Ram Mandir: ಅಯೋಧ್ಯೆಯಲ್ಲಿ ಹೇಮಾ ಮಾಲಿನಿ ರಾಮಾಯಣ ನೃತ್ಯ ನಾಟಕ ವಿಶೇಷ ಪ್ರದರ್ಶನ! - Vistara News

ಬಾಲಿವುಡ್

Ram Mandir: ಅಯೋಧ್ಯೆಯಲ್ಲಿ ಹೇಮಾ ಮಾಲಿನಿ ರಾಮಾಯಣ ನೃತ್ಯ ನಾಟಕ ವಿಶೇಷ ಪ್ರದರ್ಶನ!

Ram Mandir: ಜ.17ರಂದು ರಾಮಾಯಣ ನೃತ್ಯ ನಾಟಕವನ್ನು ವಿಶಾಲ್ ನಾಯಕ್ ಜತೆಗೆ ಪ್ರದರ್ಶಿಸಿದರು. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

VISTARANEWS.COM


on

Hema Malini As Sita Perform In Ayodhya Ahead Of Ram Mandir Consecration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಮುನ್ನ ಸ್ವಾಮಿ ರಾಮಭದ್ರಾಚಾರ್ಯ ಆಯೋಜಿಸಿರುವ 10 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ (Hema Malini) ಮತ್ತು ತಂಡದವರು ರಾಮಾಯಣ ನೃತ್ಯ ನಾಟಕವನ್ನು ಜ.17ರಂದು ಪ್ರದರ್ಶಿಸಿದ್ದರು. ಜನವರಿ 22 ರ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ನಟಿ ವಿಶೇಷ ಪ್ರದರ್ಶನವನ್ನು ನೀಡಲಿದ್ದಾರೆ.

ಜ.17ರಂದು ರಾಮಾಯಣ ನೃತ್ಯ ನಾಟಕವನ್ನು ವಿಶಾಲ್ ನಾಯಕ್ ಜತೆಗೆ ಪ್ರದರ್ಶಿಸಿದರು. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಪ್ರದರ್ಶನದ ಬಗ್ಗೆ ಹೇಮಾ ಮಾಲಿನಿ ಮಾತನಾಡಿ “ಈ ಕಾರ್ಯಕ್ರಮವನ್ನು ಸ್ವಾಮಿ ರಾಮಭದ್ರಾಚಾರ್ಯ ಅವರು ಆಯೋಜಿಸಿದ್ದಾರೆ. ಆ 10 ದಿನಗಳ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಸಮಯದಲ್ಲಿ ನಾನು ಇಲ್ಲಿರುವುದು ನನ್ನ ಅದೃಷ್ಟ. ಇಡೀ ಬಾಲಿವುಡ್ ‘ರಾಮಮಯ’ ಆಗಿದೆ. ಕಲಾವಿದರು ರಾಮಗೀತೆಗಳನ್ನು ಹಾಡುತ್ತಿದ್ದಾರೆ. ಕಳೆದ ವರ್ಷವೂ ರಾಮ ಭಜನೆ ಹಾಡಿದ್ದೆʼʼ ಎಂದರು.

ಇದನ್ನೂ ಓದಿ: Ayodhya Ram Mandir: ರಾಮ ಮಂದಿರದ 2000 ಅಡಿ ಆಳದಲ್ಲಿರುತ್ತೆ ಟೈಮ್‌ ಕ್ಯಾಪ್ಸೂಲ್!‌ ಏನಿದರ ವಿಶೇಷತೆ?

ಮಥುರಾದ ಕೃಷ್ಣ ಜನ್ಮಸ್ಥಳದಲ್ಲೂ ಕೃಷ್ಣನ ದೇವಸ್ಥಾನ ಇರಬೇಕೇ ಎಂದು ಪ್ರಶ್ನೆ ಬಂದಾಗ ಹೇಮಾ ಮಾಲಿನಿ ಮಾತನಾಡಿ ʻಖಂಡಿತವಾಗಿಯೂ ಇರಬೇಕು. ಮಥುರಾ ಮತ್ತು ವೃಂದಾವನವು ದೇವಾಲಯಗಳನ್ನು ಹೊಂದಿರುವ ನಗರಗಳಾಗಿವೆ. ಕೃಷ್ಣನ ಜನ್ಮಸ್ಥಳ ಕೂಡʼʼ ಎಂದರು.

ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಸಮಾರಂಭದ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಲ್ಲಿ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೇಶದ ರಾಜಧಾನಿ ನವ ದೆಹಲಿಯಲ್ಲಿಯೂ ಅಂದು ದೇಗುಲಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಡೆಸಲು ಯೋಜನೆ ರೂಪಿಸಲಾಗಿದೆ. ರಣಬೀರ್ ಕಪೂರ್, ಆಲಿಯಾ ಭಟ್, ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, ಕಂಗನಾ ರಣಾವತ್, ಅಮಿತಾಭ್ ಬಚ್ಚನ್ ಸೇರಿದಂತೆ ಸೌತ್‌ ನಟರುಗಳಿಗೆ ಆಹ್ವಾನ ಬಂದಿದೆ.

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ 55 ದೇಶಗಳಿಂದ ಸುಮಾರು 100ಕ್ಕೂ ಅಧಿಕ ಗಣ್ಯರು ಅಯೋಧ್ಯೆಗೆ ಆಗಮಿಸಲಿದ್ದಾರೆ. ಜರ್ಮನಿ, ಫಿಜಿ, ಫಿನ್‌ಲ್ಯಾಂಡ್‌, ಅಮೆರಿಕ, ಬ್ರಿಟನ್‌, ಜರ್ಮನಿ, ಇಂಡೋನೇಷ್ಯಾ, ಐರ್ಲೆಂಡ್‌, ಜಪಾನ್‌, ಕೀನ್ಯಾ, ಕೊರಿಯಾ, ಮಾರಿಷಸ್‌, ನಾರ್ವೆ ಸೇರಿ 55 ದೇಶಗಳ ಗಣ್ಯರು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಂಗಾಪುರ, ಸ್ಪೇನ್‌, ಶ್ರೀಲಂಕಾ, ಜಾಂಬಿಯಾ, ವಿಯೇಟ್ನಾಂ, ಉಗಾಂಡ, ವೆಸ್ಟ್‌ ಇಂಡೀಸ್‌ ದೇಶಗಳ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ. ವಿದೇಶಗಳಿಂದ ಆಗಮಿಸುವ ಎಲ್ಲ ಗಣ್ಯರು ಜನವರಿ 21ರಂದೇ ಅಯೋಧ್ಯೆಗೆ ತೆರಳಲಿದ್ದಾರೆ. ಅವರಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Shatrughan Sinha: ʼದಬಾಂಗ್‌ʼ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ ಸೋನಾಕ್ಷಿ ಸಿನ್ಹಾ ಸದ್ಯ ಹಸೆಮಣೆಗೇರುವ ಸಿದ್ಧತೆಯಲ್ಲಿದ್ದಾರೆ. ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ, ತಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳುವುದಾಗಿ ಹೇಳಿದ್ದಾರೆ.

VISTARANEWS.COM


on

Shatrughan Sinha
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ತಮ್ಮ ಬಾಯ್‌ಫ್ರೆಂಡ್‌, ನಟ ಜಹೀರ್ ಇಕ್ಬಾಲ್ (Zaheer Iqbal) ಜತೆ ಜೂನ್ 23ರಂದು ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಈ ಮಧ್ಯೆ ಮಗಳ ಮದುವೆ ಬಗ್ಗೆ ಮಾತನಾಡಿರುವ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ (Shatrughan Sinha) ಅವರು, ʼʼಮದುವೆ ಬಗ್ಗೆ ಸೋನಾಕ್ಷಿ ತಮ್ಮ ಬಳಿ ಏನನ್ನೂ ಹೇಳಿಕೊಂಡಿಲ್ಲ. ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ. ಒಂದು ವೇಳೆ ಅವಳು ಆಮಂತ್ರಿಸಿದರೆ ಖಂಡಿತವಾಗಿಯೂ ತೆರಳಿ ಆಶೀರ್ವದಿಸುತ್ತೇನೆʼʼ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ʼʼನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಪತ್ನಿ ಇಬ್ಬರೂ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ಎಂದಿಗೂ ನಾವು ಬಯಸುತ್ತೇವೆʼʼ ಎಂದು ಪ್ರತಿಕ್ರಿಯಿಸಿದ್ದಾರೆ.

