Hello Daddy Movie nithin gopi dies due to heart attack Hello Daddy Movie: `ಶಾಲೆಗೆ ಈ ದಿನ' ರಜಾ ಎಂದು ಕುಣಿದಾಡಿದ್ದ ನಿತಿನ್‌ ನಿಧನ - Vistara News

South Cinema

Hello Daddy Movie: `ಶಾಲೆಗೆ ಈ ದಿನ’ ರಜಾ ಎಂದು ಕುಣಿದಾಡಿದ್ದ ನಿತಿನ್‌ ನಿಧನ

Hello Daddy Movie: ‘ಹಲೋ ಡ್ಯಾಡಿ’ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಮಗನಾಗಿ ನಿತಿನ್ ಕಾಣಿಸಿಕೊಂಡಿದ್ದರು. ʻʻಶಾಲೆಗೆ ಈ ದಿನ ರಜಾʼʼ ಎಂಬ ಹಾಡಿಗೆ ಕುಣಿದಾಡಿದ್ದ ನಿತಿನ್‌ ಬಾರದ ಲೋಕಕ್ಕೆ ಹೋಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್‌ ಅವರ ಹಲೋ ಡ್ಯಾಡಿ ಸಿನಿಮಾ (Hello Daddy Movie) ಮೂಲಕ ಪ್ರೇಕ್ಷಕರ ಮನ ಗೆದ್ದ ನಟ ನಿರ್ದೇಶಕ ನಿತಿನ್ ಗೋಪಿ (39) ಜೂನ್‌ 2ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ನಟನಗಾಗಿ ಚಂದವನಕ್ಕೆ ಪದಾರ್ಪಣೆ ಮಾಡಿದ್ದ ನಿತಿನ್‌ ಗೋಪಿ, ‘ಹಲೋ ಡ್ಯಾಡಿ’ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಮಗನಾಗಿ ಕಾಣಿಸಿಕೊಂಡಿದ್ದರು. ʻʻಶಾಲೆಗೆ ಈ ದಿನ ರಜಾʼʼ ಎಂಬ ಹಾಡಿಗೆ ಹೆಜ್ಜೆ ಹಾಕಿದ್ದ ನಟ ಈಗ ಬಾರದ ಲೋಕಕ್ಕೆ ಹೋಗಿದ್ದಾರೆ.

ಖ್ಯಾತ ಕೊಳಲು ವಾದಕ ಗೋಪಿ ಅವರ ಮಗನಾದ ನಿತಿನ್ ಅವರಿಗೆ ಜೂನ್‌ 2ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಹೃದಯಾಘಾತವಾಗಿತ್ತು. ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರ ಜತೆ ವಾಸವಾಗಿದ್ದ ನಿತಿನ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಗಿತ್ತಾದರೂ ಮಾರ್ಗ ಮಧ್ಯದಲ್ಲೇ ತೀವ್ರ ಹೃದಯಾಘಾತದಿಂದ ಕೊನೆಯಿಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಹಲೋ ಡ್ಯಾಡಿ ಚಿತ್ರದ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ನಿರ್ದೇಶನಕ್ಕೂ ಇಳಿದಿದ್ದರು. ಬಾಲಾಜಿ ಟೆಲಿಫಿಲ್ಮಾ ಹಾಗೂ ಶ್ರುತಿ ನಾಯ್ಡು ಅವರ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ ಬಳಿಕ ತಾವೇ ನಿರ್ದೇಶಕರಾಗಿ ಯಶಸ್ಸು ಕಂಡಿದ್ದರು. ಹರಹರ ಮಹದೇವ ಧಾರಾವಾಹಿಯ ಮುನ್ನೂರು ಸಂಚಿಕೆಗಳನ್ನು ಯಶಸ್ವಿಯಾಗಿ ನಿರ್ದೇಶಿಸಿದ್ದರು. ತಮಿಳಿನ ಕನ್ನಗಿ ಧಾರಾವಾಹಿಯನ್ನೂ ನಿರ್ದೇಶಿಸಿದ್ದರು.

