗೆ ಕೂಲ್‌ ಚಿತ್ರದಲ್ಲಿಯೂ ನಟಿಸಿರುವ ಅವರು 2019ರಲ್ಲಿ ತೆರೆಕಂಡ ರಾಂಧವ ಸಿನಿಮಾದ ಮೂಲಕ ಜನಪ್ರಿಯರಾಗಿದ್ದಾರೆ. ಕೊಡಗು ಮೂಲದ ಭುವನ್‌ ಮತ್ತು ಹರ್ಷಿಕಾ ಈ ಹಿಂದೆ ನೆರೆ ಪೀಡಿತರಿಗೆ ನೆರವಾಗುವ ಮೂಲಕ ಅನೇಕ ಮಂದಿಯ ಕಷ್ಟಗಳಿಗೆ ಸಹಾಯ ಹಸ್ತ ಚಾಚಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Celina Jaitley: ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್‌ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ ಎಂದಿದ್ದಾರೆ.

VISTARANEWS.COM


on

Celina Jaitley
Koo

ಮುಂಬಯಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ (Physical Abuse) ಪ್ರಕರಣ, ಅನೇಕ ಬಾಲಿವುಡ್‌ ಸೆಲೆಬ್ರಿಟಿಗಳು (Bollywood celebrity) ಕೂಡ ತಮಗಾದ ಲೈಂಗಿಕ ಕಿರುಕುಳ, ಯಾತನೆ, ನೋವುಗಳ ಬಗ್ಗೆ ಮಾತನಾಡುವಂತೆ ಮಾಡಿದೆ. ಅದೇ ಸರಣಿಯಲ್ಲಿ ನಟಿ ಸೆಲಿನಾ ಜೇಟ್ಲಿ (Celina Jaitley) ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಇದೀಗ ಬಿಚ್ಚಿಟ್ಟಿದ್ದಾರೆ.

ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್‌ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ. ಈ ಫೋಟೋ ನಾನು ಆರನೇ ತರಗತಿಯಲ್ಲಿದ್ದಾಗಿನದು. ಹತ್ತಿರದ ಕಾಲೇಜಿನ ಹುಡುಗನೊಬ್ಬ ನಾನು ಶಾಲೆಯಿಂದ ಹೊರಬರುವುದನ್ನು ಕಾಯುತ್ತಿದ್ದ. ಅವನು ಪ್ರತಿದಿನ ನನ್ನ ಶಾಲೆಯ ರಿಕ್ಷಾವನ್ನು ಹಿಂಬಾಲಿಸಿ ಮನೆಯವರೆಗೆ ಬರುತ್ತಿದ್ದ. ಕೆಲವು ದಿನಗಳ ನಂತರ, ನನ್ನ ಗಮನವನ್ನು ಸೆಳೆಯಲು, ಅವನು ರಸ್ತೆಯ ಮಧ್ಯದಲ್ಲಿ ನನ್ನ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದ. ಅಲ್ಲಿದ್ದವರು ಯಾರೂ ಆತನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ.

ಇದರ ಮಧ್ಯೆ ನನ್ನ ಟೀಚರ್‌ ನನ್ನ ಮೇಲೆಯೇ ಆರೋಪ ಮಾಡಿದ್ರು. ನಾನು ಬಿಗಿಯಾದ ಬಟ್ಟೆ ಧರಿಸುತ್ತೇನೆ, ಕೂದಲಿಗೆ ಎಣ್ಣೆ ಹಚ್ಚಿ, ಕೂದಲು ಕಟ್ಟೋದಿಲ್ಲ. ಹಾಗಾಗಿ ಹುಡುಗ ನನ್ನ ಹಿಂದೆ ಬಿದ್ದಿದ್ದಾನೆ ಎಂದು ಟೀಚರ್ಸ್‌ ನನಗೆ ಹೇಳುತ್ತಿದ್ದರು. ಶಿಕ್ಷಕರ ಈ ಮಾತಿನ ನಂತರ ನಾನು ತುಂಬಾ ದಿನ ನನ್ನನ್ನೇ ದೂಷಿಸಿಕೊಳ್ಳುತ್ತಿದ್ದೆ. ಒಂದು ದಿನ ಬೆಳಿಗ್ಗೆ ಶಾಲೆಗೆ ಹೋಗಲು ರಿಕ್ಷಾಕ್ಕೆ ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಖಾಸಗಿ ಅಂಗ ತೋರಿಸಿದ. ತೀವ್ರ ಮುಜುಗರವಾಯಿತು. ಆದರೆ ಟೀಚರ್‌ ಮಾತನ್ನು ನೆನೆದುಕೊಂಡು ಆಗ್ಲೂ ನಾನು ನನ್ನನ್ನು ದೂಷಿಸಿಕೊಂಡಿದ್ದೆ ಎಂದು ಸೆಲಿನಾ ಹೇಳಿದ್ದಾರೆ.

