Hi Nanna: ಅಪ್ಪ-ಮಗಳ ಎಮೋಷನ್ ಜರ್ನಿಗೆ ಮೃಣಾಲ್ ನಾಯಕಿ; ನಾನಿ ಸಿನಿಮಾ ಟೈಟಲ್‌ ಔಟ್‌! - Vistara News

South Cinema

Hi Nanna: ಅಪ್ಪ-ಮಗಳ ಎಮೋಷನ್ ಜರ್ನಿಗೆ ಮೃಣಾಲ್ ನಾಯಕಿ; ನಾನಿ ಸಿನಿಮಾ ಟೈಟಲ್‌ ಔಟ್‌!

Hi Nanna: ಹಾಯ್ ನಾನ್ನ ಎಂಬ ತೆಲುಗು ಸಾಲಿನ ಅರ್ಥ ‘ಹಾಯ್ ಅಪ್ಪ’ ಎಂಬುದಾಗಿದೆ. ಸೌತ್ ಭಾಷೆಯಲ್ಲಿ ಒಂದೇ ಟೈಟಲ್ ಇರಲಿ ಎಂಬ ಉದ್ದೇಶದಿಂದ ಚಿತ್ರತಂಡ ಕನ್ನಡ, ತಮಿಳು, ಮಲಯಾಳಂ ಭಾಷೆಯಲ್ಲಿಯೂ ಹಾಯ್ ನಾನ್ನ ಎಂದೇ ಶೀರ್ಷಿಕೆ ಫಿಕ್ಸ್ ಮಾಡಿದೆ.

VISTARANEWS.COM


on

Hi Nanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ದಸರಾ’ ಸಿನಿಮಾ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ (Hi Nanna) ನಟಿಸುತ್ತಿರುವ 30ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ಸಣ್ಣದೊಂದು ಝಲಕ್ ಮೂಲಕ ಚಿತ್ರತಂಡ ಶೀರ್ಷಿಕೆಯನ್ನು ಘೋಷಿಸಿದೆ. ನಾನಿ 30 ಚಿತ್ರಕ್ಕೆ ‘ಹಾಯ್ ನಾನ್ನ’ ಎಂಬ ಶೀರ್ಷಿಕೆಯನ್ನು ಇಡಲಾಗಿದೆ. ಹಾಯ್ ನಾನ್ನ ಎಂಬ ತೆಲುಗು ಸಾಲಿನ ಅರ್ಥ ‘ಹಾಯ್ ಅಪ್ಪ’ ಎಂಬುದಾಗಿದೆ. ಸೌತ್ ಭಾಷೆಯಲ್ಲಿ ಒಂದೇ ಟೈಟಲ್ ಇರಲಿ ಎಂಬ ಉದ್ದೇಶದಿಂದ ಚಿತ್ರತಂಡ ಕನ್ನಡ, ತಮಿಳು, ಮಲಯಾಳಂ ಭಾಷೆಯಲ್ಲಿಯೂ ಹಾಯ್ ನಾನ್ನ ಎಂದೇ ಶೀರ್ಷಿಕೆ ಫಿಕ್ಸ್ ಮಾಡಿದೆ.

ಮೆಗಾಸ್ಟಾರ್ ಚಿರಂಜೀವಿ ಆಶೀರ್ವಾದೊಂದಿಗೆ ಕಿಕ್ ಸ್ಟಾರ್ಟ್ ಸಿಕ್ಕಿರುವ ನಾನಿ 30ನೇ ಸಿನಿಮಾವನ್ನು, ಶೌರ್ಯುವ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dasara Movie: ನ್ಯಾಚುರಲ್ ಸ್ಟಾರ್ ನಾನಿ ‘ದಸರಾ’ದಲ್ಲಿ ಮಿಂಚಲಿದ್ದಾರೆ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ

ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Samantha Ruth Prabhu: ಸಮಂತಾಗೆ ಜೈಲಿಗೆ ಕಳಿಸಿ ಎಂದ ವೈದ್ಯ ; ನಟಿ ಹೇಳಿದ್ದೇನು?