ಇದನ್ನೂ ಓದಿ: ಜಾರಕಿಹೊಳಿ ಸಹೋದರರ ಅಕ್ಕ ನಿಧನ; ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಸತೀಶ್​ ಜಾರಕಿಹೊಳಿ

‘ಕೆರಳಿದ ಕೇಸರಿ’, ‘ಮುತ್ತಿನಂಥ ಹೆಂಡತಿ’, ‘ನಿಶಬ್ಧ’, ‘ಚಿರಬಾಂಧವ್ಯ’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಿತಿನ್ ಬಾಲನಟನಾಗಿ ನಟಿಸಿದ್ದರು. ತಮಿಳು ಧಾರಾವಾಹಿಗೂ ಕೂಡ ಆಕ್ಷನ್ ಕಟ್ ಹೇಳಿದ್ದರು. 39 ವರ್ಷ ವಯಸ್ಸಾಗಿದ್ದ ನಿತಿನ್ ಅವರಿಗೆ ಮದುವೆ ಕೂಡ ಆಗಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

War 2 Movie: ಅಯಾನ್ ಅವರ ಮುಂಬರುವ ನಿರ್ದೇಶನದ ವಾರ್ 2 ಸಿನಿಮಾ ಚಿತ್ರೀಕರಣ ಈಗಾಗಲೇ ಶುರುವಾಗಿದೆ. ಹೃತಿಕ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಪ್ರಸ್ತುತ ಮುಂಬೈನಲ್ಲಿ ಶೂಟಿಂಗ್‌ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಜ್ಯೂನಿಯರ್‌ ಎನ್‌ಟಿಆರ್‌ ಚೆನ್ನೈನಿಂದ ಮುಂಬೈಗೆ ಬಂದಿದ್ದರು. ಈ ವೇಳೆ ಚಿತ್ರೀಕರಣದ ಕೆಲವು ಫೋಟೊಗಳು ವೈರಲ್‌ ಆಗಿದ್ದವು. ನಿಯರ್‌ ಎನ್‌ಟಿಆರ್‌ ಇತ್ತೀಚಿನ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ ಸಿನಿಮಾಗಾಗಿ 45 ಕೋಟಿ ರೂ. ಪಡೆದಿದ್ದರು. ವಾರ್‌ 2 ಸಿನಿಮಾಗಾಗಿ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

War 2 A galaxy of stars descended at a Mumbai restaurant on Sunday evening
Koo

ಬೆಂಗಳೂರು: ನಿರ್ದೇಶಕ ಅಯಾನ್ ಮುಖರ್ಜಿ ಅವರು ʻಬ್ರಹ್ಮಾಸ್ತ್ರʼ ತಂಡ ಹಾಗೂ ʻವಾರ್‌ 2ʼ (War 2 Movie) ತಂಡಕ್ಕೆ ಡಿನ್ನರ್‌ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ರಣಬೀರ್ ಕಪೂರ್, ಆಲಿಯಾ, ಹೃತಿಕ್‌ ರೋಷನ್‌ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಜತೆಯಾಗಿ ಕಂಡು ಬಂದರು.

ರಣಬೀರ್ ಕಪೂರ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಕಪ್ಪು ಬಣ್ಣದ ಎಸ್‌ಯುವಿಯಿಂದ ಹೊರಬರುತ್ತಿರುವ ವಿಡಿಯೊ ಪಾಪರಾಜಿಗಳು ಶೇರ್‌ ಮಾಡಿಕೊಂಡಿದ್ದಾರೆ. ಆಲಿಯಾ ಭಟ್ ಕೂಡ ಹಳದಿ ಬಣ್ಣದ ಉಡುಗೆಯನ್ನು ಧರಿಸಿದ್ದರು. ಕರಣ್ ಜೋಹರ್ ಮತ್ತು ಅಯಾನ್ ಮುಖರ್ಜಿ ಕೂಡ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಲವ್ ಬರ್ಡ್ಸ್ ಹೃತಿಕ್ ರೋಷನ್ ಮತ್ತು ಸಬಾ ಆಜಾದ್ ಕೂಡ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಅಯಾನ್ ಅವರ ಮುಂಬರುವ ನಿರ್ದೇಶನದ ವಾರ್ 2 ಸಿನಿಮಾ ಚಿತ್ರೀಕರಣ ಈಗಾಗಲೇ ಶುರುವಾಗಿದೆ. ಹೃತಿಕ್ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಪ್ರಸ್ತುತ ಮುಂಬೈನಲ್ಲಿ ಶೂಟಿಂಗ್‌ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಜ್ಯೂನಿಯರ್‌ ಎನ್‌ಟಿಆರ್‌ ಚೆನ್ನೈನಿಂದ ಮುಂಬೈಗೆ ಬಂದಿದ್ದರು. ಈ ವೇಳೆ ಚಿತ್ರೀಕರಣದ ಕೆಲವು ಫೋಟೊಗಳು ವೈರಲ್‌ ಆಗಿದ್ದವು.