ನಾನು 11ನೇ ತರಗತಿಯಲ್ಲಿದ್ದಾಗ, ಹುಡುಗರು ನನ್ನ ಸ್ಕೂಟಿ ಬ್ರೇಕ್‌ ಕಟ್‌ ಮಾಡಿದ್ದರು. ಅವರು ಅಶ್ಲೀಲವಾಗಿ ನಿಂದಿಸಿದ್ದರು. ನೀನು ಜೀನ್ಸ್‌ ಧರಿಸಿ, ಮಾಡರ್ನ್‌ ಆಗಿ ಕಾಣುವ ಕಾರಣ ಯುವಕರು ನಿನ್ನನ್ನು ತಪ್ಪು ತಿಳಿದಿದ್ದಾರೆಂದು ಶಿಕ್ಷಕಿ ಆಗ್ಲೂ ಹೇಳಿದ್ದರಂತೆ. ಇದ್ರಿಂದ ನಾನು ತುಂಬಾ ನೋವು ತಿಂದಿದ್ದೆ ಎಂದು ಸೆಲಿನಾ ಸುದೀರ್ಘ ಪೋಸ್ಟ್‌ ಹಾಕಿದ್ದಾರೆ.

ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading

ಬೆಂಗಳೂರು

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ನಿರ್ದೇಶಕಿ ಸಂಜೋತ ಭಂಡಾರಿ ಅವರು ಕಥೆ ಬರೆದು ನಿರ್ದೇಶಿಸಿರುವ “ಲಂಗೋಟಿ ಮ್ಯಾನ್” ಚಿತ್ರದ (Kannada New Movie) ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ (Kannada New Movie) ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ನಾನು ಹತ್ತು ವರ್ಷಗಳ ಹಿಂದೆ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು‌. ಆ ಚಿತ್ರದ ಕಥೆ ಮಾಡುತ್ತಿದ್ದಾಗಲೂ ನನಗೆ ಇದೇ ಕಥೆ ತಲೆಗೆ ಬರುತ್ತಿತ್ತು. ಕೊನೆಗೆ “ಲಂಗೋಟಿ ಮ್ಯಾನ್” ಸಿನಿಮಾ ಸ್ವರೂಪ ಪಡೆದುಕೊಂಡಿತು.

ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ “ಲಂಗೋಟಿ” ನೇ. ಆಕಾಶ್ ರಾಂಬೊ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಗಿಲ್ಲಿ ನಟ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ‌. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ. ಚಿತ್ರ ಗೆಲುವ ವಿಶ್ವಾಸ ನನಗಂತೂ ಇದೆ‌. ಟೀಸರ್ ಬಿಡುಗಡೆ ಮಾಡಿಕೊಟ್ಟ ಶರಣ್ ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ ಎಂದರು‌.

ಈ ಸಮಾರಂಭಕ್ಕೆ ಬಂದು ನಿರ್ದೇಶಕರ ಮಾತು ಕೇಳಿದ ಮೇಲೆ ಅವರಿಗೆ ಚಿತ್ರದ ಮೇಲಿರುವ ಭರವಸೆ ಹಾಗೂ ತಾವೊಬ್ಬರೆ ಕ್ರೆಡಿಟ್ ತೆಗೆದುಕೊಳ್ಳದೆ, ಚಿತ್ರತಂಡದ ಪ್ರತಿಯೊಬ್ಬರನ್ನು ಪರಿಚಯಿಸಿದ ರೀತಿ ಕಂಡು ಸಂತೋಷವಾಯಿತು. ಈಗಂತೂ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನೇ ಜನ ಹೆಚ್ಚು ಇಷ್ಟಪಡುತ್ತಿದ್ದಾರೆ. ಆ ಸಾಲಿಗೆ “ಲಂಗೋಟಿ ಮ್ಯಾನ್” ಸಹ ಸೇರಲಿ ಎಂದು ನಟ ಶರಣ್ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೌತ್ ಡಿಸಿಸಿ ಪ್ರೆಸಿಡೆಂಟ್ ಓ. ಮಂಜುನಾಥ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿತ್ರದಲ್ಲಿ ನಟಿಸಿರುವ ಆಕಾಶ್ ರಾಂಬೊ, ಧೀರೇಂದ್ರ, ಸಂಹಿತ ವಿನ್ಯ ಮುಂತಾದ ಕಾಲವಿದರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