ಸೋನಾಕ್ಷಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದೂ ಶತ್ರುಘ್ನ ಸಿನ್ಹಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼನಮ್ಮ ಮಗಳ ನಿರ್ಧಾರ ಯಾವತ್ತೂ ಸರಿಯಾಗಿರುತ್ತದೆ ಎನ್ನುವ ವಿಶ್ವಾಸವಿದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಪ್ರಬುದ್ಧೆಯಾಗಿದ್ದು, ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡಲು ಇಷ್ಟಪಡುತ್ತೇನೆʼʼ ಎಂದು ಅವರು ತಿಳಿಸಿದ್ದಾರೆ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದೂ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸೋನಾಕ್ಷಿ 2010ರಲ್ಲಿ ಸಲ್ಮಾನ್‌ ಖಾನ್‌ ಅಭಿನಯದ ʻದಬಾಂಗ್‌ʼ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ. ಇತ್ತೀಚೆಗೆ ತೆರೆಕಂಡ ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಈ ಹಿಂದೆ ಬಿಜೆಪಿಯಲ್ಲಿದ್ದ ಶತ್ರುಘ್ನ ಸಿನ್ಹಾ ಕೆಲವು ವರ್ಷಗಳ ಹಿಂದೆ ಹೊರ ಬಂದಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಅವರು ಪಶ್ಚಿಮ ಬಂಗಾಳದ ಅಸೋಲ್‌ ಕ್ಷೇತ್ರದಿಂದ ಟಿಎಂಸಿಯಿಂದ ಸ್ಪರ್ಧಿಸಿ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುರೇಂದ್ರಜೀತ್ ಸಿಂಗ್ ಅಹ್ಲುವಾಲಿಯಾ ವಿರುದ್ಧ 59,564 ಮತಗಳ ಅಂತರದಿಂದ ಗೆದ್ದಿದ್ದಾರೆ.

Continue Reading

ಸಿನಿಮಾ

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Noor Malabika Das: ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲೂ ಅವರು ಸಕ್ರಿಯರಾಗಿದ್ದರು. ಆದರೆ, ಅವರ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

VISTARANEWS.COM


on

Noor Malabika Das
Koo

ಮುಂಬೈ: ಬಾಲಿವುಡ್‌ ನಟಿ ಕಾಜೋಲ್‌ ಅಭಿನಯದ ದಿ ಟ್ರಯಲ್‌ (The Trial) ವೆಬ್‌ ಸಿರೀಸ್‌ ಖ್ಯಾತಿ ನಟಿ ನೂರ್‌ ಮಾಳವಿಕಾ ದಾಸ್‌ (Noor Malabika Das) ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಲೋಖಂಡ್‌ವಾಲಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ 32 ವರ್ಷದ ಬಾಲಿವುಡ್‌ ನಟಿಯು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್‌ 6ರಂದೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಜೂನ್‌ 6ರಂದೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ ಹಾಗೂ ಅಕ್ಕಪಕ್ಕದ ಮನೆಯವರಿಗೂ ವಿಷಯ ಗೊತ್ತಾಗಿಲ್ಲ. ಕೆಲ ದಿನಗಳ ಬಳಿಕ ಅಪಾರ್ಟ್‌ಮೆಂಟ್‌ನಲ್ಲಿ ದುರ್ವಾಸನೆ ಕಂಡುಬಂದಿದ್ದು, ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಫ್ಲ್ಯಾಟ್‌ ಬಾಗಿಲು ತೆಗೆದಾಗ ನಟಿಯ ಶವವು ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಅಂಧೇರಿಯ ಓಶ್ವಿವಾರ ಪ್ರದೇಶದಲ್ಲಿರುವ ಫ್ಲ್ಯಾಟ್‌ನಲ್ಲಿ ನಟಿಯು ವಾಸವಿದ್ದರು.