Samantha Ruth Prabhu: ಆರೋಗ್ಯದ ಬಗ್ಗೆ ಬೇಕಾ ಬಿಟ್ಟಿ ಸಲಹೆಯನ್ನು ನೀಡುತ್ತಿರುವ ಸಮಂತಾ ಅವರ ವಿರುದ್ಧ ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಆರೋಪದಡಿ ಜೈಲಿಗೆ ಹಾಕಬೇಕು ಎಂದು ಕೂಡ ಆಗ್ರಹಿಸಿದ್ದಾರೆ ವೈದ್ಯರು. ಕಳೆದೆರಡು ವರ್ಷಗಳಲ್ಲಿ ನಾನು ಎದುರಿಸಿದ ಮತ್ತು ಕಲಿತ ಎಲ್ಲದರಿಂದ ನಾನು ಕೇವಲ ಒಳ್ಳೆಯ ಉದ್ದೇಶದಿಂದ ಸಲಹೆ ನೀಡಿದ್ದೇನೆ ಎಂದು ಕೂಡ ಸಮಂತಾ ಹೇಳಿದ್ದಾರೆ.

VISTARANEWS.COM


on

Samantha Ruth Prabhu Doctor Calls Health Illiterate
Koo

ಬೆಂಗಳೂರು: ಸಮಂತಾ ರುತ್ ಪ್ರಭು (Samantha Ruth Prabhu) ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸಾಮಾನ್ಯ ವೈರಲ್ ಸೋಂಕುಗಳಿಗೆ ಚಿಕಿತ್ಸೆ ನೀಡಲು ಪರ್ಯಾಯ ಮಾರ್ಗದ ಬಗ್ಗೆ ಸಲಹೆ ನೀಡಿರುವ ಕುರಿತು ವಿವಾದಕ್ಕೆ ಒಳಗಾಗಿದ್ದಾರೆ. ವೈರಲ್ ಇನ್​ಫೆಕ್ಷನ್ ​ತಡೆಯಲು, ಹೈಡ್ರೋಜ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಮಿಕ್ಸ್ ಮಾಡಿ ನೆಬ್ಯುಲೈಸರ್ ಮೂಲಕ ಅದನ್ನು ತೆಗೆದುಕೊಳ್ಳುವಂತೆ ಸಮಂತಾ ಹೇಳಿದ್ದಾರೆ. ಈ ಹೇಳಿಕೆಯ ಬಗ್ಗೆ ವೈದ್ಯರು ತಕರಾರು ತೆಗೆದಿದ್ದಾರೆ. ವಿಜ್ಞಾನ ಹಾಗೂ ವೈದ್ಯ ಲೋಕದಲ್ಲಿ ಸ್ವಲ್ಪವೂ ಜ್ಞಾನವಿಲ್ಲದ ವ್ಯಕ್ತಿ ಎಂದು ಹೇಳಿದ್ದಾರೆ. ಡಾ ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರು ಸಮಂತಾಗೆ “ಆರೋಗ್ಯ ಮತ್ತು ವಿಜ್ಞಾನ ಅನಕ್ಷರಸ್ಥರು” ಎಂದು ಕರೆದಿದ್ದಾರೆ. ಇಂತಹ ಚಿಕಿತ್ಸೆಯನ್ನು ಉತ್ತೇಜಿಸುವ ವ್ಯಕ್ತಿಗಳಿಗೆ ದಂಡ ವಿಧಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ನಟಿ ಪೋಸ್ಟ್‌ ಕೂಡ ಮಾಡಿದ್ದಾರೆ.