“ಲಂಗೋಟಿ ಮ್ಯಾನ್” ಚಿತ್ರದ ಟೀಸರ್ ‌ಹಾಗೂ ಪೋಸ್ಟರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟೀಸರ್ ನೋಡಿದಾಗ ಮನೋರಂಜನಾ ಪ್ರಧಾನ ಚಿತ್ರ ಎನಿಸಿದರೂ, ಚಿತ್ರದ ಮೂಲಕ‌‌ ಬೇರೊಂದು ವಿಷಯವನ್ನು ಹೇಳ ಹೊರಟಿರುವುದು ತಿಳಿಯುತ್ತದೆ.‌

Continue Reading

ಕರ್ನಾಟಕ

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶನದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರದ (Kannada New Movie) ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿವೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ದಾಸರ ಕೊಡುಗೆ ಅಪಾರ.‌ ಅಂತಹ ಮಹನೀಯರ ‌ಮಹಿಮೆಯನ್ನು ಚಿತ್ರಗಳ ಮೂಲಕ ಜನರಿಗೆ ಪರಿಚಯಿಸುವ ಕೆಲಸವನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾಡುತ್ತಾ ಬರುತ್ತಿದ್ದಾರೆ. ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಮಹಿಪತಿ ದಾಸರ ಕುರಿತಾದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರವನ್ನು (Kannada New Movie) ನಿರ್ದೇಶಿಸುವುದರ ಜತೆಗೆ ಮೊದಲ ಬಾರಿಗೆ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ.

ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿದ್ದು, ಚಿತ್ರದಲ್ಲಿ ಮಹಿಪತಿದಾಸರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಜಯಾನಂದ ಅವರು ಏಳು ಹಾಡುಗಳನ್ನು ಹಾಗೂ ಮಧುಸೂದನ್ ಹವಾಲ್ದಾರ್, ಅನಂತ ಕುಲಕರ್ಣಿ, ರಾಯಚೂರು ಶೇಷಗಿರಿದಾಸ್ ಹಾಗೂ ವಿ.ವಿ. ಪ್ರಸನ್ನ ಅವರು ಒಂದೊಂದು ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಇತ್ತೀಚೆಗೆ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಾಧವತೀರ್ಥ (ತಂಬಿಹಳ್ಳಿ) ಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾಸಾಗರ ಮಾಧವತೀರ್ಥರು ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ, ಹುಸೇನ್ ಸಾಬ್ ದಾಸ್, ಸುಭಾಷ್ ಕಾಖಂಡಕಿ, ಮುರಳಿ, ವಿಷ್ಣುತೀರ್ಥ ಜೋಶಿ, ರಾಘವೇಂದ್ರ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಕನ್ನಡ ಹರಿದಾಸ ಸಾಹಿತ್ಯಕ್ಕೆ ಮಹಿಪತಿದಾಸರ ಕೊಡುಗೆ ಅಪಾರ.‌ ಆದರೆ ಅವರಿಗೆ ಹೆಚ್ಚು ‌ಪ್ರಚಾರ ಸಿಕ್ಕಿಲ್ಲ. ಸಿನಿಮಾ‌ ಎಲ್ಲರನ್ನು ಬಹುಬೇಗ ತಲುಪುವ ಮಾಧ್ಯಮ.‌ ಇದರ ಮೂಲಕ ಮಧುಸೂದನ್ ಹವಾಲ್ದಾರ್ ಅವರು ಕನ್ನಡದ ಹರಿದಾಸರನ್ನು ಜನರಿಗೆ ಪರಿಚಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ಹರಿದಾಸರ ಅನುಗ್ರಹವಿರಲಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಶ್ರೀ ವಿದ್ಯಾಸಾಗರ ಮಾಧವತೀರ್ಥರು ಆಶೀರ್ವದಿಸಿದರು.