ವರದಿಯ ಪ್ರಕಾರ, ಜ್ಯೂನಿಯರ್‌ ಎನ್‌ಟಿಆರ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ. ಜ್ಯೂನಿಯರ್‌ ಎನ್‌ಟಿಆರ್‌ ಇತ್ತೀಚಿನ ಬ್ಲಾಕ್‌ಬಸ್ಟರ್ ಆರ್‌ಆರ್‌ಆರ್‌ ಸಿನಿಮಾಗಾಗಿ 45 ಕೋಟಿ ರೂ. ಪಡೆದಿದ್ದರು. ವಾರ್‌ 2 ಸಿನಿಮಾಗಾಗಿ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Jr NTR: `ವಾರ್‌ 2′ ಸಿನಿಮಾ ಶೂಟಿಂಗ್‌ ಫೋಟೊಗಳು ಲೀಕ್‌!

ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್​​ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್‌ ಎನ್‌ಟಿಆರ್‌ ಅವರು ತಮ್ಮ ಮೊದಲ ಬಾಲಿವುಡ್​ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್‌-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ವಾರ್ 2 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Actress Haripriya: ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜೋಡಿ 2023ರ ಜನವರಿಯಲ್ಲಿ ಮದುವೆಯಾಗಿದ್ದರು. ಸ್ಯಾಂಡಲ್​ವುಡ್​ ಸ್ಟಾರ್​ ನಟಿ ಹರಿಪ್ರಿಯಾ ಅವರನ್ನು ಪ್ರತಿಭಾವಂತ ನಟ ವಸಿಷ್ಠ ಮದುವೆಯಾಗುವುದು ದೊಡ್ಡ ಸುದ್ದಿಯಾಗಿತ್ತು. ಇದೀಗ ಅವರು ಸುಂದರ ಜೀವನ ನಡೆಸುತ್ತಿದ್ದಾರೆ. ನಟ ವಸಿಷ್ಠ ಸಿಂಹ ತಮ್ಮ ಬಹುಕಾಲದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ` ಮರ್ಸಿಡಿಸ್ ಬೆಂಝ್ʼ ನಿರ್ಮಾಣದ ಜಿಎಲ್ಇ 450ಡಿ (Mercedes-Benz GLE 450d) ಕಾರನ್ನು ಖರೀದಿಸಿದ್ದಾರೆ.

VISTARANEWS.COM


on

Actress Haripriya Vasishta Simha Buys A Swanky New SUV Car
Koo

ನಟ ವಸಿಷ್ಠ ಸಿಂಹ ತಮ್ಮ ಬಹುಕಾಲದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ` ಮರ್ಸಿಡಿಸ್ ಬೆಂಝ್ʼ ನಿರ್ಮಾಣದ ಜಿಎಲ್ಇ 450ಡಿ (Mercedes-Benz GLE 450d) ಕಾರನ್ನು ಖರೀದಿಸಿದ್ದಾರೆ. ಕಾರು ಖರೀದಿ ಬಳಿಕ ಪತ್ನಿ ಹರಿಪ್ರಿಯಾ ಅವರ ಜತೆ ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ.

ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಖರೀದಿ ಮಾಡಿರುವ ಹೊಸ ಕಾರು ಸಾಕಷ್ಟು ವಿಶೇಷತೆಗಳನ್ನು ಹೊಂದಿದ್ದು, ಐಷಾರಾಮಿ ಸೌಲಭ್ಯಗಳೊಂದಿಗೆ ದುಬಾರಿ ಬೆಲೆ ಹೊಂದಿದೆ.