ನೂರ್‌ ಮಾಳವಿಕಾ ದಾಸ್‌ ಅವರು ಹಿಂದಿ ಸಿನಿಮಾಗಳು ಹಾಗೂ ವೆಬ್‌ಸಿರೀಸ್‌ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು. ಸಿಸ್ಕಿಯಾನ್‌, ವಾಕ್‌ಮನ್‌, ತೀತ್ರಿ ಚಟ್ನಿ, ಜಜ್ಞ ಉಪಾಯ್‌, ಚಾರ್‌ಮಸುಖ್‌, ದೇಖ್‌ ಅನ್‌ದೇಖಿ, ಬ್ಯಾಕ್‌ರೋಡ್‌ ಹಲ್‌ಚಲ್‌ ಸೇರಿ ಹಲವು ಸಿನಿಮಾ, ಸಿರೀಸ್‌ಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಅದರಲ್ಲೂ, ದಿ ಟ್ರಯಲ್‌ ವೆಬ್‌ಸಿರೀಸ್‌ ಅವರಿಗೆ ಹೆಚ್ಚು ಹೆಸರು ತಂದುಕೊಂಡಿತ್ತು. ಕಾಜೋಲ್‌ ಜತೆ ಅವರು ತೆರೆ ಹಂಚಿಕೊಂಡಿದ್ದರು. ಅವರು ನಟಿಸಿದ ಕೆಲ ಸಿನಿಮಾಗಳು ಬಿಡುಗಡೆಗೆ ಬಾಕಿ ಇವೆ ಎಂದು ತಿಳಿದುಬಂದಿದೆ.

ಅಸ್ಸಾಂ ಮೂಲದವರಾದ ನೂರ್‌ ಮಾಳವಿಕಾ ದಾಸ್‌ ಅವರು ನಟನೆಗೆ ಕಾಲಿಡುವ ಮೊದಲು ಕತಾರ್‌ ಏರ್‌ವೇಸ್‌ನಲ್ಲಿ ಗಗನಸಖಿಯಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.63 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ನಟಿಯು ಆಗಾಗ ಫೋಟೊ ಹಾಗೂ ವಿಡಿಯೊಗಳನ್ನು ಪೋಸ್ಟ್‌ ಮಾಡುತ್ತ ಸಕ್ರಿಯರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಟಿಯು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಕೂಡ ಮಾಡಿದ್ದರು. ಇಷ್ಟೆಲ್ಲ ಸಕ್ರಿಯರಾಗಿದ್ದ ನಟಿಯು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ.

ಇದನ್ನೂ ಓದಿ: ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Continue Reading

ಬಾಲಿವುಡ್

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi Sinha: ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರುಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು. .

VISTARANEWS.COM


on

Sonakshi Sinha to marry boyfriend Zaheer Iqbal on June 23
Koo

ಬೆಂಗಳೂರು: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ಬಾಯ್‌ಫ್ರೆಂಡ್‌ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಸೋನಾಕ್ಷಿ ಮತ್ತು ಜಹೀರ್ ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಮುಂಬೈನ ಬಾಸ್ಟಿಯನ್​ನಲ್ಲಿ ವಿವಾಹ ನಡೆಯಲಿದೆ ಎನ್ನಲಾಗಿದೆ. ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಕಳೆದ ವಾರ ಸೋನಾಕ್ಷಿ ಅವರ ಹುಟ್ಟುಹಬ್ಬದಂದು, ಜಹೀರ್ ಹಲವು ಫೋಟೊಗಳನ್ನು ಹಂಚಿಕೊಂಡಿದ್ದರು. ಮೊದಲ ಚಿತ್ರದಲ್ಲಿ ಸೋನಾಕ್ಷಿ ಅವರನ್ನು ಜಹೀರ್ ಬಿಗಿಯಾಗಿ ಅಪ್ಪಿಕೊಳ್ಳುವುದು ಇದೆ. “ಜನ್ಮದಿನದ ಶುಭಾಶಯಗಳು ಸೋನಾʼʼಎಂದು ಶೀರ್ಷಿಕೆ ನೀಡಿದ್ದರು.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು.