“ಶ್ರೀ ಜಗನ್ನಾಥದಾಸರು” ಚಿತ್ರದಿಂದ ಶ್ರೇಷ್ಠ ಹರಿದಾಸರ ಚಿತ್ರಗಳನ್ನು ನಿರ್ದೇಶಿಸುತ್ತಾ ಬಂದಿದ್ದೇನೆ. ಪ್ರಸ್ತುತ “ಕಾಖಂಡಕಿ ಶ್ರೀಮಹಿಪತಿದಾಸರು” ಚಿತ್ರವನ್ನು ‌ನಿರ್ದೇಶಿಸುವುದರೊಂದಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದೇನೆ. ರಾಮಾಂಬುಜ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಐಟಿ ಉದ್ಯೋಗಿಯಾಗಿದ್ದ ನಾನು ದಾಸರ ಅನುಗ್ರಹದಿಂದ ಇಂದು ಮಹಿಪತಿದಾಸರ ಪಾತ್ರ ಮಾಡಿದ್ದೇನೆ. ನಟನೆ ಜತಗೆ ಗಾಯನವನ್ನೂ ಮಾಡಲು ಅವಕಾಶ ನೀಡಿದ ಮಧುಸೂದನ್ ಹವಾಲ್ದಾರ್ ಅವರಿಗೆ ಧನ್ಯವಾದ ಎಂದರು ನಟ ವಿಜಯಾನಂದ್.

Continue Reading

ಸಿನಿಮಾ

Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

ಬಾಲಿವುಡ್ ನಟಿ ಜಾನ್ವಿ ಕಪೂರ್ ಭಾರತದಲ್ಲಿ ಲಭ್ಯವಿರುವ ಎಸ್ ಯುವಿ ಮಾದರಿಯ ಅತ್ಯಂತ ದುಬಾರಿ ಬೆಲೆಯ ಕಾರನ್ನು ಖರೀದಿ ಮಾಡಿದ್ದಾರೆ. ಇದರ ವಿಡಿಯೋ (Viral Video) ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಾರಿ ವೈರಲ್ ಆಗಿದೆ. ಅಂದಹಾಗೆ ಈ ಕಾರು ಯಾವುದು, ಇದರ ಬೆಲೆ ಎಷ್ಟು ಗೊತ್ತೇ? ಇಲ್ಲಿದೆ ಈ ಕುರಿತ ವಿವರ.

VISTARANEWS.COM


on

By

Viral Video
Koo

ಬ್ಯಾಕ್ ಟು ಬ್ಯಾಕ್ ಚಿತ್ರದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಈಗ ದಕ್ಷಿಣ ಸಿನಿಮಾರಂಗಕ್ಕೂ (south film) ಕಾಲಿಟ್ಟಿದ್ದಾರೆ. ಇತ್ತೀಚೆಗಷ್ಟೇ ಇವರ ಮತ್ತು ಜೂನಿಯರ್ ಎನ್‌ಟಿಆರ್ (jr NTR) ಅಭಿನಯದ ʼದೇವರʼ (devara) ಚಿತ್ರದ ಹಾಡು ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ನಟಿ ಜಾನ್ವಿ ಕಪೂರ್ ದುಬಾರಿ ಬೆಲೆಯ ಕಾರೊಂದನ್ನು ಖರೀದಿ ಮಾಡಿರುವುದಾಗಿ ಪಾಪರಾಜಿಗಳು ವಿಡಿಯೋವೊಂದನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಮತ್ತು ಉಲಾಜ್ ಚಿತ್ರದ ಬಳಿಕ ದೇವರ ಚಿತ್ರದಲ್ಲಿ ಬ್ಯುಸಿಯಾಗಿರುವ ನಟಿ ಜಾನ್ವಿ ಸೊಗಸಾದ ಹೊಸ ಟೊಯೋಟಾ ಲೆಕ್ಸಸ್‌ ಕಾರನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.