ʻಮರ್ಸಿಡಿಸ್ ಬೆಂಝ್ ʼಜಿಎಲ್ಇ 450ಡಿ ಆವೃತ್ತಿಯು ಸದ್ಯ ಬೆಂಗಳೂರಿನಲ್ಲಿ ಆನ್ ರೋಡ್ ಪ್ರಕಾರ ರೂ. 1.44 ಕೋಟಿ ಬೆಲೆ ಹೊಂದಿದೆ. ಇದರಲ್ಲಿ 362 ಹಾರ್ಸ್ ಪವರ್ ಮತ್ತು 3.0 ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ.

ಇದನ್ನೂ ಓದಿ: Actress Haripriya: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟ ಸಿಂಹಪ್ರಿಯಾ

5 ಬಣ್ಣಗಳಲ್ಲಿ ಈ ಕಾರು ಲಭ್ಯವಾಗಲಿದೆ. ಅಬ್ಸಿಡಿಯನ್ ಬ್ಲ್ಯಾಕ್ ಮೆಟಾಲಿಕ್, ಸೋಡಾಲೈಟ್ ಬ್ಲೂ ಮೆಟಾಲಿಕ್, ಸೆಲೆನೈಟ್ ಗ್ರೇ ಮೆಟಾಲಿಕ್, ಹೈ-ಟೆಕ್ ಸಿಲ್ವರ್ ಮೆಟಾಲಿಕ್ ಮತ್ತು ಪೋಲಾರ್ ವೈಟ್. ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಟ್ರಾಫಿಕ್ ಸಿಗ್ನಲ್ ರೆಕಾಗ್ನೈಸ್, ಬ್ಲೈಂಡ್ ಸ್ಪಾಟ್ ಮಾನಿಟರ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ ಮತ್ತು ಅಡಾಪ್ಟಿವ್ ಹೈ ಬೀಮ್ ಅಸಿಸ್ಟ್ ಸೌಲಭ್ಯಗಳನ್ನು ಒಳಗೊಂಡಿವೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಜೋಡಿ 2023ರ ಜನವರಿಯಲ್ಲಿ ಮದುವೆಯಾಗಿದ್ದರು. ಸ್ಯಾಂಡಲ್​ವುಡ್​ ಸ್ಟಾರ್​ ನಟಿ ಹರಿಪ್ರಿಯಾ ಅವರನ್ನು ಪ್ರತಿಭಾವಂತ ನಟ ವಸಿಷ್ಠ ಮದುವೆಯಾಗುವುದು ದೊಡ್ಡ ಸುದ್ದಿಯಾಗಿತ್ತು. ಇದೀಗ ಅವರು ಸುಂದರ ಜೀವನ ನಡೆಸುತ್ತಿದ್ದಾರೆ. ಮದುವೆಯ ಬಳಿಕ ಹರಿಪ್ರಿಯಾ ಸಿನಿಮಾ ಕ್ಷೇತ್ರದಲ್ಲಿ ಮುಂದುವರಿಯುತ್ತಾರಾ ಎಂಬ ಅನುಮಾನವೊಂದು ಮೂಡಿತ್ತು. ಅದಕ್ಕೆ ಸ್ಪಷ್ಟ ಉತ್ತರ ಇನ್ನೂ ದೊರಕಿಲ್ಲ. ಆದರೆ, ಯೂಟ್ಯೂಬ್​ ಚಾನೆಲ್​ ಮೂಲಕ ಮತ್ತೆ ಜನರಿಗೆ ಹತ್ತಿರವಾಗುವ ಪ್ರಯತ್ನ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Shiva Rajkumar: ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

VISTARANEWS.COM


on

Shiva Rajkumar Graces Muhurtha Of Father Kannada Movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ (Shiva Rajkumar) ಹಾಗೂ ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಘೋಷಣೆ ಆಗಿರುವುದು ಗೊತ್ತೇ ಇದೆ. ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೊ’ ಆರಂಭಿಸಿ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈಗ ಆ ಐದು ಸಿನಿಮಾಗಳಲ್ಲಿ ಮೊದಲ ಚಿತ್ರವಾಗಿ ‘ಡಾರ್ಲಿಂಗ್’ ಕೃಷ್ಣ ನಟನೆಯ ‘ಫಾದರ್’ ಸಿನಿಮಾ (Father Kannada Movie) ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನಡೆಯಿತು. ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಶಾಸಕ ಪ್ರದೀಪ್ ಈಶ್ವರ್, ರಾಜಕೀಯ ಮುಖಂಡ ಎಚ್.ಎಂ. ರೇವಣ್ಣ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಿರ್ದೇಶಕ ಚೇತನ್ ಕುಮಾರ್, ಮಂಜುನಾಥ್, ಮಮತಾ ದೇವರಾಜ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ‘ಫಾದರ್​’ ಚಿತ್ರತಂಡಕ್ಕೆ ಶುಭ ಹಾರೈಸಿದರು