ಸಮಂತಾ ಸಲಹೆಗೆ ಪ್ರತಿಕ್ರಿಯಿಸಿದ ವೈದ್ಯರು, “ದುರದೃಷ್ಟವಶಾತ್ ಆರೋಗ್ಯ ಮತ್ತು ವಿಜ್ಞಾನ ಅನಕ್ಷರಸ್ಥರಾಗಿರುವ ಭಾರತೀಯ ನಟಿ ಸಮಂತಾ ರುತ್ ಅವರು ತಮ್ಮ ಲಕ್ಷಾಂತರ ಫಾಲೋವರ್ಸ್‌ಗಳಿಗೆ ವೈರಲ್ ಇನ್​ಫೆಕ್ಷನ್​ತಡೆಯಲು, ಹೈಡ್ರೋಜ್ ಪೆರಾಕ್ಸೈಡ್ ಹಾಗೂ ಭಟ್ಟಿ ಇಳಿಸಿದ ನೀರನ್ನು ಮಿಕ್ಸ್ ಮಾಡಿ ನೆಬ್ಯುಲೈಸರ್ ಮೂಲಕ ಅದನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಹೈಡ್ರೋಜನ್ ಪೆರಾಕ್ಸೈಡ್ ಅನ್ನು ನೆಬ್ಯುಲೈಸ್ ಮಾಡಬೇಡಿ. ಮತ್ತು ಉಸಿರಾಡಬೇಡಿ. ಏಕೆಂದರೆ ಇದು ಆರೋಗ್ಯಕ್ಕೆ ಅಪಾಯಕಾರಿ. ಅಮೇರಿಕದ ಸೈಂಟಿಫಿಕ್ ಸೊಸೈಟಿ ಅಸ್ತಮಾ ಮತ್ತು ಅಲರ್ಜಿ ಫೌಂಡೇಶನ್ ನವರೇ ಈ ಮಾತನ್ನು ಹೇಳಿದ್ದಾರೆ ಎಂದು ಕೂಡ ಹೇಳಿದ್ದಾರೆ ಡಾಕ್ಟರ್ ಸೈರಿಕ್ ಅಬ್ಬಿ ಫಿಲಿಪ್ಸ್ .

ಆರೋಗ್ಯದ ಬಗ್ಗೆ ಬೇಕಾ ಬಿಟ್ಟಿ ಸಲಹೆಯನ್ನು ನೀಡುತ್ತಿರುವ ಸಮಂತಾ ಅವರ ವಿರುದ್ಧ ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವ ಆರೋಪದಡಿ ಜೈಲಿಗೆ ಹಾಕಬೇಕು ಎಂದು ಕೂಡ ಆಗ್ರಹಿಸಿರುವ ವೈದ್ಯರು, ಭಾರತದ ಆರೋಗ್ಯ ಸಚಿವಾಲಯ ಅಥವಾ ಯಾವುದೇ ಆರೋಗ್ಯ ಸಂಸ್ಥೆ ಇವರ ಮೇಲೆ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಸುಮ್ಮನೆ ಇದ್ದು ಜನರನ್ನು ಸಾಯಲು ಬಿಡುತ್ತಾರಾ ಎಂದು ಪ್ರಶ್ನೆಯನ್ನೂ ಕೂಡ ಮಾಡಿದ್ದಾರೆ.

ಇದಾದ ಬಳಿಕ ಸಮಂತಾ ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ವಿವಿಧ ರೀತಿಯ ಔಷಧಿಗಳನ್ನು ತೆಗೆದುಕೊಳ್ಳಬೇಕಾಗಿತ್ತು ಎಂದಿರುವ ಸಮಂತಾ, ಹಲವು ಚಿಕಿತ್ಸೆಗಳು ತುಂಬಾ ದುಬಾರಿಯಾಗಿದ್ದವು. ನಾನು ನಿಭಾಯಿಸಬಲ್ಲೆ. ಆದರೆ ಕೆಲವರಿಗೆ ಅಸಾಧ್ಯ. ಕಳೆದೆರಡು ವರ್ಷಗಳಲ್ಲಿ ನಾನು ಎದುರಿಸಿದ ಮತ್ತು ಕಲಿತ ಎಲ್ಲದರಿಂದ ನಾನು ಕೇವಲ ಒಳ್ಳೆಯ ಉದ್ದೇಶದಿಂದ ಸಲಹೆ ನೀಡಿದ್ದೇನೆ ಎಂದು ಕೂಡ ಸಮಂತಾ ಹೇಳಿದ್ದಾರೆ.