ಕಾರಿನ ಬೆಲೆ ಎಷ್ಟು?

ಜಾನ್ವಿ ಕಪೂರ್ ಅವರ ಹೊಸ ಕಾರು ಮುಂಬಯಿನ ಬೀದಿಗಳಲ್ಲಿ ಸಂಚರಿಸುತ್ತಿದೆ. ಆಗಸ್ಟ್ 18ರಂದು ಇದು ಪಾಪರಾಜಿಗಳ ಕಣ್ಣಿಗೆ ಬಿದ್ದಿದೆ. ಪಾಪರಾಜಿ ಹಂಚಿಕೊಂಡ ವಿಡಿಯೋವು ಜಾನ್ವಿಯ ಹೊಸ ಟೊಯೋಟಾ ಲೆಕ್ಸಸ್ ಅನ್ನು ಪ್ರದರ್ಶಿಸಿದೆ. ಕಪ್ಪು ಬಣ್ಣದ ಹೊಳೆಯುವ ಈ ಕಾರು ಎಲ್ಲರ ಕಣ್ಣುಗಳನ್ನು ಸೆಳೆಯಿತು. ಎಸ್‌ಯುವಿನಲ್ಲಿ ಭಾರತದಲ್ಲಿ ಲಭ್ಯವಿರುವ ಅತ್ಯಂತ ಬೆಲೆಬಾಳುವ ಮಾದರಿಗಳಲ್ಲಿ ಒಂದಾಗಿದೆ.

ಜಾನ್ವಿಯ ಲೆಕ್ಸಸ್ ಎಲ್ ಎಂ 350 ಎಂಎಚ್ ಐಷಾರಾಮಿ ಕಾರಿನಲ್ಲಿ ಹಲವು ವೈಶಿಷ್ಟ್ಯಗಳಿವೆ. ಇದರ ಎಕ್ಸ್ ಶೋರೂಂ ಬೆಲೆ ಸುಮಾರು 2.50 ಕೋಟಿ ರೂ. ಗಳಾಗಿದ್ದು, ಆನ್ ರೋಡ್ ಬೆಲೆ 2.87 ಕೋಟಿ ರೂ. ನಷ್ಟಿದೆ. ಉನ್ನತ ಮಟ್ಟದ ಈ ವಾಹನವು ಪ್ರೀಮಿಯಂ ಸೌಕರ್ಯಗಳಿಂದ ತುಂಬಿದೆ. ಇದು ಹೆಚ್ಚುವರಿ ಲೆಗ್‌ರೂಮ್‌ಗೆ ಸರಿಹೊಂದಿಸಬಹುದಾದ ರಿಕ್ಲೈನರ್ ಆಸನಗಳನ್ನು ಒಳಗೊಂಡಿದೆ ಮತ್ತು ಉತ್ತಮ ಲಗೇಜ್ ಸ್ಥಳಕ್ಕಾಗಿ ಟಿಪ್-ಅಪ್ ಕಾರ್ಯವನ್ನು ಸಹ ಹೊಂದಿದೆ. ಕೆಲವೇ ದಿನಗಳ ಹಿಂದೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕೂಡ ಇದೇ ಮಾದರಿಯನ್ನು ಬೂದು ಬಣ್ಣದಲ್ಲಿ ಖರೀದಿಸಿದರು.


ಬ್ಯುಸಿಯಾಗಿರುವ ಜಾನ್ವಿ

ಚಿತ್ರರಂಗದಲ್ಲಿ ಮಾತ್ರವಲ್ಲ ವಯಕ್ತಿಕ ಜೀವನದಲ್ಲೂ ಜಾನ್ವಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ತಾಯಿ ಶ್ರೀದೇವಿ ಅವರ 61 ನೇ ಜನ್ಮ ವಾರ್ಷಿಕೋತ್ಸವದ ವೇಳೆ ಜಾನ್ವಿ ಕಪೂರ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 2018 ರಲ್ಲಿ ತನ್ನ ತಾಯಿಯ ಮರಣದ ಅನಂತರ ಜಾನ್ವಿಯು ಅನುಸರಿಸುತ್ತಿರುವ ವಾರ್ಷಿಕ ಸಂಪ್ರದಾಯ ಇದಾಗಿದೆ.