ಶಿವರಾಜ್​ಕುಮಾರ್​ ನಟಿಸಿದ್ದ ‘ಭೈರಾಗಿ’ ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ರಾಜ್ ಮೋಹನ್ ಅವರು ಈಗ ‘ಫಾದರ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿದ್ದು, ಅವರಿಗೆ ಅಮೃತಾ ಅಯ್ಯಂಗಾರ್ ಜೋಡಿ ಆಗಿದ್ದಾರೆ. ಪ್ರಕಾಶ್ ರೈ, ಸುನೀಲ್ ಸೇರಿದಂತೆ ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಬಾಲಿವುಡ್​ ನಿರ್ಮಾಪಕ ಆನಂದ್ ಪಂಡಿತ್ ಈ ಸಿನಿಮಾವನ್ನು ಅರ್ಪಿಸುತ್ತಿದ್ದಾರೆ. ‘ಹನುಮಾನ್’ ಸಿನಿಮಾದ ಖ್ಯಾತಿಯ ಹರಿ ಅವರು ಸಂಗೀತ ನೀಡುತ್ತಿದ್ದಾರೆ ಎಂದು ಆರ್. ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ. ಇದೊಂದು ತಂದೆ-ಮಗನ ನಡುವಿನ ಬಾಂಧವ್ಯದ ಕಹಾನಿ ಇರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ: Shiva Rajkumar: `ವಿಕ್ಟೋರಿಯಾ ಮಾನ್ಸನ್‌’ ಫಸ್ಟ್‌ ಲುಕ್‌ ಔಟ್‌: ಶಿವಣ್ಣ ಸಾಥ್!

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ (Kabzaa Movie) ಎರಡು ದಿನಗಳಲ್ಲೇ ನೂರು ಕೋಟಿ ರೂ. ಕ್ಲಬ್‌ ಸೇರಿತ್ತು. ಆದರೆ ಭಾರಿ ಕಲೆಕ್ಷನ್‌ ಮಾಡಿರುವ ಈ ಸಿನಿಮಾವನ್ನು ಸಾಕಷ್ಟು ಜನ ಇಷ್ಟ ಪಟ್ಟಿರಲಿಲ್ಲ. ಹೀಗಾಗಿ ʻಕಬ್ಜʼ ಸೀಕ್ವೆಲ್ ಯಾವುದೇ ಕಾರಣಕ್ಕೂ ಸಿದ್ಧವಾಗುವುದಿಲ್ಲ ಎಂದು ಹಲವರು ಅಂದುಕೊಂಡಿದ್ದರು. ಇದಾದ ಬಳಿಕ ಜನವರಿ 23ರಂದು ಚಂದ್ರು ಅವರು ಐದು ಸಿನಿಮಾ ಘೋಷಣೆ ಮಾಡಿದರು.

ಭಾರತೀಯ ಚಿತ್ರರಂಗದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಿದ ನಿರ್ದೇಶಕ ಆರ್ ಚಂದ್ರು ಅವರು ಆರ್ ಸಿ ಪ್ರೊಡಕ್ಷನ್ ನಡಿ ಐದು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ʻಶ್ರೀರಾಮಬಾಣʼ, ʻಫಾದರ್ʼ, ʻPOKʼ, ʻಡಾಗ್ʼ ಹಾಗೂ ಕಬ್ಜ-2 ಟೈಟಲ್ ಘೋಷಣೆಯಾಗಿತ್ತು.

