Site icon Vistara News

ಹ್ಯಾಟ್ರಿಕ್ ಹೀರೋ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ

ಶಿವರಾಜ್ ಕುಮಾರ್

ಬೆಂಗಳೂರು : ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಶಿವಣ್ಣನ 127ನೇ ಸಿನಿಮಾಗೆ ʻಅವನೇ ಶ್ರೀಮನ್ನಾರಾಯಣʼ ಚಿತ್ರದ ನಿರ್ದೇಶಕರೇ ಸಾರಥಿಯಾಗಿರುವುದು ವಿಶೇಷ.

ನಟ ಶಿವರಾಜ್ ಕುಮಾರ್ ಬತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಇದನ್ನೂ ಓದಿ | Vedha Movie | ಶಿವರಾಜ್‌ ಕುಮಾರ್‌ 125ನೇ ಚಿತ್ರದ ನಿರ್ಮಾಪಕಿ ಗೀತಾ; ಪೋಸ್ಟರ್‌ ರಿಲೀಸ್‌

ಆಗಸ್ಟ್‌ನಲ್ಲಿ ಟೈಟಲ್ ರಿವೀಲ್

ಮಹಾಭಾರತದ ಅಶ್ವತ್ಥಾಮನ ಸಾಹಸಗಾಥೆಯನ್ನು ಆಧರಿಸಿ ತಯಾರಾಗಲಿರುವ ಈ ಸಿನಿಮಾದ ಶೀರ್ಷಿಕೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಿವೀಲ್ ಆಗಲಿದೆ. ಟೈಟಲ್ ಬಳಿಕ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಕೊಡಲು ಚಿತ್ರತಂಡ ‌ಪ್ಲಾನ್ ಹಾಕಿಕೊಂಡಿದೆ. ಇದೊಂದು ಆ್ಯಕ್ಷನ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ತಮ್ಮದೇ ಹೋಮ್ ಬ್ಯಾನರ್ ಜತೆಗೆ ಕಾರ್ಪೊರೇಟ್ ಕಂಪನಿಯೊಂದರ ಜತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಹಾಗೂ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ.

ಇದನ್ನೂ ಓದಿ | Simple Starಗೆ ಜನುಮದಿನದ ಸಂಭ್ರಮ: ಕಿರಿಕ್‌ ಕರ್ಣನ ಸಿನಿ ಜರ್ನಿ ಹೀಗಿದೆ!

Exit mobile version