ಜಾನ್ವಿ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಒಂದೆರಡು ಚಿತ್ರಗಳನ್ನು ಮತ್ತು ತಾಯಿಯೊಂದಿಗೆ ಬಾಲ್ಯದ ಚಿತ್ರವನ್ನು ಹಂಚಿಕೊಂಡಿದ್ದರು. ಹಳದಿ ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡಿದ್ದ ಜಾನ್ವಿ ದೇವಾಲಯದ ಮೆಟ್ಟಿಲುಗಳ ಮೇಲೆ ನಿಂತು ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದರು.


ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ತಿರುಪತಿ ದೇವಸ್ಥಾನದೊಂದಿಗೆ ಜಾನ್ವಿಯ ನಂಟು

ಜಾನ್ವಿ ತಿರುಪತಿ ದೇವಸ್ಥಾನದಲ್ಲಿ ಮೆಟ್ಟಿಲುಗಳನ್ನು ಹತ್ತಲು ಕಾರಣವನ್ನು ಬಹಿರಂಗಪಡಿಸಿದ್ದಾರೆ. ಅಮ್ಮ ತೀರಿಕೊಂಡ ಅನಂತರ ನಾನು ತಿರುಪತಿಯ ಮೆಟ್ಟಿಲುಗಳನ್ನು ಹತ್ತಲು ಪ್ರಾರಂಭಿಸಿದೆ ಎಂದು ಜಾನ್ವಿ ಹೇಳಿದ್ದಾರೆ.
ಶ್ರೀದೇವಿ ತನ್ನ ಹುಟ್ಟುಹಬ್ಬದಂದು ಈ ರೀತಿ ಮಾಡುತ್ತಿದ್ದಳು. ಅವಳು ಬಿಟ್ಟು ಹೋದ ಬಳಿಕ ನಾನು ಅವಳ ಹುಟ್ಟುಹಬ್ಬದಂದು ತಿರುಪತಿ ಮೆಟ್ಟಿಲು ಹತ್ತಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

Continue Reading
Advertisement
karnataka weather Forecast
ಮಳೆ1 min ago

Karnataka Weather : ಮುಂದುವರಿದ ಮಳೆ ಅವಾಂತರ; ನಾಳೆ ಒಳನಾಡು, ಕರಾವಳಿಯಲ್ಲಿ ಅಬ್ಬರ

Paralympic 2024
ಕ್ರೀಡೆ3 mins ago

Paralympic 2024: ಒತ್ತಡಕ್ಕೆ ಒಳಗಾಗಬೇಡಿ; ಭಾರತದ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸಲಹೆ

Celina Jaitley
ಸಿನಿಮಾ25 mins ago

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Viral Video
Latest30 mins ago

Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

Kannada New Movie
ಬೆಂಗಳೂರು34 mins ago

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

Viral Video
Latest37 mins ago

Viral Video: ಈಜಲು ಹೋಗಿದ್ದವನ ಶರ್ಟ್‍ನೊಳಗೆ ನುಸುಳಿದ ಬೃಹತ್‌ ಹಾವು! ಮುಂದೇನಾಯ್ತು ನೋಡಿ

Vinesh Phogat
ದೇಶ50 mins ago

Vinesh Phogat: ಸಹೋದರಿಯ ವಿರುದ್ಧವೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ವಿನೇಶ್​ ಫೋಗಟ್​?

DK Shivakumar
ಕರ್ನಾಟಕ1 hour ago

DK Shivakumar: ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪ್ರತಿನಿಧಿ ಎಂದ ಡಿಕೆಶಿ

Viral News
ದೇಶ1 hour ago

Viral News: ದರೋಡೆ, ಪಿಕ್‌ಪಾಕೆಟಿಂಗ್‌, ಕಳ್ಳತನವೇ ಸಬ್ಜೆಕ್ಟ್‌.. ಕ್ರಿಮಿನಲ್‌ಗಳಿಗಾಗಿಯೇ ಇಲ್ಲಿವೆ ಶಾಲೆಗಳು; ಫೀಸ್‌ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

Supreme Court
ಪ್ರಮುಖ ಸುದ್ದಿ2 hours ago

Supreme Court: ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