VISTARANEWS.COM


on

Kangana Ranaut Looks Gorgeous In A White Saree
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಕಂಗನಾ ಭಾಗಿಯಾಗಿದ್ದರು. ಕಂಗನಾ ಪ್ರಮಾಣ ವಚನ ಸಮಾರಂಭದಲ್ಲಿ ಸೀರೆಯಲ್ಲಿ ಮಿಂಚಿದ್ದಾರೆ. ಬಿಳಿ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ. ಶಾರುಖ್ ಖಾನ್, ಅಕ್ಷಯ್ ಕುಮಾರ್, ವಿಕ್ರಾಂತ್ ಮಾಸ್ಸೆ, ಮತ್ತು ಅನುಪಮ್ ಖೇರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಮಾರಂಭದ ಕೇಂದ್ರ ಬಿಂದುವಿನಂತೆ ಬಿಟೌನ್‌ ಕ್ವೀನ್‌ ಕಂಗೊಳಿಸುತ್ತಿದ್ದರು. ಬಿಳಿ ಬಣ್ಣದ ಸೀರೆಯಲ್ಲಿ, ಮುತ್ತಿನ ನೆಕ್ಲೇಸ್‌ ಧರಿಸಿ ಕಂಗನಾ ಕಾಂತಿಯುತವಾಗಿ ಕಾಣಿಸಿಕೊಂಡಿದ್ದಾರೆ. ನಟಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ..ಸ್ವತಃ ವಿಡಿಯೊ ಹಂಚಿಕೊಂಡಿರುವ ಕಂಗನಾ ‘ಪ್ರಮಾಣ ದಿನದಂದು ನನ್ನ ನೋಟ’ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ಇದನ್ನೂ ಓದಿ: Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. 2020 ರಲ್ಲಿ, ಕಂಗನಾ ರಣಾವತ್‌ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

Continue Reading
Advertisement
INDIA Bloc
Lok Sabha Election 202410 mins ago

INDIA Bloc: 6 ಸಂಸದರನ್ನು ಕಳೆದುಕೊಳ್ಳುವ ಭೀತಿಯಲ್ಲಿ ಇಂಡಿ ಒಕ್ಕೂಟ; ಕಾರಣವೇನು?

Actor Darshan a Want To Escape From This Case
ಸ್ಯಾಂಡಲ್ ವುಡ್22 mins ago

Actor Darshan: ಕೊಲೆ ಕೇಸ್‌ನಿಂದ ಎಸ್ಕೇಪ್‌ ಆಗಲು 30 ಲಕ್ಷ ರೂ. ಕೊಟ್ಟಿದ್ದ ʻಡೆವಿಲ್‌ʼ? ಆದರೆ ಫ್ಲ್ಯಾನ್‌ ಆಗಿದ್ದು ಮಾತ್ರ ಉಲ್ಟಾ!

Terroris Attack
ಪ್ರಮುಖ ಸುದ್ದಿ47 mins ago

Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Actor Darshan Murder accusations Chetan Kumar Ahimsa react
ಸಿನಿಮಾ56 mins ago

Actor Darshan: ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು; ಚೇತನ್‌ ಅಹಿಂಸಾ!

Bird Flu
ಆರೋಗ್ಯ1 hour ago

Bird Flu: ದೇಶದಲ್ಲಿ ಎರಡನೇ ಹಕ್ಕಿ ಜ್ವರದ ಪ್ರಕರಣ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ

Actor Darshan 10 Biryani For Sent To Police Custody
ಸ್ಯಾಂಡಲ್ ವುಡ್1 hour ago

Actor Darshan: ಆರೋಪಿ ದರ್ಶನ್​ಗೆ 10ಕ್ಕೂ ಹೆಚ್ಚು ದೊನ್ನೆ ಬಿರಿಯಾನಿ ತರಿಸಿದ್ದ ಪೊಲೀಸರು!

Chikkaballapur News
ಪ್ರಮುಖ ಸುದ್ದಿ1 hour ago

Chikkaballapur News : ಒಂದೇ ಗ್ರಾಮದಲ್ಲಿ ನಾಲ್ವರ ಸರಣಿ ಸಾವು ; ಸ್ಥಳೀಯರಲ್ಲಿ ಆತಂಕ

Nagarjuna Sagar
ಪ್ರವಾಸ2 hours ago

Nagarjuna Sagar: ನಾಗಾರ್ಜುನಸಾಗರದ ಈ ಸ್ಥಳಗಳು ವಾರಾಂತ್ಯ ಪ್ರವಾಸಕ್ಕೆ ಸೂಕ್ತ

Actor Darshan
ಪ್ರಮುಖ ಸುದ್ದಿ2 hours ago

ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

Job Alert
ಉದ್ಯೋಗ2 hours ago

Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ19 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ20 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ22 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ24 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