ಈ ಬಗ್ಗೆ ಆರ್‌ ಚಂದ್ರು ಮಾತನಾಡಿ ʻʻಯಾವುದೇ ಕೆಲಸ ಮಾಡಬೇಕು ಅಂದರೆ ಯೋಗಬೇಕು. ಯೋಗ್ಯತೆ ಬೇಕು. 10 ತಿಂಗಳು ನಾನು ಸುಮ್ನೆ ಕೂತಿರಲಿಲ್ಲ. ಕೈ ಹಾಕಿದರೆ ಕರಂಟ್ ಕಂಬಕ್ಕೆ ಕೈ ಹಾಕಬಾರದು. ಚಂದ್ರಲೋಕಕ್ಕೆ ಕೈ ಹಾಕಬೇಕು. ಕಬ್ಜ’ ಸಿನಿಮಾದ ಕಲೆಕ್ಷನ್ ಫೇಕ್ ಎಂದು ಅನೇಕರು ಹೇಳಿದ್ದರು.‘ಕಬ್ಜ ಸಿನಿಮಾದಿಂದ ನಾನು ಸರ್ಕಾರಕ್ಕೆ 20 ಕೋಟಿ ರೂಪಾಯಿ ಟ್ಯಾಕ್ಸ್ ಕಟ್ಟಿದ್ದೀನಿ. ಇದನ್ನು ಓಪನ್ ಆಗಿ ಹೇಳಿಕೊಳ್ಳುತ್ತಿದ್ದೇನೆ. ಕನ್ನಡ ಸಿನಿಮಾಗಳನ್ನು ನೋಡ್ಬೇಕು ಅಂದ್ರೆ ಒಳ್ಳೊಳ್ಳೆ ಸಿನಿಮಾಗಳನ್ನ ಮಾಡ್ಬೇಕು. ಬಾಯಿ ಇದೆ ಎಂದು ಮಾತನಾಡಿದರೆ ಐದು ಸಿನಿಮಾ, ಹತ್ತು ಸಿನಿಮಾ ಆಗಲ್ಲ’ ಎಂದು ಅವರು ನೇರವಾಗಿ ಹೇಳಿದ್ದರು.

Continue Reading

ಟಾಲಿವುಡ್

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Samantha Ruth Prabhu: ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರಂ’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻ

VISTARANEWS.COM


on

Samantha Ruth Prabhu announces new film Bangaram
Koo

ಬೆಂಗಳೂರು: ಇಂದು ಟಾಲಿವುಡ್‌ ನಟಿ ಸಮಂತಾ(Samantha Ruth Prabhu) ಅವರ ಜನುಮದಿನದ (Samantha Birthday) ಸಂಭ್ರಮ. 37ನೇ ವಸಂತಕ್ಕೆ ನಟಿ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ನಟಿ ಸಮಂತಾ ಅವರು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ʻಬಂಗಾರಂ’ (Bangaram) ಎಂಬ ಹೊಸ ಚಿತ್ರದ ಶೀರ್ಷಿಕೆ ಜತೆ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಸಮಂತಾ ತಿಳಿಸಿದ್ದಾರೆ.

ಸಮಂತಾ ಜನುಮದಿನಕ್ಕೆ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಶುಭಾಶಯ ತಿಳಿಸುತ್ತಿದ್ದಾರೆ. ‘ಬಂಗಾರM’ ಚಿತ್ರದ ಫಸ್ಟ್ ಲುಕ್‌ನಲ್ಲಿ ಉಗ್ರ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದು, ಗನ್ ಹಿಡಿದುಕೊಂಡು ರಕ್ತಸಿಕ್ತ ಮುಖವನ್ನು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸಿನಿಮಾ 2025ರಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇನ್‌ಸ್ಟಾದಲ್ಲಿ ನಟಿ ಪೋಸ್ಟ್ ಶೇರ್‌ ಮಾಡಿ “ಚಿನ್ನವಾಗಲು ಎಲ್ಲವೂ ಹೊಳೆಯಬೇಕಾಗಿಲ್ಲ. ʻಬಂಗಾರಂʼ ಶೀಘ್ರದಲ್ಲೇ ಸೆಟ್ಟೇರಲಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ಸಿಟಾಡೆಲ್ ಇಂಡಿಯಾ:ಹನಿ ಬನ್ನಿ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Gurucharan Singh soon to get married faced financial crunch
ಸಿನಿಮಾ7 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ13 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್29 mins ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ36 mins ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ47 mins ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್1 hour ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ1 hour ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ1 hour ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

ವೈರಲ್ ನ್ಯೂಸ್2 hours ago

Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202417 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202422 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