ಇದನ್ನೂ ಓದಿ: Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

ಮಾತ್ರವಲ್ಲ ಜೈಲಿಗೆ ಕಳುಹಿಸಿ ಎಂದು ನನಗೆ ಹೇಳುವ ಬದಲು, ನನ್ನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿರುವ ನನ್ನ ಡಾಕ್ಟರನ್ನು ಅವರು ಕೇಳಬೇಕಿತ್ತು ಎಂದಿದ್ದಾರೆ. ಆಗ ಇಬ್ಬರು ವೃತ್ತಿಪರ ವೈದ್ಯರ ನಡುವೆ ಚರ್ಚೆಯಾಗುತ್ತಿತ್ತು. ಆ ಚರ್ಚೆಯಿಂದ ನಾನು ಇನ್ನೂ ಹೆಚ್ಚು ಕಲಿಯಬಹುದಿತ್ತು ಎಂದು ಕೂಡ ಸಮಂತಾ ಹೇಳಿದ್ದಾರೆ. . ಇನ್ನು ಮುಂದೆ ತಾನು ಹಂಚಿಕೊಳ್ಳುವ ವೈದ್ಯಕೀಯ ಸಲಹೆಯ ಬಗ್ಗೆ ‘ಹೆಚ್ಚು ಜಾಗರೂಕರಾಗಿರುತ್ತೇನೆ’ ಎಂದು ಹೇಳಿದ್ದಾರೆ ಸಮಂತಾ.

ಈ ಮುಂಚೆಯೂ ನಟಿ ಲಿವರ್‌ ಡೆಟಾಕ್ಸಿಫಿಕೇಶನ್‌ (liver detoxification) ಬಗ್ಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಹಲವರು ಆರೋಪಿಸಿದ್ದರು. ಅಲ್ಲಿ ಸಮಂತಾ ಅವರು ಲಿವರ್‌ ಆರೋಗ್ಯಕ್ಕಾಗಿ ʻದಂಡೇಲಿಯನ್‌ʼನಂತಹ ಗಿಡಮೂಲಿಕೆಗಳ ಬಳಕೆ ಬಗ್ಗೆ ಚರ್ಚಿಸಿದ್ದರು. ಈ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡಿದ್ದಕ್ಕಾಗಿ ವೈದ್ಯರೊಬ್ಬರು ಸಮಂತಾ ಅವರನ್ನು ಟೀಕಿಸಿದ್ದರು.

Continue Reading

ಟಾಲಿವುಡ್

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

Raj Tarun: ಸಿನಿಮಾ ಚೂಪಿಸ್ತಾ ಮಾವ’, ‘ಪವರ್ ಪ್ಲೇ’, ‘ನಾ ಸಾಮಿ ರಂಗ’, ‘ಒರೇ ಬುಜ್ಜಿಗಾ ಸೇರಿದಂತೆ ಇನ್ನೂ ಹಲವಾರು ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳಲ್ಲಿ ಅಭಿನಯಿಸಿದ್ದರು ರಾಜ್‌ ತರುಣ್‌. ಇದೀಗ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. 

VISTARANEWS.COM


on

Raj Tarun Police complaint filed by live-in partner
Koo

ಬೆಂಗಳೂರು: ‘ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿಯೇ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಸಿನಿಮಾ ಚೂಪಿಸ್ತಾ ಮಾವ’, ‘ಪವರ್ ಪ್ಲೇ’, ‘ನಾ ಸಾಮಿ ರಂಗ’, ‘ಒರೇ ಬುಜ್ಜಿಗಾ ಸೇರಿದಂತೆ ಇನ್ನೂ ಹಲವಾರು ರೊಮ್ಯಾಂಟಿಕ್ ಕಾಮಿಡಿ ಸಿನಿಮಾಗಳಲ್ಲಿ ಅಭಿನಯಿಸಿದ್ದರು ರಾಜ್‌ ತರುಣ್‌. ಇದೀಗ ನರಸಿಂಗಿ ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. 

ಅಲ್ಲದೆ, ರಾಜ್ ತನ್ನ ಜೀವನದಿಂದ ದೂರವಾಗದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ತಿಳಿಸಿದ್ದಾರೆ. ನಟ ರಾಜ್ ತರುಣ್ ಗೆಳತಿ ಎಂದು ಹೇಳಿಕೊಳ್ಳುವ ಲಾವಣ್ಯ, ರಾಜ್ ತರುಣ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದು ಹೀಗೆ. “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ಲಾವಣ್ಯ ಹೇಳುತ್ತಿರುವಂತೆ ಇದೀಗ ಮುಂಬೈ ಮೂಲದ ನಟಿ, ಲಾವಣ್ಯಗೆ ಬೆದರಿಕೆಗಳನ್ನು ಹಾಕಿದ್ದು, ರಾಜ್ ತರುಣ್ ಇಂದ ದೂರ ಇರುವಂತೆ ಒತ್ತಾಯಿಸಿದ್ದಾರೆ. 

ಇದನ್ನೂ ಓದಿ: Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

ʻʻರಾಜ್‌ ಈ ರೀತಿ ಮೋಸ ಮಾಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಈಗ ನನಗೆ ಜೀವ ಭಯವಿದೆ. ಆ ಹುಡಗಿ ನನ್ನನ್ನು ಏನು ಮಾಡುತ್ತಾಳೋ ಎಂಬ ಭಯದಿಂದ ನಾನು ಪೊಲೀಸ್ ದೂರು ದಾಖಲಿಸಿದೆ. ಅವಳು ನನಗೆ ಸಾಕಷ್ಟು ಬಾರಿ ಕರೆ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾಳೆ. ಈ ವಿಚಾರದಲ್ಲಿ ಭದ್ರತೆ ನೀಡುವಂತೆ ಪೊಲೀಸರನ್ನೂ ಕೇಳಿದ್ದೇನೆ,’’ ಎಂದು ಲಾವಣ್ಯ ಹೇಳಿದ್ದಾರೆ.

ಲಾವಣ್ಯಗೆ ನಟಿಯಿಂದ, ಆಕೆಯ ಸಹೋದರನಿಂದ ಬೆದರಿಕೆಗಳು ಬಂದಿವೆಯಂತೆ. ಕೆಲ ತಿಂಗಳ ಹಿಂದೆ ಸಹ ಲಾವಣ್ಯ, ರಾಜ್ ಅನ್ನು ಮದುವೆಯಾಗಲು ನಿಶ್ಚಯಿಸಿದ್ದರಂತೆ. ಆ ಸಮಯದಲ್ಲಿ ಆ ನಟಿಗೆ ಕರೆ ಮಾಡಿ ರಾಜ್​ ಇಂದ ದೂರ ಇರುವಂತೆ ಬೇಡಿಕೊಂಡಿದ್ದಾಗಿಯೂ ಲಾವಣ್ಯ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಜ್ ಸದ್ಯ ‘ತಿರಗಬಡರಾ ಸ್ವಾಮಿ’ ಹೆಸರಿನ ಹೊಸ ಸಿನಿಮಾ ಪ್ರಾರಂಭಿಸಿದ್ದು ಚಿತ್ರೀಕರಣ ನಡೆಯುತ್ತಿದೆ.

Continue Reading

ಕಾಲಿವುಡ್

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Rashmika Mandanna: ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ.

VISTARANEWS.COM


on

Rashmika Mandanna Kubera interesting first look
Koo

ಬೆಂಗಳೂರು: ಸೂಪರ್ ಸ್ಟಾರ್ ಧನುಷ್ ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾ  ರಶ್ಮಿಕಾ ಮಂದಣ್ಣ ಅವರ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದೆ. ಸೂಪರ್‌ಸ್ಟಾರ್ ಧನುಷ್ ಮತ್ತು ನಾಗಾರ್ಜುನ ಅಭಿನಯದ ಬಹು ನಿರೀಕ್ಷಿತ ಪೌರಾಣಿಕ ಪ್ಯಾನ್-ಇಂಡಿಯನ್ ʻಕುಬೇರʼ ಸಿನಿಮಾ ಈ ಫಸ್ಟ್‌ ಲುಕ್‌ ಮೂಲಕ ಮತ್ತೆ ಪ್ರೇಕ್ಷರನ್ನು ಸೆಳೆಯಲು ಸಜ್ಜಾಗಿದೆ. ಸಿನಿಮಾದಲ್ಲಿ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಮಹತ್ವದ ಪಾತ್ರ ನಿರ್ವಹಿಸಿದ್ದಾರೆ.

ಇದೀಗ ಚಿತ್ರತಂಡ ರಶ್ಮಿಕಾ ಅವರ ಫಸ್ಟ್ ಲುಕ್ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಮೂಲಕ ಶೇರ್‌ ಮಾಡಿಕೊಂಡಿದೆ. ರಶ್ಮಿಕಾ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ನಟರಾದ ಧನುಷ್ ಮತ್ತು ನಾಗಾರ್ಜುನ ಜತೆಗೆ ಈ ಸಿನಿಮಾದಲ್ಲಿ ರಶ್ಮಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಫಸ್ಟ್ ಲುಕ್ ಥ್ರಿಲ್ಲಿಂಗ್ ಮತ್ತು ಇಂಟ್ರೆಸ್ಟಿಂಗ್ ಆಗಿದೆ.

ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ. ಸದ್ಯ ಈ ಹೈ-ಬಜೆಟ್ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮತ್ತು ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್‌ನಡಿಯಲ್ಲಿ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ‘ಶೇಖರ್ ಕಮ್ಮುಲ ಅವರ ಕುಬೇರ’ ಒಂದು ಪ್ಯಾನ್-ಇಂಡಿಯಾ ಬಹುಭಾಷಾ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಸದ್ಯ ಚಿತ್ರದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading

ಟಾಲಿವುಡ್

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Bigg Boss Telugu 8: ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

VISTARANEWS.COM


on

Bigg Boss Telugu 8 Astrologer Venu Swamy A Contestant
Koo

ಬೆಂಗಳೂರು: ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ.ಆಗಸ್ಟ್ 4 ರಂದು ಬಿಗ್​ಬಾಸ್ ತೆಲುಗು ಸೀಸನ್ 8 ಪ್ರಾರಂಭ ಆಗಲಿದೆ ಎಂದು ವರದಿಯಾಗಿದೆ. ಈ ಬಾರಿ ಬಿಗ್​ಬಾಸ್​ನಲ್ಲಿ ಭಾಗಿಯಾಗಲಿರುವ ಸ್ಪರ್ಧಿಗಳ ಬಗ್ಗೆ ವದಂತಿಗಳು ಹಬ್ಬಿವೆ. ತೆಲುಗಿನಲ್ಲಿ, ಬಿಗ್ ಬಾಸ್ ಶೋ (Bigg Boss Telugu Season 8 Starting Date) ದೊಡ್ಡ ಕ್ರೇಜ್‌ ಗಳಿಸಿದೆ. ಹಿಂದಿನ ಸೀಸನ್‌ಗಳಲ್ಲಿ ಭಾಗವಹಿಸಿದ ಅನೇಕ ಸ್ಪರ್ಧಿಗಳು ಆರ್ಥಿಕವಾಗಿ ಸಾಕಷ್ಟು ಯಶಸ್ವಿಯಾಗಿದ್ದಾರೆ. ಮತ್ತು ಮನರಂಜನಾ ಉದ್ಯಮದಲ್ಲಿ ಹೊಸ ಇಮೇಜ್ ಗಳಿಸಿದ್ದಾರೆ (bigg boss telugu contestants). ಈ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶಕ್ಕಾಗಿ ಸಣ್ಣ-ಪರದೆಯ ಸೆಲೆಬ್ರಿಟಿಗಳು ಕಾಯುತ್ತಾರೆ ಎಂದರೆ ಅತಿಶಯೋಕ್ತಿಯಲ್ಲ. ಇದೀಗ ಬಿಗ್‌ ಬಾಸ್‌ ಮನೆಗೆ (Venu swamy) ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ವೇಣು ಸ್ವಾಮಿ ಜನಪ್ರಿಯ ಜ್ಯೋತಿಷಿಯಾಗಿದ್ದು, ಅವರು ಟಾಲಿವುಡ್ ಉದ್ಯಮದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಹುತೇಕ ಸರಿಯಾದ ಭವಿಷ್ಯವಾಣಿಯೊಂದಿಗೆ ಸಂಚಲನ ಮೂಡಿಸಿದ್ದಾರೆ. ಟಾಲಿವುಡ್ ಸೆಲೆಬ್ರಿಟಿಗಳ ಪ್ರೀತಿ, ಮದುವೆ ಮತ್ತು ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ನಂತರ ಅವರು ವ್ಯಾಪಕವಾದ ಮೆಚ್ಚುಗೆಯನ್ನು ಗಳಿಸಿದರು. ಅನೇಕ ಬಾರಿ, ಅವರ ಭವಿಷ್ಯವಾಣಿಗಳು ನಿಜವಾಗಿದ್ದವು.

ಇದನ್ನೂ ಓದಿ: Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿತ್ತು. ಆ ಬಳಿಕ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದರು. ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದರು.

ತೆಲುಗು ವರದಿಯ ಪ್ರಕಾರ ವೇಣು ಸ್ವಾಮಿ ಬಿಗ್‌ ಬಾಸ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.ಈ ಸುದ್ದಿ ನಿಜವೇ ಆಗಿದ್ದರೆ ವೇಣು ಸ್ವಾಮಿ ಅವರ ಸಂಭಾವನೆ ಬಿಗ್ ಬಾಸ್ ತೆಲುಗು ಇತಿಹಾಸದಲ್ಲಿ ಇದುವರೆಗಿನ ಅತಿ ಹೆಚ್ಚು ಸಂಭಾವನೆಯಾಗಲಿದೆ.

ಸೀಸನ್‌ 7ರ ವರೆಗೆ ನಾಗಾರ್ಜುನ ಅವರೇ ನಿಭಾಯಿಸುತ್ತಿದ್ದಾರೆ. ನಾಗುರ್ಜನ ಅವರ ವಿಶಿಷ್ಟ ವರ್ಚಸ್ಸು ಮತ್ತು ಮಾತನಾಡುವ ಶೈಲಿಗೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಇದೀಗ ಮಾಹಿತಿ ಪ್ರಕಾರ ಈ ಸೀಸನ್‌ನಲ್ಲಿ ನಟರು, ಯೂಟ್ಯೂಬರ್‌ಗಳು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳ ಸಮ್ಮಿಶ್ರಣ ಇರಲಿದೆ ಎಂದು ವರದಿಯಾಗಿದೆ. . ಪ್ರತಿಬಾರಿಯಂತೆ ನಟ ನಾಗಾರ್ಜುನ ಅವರೇ ಈ ಬಾರಿಯೂ ಶೋ ನಡೆಸಿಕೊಡಲಿದ್ದಾರೆ.

ಸಂಭಾವ್ಯ ಪಟ್ಟಿ ಹೀಗಿದೆ!

ಬಾಂಚಿಕ್ ಬಬ್ಲು: ಜನಪ್ರಿಯ ಯೂಟ್ಯೂಬರ್. ರಾಜ್ ತರುಣ್: ಟಾಲಿವುಡ್‌ನ ಪ್ರಸಿದ್ಧ ನಟ. ಸೋನಿಯಾ ಸಿಂಗ್: ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಬಳಗ ಹೊಂದಿರುವ ನಟಿ, ಡ್ರಗ್ಸ್ ಪ್ರಕರಣದ ಆರೋಪಿ ಹೇಮಾ ಸಹ ಈ ಬಾರಿ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಮರ್ಯಾದಾ ಹತ್ಯೆಯ ಸಂತ್ರಸ್ತೆ ಅಮೃತಾ ಪ್ರಣಯ್ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಭಾರಿ ದುಬಾರಿ ಬೆಲೆಗೆ ಆಹಾರ ಮಾರಾಟ ಮಾಡುತ್ತಾ ಜನಪ್ರಿಯವಾಗಿರುವ ಕುಮಾರಿ ಆಂಟಿ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಜನಪ್ರಿಯ ಯೂಟ್ಯೂಬ್ ಕಪಲ್ ಆಗಿರುವ ನೇತ್ರಾ ಮತ್ತು ವಂಶಿ ಸಹ ಈ ಬಾರಿ ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Continue Reading
Advertisement
RBI Fine
ದೇಶ17 mins ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ22 mins ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್24 mins ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ28 mins ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ56 mins ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು1 hour ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Bridge Collapse
ದೇಶ1 hour ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ1 hour ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Stampede Tips and Tricks
ದೇಶ1 hour ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ1 hour ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ5 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ6 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ7 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ9 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು10 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು10 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ15 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